
Mahesh Babu
ಟಾಲಿವುಡ್ನ ಸೂಪರ್ ಸ್ಟಾರ್ ಮಹೇಶ್ ಬಾಬು ಅವರು ಚಿತ್ರರಂಗ ಹಿನ್ನೆಲೆಯಿಂದ ಬಂದವರು. ಅವರ ತಂದೆ ಕೃಷ್ಣ ತೆಲುಗಿನಲ್ಲಿ ಹೀರೋ ಹಾಗೂ ರಾಜಕಾರಣಿ ಆಗಿದ್ದರು. ಅವರು 1975ರ ಆಗಸ್ಟ್ 9ರಂದು ತಮಿಳುನಾಡಿನಲ್ಲಿ ಜನಿಸಿದರು. ಬಾಲ ಕಲಾವಿದನಾಗಿಯೇ ಮಹೇಶ್ ಬಾಬು ಚಿತ್ರರಂಗಕ್ಕೆ ಕಾಲಿಟ್ಟರು. 1999ರಲ್ಲಿ ‘ರಾಜ ಕುಮಾರುಡು’ ಸಿನಿಮಾ ಮೂಲಕ ಅವರು ಹೀರೋ ಆಗಿ ಮಿಂಚಿದರು. ಈ ಚಿತ್ರ ಅವರ ವೃತ್ತಿ ಜೀವನವನ್ನು ಬದಲಿಸಿತು. ‘ಪೋಕಿರಿ’, ‘ಮಹರ್ಷಿ’ ಮೊದಲಾದ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಮಹೇಶ್ ಬಾಬು ಅವರು ನಟಿ ನಮ್ರತಾ ಶಿರೋಡ್ಕರ್ ಅವರನ್ನು 2005ರಲ್ಲಿ ಮದುವೆ ಆದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮಹೇಶ್ ಬಾಬು ಮಗಳು ಸಿತಾರಾ ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ.
ಮಹೇಶ್ ಬಾಬು ಪುತ್ರ ಗೌತಮ್ ಘಟ್ಟಮನೇನಿ ನಟಿಸಿದ ಮೊದಲ ವಿಡಿಯೋ ವೈರಲ್
ಯುವತಿಯ ಜೊತೆ ಗೌತಮ್ ಘಟ್ಟಮನೇನಿ ಕುಳಿತು ಮಾತನಾಡುತ್ತಿರುವ ದೃಶ್ಯ ಈ ವೈರಲ್ ವಿಡಿಯೋದಲ್ಲಿದೆ. ಗೌತಮ್ ನಟನೆ ಕಂಡು ಜನರು ಹಲವು ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ಮಹೇಶ್ ಬಾಬು ಮಗನ ಅಭಿನಯಕ್ಕೆ ಟೀಕೆ ಸಹ ವ್ಯಕ್ತವಾಗಿದೆ. ಆದರೆ ಅಪ್ಪಟ ಅಭಿಮಾನಿಗಳು ಭರಪೂರ ಹೊಗಳುತ್ತಿದ್ದಾರೆ.
- Madan Kumar
- Updated on: Mar 21, 2025
- 2:26 pm
ಒಡಿಶಾಗೆ ಹೋಗಿ ತಪ್ಪು ಮಾಡಿದ್ರಾ ರಾಜಮೌಳಿ? ಶೂಟಿಂಗ್ ಸೆಟ್ ಫೋಟೋ ಲೀಕ್
ಎಸ್ಎಸ್ ರಾಜಮೌಳಿ, ಮಹೇಶ್ ಬಾಬು, ಪ್ರಿಯಾಂಕಾ ಚೋಪ್ರಾ, ಪೃಥ್ವಿರಾಜ್ ಸುಕುಮಾರನ್ ಮುಂತಾದವರು ಒಡಿಶಾದಲ್ಲಿದ್ದಾರೆ. ‘SSMB 29’ ಸಿನಿಮಾದ ಚಿತ್ರೀಕರಣವನ್ನು ಅಲ್ಲಿ ಮಾಡಲಾಗುತ್ತಿದೆ. ಆದರೆ ಶೂಟಿಂಗ್ ಸೆಟ್ ಫೋಟೋ ಲೀಕ್ ಆಗಿದೆ. ಒಡಿಶಾ ಸುದ್ದಿವಾಹಿನಿಗಳು ಫೋಟೋ ಲೀಕ್ ಮಾಡಿವೆ. ಆ ಬಗ್ಗೆ ಇಲ್ಲಿದೆ ಮಾಹಿತಿ..
- Madan Kumar
- Updated on: Mar 7, 2025
- 9:28 pm
ಮಹೇಶ್ ಬಾಬು-ರಾಜಮೌಳಿ ಸಿನಿಮಾ ತಂಡಕ್ಕೆ ಮಲಯಾಳಂ ನಟ ಪೃಥ್ವಿರಾಜ್ ಎಂಟ್ರಿ
ಪ್ಯಾನ್ ಇಂಡಿಯಾ ಮಟ್ಟದಲ್ಲಿ ಖ್ಯಾತಿ ಹೊಂದಿರುವ ನಟ ಪೃಥ್ವಿರಾಜ್ ಸುಕುಮಾರನ್ ಅವರು ‘SSMB 29’ ಚಿತ್ರತಂಡಕ್ಕೆ ಸೇರ್ಪಡೆ ಆಗಿದ್ದಾರೆ. ಚಿತ್ರತಂಡದಿಂದ ಅಧಿಕೃತ ಮಾಹಿತಿ ಹೊರಬೀಳದಿದ್ದರೂ ಕೂಡ ಅಭಿಮಾನಿಗಳಿಗೆ ವಿಷಯ ಗೊತ್ತಾಗಿದೆ. ಮಹೇಶ್ ಬಾಬು ನಟನೆಯ ಈ ಸಿನಿಮಾಗೆ ಪ್ರಿಯಾಂಕಾ ಚೋಪ್ರಾ ನಾಯಕಿ ಆಗಿದ್ದಾರೆ.
- Madan Kumar
- Updated on: Mar 6, 2025
- 3:44 pm
ಪ್ರಮುಖ ದೃಶ್ಯ ಶೂಟ್ ಮಾಡಲು ಒಡಿಶಾಗೆ ಹಾರಿದ ಮಹೇಶ್ ಬಾಬು-ಪ್ರಿಯಾಂಕಾ ಚೋಪ್ರಾ
ಮಹೇಶ್ ಬಾಬು ಮತ್ತು ಪ್ರಿಯಾಂಕಾ ಚೋಪ್ರಾ ಅವರು ರಾಜಮೌಳಿ ನಿರ್ದೇಶನದ 'SSMB29' ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಹೈದರಾಬಾದ್ ನಂತರ ಚಿತ್ರತಂಡ ಒಡಿಶಾಕ್ಕೆ ತೆರಳಿದೆ. ಅಲ್ಲಿ 12 ದಿನಗಳ ಚಿತ್ರೀಕರಣ ನಡೆಯಲಿದೆ. ಏಪ್ರಿಲ್ನಲ್ಲಿ ಚಿತ್ರದ ಅಧಿಕೃತ ಘೋಷಣೆ ಮತ್ತು ಟೀಸರ್ ಬಿಡುಗಡೆ ನಿರೀಕ್ಷಿಸಲಾಗಿದೆ .
- Rajesh Duggumane
- Updated on: Mar 6, 2025
- 10:34 am
ಮಹೇಶ್ ಬಾಬು-ರಾಜಮೌಳಿ ಬಗ್ಗೆ ಅಪ್ಸೆಟ್ ಆದ ಅಭಿಮಾನಿಗಳು; ಕಾರಣ ಏನು?
ಮಹೇಶ್ ಬಾಬು ಮತ್ತು ಎಸ್.ಎಸ್. ರಾಜಮೌಳಿ ಅವರ ಮುಂಬರುವ ಚಲನಚಿತ್ರ ‘SSMB29’ ಕುರಿತು ಅಭಿಮಾನಿಗಳಲ್ಲಿ ಬಹಳ ನಿರೀಕ್ಷೆ ಇದೆ. ಚಿತ್ರದ ಶೂಟಿಂಗ್ ಪ್ರಾರಂಭವಾಗಿದ್ದರೂ, ಅಧಿಕೃತ ಮಾಹಿತಿಯ ಕೊರತೆಯಿಂದ ಅಭಿಮಾನಿಗಳು ನಿರಾಶರಾಗಿದ್ದಾರೆ. ಚಿತ್ರದ ಬಜೆಟ್ 1000 ಕೋಟಿ ರೂಪಾಯಿಗಳನ್ನು ಮೀರಲಿದೆ ಎಂದು ವರದಿಯಾಗಿದೆ. 2027ರಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.
- Shreelaxmi H
- Updated on: Feb 24, 2025
- 10:55 am
ಆಫರ್ ಸಿಗದೇ ಬಾಲಿವುಡ್ ತೊರೆದಿದ್ದ ಪ್ರಿಯಾಂಕಾ ಚೋಪ್ರಾ? ಇದರಲ್ಲಿ ಸತ್ಯ ಎಷ್ಟು?
ಪ್ರಿಯಾಂಕಾ ಚೋಪ್ರಾ ಅವರು ಬಾಲಿವುಡ್ನ ರಾಜಕೀಯದಿಂದ ಅಸಮಾಧಾನಗೊಂಡು ಉದ್ಯಮದಿಂದ ಹೊರಬಂದಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಶೆರ್ಲಿನ್ ಚೋಪ್ರಾ ಪ್ರತಿಕ್ರಿಯಿಸಿದ್ದು, ಪ್ರಿಯಾಂಕಾ ಅವರ ಯಶಸ್ಸಿಗೆ ಬಾಲಿವುಡ್ನ ಪಾತ್ರವನ್ನು ಎತ್ತಿ ತೋರಿಸಿದ್ದರು. ಇತ್ತೀಚೆಗೆ 'ಸಿಟಾಡೆಲ್' ಸರಣಿಯಲ್ಲಿ ಕಾಣಿಸಿಕೊಂಡ ಪ್ರಿಯಾಂಕಾ, ಈಗ ಮಹೇಶ್ ಬಾಬು ಜೊತೆ ಹೊಸ ಚಿತ್ರದಲ್ಲಿ ನಟಿಸುತ್ತಿದ್ದಾರೆ.
- Shreelaxmi H
- Updated on: Feb 11, 2025
- 7:49 am
ಮಹೇಶ್ ಬಾಬು ಜೊತೆಗಿನ ಸಿನಿಮಾಗೆ 30 ಕೋಟಿ ರೂ. ಸಂಭಾವನೆ ಪಡೆದ ಪ್ರಿಯಾಂಕಾ ಚೋಪ್ರಾ?
ಬಾಲಿವುಡ್ ಮತ್ತು ಹಾಲಿವುಡ್ನಲ್ಲಿ ಗುರುತಿಸಿಕೊಂಡಿರುವ ನಟಿ ಪ್ರಿಯಾಂಕಾ ಚೋಪ್ರಾ ಅವರಿಗೆ ತುಂಬ ಬೇಡಿಕೆ ಇದೆ. ರಾಜಮೌಳಿ ನಿರ್ದೇಶನದ ಹೊಸ ಸಿನಿಮಾ ಅವರೇ ನಾಯಕಿ ಎಂದು ಹೇಳಲಾಗುತ್ತಿದೆ. ಈ ಸಿನಿಮಾಗಾಗಿ ಅವರು ದೊಡ್ಡ ಸಂಭಾವನೆ ಪಡೆಯುತ್ತಿದ್ದಾರೆ. ಮಹೇಶ್ ಬಾಬುಗೆ ಜೋಡಿಯಾಗಿ ಪ್ರಿಯಾಂಕಾ ಚೋಪ್ರಾ ನಟಿಸುತ್ತಾರೆ ಎನ್ನಲಾಗಿದೆ.
- Madan Kumar
- Updated on: Jan 31, 2025
- 9:28 pm
ಸೆಟ್ನಲ್ಲೇ ಮೂಡಿತು ಪ್ರೀತಿ; ನಾಲ್ಕು ವರ್ಷ ಪ್ರೀತಿ ವಿಚಾರ ಮುಚ್ಚಿಟ್ಟಿದ್ದ ನಮ್ರತಾ-ಮಹೇಶ್ ಬಾಬು
ನಮ್ರತಾ ಶಿರೋಡ್ಕರ್ ಅವರ ಜನ್ಮದಿನದಂದು, ಅವರ ಮತ್ತು ಮಹೇಶ್ ಬಾಬು ಅವರ ಪ್ರೇಮಕಥೆಯನ್ನು ನೆನಪಿಸಿಕೊಳ್ಳೋಣ. 'ವಂಶಿ' ಚಿತ್ರದ ಸೆಟ್ನಲ್ಲಿ ಆರಂಭವಾದ ಅವರ ಪ್ರೇಮ, 2005ರಲ್ಲಿ ವಿವಾಹದಲ್ಲಿ ಕುಟುಂಬವಾಗಿ ಬೆಳೆಯಿತು. ನಮ್ರತಾ ತಮ್ಮ ಅಭಿನಯ ವೃತ್ತಿಯನ್ನು ಬಿಟ್ಟು, ಕುಟುಂಬಕ್ಕೆ ಆದ್ಯತೆ ನೀಡಿದರು .
- Shreelaxmi H
- Updated on: Jan 22, 2025
- 8:05 am
ಎರಡು ಭಾಗದಲ್ಲಿ ಬರಲಿದೆ ಮಹೇಶ್ಬಾಬು-ರಾಜಮೌಳಿ ಸಿನಿಮಾ; ಅಭಿಮಾನಿಗಳಿಗೆ ಬೇಸರ
ಮಹೇಶ್ ಬಾಬು ಮತ್ತು ರಾಜಮೌಳಿ ಅವರ ‘SSMB29’ಚಿತ್ರವು ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದೆ. ಬಾಹುಬಲಿ ಯಶಸ್ಸಿನ ನಂತರ ಹಲವು ಚಿತ್ರಗಳು ಎರಡು ಭಾಗಗಳಲ್ಲಿ ನಿರ್ಮಾಣವಾಗುತ್ತಿವೆ. ಆದರೆ, ಎರಡು ಭಾಗಗಳಲ್ಲಿ ಸಿನಿಮಾಗಳು ರಿಲೀಸ್ ಆಗುತ್ತಿರುವ ಬಗ್ಗೆ ಅಭಿಮಾನಿಗಳಲ್ಲಿ ಮಿಶ್ರ ಪ್ರತಿಕ್ರಿಯೆ ಇದೆ.
- Rajesh Duggumane
- Updated on: Dec 10, 2024
- 2:19 pm
ಮಹೇಶ್ ಬಾಬುಗೆ ತೆಲುಗು ಬರೆಯೋಕೆ, ಓದೋಕೆ ಬರಲ್ಲ ಅನ್ನೋದು ಗೊತ್ತಾ?
ಮಹೇಶ್ ಬಾಬು ಅವರೇ ಹೇಳಿಕೊಂಡಿರುವ ಪ್ರಕಾರ ಅವರು ಹುಟ್ಟಿ ಬೆಳೆದಿದ್ದು ಚೆನ್ನೈನಲ್ಲಿ. ಅಲ್ಲಿಯೇ ಅವರು ವಿದ್ಯಾಭ್ಯಾಸ ಮಾಡಿದರು. ಹೀಗಾಗಿ, ತೆಲುಗು ಸ್ಕ್ರಿಪ್ಟ್ ಓದಲು ಅವರಿಗೆ ಸಾಧ್ಯವಾಗುವುದಿಲ್ಲ. ಈ ಭಾಷೆಯನ್ನು ಚೆನ್ನೈನಲ್ಲಿ ಕಲಿಯಲು ಅವರಿಗೆ ಅವಕಾಶ ಸಿಗಲೇ ಇಲ್ಲ.
- Shreelaxmi H
- Updated on: Dec 2, 2024
- 8:03 am