Mahesh Babu
ಟಾಲಿವುಡ್ನ ಸೂಪರ್ ಸ್ಟಾರ್ ಮಹೇಶ್ ಬಾಬು ಅವರು ಚಿತ್ರರಂಗ ಹಿನ್ನೆಲೆಯಿಂದ ಬಂದವರು. ಅವರ ತಂದೆ ಕೃಷ್ಣ ತೆಲುಗಿನಲ್ಲಿ ಹೀರೋ ಹಾಗೂ ರಾಜಕಾರಣಿ ಆಗಿದ್ದರು. ಅವರು 1975ರ ಆಗಸ್ಟ್ 9ರಂದು ತಮಿಳುನಾಡಿನಲ್ಲಿ ಜನಿಸಿದರು. ಬಾಲ ಕಲಾವಿದನಾಗಿಯೇ ಮಹೇಶ್ ಬಾಬು ಚಿತ್ರರಂಗಕ್ಕೆ ಕಾಲಿಟ್ಟರು. 1999ರಲ್ಲಿ ‘ರಾಜ ಕುಮಾರುಡು’ ಸಿನಿಮಾ ಮೂಲಕ ಅವರು ಹೀರೋ ಆಗಿ ಮಿಂಚಿದರು. ಈ ಚಿತ್ರ ಅವರ ವೃತ್ತಿ ಜೀವನವನ್ನು ಬದಲಿಸಿತು. ‘ಪೋಕಿರಿ’, ‘ಮಹರ್ಷಿ’ ಮೊದಲಾದ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಮಹೇಶ್ ಬಾಬು ಅವರು ನಟಿ ನಮ್ರತಾ ಶಿರೋಡ್ಕರ್ ಅವರನ್ನು 2005ರಲ್ಲಿ ಮದುವೆ ಆದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮಹೇಶ್ ಬಾಬು ಮಗಳು ಸಿತಾರಾ ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ.
ಇನ್ನೂ ಹೆಚ್ಚು ಓದಿಮಹೇಶ್ ಬಾಬುಗೆ ಸಂದೀಪ್ ರೆಡ್ಡಿ ವಂಗಾ ವಿಶೇಷ ಶುಭಾಶಯ: ‘ಡೆವಿಲ್’ ಮತ್ತೆ ಮುನ್ನೆಲೆಗೆ?
ಸಂದೀಪ್ ರೆಡ್ಡಿ ವಂಗಾ ಮತ್ತು ಮಹೇಶ್ ಬಾಬು ಅವರು ಮಾಡಬೇಕಿದ್ದ ‘ಡೆವಿಲ್’ ಸಿನಿಮಾ ಈವರೆಗೂ ಸೆಟ್ಟೇರಿಲ್ಲ. ಆದರೆ ಆ ಪ್ರಾಜೆಕ್ಟ್ ಬಗ್ಗೆ ಅಭಿಮಾನಿಗಳಿಗೆ ಆಸೆ ಚಿಗುರಿದೆ. ಅದಕ್ಕೆ ಕಾರಣ ಆಗಿರುವುದು ಸಂದೀಪ್ ರೆಡ್ಡಿ ವಂಗಾ ಅವರ ಹೊಸ ಪೋಸ್ಟ್. ಆ ಬಗ್ಗೆ ಇಲ್ಲಿದೆ ಮಾಹಿತಿ..
- Madan Kumar
- Updated on: Aug 10, 2026
- 11:02 pm
ಮಾರುಕಟ್ಟೆಗೆ ಬರಲಿದೆ ‘ವಾರಣಾಸಿ’ ‘ರುದ್ರ ಲಾಕೆಟ್’ ಹಾಗೂ ಟೀ-ಶರ್ಟ್ಸ್
ಸೂಪರ್ ಸ್ಟಾರ್ ಮಹೇಶ್ ಬಾಬು ಅಭಿನಯದ 'ವಾರಾಣಸಿ' ಸಿನಿಮಾದಿಂದ ಹೊಸ ಅಪ್ಡೇಟ್ ಹೊರಬಿದ್ದಿದೆ. ಚಿತ್ರತಂಡವು ಅಧಿಕೃತ ಮರ್ಚಂಡೈಸ್ ಬಿಡುಗಡೆ ಮಾಡಲು ನಿರ್ಧರಿಸಿದ್ದು, ಇದರಲ್ಲಿ ರುದ್ರ ಲಾಕೆಟ್ ಹಾಗೂ ಟೀ-ಶರ್ಟ್ಗಳು ಲಭ್ಯವಿರಲಿವೆ. ಈ ಅಪರೂಪದ ಪ್ರಚಾರದ ವೈಖರಿ ಮಹೇಶ್ ಬಾಬು ಅಭಿಮಾನಿಗಳಲ್ಲಿ ಭಾರೀ ಕುತೂಹಲ ಹಾಗೂ ಸಂಭ್ರಮವನ್ನು ಹೆಚ್ಚಿಸಿದೆ.
- Shreelaxmi H
- Updated on: Aug 10, 2026
- 8:13 am
ಅಣ್ಣನ ಮಗನ ಸಿನಿಮಾ ಬೆಂಬಲಕ್ಕೆ ನಿಲ್ಲದ ಮಹೇಶ್ ಬಾಬು; ಅಭಿಮಾನಿಗಳ ಬೇಸರ
ತೆಲುಗು ಸೂಪರ್ಸ್ಟಾರ್ ಮಹೇಶ್ ಬಾಬು ತಮ್ಮ ಅಣ್ಣನ ಮಗನ ಚೊಚ್ಚಲ ಸಿನಿಮಾದ ಪ್ರಚಾರದಿಂದ ದೂರ ಉಳಿದು ದೊಡ್ಡ ಚರ್ಚೆಗೆ ಕಾರಣವಾಗಿದ್ದಾರೆ. ಕೇವಲ ಟ್ವೀಟ್ ಮೂಲಕ ಶುಭ ಹಾರೈಸಿದ ಮಹೇಶ್ ನಡವಳಿಕೆಗೆ ಟೀಕೆ ವ್ಯಕ್ತವಾಗಿದೆ. ಸಿನಿಮಾ ಉದ್ಯಮದಲ್ಲಿ ಕೌಟುಂಬಿಕ ಸಂಬಂಧಗಳಿಗಿಂತ ವ್ಯವಹಾರ ಹಾಗೂ ವೈಯಕ್ತಿಕ ಲೆಕ್ಕಾಚಾರಗಳೇ ಮುಖ್ಯವಾಗುತ್ತಿವೆಯೇ ಎಂಬ ಪ್ರಶ್ನೆ ಈಗ ಮೂಡಿದೆ.
- Rajesh Duggumane
- Updated on: Aug 1, 2026
- 8:59 am
‘ವಾರಣಾಸಿ’ ಸಿನಿಮಾ ಅಬ್ಬರ; 3,500 ಜೂನಿಯರ್ ಆರ್ಟಿಸ್ಟ್ಗಳ ಜತೆ ಮಹೇಶ್ ಬಾಬು ಮಹಾಯುದ್ಧ
ಹಿಂದೆಂದೂ ಕಂಡಿರದ ದೃಶ್ಯವೈಭವ ಸೃಷ್ಟಿಸಲು ನಿರ್ದೇಶಕ ರಾಜಮೌಳಿ ಅವರು ತಯಾರಾಗಿದ್ದಾರೆ. ‘ವಾರಣಾಸಿ’ ಸಿನಿಮಾದಲ್ಲಿ ಅತಿ ದೊಡ್ಡ ಯುದ್ಧದ ಸೀನ್ ಇರಲಿದೆ. ಇದು ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತಿ ದೊಡ್ಡ ಆ್ಯಕ್ಷನ್ ಸೀಕ್ವೆನ್ಸ್ ಆಗಿರಲಿದೆ ಎನ್ನಲಾಗಿದೆ. ಆ ಬಗ್ಗೆ ಇಂಟರೆಸ್ಟಿಂಗ್ ವಿಷಯ ಕೇಳಿಬಂದಿದೆ.
- Madan Kumar
- Updated on: Jun 29, 2026
- 6:35 pm
ರಾಜಮೌಳಿಯ ಐಮ್ಯಾಕ್ಸ್ ಥಿಯೇಟರ್ ಕನಸು ನನಸು ಮಾಡಿದ ನಟ ಮಹೇಶ್ ಬಾಬು
ದೃಶ್ಯ ವೈಭವ ಹಾಗೂ ಬಿಗ್ ಬಜೆಟ್ ಸಿನಿಮಾಗಳಿಗೆ ಹೆಸರಾಗಿರುವ ತೆಲುಗು ಚಿತ್ರರಂಗಕ್ಕೆ ಈ ಬೆಳವಣಿಗೆಯು ಬಹುದೊಡ್ಡ ಮೈಲಿಗಲ್ಲಾಗಿದೆ. ಪ್ರೇಕ್ಷಕರು ಇನ್ಮುಂದೆ ಜಾಗತಿಕ ಮಟ್ಟದ ಸಿನಿಮಾ ವೀಕ್ಷಣೆಯ ಅನುಭವವನ್ನು ಹೈದರಾಬಾದ್ನಲ್ಲೇ ಪಡೆಯಬಹುದಾಗಿದೆ ಎಂದು ಟಾಲಿವುಡ್ ಮಂದಿ ಖುಷಿಪಡುತ್ತಿದ್ದಾರೆ. ಆ ಬಗ್ಗೆ ಇಲ್ಲಿದೆ ಮಾಹಿತಿ..
- Madan Kumar
- Updated on: Jun 1, 2026
- 6:53 pm
‘ವಾರಣಾಸಿ’ ಸಿನಿಮಾಗೆ ಲೀಕ್ ಕಾಟ; ಭದ್ರತೆ ಹೆಚ್ಚಿಸಿದ ನಿರ್ದೇಶಕ ರಾಜಮೌಳಿ
ಈಗ ಲೀಕ್ ಆಗಿರುವ ಫೋಟೋದಲ್ಲಿ ಯಾವುದೇ ಕಲಾವಿದರು ಕಾಣಿಸಿಕೊಂಡಿಲ್ಲವಾದರೂ, ಚಿತ್ರದಲ್ಲಿ ಬಳಸಲಾಗುತ್ತಿರುವ ಬೃಹತ್ ಬ್ಲೂ-ಸ್ಕ್ರೀನ್ಗಳು ಈ ಸೀಕ್ವೆನ್ಸ್ಗೆ ಬೇಕಾದ ಹೈ-ಲೆವೆಲ್ ಗ್ರಾಫಿಕ್ಸ್ ಮತ್ತು ದೃಶ್ಯ ವೈಭವದ ಮುನ್ಸೂಚನೆಯನ್ನು ನೀಡುತ್ತಿವೆ. ಆದರೆ ಪದೇ ಪದೇ ಈ ರೀತಿ ಲೀಕ್ ಆಗುತ್ತಿರುವುದರಿಂದ ಸಿನಿಮಾದ ಹಲವು ಅಂಶಗಳು ಬಹಿರಂಗ ಆದಂತೆ ಆಗುತ್ತಿದೆ.
- Madan Kumar
- Updated on: May 31, 2026
- 12:42 pm
ಸದ್ಯಕ್ಕಂತೂ ಸೆಟ್ಟೇರಲ್ಲ ಮಹೇಶ್ ಬಾಬು-ಪ್ರಶಾಂತ್ ನೀಲ್ ಸಿನಿಮಾ; ಇಲ್ಲಿದೆ ಕಾರಣಗಳ ಪಟ್ಟಿ
ಮಹೇಶ್ ಬಾಬು ಮತ್ತು ಪ್ರಶಾಂತ್ ನೀಲ್ ಸಿನಿಮಾ ಕುರಿತ ಚರ್ಚೆಗಳು ಭಾರೀ ಸದ್ದು ಮಾಡುತ್ತಿವೆ. 'ಡ್ರಾಗನ್' ಗ್ಲಿಂಪ್ಸ್ ನಂತರ ಈ ನಿರೀಕ್ಷೆ ಹೆಚ್ಚಿದ್ದರೂ, ಸದ್ಯಕ್ಕೆ ಈ ಕಾಂಬಿನೇಷನ್ ಸಾಧ್ಯವಿಲ್ಲ. ಪ್ರಶಾಂತ್ ನೀಲ್ ಅವರ 'ಡ್ರಾಗನ್' ಮತ್ತು 'ಸಲಾರ್ 2' ಹಾಗೂ ಮಹೇಶ್ ಬಾಬು ಅವರ ಮುಂದಿನ ಬಿಡುವಿಲ್ಲದ ಶೆಡ್ಯೂಲ್ನಿಂದಾಗಿ ಈ ಬಿಗ್ ಪ್ರಾಜೆಕ್ಟ್ ತಡವಾಗಲಿದೆ. ಅಸಲಿ ಕಾರಣಗಳನ್ನು ಇಲ್ಲಿ ತಿಳಿಯಿರಿ.
- Rajesh Duggumane
- Updated on: May 26, 2026
- 10:01 am
‘ವಾರಣಾಸಿ’ ಶೂಟಿಂಗ್ಗೆ 150 ಟ್ಯಾಂಕರ್ ನೀರು ಕೇಳಿದ ರಾಜಮೌಳಿ; ಶಾಕ್ ಕೊಟ್ಟ ಅಧಿಕಾರಿಗಳು
ರಾಜಮೌಳಿ ನಿರ್ದೇಶನದ 'ವಾರಣಾಸಿ' ಚಿತ್ರದ ಶೂಟಿಂಗ್ ನೀರಿಲ್ಲದೆ ಸ್ಥಗಿತಗೊಂಡಿದೆ. ಹೈದರಾಬಾದ್ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಸಮುದ್ರದ ಸೆಟ್ ಹಾಕಲು 150 ಟ್ಯಾಂಕರ್ ನೀರು ಕೇಳಿದ್ದ ಮನವಿಯನ್ನು ಜಲ ಮಂಡಳಿ ತಿರಸ್ಕರಿಸಿದೆ. ಬೇಸಿಗೆಯಲ್ಲಿ ಕುಡಿಯುವ ನೀರಿನ ಕೊರತೆ ಇರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ಮಹೇಶ್ ಬಾಬು ನಟನೆಯ ಚಿತ್ರದ ರಿಲೀಸ್ ಮುಂದಕ್ಕೆ ಹೋಗುವ ಭೀತಿ ಅಭಿಮಾನಿಗಳನ್ನು ಕಾಡುತ್ತಿದೆ.
- Rajesh Duggumane
- Updated on: May 4, 2026
- 9:42 am
ವಾರಣಾಸಿಯನ್ನೇ ಮರುಸೃಷ್ಟಿಸಿದ ರಾಜಮೌಳಿ; ಫೋಟೋ ವೈರಲ್
SS Rajamouli: ಮಹೇಶ್ ಬಾಬು-ರಾಜಮೌಳಿ ಸಿನಿಮಾದ ವಾರಣಾಸಿ ಸೆಟ್ ಫೋಟೋಗಳು ಲೀಕ್ ಆಗಿವೆ. ನಿಜವಾದ ವಾರಣಾಸಿಯಲ್ಲಿ ಶೂಟಿಂಗ್ ಕಷ್ಟವಾದ್ದರಿಂದ ರಾಜಮೌಳಿ ಹೈದರಾಬಾದ್ನಲ್ಲಿ ಭವ್ಯವಾದ ಸೆಟ್ ಮರುಸೃಷ್ಟಿಸಿದ್ದಾರೆ. ಹಿಂದಿನ ಲೀಕ್ಗಳಿಂದಾಗಿ ಕಠಿಣ ನಿಯಮಗಳ ನಡುವೆಯೂ ಫೋಟೋಗಳು ವೈರಲ್ ಆಗಿದ್ದು, ಸಿನಿಮಾದ ಬಗ್ಗೆ ಕುತೂಹಲ ಹೆಚ್ಚಿಸಿವೆ.
- Rajesh Duggumane
- Updated on: Mar 25, 2026
- 3:03 pm
ಮಹೇಶ್ ಬಾಬು ನಟನೆಯ ‘ಪೋಕಿರಿ’ ಮರು ಬಿಡುಗಡೆಗೆ ತೊಂದರೆ; ವಿಲನ್ ಆದ ಪುರಿ ಜಗನ್ನಾಥ್
ನಟ ಮಹೇಶ್ ಬಾಬು ಅವರ ಅಭಿಮಾನಿಗಳ ಪಾಲಿಗೆ ನಿರ್ದೇಶಕ ಪುರಿ ಜಗನ್ನಾಥ್ ಅವರು ವಿಲನ್ ಆಗಿದ್ದಾರೆ. ಅವರು ಮಾಡಿಕೊಂಡ ಸಾಲದಿಂದಾಗಿ ‘ಪೋಕಿರಿ’ ಸಿನಿಮಾದ ಮರು ಬಿಡುಗಡೆಗೆ ಈಗ ತೊಂದರೆ ಆಗಿದೆ. ಪುರಿ ಜಗನ್ನಾಥ್ ಅವರ ಮುಂಬರುವ ಸಿನಿಮಾಗಳಿಗೂ ಇದರಿಂದ ಸಮಸ್ಯೆ ಎದುರಾಗುವ ಸಾಧ್ಯತೆ ದಟ್ಟವಾಗಿದೆ.
- Madan Kumar
- Updated on: Mar 24, 2026
- 9:43 pm
ಮುಖ ಮೂತಿ ನೋಡದೇ ಹೊಡೆದಾಡಿಕೊಂಡ ಮಹೇಶ್ ಬಾಬು, ರಾಜಮೌಳಿ? ಸಿನಿಮಾ ಸತ್ತುಹೋಯ್ತು ಎಂದ ಆರ್ಜಿವಿ
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಈ ವಿಡಿಯೋಗೆ ಜನರಿಂದ ಬಗೆಬಗೆಯ ಕಮೆಂಟ್ ಬಂದಿದೆ. ಟಾಲಿವುಡ್ನ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ಸಿನಿಮಾ ಸತ್ತುಹೋಯ್ತು’ ಎಂಬ ಕ್ಯಾಪ್ಷನ್ ಜೊತೆ ಈ ವಿಡಿಯೋವನ್ನು ಅವರು ಶೇರ್ ಮಾಡಿದ್ದಾರೆ.
- Madan Kumar
- Updated on: Feb 24, 2026
- 5:33 pm
ಯಶ್ ಚಿತ್ರಕ್ಕೆ ಕೌಂಟರ್ ಕೊಡೋಕೆ ಬಂತು ಮತ್ತೊಂದು ‘ರಾಮಾಯಣ’; ರಾಮನ ಪಾತ್ರದಲ್ಲಿ ಸ್ಟಾರ್ ಹೀರೋ
ರಾಜಮೌಳಿ ಅವರ 'ವಾರಣಾಸಿ' ಸಿನಿಮಾದಲ್ಲಿ ಮಹೇಶ್ ಬಾಬು ರಾಮನ ಪಾತ್ರ ಮಾಡುತ್ತಿರುವುದನ್ನು ಖಚಿತಪಡಿಸಿದ್ದಾರೆ. ಈ ಪಾತ್ರಕ್ಕಾಗಿ 6 ತಿಂಗಳ ಕಠಿಣ ತರಬೇತಿ ಪಡೆದಿದ್ದು, ಕಳರಿಪಯಟ್ಟು ರೀತಿಯ ಭಂಗಿಗಳನ್ನು ಕಲಿತಿದ್ದಾರೆ. ರಣಬೀರ್ ಕಪೂರ್ ಅಭಿನಯದ 'ರಾಮಾಯಣ' ಸಿನಿಮಾ ದೀಪಾವಳಿಗೆ ಬರಲಿದ್ದು, ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಎರಡು ದೊಡ್ಡ 'ರಾಮಾಯಣ' ಆಧರಿತ ಸಿನಿಮಾಗಳು ಪ್ರೇಕ್ಷಕರಲ್ಲಿ ಭಾರಿ ಕುತೂಹಲ ಮೂಡಿಸಿವೆ.
- Rajesh Duggumane
- Updated on: Feb 4, 2026
- 3:11 pm