AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahesh Babu

Mahesh Babu

ಟಾಲಿವುಡ್​ನ ಸೂಪರ್​ ಸ್ಟಾರ್ ಮಹೇಶ್ ಬಾಬು ಅವರು ಚಿತ್ರರಂಗ ಹಿನ್ನೆಲೆಯಿಂದ ಬಂದವರು. ಅವರ ತಂದೆ ಕೃಷ್ಣ ತೆಲುಗಿನಲ್ಲಿ ಹೀರೋ ಹಾಗೂ ರಾಜಕಾರಣಿ ಆಗಿದ್ದರು. ಅವರು 1975ರ ಆಗಸ್ಟ್ 9ರಂದು ತಮಿಳುನಾಡಿನಲ್ಲಿ ಜನಿಸಿದರು. ಬಾಲ ಕಲಾವಿದನಾಗಿಯೇ ಮಹೇಶ್ ಬಾಬು ಚಿತ್ರರಂಗಕ್ಕೆ ಕಾಲಿಟ್ಟರು. 1999ರಲ್ಲಿ ‘ರಾಜ ಕುಮಾರುಡು’ ಸಿನಿಮಾ ಮೂಲಕ ಅವರು ಹೀರೋ ಆಗಿ ಮಿಂಚಿದರು. ಈ ಚಿತ್ರ ಅವರ ವೃತ್ತಿ ಜೀವನವನ್ನು ಬದಲಿಸಿತು. ‘ಪೋಕಿರಿ’, ‘ಮಹರ್ಷಿ’ ಮೊದಲಾದ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಮಹೇಶ್ ಬಾಬು ಅವರು ನಟಿ ನಮ್ರತಾ ಶಿರೋಡ್ಕರ್ ಅವರನ್ನು 2005ರಲ್ಲಿ ಮದುವೆ ಆದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮಹೇಶ್ ಬಾಬು ಮಗಳು ಸಿತಾರಾ ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ.

ಇನ್ನೂ ಹೆಚ್ಚು ಓದಿ

ಮತ್ತೆ ಮಹೇಶ್ ಬಾಬು ಫಾರಿನ್ ಟ್ರಿಪ್: ಇನ್ನಷ್ಟು ತಡ ಆಗಲಿದೆ ‘ವಾರಾಣಸಿ’ ಶೂಟಿಂಗ್

ಸಿನಿಮಾದ ಕೆಲಸಗಳಲ್ಲಿ ಮಹೇಶ್ ಬಾಬು ಎಷ್ಟೇ ಬ್ಯುಸಿ ಆಗಿದ್ದರೂ ಫ್ಯಾಮಿಲಿಗೆ ಸಮಯ ಕೊಡುವುದನ್ನು ತಪ್ಪಿಸಲ್ಲ. ಈಗ ಅವರು ‘ವಾರಾಣಸಿ’ ಸಿನಿಮಾಗೆ ಮೊದಲ ಹಂತದ ಶೂಟಿಂಗ್ ಮುಗಿಸಿ ಫಾರಿನ್ ಟ್ರಿಪ್ ತೆರಳಿದ್ದಾರೆ. ಮಹೇಶ್ ಬಾಬು ಅವರು ವಿದೇಶದಿಂದ ವಾಪಸ್ ಬಂದ ನಂತರವೇ ಮುಂದಿನ ಹಂತದ ಶೂಟಿಂಗ್ ಆರಂಭ ಆಗಲಿದೆ.

ನಿಂಗಿದೆ ಮಾರಿಹಬ್ಬ; ಮಹೇಶ್ ಬಾಬುಗೆ ಮೊದಲೇ ಎಚ್ಚರಿಸಿದ್ದ ಜೂ.ಎನ್​ಟಿಆರ್

ರಾಜಮೌಳಿ ಅವರ ಪರಿಪೂರ್ಣತೆಯ ಬಗ್ಗೆ ಜೂನಿಯರ್ ಎನ್​ಟಿಆರ್ ಮಹೇಶ್ ಬಾಬು ಅವರಿಗೆ ಎಚ್ಚರಿಕೆ ನೀಡಿದ್ದಾರೆ. 'RRR' ಸಮಯದಲ್ಲಿ ಅನುಭವಿಸಿದ ಸವಾಲುಗಳನ್ನು ನೆನಪಿಸಿಕೊಂಡ NTR, ರಾಜಮೌಳಿ ಜೊತೆ ಕೆಲಸ ಮಾಡುವುದು ಸುಲಭವಲ್ಲ ಎಂದು ಹೇಳಿದ್ದರು. 'ವಾರಣಾಸಿ' ಸಿನಿಮಾದಲ್ಲಿ ಮಹೇಶ್ ಬಾಬು ಇದೇ ಸವಾಲುಗಳನ್ನು ಎದುರಿಸುವ ನಿರೀಕ್ಷೆಯಿದೆ.

ಮಹೇಶ್ ಬಾಬು vs ಪ್ರಿಯಾಂಕಾ ಚೋಪ್ರಾ; ಇಬ್ಬರಲ್ಲಿ ಯಾರು ಹೆಚ್ಚು ಶ್ರೀಮಂತರು?

‘ಬಾಹುಬಲಿ' ಮತ್ತು ‘ಆರ್‌ಆರ್‌ಆರ್' ನಂತಹ ಬ್ಲಾಕ್‌ಬಸ್ಟರ್ ಚಿತ್ರಗಳ ನಂತರ, ಈಗ ಎಸ್‌ಎಸ್ ರಾಜಮೌಳಿ ‘ವಾರಣಾಸಿ' ಎಂಬ ಹೊಸ ಚಿತ್ರದೊಂದಿಗೆ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಈ ಚಿತ್ರದಲ್ಲಿ ಮಹೇಶ್ ಬಾಬು ಮತ್ತು ಪ್ರಿಯಾಂಕಾ ಚೋಪ್ರಾ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಇಬ್ಬರು ತಾರೆಯರ ಒಟ್ಟು ಸಂಪತ್ತನ್ನು ಈ ಲೇಖನದಲ್ಲಿ ಹೋಲಿಸಲಾಗಿದೆ.

Varanasi: ಡ್ರೋನ್ ಹಾರಿಸಿ ರಾಜಮೌಳಿ ಕೆಲಸ ಕೆಡಿಸಲು ಪ್ರಯತ್ನಿಸಿದ ಕಿಡಿಗೇಡಿಗಳು

ಮಹೇಶ್ ಬಾಬು ಮತ್ತು ರಾಜಮೌಳಿ ಕಾಂಬಿನೇಷನ್​​ನಲ್ಲಿ ಬರುತ್ತಿರುವ ‘ವಾರಾಣಸಿ’ ಸಿನಿಮಾದ ಟೈಟಲ್ ಟೀಸರ್ ಬಿಡುಗಡೆ ಆಗಿದೆ. ಹೈದರಾಬಾದ್​​ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ದೊಡ್ಡ ಕಾರ್ಯಕ್ರಮ ಮಾಡಲಾಗಿದೆ. ಅಲ್ಲಿ ಕೆಲವರು ಡ್ರೋನ್ ತಂದು ಹಾರಿಸಿದ್ದಾರೆ. ಇದರಿಂದಾಗಿ ದೊಡ್ಡ ಪರದೆಯಲ್ಲಿ ಟೈಟಲ್ ಟೀಸರ್ ಪ್ಲೇ ಮಾಡುವುದು ತಡವಾಯಿತು. ಈ ಬಗ್ಗೆ ರಾಜಮೌಳಿ ಮಾತನಾಡಿದರು.

ಮಹೇಶ್ ಬಾಬು ಜೊತೆ ನಟಿಸಲು ಐಶ್ವರ್ಯಾಗೆ ಆಫರ್ ನೀಡಿದ್ದ ರಾಜಮೌಳಿ; ನಂತರ ಏನಾಯ್ತು?

ಮಹೇಶ್ ಬಾಬು-ರಾಜಮೌಳಿ ಅವರ 'ಗ್ಲೋಬ್‌ಟ್ರಾಟರ್' ಚಿತ್ರದ ನಾಯಕಿ ಪಾತ್ರಕ್ಕೆ ಮೊದಲು ಐಶ್ವರ್ಯಾ ರೈ ಅವರಿಗೆ ಆಫರ್ ನೀಡಲಾಗಿತ್ತು. ಅವರು ನಿರಾಕರಿಸಿದ ಬಳಿಕ ಕಾಜಲ್ ಅಗರ್ವಾಲ್ ಅವರನ್ನು ಪರಿಗಣಿಸಲಾಯಿತು. ಅಂತಿಮವಾಗಿ, ಪ್ರಿಯಾಂಕಾ ಚೋಪ್ರಾ ಮಂದಾಕಿನಿ ಪಾತ್ರಕ್ಕೆ ಆಯ್ಕೆಯಾದರು. ಅವರ ಫಸ್ಟ್ ಲುಕ್ ಭಾರಿ ಪ್ರತಿಕ್ರಿಯೆ ಪಡೆದಿದೆ.

ರಾಜಮೌಳಿ ಸಿನಿಮಾದಲ್ಲಿ ಮಂದಾಕಿನಿ ಆದ ಪ್ರಿಯಾಂಕಾ ಚೋಪ್ರಾ

‘ಎಸ್​ಎಸ್​ಎಂಬಿ 29’ ಸಿನಿಮಾದಿಂದ ಪ್ರಿಯಾಂಕಾ ಚೋಪ್ರಾ ಅವರ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಪೋಸ್ಟರ್ ವೈರಲ್ ಆಗಿದೆ. ಮಂದಾಕಿನಿ ಎಂಬ ಪಾತ್ರವನ್ನು ಅವರು ಮಾಡುತ್ತಿದ್ದಾರೆ. ಎಸ್​ಎಸ್​ ರಾಜಮೌಳಿ ಅವರು ನಿರ್ದೇಶಿಸುತ್ತಿರುವ ಈ ಬಹುನಿರೀಕ್ಷಿತ ಸಿನಿಮಾ ಬಹಳ ಅದ್ದೂರಿಯಾಗಿ ಮೂಡಿಬರುತ್ತಿದೆ.

ಸಿನಿಮಾ ಸೀಕ್ರೆಟ್ ಬಯಲು ಮಾಡಿದ್ದಕ್ಕೆ ಮಹೇಶ್ ಬಾಬುಗೆ ದಂಡ ಹಾಕಿದ ರಾಜಮೌಳಿ

‘ಎಸ್​ಎಸ್​ಎಂಬಿ 29’ ಸಿನಿಮಾದಿಂದ ಹೊಸ ಅಪ್​ಡೇಟ್ ನೀಡಲು ರಾಜಮೌಳಿ ಅವರು ಸಿದ್ಧತೆ ಮಾಡಿಕೊಂಡಿದ್ದಾರೆ. ಅದಕ್ಕೂ ಮುನ್ನ ಚಿತ್ರತಂಡದ ಸದಸ್ಯರು ಸೋಶಿಯಲ್ ಮೀಡಿಯಾದಲ್ಲಿ ತಮಾಷೆಯ ಸಂಭಾಷಣೆ ನಡೆಸಿದ್ದಾರೆ. ಅತಿಯಾಗಿ ವ್ಯಂಗ್ಯ ಮಾಡಿದ ಮಹೇಶ್ ಬಾಬು ಅವರಿಗೆ ನಿರ್ದೇಶಕ ರಾಜಮೌಳಿ ದಂಡ ಹಾಕಲು ನಿರ್ಧರಿಸಿದ್ದಾರೆ.

ಲೀಕ್ ಆಯ್ತು ಮಹೇಶ್ ಬಾಬು-ರಾಜಮೌಳಿ ಸಿನಿಮಾ ಸೆಟ್ ಫೋಟೋ; ಹೇಗಿದೆ ನೋಡಿ ಲುಕ್

ರಾಜಮೌಳಿ ಮತ್ತು ಮಹೇಶ್ ಬಾಬು ಅವರ ಮುಂದಿನ ಚಿತ್ರದ ಶೂಟ್ ಕೀನ್ಯಾದಲ್ಲಿ ನಡೆಯುತ್ತಿದೆ. ಶೂಟಿಂಗ್ ಸಮಯದಲ್ಲಿ ಸೆಟ್ ಫೋಟೋಗಳು ಲೀಕ್ ಆಗಿವೆ. ಇದು ರಾಜಮೌಳಿ ಅವರನ್ನು ಕಳವಳಗೊಳಿಸಿದೆ. ಚಿತ್ರದ ಬಗ್ಗೆ ಅಧಿಕೃತ ಮಾಹಿತಿ ನವೆಂಬರ್‌ನಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ಲೀಕ್ ಆದ ಫೋಟೋಗಳಲ್ಲಿ ಮಹೇಶ್ ಬಾಬು ಅವರ ಲುಕ್ ಕೂಡ ಬಹಿರಂಗಗೊಂಡಿದೆ.

ಬಾಲಿವುಡ್​ ಮೇಲೆ ಮುನಿಸಿಕೊಂಡ ರಾಜಮೌಳಿ? ಕಾರಣ ಏನು?

ರಾಜಮೌಳಿ ಅವರು 'ವಾರ್ 2' ಚಿತ್ರದ ಕಳಪೆ ವಿಎಫ್ಎಕ್ಸ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. 'ವಾರ್ 2' ಚಿತ್ರದಲ್ಲಿನ ಕೆಲವು ದೃಶ್ಯಗಳ ಗ್ರಾಫಿಕ್ಸ್ ಗುಣಮಟ್ಟ ಕಡಿಮೆಯಿದ್ದು, ಇದರಿಂದ ರಾಜಮೌಳಿ ಅವರು ಬೇಸರಗೊಂಡಿದ್ದಾರೆ. ಜೂನಿಯರ್ NTR ಅವರ ಬಾಲಿವುಡ್ ಪ್ರಯತ್ನದ ಯಶಸ್ಸು ಕಡಿಮೆಯಾಗಿರುವುದರಿಂದಲೂ ಅವರು ನಿರಾಶರಾಗಿದ್ದಾರೆ ಎನ್ನಲಾಗಿದೆ.

ಮಹೇಶ್ ಬಾಬು ಬರ್ತ್​ಡೇ ದಿನ ಅರ್ಧ ಪೋಸ್ಟರ್​ ಬಿಟ್ಟು ಅಭಿಮಾನಿಗಳಿಗೆ ಪತ್ರ ಬರೆದ ರಾಜಮೌಳಿ

ಮಹೇಶ್ ಬಾಬು ಅವರ ಜನ್ಮದಿನದಂದು, ನಿರೀಕ್ಷೆಯಂತೆ 'SSMB29' ಚಿತ್ರದ ಬಗ್ಗೆ ಮಾಹಿತಿ ಬಹಿರಂಗಗೊಳ್ಳಲಿಲ್ಲ. ಆದರೆ, ನಿರ್ದೇಶಕ ರಾಜಮೌಳಿ ಅವರು ನವೆಂಬರ್ 2025ರಲ್ಲಿ ಚಿತ್ರದ ಕುರಿತು ಪ್ರಮುಖ ಮಾಹಿತಿಯನ್ನು ಬಹಿರಂಗಪಡಿಸುವುದಾಗಿ ಘೋಷಿಸಿದ್ದಾರೆ. ಒಂದು ಪೋಸ್ಟರ್ ಬಿಡುಗಡೆ ಮಾಡಿ, ಚಿತ್ರದ ಬಗ್ಗೆ ಅಭಿಮಾನಿಗಳ ಕುತೂಹಲವನ್ನು ಹೆಚ್ಚಿಸಿದ್ದಾರೆ.

ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ