Mahesh Babu

Mahesh Babu

ಟಾಲಿವುಡ್​ನ ಸೂಪರ್​ ಸ್ಟಾರ್ ಮಹೇಶ್ ಬಾಬು ಅವರು ಚಿತ್ರರಂಗ ಹಿನ್ನೆಲೆಯಿಂದ ಬಂದವರು. ಅವರ ತಂದೆ ಕೃಷ್ಣ ತೆಲುಗಿನಲ್ಲಿ ಹೀರೋ ಹಾಗೂ ರಾಜಕಾರಣಿ ಆಗಿದ್ದರು. ಅವರು 1975ರ ಆಗಸ್ಟ್ 9ರಂದು ತಮಿಳುನಾಡಿನಲ್ಲಿ ಜನಿಸಿದರು. ಬಾಲ ಕಲಾವಿದನಾಗಿಯೇ ಮಹೇಶ್ ಬಾಬು ಚಿತ್ರರಂಗಕ್ಕೆ ಕಾಲಿಟ್ಟರು. 1999ರಲ್ಲಿ ‘ರಾಜ ಕುಮಾರುಡು’ ಸಿನಿಮಾ ಮೂಲಕ ಅವರು ಹೀರೋ ಆಗಿ ಮಿಂಚಿದರು. ಈ ಚಿತ್ರ ಅವರ ವೃತ್ತಿ ಜೀವನವನ್ನು ಬದಲಿಸಿತು. ‘ಪೋಕಿರಿ’, ‘ಮಹರ್ಷಿ’ ಮೊದಲಾದ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಮಹೇಶ್ ಬಾಬು ಅವರು ನಟಿ ನಮ್ರತಾ ಶಿರೋಡ್ಕರ್ ಅವರನ್ನು 2005ರಲ್ಲಿ ಮದುವೆ ಆದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮಹೇಶ್ ಬಾಬು ಮಗಳು ಸಿತಾರಾ ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ.

ಇನ್ನೂ ಹೆಚ್ಚು ಓದಿ

Mahesh Babu: ರಾಜಮೌಳಿ-ಮಹೇಶ್ ಬಾಬು ಚಿತ್ರಕ್ಕೆ ಸಿಕ್ಕ ಖಡಕ್ ವಿಲನ್

ರಾಜಮೌಳಿ ನಿರ್ದೇಶನದ ಹೊಸ ಸಿನಿಮಾ ಬಗ್ಗೆ ಆಗಾಗ ಸುದ್ದಿ ಹರಿದಾಡುತ್ತಲೇ ಇರುತ್ತದೆ. ಈವರೆಗೆ ಚಿತ್ರದ ಪಾತ್ರವರ್ಗದ ಬಗ್ಗೆ ಮಾಹಿತಿ ರಿವೀಲ್ ಆಗಿಲ್ಲ. ಈಗ ಚಿತ್ರದ ವಿಲನ್ ಬಗ್ಗೆ ಸುದ್ದಿ ಒಂದು ಹರಿದಾಡಿದೆ. ಪೃಥ್ವಿರಾಜ್ ಸುಕುಮಾರನ್ ಸಿನಿಮಾಗೆ ವಿಲನ್​ ಎಂದು ವರದಿ ಆಗಿದೆ.

SS Rajamouli: ಯಾವಾಗ ಸೆಟ್ಟೇರಲಿದೆ ಮಹೇಶ್ ಬಾಬು-ರಾಜಮೌಳಿ ಸಿನಿಮಾ? ಇಲ್ಲಿದೆ ವಿವರ

ಜನವರಿಯಲ್ಲಿ ಮಹೇಶ್ ಬಾಬು ಜರ್ಮನಿಗೆ ತೆರಳಿದ್ದರು. ಅಲ್ಲಿ ಅವರು ಟ್ರೇನಿಂಗ್ ಪಡೆದರು. ಈ ತರಬೇತಿ ಬಳಿಕ ಅವರು ಭಾರತಕ್ಕೆ ಮರಳಿದ್ದಾರೆ. ಅಲ್ಲಿಂದ ಇಲ್ಲಿಯವರೆಗೆ ಅವರು ಸಿದ್ಧತೆಯಲ್ಲಿ ಇದ್ದಾರೆ. ಇನ್ನೆರಡು ತಿಂಗಳು ಅವರು ಸಿನಿಮಾ ಸಿದ್ಧತೆಯಲ್ಲಿ ಇರಲಿದ್ದಾರಂತೆ

‘ಆದಿಪುರುಷ್​’ ಸಿನಿಮಾದ ಆಂಜನೇಯ ಪಾತ್ರಧಾರಿ ಭೇಟಿ ಮಾಡಿದ ರಾಜಮೌಳಿ; ಕಾರಣ?

ಮರಾಠಿ ಚಿತ್ರರಂಗದ ಖ್ಯಾತ ನಟ ದೇವದತ್ತ ನಾಗೆ ಅವರನ್ನು ನಿರ್ದೇಶಕ ರಾಜಮೌಳಿ ಭೇಟಿ ಮಾಡಿದ್ದಾರೆ. ‘ಎಸ್​ಎಸ್​ಎಂಬಿ 29’ ಸಿನಿಮಾದ ಸಲುವಾಗಿಯೇ ಈ ಭೇಟಿ ನಡೆದಿರಬಹುದು ಎಂದು ಅನೇಕರು ಊಹಿಸಿದ್ದಾರೆ. ದೇವದತ್ತ ನಾಗೆ ಮತ್ತು ರಾಜಮೌಳಿ ಅವರು ಜೊತೆಗಿರುವ ಫೋಟೋ ವೈರಲ್​ ಆಗಿದೆ. ಇದನ್ನು ಕಂಡು ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ.

ಮಹೇಶ್​ ಬಾಬು ಪುತ್ರ ಗೌತಮ್​ ಹೆಮ್ಮೆಯ ಕ್ಷಣ; ಖುಷಿ ಹಂಚಿಕೊಂಡ ‘ಪ್ರಿನ್ಸ್​’

ಪುತ್ರ ಗೌತಮ್​ ಪದವಿ ಶಿಕ್ಷಣ ಮುಗಿಸಿದ್ದಕ್ಕೆ ಮಹೇಶ್​ ಬಾಬು ಅವರಿಗೆ ಸಖತ್​ ಹೆಮ್ಮೆ ಆಗಿದೆ. ಕಾನ್ವಕೇಷನ್​ ಸಮಾರಂಭದಲ್ಲಿ ಅವರು ಪಾಲ್ಗೊಂಡಿದ್ದಾರೆ. ಮಗನ ಜೊತೆ ಇರುವ ಫೋಟೋ ಮತ್ತು ವಿಡಿಯೋಗಳನ್ನು ಹಂಚಿಕೊಂಡು ಅವರು ಸಂಭ್ರಮಿಸಿದ್ದಾರೆ. ಮಹೇಶ್​ ಬಾಬು ಮಗಳು ಸಿತಾರಾ ಹಾಗೂ ಪತ್ನಿ ನಮ್ರತಾ ಶಿರೋಡ್ಕರ್​ ಕೂಡ ಸಾಥ್​ ನೀಡಿದ್ದಾರೆ.

ರಾಜಮೌಳಿ ಹೊಸ ಸಿನಿಮಾ ಬಗೆಗಿನ ದೊಡ್ಡ ಗಾಸಿಪ್​ಗೆ ಆರಂಭದಲ್ಲೇ ಅಂತ್ಯ ಹಾಡಿದ ನಿರ್ಮಾಪಕರು

ನಟ ಮಹೇಶ್​ ಬಾಬು ಅವರು ನಿರ್ದೇಶಕ ಎಸ್​ಎಸ್​ ರಾಜಮೌಳಿ ಜೊತೆ ಕೈ ಜೋಡಿಸಿರುವುದು ಗೊತ್ತೇ ಇದೆ. ಈ ಸಿನಿಮಾ ಬಗ್ಗೆ ಈಗಾಗಲೇ ಗಾಸಿಪ್​ಗಳು ಹರಿದಾಡಲು ಆರಂಭಿಸಿವೆ. ಆ ಬಗ್ಗೆ ನಿರ್ಮಾಪಕರು ಸ್ಪಷ್ಟನೆ ನೀಡಿದ್ದಾರೆ. ಕಾಸ್ಟಿಂಗ್​ ಡೈರೆಕ್ಟರ್​ ಬಗ್ಗೆ ಪತ್ರಿಕೆಯೊಂದು ಪ್ರಕಟಿಸಿದ ತಪ್ಪು ಮಾಹಿತಿಯ ಬಗ್ಗೆ ಸ್ವತಃ ನಿರ್ಮಾಪಕರು ಪ್ರತಿಕ್ರಿಯೆ ನೀಡಿದ್ದಾರೆ.

ವಿಫಲವಾಯ್ತಾ ರಾಜಮೌಳಿ ಪ್ರಯತ್ನ? ಮಹೇಶ್​ ಬಾಬು ಲುಕ್​ ಬಹಿರಂಗ

ನಟ ಮಹೇಶ್​ ಬಾಬು ಹಾಗೂ ನಿರ್ದೇಶಕ ಎಸ್​ಎಸ್​ ರಾಜಮೌಳಿ ಅವರು ತಮ್ಮ ತಂಡದ ಜತೆ ದುಬೈಗೆ ಹೋಗಿದ್ದರು. ಅಲ್ಲಿ ‘SSMB 29’ ಚಿತ್ರದ ಪ್ರೀ-ಪ್ರೊಡಕ್ಷನ್​ ಕೆಲಸ ಪೂರ್ಣಗೊಳಿಸಲಾಗಿದೆ. ಪಾತ್ರಕ್ಕಾಗಿ ಮಹೇಶ್​ ಬಾಬು ವಿಶೇಷ ತರಬೇತಿ ಪಡೆದುಕೊಂಡಿದ್ದಾರೆ. ಅಲ್ಲಿಂದ ಅವರು ಹಿಂದಿರುಗಿ ಹೈದರಾಬಾದ್​ಗೆ ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡ ಅವರ ವಿಡಿಯೋ ವೈರಲ್​ ಆಗಿದೆ. ಈ ವಿಡಿಯೋದಲ್ಲಿ ಮಹೇಶ್​ ಬಾಬು ಗೆಟಪ್​ ಗಮನ ಸೆಳೆಯುತ್ತಿದೆ.

Sitara Ghattamaneni: ಹೇಗಿದೆ ನೋಡಿ ಮಹೇಶ್ ಬಾಬು-ಸಿತಾರಾ ಯುರೋಪ್ ಟ್ರಿಪ್

ಗೌತಮ್ ಹಾಗೂ ಸಿತಾರಾ ಸಖತ್ ಕ್ಯೂಟ್ ಆಗಿ ಪೋಸ್ ಕೊಟ್ಟಿದ್ದಾರೆ. ಈ ಸಂದರ್ಭದ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ. ಫ್ಯಾನ್ಸ್ ಇದನ್ನು ಸಾಕಷ್ಟು ಇಷ್ಟಪಟ್ಟಿದ್ದಾರೆ.

‘ಗುಂಟೂರು ಖಾರಂ ಶೂಟ್ ಮುಗಿಸೋದೆ ಕಷ್ಟವಾಯ್ತು, ಸಿನಿಮಾ ನನಗೆ ಇಷ್ಟ ಆಗಿಲ್ಲ’; ಜಗಪತಿ ಬಾಬು

ಜಗಪತಿ ಬಾಬು ‘ಗುಂಟೂರು ಖಾರಂ’ ಸೋಲಿನ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಈ ಸಿನಿಮಾ ಇಷ್ಟವಾಗಿಲ್ಲ ಎಂದು ನೇರವಾಗಿ ಹೇಳಿರುವ ಅವರು, ಸಿನಿಮಾ ಶೂಟ್ ಮಾಡೋದು ಕೂಡ ಕಷ್ಟವಾಯ್ತು ಎಂದು ವಿವರಿಸಿದ್ದಾರೆ.

ರಾಜಮೌಳಿ ನಿರ್ದೇಶನದ ಸಿನಿಮಾದಲ್ಲಿ ಮಹೇಶ್​ ಬಾಬುಗೆ ಇರಲಿದೆ 8 ಗೆಟಪ್​?

ಸ್ಟಾರ್​ ನಿರ್ದೇಶಕ ಎಸ್​.ಎಸ್​. ರಾಜಮೌಳಿ ಜೊತೆಗಿನ ಸಿನಿಮಾಗಾಗಿ ನಟ ಮಹೇಶ್​ ಬಾಬು ಅವರು ಈಗಾಗಲೇ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಪ್ರೀ-ಪ್ರೊಡಕ್ಷನ್​ ಕೆಲಸಗಳು ಭರದಿಂದ ಸಾಗುತ್ತಿವೆ. ಮಹೇಶ್ ಬಾಬು ಅವರ ಪಾತ್ರಕ್ಕೆ ಲುಕ್​ ಟೆಸ್ಟ್​ ಮಾಡಲಾಗುತ್ತಿದೆ. ಈ ಸಿನಿಮಾದಲ್ಲಿ ಅವರಿಗೆ ಹಲವು ಗೆಟಪ್​ಗಳು ಇರಲಿವೆ. ಆ ಬಗ್ಗೆ ಟಾಲಿವುಡ್​ ಅಂಗಳದಲ್ಲಿ ಗಾಸಿಪ್​ ಹರಿದಾಡುತ್ತಿವೆ.

ಇನ್ಮುಂದೆ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವಂತಿಲ್ಲ ಮಹೇಶ್​ ಬಾಬು; ಇದು ರಾಜಮೌಳಿ ಆದೇಶ

ರಾಜಮೌಳಿ ಜೊತೆ ಸಿನಿಮಾ ಮಾಡುವ ಹೀರೋಗಳು ಹಗಲಿರುಳು ಕಷ್ಟಪಡಲು ಸಿದ್ಧವಾಗಿರಬೇಕು. ಕಠಿಣ ನಿಯಮಗಳನ್ನು ಪಾಲಿಸಬೇಕು. ಈಗ ಮಹೇಶ್​ ಬಾಬು ಮತ್ತು ರಾಜಮೌಳಿ ಕಾಂಬಿನೇಷನ್​ನ ಸಿನಿಮಾಗೆ ಸಕಲ ತಯಾರಿ ನಡೆಯುತ್ತಿದೆ. ತಯಾರಿಯ ಹಂತದಲ್ಲೇ ಮಹೇಶ್​ ಬಾಬುಗೆ ರಾಜಮೌಳಿ ಅವರು ಒಂದಷ್ಟು ನಿಯಮಗಳನ್ನು ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ.

‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್