AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monkeypox virus - Kyasanur Forest Disease (ಮಂಗನ ಕಾಯಿಲೆ)

Monkeypox virus - Kyasanur Forest Disease (ಮಂಗನ ಕಾಯಿಲೆ)

ಮಂಗನಕಾಯಿಲೆ ಎಂಬುದು ಕೋತಿಗಳಿಂದ ಹರಡುವ ಸೋಂಕಾಗಿದೆ. ಮೊದಲ ಬಾರಿಗೆ ಈ ರೋಗ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕ್ಯಾಸನೂರಿನಲ್ಲಿ 1957ರಲ್ಲಿ ಪತ್ತೆಯಾಯಿತು. ಅಂದಿನಿಂದ ಇದಕ್ಕೆ ಕ್ಯಾಸನೂರು ಫಾರೆಸ್ಟ್ ಡಿಸೀಸ್ (ಕೆಎಫ್​ಡಿ) ಎಂದು ಕರೆಯಲಾಗುತ್ತಿದೆ. ವೈರಸ್​ ಅಂಟಿರುವ ಮಂಗನ ಮೈಮೇಲಿರುವ ಸಣ್ಣ ಹುಳಗಳು ಮನುಷ್ಯರನ್ನು ಕಚ್ಚಿದಾಗ ಮಂಗನಕಾಯಿಲೆ ಉಂಟಾಗುತ್ತದೆ. ಕಾಡಿಗೆ ಹೋದಾಗ ಜಿಗಟೆ, ನೊಣಗಳಿಂದ ಮನುಷ್ಯರಿಗೆ ಈ ರೋಗ ಹರಡುತ್ತದೆ. ಈ ರೋಗಕ್ಕೆ ಇನ್ನೂ ಔಷಧಿ ಕಂಡುಹಿಡಿದಿಲ್ಲ. ಮಂಗನಕಾಯಿಲೆ ಮಾರಣಾಂತಿಕ ರೋಗವಾಗಿದ್ದು, ಮುನ್ನೆಚ್ಚರಿಕಾ ಕ್ರಮಗಳಿಂದ ಈ ರೋಗ ಬಾರದಂತೆ ತಡೆಯಬಹುದಾಗಿದೆ. ಮಲೇರಿಯಾದ ಲಕ್ಷಣಗಳನ್ನೇ ಹೊಂದಿರುವ ಮಂಗನಕಾಯಿಲೆ ದಟ್ಟವಾದ ಕಾಡುಗಳಿರುವ ಮಲೆನಾಡು ಪ್ರದೇಶದಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತದೆ. ಈ ಸೋಂಕು ತಗುಲಿದವರಲ್ಲಿ ಜ್ವರ, ತಲೆನೋವು, ಶೀತ ಕಂಡುಬರುತ್ತದೆ. ಇದನ್ನು ನಿರ್ಲಕ್ಷ್ಯ ಮಾಡಿದರೆ ಸೋಂಕು ಹೆಚ್ಚಾಗಿ ಪ್ರಾಣಕ್ಕೇ ಅಪಾಯ ಉಂಟಾಗಬಹುದು. ಪ್ರತಿ ವರ್ಷ ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಂಗನಕಾಯಿಲೆಯಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇರುವುದು ಆಘಾತಕಾರಿ ಸಂಗತಿ.

ಇನ್ನೂ ಹೆಚ್ಚು ಓದಿ

ಶಿವಮೊಗ್ಗದಲ್ಲಿ ಮತ್ತೆ ವಕ್ಕರಿಸಿದ ಮಂಗನ ಕಾಯಿಲೆ: ಕಾಡಿನಂಚಿನ ಜನರಲ್ಲಿ ಆತಂಕ

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದೆ. ಹೀಗಾಗಿ ಮಲೆನಾಡು ಭಾಗದ ಕಾಡಂಚಿನ ಗ್ರಾಮದ ಜನರಲ್ಲಿ ಆತಂಕ ಶುರುವಾಗಿದೆ. ಈ ಬಾರಿ ಅವಧಿಗೂ ಮುನ್ನವೇ ಕೆಎಫ್​​ಡಿ‌ ಕೇಸ್​​​ಗಳ ಸಂಖ್ಯೆ 8ಕ್ಕೆ ಏರಿಕೆಯಾಗಿರುವುದು ಸಾಕಷ್ಟು ಆತಂಕಕ್ಕೆ ಕಾರಣವಾಗಿದೆ. ಸದ್ಯ ಆರೋಗ್ಯ ಇಲಾಖೆ ಹೆಚ್ಚಿನ ನಿಗಾ ವಹಿಸಿದೆ.

ಬೆಂಗಳೂರಿನಲ್ಲಿ ಮಂಕಿಪಾಕ್ಸ್ ಕಟ್ಟೆಚ್ಚರ: ವಿಮಾನ ನಿಲ್ದಾಣದಲ್ಲಿ ಶಂಕಿತರ ಟೆಸ್ಟಿಂಗ್, ಸ್ಕ್ರೀನಿಂಗ್, ಟ್ರ್ಯಾಕಿಂಗ್ ಶುರು

ವಿದೇಶದಲ್ಲಿ ಅರ್ಭಿಟಿಸುತ್ತಿರುವ ಮಂಕಿಪಾಕ್ಸ್ ಈಗ ಭಾರತಕ್ಕೂ ಕಾಲಿಟ್ಟಿದೆ. ಮೊದಲ ಪ್ರಕರಣ ದೇಶದಲ್ಲಿ ಕಂಡು ಬರುತ್ತಿದ್ದಂತೆಯೇ ಆರೋಗ್ಯ ಇಲಾಖೆ ಹೈ ಅಲರ್ಟ್ ಆಗಿದ್ದು ಮುನ್ನೆಚ್ಚರಿಕೆ ದೃಷ್ಟಿಯಿಂದ ಟೆಸ್ಟಿಂಗ್- ಟ್ರ್ಯಾಕಿಂಗ್, ಸ್ಕ್ರೀನಿಂಗ್ ಆರಂಭಿಸಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಶಂಕಿತರ ಟೆಸ್ಟಿಂಗ್- ಟ್ರ್ಯಾಕಿಂಗ್, ಸ್ಕ್ರೀನಿಂಗ್ ಶುರುವಾಗಿದೆ.

Monkeypox Outbreak: ಮಂಕಿಪಾಕ್ಸ್​ನಿಂದ ಮತ್ತೆ ಲಾಕ್‌ಡೌನ್ ಆಗುತ್ತಾ? ಈ ಸಾಂಕ್ರಾಮಿಕ ರೋಗದ ಬಗ್ಗೆ WHO ಎಚ್ಚರಿಕೆ

Mpox Symptoms: ಮಂಕಿಪಾಕ್ಸ್ ಅಥವಾ ಎಂಪಾಕ್ಸ್ ರೋಗ ಎಲ್ಲ ಕಡೆಯೂ ಹರಡುತ್ತಿದೆ. ಈ ರೋಗ ಸಾಂಕ್ರಾಮಿಕವಾಗಿದ್ದು, ಕೊವಿಡ್-19 ರೀತಿಯಲ್ಲೇ ಜಾಗತಿಕ ಆರೋಗ್ಯ ಸಮಸ್ಯೆಯಾಗಿ ತಲೆದೋರುವ ಸಮಸ್ಯೆಯಿದೆ. ಈ ಜಾಗತಿಕ ವೈರಲ್ ಸೋಂಕಿನ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯೂ ಎಚ್ಚರಿಕೆ ನೀಡಿದೆ. ಹೀಗಾಗಿ, ಮತ್ತೊಮ್ಮೆ ಲಾಕ್​ಡೌನ್ ಹೇರಲಾಗುತ್ತಾ? ಎಂಬ ಚರ್ಚೆ ನಡೆದಿದೆ.

Monkeypox: ಮಂಕಿಪಾಕ್ಸ್ ವೈರಸ್ ಸೋಂಕಿತರ ಚಿಕಿತ್ಸೆಗೆ ದೆಹಲಿ ಏಮ್ಸ್ ಪ್ರೋಟೋಕಾಲ್ ಬಿಡುಗಡೆ

ಜಾಗತಿಕವಾಗಿ ಮಂಕಿಪಾಕ್ಸ್ ಪ್ರಕರಣಗಳ ಉಲ್ಬಣದ ನಡುವೆ ಶಂಕಿತ ಮಂಕಿಪಾಕ್ಸ್ ರೋಗಿಗಳ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಪ್ರೋಟೋಕಾಲ್ ಅನ್ನು ಬಿಡುಗಡೆ ಮಾಡಿದೆ. ಆಫ್ರಿಕಾದಲ್ಲಿ ಇತ್ತೀಚೆಗೆ ಏಕಾಏಕಿ ಮಂಕಿಪಾಕ್ಸ್ ಕೇಸುಗಳ ಹೆಚ್ಚಳದ ನಂತರ ಆ ರೋಗವೀಗ ಜಾಗತಿಕವಾಗಿ ಹರಡುತ್ತಿದೆ. ಭಾರತದ ನೆರೆಯ ರಾಷ್ಟ್ರವಾದ ಪಾಕಿಸ್ತಾನದಲ್ಲಿ ಮೂರು ಮಂಕಿಪಾಕ್ಸ್ ವೈರಸ್ ಪ್ರಕರಣಗಳು ದೃಢಪಟ್ಟಿವೆ. ಜೊತೆಗೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಮತ್ತೊಂದು ಪ್ರಕರಣ ವರದಿಯಾಗಿದೆ.

ಕುಮಟಾ: ಗೋಕರ್ಣದ ಅರಣ್ಯ ಪ್ರದೇಶದಲ್ಲಿ ಮಂಗಗಳ ಸಾವು, ಜನರಲ್ಲಿ ಆಂತಕ

ಉತ್ತರ ಕನ್ನಡ ಭಾಗದಲ್ಲಿ ಮಂಗನ ಕಾಯಿಲೆ ಪ್ರಕರಣಗಳು ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಜಿಲ್ಲೆಯ ಶಿರಸಿ ತಾಲೂಕಿನ ನಿರ್ನಳ್ಳಿ ಗ್ರಾಮದ ರಸ್ತೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಂಗನ ಮೃತ ದೇಹ ಪತ್ತೆಯಾಗಿತ್ತು. ಇದೀಗ ಕುಮಟಾ ತಾಲೂಕಿನ ಗೋಕರ್ಣ ಅರಣ್ಯ ಪ್ರದೇಶ ಮಂಗಗಳ ಮೃತ ದೇಹಗಳು ಪತ್ತೆಯಾಗಿದ್ದು ಜನರಲ್ಲಿ ಆತಂಕ ಸೃಷ್ಟಿಸಿದೆ.

ಉತ್ತರ ಕನ್ನಡ: ಮಂಗನ ಕಾಯಿಲೆಗೆ ಜಿಡ್ಡಿ ಗ್ರಾಮದ ಮಹಿಳೆ ಬಲಿ, ಜಿಲ್ಲೆಯಲ್ಲಿ ಸೋಂಕಿನಿಂದ ಮೊದಲ ಸಾವು

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಹೆಚ್ಚಾಗುತ್ತಿದ್ದು, ಇದೀಗ ಮೊದಲ ಸಾವು ಪ್ರಕರಣ ದಾಖಲಾಗಿದೆ. ಮಂಗನ ಕಾಯಿಲೆಗೆ 65 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಸಿದ್ದಾಪುರದ ಜಿಡ್ಡಿ ಗ್ರಾಮದ ಮಹಿಳೆ ಇವರಾಗಿದ್ದಾರೆ. ನಿನ್ನೆ ಮಹಿಳೆಯ ಸ್ಥಿತಿ ಗಂಭೀರವಾಗಿತ್ತು. ಇದೀಗ ಅವರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 43 ಮಂಗನ ಕಾಯಿಲೆ ಪ್ರಕರಣಗಳು ದಾಖಲಾಗಿವೆ.

ಮಂಗನ ಕಾಯಿಲೆ ನಿಯಂತ್ರಣಕ್ಕಾಗಿ ಸಚಿವ ದಿನೇಶ್ ಗುಂಡೂರಾವ್ ಸಭೆ: ಕೆಎಫ್​ಡಿ ಟೆಸ್ಟಿಂಗ್​ ವಿಳಂಬವಾಗದಂತೆ ಸೂಚನೆ

ರಾಜ್ಯದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಮಂಗನ ಕಾಯಿಲೆ ನಿಯಂತ್ರಣಕ್ಕೆ ಸರ್ಕಾರದಿಂದ ಕಸರತ್ತು ಮಾಡಲಾಗುತ್ತಿದೆ. ಈ ಹಿನ್ನೆಲೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್​ ಇಂದು ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳ ತಾಲೂಕುಗಳಲ್ಲಿ ಮಂಗನ ಕಾಯಿಲೆ ನಿಯಂತ್ರಣ ಕುರಿತಂತೆ ಮಲೆನಾಡು ಭಾಗದ ಶಾಸಕರು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ಮಾಡಿ ಕೆಲ ನಿರ್ಣಯಗಳನ್ನು ಕೈಗೊಂಡಿದ್ದಾರೆ.

ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಒಂದೇ ದಿನ 6 ಜನರಿಗೆ ಮಂಗನ ಕಾಯಿಲೆ

ರಾಜ್ಯದ ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ಹೆಚ್ಚುತ್ತಿದ್ದು, ಇದರಿಂದ ಜನರಲ್ಲಿ ಆತಂಕ ಶುರುವಾಗಿದೆ. ತೀರ್ಥಹಳ್ಳಿ ಪಟ್ಟಣದಲ್ಲಿ ಆರು ಜನರಿಗೆ ಮಂಗನ ಕಾಯಿಲೆ ಬಂದಿದೆ. ಸದ್ಯ ಈ ಆರು ಜನರನ್ನು ತೀರ್ಥಹಳ್ಳಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ರೋಗಿಗಳ ಸಂಪರ್ಕಕ್ಕೆ ಬಂದ 42 ಜನರ ರಕ್ತ ತಪಾಸಣೆ ಮಾಡಲಾಗಿದೆ.

ಹಿಂದಿನ ವ್ಯಾಕ್ಸಿನ್ ಬಳಸಬೇಡಿ; ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್​ ಬರಲಿದೆ: ದಿನೇಶ್ ಗುಂಡೂರಾವ್

ಕೋವಿಡ್ ಹರಡುವ ಭೀತಿ ನಡುವೆ ರಾಜ್ಯದಲ್ಲಿ ಮಂಗನಕಾಯಿಲೆ ಹೆಚ್ಚಳವಾಗುತ್ತಿದೆ. ಈ ಬಗ್ಗೆ ಉಡುಪಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಹಿಂದೆ ಇರುವ ವ್ಯಾಕ್ಸಿನ್ ಬಳಕೆ ಮಾಡಬೇಡಿ. ಹೊಸ ವ್ಯಾಕ್ಸಿನ್ ಬಳಕೆ ಬಗ್ಗೆ ಐಸಿಎಂಆರ್ ಜೊತೆ ಚರ್ಚೆ ನಡೆಯುತ್ತಿದೆ ಎಂದರು. ಅಲ್ಲದೆ, ರಾಜ್ಯದಲ್ಲಿ ಕೊವಿಡ್ ನಿಯಂತ್ರಣದಲ್ಲಿದೆ. ಎಳೆಪ್ರಾಯದವರಲ್ಲಿ ಹೃದಯಾಘಾತ ಪ್ರಕರಣ ಹೆಚ್ಚುತ್ತಿವೆ ಎಂದರು.

ಚಿಕ್ಕಮಗಳೂರು: ಮಹಿಳೆಗೆ ವಕ್ಕರಿಸಿದ ಮಂಗನ ಕಾಯಿಲೆ; 9ಕ್ಕೆ ಏರಿದ ಪ್ರಕರಣಗಳ ಸಂಖ್ಯೆ

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಂಗನ ಕಾಯಿಲೆ ಭೀತಿ ಹಾಗೂ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚುತ್ತಲೇ ಇದೆ. ಇದೀಗ ಮತ್ತೊಬ್ಬ ವ್ಯಕ್ತಿಯಲ್ಲಿ ಮಂಗನ ಕಾಯಿಲೆ ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ದೃಢಪಟ್ಟ ಮಂಗನ ಕಾಯಿಲೆ ಪ್ರಕರಣಗಳ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

Kyasanur Forest Disease: ಮಂಗನ ಕಾಯಿಲೆಗೆ ತತ್ತರಿಸುತ್ತಿದೆ ಉತ್ತರ ಕನ್ನಡ ಜಿಲ್ಲೆ, 10 ದಿನಗಳಲ್ಲಿ 21 ಜನರಿಗೆ ಸೋಂಕು

Monkeypox Virus: ಉತ್ತರ ಕನ್ನಡ ಜಿಲ್ಲೆಗೆ ಮತ್ತೆ ಮಂಗನಕಾಯಿಲೆ ವಕ್ಕರಿಸಿಕೊಂಡಿದೆ. ಕಳೆದ ಬಾರಿಯ ಲಸಿಕೆಯೂ ಕೆಲಸ ಮಾಡುತ್ತಿಲ್ಲ ಎಂಬುದು ಬೆಳಕಿಗೆ ಬಂದಿದ್ದು, ಹೊಸ ಲಸಿಕೆ ಇನ್ನೂ ಬಂದಿಲ್ಲ. ಈ ಆತಂಕದ ನಡುವೆಯೇ ಕೇವಲ ಎಂಟ್ಹತ್ತು ದಿನದ ಅವಧಿಯಲ್ಲಿ ಸುಮಾರು 21 ಮಂದಿ ಸೋಂಕಿತರಾಗಿದ್ದಾರೆ.

Monkeypox Virus: ಉತ್ತರ ಕನ್ನಡದಲ್ಲಿ ಹೆಚ್ಚಿದ ಮಂಗನ ಕಾಯಿಲೆ; ಒಂದೇ ದಿನ 8 ಜನರಲ್ಲಿ ಪತ್ತೆ

Kyasanur Forest Disease: ಸಿದ್ದಾಪುರ ತಾಲೂಕಿನಲ್ಲಿ ಒಂದೇ ದಿನದಲ್ಲಿ 8 ಜನರಲ್ಲಿ (KFD) ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಸಿದ್ದಾಪುರ (Siddapura)ದ ಕೊರ್ಲಕೈ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಜಿಡ್ಡಿಯಲ್ಲಿಯೇ 7 ಪ್ರಕರಣಗಳು ಬೆಳಕಿಗೆ ಬಂದಿದೆ. ಇನ್ನು 10 ವರ್ಷದ ಓರ್ವ ಮಗುವಿನ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ