Monsoon Rain

Monsoon Rain

ಮಾನ್ಸೂನ್ ಮೂಲತಃ ಹಿಂದೂ ಮಹಾಸಾಗರ ಮತ್ತು ಅರಬ್ಬೀ ಸಮುದ್ರದಿಂದ ಭಾರತದ ನೈಋತ್ಯ ಕರಾವಳಿಗೆ ಬೀಸುವ ಗಾಳಿಯಾಗಿದೆ. ಇದು ಭಾರತ, ಪಾಕಿಸ್ತಾನ, ಬಾಂಗ್ಲಾದೇಶಗಳಿಗೆ ಮಳೆಯ ಮೋಡಗಳು ಚಲಿಸಲು ಕಾರಣವಾಗುತ್ತದೆ. ಇವುಗಳು ಕಾಲೋಚಿತ (ಸೀಸನಲ್) ಮಾರುತಗಳಾಗಿವೆ. ಇದು ಜೂನ್ ನಿಂದ ಸೆಪ್ಟೆಂಬರ್ ವರೆಗೆ ದಕ್ಷಿಣ ಏಷ್ಯಾ ಪ್ರದೇಶದಲ್ಲಿ ಸುಮಾರು ನಾಲ್ಕು ತಿಂಗಳುಗಳವರೆಗೆ ಸಕ್ರಿಯವಾಗಿರುತ್ತದೆ. ಮಾನ್ಸೂನ್ ಪದವನ್ನು ಮೊದಲು ಬ್ರಿಟಿಷ್ ಆಡಳಿತದ ಭಾರತದಲ್ಲಿ (ಇಂದಿನ ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶ) ಮತ್ತು ನೆರೆಯ ರಾಷ್ಟ್ರಗಳಲ್ಲಿ ಬಳಸಲಾಯಿತು. ಬಂಗಾಳ ಕೊಲ್ಲಿ ಮತ್ತು ಅರಬ್ಬೀ ಸಮುದ್ರದಿಂದ ಬೀಸುವ ದೊಡ್ಡ ಋತುಮಾನದ ಮಾರುತಗಳಿಗೆ ಇದನ್ನು ಬಳಸಲಾಗುತ್ತಿತ್ತು. ಇದು ನೈಋತ್ಯದಿಂದ ಬೀಸುತ್ತದೆ ಮತ್ತು ಮೇಲೆ ಉಲ್ಲೇಖಿಸಿದ ಪ್ರದೇಶಗಳಲ್ಲಿ ಭಾರೀ ಮಳೆಗೆ ಕಾರಣವಾಗುತ್ತದೆ.

ಇನ್ನೂ ಹೆಚ್ಚು ಓದಿ

ಪ್ರವಾಸಿಗರ ಗಮನಕ್ಕೆ: ದುಬಾರೆ ಪ್ರವಾಸಿ ತಾಣ ಬೆನ್ನಲ್ಲೇ ಈಗ ಕೊಡಗಿನ ಗ್ಲಾಸ್ ಬ್ರಿಡ್ಜ್ ಬಂದ್!

ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಎಡಬಿಡದೇ ವರುಣ ಅಬ್ಬರಿಸುತ್ತಿದ್ದಾನೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಕೊಡಗಿನ ಕೆಲ ಪ್ರವಾಸಿಗಳಿಗೆ ಸಾರ್ವಜನಿಕರ ಭೇಟಿ ನಿಷೇಧಿಸಲಾಗಿದೆ. ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ಬಳಿ ಇರುವ ದುಬಾರೆ ಪ್ರವಾಸಿ ತಾಣಕ್ಕೆ ಅರಣ್ಯ ಇಲಾಖೆ ನಿಷೇಧ ಹೇರಿದೆ. ಇದರ ಬೆನ್ನಲ್ಲೇ ಇದೀಗ ಗ್ಲಾಸ್ ಬ್ರಿಡ್ಜ್ ಬಂದ್ ಮಾಡಲಾಗಿದೆ.

  • Gopal AS
  • Updated on: Jun 28, 2024
  • 6:32 pm

Bengaluru Rains: ಮೆಜೆಸ್ಟಿಕ್​ ಸೇರಿ ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ಮೈಸೂರು ರಸ್ತೆಯಲ್ಲಿ ಟ್ರಾಫಿಕ್‌ ಜಾಮ್​

ಸುಮಾರು ಒಂದು ವಾರದ ಬಳಿಕ ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿದಿದೆ. ಆರ್​.ಆರ್​ ನಗರ, ನಾಯಂಡಳ್ಳಿ, ಸ್ಯಾಟ್‌ಲೈಟ್, ಸೇರಿದಂತೆ ಹಲವೆಡೆ ಜೋರು ಮಳೆ ಆಗಿದೆ. ಮೈಸೂರು ರಸ್ತೆಯಲ್ಲಿ ಟ್ರಾಫಿಕ್‌ ಜಾಮ್ ಕೂಡ ಉಂಟಾಗಿತ್ತು. ಮಳೆ ಹಿನ್ನಲೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಗರದಲ್ಲಿ ಕೇವಲ ಮೋಡ ಕವಿದ ವಾತಾವರಣ ಮಾತ್ರ ಇತ್ತು.

ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮುಂದುವರೆದ ಮಳೆ ಆರ್ಭಟ: ಭಾವಿ ಕುಸಿತ, ಕಳಸ-ಹೊರನಾಡು ಮಾರ್ಗ ಬಂದ್​ ಸಾಧ್ಯತೆ

ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಇದರಿಂದ ಕುಮಾರಧಾರಾ, ಕಾವೇರಿ, ತುಂಗಾ, ಲಕ್ಷ್ಮಣತೀರ್ಥ, ಸುವರ್ಣಾ ಸೇರಿ ಹಲವು ನದಿಗಳು ಮೈದುಂಬಿ ಹರಿಯುತ್ತಿವೆ. ಅಲ್ಲದೆ ಮಳೆಯಿಂದ ಸಾಕಷ್ಟು ಅವಾಂತರ ಸೃಷ್ಟಿಯಾಗುತ್ತಿವೆ. ಈ ಕುರಿತಾದ ಒಂದು ವರದಿ ಇಲ್ಲಿದೆ ಓದಿ

ಕರ್ನಾಟಕದಾದ್ಯಂತ ಮುಂದುವರಿದ ಮಳೆ ಅಬ್ಬರ; ರಾಜ್ಯದಲ್ಲಿ ಇನ್ನೂ 4 ದಿನ ಭಾರಿ ಮಳೆ

ಕರ್ನಾಟಕದಾದ್ಯಂತ ಕಳೆದ ಕೆಲವು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮಳೆಯಿಂದ ಭಾರಿ ಅನಾಹುತ ಸಂಭವಿಸಿದೆ. ಅತ್ತ ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗಗಳಲ್ಲಿಯೂ ಮಳೆಯಾಗುತ್ತಿದೆ. ನದಿಗಳು ಉಕ್ಕಿ ಹರಿಯುತ್ತಿವೆ. ಜಲಪಾತಗಳು ಧುಮ್ಮಿಕ್ಕಿ ಹರಿಯುತ್ತಿವೆ. ರಾಜ್ಯದ ಎಲ್ಲೆಲ್ಲಿ ಮಳೆ ಪರಿಸ್ಥಿತಿ ಹೇಗಿದೆ? ಮುಂದಿನ ಕೆಲವು ದಿನಗಳು ಹವಾಮಾನ ಇಲಾಖೆ ಯಾವ ಜಿಲ್ಲೆಗೆ ಯಾವ ಅಲರ್ಟ್ ನೀಡಿದೆ ಎಂಬ ವರದಿ ಇಲ್ಲಿದೆ.

ಸೆ.15ರವರೆಗೆ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ಇಲ್ಲಿದೆ ಬದಲಿ ಮಾರ್ಗ

ಕರ್ನಾಟಕದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದೆ ಅದರಲ್ಲೂ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಲ್ಲೆಡೆ ಅವಾಂತರಗಳು ಸೃಷ್ಟಿಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಇನ್ನು ಮುಂಜಾಗ್ರತಾ ಕ್ರಮವಾಗಿ ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಹಾಗಾದ್ರೆ, ಎಷ್ಟು ದಿನಗಳ ಕಾಲ ನಿಷೇಧ ಎನ್ನುವ ವಿವರ ಇಲ್ಲಿದೆ.

ಮಳೆ…ಮಳೆ…ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯೂ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಕರಾವಳಿ ಭಾಗದಲ್ಲಿ ಮುಂಗಾರು ಮಳೆ ಆರ್ಭಟ ಮುಂದುವರಿದಿದೆ. ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ಆದ್ರೆ, ಕಳೆದ ಎರಡ್ಮೂರು ದಿನನಗಳಲ್ಲಿ ವರುಣ ಅಬ್ಬರ ಹೆಚ್ಚಾಗಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು, ನಾಳೆಯೂ (ಜೂನ್ 28) ಸಹ ರೆಡ್​ ಅಲರ್ಟ್​ ಘೋಷಣೆ ಮಾಡಲಾಗಿದೆ. ಹೀಗಾಗಿ ಶುಕ್ರವಾರವೂ ಸಹ ದಕ್ಷಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ತುಂಗಾ ಜಲಾಶಯ ಸಂಪೂರ್ಣ ಭರ್ತಿ, ಮೈದುಂಬಿ ಧುಮುಕುತ್ತಿರುವ ಜೋಗ್ ಫಾಲ್ಸ್

ಕರ್ನಾಟಕದಲ್ಲಿ ಮುಂಗಾರು ಮಳೆ ಭರ್ಜರಿ ಆರಂಭವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ಮಲೆನಾಡು ಮತ್ತು ಕರಾವಳಿ ಭಾಗದ ಜಿಲ್ಲೆಗಳಲ್ಲಿ ಎಡಬಿಡದೇ ಮಳೆ ದೋ ಅಂತ ಸುರಿಯುತ್ತಿದೆ. ಇನ್ನು ಮೊದಲ ಮುಂಗಾರು ಮಳೆಗೆ ಶಿವಮೊಗ್ಗದ ತುಂಗಾ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಮತ್ತೊಂದೆಡೆ ವಿಶ್ವ ಪ್ರಸಿದ್ಧ ಜೋಗ ಜಲಪಾತದಲ್ಲಿ ಜೀವ ಕಳೆ ಬಂದಿದ್ದು, ಮೈದುಂಬಿ ಧುಮುಕುತ್ತಿದೆ.

ಮಳೆ..ಮಳೆ..ಕರಾವಳಿ ಭಾಗಕ್ಕೆ ರೆಡ್​, ಮಲೆನಾಡಿಗೆ ಆರೆಂಜ್ ಅಲರ್ಟ್: ಬೆಂಗಳೂರಿನಲ್ಲಿ ವಾತಾವರಣ ಬದಲಾವಣೆ

ಕರಾವಳಿ, ಮಲೆನಾಡನಲ್ಲಿ ಮಳೆರಾಯ ಆರ್ಭಟಿಸುತ್ತಿದ್ದಾನೆ. ಕೆಲ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದರೆ ಮತ್ತೆ ಕೆಲ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಭಾರೀ ಮಳೆ ಹಿನ್ನಲ್ಲೆ ಬೆಂಗಳೂರಿನ ವಾತಾವರಣದಲ್ಲಿ ಬದಲಾವಣೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಇಲಾಖೆ ತಿಳಿಸಿದೆ. ನಗರದಲ್ಲಿ ಕೇವಲ ಮೋಡ ಕವಿದ ವಾತಾವರಣವಿದ್ದು, ಒಂದು ಹನಿ ಮಳೆ ಆಗಿಲ್ಲ.

ತುಂಬಿ ಹರಿಯುತ್ತಿರುವ ಕುಮಾರಧಾರ, ನೇತ್ರಾವತಿ: ನದಿಗಳಿಗೆ ಇಳಿಯದಂತೆ ಜಿಲ್ಲಾಡಳಿತ ಸೂಚನೆ

ಕರ್ನಾಟಕದಲ್ಲಿ ಮುಂಗಾರು ಮಳೆ ಜೋರಾಗಿದೆ. ರಾಜ್ಯಾದ್ಯಂತ ಉತ್ತಮ ಮಳೆಯಾಗುತ್ತಿರುವುದರಿಂದ ನದಿಗಳಿಗೆ ಒಳ ಹರಿವು ಹೆಚ್ಚಿದೆ. ಇದರಿಂದ ನದಿಗಳು ತುಂಬಿ ಹರಿಯುತ್ತಿವೆ. ಈ ಹೊತ್ತಿನಲ್ಲಿ ನದಿಗಳಿಗೆ ಇಳಿಯದಂತೆ ಜಿಲ್ಲಾಡಳಿತಗಳು ಸೂಚನೆ ನೀಡುತ್ತಿವೆ. ಈ ಕುರಿತ ಮಾಹಿತಿ ಇಲ್ಲಿದೆ.

ಉಡುಪಿ, ಮಂಗಳೂರಿನಲ್ಲಿ ಭಾರಿ ಮಳೆ; ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಡೆ, ಮಂಗಳೂರಿನಲ್ಲಿಬ್ಬರು ಸಾವು

ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಅದರಲ್ಲೂ ಚಿಕ್ಕಮಗಳೂರು, ಉಡುಪಿ, ಮಂಗಳೂರು, ಮಡಿಕೇರಿ ಭಾಗದಲ್ಲಿ ವರುಣನ ಆರ್ಭಟ ಜೋರಾಗಿದ್ದು ರಸ್ತೆ, ಸೇತುವೆಗಳು ಮುಳುಗಿವೆ. ಮಡಿಕೇರಿ, ಮಂಗಳೂರಿನಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ಸ್ನಾನಘಟ್ಟ ಮುಳುಗಿದ್ದು ನದಿಗಿಳಿಯದಂತೆ ಭಕ್ತಾದಿಗಳಿಗೆ ಸೂಚನೆ‌ ನೀಡಲಾಗಿದೆ.