
Mahakumbh 2025
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ 144 ವರ್ಷಗಳ ನಂತರ ಮಹಾಕುಂಭ ಮೇಳೆ ನಡೆಯುತ್ತಿದೆ. ಈ ಬಾರಿ ನಡೆಯುತ್ತಿರುವ ಕುಂಭಮೇಳದಲ್ಲಿ ಸುಮಾರು 45 ಕೋಟಿಗೂ ಅಧಿಕ ಮಂದಿ ಪುಣ್ಯ ಸ್ನಾನ ಮಾಡುವ ನಿರೀಕ್ಷೆ ಇದೆ. 44 ದಿನಗಳ ಕಾಲ ನಡೆಯುವ ಮಹಾ ಕುಂಭಮೇಳ 2025 ಜನವರಿ 13 ರಂದು ಮಕರ ಸಂಕ್ರಾಂತಿಯಿಂದ ಪ್ರಾರಂಭವಾಗಿ ಫೆಬ್ರವರಿ 26 ರಂದು ಮಹಾ ಶಿವರಾತ್ರಿಯಂದು ಮುಕ್ತಾಯಗೊಳ್ಳುತ್ತದೆ.
ಕುಂಭ ಮೇಳದಲ್ಲಿ ನಾಲ್ಕು ವಿಧ
ಮೊದಲನೆಯದು ಕುಂಭಮೇಳ ಇದು ನಾಲ್ಕು ವರ್ಷಗಳಿಗೊಮ್ಮೆ ನಡೆಯುತ್ತದೆ. ಎರಡನೆಯದು ಅರ್ಧಕುಂಭ ಮೇಳ ಇದು 6 ವರ್ಷಗಳಿಗೊಮ್ಮೆ ನಡೆಯುತ್ತದೆ. ಪೂರ್ಣ ಕುಂಭಮೇಳ ಇದು 12 ವರ್ಷಗಳಿಗೊಮ್ಮೆ ನಡೆಯುತ್ತದೆ. ಕೊನೆಯದು ಮಹಾ ಕುಂಭಮೇಳ ಇದು 144 ವರ್ಷಗಳಿಗೊಮ್ಮೆ ನಡೆಯುತ್ತದೆ. ಕುಂಭಮೇಳದ ಮೂಲವು ಹಿಂದೂ ಪುರಾಣಗಳಲ್ಲಿ, ವಿಶೇಷವಾಗಿ ಸಮುದ್ರ ಮಂಥನ ಕಥೆಯಲ್ಲಿದೆ. ದೇವತೆಗಳು ಮತ್ತು ಅಸುರರು ಅಮರತ್ವಕ್ಕಾಗಿ ಅಮೃತವನ್ನು ಪಡೆಯಲು ಹೇಗೆಲ್ಲಾ ಪ್ರಯತ್ನ ಮಾಡಿದ್ದರು. ಎಂಬುದನ್ನು ವಿವರಿಸಲಾಗಿದೆ
ಮುಸ್ಲಿಮರು ಹಿಂದೂಗಳಿಂದ ಶಿಸ್ತು ಕಲಿಯಬೇಕು, ರಸ್ತೆ ನಮಾಜ್ಗೆ ಮೀಸಲಾಗಿಲ್ಲ; ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶದ ಮೀರತ್ನಲ್ಲಿ ಪೊಲೀಸರು ಬೀದಿಗಳಲ್ಲಿ ನಮಾಜ್ ಮಾಡದಂತೆ ಎಚ್ಚರಿಕೆ ನೀಡಿದ್ದು, ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್ ಪ್ರಕರಣಗಳ ನೋಂದಣಿ, ಪಾಸ್ಪೋರ್ಟ್ ಮತ್ತು ಪರವಾನಗಿಗಳನ್ನು ರದ್ದುಗೊಳಿಸುವ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. ಈ ಬಗ್ಗೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ತಮ್ಮ ಸಂದರ್ಶನದಲ್ಲಿ ಮಾತನಾಡಿದ್ದಾರೆ. ರಸ್ತೆಗಳು ನಡೆಯಲು ಮೀಸಲಾಗಿವೆಯೇ ವಿನಃ ನಮಾಜ್ಗಾಗಿ ಅಲ್ಲ ಎಂದು ಸಿಎಂ ಹೇಳಿದ್ದಾರೆ.
- Sushma Chakre
- Updated on: Apr 1, 2025
- 9:56 pm
ಮೊನಾಲಿಸಾ ಜತೆ ಸಿನಿಮಾ ಮಾಡುತ್ತಿದ್ದ ನಿರ್ದೇಶಕನ ಮೇಲೆ ರೇಪ್ ಕೇಸ್; ದೆಹಲಿಯಲ್ಲಿ ಬಂಧನ
ಕುಂಭಮೇಳದ ವೈರಲ್ ಆದ ಹುಡುಗಿ ಮೊನಾಲಿಸಾ ಜೊತೆ ನಿರ್ದೇಶಕ ಸನೋಜ್ ಮಿಶ್ರಾ ಅವರು ಸಿನಿಮಾ ಮಾಡುತ್ತಿದ್ದರು. ಆದರೆ ಅವರ ಮೇಲೆ ಗಂಭೀರ ಆರೋಪ ಎದುರಾಗಿದೆ. ಝಾನ್ಸಿ ಮೂಲದ ಯುವತಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂಬ ಆರೋಪದಲ್ಲಿ ಸನೋಜ್ ಮಿಶ್ರಾ ಅವರನ್ನು ದೆಹಲಿಯಲ್ಲಿ ಅರೆಸ್ಟ್ ಮಾಡಲಾಗಿದೆ.
- Madan Kumar
- Updated on: Mar 31, 2025
- 3:34 pm
Video: ಇಡೀ ಜಗತ್ತು ಮಹಾ ಕುಂಭಮೇಳದ ರೂಪದಲ್ಲಿ ಭಾರತದ ಶ್ರೇಷ್ಠ ರೂಪ ನೋಡಿದೆ: ಮೋದಿ
ಪ್ರಯಾಗ್ರಾಜ್ನಲ್ಲಿ ನಡೆದ ಮಹಾಕುಂಭ ಮೇಳದ ಗೆಲುವಿನ ಕುರಿತು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ಇಂದು ಮಾತನಾಡಿದರು. ಇಡೀ ಜಗತ್ತು ಮಹಾ ಕುಂಭಮೇಳದ ರೂಪದಲ್ಲಿ ಭಾರತದ ಶ್ರೇಷ್ಠ ರೂಪವನ್ನು ಕಂಡಿತು. ಮಹಾಕುಂಭದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಒತ್ತಿ ಹೇಳಿದರು. ಪ್ರಯಾಗರಾಜ್ನಲ್ಲಿ ನಡೆದ ಮಹಾಕುಂಭದ ಯಶಸ್ಸಿಗೆ ಕೊಡುಗೆ ನೀಡಿದ ದೇಶದ ಕೋಟ್ಯಂತರ ಜನರಿಗೆ ನಾನು ನಮಸ್ಕರಿಸುತ್ತೇನೆ ಎಂದರು.
- Nayana Rajeev
- Updated on: Mar 18, 2025
- 12:39 pm
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್ಗೆ ಮಹಾಕುಂಭದ ಗಂಗಾಜಲ ನೀಡಿದ ಪ್ರಧಾನಿ ಮೋದಿ
ಅಮೆರಿಕದ ರಾಷ್ಟ್ರೀಯ ಗುಪ್ತಚರ ಇಲಾಖೆ ನಿರ್ದೇಶಕಿ ತುಳಸಿ ಗಬ್ಬಾರ್ಡ್ ಅವರನ್ನು ದೆಹಲಿಯಲ್ಲಿ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ ತುಳಸಿ ಅವರಿಗೆ ಮಹಾಕುಂಭದ ಗಂಗಾಜಲವನ್ನು ನೀಡಿದ್ದಾರೆ. ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಮಹತ್ವದ ಸಂಕೇತವಾಗಿ, ಪ್ರಧಾನಿ ಮೋದಿ ಅವರು ಇತ್ತೀಚೆಗೆ ಮುಕ್ತಾಯಗೊಂಡ ಪ್ರಯಾಗರಾಜ್ ಮಹಾಕುಂಭದ ಗಂಗಾಜಲವನ್ನು ಹೊಂದಿರುವ ಹೂದಾನಿಯನ್ನು ಗಬ್ಬಾರ್ಡ್ ಅವರಿಗೆ ನೀಡಿದರು. ಗಂಗಾನದಿಯ ಪವಿತ್ರ ನೀರು ಭಾರತದಲ್ಲಿ ಬಹಳ ಧಾರ್ಮಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಹೊಂದಿದೆ.
- Sushma Chakre
- Updated on: Mar 17, 2025
- 7:40 pm
ಕುಂಭಮೇಳ ಕಾಲ್ತುಳಿತದಲ್ಲಿ ಮೃತಪಟ್ಟ ಬೆಳಗಾವಿಯವರ ಕುಟುಂಬಕ್ಕೆ ಉತ್ತರ ಪ್ರದೇಶ ಸರ್ಕಾರದಿಂದ ತಲಾ 25 ಲಕ್ಷ ರೂ. ವರ್ಗಾವಣೆ
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆದ ಕುಂಭಮೇಳದ ಕಾಲ್ತುಳಿತದಲ್ಲಿ ಮೃತಪಟ್ಟ ಬೆಳಗಾವಿಯ ನಾಲ್ವರ ಕುಟುಂಬಗಳಿಗೆ ಉತ್ತರ ಪ್ರದೇಶ ಸರ್ಕಾರ ತಲಾ 25 ಲಕ್ಷ ರೂ. ಪರಿಹಾರ ನೀಡಿದೆ. ಆರ್ಟಿಜಿಎಸ್ ಮೂಲಕ ಹಣ ಜಮೆ ಮಾಡಲಾಗಿದೆ. ಘಟನೆ ಸಂಭವಿಸಿದ 40 ದಿನಗಳ ನಂತರ ಪರಿಹಾರದ ಹಣ ವಿತರಣೆಯಾಗಿದೆ. ಕರ್ನಾಟಕ ಸರ್ಕಾರದಿಂದಲೂ ಪರಿಹಾರ ನಿರೀಕ್ಷಿಸಲಾಗಿದೆ.
- Sahadev Mane
- Updated on: Mar 13, 2025
- 8:57 am
ಮಹಾಕುಂಭದಲ್ಲಿ ದಾಖಲೆಯ 12 ಕೋಟಿ ರೂ ಖಾದಿ ಉತ್ಪನ್ನಗಳ ಮಾರಾಟ
Record Khadi sales during Mahakumbh: ಜನವರಿ 14ರಿಂದ ಫೆಬ್ರುವರಿ 27ರವರೆಗೆ ನಡೆದ ಮಹಾಕುಂಭದಲ್ಲಿ ಆಯೋಜಿಸಲಾದ ಖಾದಿ ಪ್ರದರ್ಶನ ಮೇಳದಲ್ಲಿ 12 ಕೋಟಿ ರೂ ಮೊತ್ತದ ಖಾದಿ ಉತ್ಪನ್ನಗಳ ಮಾರಾಟವಾಗಿದೆ. 98 ಖಾದಿ ಮತ್ತು 54 ಗುಡಿ ಕೈಗಾರಿಕೆ ಸ್ಟಾಲ್ಗಳನ್ನು ಮೇಳದಲ್ಲಿ ಸ್ಥಾಪಿಸಲಾಗಿತ್ತು. ಈ ಮೇಳದ ವೇಳೆ, ವಿವಿಧ ರಾಜ್ಯಗಳ ಜೇನು ಸಾಕಾಣಿಕೆದಾರರಿಗೆ ಜೇನು ಪೆಟ್ಟಿಗೆ ಹಾಗು ಪರಿಕರಗಳನ್ನು ಹಂಚಲಾಯಿತು.
- Vijaya Sarathy SN
- Updated on: Mar 9, 2025
- 2:05 pm
Fact Check: ಮಹಾಕುಂಭಮೇಳ ಮುಗಿದ ನಂತರ ಪ್ರಯಾಗರಾಜ್ನ ಗಂಗಾ ನದಿ ದಡದಲ್ಲಿ ಆಮೆಗಳ ದಂಡು?
Mahakumbha Mela Fact Check: ಮಹಾ ಕುಂಭಮೇಳ ಮುಗಿದ ತಕ್ಷಣ, ಪ್ರಯಾಗ್ರಾಜ್ನಲ್ಲಿ ಆಮೆಗಳು ಇದ್ದಕ್ಕಿದ್ದಂತೆ ಕಾಣಿಸಿಕೊಳ್ಳಲು ಪ್ರಾರಂಭಿಸಿದವು ಎಂದು ಅನೇಕರು ಸಾಮಾಜಿಕ ತಾಣಗಳಲ್ಲಿ ವಿಡಿಯೋ ಒಂದನ್ನು ಶೇರ್ ಮಾಡುತ್ತಿದ್ದಾರೆ. ಈ ಸುದ್ದಿಯ ಸತ್ಯಾಸತ್ಯತೆಯನ್ನು ಟಿವಿ9 ಕನ್ನಡ ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ಈ ವಿಡಿಯೋವನ್ನು ವೈರಲ್ ಮಾಡಲಾಗುತ್ತಿದೆ ಎಂದು ಕಂಡುಬಂದಿದೆ.
- Preethi Bhat Gunavante
- Updated on: Mar 5, 2025
- 4:27 pm
ಗಾಂಜಾ ಜೊತೆ ಸಿಕ್ಕಿಬಿದ್ದ ಐಐಟಿ ಬಾಬಾ; ಅದು ಪ್ರಸಾದವೆಂದು ಸಮಜಾಯಿಷಿ!
ಗಾಂಜಾ ಹೊಂದಿದ್ದಕ್ಕಾಗಿ ಐಐಟಿ ಬಾಬಾ ವಿರುದ್ಧ ಪ್ರಕರಣ ದಾಖಲಾಗಿದೆ. ಆತನನ್ನು ಬಂಧಿಸಲಾಗಿದ್ದು, ಬಳಿಕ ಜಾಮೀನಿನ ಮೇಲೆ ಬಿಡಲಾಗಿದೆ. ಆದರೆ, ಅದು ಗಾಂಜಾ ಅಲ್ಲ ಪ್ರಸಾದ ಎಂದು ಅವರು ಸಮಜಾಯಿಷಿ ನೀಡಿದ್ದಾರೆ. ಮಹಾ ಕುಂಭಮೇಳದ ಸಮಯದಲ್ಲಿ ಜನಪ್ರಿಯರಾದ ಐಐಟಿ ಬಾಬಾ ಅಭಯ್ ಸಿಂಗ್ ಅವರನ್ನು ಜೈಪುರದಲ್ಲಿ ಗಾಂಜಾ ಹೊಂದಿದ್ದಲ್ಲಿ ಪತ್ತೆಯಾದ ನಂತರ ಬಂಧಿಸಲಾಗಿತ್ತು.
- Sushma Chakre
- Updated on: Mar 3, 2025
- 9:50 pm
Fact Check: ಮಹಾ ಶಿವರಾತ್ರಿಯ ಹಿಂದಿನ ದಿನ ಮಹಾ ಕುಂಭದಲ್ಲಿ ವಾಯುಪಡೆಯ ಜೆಟ್ಗಳು ತ್ರಿಶೂಲಾಕಾರದಲ್ಲಿ ಹಾರಾಡಿವೆಯೇ?
Maha KumbhMela 2025: ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಒಂದು ವೈರಲ್ ಆಗುತ್ತಿದೆ. ಆಕಾಶದಲ್ಲಿ ಹಾರಾಡುತ್ತಿರುವ ಮೂರು ವಿಮಾನಗಳಿಂದ ತ್ರಿಶೂಲ ರಚನೆಯ ಚಿತ್ರವೊಂದು ಹರಿದಾಡುತ್ತಿದ್ದು, ಇದನ್ನು ಮಹಾ ಕುಂಭಮೇಳದ ಕೊನೆಯಲ್ಲಿ IAF ಹಾರಾಟಕ್ಕೆ ಲಿಂಕ್ ಮಾಡಿ ಹಂಚಿಕೊಳ್ಳಲಾಗುತ್ತಿದೆ. ಈ ಸುದ್ದಿಯ ಸತ್ಯಾಸತ್ಯತೆ ಏನು?, ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
- Preethi Bhat Gunavante
- Updated on: Feb 28, 2025
- 7:39 am
ತೊಂದರೆಯಾಗಿದ್ದರೆ ಕ್ಷಮಿಸಿ; ಮಹಾಕುಂಭದ ಮುಕ್ತಾಯದ ವೇಳೆ ಭಕ್ತರಿಗೆ ಪ್ರಧಾನಿ ಮೋದಿ ಸಂದೇಶ
ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ಸಂಗಮ ಸ್ಥಳವಾದ ತ್ರಿವೇಣಿ ಸಂಗಮದಲ್ಲಿ 66 ಕೋಟಿಗೂ ಹೆಚ್ಚು ಜನರು ಪಾಲ್ಗೊಂಡಿದ್ದಾರೆ. ಇದಾದ 45 ದಿನಗಳ ಈ ಕಾರ್ಯಕ್ರಮದಲ್ಲಿ ದೇಶಾದ್ಯಂತ ಇರುವ ಭಕ್ತರಿಗೆ ಸೇವೆ ಸಲ್ಲಿಸಿದ್ದಕ್ಕಾಗಿ ಕೇಂದ್ರ ಸರ್ಕಾರ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಮತ್ತು ಪ್ರಯಾಗ್ರಾಜ್ ನಿವಾಸಿಗಳ ಪ್ರಯತ್ನಗಳನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಗುಲಾಮಗಿರಿಯ ಮನಸ್ಥಿತಿಯಿಂದ ಹೊರಬಂದ ನಂತರ ಮುಕ್ತವಾಗಿ ಉಸಿರಾಡುತ್ತಿರುವ ರಾಷ್ಟ್ರವನ್ನು ಈ ಬೃಹತ್ ಸಭೆ ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ.
- Sushma Chakre
- Updated on: Feb 27, 2025
- 9:25 pm