AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monsoon Rain

Monsoon Rain

ಮಾನ್ಸೂನ್ ಮೂಲತಃ ಹಿಂದೂ ಮಹಾಸಾಗರ ಮತ್ತು ಅರಬ್ಬೀ ಸಮುದ್ರದಿಂದ ಭಾರತದ ನೈಋತ್ಯ ಕರಾವಳಿಗೆ ಬೀಸುವ ಗಾಳಿಯಾಗಿದೆ. ಇದು ಭಾರತ, ಪಾಕಿಸ್ತಾನ, ಬಾಂಗ್ಲಾದೇಶಗಳಿಗೆ ಮಳೆಯ ಮೋಡಗಳು ಚಲಿಸಲು ಕಾರಣವಾಗುತ್ತದೆ. ಇವುಗಳು ಕಾಲೋಚಿತ (ಸೀಸನಲ್) ಮಾರುತಗಳಾಗಿವೆ. ಇದು ಜೂನ್ ನಿಂದ ಸೆಪ್ಟೆಂಬರ್ ವರೆಗೆ ದಕ್ಷಿಣ ಏಷ್ಯಾ ಪ್ರದೇಶದಲ್ಲಿ ಸುಮಾರು ನಾಲ್ಕು ತಿಂಗಳುಗಳವರೆಗೆ ಸಕ್ರಿಯವಾಗಿರುತ್ತದೆ. ಮಾನ್ಸೂನ್ ಪದವನ್ನು ಮೊದಲು ಬ್ರಿಟಿಷ್ ಆಡಳಿತದ ಭಾರತದಲ್ಲಿ (ಇಂದಿನ ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶ) ಮತ್ತು ನೆರೆಯ ರಾಷ್ಟ್ರಗಳಲ್ಲಿ ಬಳಸಲಾಯಿತು. ಬಂಗಾಳ ಕೊಲ್ಲಿ ಮತ್ತು ಅರಬ್ಬೀ ಸಮುದ್ರದಿಂದ ಬೀಸುವ ದೊಡ್ಡ ಋತುಮಾನದ ಮಾರುತಗಳಿಗೆ ಇದನ್ನು ಬಳಸಲಾಗುತ್ತಿತ್ತು. ಇದು ನೈಋತ್ಯದಿಂದ ಬೀಸುತ್ತದೆ ಮತ್ತು ಮೇಲೆ ಉಲ್ಲೇಖಿಸಿದ ಪ್ರದೇಶಗಳಲ್ಲಿ ಭಾರೀ ಮಳೆಗೆ ಕಾರಣವಾಗುತ್ತದೆ.

ಇನ್ನೂ ಹೆಚ್ಚು ಓದಿ

Karnataka Weather Forecast: ಇಂದು ಕರಾವಳಿ, ಒಳನಾಡಿನಲ್ಲಿ ಮಳೆಯ ಸಾಧ್ಯತೆ

Monsoon 2026: ಆಗಸ್ಟ್ 14ರಂದು ಕರ್ನಾಟಕದಾದ್ಯಂತ ಮುಂಗಾರು ಮಳೆ ಮುಂದುವರಿಯಲಿದ್ದು, ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ವ್ಯಾಪಕ ಮಳೆಯಾಗಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯು ಸಾರ್ವಜನಿಕರು ಮತ್ತು ವಾಹನ ಸವಾರರಿಗೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಿದೆ.

ಮುಂಗಾರು ಮಳೆ ಮತ್ತೆ ದುರ್ಬಲ: ಕರ್ನಾಟಕದ ಡ್ಯಾಂಗಳ ಇಂದಿನ ಸ್ಥಿತಿ ಹೇಗಿದೆ?

ಕರ್ನಾಟಕದಲ್ಲಿ ಮುಂಗಾರು ಮಳೆ ಕ್ಷೀಣಿಸಿದ್ದು, ರಾಜ್ಯದ ವಿವಿಧ ಜಿಲ್ಲೆಗಳ ಜಲಾಶಯಗಳ ಒಳಹರಿವಿನಲ್ಲಿ ಇಳಿಕೆ ಕಂಡುಬಂದಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ (KSNDMC) ದಿನನಿತ್ಯದ ವರದಿಯಂತೆ ಮಲೆನಾಡು ಭಾಗಗಳಲ್ಲಿ ಮಾತ್ರ ಸಾಧಾರಣ ಮಳೆಯಾಗುತ್ತಿದ್ದರೆ, ಬಹುತೇಕ ಭಾಗಗಳಲ್ಲಿ ಮಳೆಯ ಅಭಾವ ಮುಂದುವರಿದಿದೆ.

Karnataka Weather Forecast: ರಾಜ್ಯದಲ್ಲಿ ಮುಂದುವರಿದ ಮಳೆ; ಹಲವು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯ ಮುನ್ಸೂಚನೆ

Monsoon 2026: ಇಂದು ಕರ್ನಾಟಕದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಗಂಟೆಗೆ 30ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Karnataka Dam Water Level: ಪ್ರಮುಖ ಜಲಾಶಯಗಳ ನೀರಿನ ಮಟ್ಟದಲ್ಲಿ ಏರಿಕೆ, ಇಲ್ಲಿದೆ ವಿವರ

ಕರ್ನಾಟಕದ ಜಲಾಶಯಗಳ ನೀರಿನ ಮಟ್ಟ ಆಗಸ್ಟ್ 11: ರಾಜ್ಯದ ಪ್ರಮುಖ ಜಲಾಶಯಗಳಿಗೆ ಉತ್ತಮ ಪ್ರಮಾಣದಲ್ಲಿ ನೀರಿನ ಒಳಹರಿವು ಮುಂದುವರಿದಿದೆ. ಕೆಆರ್‌ಎಸ್‌ನಲ್ಲಿ 30.905 ಟಿಎಂಸಿ, ಕಬಿನಿಯಲ್ಲಿ 18.71 ಟಿಎಂಸಿ ಹಾಗೂ ಹೇಮಾವತಿಯಲ್ಲಿ 31.53 ಟಿಎಂಸಿ ನೀರು ಸಂಗ್ರಹವಾಗಿದೆ. ಆಲಮಟ್ಟಿ ಮತ್ತು ಬಸವಸಾಗರ ಜಲಾಶಯಗಳ ನೀರಿನ ಮಟ್ಟವೂ ಗರಿಷ್ಠ ಮಟ್ಟದ ಸಮೀಪದಲ್ಲಿದೆ.

ಪೋಷಕರೇ ಎಚ್ಚರ: ಬೆಂಗಳೂರಿನ ಹವಾಮಾನ ವೈಪರೀತ್ಯಕ್ಕೆ ಮಕ್ಕಳಲ್ಲಿ ಹೆಚ್ಚುತ್ತಿದೆ ವೈರಲ್ ಸೋಂಕು!

ಬೆಂಗಳೂರಿನಲ್ಲಿ ಮಳೆ ಹಾಗೂ ಬಿಸಿಲಿನ ಮಿಶ್ರಿತ ಹವಾಮಾನದಿಂದಾಗಿ ಮಕ್ಕಳಲ್ಲಿ ವೈರಲ್ ಜ್ವರ, ಕೆಮ್ಮು, ನೆಗಡಿ ಹಾಗೂ ಫುಡ್ ಪಾಯ್ಸನ್ ಪ್ರಕರಣಗಳು ತೀವ್ರವಾಗಿ ಹೆಚ್ಚಾಗುತ್ತಿವೆ. ಇದರ ನಡುವೆ ತೀವ್ರ ಸ್ವರೂಪದ ಚಂಡಿಪುರ ವೈರಸ್ ಭೀತಿ ಕೂಡ ಎದುರಾಗಿದ್ದು, ಮಕ್ಕಳಲ್ಲಿ ಹಠಾತ್ ಜ್ವರ ಅಥವಾ ಪ್ರಜ್ಞೆ ತಪ್ಪುವ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವಂತೆ ಆರೋಗ್ಯ ಸಚಿವರು ಪೋಷಕರಿಗೆ ಎಚ್ಚರಿಕೆ ನೀಡಿದ್ದಾರೆ.

Karnataka Weather Forecast: ನೈಋತ್ಯ ಮುಂಗಾರು ತುಸು ದುರ್ಬಲ, ಕರಾವಳಿ-ಒಳನಾಡಿನ ಕೆಲ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ

ಕರ್ನಾಟಕ ಹವಾಮಾನ ಮುನ್ಸೂಚನೆ ಆಗಸ್ಟ್ 11: ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧೆಡೆ ಅಬ್ಬರಿಸಿದ್ದ ನೈಋತ್ಯ ಮುಂಗಾರು ಇದೀಗ ತುಸು ದುರ್ಬಲಗೊಂಡಿದೆ. ಆದಾಗ್ಯೂ, ಕರಾವಳಿ ಕರ್ನಾಟಕ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದಲ್ಲಿ ಮುಂದುವರಿದ ಮಳೆಯ ಕೊರತೆ: ಶೇ.21ರಷ್ಟು ಕಡಿಮೆ ಸುರಿದ ವರ್ಷಧಾರೆ

ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಹಲವೆಡೆ ಮಳೆಯಾಗುತ್ತಿದ್ದರೂ ಮುಂಗಾರು ಆರಂಭದಿಂದ ಇದುವರೆಗಿನ ಒಟ್ಟಾರೆ ಮಳೆ ಕೊರತೆ ತೀವ್ರವಾಗಿದೆ. ಜೂನ್‌ 1ರಿಂದ ಆಗಸ್ಟ್ 9ರವರೆಗಿನ ಅವಧಿಯಲ್ಲಿ ಕರ್ನಾಟಕದಲ್ಲಿ ವಾಡಿಕೆಗಿಂತ ಶೇ. 21ರಷ್ಟು ಕಡಿಮೆ ಮಳೆ ದಾಖಲಾಗಿದೆ ಎಂದು ಹವಾಮಾನ ವರದಿಗಳು ತಿಳಿಸಿವೆ. ಬೆಂಗಳೂರು, ಮೈಸೂರು ಹಾಗೂ ವಿಜಯನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ತೀವ್ರ ಅಭಾವ ಎದುರಾಗಿದ್ದು, ಮಲೆನಾಡಿನಲ್ಲೂ ಪರಿಸ್ಥಿತಿ ಕಳವಳಕಾರಿಯಾಗಿದೆ.

ಬೆಂಗಳೂರಲ್ಲಿ ಅಬ್ಬರಿಸಿದ ವರುಣ: ಕೆರೆಗಳಂತಾದ ರಸ್ತೆಗಳು; ಸವಾರರು ಪರದಾಟ

ಬೆಂಗಳೂರಿನ ಹಲವೆಡೆ ಧಾರಾಕಾರ ಮಾನ್ಸೂನ್ ಮಳೆಯಿಂದಾಗಿ ರಸ್ತೆಗಳು ಕೆರೆಗಳಂತಾಗಿವೆ. ಮೆಜೆಸ್ಟಿಕ್, ರಾಜಾಜಿನಗರ, ಕೆ.ಆರ್. ಮಾರ್ಕೆಟ್ ಸೇರಿದಂತೆ ನಗರದ ವಿವಿಧೆಡೆ ನೀರು ನಿಂತು ವಾಹನ ಸವಾರರು ತೀವ್ರ ಪರದಾಟ ನಡೆಸಿದರು. ಭಾರೀ ಮಳೆಯು ನಗರದ ದೈನಂದಿನ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದೆ. ಸಾರ್ವಜನಿಕರು ಮಳೆ ನೀರು ನಿಂತ ರಸ್ತೆಗಳಲ್ಲಿ ಪ್ರಯಾಣಿಸಲು ಹರಸಾಹಸ ಪಡುವಂತಾಯಿತು.

ಮಡಿಕೇರಿಯ ಸ್ಟೋನ್ ಹಿಲ್‌ನಲ್ಲಿ ಭೂಕುಸಿತ: ಪೊಲೀಸ್ ವಸತಿಗೃಹಗಳತ್ತ ಕೊಚ್ಚಿಬಂತು ನೂರಾರು ಟನ್ ಕಸದ ರಾಶಿ!

ಕೊಡಗು ಜಿಲ್ಲೆಯ ಮಡಿಕೇರಿ ನಗರದ ಸ್ಟೋನ್ ಹಿಲ್ ಬೆಟ್ಟದಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, ಬೆಟ್ಟದ ಮೇಲಿದ್ದ ನೂರಾರು ಟನ್ ಕಸದ ರಾಶಿ ಕೆಳಭಾಗಕ್ಕೆ ಕೊಚ್ಚಿಹೋಗಿದೆ. ಬೆಟ್ಟದ ತುದಿಯಲ್ಲಿ ಅವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡುತ್ತಿದ್ದುದೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗಿದೆ. ಬೆಟ್ಟದ ತಪ್ಪಲಿನಲ್ಲಿಯೇ ಪೊಲೀಸ್ ವಸತಿ ಗೃಹಗಳಿದ್ದು, ಕಸದ ರಾಶಿ ಹಾಗೂ ಮಣ್ಣು ವಸತಿ ಸಮುಚ್ಚಯದತ್ತ ಧಾವಿಸುತ್ತಿರುವುದರಿಂದ ನಿವಾಸಿಗಳಲ್ಲಿ ತೀವ್ರ ಆತಂಕ ಎದುರಾಗಿದೆ.

  • Gopal AS
  • Updated on: Aug 10, 2026
  • 12:13 pm

Karnataka Dam Water Level: ರಾಜ್ಯದ ಪ್ರಮುಖ ಜಲಾಶಯಗಳಿಗೆ ಹೆಚ್ಚಿದ ಒಳಹರಿವು: ಭರ್ತಿಯ ಹಾದಿಯಲ್ಲಿ ಕಬಿನಿ, ಆಲಮಟ್ಟಿ ಡ್ಯಾಂ!

ಕರ್ನಾಟಕದ ಜಲಾಶಯಗಳ (ಆಗಸ್ಟ್ 10) ನೀರಿನ ಮಟ್ಟ: ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಜಲಾಶಯಗಳಿಗೆ ನೀರಿನ ಒಳಹರಿವು ಭಾರಿ ಪ್ರಮಾಣದಲ್ಲಿ ಹೆಚ್ಚಾಗಿದೆ. ವಿಜಯಪುರದ ಆಲಮಟ್ಟಿ ಡ್ಯಾಂಗೆ 89 ಸಾವಿರ ಕ್ಯೂಸೆಕ್ ಒಳಹರಿವಿದ್ದು, ಮೈಸೂರಿನ ಕಬಿನಿ ಜಲಾಶಯ ಭರ್ತಿಗೆ ಕೇವಲ ಒಂದು ಅಡಿ ಬಾಕಿಯಿದೆ. ಇತ್ತ ಕಾವೇರಿ ಕೊಳ್ಳದ ಕೆಆರ್‌ಎಸ್ ಜಲಾಶಯದ ಇಂದಿನ ನೀರಿನ ಮಟ್ಟ ಹಾಗೂ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Weather Forecast: ಕರಾವಳಿ ಸೇರಿ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 11ರವರೆಗೂ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ಆಗಸ್ಟ್ 10: ರಾಜ್ಯದ ಹಲವು ಜಿಲ್ಲೆಗಳಲ್ಲಿ ಆಗಸ್ಟ್ 10 ಮತ್ತು 11ರಂದು ಮುಂಗಾರು ಮಳೆ ಮುಂದುವರಿಯುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ ಇದ್ದು, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

Karnataka Weather Forecast: ಆ 13ರವರೆಗೆ ರಾಜ್ಯದಲ್ಲಿ ಮಳೆ; ಯಾವ ದಿನದಂದು ಎಲ್ಲೆಲ್ಲಿ ಮಳೆ; ಇಲ್ಲಿದೆ ಮಾಹಿತಿ

Monsoon 2026: ಸದ್ಯ ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಆಗಸ್ಟ್ 13ರವರೆಗೆ ಕರ್ನಾಟಕದಾದ್ಯಂತ ಮಳೆ ಮುನ್ಸೂಚನೆ ಇದೆ. ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ.