AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG

LPG

ಎಲ್​ಪಿಜಿ ಎಂದರೆ ಲಿಕ್ವಿಫೈಡ್ ಪೆಟ್ರೋಲಿಯಂ ಗ್ಯಾಸ್. ಹೆಸರೇ ಸೂಚಿಸುವಂತೆ ಇದು ಧ್ರವೀಕರಿಸಿದ ಪೆಟ್ರೋಲಿಯಂ ಅನಿಲ. ಪ್ರೊಪೇನ್, ಪ್ರೊಪಿಲೀನ್ ಇತ್ಯಾದಿ ಹೈಡ್ರೋಕಾರ್ಬನ್ ಗ್ಯಾಸ್​ಗಳ ಮಿಶ್ರಣ ಇರುವ ಇಂಧನವಾಗಿದೆ. ಪೆಟ್ರೋಲಿಯಂನ ಉಪ ಉತ್ಪನ್ನಗಳಲ್ಲಿ ಇದೂ ಒಂದು. ಎಲ್​ಪಿಜಿ ಬಹೂಪಯೋಗಿ ಆಗಿರುವ ಇಂಧನವಾಗಿದೆ. ಅಡುಗೆಯ ಇಂಧನವಾಗಿ ಇದನ್ನು ಬಳಸಬಹುದು. ವಾಹನಗಳಿಗೆ ಇಂಧನವಾಗಿ ಬಳಸಬಹುದು. ರಾಸಾಯನಿಕ ಕಾರ್ಖಾನೆಗಳಲ್ಲಿ ಇದರ ಉಪಯೋಗ ಇದೆ. ಇದು ಮಾಲಿನ್ಯಕಾರಕ ಹೊಗೆಯನ್ನು ಹೊರಸೂಸುವುದಿಲ್ಲ. ಹೀಗಾಗಿ, ಅಡುಗೆ ಅನಿಲವಾಗಿ ಎಲ್ಲೆಡೆ ವ್ಯಾಪಕವಾಗಿ ಬಳಕೆಯಲ್ಲಿ ಇದೆ. ಸೌದೆ ಒಲೆ, ಕೆರೋಸಿನ್​ಗೆ ಹೋಲಿಸಿದರೆ ಎಲ್​ಪಿಜಿ ಉತ್ತಮ ಆಯ್ಕೆ. ಭಾರತದಲ್ಲಿ ಎಲ್​ಪಿಜಿಗಳನ್ನು ಸಿಲಿಂಡರ್​​ಗಳಲ್ಲಿ ತುಂಬಸಿ ಸರಬರಾಜು ಮಾಡಲಾಗುತ್ತದೆ. ಗೃಹ ಬಳಕೆಗೆ ಪ್ರತ್ಯೇಕ ಸಿಲಿಂಡರ್​ಗಳಿವೆ. ಹೋಟೆಲ್ ಇತ್ಯಾದಿ ವಾಣಿಜ್ಯ ಬಳಕೆಗೆ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್​ಗಳಿವೆ. ಅಡುಗೆಗೆ ಬಳಸುವ ಎಲ್​ಪಿಜಿಗೆ ಸರ್ಕಾರ ಸಬ್ಸಿಡಿ ನೀಡುತ್ತದೆ. ಕಮರ್ಷಿಯಲ್ ಎಲ್​ಪಿಜಿಗೆ ಸಬ್ಸಿಡಿ ಇರುವುದಿಲ್ಲ.

ಇನ್ನೂ ಹೆಚ್ಚು ಓದಿ

August 2026 Rule Changes: ಆಗಸ್ಟ್ 1 ರಿಂದ ಜಾರಿಗೆ ಬರಲಿವೆ 5 ಹೊಸ ನಿಯಮಗಳು: ಎಲ್‌ಪಿಜಿ ದರ,ತತ್ಕಾಲ್ ಬುಕಿಂಗ್ ಮತ್ತು ಬ್ಯಾಂಕಿಂಗ್‌ ಮೇಲೆ ಭಾರಿ ಪ್ರಭಾವ

ಆಗಸ್ಟ್ 1, 2026 ರಿಂದ 5 ಪ್ರಮುಖ ನಿಯಮಗಳು ಜಾರಿಗೆ ಬರಲಿವೆ. ಇವು ಎಲ್​ಪಿಜಿ ದರ, ರೈಲ್ವೆ ತತ್ಕಾಲ್ ಬುಕಿಂಗ್, ಬ್ಯಾಂಕಿಂಗ್ ಸೇವೆ, ಅಂಚೆ ಶುಲ್ಕ ಹಾಗೂ ಫಾಸ್ಟ್‌ಟ್ಯಾಗ್ ಕೆವೈಸಿ ಮೇಲೆ ಪರಿಣಾಮ ಬೀರಲಿವೆ. ಸಿಲಿಂಡರ್ ಬೆಲೆ ಪರಿಷ್ಕರಣೆ, ಕ್ರೆಡಿಟ್ ಕಾರ್ಡ್ ರಿವಾರ್ಡ್ ಪಾಯಿಂಟ್ಸ್ ಮಿತಿ, ರೈಲ್ವೆ ಟಿಕೆಟ್ ಸುಧಾರಣೆಗಳು ಸಾರ್ವಜನಿಕರ ದೈನಂದಿನ ಬಜೆಟ್ ಮತ್ತು ವೆಚ್ಚಗಳ ಮೇಲೆ ನೇರ ಪ್ರಭಾವ ಬೀರಲಿದ್ದು, ಎಲ್ಲರೂ ತಿಳಿದುಕೊಳ್ಳುವುದು ಮುಖ್ಯವಾಗಿದೆ.

1695 ಬೆಲೆಯ ಎಲ್‌ಪಿಜಿ ಸಿಲಿಂಡರ್ 942 ರೂ.ಗೆ ಸಿಗುತ್ತಿರುವುದು ಹೇಗೆ? ಪೂರ್ತಿ ವಿವರ ಇಲ್ಲಿದೆ

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗ್ಯಾಸ್ ಬೆಲೆ ಏರುತ್ತಿದ್ದರೂ ದೇಶೀಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ ಏಕೆ ಹೆಚ್ಚಾಗುತ್ತಿಲ್ಲ ಎಂದು ನೀವು ಎಂದಾದರೂ ಯೋಚಿಸಿದ್ದೀರಾ? ಸಾರ್ವಜನಿಕರಿಗೆ ಪರಿಹಾರ ಒದಗಿಸಲು ತೈಲ ಕಂಪನಿಗಳಿಗೆ ಸಾವಿರಾರು ಕೋಟಿ ರೂ.ಗಳ ಆರ್ಥಿಕ ಸಹಾಯವನ್ನು ನೀಡುತ್ತಿರುವುದಾಗಿ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಘೋಷಿಸಿತು. ಇದರ ಹೊರತಾಗಿಯೂ, ಕಂಪನಿಗಳು 51,000 ಕೋಟಿ ರೂ.ಗಳಿಗೂ ಹೆಚ್ಚು ನಷ್ಟವನ್ನು ಎದುರಿಸುತ್ತಿವೆ. ಮಾರ್ಚ್ ತಿಂಗಳಿನಲ್ಲಿ ಎಲ್‌ಪಿಜಿ (LPG) ಬೆಲೆಯನ್ನು ಗರಿಷ್ಠ 60 ರೂ.ವರೆಗೆ ಹೆಚ್ಚಿಸಲಾಗಿತ್ತು. ನಂತರ ಜೂನ್‌ನಲ್ಲಿ ಕಮರ್ಷಿಯಲ್ ಎಲ್‌ಪಿಜಿ ಸಿಲಿಂಡರ್ ದರವನ್ನು ಮತ್ತೆ ಏರಿಕೆ ಮಾಡಲಾಯಿತು. ಇದರ ಪರಿಣಾಮವಾಗಿ, ದೆಹಲಿಯಲ್ಲಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಪ್ರಸ್ತುತ 942 ರೂ.ಗೆ ತಲುಪಿದೆ.

ಗ್ಯಾಸ್ ಸಿಲಿಂಡರ್ ಬಳಸುವ ಮುನ್ನ ಈ ಎಚ್ಚರಿಕೆಗಳನ್ನು ಮರೆಯಬೇಡಿ: ಸಣ್ಣ ನಿರ್ಲಕ್ಷ್ಯವೂ ಜೀವಕ್ಕೆ ಅಪಾಯ

ಬೊಮ್ಮಸಂದ್ರ ಗ್ಯಾಸ್ ಸಿಲಿಂಡರ್ ಸ್ಫೋಟದ ಬೆನ್ನಲ್ಲೇ ಎಲ್‌ಪಿಜಿ ಬಳಕೆಯ ಸುರಕ್ಷತೆ ಮತ್ತೊಮ್ಮೆ ಚರ್ಚೆಗೆ ಬಂದಿದೆ. ಸಿಲಿಂಡರ್ ಸ್ವೀಕರಿಸುವುದರಿಂದ ಹಿಡಿದು ಒಂದು ವೇಳೆ ಗ್ಯಾಸ್ ಸೋರಿಕೆ ಆದರೆ, ಆ ಸಂದರ್ಭದಲ್ಲಿ ಏನು ಮಾಡಬೇಕು ಎಂಬುದರ ಕುರಿತು ತಜ್ಞರು ನೀಡಿರುವ ಪ್ರಮುಖ ಸಲಹೆಗಳು ಇಲ್ಲಿವೆ.

ಅಡುಗೆ ಇಂಧನವಾಗಿ ಎಥನಾಲ್; ಎಲ್​ಪಿಜಿಗೆ ಮತ್ತೊಂದು ಪರ್ಯಾಯಕ್ಕೆ ಸರ್ಕಾರ ಯತ್ನ; ಸಕ್ಕರೆ ಬಗ್ಗೆ ಆವತ್ತು ಮೋದಿ ಹೇಳಿದ್ದರ ಅರ್ಥ ಇದಾ?

Govt thinks of using ethanol as cooking gas: ಎಥನಾಲ್ ಮಿಶ್ರಿತ ಪೆಟ್ರೋಲ್ ಕುರಿತ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಎಥನಾಲ್ ಅನ್ನು ಅಡುಗೆ ಇಂಧನವಾಗಿ ಬಳಸುವಂತೆ ಮಾಡಲು ಸರ್ಕಾರ ಯೋಚಿಸುತ್ತಿದೆ. ಹೆಚ್ಚುವರಿಯಾಗಿ ಉತ್ಪಾದನೆಯಾಗುತ್ತಿರುವ ಎಥನಾಲ್ ಅನ್ನು ಬಳಸಲು ಸರ್ಕಾರ ಈ ಕ್ರಮ ತೆಗೆದುಕೊಳ್ಳಲು ಮುಂದಾಗಿರಬಹುದು. ಎಥನಾಲ್ ಅನ್ನು ಎಲ್​ಪಿಜಿ ರೀತಿಯಲ್ಲಿ ಅಡುಗೆ ಇಂಧನವಾಗಿ ಬಳಸಬಹುದು. ಆದರೆ, ಅದಕ್ಕೆ ಅದರದ್ದೇ ವಿಶೇಷ ಸ್ಟೌವ್ ಬೇಕಾಗುತ್ತದೆ.

ದಿನಸಿ ವಸ್ತುವಿನಂತೆ ಮನೆಬಾಗಿಲಿಗೆ ಬರುತ್ತೆ ಸಣ್ಣ ಎಲ್​ಪಿಜಿ ಸಿಲಿಂಡರ್; ಎಚ್​ಪಿ ನಂತರ ಈಗ ಭಾರತ್ ಗ್ಯಾಸ್​ನಿಂದಲೂ ಸಪ್ಲೈ ಶುರು

BPCL Launches Lite Zip LPG cylinder: ಭಾರತ್ ಪೆಟ್ರೋಲಿಯಂ ಸಂಸ್ಥೆಯು ಲೈಟ್ ಜಿಪ್ ಎಲ್​ಪಿಜಿ ಸಿಲಿಂಡರ್ ಅನ್ನು ಬಿಡುಗಡೆ ಮಾಡಿದೆ. ತ್ವರಿತವಾಗಿ ಗ್ಯಾಸ್ ಅನ್ನು ಗ್ರಾಹಕರಿಗೆ ತಲುಪಿಸಲು ಇದು ನೆರವಾಗಲಿದೆ. ಸುಲಭವಾಗಿ ಮತ್ತು ವೇಗವಾಗಿ ಇದರ ಕನೆಕ್ಷನ್ ಕೂಡ ಸಿಗಲಿದೆ. ಕಳೆದ ವಾರ ಎಚ್​ಪಿಸಿಎಲ್ ಸಂಸ್ಥೆ ಬೆಂಗಳೂರಿನಲ್ಲಿ 10 ಕಿಲೋ ಎಲ್​ಪಿಜಿ ಸಿಲಿಂಡರ್ ಅನ್ನು ಕ್ವಿಕ್ ಕಾಮರ್ಸ್ ಪ್ಲಾಟ್​ಫಾರ್ಮ್ ಮೂಲಕ ಲಭ್ಯವಾಗಿಸಲಾಗಿದೆ.

ರಾಯಗಢ ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!

ಪನ್ವೇಲ್ ತಾಲೂಕಿನ ಎಂಐಡಿಸಿ ಚಾವಣೆಯಲ್ಲಿರುವ ಹೆಚ್‌ಪಿಸಿಎಲ್ ಪಾತಳಗಂಗಾ ಎಲ್‌ಪಿಜಿ ಬಾಟ್ಲಿಂಗ್ ಪ್ಲಾಂಟ್‌ಗೆ ನಿರಂತರವಾಗಿ ಸುರಿದ ಧಾರಾಕಾರ ಮಳೆಯಿಂದಾಗಿ ಪ್ರವಾಹದ ನೀರು ನುಗ್ಗಿದೆ. ಪ್ರವಾಹದ ರಭಸಕ್ಕೆ ಪ್ಲಾಂಟ್‌ನ ರಕ್ಷಣಾ ಗೋಡೆ ಕುಸಿದು ಬಿದ್ದಿದ್ದರಿಂದ, ಅಲ್ಲಿ ಸಂಗ್ರಹಿಸಿಡಲಾಗಿದ್ದ ಸುಮಾರು 3,000 ಸಿಲಿಂಡರ್‌ಗಳು ಕೊಚ್ಚಿಹೋಗಿವೆ. ಸೇತುವೆಯ ಮೇಲಿಂದ ನೂರಾರು ಸಿಲಿಂಡರ್‌ಗಳು ನದಿಯಲ್ಲಿ ತೇಲುತ್ತಾ ಹೋಗುತ್ತಿದ್ದ ದೃಶ್ಯವನ್ನು ಸ್ಥಳೀಯರು ಆಶ್ಚರ್ಯದಿಂದ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾರೆ. ಹಲವರು ನೀರಿನಲ್ಲಿ ಬಗ್ಗಿ ಆ ಸಿಲಿಂಡರ್​​ಗಳನ್ನು ಎತ್ತಿಕೊಂಡು ಹೋಗಿದ್ದಾರೆ.

ನಯಾರದಲ್ಲಿ ಪೆಟ್ರೋಲ್, ಡೀಸಲ್ ಬೆಲೆ ಭರ್ಜರಿ ಇಳಿಕೆ; ವಿಮಾನ ಇಂಧನವೂ ಅಗ್ಗ

Nayara slashes petrol price by Rs 5 per litre: ಅಂತರರಾಷ್ಟ್ರೀಯ ಕಚ್ಚಾ ತೈಲ ಬೆಲೆ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ವಿವಿಧ ಇಂಧನ ಬೆಲೆಗಳನ್ನು ಕಡಿಮೆ ಮಾಡಲಾಗಿದೆ. ಖಾಸಗಿ ನಯಾರ ಎನರ್ಜಿ ಕಂಪನಿ ಪೆಟ್ರೋಲ್ ಮತ್ತು ಡೀಸಲ್ ಬೆಲೆ ಇಳಿಸಿದೆ. ಎಲ್ಲಾ ತೈಲ ಮಾರುಕಟ್ಟೆ ಕಂಪನಿಗಳು ಎಟಿಎಫ್ ಇಂಧನದ ಬೆಲೆ ತಗ್ಗಿಸಿವೆ. ಕಮರ್ಷಿಯಲ್ ಎಲ್​ಪಿಜಿ ಬೆಲೆಗಳೂ ಇಳಿದಿವೆ.

LPG Cylinder Price: ವಾಣಿಜ್ಯ ಸಿಲಿಂಡರ್ ದರದಲ್ಲಿ 183.50 ರೂ ಇಳಿಕೆ! ಹೋಟೆಲ್ ಮಾಲೀಕರಿಗೆ ಬಿಗ್ ರಿಲೀಫ್

LPG Commercial Cylinder Price in Bangalore: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 183.50 ರೂ. ಕಡಿತವಾಗಿದೆ. ಹೋಟೆಲ್ ಮತ್ತು ರೆಸ್ಟೋರೆಂಟ್ ಮಾಲೀಕರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, 19 ಕೆಜಿ ಸಿಲಿಂಡರ್ ಬೆಲೆ 2,930 ರೂ.ಗೆ ಇಳಿಕೆಯಾಗಿದೆ. ಜುಲೈ 1 ರಿಂದಲೇ ಹೊಸ ದರ ಜಾರಿಗೆ ಬಂದಿದ್ದು, ನಿಮ್ಮ ನಗರದ ಇಂದಿನ ಪರಿಷ್ಕೃತ ದರಗಳು ಹಾಗೂ ಗೃಹಬಳಕೆ ಸಿಲಿಂಡರ್ ಬೆಲೆಯ ಸಂಪೂರ್ಣ ವಿವರ ಇಲ್ಲಿದೆ.

ಜೂನ್ 30 ಡೈಡ್​ಲೈನ್: ಎಲ್​ಪಿಜಿ ಇಕೆವೈಸಿ, ಐಟಿಆರ್ ಪರಿಶೀಲನೆ ಇತ್ಯಾದಿ ಹಣಕಾಸು ಕಾರ್ಯಗಳಿಗೆ ನಾಳೆಯ ಗಡುವು

Financial tasks to be done by June 30th: ಕೆಲ ಪ್ರಮುಖ ಹಣಕಾಸು ಕಾರ್ಯಗಳಿಗೆ ಜೂನ್ 30ರವರೆಗೆ ಕಾಲಾವಕಾಶ ಇದೆ. ಎಲ್​ಪಿಜಿ ಗ್ಯಾಸ್ ಸೌಲಭ್ಯ ಪಡೆಯುತ್ತಿರುವವರು ಇ-ಕೆವೈಸಿ ಮಾಡಿಸಬೇಕಾಗುತ್ತದೆ, ಗಮನಿಸಬೇಕು. ಇನ್ಕಮ್ ಟ್ಯಾಕ್ಸ್ ರಿಟರ್ನ್ ಸಲ್ಲಿಸಿರುವವರು, ತಪ್ಪು ಅಥವಾ ಮಾರ್ಪಾಡುಗಳಿದ್ದರೆ ತಿದ್ದಲು ಜೂನ್ 30ರವರೆಗೆ ಕಾಲಾವಕಾಶ ಇದೆ.

ಕೈಗಾರಿಕೆ, ಹೋಟೆಲ್‌ಗಳಿಗೆ ಬಿಗ್ ರಿಲೀಫ್; ಕಮರ್ಷಿಯಲ್ ಎಲ್‌ಪಿಜಿ ಪೂರೈಕೆ ಮೇಲಿನ ಎಲ್ಲಾ ನಿರ್ಬಂಧ ಹಿಂಪಡೆದ ಸರ್ಕಾರ

ಮಧ್ಯಪ್ರಾಚ್ಯದ ಬಿಕ್ಕಟ್ಟು ಸುಧಾರಿಸುತ್ತಿರುವ ಹಿನ್ನೆಲೆಯಲ್ಲಿ ಮತ್ತು ಅಮೆರಿಕ-ಇರಾನ್ ನಡುವೆ ಐತಿಹಾಸಿಕ ಒಪ್ಪಂದ ಹತ್ತಿರವಾಗುತ್ತಿರುವ ಕಾರಣದಿಂದ ವಾಣಿಜ್ಯ ಬಳಕೆಯ ಎಲ್‌ಪಿಜಿ ಮೇಲಿದ್ದ ಎಲ್ಲಾ ನಿಯಂತ್ರಣಗಳನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಇದರೊಂದಿಗೆ ಗ್ಯಾಸ್ ಪೂರೈಕೆಯನ್ನು ಬಿಕ್ಕಟ್ಟಿಗೂ ಮುಂಚಿನ ಯಥಾಸ್ಥಿತಿಗೆ ಮರಳಿ ತರಲಾಗಿದೆ. ಈ ನಿರ್ಬಂಧಗಳ ಸಡಿಲಿಕೆಯಿಂದಾಗಿ ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು, ಉತ್ಪಾದನಾ ಘಟಕಗಳು ಮತ್ತು ತಮ್ಮ ದೈನಂದಿನ ಕಾರ್ಯಾಚರಣೆಗಳಿಗಾಗಿ ಎಲ್‌ಪಿಜಿಯನ್ನು ಹೆಚ್ಚಾಗಿ ಅವಲಂಬಿಸಿರುವ ಇತರ ಕೈಗಾರಿಕಾ ಗ್ರಾಹಕರು ಸೇರಿದಂತೆ ವ್ಯಾಪಕ ಶ್ರೇಣಿಯ ವಾಣಿಜ್ಯ ಸಂಸ್ಥೆಗಳಿಗೆ ಭಾರಿ ಅನುಕೂಲವಾಗಲಿದೆ.

ಒಮಾನ್-ಭಾರತ ಗ್ಯಾಸ್ ಪೈಪ್​ಲೈನ್ ಪ್ರಾಜೆಕ್ಟ್​ಗೆ ಮರುಜೀವ; ಸಾಧ್ಯತಾ ವರದಿಗೆ ಸರ್ಕಾರ ಆದೇಶ; ಈ ಯೋಜನೆಯಿಂದ ಭಾರತಕ್ಕಿದೆಯಾ ಲಾಭ?

Oman-Gujarat deep-sea gas pipeline project, feasibility study ordered: ಪಶ್ಚಿಮ ಏಷ್ಯಾ ಉದ್ವಿಗ್ನತೆಯ ನಡುವೆ, ಭಾರತವು ₹40,000 ಕೋಟಿ ವೆಚ್ಚದ 'ಒಮಾನ್-ಗುಜರಾತ್ ಆಳಸಮುದ್ರ ನೈಸರ್ಗಿಕ ಅನಿಲ ಪೈಪ್‌ಲೈನ್' ಯೋಜನೆಗೆ ಮರುಜೀವ ನೀಡಿದೆ. ಇದು ಭಾರತದ ಇಂಧನ ಭದ್ರತೆಯನ್ನು ಹೆಚ್ಚಿಸಿ, ಹಾರ್ಮುಜ್ ಜಲಸಂಧಿ ಮತ್ತು ಪಾಕಿಸ್ತಾನದ ಹಸ್ತಕ್ಷೇಪವನ್ನು ತಪ್ಪಿಸುತ್ತದೆ. ಗೇಲ್, IOCL, EIL ಸಂಸ್ಥೆಗಳಿಗೆ ಸಾಧ್ಯತಾ ವರದಿ ಸಿದ್ಧಪಡಿಸಲು ನಿರ್ದೇಶಿಸಲಾಗಿದ್ದು, ಭಾರತದ 2030ರ ಇಂಧನ ಗುರಿ ತಲುಪಲು ಇದು ನಿರ್ಣಾಯಕವಾಗಿದೆ.

ಉಜ್ವಲ ಗ್ಯಾಸ್ ಯೋಜನೆಯಲ್ಲಿ ಸಬ್ಸಿಡಿಯುಕ್ತ ಸಿಲಿಂಡರ್ ಸಂಖ್ಯೆ ಕಡಿಮೆ ಮಾಡಲು ನಿಜವಾದ ಕಾರಣ ಇದಾ?

Reasons for PMUY Subsidy Reduction: ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY) ಅಡಿಯಲ್ಲಿ ಎಲ್‌ಪಿಜಿ ಸಬ್ಸಿಡಿ ಸಿಲಿಂಡರ್‌ಗಳ ಸಂಖ್ಯೆಯನ್ನು 9ರಿಂದ 4ಕ್ಕೆ ಕಡಿತಗೊಳಿಸಲಾಗಿದೆ. ಈ ನಿರ್ಧಾರಕ್ಕೆ ಪ್ರಮುಖ ಕಾರಣ ಯೋಜನೆಯ ದುರ್ಬಳಕೆ. ಕೆಲವು ವಂಚಕರು ಸಬ್ಸಿಡಿ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ಅಕ್ರಮವಾಗಿ ಬೇರೆಡೆಗೆ ಸಾಗಿಸುತ್ತಿರುವುದು ಕಂಡುಬಂದಿದೆ. ಸೋರಿಕೆ ತಡೆದು, ನಿಜವಾದ ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ತಲುಪಿಸುವ ಗುರಿಯೊಂದಿಗೆ ಸರ್ಕಾರ ಈ ಕ್ರಮ ಕೈಗೊಂಡಿದೆ. ಸರಾಸರಿ ಬಳಕೆಯ ಆಧಾರದ ಮೇಲೆ ಈ ಮಿತಿ ನಿಗದಿಪಡಿಸಲಾಗಿದೆ.

ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ಆ.13ರಂದು ಕರ್ನಾಟಕ ಬಂದ್​​ ಬಗ್ಗೆ ಹೋಟೆಲ್ ಮಾಲೀಕರ ಸಂಘ ಹೇಳಿದ್ದೇನು?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ತಮಿಳುನಾಡು ಸಿಎಂ ಬೆಂಗಳೂರಿಗೆ ಬರುವುದು ಬೇಡ ಎಂದ ಡಿಕೆಶಿ, ಕಾರಣ?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?
ಕಾವೇರಿ ನೀರು ವಿವಾದ: ಡಿಕೆಶಿ ಸರ್ಕಾರಕ್ಕೆ ಕುಮಾರಸ್ವಾಮಿ ಕೊಟ್ಟ ಸಲಹೆ ಏನು?