
Maha Shivratri
ಮಹಾಶಿವರಾತ್ರಿ ಹಿಂದೂಗಳ ಪವಿತ್ರವಾದ ಹಬ್ಬಗಳಲ್ಲಿ ಒಂದು. ಇದು ಬಹಳ ಧಾರ್ಮಿಕ ಮತ್ತು ಆಧ್ಯಾತ್ಮಿಕ ಮಹತ್ವವನ್ನು ಹೊಂದಿದೆ. ದೇಶದಾದ್ಯಂತ ಶಿವನನ್ನು ಆರಾಧಿಸುವವರು ಮಹಾ ಶಿವರಾತ್ರಿಯನ್ನು ಅತ್ಯಂತ ಶ್ರದ್ಧಾ- ಭಕ್ತಿಯಿಂದ ಆಚರಿಸುತ್ತಾರೆ. ಶಿವರಾತ್ರಿಯ ಹಿಂದಿನ ದಿನ ರಾತ್ರಿಯಿಂದಲೇ ಭಜನೆ, ಜಾಗರಣೆ, ಉಪವಾಸಗಳನ್ನು ಮಾಡಲಾಗುತ್ತದೆ. ಶಿವರಾತ್ರಿಯಂದು ಶಿವ ಪೂಜೆಯನ್ನು ಮಾಡುವ ಮೂಲಕ, ಶಿವನಿಗೆ ಪ್ರಿಯವಾದ ತುಳಸಿ, ಬಿಲ್ವಪತ್ರೆಯನ್ನು ಅರ್ಪಿಸುವ ಮೂಲಕ, ತಂಬಿಟ್ಟಿನ ನೈವೇದ್ಯ ಮಾಡುವ ಮೂಲಕ ಈ ಹಬ್ಬವನ್ನು ಆಚರಿಸಲಾಗುತ್ತದೆ. ಬೇರೆಲ್ಲ ಹಬ್ಬಗಳಲ್ಲಿ ಹಗಲಿನ ವೇಳೆ ದೇವರಿಗೆ ಪೂಜೆ ಮಾಡಿದರೆ ಶಿವರಾತ್ರಿಯಲ್ಲಿ ಶಿವನಿಗೆ ರಾತ್ರಿ ಪೂಜೆ ಮಾಡುವುದೇ ದೊಡ್ಡ ವಿಶೇಷ. ಶಿವರಾತ್ರಿಯ ಮಹತ್ವದ ಬಗ್ಗೆ ಹಲವು ದಂತಕತೆಗಳಿವೆ. ಶಿವನು ಪಾರ್ವತಿಯನ್ನು ಮದುವೆಯಾದ ದಿನ ಶಿವರಾತ್ರಿಯೆಂದು ಕೆಲವು ಕತೆಗಳು ಹೇಳುತ್ತವೆ. ದೇವತೆಗಳು ಮತ್ತು ಅಸುರರ ನಡುವೆ ಸಮುದ್ರ ಮಂಥನ ನಡೆದಾಗ ಉದ್ಭವವಾದ ವಿಷವನ್ನು ಶಿವ ಕುಡಿದು ನೀಲಕಂಠನಾದ ದಿನ ಶಿವರಾತ್ರಿಯೆಂದು ಇನ್ನು ಕೆಲವು ಕತೆಗಳು ಹೇಳುತ್ತವೆ. ಶಿವನ ಜಟೆಯಿಂದ ಗಂಗೆ ಭೂಮಿಗೆ ಬಂದಿದ್ದು ಇದೇ ದಿನ ಎಂಬುದು ಇನ್ನೊಂದು ಕತೆ. ಶಿವನು ಲಿಂಗ ರೂಪ ತಾಳಿ ನಿಶ್ಚಲನಾದ ದಿನವೇ ಶಿವರಾತ್ರಿ ಎಂಬುದು ಬಹುತೇಕರ ನಂಬಿಕೆ.
ಶಿವರಾತ್ರಿ ಸ್ಮಶಾನ ಪೂಜೆ; ಕೋಲಾರದ ಈ ಆಚರಣೆ ನೋಡಿದರೆ ಮೈ ಜುಮ್ಮೆನ್ನೋದು ಗ್ಯಾರಂಟಿ
ಶಿವರಾತ್ರಿಯೆಂದರೆ ಬಹುತೇಕರು ಕಟ್ಟುನಿಟ್ಟಾಗಿ ಉಪವಾಸವಿದ್ದು ಶಿವರಾತ್ರಿಯನ್ನು ಆಚರಣೆ ಮಾಡುತ್ತಾರೆ. ಅದೇ ರೀತಿ ಇಲ್ಲೊಂದಷ್ಟು ಜನ ಶಿವರಾತ್ರಿಯನ್ನು ಶಿವರಾತ್ರಿಯ ನಂತರ ಬರುವ ಅಮಾವಾಸ್ಯೆಯ ದಿನ ಸ್ಮಶಾನವಾಸಿಯಾದ ಶಿವನನ್ನು ವಿಭಿನ್ನವಾಗಿ ಪೂಜಿಸಿ, ಆರಾಧಿಸಿ, ಕಾಳಿ ಮಾತೆಯ ವೇಷದಾರಿಯಾಗಿ ನರಕಾಸುರ ಸಂಹಾರವನ್ನು ಮಾಡಿ ಬಲಿ ಕೊಟ್ಟು ಪೂಜಿಸುತ್ತಾರೆ. ಅಲ್ಲಿನ ಆಚರಣೆ ಹೇಗಿತ್ತು ಎಂಬುದರ ಮಾಹಿತಿ ಇಲ್ಲಿದೆ.
- Rajendra Simha BL
- Updated on: Feb 27, 2025
- 8:58 pm
ಇಶಾ ಫೌಂಡೇಷನ್ನ ಶಿವರಾತ್ರಿಯಲ್ಲಿ ಡಿಕೆಶಿ ಭಾಗಿಯಾಗಿದ್ದಕ್ಕೆ ಕಾಂಗ್ರೆಸ್ ಮುಖಂಡರಿಂದಲೇ ಅಸಮಾಧಾನ
ಆಧ್ಯಾತ್ಮ ಗುರು ಸದ್ಗುರು ಜಗ್ಗಿ ವಾಸುದೇವ್ ಆಯೋಜಿಸಿದ್ದ ಕೊಯಮತ್ತೂರಿನ ಇಶಾ ಫೌಂಡೇಷನಿನ ಮಹಾ ಶಿವರಾತ್ರಿ ಕಾರ್ಯಕ್ರಮದಲ್ಲಿ ಕರ್ನಾಟಕದ ಡಿಸಿಎಂ ಡಿ.ಕೆ. ಶಿವಕುಮಾರ್ ಭಾಗವಹಿಸಿದ್ದರು. ಇದೇ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಭಾಗಿಯಾಗಿದ್ದರು. ಈ ಮಹಾ ಶಿವರಾತ್ರಿ ಕಾರ್ಯಕ್ರಮಕ್ಕೆ ಡಿಕೆಶಿ ಪಾಲ್ಗೊಂಡಿದ್ದಕ್ಕೆ ಕಾಂಗ್ರೆಸ್ ಮುಖಂಡರಿಂದಲೇ ಆಕ್ಷೇಪ ವ್ಯಕ್ತವಾಗಿದೆ.
- Pruthviraj
- Updated on: Feb 27, 2025
- 5:34 pm
ಶಿವರಾತ್ರಿ ಸಂಭ್ರಮ: ಆದಿಯೋಗಿ ಪ್ರತಿಮೆ ಎದುರು ಮೌನಿ ರಾಯ್ ಧ್ಯಾನ
ಜನಸಾಮಾನ್ಯರಂತೆ ಸೆಲೆಬ್ರಿಟಿಗಳು ಸಹ ಶಿವರಾತ್ರಿ ಸಡಗರದಲ್ಲಿ ಪಾಲ್ಗೊಂಡಿದ್ದಾರೆ. ಖ್ಯಾತ ನಟಿ ಮೌನಿ ರಾಯ್ ಸಹ ಹಬ್ಬವನ್ನು ಆಚರಿಸಿದ್ದಾರೆ. ಈ ವಿಡಿಯೋ ಹಂಚಿಕೊಂಡು ಅವರು ತಮ್ಮ ಅಭಿಮಾನಿಗಳಿಗೆ ಶುಭ ಕೋರಿದ್ದಾರೆ. ಮೌನಿ ರಾಯ್ ಅವರು ಆದಿಯೋಗಿ ಪ್ರತಿಮೆ ಎದುರಲ್ಲಿ ಧ್ಯಾನ ಮಾಡಿದ್ದಾರೆ. ಮೌನಿಗೆ ಅಭಿಮಾನಿಗಳು ಸಹ ಶಿವರಾತ್ರಿಯ ವಿಶ್ ಮಾಡಿದ್ದಾರೆ.
- Madan Kumar
- Updated on: Feb 26, 2025
- 10:51 pm
ಮಹಾ ಶಿವರಾತ್ರಿಯಂದೇ ಬಾಡೂಟ ಸವಿದ ಜನರು
ರಾಮನಗರ ಜಿಲ್ಲೆಯ ಮಂಗಾಡಹಳ್ಳಿ ಗ್ರಾಮದಲ್ಲಿ ಮಹಾಶಿವರಾತ್ರಿಯಂದು ವಿಶೇಷ ಬಾಡೂಟದ ಆಚರಣೆ ನಡೆಯಿತು. ಚನ್ನಪ್ಪಸ್ವಾಮಿ ದೇವರಿಗೆ ನೈವೇದ್ಯವಾಗಿ ನೂರಾರು ಕೆಜಿ ಮಟನ್ ಮತ್ತು ಚಿಕನ್ ಬಳಸಿ ತಯಾರಿಸಿದ ಬಾಡೂಟವನ್ನು ಗ್ರಾಮಸ್ಥರು ಸವಿದಿದ್ದಾರೆ. ಇದು ಹಲವು ವರ್ಷಗಳಿಂದ ನಡೆಯುತ್ತಿರುವ ವಿಶಿಷ್ಟ ಪದ್ಧತಿಯಾಗಿದೆ. ಅಕ್ಕಪಕ್ಕದ ಗ್ರಾಮಗಳ ಜನರು ಕೂಡ ಭರ್ಜರಿ ಊಟ ಸವಿದಿದ್ದಾರೆ.
- Syed Nizamuddin
- Updated on: Feb 26, 2025
- 10:49 pm
Mahakumbh: ಮಹಾಕುಂಭದಲ್ಲಿ 45 ದಿನದಲ್ಲಿ 66 ಕೋಟಿಗೂ ಹೆಚ್ಚು ಭಕ್ತರಿಂದ ಪುಣ್ಯ ಸ್ನಾನ
ಜನವರಿ 13ರಂದು ಪ್ರಾರಂಭವಾದ ಮಹಾಕುಂಭ ಮೇಳ ಮಹಾ ಶಿವರಾತ್ರಿಯ ದಿನವಾದ ಇಂದು ಕೊನೆಗೊಂಡಿದೆ. ಮಹಾಕುಂಭ ಮೇಳದಲ್ಲಿ ಒಟ್ಟು ಸ್ನಾನ ಮಾಡುವವರ ಸಂಖ್ಯೆ ಚೀನಾ ಮತ್ತು ಭಾರತವನ್ನು ಹೊರತುಪಡಿಸಿ ಎಲ್ಲಾ ದೇಶಗಳ ಜನಸಂಖ್ಯೆಯನ್ನು ಮೀರಿದೆ ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಟ್ವೀಟ್ ಮಾಡಿದ್ದಾರೆ. ಮಹಾಶಿವರಾತ್ರಿಯ ದಿನವಾದ ಇಂದು 1.44 ಕೋಟಿಗೂ ಹೆಚ್ಚು ಭಕ್ತರು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.
- Sushma Chakre
- Updated on: Feb 26, 2025
- 9:47 pm
ಭಕ್ತಿಯ ಮಹಾಕುಂಭಕ್ಕೆ ಸಾಕ್ಷಿಯಾಗಿದ್ದೇನೆ; ಇಶಾ ಫೌಂಡೇಷನ್ ಮಹಾ ಶಿವರಾತ್ರಿಯಲ್ಲಿ ಅಮಿತ್ ಶಾ
ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ ಯೋಗ ಕೇಂದ್ರದಲ್ಲಿ ಮಹಾ ಶಿವರಾತ್ರಿ ಆಚರಣೆಯ ಕಾರ್ಯಕ್ರಮವನ್ನು ಉದ್ದೇಶಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿದ್ದಾರೆ. ಮಹಾಶಿವರಾತ್ರಿಯ ಸಂದರ್ಭದಲ್ಲಿ ನನ್ನ ಶುಭಾಶಯಗಳನ್ನು ಕೋರುತ್ತೇನೆ. ಸದ್ಗುರುಗಳ ಆಹ್ವಾನದ ಮೇರೆಗೆ ಇಲ್ಲಿಗೆ ಬರಲು ಅವಕಾಶ ಸಿಕ್ಕಿದ್ದಕ್ಕಾಗಿ ನಾನು ತುಂಬಾ ಕೃತಜ್ಞನಾಗಿದ್ದೇನೆ. ಈ ಮಹಾಶಿವರಾತ್ರಿ ಆಚರಣೆ ಅದ್ಭುತ ಮತ್ತು ವರ್ಣನಾತೀತ ಎಂದು ಅಮಿತ್ ಶಾ ಹೇಳಿದ್ದಾರೆ.
- Sushma Chakre
- Updated on: Feb 26, 2025
- 9:30 pm
ತ್ರಿವೇಣಿ ಸಂಗಮದಲ್ಲಿ ಮಿಂದೆದ್ದ ಕನ್ನಡಿಗರು ಟಿವಿ9 ಕನ್ನಡ ವಾಹಿನಿಗೆ ಬದುಕು ಪಾವನವಾಯಿತು ಎಂದರು!
ಕನ್ನಡಿಗರ ಗುಂಪಿನಲ್ಲಿ ಶಿವಮೊಗ್ಗದಿಂದ ಬಂದಿರುವ ಚಂದ್ರಶೇಖರ್ ಮತ್ತು ದೇವರಾಜ್ ಹೆಸರಿನ ಇಬ್ಬರು ಭಕ್ತರಿದ್ದಾರೆ, ಇವರ ವಿಶೇಷತೆ ಎಂದರೆ ಮಲ್ನಾಡು ಶಿವಮೊಗ್ಗದಿಂದ ಪ್ರಯಾಗ್ರಾಜ್ ವರೆಗೆ ಬೈಕ್ನಲ್ಲಿ ಹೋಗಿದ್ದು! ಕುಂಭಮೇಳಕ್ಕೆ ಬಂದು ತಮ್ಮ ಬದುಕು ಪಾವನವಾಯಿತು, ಸಾರ್ಥಕವಾಯಿತು ಎಂದು ಟಿವಿ9ನೊಂದಿಗೆ ಮಾತಾಡಿರುವ ಎಲ್ಲ ಕನ್ನಡಿಗರು ಹೇಳುತ್ತಾರೆ. ಜೈ ಶ್ರೀರಾಮ್ ಮತ್ತು ಹರ್ ಹರ್ ಮಹಾದೇವ ಘೋಷಣೆಗಳನ್ನೂ ಅವರಿಂದ ಕೇಳಬಹುದು.
- Arun Belly
- Updated on: Feb 26, 2025
- 8:30 pm
Maha Shivratri: ಇಶಾ ಫೌಂಡೇಶನ್ನಲ್ಲಿ ಸದ್ಗುರು ಜೊತೆ ಶಿವರಾತ್ರಿಯಲ್ಲಿ ಅಮಿತ್ ಶಾ ಭಾಗಿ
ಮಹಾ ಶಿವರಾತ್ರಿಯಂದು ಕೊಯಮತ್ತೂರಿನಲ್ಲಿ ಸದ್ಗುರು ಜಗ್ಗಿ ವಾಸುದೇವ್ ಅವರ ಸಮ್ಮುಖದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಶಾ ಫೌಂಡೇಶನ್ನಲ್ಲಿ 'ಧ್ಯಾನಲಿಂಗ'ಕ್ಕೆ ಅರ್ಪಣೆ ಮಾಡಿದ್ದಾರೆ. ಕೊಯಮತ್ತೂರಿನಲ್ಲಿ ಮಹಾ ಶಿವರಾತ್ರಿ ಆಚರಣೆಗಾಗಿ ಸದ್ಗುರು ಜಗ್ಗಿ ವಾಸುದೇವ್ ಸ್ಥಾಪಿಸಿದ ಈಶಾ ಫೌಂಡೇಶನ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿದ್ದಾರೆ. ಇಶಾ ಫೌಂಡೇಶನ್ನಲ್ಲಿ ಮಹಾ ಶಿವರಾತ್ರಿ ಆಚರಣೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಿದ್ದಾರೆ.
- Sushma Chakre
- Updated on: Feb 26, 2025
- 7:54 pm
ತ್ರಿವೇಣಿ ಸಂಗಮದ ಮೇಲೆ ಪ್ರತಿ 20 ನಿಮಿಷಕ್ಕೊಮ್ಮೆ ಹೆಲಿಕಾಪ್ಟರ್ ಯಾಕೆ ಹಾರಾಡುತ್ತದೆ ಗೊತ್ತಾ? ವಿಡಿಯೋ ನೋಡಿ
ಟಿವಿ9 ಪ್ರತಿನಿಧಿ ಸಾಗುತ್ತಿರುವ ದೋಣಿಯಲ್ಲಿ ಬೇರೆ ಭಕ್ತರೂ ಇದ್ದಾರೆ. ಯಾರೋ ಒಬ್ಬರು ಹಿಂದಿಯಲ್ಲಿ; ಅನತಿ ದೂರದಲ್ಲಿ ಕಾಣುವ ಅರೇಲ್ ಘಾಟ್ ಬಗ್ಗೆ ಹೇಳುತ್ತಾರೆ. ಅದೇ ಭಾಗದಲ್ಲಿ ರಾಷ್ಟ್ರಪತಿ, ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ವಿಶ್ವದ ಪ್ರಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಮತ್ತು ಇನ್ನೂ ಹಲವಾರು ಗಣ್ಯರು ಪವಿತ್ರ ಸ್ನಾನ ಮಾಡಿದರಂತೆ. ನಮ್ಮ ಪ್ರತಿನಿಧಿ ಅದನ್ನು ಕನ್ನಡದಲ್ಲಿ ವಿವರಿಸುತ್ತಾರೆ.
- Arun Belly
- Updated on: Feb 26, 2025
- 9:20 pm
ಇಶಾ ಫೌಂಡೇಷನ್ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿರುವುದಕ್ಕೆ ಪಕ್ಷದಲ್ಲೇ ಆಕ್ಷೇಪ: ಡಿಕೆಶಿ ಖಡಕ್ ಪ್ರತಿಕ್ರಿಯೆ
ಈ ಬಾರಿಯ ಶಿವರಾತ್ರಿ ದಿನದಂದು ಇಶಾ ಪೌಂಡೇಶನ್ ನಡೆಸುತ್ತಿರುವ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಆಹ್ವಾನ ನೀಡಲಾಗಿದೆ. ಖುದ್ದು ಜಗ್ಗಿ ವಾಸುದೇವ್ ಅವರೇ ಮನೆಗೆ ಹೋಗಿ ಡಿಕೆ ಶಿವಕುಮಾರ್ ಕುಟುಂಬಕ್ಕೆ ಆಹ್ವಾನ ನೀಡಿದ್ದು, ಅದರಂತೆ ಡಿಕೆಶಿ ಸಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಉತ್ಸುಕರಾಗಿದ್ದಾರೆ. ಆದ್ರೆ, ಇದಕ್ಕೆ ಪಕ್ಷದಲ್ಲಿ ವಿರೋಧಗಳು ವ್ಯಕ್ತವಾಗುತ್ತಿವೆ.
- Ramesh B Jawalagera
- Updated on: Feb 26, 2025
- 7:14 pm