Monsoon Rain
ಮಾನ್ಸೂನ್ ಮೂಲತಃ ಹಿಂದೂ ಮಹಾಸಾಗರ ಮತ್ತು ಅರಬ್ಬೀ ಸಮುದ್ರದಿಂದ ಭಾರತದ ನೈಋತ್ಯ ಕರಾವಳಿಗೆ ಬೀಸುವ ಗಾಳಿಯಾಗಿದೆ. ಇದು ಭಾರತ, ಪಾಕಿಸ್ತಾನ, ಬಾಂಗ್ಲಾದೇಶಗಳಿಗೆ ಮಳೆಯ ಮೋಡಗಳು ಚಲಿಸಲು ಕಾರಣವಾಗುತ್ತದೆ. ಇವುಗಳು ಕಾಲೋಚಿತ (ಸೀಸನಲ್) ಮಾರುತಗಳಾಗಿವೆ. ಇದು ಜೂನ್ ನಿಂದ ಸೆಪ್ಟೆಂಬರ್ ವರೆಗೆ ದಕ್ಷಿಣ ಏಷ್ಯಾ ಪ್ರದೇಶದಲ್ಲಿ ಸುಮಾರು ನಾಲ್ಕು ತಿಂಗಳುಗಳವರೆಗೆ ಸಕ್ರಿಯವಾಗಿರುತ್ತದೆ. ಮಾನ್ಸೂನ್ ಪದವನ್ನು ಮೊದಲು ಬ್ರಿಟಿಷ್ ಆಡಳಿತದ ಭಾರತದಲ್ಲಿ (ಇಂದಿನ ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶ) ಮತ್ತು ನೆರೆಯ ರಾಷ್ಟ್ರಗಳಲ್ಲಿ ಬಳಸಲಾಯಿತು. ಬಂಗಾಳ ಕೊಲ್ಲಿ ಮತ್ತು ಅರಬ್ಬೀ ಸಮುದ್ರದಿಂದ ಬೀಸುವ ದೊಡ್ಡ ಋತುಮಾನದ ಮಾರುತಗಳಿಗೆ ಇದನ್ನು ಬಳಸಲಾಗುತ್ತಿತ್ತು. ಇದು ನೈಋತ್ಯದಿಂದ ಬೀಸುತ್ತದೆ ಮತ್ತು ಮೇಲೆ ಉಲ್ಲೇಖಿಸಿದ ಪ್ರದೇಶಗಳಲ್ಲಿ ಭಾರೀ ಮಳೆಗೆ ಕಾರಣವಾಗುತ್ತದೆ.
ಉಡುಪಿಯ ಬೈಂದೂರಿನಲ್ಲಿ ಸುಂಟರಗಾಳಿಗೆ 150 ಅಡಿಕೆ ಮರಗಳು ಧರಾಶಾಹಿ
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಎಡಮಳ್ಳಿ, ಹಕ್ಕಲುಮನೆ ಪ್ರದೇಶದಲ್ಲಿ ಬೀಸಿದ ಸುಂಟರುಗಾಳಿಗೆ 150ಕ್ಕೂ ಹೆಚ್ಚು ಅಡಿಕೆ ಮರಗಳು ಧರಾಶಾಹಿಯಾಗಿವೆ. ಹಲವು ವರ್ಷಗಳಿಂದ ಬೆಳೆದ ಬೆಳೆ ಕಳೆದುಕೊಂಡ ರೈತರು ಅತಂತ್ರರಾಗಿದ್ದಾರೆ. ವಿದ್ಯುತ್ ಕಂಬಗಳು ಸಹ ಹಾನಿಗೊಂಡಿದ್ದು, ಸರ್ಕಾರದಿಂದ ತಕ್ಷಣದ ಪರಿಹಾರಕ್ಕಾಗಿ ಸ್ಥಳೀಯರು ಆಗ್ರಹಿಸಿದ್ದಾರೆ.
- Prajwal Amin
- Updated on: Jul 10, 2026
- 7:29 pm
ಮಳೆ ಅಬ್ಬರಕ್ಕೆ ಅಂಬೋಲಿ ಫಾಲ್ಸ್ಗೆ ಜೀವ ಕಳೆ: ಜಲಪಾತ ನೋಡಲು ಮುಗಿಬಿದ್ದ ಪ್ರವಾಸಿಗರು
ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಅಬ್ಬರ ಜೋರಾಗಿದ್ದು, ಜಲಪಾತಗಳಿಗೆ ಜೀವಕಳೆ ಬಂದಿವೆ. ಆದರೆ ಬೆಳಗಾವಿ ಜಿಲ್ಲೆಯ ಜಲಪಾತಗಳಿಗೆ ಅರಣ್ಯ ಇಲಾಖೆ ಪ್ರವಾಸಿಗರಿಗೆ ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ, ನೂರು ಅಡಿ ಎತ್ತರದಿಂದ ಧುಮ್ಮಿಕ್ಕುವ ಮಹಾರಾಷ್ಟ್ರದ ಪ್ರಸಿದ್ಧ ಅಂಬೋಲಿ ಜಲಪಾತದತ್ತ ಪ್ರವಾಸಿಗರು ಕುಟುಂಬ ಸಮೇತ ಲಗ್ಗೆ ಇಡುತ್ತಿದ್ದಾರೆ.
- Sahadev Mane
- Updated on: Jul 10, 2026
- 4:14 pm
ಕರ್ನಾಟಕ ಹವಾಮಾನ: 8 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್, ಭಾರಿ ಮಳೆ ಮುನ್ಸೂಚನೆ
Karnataka Rain, IMD Forecast for Today: ಕರ್ನಾಟಕದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಮುಂಗಾರು ಚುರುಕಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ರಾಜ್ಯದ 8 ಜಿಲ್ಲೆಗಳಿಗೆ ಜುಲೈ 10 ರಂದು ಭಾರಿ ಮಳೆಯ ಮುನ್ಸೂಚನೆ ನೀಡಿ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.
- Ganapathi Sharma
- Updated on: Jul 10, 2026
- 6:58 am
ರೆಡ್, ಆರೆಂಜ್, ಯೆಲ್ಲೋ, ಗ್ರೀನ್ ಅಲರ್ಟ್ ಅಂದರೇನು? ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಹವಾಮಾನ ಇಲಾಖೆಯು ಮಳೆ, ಗಾಳಿ, ಉಷ್ಣತೆ ಮುಂತಾದ ಹವಾಮಾನ ವೈಪರೀತ್ಯಗಳ ಕುರಿತು ರೆಡ್, ಆರೆಂಜ್, ಯೆಲ್ಲೋ ಮತ್ತು ಗ್ರೀನ್ ಅಲರ್ಟ್ಗಳನ್ನು ನೀಡುತ್ತದೆ. ಈ ಅಲರ್ಟ್ಗಳ ಅರ್ಥ ಏನು? ಯಾವ ಅಲರ್ಟ್ ಯಾವ ಅಪಾಯವನ್ನು ಸೂಚಿಸುತ್ತದೆ, ಮತ್ತು ಅದಕ್ಕೆ ಹೇಗೆ ಸಿದ್ಧರಾಗಿರಬೇಕು ಎಂಬುದರ ಕುರಿತು ಇಲ್ಲಿದೆ ಮಾಹಿತಿ.
- Gangadhar Saboji
- Updated on: Jul 9, 2026
- 10:29 pm
ಉತ್ತರ ಕರ್ನಾಟಕದಲ್ಲಿ ನದಿಗಳ ಭೋರ್ಗರೆತ: ದಿಕ್ಕೆಟ್ಟ ಬೆಳಗಾವಿ-ಬಾಗಲಕೋಟೆ ಮಂದಿ
Karnataka Rain Update: ವಾರದ ಹಿಂದೆ ಬರಗಾಲದ ಭೀತಿ ಎದುರಿಸುತ್ತಿದ್ದ ಉತ್ತರ ಕರ್ನಾಟಕ ಜಿಲ್ಲೆಗಳು ಇದೀಗ ಮಹಾಮಳೆಯಿಂದ ಪ್ರವಾಹಕ್ಕೆ ಸಿಲುಕಿವೆ. ಕೃಷ್ಣಾ, ಮಾರ್ಕಂಡೇಯ, ದೂಧಗಂಗಾ, ವೇದಗಂಗಾ ಸೇರಿದಂತೆ ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಜಮೀನುಗಳು, ಸೇತುವೆಗಳು ಮತ್ತು ದೇಗುಲಗಳು ಜಲಾವೃತವಾಗಿವೆ.
- Prasanna Hegde
- Updated on: Jul 9, 2026
- 9:57 pm
ಸಕಲೇಶಪುರದ ಆನೆಮಹಲ್ ಬಳಿ ಭೂಕುಸಿತದ ಆತಂಕ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸ್ಥಳೀಯರ ಆಕ್ರೋಶ
ಹಾಸನ ಜಿಲ್ಲೆಯ ಸಕಲೇಶಪುರದ ಆನೆಮಹಲ್ ಬಳಿ ಭೂಕುಸಿತದ ಭೀತಿಯಲ್ಲಿ ಹತ್ತಾರು ಕುಟುಂಬಗಳು ಆತಂಕದಲ್ಲಿ ವಾಸಿಸುತ್ತಿವೆ. ಕಳೆದ ವರ್ಷ ಪರ್ಯಾಯ ವ್ಯವಸ್ಥೆ ಕಲ್ಪಿಸುವುದಾಗಿ ನೀಡಿದ ಭರವಸೆಗಳು ಈಡೇರಿಲ್ಲ. ಮಳೆ ಹೆಚ್ಚಾದಂತೆ ಜೀವ ಭಯ ಕಾಡುತ್ತಿದ್ದರೂ, ಸ್ಥಳಾಂತರಕ್ಕೆ ಸೂಕ್ತ ವ್ಯವಸ್ಥೆ ಇಲ್ಲದೆ ಜನರು ತಮ್ಮ ಮನೆ ಬಿಟ್ಟು ಹೋಗಲು ನಿರಾಕರಿಸುತ್ತಿದ್ದಾರೆ. ಸರ್ಕಾರ ಕೂಡಲೇ ಸ್ಪಂದಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
- Manjunath KB
- Updated on: Jul 9, 2026
- 7:35 pm
Karnataka Weather Forecast: ಕರಾವಳಿ, ಮಲೆನಾಡಲ್ಲಿ ಮುಂದುವರಿಯಲಿದೆ ಮಳೆ; ಸಕಲೇಶಪುರದ ಹೊಗದಹಳ್ಳದಲ್ಲಿ ದಾಖಲೆಯ ವರ್ಷಧಾರೆ
Monsoon 2026: ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯಲಿದ್ದು, ಹಾಸನದ ಹೊಗದಹಳ್ಳದಲ್ಲಿ ದಾಖಲೆಯ ೧೯೬.೫ ಮಿ.ಮೀ ಮಳೆಯಾಗಿದೆ. ಘಟ್ಟ ಪ್ರದೇಶಗಳಲ್ಲಿ ಭೂಕುಸಿತದ ಎಚ್ಚರಿಕೆ ನೀಡಲಾಗಿದ್ದು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಹಲವೆಡೆಯೂ ಗಾಳಿ ಮಳೆ ಸಾಧ್ಯತೆ ಅಂದಾಜಿಸಲಾಗಿದೆ.
- Prasanna Hegde
- Updated on: Jul 9, 2026
- 7:15 pm
ವಯನಾಡಿನಲ್ಲಾದ ಭೂಕುಸಿತದ ಭೀಕರತೆ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿ ರಜನೀಶ್
Wayanad Landslide: ಕೇರಳಂನ ವಯನಾಡು ಜಿಲ್ಲೆಯ ಕಲ್ಲಾಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಭೂಕುಸಿತ ದುರಂತದಲ್ಲಿ ಐವರು ನಾಪತ್ತೆಯಾಗಿದ್ದಾರೆ. ಈ ಐವರಿಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿದೆ. ಇಂದು ಓರ್ವ ವ್ಯಕ್ತಿಯ ಶವ ಪತ್ತೆಯಾಗಿದೆ. ಈ ದುರಂತದಲ್ಲಿ ನಾಪತ್ತೆಯಾದವರ ಜೊತೆ ಕೆಲಸ ಮಾಡುತ್ತಿದ್ದ ಪ್ರತ್ಯಕ್ಷದರ್ಶಿ ರಜನೀಶ್ ಅವರು ಘಟನೆಯ ಭೀಕರತೆಯನ್ನು ವಿವರಿಸಿದ್ದಾರೆ.
- Ram
- Updated on: Jul 9, 2026
- 10:26 am
ಮಂಗಳೂರಿನ ಕೆತ್ತಿಕಲ್ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ನಿರಂತರ ಮಳೆಯಿಂದಾಗಿ ಮಂಗಳೂರು ಹೊರವಲಯದ ವಾಮಂಜೂರು ಸಮೀಪದ ಕೆತ್ತಿಕಲ್ನಲ್ಲಿ ಗುಡ್ಡ ಕುಸಿತವಾಗುತ್ತಿದೆ. ಪ್ರತಿ ಬಾರಿ ಮಳೆಗಾಲದಲ್ಲೇ ಗುಡ್ಡ ಕುಸಿಯುತ್ತಿದ್ದು, ಇದಕ್ಕೆ ಪರಿಹಾರ ಕಂಡು ಹಿಡಿಯುವ ಕೆಲಸವಾಗಿಲ್ಲ. ಇನ್ನು ಪದೇ ಪದೇ ಕೆತ್ತಿಕಲ್ನಲ್ಲಿ ಏಕೆ ಗುಡ್ಡ ಕುಸಿಯುತ್ತೆ ಎನ್ನುವುದನ್ನು ಎಳೆ ಎಳೆಯಾಗಿ ಬಿಟ್ಟಿದ್ದಾರೆ. ಈ ಬಗ್ಗೆ ಟಿವಿ9 ಜೊತೆ ಮಾತನಾಡಿರುವ ಪರಿಸರ ತಜ್ಞ ದಿನೇಶ್ ಹೊಳ್ಳ, ಲಂಬಾಕೃತಿಯಲ್ಲಿ ಅಗೆದಿರುವುದೇ ಕುಸಿತಕ್ಕೆ ಪ್ರಮುಖ ಕಾರಣ ಎಂದಿದ್ದಾರೆ.
- Ashok
- Updated on: Jul 8, 2026
- 7:10 pm
Karnataka Weather Forecast: 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್; ಮಡಿಕೇರಿಯ ಬೆಂಗೂರಿನಲ್ಲಿ ದಾಖಲೆಯ ಮಳೆ
Monsoon 2026: ಕರ್ನಾಟಕದ ಕರಾವಳಿ ಮತ್ತು ಮಲೆನಾಡಿನ 7 ಜಿಲ್ಲೆಗಳಿಗೆ ಜುಲೈ 9ರಂದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕೊಡಗು ಜಿಲ್ಲೆಯ ಬೆಂಗೂರಿನಲ್ಲಿ ದಾಖಲೆಯ 211.5 ಮಿ.ಮೀ ಮಳೆ ಸುರಿದಿದೆ. ಈ ನಡುವೆ ಜುಲೈ 2ನೇ ವಾರದಲ್ಲಿ ಮುಂಗಾರು ಮಳೆ ಕ್ಷೀಣಿಸುವ ಸಾಧ್ಯತೆ ಇದ್ದು, ಆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
- Prasanna Hegde
- Updated on: Jul 8, 2026
- 6:10 pm
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಆತಂಕದಲ್ಲಿ 200 ಕುಟುಂಬಗಳು
ಮಂಗಳೂರಿನ NH 169 ರಸ್ತೆ ಅಗಲೀಕರಣ ಕಾಮಗಾರಿ ವೇಳೆ ನಡೆದ ಅವೈಜ್ಞಾನಿಕ ಗುಡ್ಡ ಅಗೆತದಿಂದ ಕೆತ್ತಿಕಲ್ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದೆ. ವಯನಾಡಿನಲ್ಲಿ ಸುರಂಗ ಮಾರ್ಗ ನಿರ್ಮಿಸಿ ದುರಂತಕ್ಕೆ ಕಾರಣವಾದ DBL ಕಂಪನಿಯೇ ಇಲ್ಲೂ ಅವೈಜ್ಞಾನಿಕ ಕಾಮಗಾರಿ ನಡೆಸಿರುವುದು ಆತಂಕಕ್ಕೆ ಕಾರಣವಾಗಿದೆ. ನೂರಾರು ಮನೆಗಳು ಅಪಾಯದಲ್ಲಿವೆ. ಮಳೆಗಾಲದಲ್ಲಿ ಮತ್ತಷ್ಟು ದುರಂತದ ಭೀತಿ ಎದುರಾಗಿದೆ.
- Ashok
- Updated on: Jul 8, 2026
- 2:18 pm
ಶಿರಾಡಿ ಘಾಟ್ನಲ್ಲಿ ಮತ್ತೆ ಭೂಕುಸಿತ ಭೀತಿ: ದೊಡ್ಡತಪ್ಲು ಬಳಿ ಮುಗಿಯದ ಕಾಮಗಾರಿ, ಪ್ರವಾಸಿಗರಿಗೆ ತಾಲೂಕು ಆಡಳಿತದ ಎಚ್ಚರಿಕೆ
Hassan News: ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ನ ಹಲವೆಡೆ ಭೂಕುಸಿತದ ಭೀತಿ ಎದುರಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಸಕಲೇಶಪುರ ತಾಲೂಕು ಆಡಳಿತವು ಪ್ರವಾಸಿಗರು ಮತ್ತು ಸಾರ್ವಜನಿಕರಿಗೆ ಜಲಪಾತ, ನದಿ ಹಾಗೂ ಗುಡ್ಡಗಾಡು ಪ್ರದೇಶಗಳಿಗೆ ಭೇಟಿ ನೀಡದಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.
- Manjunath KB
- Updated on: Jul 8, 2026
- 12:40 pm