
Monsoon Rain
ಮಾನ್ಸೂನ್ ಮೂಲತಃ ಹಿಂದೂ ಮಹಾಸಾಗರ ಮತ್ತು ಅರಬ್ಬೀ ಸಮುದ್ರದಿಂದ ಭಾರತದ ನೈಋತ್ಯ ಕರಾವಳಿಗೆ ಬೀಸುವ ಗಾಳಿಯಾಗಿದೆ. ಇದು ಭಾರತ, ಪಾಕಿಸ್ತಾನ, ಬಾಂಗ್ಲಾದೇಶಗಳಿಗೆ ಮಳೆಯ ಮೋಡಗಳು ಚಲಿಸಲು ಕಾರಣವಾಗುತ್ತದೆ. ಇವುಗಳು ಕಾಲೋಚಿತ (ಸೀಸನಲ್) ಮಾರುತಗಳಾಗಿವೆ. ಇದು ಜೂನ್ ನಿಂದ ಸೆಪ್ಟೆಂಬರ್ ವರೆಗೆ ದಕ್ಷಿಣ ಏಷ್ಯಾ ಪ್ರದೇಶದಲ್ಲಿ ಸುಮಾರು ನಾಲ್ಕು ತಿಂಗಳುಗಳವರೆಗೆ ಸಕ್ರಿಯವಾಗಿರುತ್ತದೆ. ಮಾನ್ಸೂನ್ ಪದವನ್ನು ಮೊದಲು ಬ್ರಿಟಿಷ್ ಆಡಳಿತದ ಭಾರತದಲ್ಲಿ (ಇಂದಿನ ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶ) ಮತ್ತು ನೆರೆಯ ರಾಷ್ಟ್ರಗಳಲ್ಲಿ ಬಳಸಲಾಯಿತು. ಬಂಗಾಳ ಕೊಲ್ಲಿ ಮತ್ತು ಅರಬ್ಬೀ ಸಮುದ್ರದಿಂದ ಬೀಸುವ ದೊಡ್ಡ ಋತುಮಾನದ ಮಾರುತಗಳಿಗೆ ಇದನ್ನು ಬಳಸಲಾಗುತ್ತಿತ್ತು. ಇದು ನೈಋತ್ಯದಿಂದ ಬೀಸುತ್ತದೆ ಮತ್ತು ಮೇಲೆ ಉಲ್ಲೇಖಿಸಿದ ಪ್ರದೇಶಗಳಲ್ಲಿ ಭಾರೀ ಮಳೆಗೆ ಕಾರಣವಾಗುತ್ತದೆ.
Karnataka Weather: ಕರ್ನಾಟಕದಾದ್ಯಂತ ಮೈಕೊರೆವ ಚಳಿ, ಬೀದರ್ನಲ್ಲಿ ಅತ್ಯಂತ ಕನಿಷ್ಠ ಉಷ್ಣಾಂಶ
ಕರ್ನಾಟಕದಾದ್ಯಂತ ಮೈಕೊರೆವ ಚಳಿ ಮತ್ತೆ ಶುರುವಾಗಿದೆ, ಮಳೆಯ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ಚಳಿ ಜೋರಾಗಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಚಳಿ ಇರಲಿದ್ದು, ಒಣಹವೆ ಮುಂದುವರೆಯಲಿದೆ. ಮಂಗಳೂರು ಏರ್ಪೋರ್ಟ್ನಲ್ಲಿ ಮಳೆಯಾಗಿದೆ.
- Nayana Rajeev
- Updated on: Jan 21, 2025
- 7:19 am
Year End 2024: ಕರ್ನಾಟಕದಲ್ಲಿ ಸಂಭವಿಸಿದ ದುರಂತಗಳು, ನೈಸರ್ಗಿಕ ವಿಕೋಪಗಳು
2024ನೇ ಇಸವಿಯಲ್ಲಿ ಕರ್ನಾಟಕದಲ್ಲಿ ಅನೇಕ ದುರಂತಗಳು ಸಂಭವಿಸಿವೆ. ಉತ್ತರ ಕನ್ನಡದ ಶಿರೂರು ಗುಡ್ಡ ಕುಸಿತ, ವಿಜಯಪುರದಲ್ಲಿ ತೆಪ್ಪ ಮುಳುಗಡೆ, ತುಂಗಭದ್ರಾ ಜಲಾಶಯದ ಗೇಟ್ ಕಟ್, ಬಳ್ಳಾರಿಯಲ್ಲಿ ಬಾಣಂತಿಯರ ಸಾವು, ಮಂಗಳೂರಿನಲ್ಲಿ ಯುವತಿಯರ ಸಾವು ಮತ್ತು ಕೋಲಾರದ ವಿದ್ಯಾರ್ಥಿನಿಯರ ಸಾವು ಮುಂತಾದ ದುರಂತಗಳು ಜನರನ್ನು ಬೆಚ್ಚಿಬೀಳಿಸಿವೆ. ಈ ಘಟನೆಗಳಿಂದ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ.
- Vivek Biradar
- Updated on: Dec 13, 2024
- 4:08 pm
Karnataka Rains: ಮುಂದಿನ 48 ಗಂಟೆಗಳಲ್ಲಿ ಬೆಂಗಳೂರಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್
ಮುಂದಿನ ಎರಡು ದಿನಗಳಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
- Nayana Rajeev
- Updated on: Dec 11, 2024
- 7:38 am
Karnataka Rains: ಚಂಡಮಾರುತ: ಡಿ.13ರಿಂದ ಬೆಂಗಳೂರು ಸೇರಿ ಕರ್ನಾಟಕದ 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರಿ ಮಳೆ
ಕರ್ನಾಟಕದಾದ್ಯಂತ ಡಿಸೆಂಬರ್ 13ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮತ್ತೊಂದು ಚಂಡಮಾರುತ ಅಪ್ಪಳಿಸಲಿದ್ದು, ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
- Nayana Rajeev
- Updated on: Dec 9, 2024
- 7:39 am
Karnataka Rains: ಕರ್ನಾಟಕದ ಕರಾವಳಿ, ಶಿವಮೊಗ್ಗ, ಚಿಕ್ಕಮಗಳೂರು ಸೇರಿ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ
ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಡಿಸೆಂಬರ್ 14ರವರೆಗೂ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ವಿವಿಧೆಡೆ ಮತ್ತೆ ಮಳೆ ಶುರುವಾಗಿದೆ, ಕಳೆದ ವಾರ ಫೆಂಗಲ್ ಚಂಡಮಾರುತದಿಂದಾಗಿ ಬೆಂಗಳೂರು ಸೇರಿ ಹಲವೆಡೆ ಮಳೆಯಾಗಿತ್ತು. ಇದೀಗ ಹಿಂದೂ ಮಹಾಸಾಗರದಲ್ಲಿ ಮತ್ತೊಂದು ಚಂಡಮಾರುತ ಪರಿಚಲನೆ ಕಂಡುಬಂದಿದೆ.
- Nayana Rajeev
- Updated on: Dec 8, 2024
- 8:01 am
Karnataka Weather: ರಾಜ್ಯದೆಲ್ಲೆಡೆ ಇಣುಕಿ ಮಾಯವಾದ ಚಳಿ, ಮಳೆ ಕಡಿಮೆ, ಬಿಸಿಲು ಶುರು
ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿ ಚಳಿ ಶುರುವಾಗುತ್ತಿದ್ದಂತೆ ಫೆಂಗಲ್ ಚಂಡಮಾರುತದ ಅಬ್ಬರದಿಂದಾಗಿ ಮತ್ತೆ ಮಳೆಯಾಗಿ ಚಳಿ ಮಾಯವಾಗಿತ್ತು. ಇದೀಗ ಎಲ್ಲೆಡೆ ಬಿಸಿಲಿನ ತಾಪ ಜೋರಾಗಿದೆ, ಆದರೆ ಚಳಿಯ ಸುಳಿವೇ ಇಲ್ಲದಾಗಿದೆ. ಒಂದೆರಡು ದಿನಗಳಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದ್ದು, ಡಿಸೆಂಬರ್ 10ರವರೆಗೂ ಮುಂದುವರೆಯಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.
- Nayana Rajeev
- Updated on: Dec 6, 2024
- 7:40 am
Karnataka Rains: ಕರ್ನಾಟಕದ ಕರಾವಳಿ, ಬೆಂಗಳೂರು, ಶಿವಮೊಗ್ಗ ಸೇರಿ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿ.9ರವರೆಗೂ ಮಳೆ
ಫೆಂಗಲ್ ಚಂಡಮಾರುತ ದುರ್ಬಲವಾಗಿದ್ದರೂ ಅದರ ಪ್ರಭಾವ ಇನ್ನೂ ಕಡಿಮೆಯಾಗಿಲ್ಲ, ಕರ್ನಾಟಕದ ಹಲವೆಡೆ ಡಿಸೆಂಬರ್ 9ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಫೆಂಗಲ್ ಚಂಡಮಾರುತದ ದುರ್ಬಲವಾಗುತ್ತಿದೆ, ಆದರೂ ಕರ್ನಾಟಕದಾದ್ಯಂತ ಮಳೆಗೆ ಕಾರಣವಾಗುತ್ತಿದೆ. ಕರ್ನಾಟಕದ ಕರಾವಳಿ ಸೇರಿ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿಸೆಂಬರ್ 9ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
- Nayana Rajeev
- Updated on: Dec 5, 2024
- 7:41 am
Karnataka Weather: ಬೆಂಗಳೂರಲ್ಲಿ ಮೈಕೊರೆವ ಚಳಿ, ಚಂಡಮಾರುತ ಪ್ರಭಾವ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಚಂಡಮಾರುತದ ಪರಿಣಾಮದಿಂದಾಗಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ಕರ್ನಾಟಕದ ಮಲೆನಾಡು ಭಾಗಗಳು ಹಾಗೂ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮೈಕೊರೆವ ಚಳಿ ಶುರುವಾಗಿದೆ. ಮೋಡಕವಿದ ವಾತಾವರಣವೂ ಇರುವ ಕಾರಣ ಒಂದೆರಡು ದಿನ ಸಾಧಾರಣ ಮಳೆಯಾಗಬಹುದು ಎಂದು ಮುನ್ಸೂಚನೆ ನೀಡಲಾಗಿದೆ.
- Nayana Rajeev
- Updated on: Nov 28, 2024
- 7:37 am
Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನ 9 ಜಿಲ್ಲೆಗಳಲ್ಲಿ ಡಿಸೆಂಬರ್ 1ರಿಂದ ಮಳೆ
ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆ ಡಿಸೆಂಬರ್ 1ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರದಲ್ಲಿ ಮಳೆಯಾಗಲಿದೆ.
- Nayana Rajeev
- Updated on: Nov 26, 2024
- 7:27 am
Karnataka Rains: ಕರ್ನಾಟಕದ 17 ಜಿಲ್ಲೆಗಳಲ್ಲಿ ನವೆಂಬರ್ 27ರಿಂದ ಮಳೆ, ಚಳಿಯ ಪ್ರಮಾಣವೂ ಹೆಚ್ಚಳ
ಕರ್ನಾಟಕದ 17 ಜಿಲ್ಲೆಗಳಲ್ಲಿ ನವೆಂಬರ್ 27ರಿಂದ ಮತ್ತೆ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.
- Nayana Rajeev
- Updated on: Nov 24, 2024
- 8:12 am