Monsoon Rain
ಮಾನ್ಸೂನ್ ಮೂಲತಃ ಹಿಂದೂ ಮಹಾಸಾಗರ ಮತ್ತು ಅರಬ್ಬೀ ಸಮುದ್ರದಿಂದ ಭಾರತದ ನೈಋತ್ಯ ಕರಾವಳಿಗೆ ಬೀಸುವ ಗಾಳಿಯಾಗಿದೆ. ಇದು ಭಾರತ, ಪಾಕಿಸ್ತಾನ, ಬಾಂಗ್ಲಾದೇಶಗಳಿಗೆ ಮಳೆಯ ಮೋಡಗಳು ಚಲಿಸಲು ಕಾರಣವಾಗುತ್ತದೆ. ಇವುಗಳು ಕಾಲೋಚಿತ (ಸೀಸನಲ್) ಮಾರುತಗಳಾಗಿವೆ. ಇದು ಜೂನ್ ನಿಂದ ಸೆಪ್ಟೆಂಬರ್ ವರೆಗೆ ದಕ್ಷಿಣ ಏಷ್ಯಾ ಪ್ರದೇಶದಲ್ಲಿ ಸುಮಾರು ನಾಲ್ಕು ತಿಂಗಳುಗಳವರೆಗೆ ಸಕ್ರಿಯವಾಗಿರುತ್ತದೆ. ಮಾನ್ಸೂನ್ ಪದವನ್ನು ಮೊದಲು ಬ್ರಿಟಿಷ್ ಆಡಳಿತದ ಭಾರತದಲ್ಲಿ (ಇಂದಿನ ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶ) ಮತ್ತು ನೆರೆಯ ರಾಷ್ಟ್ರಗಳಲ್ಲಿ ಬಳಸಲಾಯಿತು. ಬಂಗಾಳ ಕೊಲ್ಲಿ ಮತ್ತು ಅರಬ್ಬೀ ಸಮುದ್ರದಿಂದ ಬೀಸುವ ದೊಡ್ಡ ಋತುಮಾನದ ಮಾರುತಗಳಿಗೆ ಇದನ್ನು ಬಳಸಲಾಗುತ್ತಿತ್ತು. ಇದು ನೈಋತ್ಯದಿಂದ ಬೀಸುತ್ತದೆ ಮತ್ತು ಮೇಲೆ ಉಲ್ಲೇಖಿಸಿದ ಪ್ರದೇಶಗಳಲ್ಲಿ ಭಾರೀ ಮಳೆಗೆ ಕಾರಣವಾಗುತ್ತದೆ.
Karnataka Weather Forecast: ಬೆಂಗಳೂರಿನಲ್ಲಿಂದು ಭಾರೀ ಮಳೆ! 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Monsoon 2026:ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಮಳೆ ಚುರುಕಾಗಿದ್ದು, ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಕೊಡಗು ಸೇರಿದಂತೆ 8 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಭಾರಿ ಮಳೆಯ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಇನ್ನುಳಿದಂತೆ ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಗಂಟೆಗೆ 40-50 ಕಿ.ಮೀ ವೇಗದ ಬಿರುಗಾಳಿ ಹಾಗೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
- Bhavana Hegde
- Updated on: May 31, 2026
- 7:20 am
Karnataka Weather Forecast: ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ!
Monsoon 2026: ಕರ್ನಾಟಕದ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರೈತರು ಮತ್ತು ಸಾರ್ವಜನಿಕರು ಸಿಡಿಲಿನ ಬಗ್ಗೆ ಎಚ್ಚರದಿಂದಿರಲು ಸೂಚಿಸಲಾಗಿದೆ. ಒಳನಾಡಿನ ಕೆಲವು ಭಾಗಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ.
- Bhavana Hegde
- Updated on: May 30, 2026
- 7:39 am
Bangaluru Rain: ಬೆಂಗಳೂರಲ್ಲಿ ವರುಣಾರ್ಭಟ: ರಸ್ತೆಗಳು ಜಲಾವೃತ, ಸಂಚಾರ ವ್ಯತ್ಯಯ
ಬೆಂಗಳೂರು ಮಳೆ: ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ಧಾರಾಕಾರ ಮಳೆ ಸುರಿದಿದ್ದು, ನಗರದ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಮೆಜೆಸ್ಟಿಕ್, ಜಯನಗರ, ರಾಜಾಜಿನಗರ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಮಳೆಯಿಂದ ಸಂಚಾರ ದಟ್ಟಣೆ ಉಂಟಾಗಿದೆ. ಇನ್ನು ಮುನ್ನೆಚ್ಚರಿಕೆ ಕ್ರಮವಾಗಿ ಬ್ಯಾರಿಕೇಡ್ ಅಳವಡಿಸಿ ಮುಳುಗಡೆಯಾಗುವ ಅಂಡರ್ಪಾಸ್ ಬಂದ್ ಮಾಡಲಾಗಿದೆ.
- Gangadhar Saboji
- Updated on: May 29, 2026
- 8:30 pm
Bengaluru Rain Effect: ಮೆಟ್ರೋ ನಿಲ್ದಾಣದ ರಸ್ತೇಲಿ 3 ಅಡಿಯಷ್ಟು ನಿಂತ ಮಳೆನೀರು! ವಾಹನ ಸವಾರರ ಪರದಾಟ
ಬೆಂಗಳೂರು ನಗರದಲ್ಲಿ ಸುರಿದ ಭಾರೀ ಮಳೆಯು ಮತ್ತೆ ಅವಾಂತರ ಸೃಷ್ಟಿಸಿದೆ. ತಾವರೆಕೆರೆ ಮೆಟ್ರೋ ನಿಲ್ದಾಣದ ಬಳಿ, ಬನ್ನೇರಘಟ್ಟ ರಸ್ತೆಯಲ್ಲಿ ಎರಡರಿಂದ ಮೂರು ಅಡಿಯಷ್ಟು ನೀರು ಸಂಗ್ರಹವಾಗಿದೆ. ನಿನ್ನೆ ರಾತ್ರಿ 7 ಗಂಟೆಗೆ ಸುರಿದ ಮಳೆಯ ಪರಿಣಾಮವಾಗಿ ಈ ಪರಿಸ್ಥಿತಿ ನಿರ್ಮಾಣವಾಗಿದ್ದು, ಮಧ್ಯರಾತ್ರಿ ಕಳೆದರೂ ನೀರು ಇಳಿದಿಲ್ಲ. ಬನ್ನೇರಘಟ್ಟದಿಂದ ಬೆಂಗಳೂರಿಗೆ ಬರುವ ಮತ್ತು ಬೆಂಗಳೂರಿನಿಂದ ಬನ್ನೇರಘಟ್ಟಕ್ಕೆ ಹೋಗುವ ಎರಡೂ ರಸ್ತೆಗಳಲ್ಲೂ ನೀರು ನಿಂತಿದೆ. ಇದರಿಂದಾಗಿ ವಾಹನ ಸವಾರರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ.
- Bhavana Hegde
- Updated on: May 29, 2026
- 8:54 am
Karnataka Weather Forecast: ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ, ಬಿರುಗಾಳಿಯ ಆರ್ಭಟ!
Monsoon 2026: ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ, ಉತ್ತರ ಒಳನಾಡು ಮತ್ತು ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 60 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಸಾರ್ವಜನಿಕರು ಹಾಗೂ ರೈತರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ.
- Bhavana Hegde
- Updated on: May 29, 2026
- 7:46 am
Karnataka Weather Forecast: ಮುಂದಿನ ಕೆಲವು ದಿನಗಳಲ್ಲಿ ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ
Monsoon 2026: ಕರ್ನಾಟಕದಾದ್ಯಂತ ಮುಂದಿನ ಕೆಲವು ದಿನಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ, ಉತ್ತರ ಒಳನಾಡು ಮತ್ತು ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 60 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಸಾರ್ವಜನಿಕರು ಹಾಗೂ ರೈತರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ.
- Bhavana Hegde
- Updated on: May 28, 2026
- 7:04 am
ಸೋರುತಿಹುದು ಏರ್ಪೋರ್ಟ್ ಮಾಳಿಗಿ! ಭಾರಿ ಮಳೆಗೆ ಮತ್ತೆ ಸೋರಿದ ಟರ್ಮಿನಲ್ 1ರ ಮೇಲ್ಛಾವಣಿ, ವಿಡಿಯೋ ವೈರಲ್
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ರಾತ್ರಿ ಸುರಿದ ಭಾರಿ ಮಳೆಗೆ ಟರ್ಮಿನಲ್-1ರ ಮೇಲ್ಛಾವಣಿ ಮತ್ತೆ ಸೋರಿದ್ದು, ಒಳಗೆಲ್ಲ ನೀರು ತುಂಬಿ ಪ್ರಯಾಣಿಕರು ಪರದಾಡುವಂತಾಯಿತು. ಭಾರಿ ಮಳೆ ಹಾಗೂ ಟರ್ಮಿನಲ್ ಒಳಗೆ ನೀರು ಸೋರುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.
- Naveen Kumar
- Updated on: May 27, 2026
- 7:45 am
Karnataka Weather Forecast: ಬೆಂಗಳೂರು, ಬಾಗಲಕೋಟೆ ಸೇರಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, ಆರೆಂಜ್ ಅಲರ್ಟ್ ಘೋಷಣೆ!
Monsoon 2026: ಕರ್ನಾಟಕದ ಬಾಗಲಕೋಟೆ, ಕಲಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಸನ, ಕೊಡಗು ಹಾಗೂ ಮೈಸೂರಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಸಾರ್ವಜನಿಕರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯಲು ಹವಾಮಾನ ಇಲಾಖೆ ಸೂಚಿಸಿದೆ.
- Bhavana Hegde
- Updated on: May 27, 2026
- 7:31 am
ವರುಣಾರ್ಭಟಕ್ಕೆ 6 ವರ್ಷದ ಕಂದಮ್ಮ ಬಲಿ: ಬೆಂಗಳೂರಿನಲ್ಲಿ ಧರೆಗುರುಳಿದ ಬೃಹತ್ ಮರಗಳು, ವಿಮಾನ ಸಂಚಾರದಲ್ಲಿ ವ್ಯತ್ಯಯ
Karnataka Rains: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅನೇಕ ಅವಾಂತರಗಳನ್ನು ಸೃಷ್ಟಿಸಿದ್ದು, ಬೀದರ್ನಲ್ಲಿ ಮೇಲ್ಛಾವಣಿ ಕುಸಿದು 6 ವರ್ಷದ ಮಗು ಮೃತಪಟ್ಟರೆ, ಬೆಂಗಳೂರಿನಲ್ಲಿ ಬಿರುಗಾಳಿಗೆ ಹತ್ತಾರು ಮರಗಳು ಧರೆಗುರುಳಿವೆ. ಮಂಗಳವಾರ ರಾತ್ರಿ ಸುರಿದ ಮಳೆಗೆ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್-1 ಸೋರಿಕೆಯಾಗಿ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದರು.
- Ganapathi Sharma
- Updated on: May 27, 2026
- 7:21 am
Karnataka Weather Forecast: ತಿಂಗಳಾಂತ್ಯದವರೆಗೂ ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಮುಂಗಾರು ಮಳೆ: ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದ ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಕಳೆದ ಎರಡು ವಾರಗಳಿಂದ ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆ ಇನ್ನಷ್ಟು ತೀವ್ರಗೊಳ್ಳುವ ಸಾದ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಮೂರ್ನಾಲ್ಕು ದಿನ ರಾಜ್ಯದ ಹಲವೆಡೆ ಮಿಂಚು ಹಾಗೂ ತೀವ್ರ ವೇಗದ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು IMD ಮುನ್ನೆಚ್ಚರಿಕೆ ನೀಡಿದೆ.
- Ramesh B Jawalagera
- Updated on: May 26, 2026
- 5:16 pm
ಮಂಗಳೂರು: ಮಳೆಗಾಲದ ಮುಂಜಾಗ್ರತಾ ಕ್ರಮಗಳ ನಿರ್ಲಕ್ಷ್ಯ ಆರೋಪ, ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಶಾಸಕ ವೇದವ್ಯಾಸ್ ಕಾಮತ್ ಕಿಡಿ!
ಮಂಗಳೂರು ನಗರದಲ್ಲಿ ಮುಂಗಾರು ಮಳೆ ಎದುರಿಸಲು ಪೂರ್ವಸಿದ್ಧತೆಗಳು ಸಮರ್ಪಕವಾಗಿ ನಡೆದಿಲ್ಲ ಎಂದು ಆರೋಪಿಸಿ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಚಾರ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ.
- Ashok
- Updated on: May 25, 2026
- 4:55 pm
Karnataka Weather Forecast: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವರುಣಾರ್ಭಟ! 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Monsoon 2026: ಕರ್ನಾಟಕದಾದ್ಯಂತ ಮುಂಗಾರು ಪೂರ್ವ ಮಳೆ ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದ್ದು, 'ಯೆಲ್ಲೋ ಅಲರ್ಟ್' ಘೋಷಿಸಲಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
- Bhavana Hegde
- Updated on: May 25, 2026
- 7:29 am