AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPG

LPG

ಎಲ್​ಪಿಜಿ ಎಂದರೆ ಲಿಕ್ವಿಫೈಡ್ ಪೆಟ್ರೋಲಿಯಂ ಗ್ಯಾಸ್. ಹೆಸರೇ ಸೂಚಿಸುವಂತೆ ಇದು ಧ್ರವೀಕರಿಸಿದ ಪೆಟ್ರೋಲಿಯಂ ಅನಿಲ. ಪ್ರೊಪೇನ್, ಪ್ರೊಪಿಲೀನ್ ಇತ್ಯಾದಿ ಹೈಡ್ರೋಕಾರ್ಬನ್ ಗ್ಯಾಸ್​ಗಳ ಮಿಶ್ರಣ ಇರುವ ಇಂಧನವಾಗಿದೆ. ಪೆಟ್ರೋಲಿಯಂನ ಉಪ ಉತ್ಪನ್ನಗಳಲ್ಲಿ ಇದೂ ಒಂದು. ಎಲ್​ಪಿಜಿ ಬಹೂಪಯೋಗಿ ಆಗಿರುವ ಇಂಧನವಾಗಿದೆ. ಅಡುಗೆಯ ಇಂಧನವಾಗಿ ಇದನ್ನು ಬಳಸಬಹುದು. ವಾಹನಗಳಿಗೆ ಇಂಧನವಾಗಿ ಬಳಸಬಹುದು. ರಾಸಾಯನಿಕ ಕಾರ್ಖಾನೆಗಳಲ್ಲಿ ಇದರ ಉಪಯೋಗ ಇದೆ. ಇದು ಮಾಲಿನ್ಯಕಾರಕ ಹೊಗೆಯನ್ನು ಹೊರಸೂಸುವುದಿಲ್ಲ. ಹೀಗಾಗಿ, ಅಡುಗೆ ಅನಿಲವಾಗಿ ಎಲ್ಲೆಡೆ ವ್ಯಾಪಕವಾಗಿ ಬಳಕೆಯಲ್ಲಿ ಇದೆ. ಸೌದೆ ಒಲೆ, ಕೆರೋಸಿನ್​ಗೆ ಹೋಲಿಸಿದರೆ ಎಲ್​ಪಿಜಿ ಉತ್ತಮ ಆಯ್ಕೆ. ಭಾರತದಲ್ಲಿ ಎಲ್​ಪಿಜಿಗಳನ್ನು ಸಿಲಿಂಡರ್​​ಗಳಲ್ಲಿ ತುಂಬಸಿ ಸರಬರಾಜು ಮಾಡಲಾಗುತ್ತದೆ. ಗೃಹ ಬಳಕೆಗೆ ಪ್ರತ್ಯೇಕ ಸಿಲಿಂಡರ್​ಗಳಿವೆ. ಹೋಟೆಲ್ ಇತ್ಯಾದಿ ವಾಣಿಜ್ಯ ಬಳಕೆಗೆ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್​ಗಳಿವೆ. ಅಡುಗೆಗೆ ಬಳಸುವ ಎಲ್​ಪಿಜಿಗೆ ಸರ್ಕಾರ ಸಬ್ಸಿಡಿ ನೀಡುತ್ತದೆ. ಕಮರ್ಷಿಯಲ್ ಎಲ್​ಪಿಜಿಗೆ ಸಬ್ಸಿಡಿ ಇರುವುದಿಲ್ಲ.

ಇನ್ನೂ ಹೆಚ್ಚು ಓದಿ

ಬೆಂಗಳೂರು ಆಟೋ ಪ್ರಯಾಣಿಕರಿಗೆ ದರ ಏರಿಕೆ ಬಿಸಿ? ಎಲ್.ಪಿ.ಜಿ ದರ ಹೆಚ್ಚಳಕ್ಕೆ ಚಾಲಕರ ಆಕ್ರೋಶ!

ಬೆಂಗಳೂರಿನಲ್ಲಿ ಆಟೋ ಎಲ್‌ಪಿಜಿ ದರ ಪ್ರತಿ ಲೀಟರ್‌ಗೆ 5.73 ರೂ. ಏರಿಕೆಯಾಗಿದ್ದು, ಆಟೋ ಪ್ರಯಾಣದ ಕನಿಷ್ಠ ದರವನ್ನು 50 ರೂ.ಗೆ ಹೆಚ್ಚಿಸಲು ಚಾಲಕರು ಒತ್ತಾಯಿಸುತ್ತಿದ್ದಾರೆ. ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್ ಹಾಗೂ ಗ್ಯಾಸ್ ಕೊರತೆಯಿಂದ ಕಂಗಾಲಾಗಿರುವ ಚಾಲಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸಾರಿಗೆ ಸಚಿವರ ಮಧ್ಯಸ್ಥಿಕೆಗೆ ಆಗ್ರಹಿಸಿದ್ದಾರೆ. ಸಾಮಾನ್ಯ ಜನರಿಗೂ ಆಟೋ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆ ಇದೆ.

ಕಮರ್ಷಿಯಲ್ ಗ್ಯಾಸ್ ದರ ಇಳಿಸುವಂತೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್​ನಿಂದ ಪ್ರಧಾನಿ ಮೋದಿಗೆ ಪತ್ರ

ವಾಣಿಜ್ಯ ಎಲ್​ಪಿಜಿ ಗ್ಯಾಸ್ ಸಿಲಿಂಡರ್ ದರ ಏರಿಕೆಯಿಂದ ಹೋಟೆಲ್ ಉದ್ಯಮ ನಷ್ಟದ ಸುಳಿಗೆ ಸಿಲುಕಿದ್ದು, ಬೆಲೆ ಕಡಿತಕ್ಕೆ ಆಗ್ರಹಿಸಿದೆ. ಅಲ್ಲದೆ, ಈ ಬಗ್ಗೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದೆ. ಇತ್ತೀಚಿನ 993 ರೂ. ಬೆಲೆ ಏರಿಕೆಯು ಹೋಟೆಲ್ ಮಾಲೀಕರ ನಿದ್ದೆಗೆಡಿಸಿದೆ.

ಕಮರ್ಷಿಲ್ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಕಾಫಿ ಬೆಲೆ ಗಗನಕ್ಕೇರುತ್ತಾ?

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 993 ರೂಪಾಯಿಗಳಷ್ಟು ಭಾರಿ ಏರಿಕೆ ಕಂಡಿದ್ದು, ಹೋಟೆಲ್ ಮಾಲೀಕರಿಗೆ ಮತ್ತು ಜನಸಾಮಾನ್ಯರಿಗೆ ಮತ್ತೊಂದು ಆಘಾತ ನೀಡಿದೆ. ಈ ಏರಿಕೆಯು ಹೋಟೆಲ್ ಉದ್ಯಮದ ಮೇಲೆ ತೀವ್ರ ಪರಿಣಾಮ ಬೀರಲಿದ್ದು, ಊಟ, ತಿಂಡಿ ಮತ್ತು ಪಾನೀಯಗಳ ಬೆಲೆಗಳು ಹೆಚ್ಚಾಗುವ ಅನಿವಾರ್ಯತೆ ಸೃಷ್ಟಿಯಾಗಿದೆ.

ವಾಣಿಜ್ಯ ಸಿಲಿಂಡರ್ ದರ ಏರಿಕೆ: ಹೋಟೆಲ್​ನಲ್ಲಿ ಊಟ-ತಿಂಡಿ ದರ ಹೆಚ್ಚಾಗುತ್ತಾ? ಬೆಂಗಳೂರು ಹೋಟೆಲ್ ಮಾಲೀಕರು ಏನಂತಾರೆ?

ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ 991 ರೂ. ಹೆಚ್ಚಳವಾಗಿದ್ದು, ಹೋಟೆಲ್ ಮಾಲೀಕರಿಗೆ ಭಾರಿ ಸಂಕಷ್ಟ ತಂದಿದೆ. ಯುದ್ಧದ ಪರಿಣಾಮದಿಂದ ಈಗಾಗಲೇ ನಷ್ಟದಲ್ಲಿದ್ದ ಹೋಟೆಲ್‌ಗಳು ಈಗ ಅನಿವಾರ್ಯವಾಗಿ ಊಟ-ತಿಂಡಿ ದರ ಹೆಚ್ಚಳಕ್ಕೆ ಮುಂದಾಗಿವೆ. ಕೂಲಿ ಕಾರ್ಮಿಕರು ಹಾಗೂ ಗ್ರಾಹಕರ ಮೇಲೆ ಹೊರೆ ಬೀಳುವುದಕ್ಕೆ ಮಾಲೀಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Commercial LPG Cylinder Price: ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್ ಬೆಲೆ ಬರೋಬ್ಬರಿ 993 ರೂ. ಏರಿಕೆ

Gas Cylinder Price in Bangalore: ಮೇ 1 ರಿಂದ ವಾಣಿಜ್ಯ ಎಲ್​ಪಿಜಿ ಸಿಲಿಂಡರ್ ಬೆಲೆ ಬರೋಬ್ಬರಿ 993 ರೂ. ಏರಿಕೆಯಾಗಿದೆ. ದೆಹಲಿಯಲ್ಲಿ ಇದರ ಬೆಲೆ ಈಗ 3,071.50 ರೂ. ತಲುಪಿದೆ. ಈ ಏರಿಕೆಯು ಹೋಟೆಲ್, ರೆಸ್ಟೋರೆಂಟ್‌ಗಳಂತಹ ವಾಣಿಜ್ಯ ಸಂಸ್ಥೆಗಳ ಮೇಲೆ ನೇರ ಪರಿಣಾಮ ಬೀರಲಿದೆ. ಆದರೆ, 14.2 ಕೆಜಿ ದೇಶೀಯ ಸಿಲಿಂಡರ್, ಪೆಟ್ರೋಲ್, ಡೀಸೆಲ್, ಮತ್ತು ಸೀಮೆಎಣ್ಣೆ ಬೆಲೆಗಳಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಕಮರ್ಷಿಯಲ್ ಅಡುಗೆ ಅನಿಲವಾಗಿ ಎಥನಾಲ್ ಬಳಕೆ? ಎಲ್​ಪಿಜಿ ಅವಲಂಬನೆ ತಗ್ಗಿಸಲು ಸರ್ಕಾರದಿಂದ ಹೊಸ ಮಾರ್ಗೋಪಾಯ

Govt thinks of using ethanol as commercial cooking gas: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಅನಿಲ ಪೂರೈಕೆಯಲ್ಲಿ ಅಡೆತಡೆ ಉಂಟಾಗಿದ್ದು, ಎಲ್‌ಪಿಜಿ ಬೆಲೆ ಗಗನಕ್ಕೇರಿದೆ. ಇದರಿಂದಾಗಿ ಹೋಟೆಲ್‌ಗಳು ಮತ್ತು ಉದ್ದಿಮೆಗಳು ಸಂಕಷ್ಟಕ್ಕೆ ಸಿಲುಕಿವೆ. ಈ ಅವಲಂಬನೆಯನ್ನು ತಗ್ಗಿಸಲು ದೇಶೀಯವಾಗಿ ಉತ್ಪಾದನೆಯಾಗುವ ಎಥೆನಾಲ್ ಅನ್ನು ಬಳಸಲು ಉದ್ದೇಶಿಸಲಾಗಿದೆ.

ಅಮೆರಿಕದ ನಿಷೇಧದ ನಡುವೆಯೂ ರಷ್ಯನ್ ತೈಲ ಖರೀದಿ ಮುಂದುವರಿಸಲಿರುವ ಭಾರತ

India Prioritizes Energy: ಅಮೆರಿಕದ ನಿರ್ಬಂಧಗಳ ನಡುವೆಯೂ ಭಾರತವು ರಷ್ಯಾದಿಂದ ತೈಲ ಖರೀದಿ ಮುಂದುವರಿಸಲಿದೆ ಎಂದು ವರದಿಯಾಗಿದೆ. ದೇಶದ ಇಂಧನ ಭದ್ರತೆಯನ್ನು ಖಾತ್ರಿಪಡಿಸುವುದು ಭಾರತದ ಪ್ರಮುಖ ಆದ್ಯತೆಯಾಗಿದೆ. ಕಚ್ಚಾ ತೈಲ ಮತ್ತು ಎಲ್‌ಪಿಜಿ ಪೂರೈಕೆಯಲ್ಲಿ ಸ್ವಾವಲಂಬನೆ ಸಾಧಿಸಲು ಭಾರತವು ರಷ್ಯಾದ ಮೇಲೆ ಅವಲಂಬಿತವಾಗಿದೆ. ಅಮೆರಿಕದ ನಿಲುವು ಅಸ್ಪಷ್ಟವಾಗಿದ್ದು, ಭಾರತವು ಪರ್ಯಾಯ ಇಂಧನ ಮೂಲಗಳನ್ನು ಹುಡುಕುತ್ತಿದೆ.

ಗ್ರಾಹಕರಿಗೆ ಶಾಕ್: ರೊಟ್ಟಿ, ಚಪಾತಿ, ಹೋಳಿಗೆ ದರ ಏರಿಕೆ

ವಾಣಿಜ್ಯ ಸಿಲಿಂಡರ್‌ಗಳ ಅಭಾವದಿಂದಾಗಿ ರಾಯಚೂರಿನ ರೊಟ್ಟಿ ಕೇಂದ್ರಗಳಲ್ಲಿ ಸಮಸ್ಯೆ ಎದುರಾಗಿದೆ. ತ್ವರಿತವಾಗಿ ಪೂರೈಸಬೇಕಾದ ರೊಟ್ಟಿ ಮತ್ತು ಚಪಾತಿಗೆ ಗ್ಯಾಸ್ ಅಗತ್ಯವಿರುವುದರಿಂದ, ಈ ಕೇಂದ್ರಗಳು ಪ್ರತಿ ರೊಟ್ಟಿ ಮತ್ತು ಚಪಾತಿಗೆ 2 ರೂಪಾಯಿ ಹೆಚ್ಚಿಸಿವೆ. ಹೋಳಿಗೆ ದರವೂ 5 ರೂಪಾಯಿ ಹೆಚ್ಚಳವಾಗಿದ್ದು, ಇದು ಗ್ರಾಹಕರ ಅಸಮಾಧಾನಕ್ಕೆ ಕಾರಣವಾಗಿದೆ.

ಎಲ್‌ಪಿಜಿ ಕೊರತೆ, ದರ ಏರಿಕೆಗೆ ಸೆಡ್ಡು: ಹೋಟೆಲ್ ಕಸ ನೀಡಿ ಬಯೋಗ್ಯಾಸ್ ಪಡೆಯಲು ಮುಂದಾದ ಬೆಂಗಳೂರಿನ ಹೋಟೆಲ್‌ಗಳು!

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಕೊರತೆ, ದರ ಏರಿಕೆ ಸಂಕಷ್ಟಕ್ಕೆ ಬ್ರೇಕ್ ಹಾಕಲು ಬೆಂಗಳೂರಿನ ಹೋಟೆಲ್ ಮಾಲೀಕರು ‘ಬಯೋಗ್ಯಾಸ್’ ಮೊರೆ ಹೋಗಿದ್ದಾರೆ. ಹೋಟೆಲ್ ಕಸವನ್ನು ಕಂಪನಿಗಳಿಗೆ ನೀಡಿ ಅದಕ್ಕೆ ಪ್ರತಿಯಾಗಿ ಗ್ಯಾಸ್ ಪಡೆಯುವ ಹೊಸ ‘ಕಸದಿಂದ ರಸ’ ಯೋಜನೆಗೆ ರಾಜಧಾನಿಯಲ್ಲಿ ಚಾಲನೆ ಸಿಗುತ್ತಿದೆ. ಇದು ವಾಣಿಜ್ಯ ಎಲ್​ಪಿಜಿ ಸಿಲಿಂಡ್​ಗೆ ಪರ್ಯಾಯವಾದರೆ ಹೋಟೆಲ್​ಗಳ ಸಮಸ್ಯೆ ಬಗೆಹರಿಯಲಿದೆ.

ಹೋಟೆಲ್‌ ಗ್ರಾಹಕರಿಗೆ ಮತ್ತೊಂದು ಶಾಕ್: ಇನ್ಮುಂದೆ ಊಟ-ತಿಂಡಿಗೆ ಹೆಚ್ಚು ಹೊತ್ತು ಕಾದು ಕುಳಿತುಕೊಳ್ಳುವುದು ಅನಿವಾರ್ಯ!

ಯುದ್ಧದ ಹಿನ್ನೆಲೆಯಲ್ಲಿ ಎಲ್‌ಪಿಜಿ ಸಿಲಿಂಡರ್ ಅಭಾವ ಉಂಟಾಗಿದ್ದು, ಬೆಂಗಳೂರು ಸೇರಿ ಕರ್ನಾಟಕದ ಹೋಟೆಲ್‌ಗಳಲ್ಲಿ ಅಡುಗೆ ತಯಾರಿಕೆಗೆ ಸೌದೆ ಒಲೆ ಬಳಸಲಾಗುತ್ತಿದೆ. ಇದರಿಂದಾಗಿ ಸರ್ವೀಸ್ ಸಮಯದಲ್ಲಿ ವಿಳಂಬವಾಗುತ್ತಿದ್ದು, ಗ್ರಾಹಕರು ಊಟ-ತಿಂಡಿಗಾಗಿ ಕನಿಷ್ಠ 15 ರಿಂದ 20 ನಿಮಿಷ ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ. ಇದರೊಂದಿಗೆ, ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾದಂತಾಗಿದೆ.

ಬೆಂಗಳೂರಲ್ಲಿ ಎಲ್‌ಪಿಜಿ ಹಾಹಾಕಾರ: ಆಟೋ ಚಾಲಕರ ಬೆನ್ನಲ್ಲೇ ಇನ್ಶೂರೆನ್ಸ್ ಏಜೆಂಟರೂ ಕಂಗಾಲು! ಯಾಕೆ ಗೊತ್ತಾ?

ಬೆಂಗಳೂರಿನಲ್ಲಿ ಎಲ್‌ಪಿಜಿ ಅಭಾವದಿಂದಾಗಿ ಆಟೋ ಚಾಲಕರು ಕಂಗಾಲಾಗಿದ್ದು, ದುಡಿಮೆ ಇಲ್ಲದೆ ಕಂಗಾಲಾಗಿದ್​ದರೆ ಜತೆಗೆ ಇದೀಗ ವಿಮೆ ಕಟ್ಟಲೂ ಹಣವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದು ಇನ್ಶೂರೆನ್ಸ್ ಏಜೆಂಟ್‌ಗಳ ಮೇಲೂ ಪರಿಣಾಮ ಬೀರಿದ್ದು, ಸಾವಿರಾರು ಆಟೋಗಳ ವಿಮೆ ನವೀಕರಣವಾಗದೆ ಬಾಕಿ ಉಳಿದಿವೆ. ಇದು ವಿಮೆ ಏಜೆಂಟ್​​ಗಳನ್ನೂ ಸಂಕಷ್ಟಕ್ಕೆ ದೂಡಿದೆ.

ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್

ದಿನಸಿ ಕಿಟ್ ವಿತರಣೆ ಮಾಡುವ ಮೂಲಕ ವಿನೋದ್ ರಾಜ್ ಅವರು ಮಾನವೀಯತೆ ಮೆರೆದಿದ್ದಾರೆ. ‘ತಾಯಿ ಇದ್ದಿದ್ದರೆ ಇದಕ್ಕಿಂತಲೂ ದೊಡ್ಡ ಸಹಾಯ ಮಾಡುತ್ತಿದ್ದರು. ನನ್ನ ಕೈಯಲ್ಲಿ ಆಗಿದ್ದನ್ನು ಮಾಡಿದ್ದೇನೆ’ ಎಂದು ಅವರು ಈ ವೇಳೆ ಹೇಳಿದರು. ತಮ್ಮ ನೆರವಿಗೆ ಬಂದ ವಿನೋದ್ ರಾಜ್ ಅವರಿಗೆ ಆಟೋ ಚಾಲಕರು ಧನ್ಯವಾದ ತಿಳಿಸಿದರು.

ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
ಒಳಮೀಸಲಾತಿ ಹುದ್ದೆಗಳ ರೋಸ್ಟರ್ ಬಿಂದು ಸಮಸ್ಯೆ: ಮುನಿಯಪ್ಪ ಹೇಳಿದ್ದಿಷ್ಟು
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್