AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahesh Babu

Mahesh Babu

ಟಾಲಿವುಡ್​ನ ಸೂಪರ್​ ಸ್ಟಾರ್ ಮಹೇಶ್ ಬಾಬು ಅವರು ಚಿತ್ರರಂಗ ಹಿನ್ನೆಲೆಯಿಂದ ಬಂದವರು. ಅವರ ತಂದೆ ಕೃಷ್ಣ ತೆಲುಗಿನಲ್ಲಿ ಹೀರೋ ಹಾಗೂ ರಾಜಕಾರಣಿ ಆಗಿದ್ದರು. ಅವರು 1975ರ ಆಗಸ್ಟ್ 9ರಂದು ತಮಿಳುನಾಡಿನಲ್ಲಿ ಜನಿಸಿದರು. ಬಾಲ ಕಲಾವಿದನಾಗಿಯೇ ಮಹೇಶ್ ಬಾಬು ಚಿತ್ರರಂಗಕ್ಕೆ ಕಾಲಿಟ್ಟರು. 1999ರಲ್ಲಿ ‘ರಾಜ ಕುಮಾರುಡು’ ಸಿನಿಮಾ ಮೂಲಕ ಅವರು ಹೀರೋ ಆಗಿ ಮಿಂಚಿದರು. ಈ ಚಿತ್ರ ಅವರ ವೃತ್ತಿ ಜೀವನವನ್ನು ಬದಲಿಸಿತು. ‘ಪೋಕಿರಿ’, ‘ಮಹರ್ಷಿ’ ಮೊದಲಾದ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಮಹೇಶ್ ಬಾಬು ಅವರು ನಟಿ ನಮ್ರತಾ ಶಿರೋಡ್ಕರ್ ಅವರನ್ನು 2005ರಲ್ಲಿ ಮದುವೆ ಆದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮಹೇಶ್ ಬಾಬು ಮಗಳು ಸಿತಾರಾ ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ.

ಇನ್ನೂ ಹೆಚ್ಚು ಓದಿ

ಯಶ್ ಚಿತ್ರಕ್ಕೆ ಕೌಂಟರ್ ಕೊಡೋಕೆ ಬಂತು ಮತ್ತೊಂದು ‘ರಾಮಾಯಣ’; ರಾಮನ ಪಾತ್ರದಲ್ಲಿ ಸ್ಟಾರ್ ಹೀರೋ

ರಾಜಮೌಳಿ ಅವರ 'ವಾರಣಾಸಿ' ಸಿನಿಮಾದಲ್ಲಿ ಮಹೇಶ್ ಬಾಬು ರಾಮನ ಪಾತ್ರ ಮಾಡುತ್ತಿರುವುದನ್ನು ಖಚಿತಪಡಿಸಿದ್ದಾರೆ. ಈ ಪಾತ್ರಕ್ಕಾಗಿ 6 ತಿಂಗಳ ಕಠಿಣ ತರಬೇತಿ ಪಡೆದಿದ್ದು, ಕಳರಿಪಯಟ್ಟು ರೀತಿಯ ಭಂಗಿಗಳನ್ನು ಕಲಿತಿದ್ದಾರೆ. ರಣಬೀರ್ ಕಪೂರ್ ಅಭಿನಯದ 'ರಾಮಾಯಣ' ಸಿನಿಮಾ ದೀಪಾವಳಿಗೆ ಬರಲಿದ್ದು, ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಎರಡು ದೊಡ್ಡ 'ರಾಮಾಯಣ' ಆಧರಿತ ಸಿನಿಮಾಗಳು ಪ್ರೇಕ್ಷಕರಲ್ಲಿ ಭಾರಿ ಕುತೂಹಲ ಮೂಡಿಸಿವೆ.

ವೇದಿಕೆ ಮೇಲೆ ರ‍್ಯಾಂಪ್ ವಾಕ್ ಮಾಡಿದ ಮಹೇಶ್ ಬಾಬು ಮಗಳು ಸಿತಾರಾ

ಮಹೇಶ್ ಬಾಬು ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರ ಮಗಳು ಸಿತಾರಾ ಕೂಡ ಸಾಕಷ್ಟು ಫೇಮಸ್ ಆಗಿದ್ದಾರೆ. ಅವರು ವೇದಿಕೆ ಮೇಲೆ ರ‍್ಯಾಂಪ್ ವಾಕ್ ಮಾಡಿದ್ದಾರೆ. ಈ ಸಂದರ್ಭದ ಫೋಟೋ ಗಮನ ಸೆಳೆದಿದೆ. ಶೀಘ್ರವೇ ಅವರು ನಾಯಕಿ ಆಗಿ ಚಿತ್ರರಂಗಕ್ಕೆ ಕಾಲಿಟ್ಟರೂ ಅಚ್ಚರಿ ಏನಿಲ್ಲ ಎಂಬ ಮಾತು ವ್ಯಕ್ತವಾಗಿದೆ.

ಜೂನಿಯರ್ ಮಹೇಶ್ ಬಾಬು ಕಂಡ ಎಗ್ಸೈಟ್​​​ಮೆಂಟ್​​​ನಲ್ಲಿ ಅಭಿಮಾನಿ ಮಾಡಿದ್ದೇನು ನೋಡಿ

ಸ್ಟಾರ್ ನಟರನ್ನು ಭೇಟಿ ಮಾಡುವುದು ಅಭಿಮಾನಿಗಳಿಗೆ ಕಷ್ಟ. ಹೀಗಾಗಿ, ಅವರಂತೆ ಕಾಣುವ ಜೂನಿಯರ್ ಕಲಾವಿದರಿಗೆ ಈಗ ಭಾರಿ ಬೇಡಿಕೆ. ಇತ್ತೀಚೆಗೆ, ಜೂನಿಯರ್ ಮಹೇಶ್ ಬಾಬು ಅವರನ್ನು ನಿಜವಾದ ಸ್ಟಾರ್ ಎಂದೇ ಭಾವಿಸಿ ಅಭಿಮಾನಿಯೊಬ್ಬರು ಅಪ್ಪಿಕೊಂಡ ವಿಡಿಯೋ ವೈರಲ್ ಆಗಿದೆ. ಇದು ಜೂನಿಯರ್ ಕಲಾವಿದರು ಅಭಿಮಾನಿಗಳ ಆಸೆ ಈಡೇರಿಸುವ ಮಹತ್ವವನ್ನು ಎತ್ತಿ ತೋರಿಸುತ್ತದೆ.

ಫೋಟೋ ಗ್ಯಾಲರಿ: ಬೆಂಗಳೂರಲ್ಲಿ ಮಹೇಶ್ ಬಾಬು ಒಡೆತನದ ಮಲ್ಟಿಪ್ಲೆಕ್ಸ್ ಹೇಗಿದೆ ನೋಡಿ..

ಜನವರಿ 16ರಂದು ಮೆಜೆಸ್ಟಿಕ್ ಸರ್ಕಲ್‌ನಲ್ಲಿ ‘ಎಎಂಬಿ ಸಿನಿಮಾಸ್’ (AMB Cinemas) ಉದ್ಘಾಟನೆ ಆಗಲಿದೆ. ಇದು ದಕ್ಷಿಣ ಭಾರತದ ಪ್ರತಿಷ್ಠಿತ ಮಲ್ಟಿಪ್ಲೆಕ್ಸ್ ಆಗಿದೆ. ಈಗಾಗಲೇ ಹೈದರಾಬಾದ್‌ನಲ್ಲಿ ಅತ್ಯುತ್ತಮ ಸಿನಿಮಾ ಅನುಭವಕ್ಕೆ ‘ಎಎಂಬಿ ಸಿನಿಮಾಸ್’ ಹೆಸರಾಗಿದೆ. ಈಗ ಇದರ ಹೊಸ ಶಾಖೆ ಬೆಂಗಳೂರಿನಲ್ಲಿ ಆರಂಭ ಆಗುತ್ತಿದೆ.

ಬೆಂಗಳೂರಲ್ಲಿ ಜನವರಿ 16ಕ್ಕೆ ಎಎಂಬಿ ಸಿನಿಮಾಸ್ ಕಾರ್ಯಾರಂಭ; ವಿಶೇಷತೆ ಏನು?

ಬೆಂಗಳೂರಿನ ಐತಿಹಾಸಿಕ ಚಿತ್ರಮಂದಿರ ಇದ್ದ ಜಾಗದಲ್ಲಿಯೇ ಮಹೇಶ್ ಬಾಬು ತಮ್ಮ ಹೊಸ ಚಿತ್ರಮಂದಿರವನ್ನು ಪ್ರಾರಂಭಿಸುತ್ತಿದ್ದಾರೆ. ಬೆಂಗಳೂರಿನ ಗಾಂಧಿ ನಗರದಲ್ಲಿ ಹಲವು ಚಿತ್ರಮಂದಿರಗಳು ಇದ್ದವು. ಇದರ ಪೈಕಿ ಕಪಾಲಿ ಚಿತ್ರಮಂದಿರ ಕೂಡ ಒಂದಾಗಿತ್ತು. ಇಲ್ಲಿ ಸಾಕಷ್ಟು ಸೂಪರ್ ಹಿಟ್ ಚಿತ್ರಗಳು ಪ್ರದರ್ಶನ ಕಂಡಿದ್ದವು. ಈಗ ಹೊಸ ಚಿತ್ರಮಂದಿರಕ್ಕೆ ‘ಎಎಂಬಿ ಸಿನಿಮಾಸ್ ಕಪಾಲಿ’ ಎಂದೇ ಹೆಸರಿಡಲಾಗಿದೆ.

ಮತ್ತೆ ಮಹೇಶ್ ಬಾಬು ಫಾರಿನ್ ಟ್ರಿಪ್: ಇನ್ನಷ್ಟು ತಡ ಆಗಲಿದೆ ‘ವಾರಾಣಸಿ’ ಶೂಟಿಂಗ್

ಸಿನಿಮಾದ ಕೆಲಸಗಳಲ್ಲಿ ಮಹೇಶ್ ಬಾಬು ಎಷ್ಟೇ ಬ್ಯುಸಿ ಆಗಿದ್ದರೂ ಫ್ಯಾಮಿಲಿಗೆ ಸಮಯ ಕೊಡುವುದನ್ನು ತಪ್ಪಿಸಲ್ಲ. ಈಗ ಅವರು ‘ವಾರಾಣಸಿ’ ಸಿನಿಮಾಗೆ ಮೊದಲ ಹಂತದ ಶೂಟಿಂಗ್ ಮುಗಿಸಿ ಫಾರಿನ್ ಟ್ರಿಪ್ ತೆರಳಿದ್ದಾರೆ. ಮಹೇಶ್ ಬಾಬು ಅವರು ವಿದೇಶದಿಂದ ವಾಪಸ್ ಬಂದ ನಂತರವೇ ಮುಂದಿನ ಹಂತದ ಶೂಟಿಂಗ್ ಆರಂಭ ಆಗಲಿದೆ.

ನಿಂಗಿದೆ ಮಾರಿಹಬ್ಬ; ಮಹೇಶ್ ಬಾಬುಗೆ ಮೊದಲೇ ಎಚ್ಚರಿಸಿದ್ದ ಜೂ.ಎನ್​ಟಿಆರ್

ರಾಜಮೌಳಿ ಅವರ ಪರಿಪೂರ್ಣತೆಯ ಬಗ್ಗೆ ಜೂನಿಯರ್ ಎನ್​ಟಿಆರ್ ಮಹೇಶ್ ಬಾಬು ಅವರಿಗೆ ಎಚ್ಚರಿಕೆ ನೀಡಿದ್ದಾರೆ. 'RRR' ಸಮಯದಲ್ಲಿ ಅನುಭವಿಸಿದ ಸವಾಲುಗಳನ್ನು ನೆನಪಿಸಿಕೊಂಡ NTR, ರಾಜಮೌಳಿ ಜೊತೆ ಕೆಲಸ ಮಾಡುವುದು ಸುಲಭವಲ್ಲ ಎಂದು ಹೇಳಿದ್ದರು. 'ವಾರಣಾಸಿ' ಸಿನಿಮಾದಲ್ಲಿ ಮಹೇಶ್ ಬಾಬು ಇದೇ ಸವಾಲುಗಳನ್ನು ಎದುರಿಸುವ ನಿರೀಕ್ಷೆಯಿದೆ.

ಮಹೇಶ್ ಬಾಬು vs ಪ್ರಿಯಾಂಕಾ ಚೋಪ್ರಾ; ಇಬ್ಬರಲ್ಲಿ ಯಾರು ಹೆಚ್ಚು ಶ್ರೀಮಂತರು?

‘ಬಾಹುಬಲಿ' ಮತ್ತು ‘ಆರ್‌ಆರ್‌ಆರ್' ನಂತಹ ಬ್ಲಾಕ್‌ಬಸ್ಟರ್ ಚಿತ್ರಗಳ ನಂತರ, ಈಗ ಎಸ್‌ಎಸ್ ರಾಜಮೌಳಿ ‘ವಾರಣಾಸಿ' ಎಂಬ ಹೊಸ ಚಿತ್ರದೊಂದಿಗೆ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಈ ಚಿತ್ರದಲ್ಲಿ ಮಹೇಶ್ ಬಾಬು ಮತ್ತು ಪ್ರಿಯಾಂಕಾ ಚೋಪ್ರಾ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಇಬ್ಬರು ತಾರೆಯರ ಒಟ್ಟು ಸಂಪತ್ತನ್ನು ಈ ಲೇಖನದಲ್ಲಿ ಹೋಲಿಸಲಾಗಿದೆ.

Varanasi: ಡ್ರೋನ್ ಹಾರಿಸಿ ರಾಜಮೌಳಿ ಕೆಲಸ ಕೆಡಿಸಲು ಪ್ರಯತ್ನಿಸಿದ ಕಿಡಿಗೇಡಿಗಳು

ಮಹೇಶ್ ಬಾಬು ಮತ್ತು ರಾಜಮೌಳಿ ಕಾಂಬಿನೇಷನ್​​ನಲ್ಲಿ ಬರುತ್ತಿರುವ ‘ವಾರಾಣಸಿ’ ಸಿನಿಮಾದ ಟೈಟಲ್ ಟೀಸರ್ ಬಿಡುಗಡೆ ಆಗಿದೆ. ಹೈದರಾಬಾದ್​​ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ದೊಡ್ಡ ಕಾರ್ಯಕ್ರಮ ಮಾಡಲಾಗಿದೆ. ಅಲ್ಲಿ ಕೆಲವರು ಡ್ರೋನ್ ತಂದು ಹಾರಿಸಿದ್ದಾರೆ. ಇದರಿಂದಾಗಿ ದೊಡ್ಡ ಪರದೆಯಲ್ಲಿ ಟೈಟಲ್ ಟೀಸರ್ ಪ್ಲೇ ಮಾಡುವುದು ತಡವಾಯಿತು. ಈ ಬಗ್ಗೆ ರಾಜಮೌಳಿ ಮಾತನಾಡಿದರು.

ಮಹೇಶ್ ಬಾಬು ಜೊತೆ ನಟಿಸಲು ಐಶ್ವರ್ಯಾಗೆ ಆಫರ್ ನೀಡಿದ್ದ ರಾಜಮೌಳಿ; ನಂತರ ಏನಾಯ್ತು?

ಮಹೇಶ್ ಬಾಬು-ರಾಜಮೌಳಿ ಅವರ 'ಗ್ಲೋಬ್‌ಟ್ರಾಟರ್' ಚಿತ್ರದ ನಾಯಕಿ ಪಾತ್ರಕ್ಕೆ ಮೊದಲು ಐಶ್ವರ್ಯಾ ರೈ ಅವರಿಗೆ ಆಫರ್ ನೀಡಲಾಗಿತ್ತು. ಅವರು ನಿರಾಕರಿಸಿದ ಬಳಿಕ ಕಾಜಲ್ ಅಗರ್ವಾಲ್ ಅವರನ್ನು ಪರಿಗಣಿಸಲಾಯಿತು. ಅಂತಿಮವಾಗಿ, ಪ್ರಿಯಾಂಕಾ ಚೋಪ್ರಾ ಮಂದಾಕಿನಿ ಪಾತ್ರಕ್ಕೆ ಆಯ್ಕೆಯಾದರು. ಅವರ ಫಸ್ಟ್ ಲುಕ್ ಭಾರಿ ಪ್ರತಿಕ್ರಿಯೆ ಪಡೆದಿದೆ.

ರಾಜಮೌಳಿ ಸಿನಿಮಾದಲ್ಲಿ ಮಂದಾಕಿನಿ ಆದ ಪ್ರಿಯಾಂಕಾ ಚೋಪ್ರಾ

‘ಎಸ್​ಎಸ್​ಎಂಬಿ 29’ ಸಿನಿಮಾದಿಂದ ಪ್ರಿಯಾಂಕಾ ಚೋಪ್ರಾ ಅವರ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಪೋಸ್ಟರ್ ವೈರಲ್ ಆಗಿದೆ. ಮಂದಾಕಿನಿ ಎಂಬ ಪಾತ್ರವನ್ನು ಅವರು ಮಾಡುತ್ತಿದ್ದಾರೆ. ಎಸ್​ಎಸ್​ ರಾಜಮೌಳಿ ಅವರು ನಿರ್ದೇಶಿಸುತ್ತಿರುವ ಈ ಬಹುನಿರೀಕ್ಷಿತ ಸಿನಿಮಾ ಬಹಳ ಅದ್ದೂರಿಯಾಗಿ ಮೂಡಿಬರುತ್ತಿದೆ.

ಸಿನಿಮಾ ಸೀಕ್ರೆಟ್ ಬಯಲು ಮಾಡಿದ್ದಕ್ಕೆ ಮಹೇಶ್ ಬಾಬುಗೆ ದಂಡ ಹಾಕಿದ ರಾಜಮೌಳಿ

‘ಎಸ್​ಎಸ್​ಎಂಬಿ 29’ ಸಿನಿಮಾದಿಂದ ಹೊಸ ಅಪ್​ಡೇಟ್ ನೀಡಲು ರಾಜಮೌಳಿ ಅವರು ಸಿದ್ಧತೆ ಮಾಡಿಕೊಂಡಿದ್ದಾರೆ. ಅದಕ್ಕೂ ಮುನ್ನ ಚಿತ್ರತಂಡದ ಸದಸ್ಯರು ಸೋಶಿಯಲ್ ಮೀಡಿಯಾದಲ್ಲಿ ತಮಾಷೆಯ ಸಂಭಾಷಣೆ ನಡೆಸಿದ್ದಾರೆ. ಅತಿಯಾಗಿ ವ್ಯಂಗ್ಯ ಮಾಡಿದ ಮಹೇಶ್ ಬಾಬು ಅವರಿಗೆ ನಿರ್ದೇಶಕ ರಾಜಮೌಳಿ ದಂಡ ಹಾಕಲು ನಿರ್ಧರಿಸಿದ್ದಾರೆ.

ಪ್ರೇಯಸಿಯ ಜೊತೆ ಶಾಪಿಂಗ್ ಮಾಡುವಾಗ ಮಕ್ಕಳ ಜೊತೆ ಅದೇ ಮಾಲ್​ಗೆ ಬಂದ ಹೆಂಡತಿ
ಪ್ರೇಯಸಿಯ ಜೊತೆ ಶಾಪಿಂಗ್ ಮಾಡುವಾಗ ಮಕ್ಕಳ ಜೊತೆ ಅದೇ ಮಾಲ್​ಗೆ ಬಂದ ಹೆಂಡತಿ
ಹೈಕಮಾಂಡ್ ಜತೆ ಯಾವುದರ ಬಗ್ಗೆ ಸಭೆ ಮಾಡಿದ್ದು? ಡಿಕೆಶಿ ಹೇಳಿದ್ದಿಷ್ಟು
ಹೈಕಮಾಂಡ್ ಜತೆ ಯಾವುದರ ಬಗ್ಗೆ ಸಭೆ ಮಾಡಿದ್ದು? ಡಿಕೆಶಿ ಹೇಳಿದ್ದಿಷ್ಟು
ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ
ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು