
Mahakumbh 2025
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ 144 ವರ್ಷಗಳ ನಂತರ ಮಹಾಕುಂಭ ಮೇಳೆ ನಡೆಯುತ್ತಿದೆ. ಈ ಬಾರಿ ನಡೆಯುತ್ತಿರುವ ಕುಂಭಮೇಳದಲ್ಲಿ ಸುಮಾರು 45 ಕೋಟಿಗೂ ಅಧಿಕ ಮಂದಿ ಪುಣ್ಯ ಸ್ನಾನ ಮಾಡುವ ನಿರೀಕ್ಷೆ ಇದೆ. 44 ದಿನಗಳ ಕಾಲ ನಡೆಯುವ ಮಹಾ ಕುಂಭಮೇಳ 2025 ಜನವರಿ 13 ರಂದು ಮಕರ ಸಂಕ್ರಾಂತಿಯಿಂದ ಪ್ರಾರಂಭವಾಗಿ ಫೆಬ್ರವರಿ 26 ರಂದು ಮಹಾ ಶಿವರಾತ್ರಿಯಂದು ಮುಕ್ತಾಯಗೊಳ್ಳುತ್ತದೆ.
ಕುಂಭ ಮೇಳದಲ್ಲಿ ನಾಲ್ಕು ವಿಧ
ಮೊದಲನೆಯದು ಕುಂಭಮೇಳ ಇದು ನಾಲ್ಕು ವರ್ಷಗಳಿಗೊಮ್ಮೆ ನಡೆಯುತ್ತದೆ. ಎರಡನೆಯದು ಅರ್ಧಕುಂಭ ಮೇಳ ಇದು 6 ವರ್ಷಗಳಿಗೊಮ್ಮೆ ನಡೆಯುತ್ತದೆ. ಪೂರ್ಣ ಕುಂಭಮೇಳ ಇದು 12 ವರ್ಷಗಳಿಗೊಮ್ಮೆ ನಡೆಯುತ್ತದೆ. ಕೊನೆಯದು ಮಹಾ ಕುಂಭಮೇಳ ಇದು 144 ವರ್ಷಗಳಿಗೊಮ್ಮೆ ನಡೆಯುತ್ತದೆ. ಕುಂಭಮೇಳದ ಮೂಲವು ಹಿಂದೂ ಪುರಾಣಗಳಲ್ಲಿ, ವಿಶೇಷವಾಗಿ ಸಮುದ್ರ ಮಂಥನ ಕಥೆಯಲ್ಲಿದೆ. ದೇವತೆಗಳು ಮತ್ತು ಅಸುರರು ಅಮರತ್ವಕ್ಕಾಗಿ ಅಮೃತವನ್ನು ಪಡೆಯಲು ಹೇಗೆಲ್ಲಾ ಪ್ರಯತ್ನ ಮಾಡಿದ್ದರು. ಎಂಬುದನ್ನು ವಿವರಿಸಲಾಗಿದೆ
ಮಹಾಕುಂಭದಲ್ಲಿ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಪುಣ್ಯ ಸ್ನಾನ
ಪ್ರತಿ 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭವು ಜನವರಿ 13ರಿಂದ ಫೆಬ್ರವರಿ 26ರವರೆಗೆ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿದೆ. ಸಂಪ್ರದಾಯದ ಪ್ರಕಾರ, ಯಾತ್ರಿಕರು ಪವಿತ್ರ ಸ್ನಾನ ಮಾಡಲು ತ್ರಿವೇಣಿ ಸಂಗಮದಲ್ಲಿ ಸೇರುತ್ತಾರೆ. ಇದು ಪಾಪಗಳನ್ನು ಶುದ್ಧೀಕರಿಸುತ್ತದೆ ಮತ್ತು ಮೋಕ್ಷ ನೀಡುತ್ತದೆ ಎಂದು ನಂಬಲಾಗಿದೆ. ಗಂಗಾ ಮಾತೆಗೆ, ಹರ-ಹರ ಗಂಗೆ, ಹರ-ಹರ ಮಹಾದೇವನಿಗೆ ನಮಸ್ಕರಿಸಿ! ಎಂದು ಸಚಿನ್ ಪೈಲಟ್ ಪೋಸ್ಟ್ ಮಾಡಿದ್ದಾರೆ.
- Sushma Chakre
- Updated on: Feb 13, 2025
- 9:13 pm
ಮಹಾಕುಂಭಮೇಳದಲ್ಲಿ ವಿಜಯೇಂದ್ರನೂ ಭಾಗಿ, ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ
ಇವತ್ತು ಬೆಳಗ್ಗೆಯೇ ವಿಜಯೇಂದ್ರ ಅವರ ವಿರೋಧೀ ಬಣದಲ್ಲಿ ಗುರುತಿಸಿಕೊಂಡಿರುವ ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು. ರಾಜ್ಯ ಬಿಜೆಪಿ ಘಟಕದಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಂದ ಬೇಸತ್ತಿರುವ ವಿಜಯೇಂದ್ರಗೆ ಕುಂಭಮೇಳದಲ್ಲಿ ಭಾಗಿಯಾಗಿದ್ದು ಮನಸ್ಸಿಗೆ ನೆಮ್ಮದಿ ನೀಡಿರಬಹುದು. ಆದರೆ ಅವರೊಂದಿಗೆ ಯಾರೆಲ್ಲ ಹೋಗಿದ್ದಾರೆ ಅನ್ನೋದು ಗೊತ್ತಾಗಲಿಲ್ಲ.
- Arun Belly
- Updated on: Feb 13, 2025
- 5:13 pm
ಕುಂಭಮೇಳದಲ್ಲಿ ಚಹಾ ಮಾರಿ ಕೇವಲ ಒಂದು ದಿನದಲ್ಲಿ 5 ಸಾವಿರ ರೂ. ಲಾಭ ಗಳಿಸಿದ ಯುವಕ; ವಿಡಿಯೋ ವೈರಲ್
ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಯುವಕನೊಬ್ಬ ಒಂದು ರೂಪಾಯಿ ಹೂಡಿಕೆಯಿಲ್ಲದೆ ಹಲ್ಲುಜ್ಜುವ ಬೇವಿನ ಕಡ್ಡಿ ಮಾರಾಟ ಮಾಡುವ ಮೂಲಕ ಒಂದು ವಾರದಲ್ಲಿ 40 ಸಾವಿರ ಗಳಿಸಿದಂತಹ ಸುದ್ದಿಯೊಂದು ಸಖತ್ ವೈರಲ್ ಆಗಿತ್ತು. ಇದೀಗ ಅಂತಹದ್ದೇ ಮತ್ತೊಂದು ವಿಡಿಯೋ ವೈರಲ್ ಆಗಿದ್ದು, ಯುವಕನೊಬ್ಬ ಕುಂಭಮೇಳದಲ್ಲಿ ಚಹಾ ಮತ್ತು ನೀರಿನ ಬಾಟಲಿಗಳನ್ನು ಮಾರಾಟ ಮಾಡುವ ಮೂಲಕ ಒಂದೇ ದಿನದಲ್ಲಿ 5 ಸಾವಿರ ರೂ. ಲಾಭ ಗಳಿಸಿದ್ದಾನೆ. ಈತನ ಗಳಿಕೆಯನ್ನು ಕಂಡು ನೆಟ್ಟಿಗರು ಫುಲ್ ಶಾಕ್ ಆಗಿದ್ದಾರೆ.
- Malashree anchan
- Updated on: Feb 13, 2025
- 2:32 pm
ಮಹಾಕುಂಭ; ತ್ರಿವೇಣಿ ಸಂಗಮದಲ್ಲಿ ಕುಟುಂಬದೊಂದಿಗೆ ಮುಖೇಶ್ ಅಂಬಾನಿ ಪವಿತ್ರ ಸ್ನಾನ
ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮುಂತಾದ ಪ್ರಮುಖರು ಸಹ ತ್ರಿವೇಣಿ ಸಂಗಮದಲ್ಲಿ ತೀರ್ಥ ಸ್ನಾನ ಮಾಡಿದ್ದಾರೆ.
- Sushma Chakre
- Updated on: Feb 11, 2025
- 10:21 pm
ಮಹಾಕುಂಭದಲ್ಲಿ ಪಾಲ್ಗೊಂಡ ಅಂಬಾನಿಯ 4 ಪೀಳಿಗೆ; ಪ್ರಯಾಗ್ರಾಜ್ನಲ್ಲಿ ಮುಖೇಶ್ ಅಂಬಾನಿ ಕುಟುಂಬ
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಇಂದು ಭಾರತದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ, ಅವರ ತಾಯಿ ಕೋಕಿಲಾಬೆನ್ ಮತ್ತು ಪುತ್ರರಾದ ಅನಂತ್ ಮತ್ತು ಆಕಾಶ್, ಹಾಗೂ ಮೊಮ್ಮಕ್ಕಳು ಕೂಡ ಆಗಮಿಸಿದ್ದಾರೆ. ಈ ಮೂಲಕ ಅಂಬಾನಿ ಕುಟುಂಬದ 4 ತಲೆಮಾರಿನವರು ಮಹಾಕುಂಭದಲ್ಲಿ ಪವಿತ್ರಸ್ನಾನ ಮಾಡಿದ್ದಾರೆ.
- Sushma Chakre
- Updated on: Feb 11, 2025
- 6:07 pm
Madhya Pradesh: ಮಹಾಕುಂಭದಿಂದ ಹಿಂದಿರುಗುವಾಗ ಅಪಘಾತ, 7 ಮಂದಿ ಸಾವು
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಮಹಾ ಕುಂಭ ಮೇಳದಲ್ಲಿ ಭಾಗವಹಿಸಿ ಹಿಂತಿರುಗುತ್ತಿದ್ದಾಗ, ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯ ಹೆದ್ದಾರಿಯಲ್ಲಿ ಮಂಗಳವಾರ ಟೆಂಪೋ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಏಳು ಜನರು ಸಾವನ್ನಪ್ಪಿದ್ದಾರೆ. ಸಿಹೋರಾದ ರಾಷ್ಟ್ರೀಯ ಹೆದ್ದಾರಿ-30 ರಲ್ಲಿ ಮೊಹ್ಲಾ ಬರ್ಗಿ ಬಳಿ ಈ ಅಪಘಾತ ಸಂಭವಿಸಿದ್ದು, ಸಾವನ್ನಪ್ಪಿದವರು ಆಂಧ್ರಪ್ರದೇಶಕ್ಕೆ ಸೇರಿದವರು. ಅಪಘಾತದ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ.
- Nayana Rajeev
- Updated on: Feb 11, 2025
- 11:32 am
Mahakumbh 2025: ದಟ್ಟಣೆಯಲ್ಲಿ ರೈಲು ಹತ್ತಲು ಸಾಧ್ಯವಾಗದಿದ್ದಕ್ಕೆ ರೈಲು ಧ್ವಂಸಗೊಳಿಸಿದ ಜನ
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಮಹಾಕುಂಭ ಮೇಳ ನಡೆಯುತ್ತಿದ್ದು, ದೇಶದ ವಿವಿಧ ಮೂಲೆಗಳಿಂದ ಇದನ್ನು ಕಣ್ತುಂಬಿಕೊಳ್ಳಲು ಭಕ್ತರು ಹೋಗುತ್ತಿದ್ದಾರೆ. ಪ್ರಯಾಗ್ರಾಜ್ಗೆ ಹೋಗಲು ಭಕ್ತರು ಬಿಹಾರದ ಮಧುಬನಿ ರೈಲ್ವೆ ನಿಲ್ದಾಣಕ್ಕೆ ಬಂದಿದ್ದು, ದಟ್ಟಣೆಯಿಮದಾಗಿ ರೈಲು ಹತ್ತಲು ಸಾಧ್ಯವಾಗದಿದ್ದಿದ್ದಕ್ಕೆ ಜನರು ಎಸಿ ಬೋಗಿಗಳನ್ನು ಧ್ವಂಸಗೊಳಿಸಿರುವ ಘಟನೆ ವರದಿಯಾಗಿದೆ. ವಿಡಿಯೋದಲ್ಲಿ ಪ್ರಯಾಣಿಕರು ರೈಲಿನ ಮೇಲೆ ಕಲ್ಲು ತೂರಾಟ ನಡೆಸಿ, ಕಿಟಕಿಗಳನ್ನು ಒಡೆದು, ಬಲವಂತವಾಗಿ ಬೋಗಿಗಳಿಗೆ ಪ್ರವೇಶಿಸುವುದನ್ನು ಕಾಣಬಹುದು.
- Nayana Rajeev
- Updated on: Feb 11, 2025
- 10:57 am
ಮಹಾಕುಂಭ ಮೇಳದಲ್ಲಿ ಪುಣ್ಯಸ್ನಾನ ಮಾಡಿದ ಮಾಜಿ ಸಚಿವ ಬಿ ಶ್ರೀರಾಮಲು
ಗಾಲಿ ಜನಾರ್ಧನ ರೆಡ್ಡಿ ವಿರುದ್ಧ ನೇರವಾಗಿ ಸಮರ ಸಾರುವ ಮೂಲಕ ಶ್ರೀರಾಮುಲು ಸುದ್ದಿಯಲ್ಲಿದ್ದಾರೆ. ಸೋಜಿಗದ ಸಂಗತಿಯೆಂದರೆ ಅವರು ಬಿಜೆಪಿಯ ರಾಜ್ಯಾಧ್ಯಕ್ಷನಾಗುವ ಇಂಗಿತ ವ್ಯಕ್ತಪಡಿಸಿದ್ದು. ಕೋಲಾರದಲ್ಲಿ ಮಾಧ್ಯಮದವರ ಜೊತೆ ಮಾತಾಡಿದ್ದ ಅವರು ತಾನು ಬಿಎಸ್ ಯಡಿಯೂರಪ್ಪನವರ ಕುಟುಂಬದ ಒಂದು ಭಾಗ ಮತ್ತು ವಿಜಯೇಂದ್ರ ತನಗೆ ತಮ್ಮನಿದ್ದಂತೆ ಎಂದು ಹೇಳಿದ್ದರು.
- Arun Belly
- Updated on: Feb 10, 2025
- 7:21 pm
Mahakumbh Mela: ಪ್ರಯಾಗ್ರಾಜ್ನ ಸಂಗಮ್ ರೈಲು ನಿಲ್ದಾಣವನ್ನು ಮುಚ್ಚಿಲ್ಲ: ಅಶ್ವಿನಿ ವೈಷ್ಣವ್
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಅಪಾರ ಸಂಖ್ಯೆಯ ಭಕ್ತರು ಆಗಮಿಸುತ್ತಿದ್ದಾರೆ. ಭಾರಿ ಜನದಟ್ಟಣೆಯಿಂದಾಗಿ ನಗರದಲ್ಲಿ ಭಾರಿ ಸಂಚಾರ ದಟ್ಟಣೆಯುಂಟಾಗಿದೆ. ಅದೇ ಸಮಯದಲ್ಲಿ ಪ್ರಯಾಗ್ರಾಜ್ ಸಂಗಮ್ ರೈಲು ನಿಲ್ದಾಣವನ್ನು ಮುಚ್ಚಲಾಗಿದೆ ಎಂದು ಕೆಲವರು ಸುಳ್ಳು ಸುದ್ದಿ ಹರುಡುತ್ತಿದ್ದಾರೆ, ಎಂದಿನಂತೆಯೇ ರೈಲು ನಿಲ್ದಾಣ ಕಾರ್ಯ ನಿರ್ವಹಿಸುತ್ತಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
- Nayana Rajeev
- Updated on: Feb 10, 2025
- 1:08 pm
ಮಹಾಕುಂಭ ಮೇಳವು ಎಲ್ಲಾ ಭಕ್ತರನ್ನು ಒಗ್ಗೂಡಿಸುವ ವಿಶಿಷ್ಟ ಸಂಗಮ: ದತ್ತಾತ್ರೇಯ ಹೊಸಬಾಳೆ
ಮಹಾಕುಂಭ ಮೇಳವು ಸನಾತನ ಸಂಸ್ಕೃತಿಯ ಜಾತ್ರೆಯಷ್ಟೇ ಅಲ್ಲ, ಭಕ್ತರ ವಿಶಿಷ್ಟ ಸಂಗಮ ಮತ್ತು ಸಂಕಲ್ಪದ ಮಹಾ ಹಬ್ಬ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘಟ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ. ಸಮಾಜದಲ್ಲಿನ ಒಗ್ಗಟ್ಟಿನ ಶಕ್ತಿ, ಸಂತ ಸಮುದಾಯ ಹಾಗೂ ಸರ್ಕಾರದ ಸಂಘಟಿತ ಪಾತ್ರದಿಂದ ಮಾತ್ರ ಧರ್ಮ ಮತ್ತು ಸಂಸ್ಕೃತಿಯ ರಕ್ಷಣೆ ಸಾಧ್ಯ ಎಂದು ಅವರು ಹೇಳಿದರು. ದತ್ತಾತ್ರೇಯ ಅವರು ಸೋಮವಾರ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ.
- Nayana Rajeev
- Updated on: Feb 10, 2025
- 6:13 pm