AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mahesh Babu

Mahesh Babu

ಟಾಲಿವುಡ್​ನ ಸೂಪರ್​ ಸ್ಟಾರ್ ಮಹೇಶ್ ಬಾಬು ಅವರು ಚಿತ್ರರಂಗ ಹಿನ್ನೆಲೆಯಿಂದ ಬಂದವರು. ಅವರ ತಂದೆ ಕೃಷ್ಣ ತೆಲುಗಿನಲ್ಲಿ ಹೀರೋ ಹಾಗೂ ರಾಜಕಾರಣಿ ಆಗಿದ್ದರು. ಅವರು 1975ರ ಆಗಸ್ಟ್ 9ರಂದು ತಮಿಳುನಾಡಿನಲ್ಲಿ ಜನಿಸಿದರು. ಬಾಲ ಕಲಾವಿದನಾಗಿಯೇ ಮಹೇಶ್ ಬಾಬು ಚಿತ್ರರಂಗಕ್ಕೆ ಕಾಲಿಟ್ಟರು. 1999ರಲ್ಲಿ ‘ರಾಜ ಕುಮಾರುಡು’ ಸಿನಿಮಾ ಮೂಲಕ ಅವರು ಹೀರೋ ಆಗಿ ಮಿಂಚಿದರು. ಈ ಚಿತ್ರ ಅವರ ವೃತ್ತಿ ಜೀವನವನ್ನು ಬದಲಿಸಿತು. ‘ಪೋಕಿರಿ’, ‘ಮಹರ್ಷಿ’ ಮೊದಲಾದ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಮಹೇಶ್ ಬಾಬು ಅವರು ನಟಿ ನಮ್ರತಾ ಶಿರೋಡ್ಕರ್ ಅವರನ್ನು 2005ರಲ್ಲಿ ಮದುವೆ ಆದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮಹೇಶ್ ಬಾಬು ಮಗಳು ಸಿತಾರಾ ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ.

ಇನ್ನೂ ಹೆಚ್ಚು ಓದಿ

‘ವಾರಣಾಸಿ’ ಸಿನಿಮಾ ಅಬ್ಬರ; 3,500 ಜೂನಿಯರ್ ಆರ್ಟಿಸ್ಟ್‌ಗಳ ಜತೆ ಮಹೇಶ್ ಬಾಬು ಮಹಾಯುದ್ಧ

ಹಿಂದೆಂದೂ ಕಂಡಿರದ ದೃಶ್ಯವೈಭವ ಸೃಷ್ಟಿಸಲು ನಿರ್ದೇಶಕ ರಾಜಮೌಳಿ ಅವರು ತಯಾರಾಗಿದ್ದಾರೆ. ‘ವಾರಣಾಸಿ’ ಸಿನಿಮಾದಲ್ಲಿ ಅತಿ ದೊಡ್ಡ ಯುದ್ಧದ ಸೀನ್ ಇರಲಿದೆ. ಇದು ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತಿ ದೊಡ್ಡ ಆ್ಯಕ್ಷನ್ ಸೀಕ್ವೆನ್ಸ್ ಆಗಿರಲಿದೆ ಎನ್ನಲಾಗಿದೆ. ಆ ಬಗ್ಗೆ ಇಂಟರೆಸ್ಟಿಂಗ್ ವಿಷಯ ಕೇಳಿಬಂದಿದೆ.

ರಾಜಮೌಳಿಯ ಐಮ್ಯಾಕ್ಸ್ ಥಿಯೇಟರ್ ಕನಸು ನನಸು ಮಾಡಿದ ನಟ ಮಹೇಶ್ ಬಾಬು

ದೃಶ್ಯ ವೈಭವ ಹಾಗೂ ಬಿಗ್ ಬಜೆಟ್ ಸಿನಿಮಾಗಳಿಗೆ ಹೆಸರಾಗಿರುವ ತೆಲುಗು ಚಿತ್ರರಂಗಕ್ಕೆ ಈ ಬೆಳವಣಿಗೆಯು ಬಹುದೊಡ್ಡ ಮೈಲಿಗಲ್ಲಾಗಿದೆ. ಪ್ರೇಕ್ಷಕರು ಇನ್ಮುಂದೆ ಜಾಗತಿಕ ಮಟ್ಟದ ಸಿನಿಮಾ ವೀಕ್ಷಣೆಯ ಅನುಭವವನ್ನು ಹೈದರಾಬಾದ್‌ನಲ್ಲೇ ಪಡೆಯಬಹುದಾಗಿದೆ ಎಂದು ಟಾಲಿವುಡ್ ಮಂದಿ ಖುಷಿಪಡುತ್ತಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..

‘ವಾರಣಾಸಿ’ ಸಿನಿಮಾಗೆ ಲೀಕ್ ಕಾಟ; ಭದ್ರತೆ ಹೆಚ್ಚಿಸಿದ ನಿರ್ದೇಶಕ ರಾಜಮೌಳಿ

ಈಗ ಲೀಕ್ ಆಗಿರುವ ಫೋಟೋದಲ್ಲಿ ಯಾವುದೇ ಕಲಾವಿದರು ಕಾಣಿಸಿಕೊಂಡಿಲ್ಲವಾದರೂ, ಚಿತ್ರದಲ್ಲಿ ಬಳಸಲಾಗುತ್ತಿರುವ ಬೃಹತ್ ಬ್ಲೂ-ಸ್ಕ್ರೀನ್‌ಗಳು ಈ ಸೀಕ್ವೆನ್ಸ್‌ಗೆ ಬೇಕಾದ ಹೈ-ಲೆವೆಲ್ ಗ್ರಾಫಿಕ್ಸ್ ಮತ್ತು ದೃಶ್ಯ ವೈಭವದ ಮುನ್ಸೂಚನೆಯನ್ನು ನೀಡುತ್ತಿವೆ. ಆದರೆ ಪದೇ ಪದೇ ಈ ರೀತಿ ಲೀಕ್ ಆಗುತ್ತಿರುವುದರಿಂದ ಸಿನಿಮಾದ ಹಲವು ಅಂಶಗಳು ಬಹಿರಂಗ ಆದಂತೆ ಆಗುತ್ತಿದೆ.

ಸದ್ಯಕ್ಕಂತೂ ಸೆಟ್ಟೇರಲ್ಲ ಮಹೇಶ್​ ಬಾಬು-ಪ್ರಶಾಂತ್ ನೀಲ್ ಸಿನಿಮಾ; ಇಲ್ಲಿದೆ ಕಾರಣಗಳ ಪಟ್ಟಿ

ಮಹೇಶ್ ಬಾಬು ಮತ್ತು ಪ್ರಶಾಂತ್ ನೀಲ್ ಸಿನಿಮಾ ಕುರಿತ ಚರ್ಚೆಗಳು ಭಾರೀ ಸದ್ದು ಮಾಡುತ್ತಿವೆ. 'ಡ್ರಾಗನ್' ಗ್ಲಿಂಪ್ಸ್ ನಂತರ ಈ ನಿರೀಕ್ಷೆ ಹೆಚ್ಚಿದ್ದರೂ, ಸದ್ಯಕ್ಕೆ ಈ ಕಾಂಬಿನೇಷನ್ ಸಾಧ್ಯವಿಲ್ಲ. ಪ್ರಶಾಂತ್ ನೀಲ್ ಅವರ 'ಡ್ರಾಗನ್' ಮತ್ತು 'ಸಲಾರ್ 2' ಹಾಗೂ ಮಹೇಶ್ ಬಾಬು ಅವರ ಮುಂದಿನ ಬಿಡುವಿಲ್ಲದ ಶೆಡ್ಯೂಲ್‌ನಿಂದಾಗಿ ಈ ಬಿಗ್ ಪ್ರಾಜೆಕ್ಟ್ ತಡವಾಗಲಿದೆ. ಅಸಲಿ ಕಾರಣಗಳನ್ನು ಇಲ್ಲಿ ತಿಳಿಯಿರಿ.

‘ವಾರಣಾಸಿ’ ಶೂಟಿಂಗ್​​ಗೆ 150 ಟ್ಯಾಂಕರ್ ನೀರು ಕೇಳಿದ ರಾಜಮೌಳಿ; ಶಾಕ್ ಕೊಟ್ಟ ಅಧಿಕಾರಿಗಳು

ರಾಜಮೌಳಿ ನಿರ್ದೇಶನದ 'ವಾರಣಾಸಿ' ಚಿತ್ರದ ಶೂಟಿಂಗ್ ನೀರಿಲ್ಲದೆ ಸ್ಥಗಿತಗೊಂಡಿದೆ. ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಸಮುದ್ರದ ಸೆಟ್ ಹಾಕಲು 150 ಟ್ಯಾಂಕರ್ ನೀರು ಕೇಳಿದ್ದ ಮನವಿಯನ್ನು ಜಲ ಮಂಡಳಿ ತಿರಸ್ಕರಿಸಿದೆ. ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆ ಇರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ಮಹೇಶ್ ಬಾಬು ನಟನೆಯ ಚಿತ್ರದ ರಿಲೀಸ್ ಮುಂದಕ್ಕೆ ಹೋಗುವ ಭೀತಿ ಅಭಿಮಾನಿಗಳನ್ನು ಕಾಡುತ್ತಿದೆ.

ವಾರಣಾಸಿಯನ್ನೇ ಮರುಸೃಷ್ಟಿಸಿದ ರಾಜಮೌಳಿ; ಫೋಟೋ ವೈರಲ್

SS Rajamouli: ಮಹೇಶ್ ಬಾಬು-ರಾಜಮೌಳಿ ಸಿನಿಮಾದ ವಾರಣಾಸಿ ಸೆಟ್ ಫೋಟೋಗಳು ಲೀಕ್ ಆಗಿವೆ. ನಿಜವಾದ ವಾರಣಾಸಿಯಲ್ಲಿ ಶೂಟಿಂಗ್ ಕಷ್ಟವಾದ್ದರಿಂದ ರಾಜಮೌಳಿ ಹೈದರಾಬಾದ್‌ನಲ್ಲಿ ಭವ್ಯವಾದ ಸೆಟ್ ಮರುಸೃಷ್ಟಿಸಿದ್ದಾರೆ. ಹಿಂದಿನ ಲೀಕ್‌ಗಳಿಂದಾಗಿ ಕಠಿಣ ನಿಯಮಗಳ ನಡುವೆಯೂ ಫೋಟೋಗಳು ವೈರಲ್ ಆಗಿದ್ದು, ಸಿನಿಮಾದ ಬಗ್ಗೆ ಕುತೂಹಲ ಹೆಚ್ಚಿಸಿವೆ.

ಮಹೇಶ್ ಬಾಬು ನಟನೆಯ ‘ಪೋಕಿರಿ’ ಮರು ಬಿಡುಗಡೆಗೆ ತೊಂದರೆ; ವಿಲನ್ ಆದ ಪುರಿ ಜಗನ್ನಾಥ್

ನಟ ಮಹೇಶ್ ಬಾಬು ಅವರ ಅಭಿಮಾನಿಗಳ ಪಾಲಿಗೆ ನಿರ್ದೇಶಕ ಪುರಿ ಜಗನ್ನಾಥ್ ಅವರು ವಿಲನ್ ಆಗಿದ್ದಾರೆ. ಅವರು ಮಾಡಿಕೊಂಡ ಸಾಲದಿಂದಾಗಿ ‘ಪೋಕಿರಿ’ ಸಿನಿಮಾದ ಮರು ಬಿಡುಗಡೆಗೆ ಈಗ ತೊಂದರೆ ಆಗಿದೆ. ಪುರಿ ಜಗನ್ನಾಥ್ ಅವರ ಮುಂಬರುವ ಸಿನಿಮಾಗಳಿಗೂ ಇದರಿಂದ ಸಮಸ್ಯೆ ಎದುರಾಗುವ ಸಾಧ್ಯತೆ ದಟ್ಟವಾಗಿದೆ.

ಮುಖ ಮೂತಿ ನೋಡದೇ ಹೊಡೆದಾಡಿಕೊಂಡ ಮಹೇಶ್ ಬಾಬು, ರಾಜಮೌಳಿ? ಸಿನಿಮಾ ಸತ್ತುಹೋಯ್ತು ಎಂದ ಆರ್​ಜಿವಿ

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಈ ವಿಡಿಯೋಗೆ ಜನರಿಂದ ಬಗೆಬಗೆಯ ಕಮೆಂಟ್ ಬಂದಿದೆ. ಟಾಲಿವುಡ್​ನ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ಸಿನಿಮಾ ಸತ್ತುಹೋಯ್ತು’ ಎಂಬ ಕ್ಯಾಪ್ಷನ್ ಜೊತೆ ಈ ವಿಡಿಯೋವನ್ನು ಅವರು ಶೇರ್ ಮಾಡಿದ್ದಾರೆ.

ಯಶ್ ಚಿತ್ರಕ್ಕೆ ಕೌಂಟರ್ ಕೊಡೋಕೆ ಬಂತು ಮತ್ತೊಂದು ‘ರಾಮಾಯಣ’; ರಾಮನ ಪಾತ್ರದಲ್ಲಿ ಸ್ಟಾರ್ ಹೀರೋ

ರಾಜಮೌಳಿ ಅವರ 'ವಾರಣಾಸಿ' ಸಿನಿಮಾದಲ್ಲಿ ಮಹೇಶ್ ಬಾಬು ರಾಮನ ಪಾತ್ರ ಮಾಡುತ್ತಿರುವುದನ್ನು ಖಚಿತಪಡಿಸಿದ್ದಾರೆ. ಈ ಪಾತ್ರಕ್ಕಾಗಿ 6 ತಿಂಗಳ ಕಠಿಣ ತರಬೇತಿ ಪಡೆದಿದ್ದು, ಕಳರಿಪಯಟ್ಟು ರೀತಿಯ ಭಂಗಿಗಳನ್ನು ಕಲಿತಿದ್ದಾರೆ. ರಣಬೀರ್ ಕಪೂರ್ ಅಭಿನಯದ 'ರಾಮಾಯಣ' ಸಿನಿಮಾ ದೀಪಾವಳಿಗೆ ಬರಲಿದ್ದು, ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಎರಡು ದೊಡ್ಡ 'ರಾಮಾಯಣ' ಆಧರಿತ ಸಿನಿಮಾಗಳು ಪ್ರೇಕ್ಷಕರಲ್ಲಿ ಭಾರಿ ಕುತೂಹಲ ಮೂಡಿಸಿವೆ.

ವೇದಿಕೆ ಮೇಲೆ ರ‍್ಯಾಂಪ್ ವಾಕ್ ಮಾಡಿದ ಮಹೇಶ್ ಬಾಬು ಮಗಳು ಸಿತಾರಾ

ಮಹೇಶ್ ಬಾಬು ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರ ಮಗಳು ಸಿತಾರಾ ಕೂಡ ಸಾಕಷ್ಟು ಫೇಮಸ್ ಆಗಿದ್ದಾರೆ. ಅವರು ವೇದಿಕೆ ಮೇಲೆ ರ‍್ಯಾಂಪ್ ವಾಕ್ ಮಾಡಿದ್ದಾರೆ. ಈ ಸಂದರ್ಭದ ಫೋಟೋ ಗಮನ ಸೆಳೆದಿದೆ. ಶೀಘ್ರವೇ ಅವರು ನಾಯಕಿ ಆಗಿ ಚಿತ್ರರಂಗಕ್ಕೆ ಕಾಲಿಟ್ಟರೂ ಅಚ್ಚರಿ ಏನಿಲ್ಲ ಎಂಬ ಮಾತು ವ್ಯಕ್ತವಾಗಿದೆ.

ಜೂನಿಯರ್ ಮಹೇಶ್ ಬಾಬು ಕಂಡ ಎಗ್ಸೈಟ್​​​ಮೆಂಟ್​​​ನಲ್ಲಿ ಅಭಿಮಾನಿ ಮಾಡಿದ್ದೇನು ನೋಡಿ

ಸ್ಟಾರ್ ನಟರನ್ನು ಭೇಟಿ ಮಾಡುವುದು ಅಭಿಮಾನಿಗಳಿಗೆ ಕಷ್ಟ. ಹೀಗಾಗಿ, ಅವರಂತೆ ಕಾಣುವ ಜೂನಿಯರ್ ಕಲಾವಿದರಿಗೆ ಈಗ ಭಾರಿ ಬೇಡಿಕೆ. ಇತ್ತೀಚೆಗೆ, ಜೂನಿಯರ್ ಮಹೇಶ್ ಬಾಬು ಅವರನ್ನು ನಿಜವಾದ ಸ್ಟಾರ್ ಎಂದೇ ಭಾವಿಸಿ ಅಭಿಮಾನಿಯೊಬ್ಬರು ಅಪ್ಪಿಕೊಂಡ ವಿಡಿಯೋ ವೈರಲ್ ಆಗಿದೆ. ಇದು ಜೂನಿಯರ್ ಕಲಾವಿದರು ಅಭಿಮಾನಿಗಳ ಆಸೆ ಈಡೇರಿಸುವ ಮಹತ್ವವನ್ನು ಎತ್ತಿ ತೋರಿಸುತ್ತದೆ.

ಫೋಟೋ ಗ್ಯಾಲರಿ: ಬೆಂಗಳೂರಲ್ಲಿ ಮಹೇಶ್ ಬಾಬು ಒಡೆತನದ ಮಲ್ಟಿಪ್ಲೆಕ್ಸ್ ಹೇಗಿದೆ ನೋಡಿ..

ಜನವರಿ 16ರಂದು ಮೆಜೆಸ್ಟಿಕ್ ಸರ್ಕಲ್‌ನಲ್ಲಿ ‘ಎಎಂಬಿ ಸಿನಿಮಾಸ್’ (AMB Cinemas) ಉದ್ಘಾಟನೆ ಆಗಲಿದೆ. ಇದು ದಕ್ಷಿಣ ಭಾರತದ ಪ್ರತಿಷ್ಠಿತ ಮಲ್ಟಿಪ್ಲೆಕ್ಸ್ ಆಗಿದೆ. ಈಗಾಗಲೇ ಹೈದರಾಬಾದ್‌ನಲ್ಲಿ ಅತ್ಯುತ್ತಮ ಸಿನಿಮಾ ಅನುಭವಕ್ಕೆ ‘ಎಎಂಬಿ ಸಿನಿಮಾಸ್’ ಹೆಸರಾಗಿದೆ. ಈಗ ಇದರ ಹೊಸ ಶಾಖೆ ಬೆಂಗಳೂರಿನಲ್ಲಿ ಆರಂಭ ಆಗುತ್ತಿದೆ.

ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ