MS Dhoni

MS Dhoni

ತನ್ನ ಚಾಣಾಕ್ಷ ನಾಯಕತ್ವದಿಂದ ಭಾರತಕ್ಕೆ ಎರಡೆರಡು ವಿಶ್ವಕಪ್ ಗೆಲ್ಲಿಸಿಕೊಟ್ಟ ಶ್ರೇಯ ಕ್ಯಾಪ್ಟನ್ ಕೂಲ್ ಮಹೇಂದ್ರ ಸಿಂಗ್ ಧೋನಿಗೆ ಸಲ್ಲುತ್ತದೆ. ಎಂ.ಎಸ್.ಧೋನಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ದೇಶ ಮತ್ತು ವಿದೇಶಗಳಲ್ಲಿ ಅನೇಕ ಸರಣಿಗಳನ್ನು ಗೆದ್ದಿದೆ. ಧೋನಿ ಎಲ್ಲಾ ಸ್ವರೂಪಗಳಲ್ಲಿ ಹೆಚ್ಚಿನ ಪಂದ್ಯಗಳನ್ನು ಗೆದ್ದ ದಾಖಲೆಯನ್ನು ಸಹ ಹೊಂದಿದ್ದಾರೆ. ಅಷ್ಟೇ ಅಲ್ಲ .. ಮೂರು ಐಸಿಸಿ ಟ್ರೋಫಿಗಳನ್ನು ಗೆದ್ದ ಏಕೈಕ ನಾಯಕ ಧೋನಿ. ಧೋನಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಏಕದಿನ ವಿಶ್ವಕಪ್ (2011), ಟಿ 20 ವಿಶ್ವಕಪ್ (2007) ಮತ್ತು ಚಾಂಪಿಯನ್ಸ್ ಟ್ರೋಫಿ (2013) ಗೆದ್ದಿದೆ. ಧೋನಿ 332 ಪಂದ್ಯಗಳಲ್ಲಿ ಭಾರತ ತಂಡದ ನಾಯಕತ್ವ ವಹಿಸಿದ್ದರು. ಧೋನಿ ನಾಯಕತ್ವದಲ್ಲಿ ಟೀಂ ಇಂಡಿಯಾ 178 ಪಂದ್ಯಗಳನ್ನು ಗೆದ್ದು 120 ಪಂದ್ಯಗಳಲ್ಲಿ ಸೋತಿದೆ. 15 ಪಂದ್ಯ ಡ್ರಾ ಆಗಿವೆ. ಅವುಗಳಲ್ಲಿ 6 ಟೈನೊಂದಿಗೆ ಕೊನೆಗೊಂಡಿವೆ. 200 ಏಕದಿನ ಪಂದ್ಯಗಳಲ್ಲಿ 110 ಗೆಲ್ಲುವ ಮೂಲಕ ಧೋನಿ ಹೆಚ್ಚಿನ ಗೆಲುವು ದಾಖಲಿಸಿದ್ದಾರೆ. ಹಾಗೆಯೇ ಐಪಿಎಲ್‌ನಲ್ಲೂ ಸರ್ವಶ್ರೇಷ್ಠ ಪ್ರದರ್ಶನ ನೀಡಿರುವ ಧೋನಿ, ಐಪಿಎಲ್ ಆರಂಭವಾದಾಗಿನಿಂದಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕರಾಗಿದ್ದು, ತಂಡ ಐದು ಬಾರಿ ಐಪಿಎಲ್ ಗೆದ್ದಿದೆ.

ಇನ್ನೂ ಹೆಚ್ಚು ಓದಿ

EURO 2024: ಫಿಫಾದ ‘ತಲಾ ಫಾರ್ ಎ ರೀಸನ್’ ಪೋಸ್ಟ್​ಗೆ ಧೋನಿ ಅಭಿಮಾನಿಗಳ ಮೆಚ್ಚುಗೆ

Portugal vs Czech Republic: ಯುರೋ ಕಪ್​ನ ಗ್ರೂಪ್ ಹಂತದ ಪಂದ್ಯದಲ್ಲಿ ಜೆಕ್ ರಿಪಬ್ಲಿಕ್ ವಿರುದ್ಧ ಪೋರ್ಚುಗಲ್ ತಂಡ ರೋಚಕ ಜಯ ಸಾಧಿಸಿದೆ. ಅತ್ಯುತ್ತಮ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದ ಮೊದಲಾರ್ಧದಲ್ಲಿ ಯಾವುದೇ ಗೋಲು ದಾಖಲಾಗಿರಲಿಲ್ಲ. ದ್ವಿತೀಯಾರ್ಧದಲ್ಲಿ ಎರಡು ಗೋಲು ಬಾರಿಸುವ ಮೂಲಕ ಪೋರ್ಚುಗಲ್ ಗೆಲುವು ತನ್ನದಾಗಿಸಿಕೊಂಡಿತು.

IPL 2024: ಶೇಕ್ ಹ್ಯಾಂಡ್ ಮಾಡದ ಧೋನಿ: ಡ್ರೆಸ್ಸಿಂಗ್ ರೂಮ್​ಗೆ ತೆರಳಿ ಹಸ್ತಲಾಘವ ನೀಡಿದ ಕೊಹ್ಲಿ

IPL 2024: ಐಪಿಎಲ್​ನ 68ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದೆ. ಪ್ಲೇಆಫ್ ಹಂತಕ್ಕೇರಲು ನಿರ್ಣಾಯಕವಾಗಿದ್ದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ 218 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಸಿಎಸ್​ಕೆ ತಂಡವು 191 ರನ್​ಗಳಿಸಲಷ್ಟೇ ಶಕ್ತರಾಗಿದ್ದರು.

MS Dhoni: ಎಂಎಸ್ ಧೋನಿ ಟೀಮ್ ಇಂಡಿಯಾಗೆ ಹೆಡ್ ಕೋಚ್?

Team India Head Coach: ಭಾರತ ತಂಡದ ಮುಖ್ಯ ತರಬೇತುದಾರನನ್ನು ಮೂರು ವರ್ಷಗಳ ಅವಧಿಗೆ ನೇಮಕ ಮಾಡಲು ಬಿಸಿಸಿಐ ನಿರ್ಧರಿಸಿದೆ. ಅದರಂತೆ ನೂತನ ಕೋಚ್ ಜುಲೈ 1, 2024 ರಿಂದ ಡಿಸೆಂಬರ್ 31, 2027 ರವರೆಗೆ ಟೀಮ್ ಇಂಡಿಯಾ ಪರ ಕಾರ್ಯ ನಿರ್ವಹಿಸಲಿದ್ದಾರೆ. ಈ ಅವಧಿಯಲ್ಲಿ ಭಾರತ ತಂಡವು ಚಾಂಪಿಯನ್ಸ್ ಟ್ರೋಫಿ ಮತ್ತು ಟಿ20 ವಿಶ್ವಕಪ್​ಗಳನ್ನು ಆಡಲಿರುವುದು ವಿಶೇಷ.

VIDEO: ಬಾರ್​ನಲ್ಲಿ ಕಾಣಿಸಿಕೊಂಡ ಮಹೇಂದ್ರ ಸಿಂಗ್ ಧೋನಿ: ವಿಡಿಯೋ ವೈರಲ್

IPL 2024: ಮಹೇಂದ್ರ ಸಿಂಗ್ ಧೋನಿ ಐಪಿಎಲ್​ನಲ್ಲಿ ಈವರೆಗೆ 264 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 24 ಅರ್ಧಶತಕಗಳೊಂದಿಗೆ 5243 ರನ್​ ಕಲೆಹಾಕಿದ್ದಾರೆ. ಇನ್ನು ಈ ಬಾರಿಯ ಐಪಿಎಲ್​ನಲ್ಲಿ ನಾಯಕತ್ವದ ತ್ಯಜಿಸಿ ಆಟಗಾರನಾಗಿ ಕಾಣಿಸಿಕೊಂಡಿರುವ ಧೋನಿ ಮುಂದಿನ ಸೀಸನ್​ನಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬುದೇ ಪ್ರಶ್ನೆ. ಏಕೆಂದರೆ ಧೋನಿಗೆ 42 ವರ್ಷ ವಯಸ್ಸಾಗಿದ್ದು, ಹೀಗಾಗಿ ಮುಂದಿನ ಸೀಸನ್​ನಿಂದ ಹೊರಗುಳಿಯುವ ಸಾಧ್ಯತೆಯಿದೆ.

RCB vs CSK: ಆರ್​ಸಿಬಿ ಪ್ಲೇ ಆಫ್​ಗೇರಲು ಕಾರಣವಾಗಿದ್ದೇ ಧೋನಿ ಸಿಡಿಸಿದ ಆ 110 ಮೀ. ಸಿಕ್ಸ್: ಹೇಗೆ ಗೊತ್ತೇ?

MS Dhoni 110 meter Six Video: ಶನಿವಾರ ನಡೆದ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ 20ನೇ ಓವರ್​ನ ಯಶ್ ದಯಾಳ್ ಅವರ ಮೊದಲ ಎಸೆತದಲ್ಲಿ 110 ಮೀಟರ್​ನ ಅತಿ ದೊಡ್ಡ ಸಿಕ್ಸರ್ ಸಿಡಿಸಿದರು. ಆಗ ಸಿಎಸ್​ಕೆ ಪ್ಲೇ ಆಫ್ ಪ್ರವೇಶಿಸುತ್ತೆ ಎಂದೇ ನಂಬಲಾಗಿತ್ತು. ಆದರೆ, ಇದೇ ಸಿಕ್ಸ್ ಆರ್​ಸಿಬಿ ತಂಡ ಪ್ಲೇ ಆಫ್ ಪ್ರವೇಶಿಸಲು ಕಾರಣವಾಗಿದ್ದು ಎಂದರೆ ನಂಬಲೇಬೇಕು.

RCB vs CSK: ಆರ್​ಸಿಬಿ ವಿರುದ್ಧ ಬಲಿಷ್ಠ ತಂಡ ಆಡಿಸಲು ಧೋನಿ ಮಾಸ್ಟರ್ ಪ್ಲಾನ್: ಆ ಪ್ಲೇಯರ್ ಇಂದು ಕಣಕ್ಕೆ?

CSK Playing XI vs RCB: ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಮಾಡು ಇಲ್ಲವೇ ಮಡಿ ಪಂದ್ಯಕ್ಕಾಗಿ, ಆಡುವ XI ನಲ್ಲಿ ಸ್ಟಾರ್ ವೇಗಿ ದೀಪಕ್ ಚಹಾರ್ ಮರಳುವುದು ಬಹುತೇಕ ಖಚಿತವಾಗಿದೆ. ಐಪಿಎಲ್ 2022 ರ ಮೆಗಾ ಹರಾಜಿನಲ್ಲಿ ರೂ. 14 ಕೋಟಿಗೆ ಸಹಿ ಮಾಡಿದ ಚಹಾರ್, ಮೇ 1 ರಿಂದ ಸಿಎಸ್‌ಕೆ ಪರ ಆಡಿಲ್ಲ.

RCB vs CSK: ಇಂದು ಬೆಂಗಳೂರಿನಲ್ಲಿ ಆರ್​ಸಿಬಿ-ಸಿಎಸ್​ಕೆ ಪಂದ್ಯ: ಸಂಜೆ ವೇಳೆ ಹವಾಮಾನ ಹೇಗಿರಲಿದೆ?

Bengaluru Weather Report, RCB vs CSK: ಐಪಿಎಲ್ 2024 ರಲ್ಲಿ ಇಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಎದುರಿಸಲಿದೆ. ಪ್ಲೇ ಆಫ್​ನಲ್ಲಿರುವ ಕೇವಲ ಒಂದು ಸ್ಥಾನಕ್ಕಾಗಿ ಹಗ್ಗ ಜಗ್ಗಾಟ ನಡೆಯುತ್ತಿದ್ದು, ಸಿಎಸ್​ಕೆ ಮತ್ತು ಆರ್​ಸಿಬಿ ಎರಡು ತಂಡಗಳು ರೇಸ್‌ನಲ್ಲಿವೆ.

ನಾಳಿನ ಆರ್ ಸಿಬಿ-ಸಿಎಸ್ ಕೆ ನಡುವಿನ ಪಂದ್ಯಕ್ಕೆ ಕಾಳಸಂತೆಕೋರರ ಹಾವಳಿ, ₹3,000 ಟಿಕೆಟ್ ಗೆ ₹ 20,000 ಅಂತೆ!

ಯಾದಗಿರಿಯಿಂದ ಬಂದಿರುವ ಯುವಕ ರೂ. 3,000 ಮುಖಬೆಲೆಯ ಟಿಕೆಟ್ ಗೆ ರೂ. 8,000 ಕೊಡಲು ತಯಾರಿದ್ದಾನೆ! ಆದರೆ, ಕಾಳಸಂತೆಕೋರರನ್ನು ತಡೆಯುವುದು ಸಾಧ್ಯವಿಲ್ಲವೇ? ಪೊಲೀಸರಿಗೆ ಗೊತ್ತಿದ್ದೂ ಸುಮ್ಮನಿದ್ದಾರೆಯೇ? ರಾಜ್ಯ ಕ್ರಿಕೆಟ್ ಸಂಸ್ಥೆಯ ಪದಾಧಿಕಾರಿಗಳಿಗೆ ಹೊರಗೇನು ನಡಯುತ್ತಿದೆ ಅಂತ ಗೊತ್ತಿಲ್ಲವೇ? ವೇಕ್ ಅಪ್ ಮೆನ್, ದಿಸ್ ಈಸ್ ಕ್ರಿಕೆಟ್, ನಾಟ್ ಗ್ಯಾಂಬ್ಲಿಂಗ್!

RCB vs CSK: ಚಿನ್ನಸ್ವಾಮಿಯಲ್ಲಿ ಆರ್​ಸಿಬಿ ಡ್ರೆಸ್ಸಿಂಗ್ ರೂಮ್​ಗೆ ದಿಢೀರ್ ಎಂಟ್ರಿ ಕೊಟ್ಟ ಎಂಎಸ್ ಧೋನಿ: ವಿಡಿಯೋ

MS Dhoni in RCB Dressing Room Video: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಈ ಮ್ಯಾಚ್​ಗಾಗಿ ಈಗಾಗಲೇ ಸಿಎಸ್​ಕೆ ಸಿಲಿಕಾನ್ ಸಿಟಿಗೆ ಬಂದಿದ್ದು, ಅಭ್ಯಾಸ ಶುರುಮಾಡಿಕೊಂಡಿದೆ. ಇದರ ನಡುವೆ ಚಿನ್ನಸ್ವಾಮಿಯಲ್ಲಿ ಎಂಎಸ್ ಧೋನಿ ದಿಢೀರ್ ಆರ್​ಸಿಬಿ ಡ್ರೆಸ್ಸಿಂಗ್ ರೂಮ್​ಗೆ ಬಂದಿದ್ದಾರೆ.

MS Dhoni Temple: ಚೆನ್ನೈನಲ್ಲಿ ನಿರ್ಮಾಣವಾಗಲಿದೆ ಎಂಎಸ್ ಧೋನಿ ದೇವಸ್ಥಾನ: ಹೇಗಿರಲಿದೆ ನೋಡಿ

CSK, IPL 2024: ಕಳೆದ ಕೆಲವು ವರ್ಷಗಳಲ್ಲಿ ಭಾರತ ಮತ್ತು ಸಿಎಸ್‌ಕೆಗಾಗಿ ಅವರ ಪ್ರದರ್ಶನವನ್ನು ಪರಿಗಣಿಸಿ, ಎಂಎಸ್ ಧೋನಿ ಅವರ ದೇವಾಲಯವನ್ನು ಚೆನ್ನೈನಲ್ಲಿ ನಿರ್ಮಿಸಲಾಗುವುದು ಎಂದು ಅಂಬಟಿ ರಾಯುಡು ಹೇಳಿದ್ದಾರೆ. ಧೋನಿ ಚೆನ್ನೈನ ದೇವರು ಎಂದ ರಾಯುಡು, ಮುಂಬರುವ ವರ್ಷದಲ್ಲಿ ಚೆನ್ನೈನಲ್ಲಿ ಎಂಎಸ್ ಧೋನಿಯ ಮಂದಿರ ನಿರ್ಮಾಣವಾಗುವುದು ಖಚಿತ ಎಂದು ಹೇಳಿದ್ದಾರೆ.

ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ಅಸ್ಸಾಂನಲ್ಲಿ ಭೀಕರ ಪ್ರವಾಹ; ಪ್ರಾಣ ಒತ್ತೆಯಿಟ್ಟು ಕರುವನ್ನು ಕಾಪಾಡಿದ ಜನ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ದರ್ಶನ್​ ಮಾಡಿದ್ದೇ ಸರಿ ಎನ್ನುವ ಅಭಿಮಾನಿಗಳಿಗೆ ಕಿವಿಮಾತು ಹೇಳಿದ ಸುಮಲತಾ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ರಾತ್ರಿ ಆದ್ರೂ ಜನಸಾಗರ ಕಂಡು ಕೈ ಎತ್ತಿ ಮುಗಿದ ರೋಹಿತ್, ಕೊಹ್ಲಿ
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಟೀಂ ಇಂಡಿಯಾ ವಿಜಯೋತ್ಸವದಲ್ಲಿ ಅಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಟ್ಟ ಫ್ಯಾನ್ಸ್
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಮುಂಬೈನಲ್ಲಿ ಜನಸಾಗರ ಮಧ್ಯೆ ಕಪ್ ಹಿಡಿದು ಕುಣಿದ ಬ್ಯೂ ಬಾಯ್ಸ್: ವಿಡಿಯೋ ನೋಡಿ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಬ್ರಹ್ಮಾವರ ತಾಲ್ಲೂಕಿನ ಮಡಿಸಾಲು ಹಳ್ಳ ಉಕ್ಕಿ ತಗ್ಗುಪ್ರದೇಶಗಳು ಜಲಾವೃತ
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ಮುಂಬೈ ಏರ್‌ಪೋರ್ಟ್‌ನಲ್ಲಿ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್‌
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ದರ್ಶನ್ ಹಾಗೆ ಮಾಡಿರಲು ಸಾಧ್ಯವಿಲ್ಲ: ಸುಮಲತಾ ಅಂಬರೀಶ್
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಪ್ರಧಾನಿ ಮೋದಿಯವರನ್ನು ಭೇಟಿಯಾಗಿ ಮುಂಬೈ ಬಂದ ಟೀಮ್ ಇಂಡಿಯಾಗೆ ಭವ್ಯ ಸ್ವಾಗತ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ
ಟೀಂ ಇಂಡಿಯಾ ವಿಜಯೋತ್ಸವಕ್ಕೆ ಕಡಲ ಕಿನಾರೆಯಲ್ಲಿ ಜನ ಸಾಗರ: ವಿಹಂಗಮ ನೋಟ