AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Monsoon Rain

Monsoon Rain

ಮಾನ್ಸೂನ್ ಮೂಲತಃ ಹಿಂದೂ ಮಹಾಸಾಗರ ಮತ್ತು ಅರಬ್ಬೀ ಸಮುದ್ರದಿಂದ ಭಾರತದ ನೈಋತ್ಯ ಕರಾವಳಿಗೆ ಬೀಸುವ ಗಾಳಿಯಾಗಿದೆ. ಇದು ಭಾರತ, ಪಾಕಿಸ್ತಾನ, ಬಾಂಗ್ಲಾದೇಶಗಳಿಗೆ ಮಳೆಯ ಮೋಡಗಳು ಚಲಿಸಲು ಕಾರಣವಾಗುತ್ತದೆ. ಇವುಗಳು ಕಾಲೋಚಿತ (ಸೀಸನಲ್) ಮಾರುತಗಳಾಗಿವೆ. ಇದು ಜೂನ್ ನಿಂದ ಸೆಪ್ಟೆಂಬರ್ ವರೆಗೆ ದಕ್ಷಿಣ ಏಷ್ಯಾ ಪ್ರದೇಶದಲ್ಲಿ ಸುಮಾರು ನಾಲ್ಕು ತಿಂಗಳುಗಳವರೆಗೆ ಸಕ್ರಿಯವಾಗಿರುತ್ತದೆ. ಮಾನ್ಸೂನ್ ಪದವನ್ನು ಮೊದಲು ಬ್ರಿಟಿಷ್ ಆಡಳಿತದ ಭಾರತದಲ್ಲಿ (ಇಂದಿನ ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶ) ಮತ್ತು ನೆರೆಯ ರಾಷ್ಟ್ರಗಳಲ್ಲಿ ಬಳಸಲಾಯಿತು. ಬಂಗಾಳ ಕೊಲ್ಲಿ ಮತ್ತು ಅರಬ್ಬೀ ಸಮುದ್ರದಿಂದ ಬೀಸುವ ದೊಡ್ಡ ಋತುಮಾನದ ಮಾರುತಗಳಿಗೆ ಇದನ್ನು ಬಳಸಲಾಗುತ್ತಿತ್ತು. ಇದು ನೈಋತ್ಯದಿಂದ ಬೀಸುತ್ತದೆ ಮತ್ತು ಮೇಲೆ ಉಲ್ಲೇಖಿಸಿದ ಪ್ರದೇಶಗಳಲ್ಲಿ ಭಾರೀ ಮಳೆಗೆ ಕಾರಣವಾಗುತ್ತದೆ.

ಇನ್ನೂ ಹೆಚ್ಚು ಓದಿ

ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಮುಂದಿನ ಒಂದು ವಾರ ಮಳೆ

ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಚಳಿ ವಿಪರೀತವಾಗಿತ್ತು, ಭಾನುವಾರ ಅಲ್ಲಲ್ಲಿ ಕೊಂಚ ಮಳೆಯಾಗಿರುವ ಪರಿಣಾಮ ಚಳಿಯ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ. ಇಂದು ಸಂಜೆ ಕೂಡ ಮಳೆಯಾಗುವ ನಿರೀಕ್ಷೆ ಇದೆ. ಬೀದರ್, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿಯಲ್ಲಿ ಆಗೊಮ್ಮೆ ಈಗೊಮ್ಮೆ ಕೊಂಚ ಮಳೆಯಾಗಲಿದೆ, ವಿಜಯಪುರ, ಧಾರವಾಡ, ಬೆಳಗಾವಿಯಲ್ಲಿ ಒಣಹವೆ ಇರಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ರಾಯಲ್ಪಾಡುವಿನಲ್ಲಿ ಭಾನುವಾರ ಮಳೆಯಾಗಿದೆ.

Karnataka Weather: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷೆ, ಬೆಂಗಳೂರಿಗೂ ಮಳೆ ಮುನ್ಸೂಚನೆ

ಕರ್ನಾಟಕ ಹವಾಮಾನ, ಮಳೆ ಮುನ್ಸೂಚನೆ: ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಮಳೆ ಮುಂದುವರೆದಿದೆ. ಈ ಮಧ್ಯೆ ಇನ್ನೂ ಹಲವು ದಿನಗಳ ಕಾಲ ಇದೇ ರೀತಿ ಮಳೆ ಮುಂದುವರೆಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮತ್ತೊಂದೆಡೆ, ವರುಣನ ಆರ್ಭಟಕ್ಕೆ ಬೆಂಗಳೂರು ನಗರದಲ್ಲಿ ವ್ಯಾಪಾರ ವಹಿವಾಟು ಡಲ್ ಹೊಡೆಯುತ್ತಿದೆ.

ಉತ್ತರ ಕರ್ನಾಟಕ ಪ್ರವಾಹ, ಬೆಳೆಹಾನಿ: ಪ್ರಧಾನಿ ಮೋದಿ, ಶಾ ಜತೆ ಕುಮಾರಸ್ವಾಮಿ ಚರ್ಚೆ, ತಕ್ಷಣದ ಪರಿಹಾರಕ್ಕೆ ಆಗ್ರಹ

ಉತ್ತರ ಕರ್ನಾಟಕದಲ್ಲಿ ನಿರಂತರ ಮಳೆಯಿಂದಾಗಿ ಭಾರಿ ಬೆಳೆ ಹಾನಿಯಾಗಿ ರೈತರು ಸಂಕಷ್ಟದಲ್ಲಿದ್ದಾರೆ. ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಲಕ್ಷಾಂತರ ಹೆಕ್ಟೇರ್ ಬೆಳೆ ನಾಶವಾಗಿದೆ. ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರಿಗೆ ಮನವಿ ಮಾಡಿದ್ದು, ಕೇಂದ್ರದಿಂದ ಅಧ್ಯಯನ ತಂಡ ಕಳುಹಿಸಿ ತಕ್ಷಣ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.

  • Sunil MH
  • Updated on: Oct 11, 2025
  • 11:39 am

ಬೆಂಗಳೂರಿನಲ್ಲಿ ಮಳೆಯಲ್ಲೇ ರಸ್ತೆಗೆ ಡಾಂಬರೀಕರಣ: ಜಿಬಿಎ ಅಧಿಕಾರಿಗಳ ಮಹಾ ಎಡವಟ್ಟು

ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯ ನಡುವೆಯೂ ರಸ್ತೆ ಡಾಂಬರೀಕರಣ ಕಾರ್ಯ ನಡೆಸಿ ಜಿಬಿಎ ಅಧಿಕಾರಿಗಳು ಎಡವಟ್ಟು ಮಾಡಿದ್ದಾರೆ. ಕುಂದಲಹಳ್ಳಿ-ಶೋಭಾ ಡ್ರೀಮ್ಸ್ ರಸ್ತೆಯಲ್ಲಿ ಮಳೆಯಲ್ಲೇ ಡಾಂಬರು ಹಾಕುವ ಕೆಲಸ ನಡೆದಿದೆ. ಕಳಪೆ ಕಾಮಗಾರಿಯಿಂದ ಹೊಸದಾಗಿ ಹಾಕಿದ ರಸ್ತೆಗಳು ಒಂದು ವಾರದಲ್ಲೇ ಹದಗೆಟ್ಟಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಬೆಂಗಳೂರು ಮಳೆಗೆ ವಿಕ್ಟೋರಿಯಾ ರಸ್ತೆಯಲ್ಲಿ ಜಲತಾಂಡವ: ಕೆರೆಯಾಗಿ ಬದಲಾದ ರೀನಿಯಸ್ ಸ್ಟ್ರೀಟ್​ ರೋಡ್

Bangalore Rain Video: ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನ ವಿಕ್ಟೋರಿಯಾ ರಸ್ತೆ, ರೀನಿಯಸ್ ಸ್ಟ್ರೀಟ್ ಮತ್ತು ಸರ್ಜಾಪುರ ರಸ್ತೆಗಳು ಜಲಾವೃತಗೊಂಡಿವೆ. ರಸ್ತೆಗಳು ಕೆರೆಗಳಾಗಿ ಮಾರ್ಪಟ್ಟಿದ್ದು, ವಾಹನ ಸವಾರರು ತೀವ್ರ ಪರದಾಟ ನಡೆಸುತ್ತಿದ್ದಾರೆ. ದ್ವಿಚಕ್ರವಾಹನಗಳು ಕೆಟ್ಟು ನಿಂತು, ಸವಾರರು ಮನೆ ತಲುಪಲು ಹೆಣಗಾಡುತ್ತಿದ್ದಾರೆ. ಮೂರು ದಿನಗಳ ನಿರಂತರ ಮಳೆಯ ಮುನ್ಸೂಚನೆ ನಗರದ ಪರಿಸ್ಥಿತಿಯನ್ನು ಮತ್ತಷ್ಟು ಹದಗೆಡಿಸುವ ಆತಂಕ ಮೂಡಿಸಿದೆ.

Bangalore Rains: ಬೆಂಗಳೂರಿನಲ್ಲಿ ರಾತ್ರಿಯಿಡೀ ಮಳೆ ಅಬ್ಬರ, ಅಕ್ಟೋಬರ್ 13ರ ತನಕ ಯೆಲ್ಲೋ ಅಲರ್ಟ್

ಬೆಂಗಳೂರು ಮಳೆ: ಬೆಂಗಳೂರಿನಲ್ಲಿ ಶುಕ್ರವಾರ ರಾತ್ರಿ ಭಾರಿ ಮಳೆ ಸುರಿದಿದ್ದು, ರಾತ್ರಿ ಇಡೀ ಜಿಟಿಜಿಟಿ ಮಳೆಯಾಗಿದೆ. ಇದರಿಂದಾಗಿ ಹಲವೆಡೆ ಜನವಸತಿ ಪ್ರದೇಶಗಳಿಗೂ ನೀರು ನುಗ್ಗಿದೆ. ಮತ್ತೊಂದೆಡೆ, ಅಕ್ಟೊಬರ್ 13 ರವರೆಗೂ ಬೆಂಗಳೂರಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಎಲ್ಲೆಲ್ಲಿ ಮಳೆ ಅವಾಂತರಗಳಾಗಿವೆ ಎಂಬ ಮಾಹಿತಿ ಇಲ್ಲಿದೆ.

ನಾಳೆಯ ಹವಾಮಾನ: ಕರಾವಳಿಯಲ್ಲಿ ಮುಂದುವರಿಯಲಿದೆ ವರುಣನ ಅಬ್ಬರ, ಬೆಂಗಳೂರಲ್ಲೂ ರೇನ್​ ಅಲರ್ಟ್​

Karnataka Weather Tomorrow: ರಾಜ್ಯದಲ್ಲಿ ನಾಳೆಯೂ ವರುಣ ಅಬ್ಬರಿಸಲಿದ್ದು, ಕರಾವಳಿ ಮತ್ತು ಘಟ್ಟ ಪ್ರದೇಶದ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ರಾಜಧಾನಿ ಬೆಂಗಳೂರಲ್ಲೂ ನಾಳೆ ಮೋಡಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನದ ಬಳಿಕ ಗಾಳಿ ಸಹಿತ ಸಾಧಾರಣ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

Bangalore Rains: ಬೆಂಗಳೂರಿನಲ್ಲಿ ಮಳೆ: ರಸ್ತೆಯಲ್ಲಿ ನೀರು ನಿಂತು ಸವಾರರ ಪರದಾಟ

Bangalore Heavy Rains Effect: ರಾಜಧಾನಿ ಬೆಂಗಳೂರಿನಲ್ಲಿ ವರುಣ ಅಬ್ಬರಿಸಿದ್ದಾನೆ. ಏಕಾಏಕಿ ಸುರಿದ ಧಾರಾಕಾರ ಮಳೆಗೆ ಕೆಲವೆಡೆ ರಸ್ತೆಗಳು ಜಲಾವೃತವಾಗಿದ್ದು, ವಾಹನಸವಾರರು ಪರದಾಡಿದ ಪ್ರಸಂಗ ನಡೆದಿದೆ. ಸಂಜೆ ವೇಳೆಗೆ ಬೆಂಗಳೂರಲ್ಲಿ ಹೆಚ್ಚಿನ ಮಳೆಯ ನಿರೀಕ್ಷೆಯಿದ್ದು, ನಾಳೆಯೂ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಉತ್ತರ ಕರ್ನಾಟಕ ಪ್ರವಾಹ: ತಕ್ಷಣವೇ ಕೇಂದ್ರ ನೆರವಿಗೆ ಧಾವಿಸಬೇಕು, ಪ್ರಧಾನಿ ಮೋದಿಗೆ ಯತ್ನಾಳ್ ಮನವಿ

ಉತ್ತರ ಕರ್ನಾಟಕದಲ್ಲಿ ಭೀಮಾನದಿ ಪ್ರವಾಹದಿಂದ ಉಂಟಾದ ಭೀಕರ ಪರಿಸ್ಥಿತಿ ಕುರಿತು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. 117 ಗ್ರಾಮಗಳು ಜಲಾವೃತಗೊಂಡು, 10 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿ, ಸಾವಿರಾರು ಕುಟುಂಬಗಳು ಸಂಕಷ್ಟದಲ್ಲಿವೆ. ಕೇಂದ್ರ ಸರ್ಕಾರ ತಕ್ಷಣದ ಪರಿಹಾರ ಮತ್ತುಆರ್ಥಿಕ ನೆರವು ಬಿಡುಗಡೆ ಮಾಡಬೇಕೆಂದು ಅವರು ಮನವಿ ಮಾಡಿದ್ದಾರೆ.

ಕಾಂತಾರ ನೋಡಲು ಹೋಗಿದ್ದ ಇಬ್ಬರು ನೀರುಪಾಲು: ಕರ್ನಾಟಕದಲ್ಲಿ ಪ್ರತ್ಯೇಕ ದುರಂತಗಳಲ್ಲಿ 6 ಮಂದಿ ಜಲಸಮಾಧಿ

ಕಾಂತಾರ ಸಿನಿಮಾ ನೋಡಲೆಂದು ಹೋಗಿದ್ದ ಇಬ್ಬರು ನಾಲೆಯಲ್ಲಿ ಈಜಲು ಹೋಗಿ ನೀರುಪಾಲಾದ ಘಟನೆ ರಾಯಚೂರು ಜಿಲ್ಲೆಯಲ್ಲಿ ಸಂಭವಿಸಿದೆ. ದನ ಮೇಯಿಸಲು ಹೋಗಿದ್ದವರು, ಆಟವಾಡಲು ಹೋಗಿದ್ದ ಮಕ್ಕಳು, ಹೀಗೆ ಒಟ್ಟಾರೆಯಾಗಿ ರಾಜ್ಯದಲ್ಲಿ ಮಳೆ ಸಂಬಂಧಿ ಅವಘಡಗಳಿಂದ ನೀರುಪಾಲಾಗಿ 6 ಮಂದಿ ಇಹಲೋಕ ತ್ಯಜಿಸಿದ್ದಾರೆ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ