Monsoon Rain
ಮಾನ್ಸೂನ್ ಮೂಲತಃ ಹಿಂದೂ ಮಹಾಸಾಗರ ಮತ್ತು ಅರಬ್ಬೀ ಸಮುದ್ರದಿಂದ ಭಾರತದ ನೈಋತ್ಯ ಕರಾವಳಿಗೆ ಬೀಸುವ ಗಾಳಿಯಾಗಿದೆ. ಇದು ಭಾರತ, ಪಾಕಿಸ್ತಾನ, ಬಾಂಗ್ಲಾದೇಶಗಳಿಗೆ ಮಳೆಯ ಮೋಡಗಳು ಚಲಿಸಲು ಕಾರಣವಾಗುತ್ತದೆ. ಇವುಗಳು ಕಾಲೋಚಿತ (ಸೀಸನಲ್) ಮಾರುತಗಳಾಗಿವೆ. ಇದು ಜೂನ್ ನಿಂದ ಸೆಪ್ಟೆಂಬರ್ ವರೆಗೆ ದಕ್ಷಿಣ ಏಷ್ಯಾ ಪ್ರದೇಶದಲ್ಲಿ ಸುಮಾರು ನಾಲ್ಕು ತಿಂಗಳುಗಳವರೆಗೆ ಸಕ್ರಿಯವಾಗಿರುತ್ತದೆ. ಮಾನ್ಸೂನ್ ಪದವನ್ನು ಮೊದಲು ಬ್ರಿಟಿಷ್ ಆಡಳಿತದ ಭಾರತದಲ್ಲಿ (ಇಂದಿನ ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶ) ಮತ್ತು ನೆರೆಯ ರಾಷ್ಟ್ರಗಳಲ್ಲಿ ಬಳಸಲಾಯಿತು. ಬಂಗಾಳ ಕೊಲ್ಲಿ ಮತ್ತು ಅರಬ್ಬೀ ಸಮುದ್ರದಿಂದ ಬೀಸುವ ದೊಡ್ಡ ಋತುಮಾನದ ಮಾರುತಗಳಿಗೆ ಇದನ್ನು ಬಳಸಲಾಗುತ್ತಿತ್ತು. ಇದು ನೈಋತ್ಯದಿಂದ ಬೀಸುತ್ತದೆ ಮತ್ತು ಮೇಲೆ ಉಲ್ಲೇಖಿಸಿದ ಪ್ರದೇಶಗಳಲ್ಲಿ ಭಾರೀ ಮಳೆಗೆ ಕಾರಣವಾಗುತ್ತದೆ.
ಕೆಆರ್ಎಸ್ ಡ್ಯಾಂ ನೀರಿನ ಮಟ್ಟ 99 ಅಡಿಗೆ ಕುಸಿತ: ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಎದುರಾಯ್ತು ಜಲಕಂಟಕ
KRS Dam Water Level: ಮಂಡ್ಯದ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 99 ಅಡಿಗೆ ಕುಸಿದಿದ್ದು, ಕೇವಲ 15 ಟಿಎಂಸಿ ನೀರು ಮಾತ್ರ ಬಳಕೆಗೆ ಲಭ್ಯವಿದೆ. ಮುಂಗಾರು ಮಳೆ ವಿಳಂಬವಾದರೆ ಬೆಂಗಳೂರು ಸೇರಿದಂತೆ ಕಾವೇರಿ ನೀರು ಅವಲಂಬಿತ ಪ್ರದೇಶಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಎದುರಾಗುವ ಸಾಧ್ಯತೆ ಇದೆ.
- Dileep CP
- Updated on: Apr 18, 2026
- 10:12 am
ಈ ಬಾರಿಯ ಬೇಸಿಗೆ ಸುಲಭವಿಲ್ಲ! ಕುಡಿಯುವ ನೀರಿಗೆ ಎದುರಾಗಲಿದೆ ಹಾಹಾಕಾರ, 26 ಜಿಲ್ಲೆಗಳ ಸ್ಥಿತಿ ಶೋಚನೀಯ
ಕರ್ನಾಟಕದ 26 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ದಟ್ಟವಾಗಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ನೀರಿನ ಪೂರೈಕೆಯಲ್ಲಿ ಲೋಪವಾದರೆ ಅಧಿಕಾರಿಗಳನ್ನೇ ಹೊಣೆ ಮಾಡುವುದಾಗಿ ಎಚ್ಚರಿಕೆ ನೀಡಿರುವ ಅವರು, ಕುಡಿಯುವ ನೀರಿನ ಸಂಬಂಧಿತ ಕಾರ್ಯಗಳಿಗಾಗಿ 419 ಕೋಟಿ ರೂ. ಅನುದಾನ ಲಭ್ಯವಿರುವುದಾಗಿ ತಿಳಿಸಿದ್ದಾರೆ.
- Ganapathi Sharma
- Updated on: Apr 17, 2026
- 10:00 am
Weather Today: 22 ರಾಜ್ಯಗಳಲ್ಲಿ ಇನ್ನೆರಡು ದಿನ ಭಾರೀ ಮಳೆ, ಬಿರುಗಾಳಿ
ಇಂದು 22 ರಾಜ್ಯಗಳಲ್ಲಿ ಬಿರುಗಾಳಿಸಹಿತ ಭಾರೀ ಮಳೆ ಸುರಿದಿದೆ. ಭಾರತ ಹವಾಮಾನ ಇಲಾಖೆ (IMD) ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ನಾಳೆಯವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಮುಂದಿನ 3 ದಿನಗಳವರೆಗೆ ದೆಹಲಿ, ಪಂಜಾಬ್, ಹರಿಯಾಣ, ಚಂಡೀಗಢ, ಹಿಮಾಚಲ ಪ್ರದೇಶ, ಲಡಾಖ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಗುಡುಗು ಸಹಿತ ಮಳೆ, ಮಿಂಚು ಮತ್ತು ಬಿರುಗಾಳಿ ಬೀಸುವ ಮುನ್ಸೂಚನೆ ನೀಡಿದೆ. ಮಾರ್ಚ್ 28ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಮಳೆಯಾಗಲಿದೆ.
- Sushma Chakre
- Updated on: Mar 26, 2026
- 1:51 pm
ಆಲಿಕಲ್ಲು ಮಳೆಗೆ ಕಾಶ್ಮೀರದಂತಾದ ಬಿಸಿಲನಾಡು ಕಲಬುರಗಿ: ಧಾರವಾಡ, ವಿಜಯಪುರದಲ್ಲಿ ಅಪಾರ ಬೆಳೆ ನಾಶ
ಕರ್ನಾಟಕದ ಹಲವೆಡೆ ಸುರಿದ ಭಾರಿ ಆಲಿಕಲ್ಲು ಮಳೆಯಿಂದ ಕಲಬುರಗಿ, ಧಾರವಾಡ ಜಿಲ್ಲೆಗಳು ಜಮ್ಮು ಕಾಶ್ಮೀರದಂತೆ ಕಾಣಿಸಿವೆ. ಕಲಬುರಗಿಯ ಚನ್ನೂರು ಗ್ರಾಮದಲ್ಲಿ ಹಿಮರಾಶಿ ಆವರಿಸಿದ್ದು, ರಸ್ತೆಗಳು ಮಂಜುಗಡ್ಡೆಯಿಂದ ತುಂಬಿವೆ. ಈ ಅನಿರೀಕ್ಷಿತ ಹವಾಮಾನ ಬದಲಾವಣೆಯು ವಿಜಯಪುರದಲ್ಲಿ ದ್ರಾಕ್ಷಿ ಬೆಳೆ ನಾಶಕ್ಕೆ ಕಾರಣವಾಗಿದೆ. ಪ್ರಕೃತಿಯ ಈ ವಿಸ್ಮಯಕಾರಿ ರೂಪ ಜನರಲ್ಲಿ ಆಶ್ಚರ್ಯ ಮೂಡಿಸಿದೆ.
- Ganapathi Sharma
- Updated on: Mar 26, 2026
- 10:34 am
Bangalore Rain: ಬೆಂಗಳೂರಿನ ಹಲವೆಡೆ ತುಂತುರು ಮಳೆ: ಬಿಸಿಲ ಬೇಗೆಗೆ ತಂಪೆರೆದ ವರುಣ
ಬೆಂಗಳೂರು ಬೇಸಿಗೆ ಮಳೆ: ಕರ್ನಾಟಕದಲ್ಲಿ ಯುಗಾದಿ ಮುನ್ನವೇ ಬೇಸಿಗೆ ಮಳೆ ಆರಂಭವಾಗಿದ್ದು, ಬಿಸಿಲ ಧಗೆಗೆ ತತ್ತರಿಸಿದ ಜನರಿಗೆ ಮತ್ತು ಭೂಮಿಗೆ ತಂಪೆರೆದಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಉತ್ತಮ ಮಳೆಯಾಗಿದೆ. ಕೆಲವು ಪ್ರದೇಶಗಳಲ್ಲಿ ಮಳೆಯಿಂದ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದರೆ, ಹವಾಮಾನ ಇಲಾಖೆ ಇನ್ನೂ ಕೆಲ ದಿನಗಳ ಮಳೆಯ ಮುನ್ಸೂಚನೆ ನೀಡಿದೆ.
- Gangadhar Saboji
- Updated on: Mar 17, 2026
- 5:15 pm
ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಮುಂದಿನ ಒಂದು ವಾರ ಮಳೆ
ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಚಳಿ ವಿಪರೀತವಾಗಿತ್ತು, ಭಾನುವಾರ ಅಲ್ಲಲ್ಲಿ ಕೊಂಚ ಮಳೆಯಾಗಿರುವ ಪರಿಣಾಮ ಚಳಿಯ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ. ಇಂದು ಸಂಜೆ ಕೂಡ ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿಯಲ್ಲಿ ಆಗೊಮ್ಮೆ ಈಗೊಮ್ಮೆ ಕೊಂಚ ಮಳೆಯಾಗಲಿದೆ, ವಿಜಯಪುರ, ಧಾರವಾಡ, ಬೆಳಗಾವಿಯಲ್ಲಿ ಒಣಹವೆ ಇರಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ರಾಯಲ್ಪಾಡುವಿನಲ್ಲಿ ಭಾನುವಾರ ಮಳೆಯಾಗಿದೆ.
- Nayana Rajeev
- Updated on: Dec 1, 2025
- 7:42 am
Karnataka Weather: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ, ಬೆಂಗಳೂರಿಗೂ ಮಳೆ ಮುನ್ಸೂಚನೆ
ಕರ್ನಾಟಕ ಹವಾಮಾನ, ಮಳೆ ಮುನ್ಸೂಚನೆ: ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಮಳೆ ಮುಂದುವರೆದಿದೆ. ಈ ಮಧ್ಯೆ ಇನ್ನೂ ಹಲವು ದಿನಗಳ ಕಾಲ ಇದೇ ರೀತಿ ಮಳೆ ಮುಂದುವರೆಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮತ್ತೊಂದೆಡೆ, ವರುಣನ ಆರ್ಭಟಕ್ಕೆ ಬೆಂಗಳೂರು ನಗರದಲ್ಲಿ ವ್ಯಾಪಾರ ವಹಿವಾಟು ಡಲ್ ಹೊಡೆಯುತ್ತಿದೆ.
- Ganapathi Sharma
- Updated on: Oct 25, 2025
- 9:08 am
ಉತ್ತರ ಕರ್ನಾಟಕ ಪ್ರವಾಹ, ಬೆಳೆಹಾನಿ: ಪ್ರಧಾನಿ ಮೋದಿ, ಶಾ ಜತೆ ಕುಮಾರಸ್ವಾಮಿ ಚರ್ಚೆ, ತಕ್ಷಣದ ಪರಿಹಾರಕ್ಕೆ ಆಗ್ರಹ
ಉತ್ತರ ಕರ್ನಾಟಕದಲ್ಲಿ ನಿರಂತರ ಮಳೆಯಿಂದಾಗಿ ಭಾರಿ ಬೆಳೆ ಹಾನಿಯಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಲಕ್ಷಾಂತರ ಹೆಕ್ಟೇರ್ ಬೆಳೆ ನಾಶವಾಗಿದೆ. ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರಿಗೆ ಮನವಿ ಮಾಡಿದ್ದು, ಕೇಂದ್ರದಿಂದ ಅಧ್ಯಯನ ತಂಡ ಕಳುಹಿಸಿ ತಕ್ಷಣ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.
- Sunil MH
- Updated on: Oct 11, 2025
- 11:39 am
ಬೆಂಗಳೂರಿನಲ್ಲಿ ಮಳೆಯಲ್ಲೇ ರಸ್ತೆಗೆ ಡಾಂಬರೀಕರಣ: ಜಿಬಿಎ ಅಧಿಕಾರಿಗಳ ಮಹಾ ಎಡವಟ್ಟು
ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯ ನಡುವೆಯೂ ರಸ್ತೆ ಡಾಂಬರೀಕರಣ ಕಾರ್ಯ ನಡೆಸಿ ಜಿಬಿಎ ಅಧಿಕಾರಿಗಳು ಎಡವಟ್ಟು ಮಾಡಿದ್ದಾರೆ. ಕುಂದಲಹಳ್ಳಿ-ಶೋಭಾ ಡ್ರೀಮ್ಸ್ ರಸ್ತೆಯಲ್ಲಿ ಮಳೆಯಲ್ಲೇ ಡಾಂಬರು ಹಾಕುವ ಕೆಲಸ ನಡೆದಿದೆ. ಕಳಪೆ ಕಾಮಗಾರಿಯಿಂದ ಹೊಸದಾಗಿ ಹಾಕಿದ ರಸ್ತೆಗಳು ಒಂದು ವಾರದಲ್ಲೇ ಹದಗೆಟ್ಟಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
- Rachappaji Naik S
- Updated on: Oct 11, 2025
- 7:57 am
ಬೆಂಗಳೂರು ಮಳೆಗೆ ವಿಕ್ಟೋರಿಯಾ ರಸ್ತೆಯಲ್ಲಿ ಜಲತಾಂಡವ: ಕೆರೆಯಾಗಿ ಬದಲಾದ ರೀನಿಯಸ್ ಸ್ಟ್ರೀಟ್ ರೋಡ್
Bangalore Rain Video: ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನ ವಿಕ್ಟೋರಿಯಾ ರಸ್ತೆ, ರೀನಿಯಸ್ ಸ್ಟ್ರೀಟ್ ಮತ್ತು ಸರ್ಜಾಪುರ ರಸ್ತೆಗಳು ಜಲಾವೃತಗೊಂಡಿವೆ. ರಸ್ತೆಗಳು ಕೆರೆಗಳಾಗಿ ಮಾರ್ಪಟ್ಟಿದ್ದು, ವಾಹನ ಸವಾರರು ತೀವ್ರ ಪರದಾಟ ನಡೆಸುತ್ತಿದ್ದಾರೆ. ದ್ವಿಚಕ್ರವಾಹನಗಳು ಕೆಟ್ಟು ನಿಂತು, ಸವಾರರು ಮನೆ ತಲುಪಲು ಹೆಣಗಾಡುತ್ತಿದ್ದಾರೆ. ಮೂರು ದಿನಗಳ ನಿರಂತರ ಮಳೆಯ ಮುನ್ಸೂಚನೆ ನಗರದ ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸುವ ಆತಂಕ ಮೂಡಿಸಿದೆ.
- Ganapathi Sharma
- Updated on: Oct 11, 2025
- 7:16 am
Bangalore Rains: ಬೆಂಗಳೂರಿನಲ್ಲಿ ರಾತ್ರಿಯಿಡೀ ಮಳೆ ಅಬ್ಬರ, ಅಕ್ಟೋಬರ್ 13ರ ತನಕ ಯೆಲ್ಲೋ ಅಲರ್ಟ್
ಬೆಂಗಳೂರು ಮಳೆ: ಬೆಂಗಳೂರಿನಲ್ಲಿ ಶುಕ್ರವಾರ ರಾತ್ರಿ ಭಾರಿ ಮಳೆ ಸುರಿದಿದ್ದು, ರಾತ್ರಿ ಇಡೀ ಜಿಟಿಜಿಟಿ ಮಳೆಯಾಗಿದೆ. ಇದರಿಂದಾಗಿ ಹಲವೆಡೆ ಜನವಸತಿ ಪ್ರದೇಶಗಳಿಗೂ ನೀರು ನುಗ್ಗಿದೆ. ಮತ್ತೊಂದೆಡೆ, ಅಕ್ಟೊಬರ್ 13 ರವರೆಗೂ ಬೆಂಗಳೂರಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಎಲ್ಲೆಲ್ಲಿ ಮಳೆ ಅವಾಂತರಗಳಾಗಿವೆ ಎಂಬ ಮಾಹಿತಿ ಇಲ್ಲಿದೆ.
- Ganapathi Sharma
- Updated on: Oct 11, 2025
- 7:13 am
ನಾಳೆಯ ಹವಾಮಾನ: ಕರಾವಳಿಯಲ್ಲಿ ಮುಂದುವರಿಯಲಿದೆ ವರುಣನ ಅಬ್ಬರ, ಬೆಂಗಳೂರಲ್ಲೂ ರೇನ್ ಅಲರ್ಟ್
Karnataka Weather Tomorrow: ರಾಜ್ಯದಲ್ಲಿ ನಾಳೆಯೂ ವರುಣ ಅಬ್ಬರಿಸಲಿದ್ದು, ಕರಾವಳಿ ಮತ್ತು ಘಟ್ಟ ಪ್ರದೇಶದ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ರಾಜಧಾನಿ ಬೆಂಗಳೂರಲ್ಲೂ ನಾಳೆ ಮೋಡಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನದ ಬಳಿಕ ಗಾಳಿ ಸಹಿತ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
- Prasanna Hegde
- Updated on: Oct 8, 2025
- 4:25 pm