Mahesh Babu
ಟಾಲಿವುಡ್ನ ಸೂಪರ್ ಸ್ಟಾರ್ ಮಹೇಶ್ ಬಾಬು ಅವರು ಚಿತ್ರರಂಗ ಹಿನ್ನೆಲೆಯಿಂದ ಬಂದವರು. ಅವರ ತಂದೆ ಕೃಷ್ಣ ತೆಲುಗಿನಲ್ಲಿ ಹೀರೋ ಹಾಗೂ ರಾಜಕಾರಣಿ ಆಗಿದ್ದರು. ಅವರು 1975ರ ಆಗಸ್ಟ್ 9ರಂದು ತಮಿಳುನಾಡಿನಲ್ಲಿ ಜನಿಸಿದರು. ಬಾಲ ಕಲಾವಿದನಾಗಿಯೇ ಮಹೇಶ್ ಬಾಬು ಚಿತ್ರರಂಗಕ್ಕೆ ಕಾಲಿಟ್ಟರು. 1999ರಲ್ಲಿ ‘ರಾಜ ಕುಮಾರುಡು’ ಸಿನಿಮಾ ಮೂಲಕ ಅವರು ಹೀರೋ ಆಗಿ ಮಿಂಚಿದರು. ಈ ಚಿತ್ರ ಅವರ ವೃತ್ತಿ ಜೀವನವನ್ನು ಬದಲಿಸಿತು. ‘ಪೋಕಿರಿ’, ‘ಮಹರ್ಷಿ’ ಮೊದಲಾದ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಮಹೇಶ್ ಬಾಬು ಅವರು ನಟಿ ನಮ್ರತಾ ಶಿರೋಡ್ಕರ್ ಅವರನ್ನು 2005ರಲ್ಲಿ ಮದುವೆ ಆದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮಹೇಶ್ ಬಾಬು ಮಗಳು ಸಿತಾರಾ ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ.
ವಾರಣಾಸಿಯನ್ನೇ ಮರುಸೃಷ್ಟಿಸಿದ ರಾಜಮೌಳಿ; ಫೋಟೋ ವೈರಲ್
SS Rajamouli: ಮಹೇಶ್ ಬಾಬು-ರಾಜಮೌಳಿ ಸಿನಿಮಾದ ವಾರಣಾಸಿ ಸೆಟ್ ಫೋಟೋಗಳು ಲೀಕ್ ಆಗಿವೆ. ನಿಜವಾದ ವಾರಣಾಸಿಯಲ್ಲಿ ಶೂಟಿಂಗ್ ಕಷ್ಟವಾದ್ದರಿಂದ ರಾಜಮೌಳಿ ಹೈದರಾಬಾದ್ನಲ್ಲಿ ಭವ್ಯವಾದ ಸೆಟ್ ಮರುಸೃಷ್ಟಿಸಿದ್ದಾರೆ. ಹಿಂದಿನ ಲೀಕ್ಗಳಿಂದಾಗಿ ಕಠಿಣ ನಿಯಮಗಳ ನಡುವೆಯೂ ಫೋಟೋಗಳು ವೈರಲ್ ಆಗಿದ್ದು, ಸಿನಿಮಾದ ಬಗ್ಗೆ ಕುತೂಹಲ ಹೆಚ್ಚಿಸಿವೆ.
- Rajesh Duggumane
- Updated on: Mar 25, 2026
- 3:03 pm
ಮಹೇಶ್ ಬಾಬು ನಟನೆಯ ‘ಪೋಕಿರಿ’ ಮರು ಬಿಡುಗಡೆಗೆ ತೊಂದರೆ; ವಿಲನ್ ಆದ ಪುರಿ ಜಗನ್ನಾಥ್
ನಟ ಮಹೇಶ್ ಬಾಬು ಅವರ ಅಭಿಮಾನಿಗಳ ಪಾಲಿಗೆ ನಿರ್ದೇಶಕ ಪುರಿ ಜಗನ್ನಾಥ್ ಅವರು ವಿಲನ್ ಆಗಿದ್ದಾರೆ. ಅವರು ಮಾಡಿಕೊಂಡ ಸಾಲದಿಂದಾಗಿ ‘ಪೋಕಿರಿ’ ಸಿನಿಮಾದ ಮರು ಬಿಡುಗಡೆಗೆ ಈಗ ತೊಂದರೆ ಆಗಿದೆ. ಪುರಿ ಜಗನ್ನಾಥ್ ಅವರ ಮುಂಬರುವ ಸಿನಿಮಾಗಳಿಗೂ ಇದರಿಂದ ಸಮಸ್ಯೆ ಎದುರಾಗುವ ಸಾಧ್ಯತೆ ದಟ್ಟವಾಗಿದೆ.
- Madan Kumar
- Updated on: Mar 24, 2026
- 9:43 pm
ಮುಖ ಮೂತಿ ನೋಡದೇ ಹೊಡೆದಾಡಿಕೊಂಡ ಮಹೇಶ್ ಬಾಬು, ರಾಜಮೌಳಿ? ಸಿನಿಮಾ ಸತ್ತುಹೋಯ್ತು ಎಂದ ಆರ್ಜಿವಿ
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಈ ವಿಡಿಯೋಗೆ ಜನರಿಂದ ಬಗೆಬಗೆಯ ಕಮೆಂಟ್ ಬಂದಿದೆ. ಟಾಲಿವುಡ್ನ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರು ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‘ಸಿನಿಮಾ ಸತ್ತುಹೋಯ್ತು’ ಎಂಬ ಕ್ಯಾಪ್ಷನ್ ಜೊತೆ ಈ ವಿಡಿಯೋವನ್ನು ಅವರು ಶೇರ್ ಮಾಡಿದ್ದಾರೆ.
- Madan Kumar
- Updated on: Feb 24, 2026
- 5:33 pm
ಯಶ್ ಚಿತ್ರಕ್ಕೆ ಕೌಂಟರ್ ಕೊಡೋಕೆ ಬಂತು ಮತ್ತೊಂದು ‘ರಾಮಾಯಣ’; ರಾಮನ ಪಾತ್ರದಲ್ಲಿ ಸ್ಟಾರ್ ಹೀರೋ
ರಾಜಮೌಳಿ ಅವರ 'ವಾರಣಾಸಿ' ಸಿನಿಮಾದಲ್ಲಿ ಮಹೇಶ್ ಬಾಬು ರಾಮನ ಪಾತ್ರ ಮಾಡುತ್ತಿರುವುದನ್ನು ಖಚಿತಪಡಿಸಿದ್ದಾರೆ. ಈ ಪಾತ್ರಕ್ಕಾಗಿ 6 ತಿಂಗಳ ಕಠಿಣ ತರಬೇತಿ ಪಡೆದಿದ್ದು, ಕಳರಿಪಯಟ್ಟು ರೀತಿಯ ಭಂಗಿಗಳನ್ನು ಕಲಿತಿದ್ದಾರೆ. ರಣಬೀರ್ ಕಪೂರ್ ಅಭಿನಯದ 'ರಾಮಾಯಣ' ಸಿನಿಮಾ ದೀಪಾವಳಿಗೆ ಬರಲಿದ್ದು, ಯಶ್ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಎರಡು ದೊಡ್ಡ 'ರಾಮಾಯಣ' ಆಧರಿತ ಸಿನಿಮಾಗಳು ಪ್ರೇಕ್ಷಕರಲ್ಲಿ ಭಾರಿ ಕುತೂಹಲ ಮೂಡಿಸಿವೆ.
- Rajesh Duggumane
- Updated on: Feb 4, 2026
- 3:11 pm
ವೇದಿಕೆ ಮೇಲೆ ರ್ಯಾಂಪ್ ವಾಕ್ ಮಾಡಿದ ಮಹೇಶ್ ಬಾಬು ಮಗಳು ಸಿತಾರಾ
ಮಹೇಶ್ ಬಾಬು ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರ ಮಗಳು ಸಿತಾರಾ ಕೂಡ ಸಾಕಷ್ಟು ಫೇಮಸ್ ಆಗಿದ್ದಾರೆ. ಅವರು ವೇದಿಕೆ ಮೇಲೆ ರ್ಯಾಂಪ್ ವಾಕ್ ಮಾಡಿದ್ದಾರೆ. ಈ ಸಂದರ್ಭದ ಫೋಟೋ ಗಮನ ಸೆಳೆದಿದೆ. ಶೀಘ್ರವೇ ಅವರು ನಾಯಕಿ ಆಗಿ ಚಿತ್ರರಂಗಕ್ಕೆ ಕಾಲಿಟ್ಟರೂ ಅಚ್ಚರಿ ಏನಿಲ್ಲ ಎಂಬ ಮಾತು ವ್ಯಕ್ತವಾಗಿದೆ.
- Rajesh Duggumane
- Updated on: Feb 3, 2026
- 11:21 am
ಜೂನಿಯರ್ ಮಹೇಶ್ ಬಾಬು ಕಂಡ ಎಗ್ಸೈಟ್ಮೆಂಟ್ನಲ್ಲಿ ಅಭಿಮಾನಿ ಮಾಡಿದ್ದೇನು ನೋಡಿ
ಸ್ಟಾರ್ ನಟರನ್ನು ಭೇಟಿ ಮಾಡುವುದು ಅಭಿಮಾನಿಗಳಿಗೆ ಕಷ್ಟ. ಹೀಗಾಗಿ, ಅವರಂತೆ ಕಾಣುವ ಜೂನಿಯರ್ ಕಲಾವಿದರಿಗೆ ಈಗ ಭಾರಿ ಬೇಡಿಕೆ. ಇತ್ತೀಚೆಗೆ, ಜೂನಿಯರ್ ಮಹೇಶ್ ಬಾಬು ಅವರನ್ನು ನಿಜವಾದ ಸ್ಟಾರ್ ಎಂದೇ ಭಾವಿಸಿ ಅಭಿಮಾನಿಯೊಬ್ಬರು ಅಪ್ಪಿಕೊಂಡ ವಿಡಿಯೋ ವೈರಲ್ ಆಗಿದೆ. ಇದು ಜೂನಿಯರ್ ಕಲಾವಿದರು ಅಭಿಮಾನಿಗಳ ಆಸೆ ಈಡೇರಿಸುವ ಮಹತ್ವವನ್ನು ಎತ್ತಿ ತೋರಿಸುತ್ತದೆ.
- Rajesh Duggumane
- Updated on: Jan 31, 2026
- 8:55 am
ಫೋಟೋ ಗ್ಯಾಲರಿ: ಬೆಂಗಳೂರಲ್ಲಿ ಮಹೇಶ್ ಬಾಬು ಒಡೆತನದ ಮಲ್ಟಿಪ್ಲೆಕ್ಸ್ ಹೇಗಿದೆ ನೋಡಿ..
ಜನವರಿ 16ರಂದು ಮೆಜೆಸ್ಟಿಕ್ ಸರ್ಕಲ್ನಲ್ಲಿ ‘ಎಎಂಬಿ ಸಿನಿಮಾಸ್’ (AMB Cinemas) ಉದ್ಘಾಟನೆ ಆಗಲಿದೆ. ಇದು ದಕ್ಷಿಣ ಭಾರತದ ಪ್ರತಿಷ್ಠಿತ ಮಲ್ಟಿಪ್ಲೆಕ್ಸ್ ಆಗಿದೆ. ಈಗಾಗಲೇ ಹೈದರಾಬಾದ್ನಲ್ಲಿ ಅತ್ಯುತ್ತಮ ಸಿನಿಮಾ ಅನುಭವಕ್ಕೆ ‘ಎಎಂಬಿ ಸಿನಿಮಾಸ್’ ಹೆಸರಾಗಿದೆ. ಈಗ ಇದರ ಹೊಸ ಶಾಖೆ ಬೆಂಗಳೂರಿನಲ್ಲಿ ಆರಂಭ ಆಗುತ್ತಿದೆ.
- Madan Kumar
- Updated on: Jan 15, 2026
- 7:25 pm
ಬೆಂಗಳೂರಲ್ಲಿ ಜನವರಿ 16ಕ್ಕೆ ಎಎಂಬಿ ಸಿನಿಮಾಸ್ ಕಾರ್ಯಾರಂಭ; ವಿಶೇಷತೆ ಏನು?
ಬೆಂಗಳೂರಿನ ಐತಿಹಾಸಿಕ ಚಿತ್ರಮಂದಿರ ಇದ್ದ ಜಾಗದಲ್ಲಿಯೇ ಮಹೇಶ್ ಬಾಬು ತಮ್ಮ ಹೊಸ ಚಿತ್ರಮಂದಿರವನ್ನು ಪ್ರಾರಂಭಿಸುತ್ತಿದ್ದಾರೆ. ಬೆಂಗಳೂರಿನ ಗಾಂಧಿ ನಗರದಲ್ಲಿ ಹಲವು ಚಿತ್ರಮಂದಿರಗಳು ಇದ್ದವು. ಇದರ ಪೈಕಿ ಕಪಾಲಿ ಚಿತ್ರಮಂದಿರ ಕೂಡ ಒಂದಾಗಿತ್ತು. ಇಲ್ಲಿ ಸಾಕಷ್ಟು ಸೂಪರ್ ಹಿಟ್ ಚಿತ್ರಗಳು ಪ್ರದರ್ಶನ ಕಂಡಿದ್ದವು. ಈಗ ಹೊಸ ಚಿತ್ರಮಂದಿರಕ್ಕೆ ‘ಎಎಂಬಿ ಸಿನಿಮಾಸ್ ಕಪಾಲಿ’ ಎಂದೇ ಹೆಸರಿಡಲಾಗಿದೆ.
- Shreelaxmi H
- Updated on: Jan 15, 2026
- 6:00 am
ಮತ್ತೆ ಮಹೇಶ್ ಬಾಬು ಫಾರಿನ್ ಟ್ರಿಪ್: ಇನ್ನಷ್ಟು ತಡ ಆಗಲಿದೆ ‘ವಾರಾಣಸಿ’ ಶೂಟಿಂಗ್
ಸಿನಿಮಾದ ಕೆಲಸಗಳಲ್ಲಿ ಮಹೇಶ್ ಬಾಬು ಎಷ್ಟೇ ಬ್ಯುಸಿ ಆಗಿದ್ದರೂ ಫ್ಯಾಮಿಲಿಗೆ ಸಮಯ ಕೊಡುವುದನ್ನು ತಪ್ಪಿಸಲ್ಲ. ಈಗ ಅವರು ‘ವಾರಾಣಸಿ’ ಸಿನಿಮಾಗೆ ಮೊದಲ ಹಂತದ ಶೂಟಿಂಗ್ ಮುಗಿಸಿ ಫಾರಿನ್ ಟ್ರಿಪ್ ತೆರಳಿದ್ದಾರೆ. ಮಹೇಶ್ ಬಾಬು ಅವರು ವಿದೇಶದಿಂದ ವಾಪಸ್ ಬಂದ ನಂತರವೇ ಮುಂದಿನ ಹಂತದ ಶೂಟಿಂಗ್ ಆರಂಭ ಆಗಲಿದೆ.
- Madan Kumar
- Updated on: Nov 30, 2025
- 8:04 am
ನಿಂಗಿದೆ ಮಾರಿಹಬ್ಬ; ಮಹೇಶ್ ಬಾಬುಗೆ ಮೊದಲೇ ಎಚ್ಚರಿಸಿದ್ದ ಜೂ.ಎನ್ಟಿಆರ್
ರಾಜಮೌಳಿ ಅವರ ಪರಿಪೂರ್ಣತೆಯ ಬಗ್ಗೆ ಜೂನಿಯರ್ ಎನ್ಟಿಆರ್ ಮಹೇಶ್ ಬಾಬು ಅವರಿಗೆ ಎಚ್ಚರಿಕೆ ನೀಡಿದ್ದಾರೆ. 'RRR' ಸಮಯದಲ್ಲಿ ಅನುಭವಿಸಿದ ಸವಾಲುಗಳನ್ನು ನೆನಪಿಸಿಕೊಂಡ NTR, ರಾಜಮೌಳಿ ಜೊತೆ ಕೆಲಸ ಮಾಡುವುದು ಸುಲಭವಲ್ಲ ಎಂದು ಹೇಳಿದ್ದರು. 'ವಾರಣಾಸಿ' ಸಿನಿಮಾದಲ್ಲಿ ಮಹೇಶ್ ಬಾಬು ಇದೇ ಸವಾಲುಗಳನ್ನು ಎದುರಿಸುವ ನಿರೀಕ್ಷೆಯಿದೆ.
- Shreelaxmi H
- Updated on: Nov 20, 2025
- 8:06 am
ಮಹೇಶ್ ಬಾಬು vs ಪ್ರಿಯಾಂಕಾ ಚೋಪ್ರಾ; ಇಬ್ಬರಲ್ಲಿ ಯಾರು ಹೆಚ್ಚು ಶ್ರೀಮಂತರು?
‘ಬಾಹುಬಲಿ' ಮತ್ತು ‘ಆರ್ಆರ್ಆರ್' ನಂತಹ ಬ್ಲಾಕ್ಬಸ್ಟರ್ ಚಿತ್ರಗಳ ನಂತರ, ಈಗ ಎಸ್ಎಸ್ ರಾಜಮೌಳಿ ‘ವಾರಣಾಸಿ' ಎಂಬ ಹೊಸ ಚಿತ್ರದೊಂದಿಗೆ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ. ಈ ಚಿತ್ರದಲ್ಲಿ ಮಹೇಶ್ ಬಾಬು ಮತ್ತು ಪ್ರಿಯಾಂಕಾ ಚೋಪ್ರಾ ಒಟ್ಟಾಗಿ ನಟಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ, ಇಬ್ಬರು ತಾರೆಯರ ಒಟ್ಟು ಸಂಪತ್ತನ್ನು ಈ ಲೇಖನದಲ್ಲಿ ಹೋಲಿಸಲಾಗಿದೆ.
- Shreelaxmi H
- Updated on: Nov 17, 2025
- 8:08 am
Varanasi: ಡ್ರೋನ್ ಹಾರಿಸಿ ರಾಜಮೌಳಿ ಕೆಲಸ ಕೆಡಿಸಲು ಪ್ರಯತ್ನಿಸಿದ ಕಿಡಿಗೇಡಿಗಳು
ಮಹೇಶ್ ಬಾಬು ಮತ್ತು ರಾಜಮೌಳಿ ಕಾಂಬಿನೇಷನ್ನಲ್ಲಿ ಬರುತ್ತಿರುವ ‘ವಾರಾಣಸಿ’ ಸಿನಿಮಾದ ಟೈಟಲ್ ಟೀಸರ್ ಬಿಡುಗಡೆ ಆಗಿದೆ. ಹೈದರಾಬಾದ್ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ದೊಡ್ಡ ಕಾರ್ಯಕ್ರಮ ಮಾಡಲಾಗಿದೆ. ಅಲ್ಲಿ ಕೆಲವರು ಡ್ರೋನ್ ತಂದು ಹಾರಿಸಿದ್ದಾರೆ. ಇದರಿಂದಾಗಿ ದೊಡ್ಡ ಪರದೆಯಲ್ಲಿ ಟೈಟಲ್ ಟೀಸರ್ ಪ್ಲೇ ಮಾಡುವುದು ತಡವಾಯಿತು. ಈ ಬಗ್ಗೆ ರಾಜಮೌಳಿ ಮಾತನಾಡಿದರು.
- Madan Kumar
- Updated on: Nov 16, 2025
- 7:31 am