AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni

MS Dhoni

ತನ್ನ ಚಾಣಾಕ್ಷ ನಾಯಕತ್ವದಿಂದ ಭಾರತಕ್ಕೆ ಎರಡೆರಡು ವಿಶ್ವಕಪ್ ಗೆಲ್ಲಿಸಿಕೊಟ್ಟ ಶ್ರೇಯ ಕ್ಯಾಪ್ಟನ್ ಕೂಲ್ ಮಹೇಂದ್ರ ಸಿಂಗ್ ಧೋನಿಗೆ ಸಲ್ಲುತ್ತದೆ. ಎಂ.ಎಸ್.ಧೋನಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ದೇಶ ಮತ್ತು ವಿದೇಶಗಳಲ್ಲಿ ಅನೇಕ ಸರಣಿಗಳನ್ನು ಗೆದ್ದಿದೆ. ಧೋನಿ ಎಲ್ಲಾ ಸ್ವರೂಪಗಳಲ್ಲಿ ಹೆಚ್ಚಿನ ಪಂದ್ಯಗಳನ್ನು ಗೆದ್ದ ದಾಖಲೆಯನ್ನು ಸಹ ಹೊಂದಿದ್ದಾರೆ. ಅಷ್ಟೇ ಅಲ್ಲ .. ಮೂರು ಐಸಿಸಿ ಟ್ರೋಫಿಗಳನ್ನು ಗೆದ್ದ ಏಕೈಕ ನಾಯಕ ಧೋನಿ. ಧೋನಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಏಕದಿನ ವಿಶ್ವಕಪ್ (2011), ಟಿ 20 ವಿಶ್ವಕಪ್ (2007) ಮತ್ತು ಚಾಂಪಿಯನ್ಸ್ ಟ್ರೋಫಿ (2013) ಗೆದ್ದಿದೆ. ಧೋನಿ 332 ಪಂದ್ಯಗಳಲ್ಲಿ ಭಾರತ ತಂಡದ ನಾಯಕತ್ವ ವಹಿಸಿದ್ದರು. ಧೋನಿ ನಾಯಕತ್ವದಲ್ಲಿ ಟೀಂ ಇಂಡಿಯಾ 178 ಪಂದ್ಯಗಳನ್ನು ಗೆದ್ದು 120 ಪಂದ್ಯಗಳಲ್ಲಿ ಸೋತಿದೆ. 15 ಪಂದ್ಯ ಡ್ರಾ ಆಗಿವೆ. ಅವುಗಳಲ್ಲಿ 6 ಟೈನೊಂದಿಗೆ ಕೊನೆಗೊಂಡಿವೆ. 200 ಏಕದಿನ ಪಂದ್ಯಗಳಲ್ಲಿ 110 ಗೆಲ್ಲುವ ಮೂಲಕ ಧೋನಿ ಹೆಚ್ಚಿನ ಗೆಲುವು ದಾಖಲಿಸಿದ್ದಾರೆ. ಹಾಗೆಯೇ ಐಪಿಎಲ್‌ನಲ್ಲೂ ಸರ್ವಶ್ರೇಷ್ಠ ಪ್ರದರ್ಶನ ನೀಡಿರುವ ಧೋನಿ, ಐಪಿಎಲ್ ಆರಂಭವಾದಾಗಿನಿಂದಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರಾಗಿದ್ದು, ತಂಡ ಐದು ಬಾರಿ ಐಪಿಎಲ್ ಗೆದ್ದಿದೆ.

ಇನ್ನೂ ಹೆಚ್ಚು ಓದಿ

IPL 2026: ಧೋನಿ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಸಿಎಸ್​ಕೆ ಸಿಇಒ

MS Dhoni Confirmed for IPL 2026: ಹೇಂದ್ರ ಸಿಂಗ್ ಧೋನಿ ಐಪಿಎಲ್ 2026 ರಲ್ಲಿ ಆಡುವುದು ಖಚಿತವಾಗಿದೆ. ಚೆನ್ನೈ ಸೂಪರ್ ಕಿಂಗ್ಸ್ CEO ಕಾಸಿ ವಿಶ್ವನಾಥನ್ ಈ ಬಗ್ಗೆ ಸ್ಪಷ್ಟಪಡಿಸಿದ್ದು, ಅಭಿಮಾನಿಗಳಲ್ಲಿನ ನಿವೃತ್ತಿ ಆತಂಕ ದೂರ ಮಾಡಿದ್ದಾರೆ. ಧೋನಿ ಸ್ವತಃ ತಮ್ಮ ಫಿಟ್ನೆಸ್ ಬಗ್ಗೆ ಕಾಳಜಿ ವಹಿಸಿ, ಮುಂದಿನ ಆವೃತ್ತಿಯಲ್ಲಿ ಆಡುವ ಉತ್ಸಾಹ ತೋರಿದ್ದರು.

ಧೋನಿ, ಕೊಹ್ಲಿ, ರೋಹಿತ್​ಗಿಂತ ಸೂರ್ಯ ಉತ್ತಮ ನಾಯಕ; ಇಲ್ಲಿದೆ ಪುರಾವೆ

Surya Kumar Yadav's Captaincy Record: ಏಷ್ಯಾಕಪ್ 2025 ರಲ್ಲಿ ಭಾರತ ತಂಡ ಯುಎಇ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟೀಂ ಇಂಡಿಯಾ 9 ವಿಕೆಟ್‌ಗಳ ಭರ್ಜರಿ ಜಯಗಳಿಸಿದೆ. ಈ ಗೆಲುವಿನೊಂದಿಗೆ ಸೂರ್ಯಕುಮಾರ್ ಯಾದವ್ ಗೆಲುವಿನ ಶೇಕಡಾವಾರು ಪ್ರಮಾಣದಲ್ಲಿ ಮಹೇಂದ್ರ ಸಿಂಗ್ ಧೋನಿ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರನ್ನು ಮೀರಿಸಿದ್ದಾರೆ.

ನಾನು ಹೋಗಿ ಹುಕ್ಕಾ ಇಡುತ್ತಿರಲಿಲ್ಲ: ಧೋನಿ ವಿರುದ್ಧ ಪಠಾಣ್ ಗಂಭೀರ ಆರೋಪ

ಸೌರವ್ ಗಂಗೂಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ ಇರ್ಫಾನ್ ಪಠಾಣ್ 29 ಟೆಸ್ಟ್, 120 ಏಕದಿನ ಹಾಗೂ 24 ಟಿ20 ಪಂದ್ಯಗಳನ್ನಾಡಿದ್ದಾರೆ. ಅದರಲ್ಲೂ 2007ರ ಟಿ20 ವಿಶ್ವಕಪ್ ಗೆಲ್ಲುವಲ್ಲಿ ಇರ್ಫಾನ್ ಪಠಾಣ್ ಪ್ರಮುಖ ಪಾತ್ರವಹಿಸಿದ್ದರು. ಇದಾದ ಬಳಿಕ ಭಾರತ ಟಿ20 ತಂಡದಲ್ಲಿ ಅವರಿಗೆ ಹೆಚ್ಚಿನ ಅವಕಾಶ ಸಿಕ್ಕಿರಲಿಲ್ಲ.

ಟೀಂ ಇಂಡಿಯಾದಲ್ಲಿ ಒಟ್ಟಿಗೆ ಕೆಲಸ ಮಾಡಲಿದ್ದಾರೆ ಧೋನಿ- ಗಂಭೀರ್..!

MS Dhoni: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್. ಧೋನಿ ಅವರನ್ನು 2026ರ ಟಿ20 ವಿಶ್ವಕಪ್‌ಗೆ ಮೆಂಟರ್ ಆಗಿ ನೇಮಿಸಲು ಬಿಸಿಸಿಐ ಯೋಚಿಸುತ್ತಿದೆ ಎಂಬ ವರದಿಗಳಿವೆ. ಗೌತಮ್ ಗಂಭೀರ್ ಅವರೊಂದಿಗೆ ಧೋನಿ ಕೆಲಸ ಮಾಡುವ ಸಾಧ್ಯತೆಯಿದೆ. ಧೋನಿಯ ಅನುಭವ ಮತ್ತು ಕಾರ್ಯತಂತ್ರದ ಜ್ಞಾನವು ತಂಡಕ್ಕೆ ಬಹಳ ಮುಖ್ಯ ಎಂದು ಬಿಸಿಸಿಐ ನಂಬುತ್ತದೆ. ಆದರೆ ಧೋನಿ ಈ ಪ್ರಸ್ತಾಪವನ್ನು ಒಪ್ಪುತ್ತಾರೆಯೇ ಎಂಬುದು ಖಚಿತವಾಗಿಲ್ಲ.

MS Dhoni Bat: 1.19 ಕೋಟಿಗೆ ಮಾರಾಟವಾಯಿತು ಧೋನಿ ಬ್ಯಾಟ್, ಈ ಆಟಗಾರನ ಕ್ಯಾಪ್ ಅದಕ್ಕಿಂತ ಹೆಚ್ಚು ದುಬಾರಿ

ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ 2011 ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದ ಬ್ಯಾಟ್ ಕೋಟಿಗಳಿಗೆ ಮಾರಾಟವಾಯಿತು. ಅವರು ಈ ಬ್ಯಾಟ್ ನಿಂದಲೇ ತಮ್ಮ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಆದರೆ ಅವರ ಬ್ಯಾಟ್‌ನ ಬೆಲೆ ಆಸ್ಟ್ರೇಲಿಯಾದ ದಂತಕಥೆ ಆಟಗಾರನ ಕ್ಯಾಪ್‌ಗಿಂತ ತೀರಾ ಕಡಿಮೆ.

CSK: ಬ್ರೆವಿಸ್​ಗಾಗಿ ಐಪಿಎಲ್ ನಿಯಮ ಮುರಿಯಿತಾ ಸಿಎಸ್​ಕೆ? ಅಶ್ವಿನ್ ಹೇಳಿಕೆಗೆ ನೀಡಿದ ಸ್ಪಷ್ಟನೆ ಏನು?

CSK IPL Rule Breach Allegation: ಚೆನ್ನೈ ಸೂಪರ್ ಕಿಂಗ್ಸ್ ತಂಡವು ಡೆವಾಲ್ಡ್ ಬ್ರೆವಿಸ್ ಅವರನ್ನು ತಂಡಕ್ಕೆ ಸೇರಿಸಿಕೊಂಡ ವಿಷಯದಲ್ಲಿ ಐಪಿಎಲ್ ನಿಯಮ ಉಲ್ಲಂಘನೆ ಆರೋಪಕ್ಕೆ ಸ್ಪಷ್ಟನೆ ನೀಡಿದೆ. ರವಿಚಂದ್ರನ್ ಅಶ್ವಿನ್ ಅವರ ಹೇಳಿಕೆಯಿಂದ ಉಂಟಾದ ಈ ಆರೋಪವನ್ನು ಸಿಎಸ್‌ಕೆ ತಳ್ಳಿಹಾಕಿದೆ. ಬ್ರೆವಿಸ್ ಅವರ ಖರೀದಿ ಐಪಿಎಲ್ ನಿಯಮ 6.6ರ ಅಡಿಯಲ್ಲಿ ಬದಲಿ ಆಟಗಾರನಾಗಿ ನಡೆದಿದೆ ಎಂದು ಸಿಎಸ್‌ಕೆ ಹೇಳಿದೆ. ಈ ಖರೀದಿಯು ಪಾರದರ್ಶಕವಾಗಿದ್ದು, ಯಾವುದೇ ನಿಯಮ ಉಲ್ಲಂಘನೆ ಇಲ್ಲ ಎಂದು ತಂಡ ಸ್ಪಷ್ಟಪಡಿಸಿದೆ.

IND vs ENG: ಗಾಯದ ನಡುವೆಯೂ ಲಾರ್ಡ್ಸ್‌ ಅಂಗಳಿಕ್ಕಿಳಿದು ಧೋನಿ ದಾಖಲೆ ಮುರಿದ ಪಂತ್

Rishabh Pant Surpasses Dhoni's England Test Record: ಲಾರ್ಡ್ಸ್‌ನಲ್ಲಿ ಬೆರಳಿಗೆ ಗಾಯವಾಗಿ ಮೈದಾನದಿಂದ ಹೊರನಡೆದಿದ್ದ ರಿಷಭ್ ಪಂತ್, ಬ್ಯಾಟಿಂಗ್​ನಲ್ಲಿ ಅರ್ಧಶತಕ ಬಾರಿಸಿದರು. ಈ ಮೂಲಕ ಮಹೇಂದ್ರ ಸಿಂಗ್ ಧೋನಿಯ ಇಂಗ್ಲೆಂಡ್‌ನಲ್ಲಿನ ಟೆಸ್ಟ್ ದಾಖಲೆಯನ್ನು ಮುರಿದ ಪಂತ್, ಎರಡು ಬಾರಿ ಸೆನಾ ದೇಶಗಳಲ್ಲಿ 350 ಕ್ಕೂ ಹೆಚ್ಚು ರನ್‌ಗಳನ್ನು ಗಳಿಸಿದ ಏಕೈಕ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ.

‘ಕ್ಯಾಪ್ಟನ್ ಕೂಲ್’ ಪಟ್ಟಕ್ಕಾಗಿ ಮಹೇಂದ್ರ ಸಿಂಗ್ ಧೋನಿ ಅರ್ಜಿ

MS Dhoni: ಇತ್ತೀಚೆಗೆ ಐಸಿಸಿ ಹಾಲ್ ಆಫ್ ಫೇಮ್‌ಗೆ ಸೇರ್ಪಡೆಗೊಂಡಿರುವ ಮಹೇಂದ್ರ ಸಿಂಗ್ ಧೋನಿ, ಈಗ "ಕ್ಯಾಪ್ಟನ್ ಕೂಲ್" ಟ್ರೇಡ್‌ ಮಾರ್ಕ್‌ನೊಂದಿಗೆ ತಮ್ಮ ಪರಂಪರೆಯನ್ನು ಮತ್ತಷ್ಟು ಬಲಪಡಿಸಿಕೊಳ್ಳಲು ಸಜ್ಜಾಗಿದ್ದಾರೆ. ಅದರಂತೆ ಇದೀಗ ಧೋನಿ ಸಲ್ಲಿಸಿದ ಅರ್ಜಿಯನ್ನು ಟ್ರೇಡ್ ಮಾರ್ಕ್​ ಜರ್ನಲ್‌ನಲ್ಲಿ ಪ್ರಕಟಿಸಲಾಗಿದೆ.

IND vs ENG: ಭರ್ಜರಿ ಶತಕ ಸಿಡಿಸಿ ಹಲವು ದಾಖಲೆ ಬರೆದ ರಿಷಭ್ ಪಂತ್

Rishabh Pant's Record-Breaking Century: ಲೀಡ್ಸ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ರಿಷಭ್ ಪಂತ್ ಅವರು ಅದ್ಭುತವಾದ 134 ರನ್‌ಗಳ ಇನ್ನಿಂಗ್ಸ್ ಆಡಿದರು. ಇದು ಅವರ ಟೆಸ್ಟ್ ವೃತ್ತಿಜೀವನದ ಏಳನೇ ಶತಕವಾಗಿದ್ದು, ಭಾರತೀಯ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್‌ಗಳಲ್ಲಿ ಅತಿ ಹೆಚ್ಚು ಟೆಸ್ಟ್ ಶತಕಗಳ ದಾಖಲೆಯನ್ನೂ ಸೃಷ್ಟಿಸಿದೆ. ಅವರು ಇಂಗ್ಲೆಂಡ್‌ನಲ್ಲಿ ಹೆಚ್ಚು ಶತಕಗಳನ್ನು ಬಾರಿಸಿದ ವಿದೇಶಿ ವಿಕೆಟ್ ಕೀಪರ್ ಕೂಡ ಆಗಿದ್ದಾರೆ.

ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಅತಿ ದೊಡ್ಡ ವಿವಾದ: ಅಂದು ಧೋನಿ ತೆಗೆದುಕೊಂಡ ನಿರ್ಧಾರ ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿತು

India-England Test Controversy: 2011 ರ ಭಾರತ vs ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ವಿಶೇಷ ಘಟನೆಯೊಂದು ನಡೆಯಿತು. ಆಗ ಟೀಮ್ ಇಂಡಿಯಾದ ನಾಯಕರಾಗಿದ್ದ ಮಹೇಂದ್ರ ಸಿಂಗ್ ಧೋನಿ ತೆಗೆದುಕೊಂಡ ನಿರ್ಧಾರವನ್ನು ವಿಶ್ವದಾದ್ಯಂತ ಪ್ರಶಂಸಿಸಲಾಯಿತು. ಇದು ಇಯಾನ್ ಬೆಲ್ ರನ್-ಔಟ್ ವಿವಾದ ಎಂದು ಪ್ರಸಿದ್ಧವಾಯಿತು.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ