Narendra Modi
ನರೇಂದ್ರ ಮೋದಿ ಅವರು ಪ್ರಸ್ತುತ ಭಾರತದ ಪ್ರಧಾನಿಯಾಗಿದ್ದಾರೆ. ಮೇ 2014 ರಲ್ಲಿ ಅವರು ಮೊದಲ ಬಾರಿಗೆ ದೇಶದ ಪ್ರಧಾನಿಯಾದರು. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಗೆದ್ದ ನಂತರ ಮೋದಿ ಅವರು ಸತತ ಎರಡನೇ ಬಾರಿಗೆ ದೇಶದ ಪ್ರಧಾನಿಯಾದರು. ಮೋದಿ ದೇಶದ ಪ್ರಧಾನಿಯಾಗುವ ಮೊದಲು ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ನರೇಂದ್ರ ಮೋದಿ ಅವರು 2001 ರಿಂದ 2014 ರವರೆಗೆ ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಅವರು ಪ್ರಸ್ತುತ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ
ನರೇಂದ್ರ ಮೋದಿಯವರು ಭಾರತೀಯ ಜನತಾ ಪಕ್ಷದ ಪ್ರಮುಖ ನಾಯಕರಾಗಿದ್ದಾರೆ. ಈ ಹಿಂದೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ (ಆರ್ಎಸ್ಎಸ್) ಕೆಲಸ ಮಾಡಿದ್ದರು. ಅವರು 17 ಸೆಪ್ಟೆಂಬರ್ 1950 ರಂದು ಗುಜರಾತ್ನ ವಾಡ್ನಗರದಲ್ಲಿ ಜನಿಸಿದರು.
2014ರ ಲೋಕಸಭೆಯಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಗೆದ್ದಿತ್ತು. ಇದಾದ ನಂತರ 2019ರಲ್ಲೂ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ ಮೋದಿ ಮತ್ತೊಮ್ಮೆ ಪ್ರಧಾನಿಯಾದರು. 2014ರಿಂದ ಬಿಜೆಪಿ ಹಲವು ರಾಜ್ಯಗಳಲ್ಲಿ ಮೋದಿ ಹೆಸರನ್ನೇ ಪ್ರಮುಖ ಅಸ್ತ್ರವಾಗಿಟ್ಟುಕೊಂಡು ಚುನಾವಣೆ ಗೆದ್ದಿದೆ.
ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಅಧಿಕಾರಾವಧಿಯಲ್ಲಿ ಹಲವು ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಇದು ದೇಶದ ಜನರಲ್ಲಿ ಅವರ ಜನಪ್ರಿಯತೆಯನ್ನು ಹೆಚ್ಚಿಸಿತು. ಈ ನಿರ್ಧಾರಗಳಲ್ಲಿ ಪಾಕಿಸ್ತಾನದಲ್ಲಿ ಸರ್ಜಿಕಲ್ ಸ್ಟ್ರೈಕ್ಗಳು, ನೋಟು ಅಮಾನ್ಯೀಕರಣ, ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಧಿಯನ್ನು ತೆಗೆದುಹಾಕುವುದು, ತ್ರಿವಳಿ ತಲಾಖ್ ಕಾನೂನು ಅನುಷ್ಠಾನ ಇತ್ಯಾದಿಗಳು ಸೇರಿವೆ.
ಸುಂಕದ ಉದ್ವಿಗ್ನತೆ ನಡುವೆ ಟ್ರಂಪ್ ಜೊತೆ ಪ್ರಧಾನಿ ಮೋದಿ ಮಾತುಕತೆ; ವ್ಯಾಪಾರ, ತಂತ್ರಜ್ಞಾನ ಸಹಕಾರದ ಬಗ್ಗೆ ಚರ್ಚೆ
ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಉದ್ವಿಗ್ನತೆಯ ನಡುವೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ದೂರವಾಣಿ ಸಂಭಾಷಣೆ ನಡೆಸಿದ್ದಾರೆ. ಭಾರತ ಮತ್ತು ಅಮೆರಿಕದ ನಡುವಿನ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯ ಸ್ಥಿತಿಯ ಮೇಲೆ ಅವರಿಬ್ಬರೂ ತಮ್ಮ ಮಾತನ್ನು ಕೇಂದ್ರೀಕರಿಸಿದರು. ಎಲ್ಲಾ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಸ್ಥಿರವಾಗಿ ಬಲಪಡಿಸುವ ಬಗ್ಗೆ ಇಬ್ಬರೂ ತೃಪ್ತಿ ವ್ಯಕ್ತಪಡಿಸಿದರು.
- Sushma Chakre
- Updated on: Dec 11, 2025
- 9:43 pm
ಕರ್ನಾಟಕ ರೈತರಿಗೆ ಗುಡ್ ನ್ಯೂಸ್: ಬೆಂಬಲ ಬೆಲೆಯಲ್ಲಿ ತೊಗರಿ ಖರೀದಿಗೆ ಕೇಂದ್ರ ಅಸ್ತು
ಕನಿಷ್ಠ ಬೆಂಬಲ ಬೆಲೆ ಅಡಿಯಲ್ಲಿ ತೊಗರಿ ಬೇಳೆ ಖರೀದಿಗೆ ನಿಗದಿ ಮಾಡಲಾಗಿರುವ ಅವಧಿ ಬದಲಾಯಿಸಿ, ಶೀಘ್ರ ಖರೀದಿ ಪ್ರಕ್ರಿಯೆ ಆರಂಭಿಸಲು ಸಂಬಂಧಪಟ್ಟ ಸಂಸ್ಥೆಗಳಿಗೆ ಸೂಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಹಾಗೇ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಹ ಕೃಷಿ ಸಚಿವರಿಗೆ ಪತ್ರ ಬರೆದಿದ್ದರು. ಇದೀಗ ಈ ಪತ್ರಗಳಿಗೆ ಕೇಂದ್ರ ಸರ್ಕಾರ ಸ್ಪಂದಿಸಿ ತೊಗರಿ ಖರೀದಿಗೆ ಗ್ರೀನ್ ಸಿಗ್ನಲ್ ನೀಡಿದೆ.
- Sanjayya Chikkamath
- Updated on: Dec 10, 2025
- 10:59 pm
ಸಿದ್ದರಾಮಯ್ಯ ಸರ್ಕಾರಕ್ಕೆ ಮುಖಭಂಗ: ಜನೌಷಧಿ ಕೇಂದ್ರ ಮುಚ್ಚುವ ಆದೇಶ ರದ್ದುಗೊಳಿಸಿದ ಹೈಕೋರ್ಟ್
ಸರ್ಕಾರಿ ಆಸ್ಪತ್ರೆ ಆವರಣಗೊಳಗಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವಂತೆ ಆದೇಶಿಸಿದ್ದ ಸಿದ್ದರಾಮಯ್ಯ ಸರ್ಕಾರಕ್ಕೆ ಮುಖಭಂಗವಾಗಿದೆ. ಜನೌಷಧಿ ಕೇಂದ್ರ ಮುಚ್ಚುವಂತೆ ಹೊರಡಿಸಿದ್ದ ಸರ್ಕಾರದ ಆದೇಶವನ್ನು ಕೋರ್ಟ್ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ.
- Ramesh B Jawalagera
- Updated on: Dec 10, 2025
- 10:29 pm
ಪ್ರಧಾನಿ ಮೋದಿಗೆ ಇಸ್ರೇಲ್ ಪ್ರಧಾನಿ ನೆತನ್ಯಾಹು ಫೋನ್; ಭಯೋತ್ಪಾದನೆ, ಗಾಜಾ ಶಾಂತಿ ಯೋಜನೆಯ ಬಗ್ಗೆ ಚರ್ಚೆ
ಪ್ರಧಾನಿ ನರೇಂದ್ರ ಮೋದಿ ಇಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಂದ ದೂರವಾಣಿ ಕರೆ ಸ್ವೀಕರಿಸಿದರು. ಅಧಿಕೃತ ಹೇಳಿಕೆಯ ಪ್ರಕಾರ, ಈ ಮಾತುಕತೆಯು ಜಾಗತಿಕ ಮತ್ತು ಪ್ರಾದೇಶಿಕ ಕಾಳಜಿಗಳ ಮೇಲೆ ಕೇಂದ್ರೀಕರಿಸಿತ್ತು. ಫೋನ್ ಸಂಭಾಷಣೆ ವೇಳೆ ಇಬ್ಬರೂ ನಾಯಕರು ಭಯೋತ್ಪಾದನೆಯನ್ನು ಬಲವಾಗಿ ಖಂಡಿಸಿದರು. ಬೆದರಿಕೆಯನ್ನು ಎದುರಿಸಲು ಮತ್ತು ಜನರ ಜೀವಗಳನ್ನು ರಕ್ಷಿಸಲು ಏಕೀಕೃತ ಜಾಗತಿಕ ಕ್ರಮದ ಅಗತ್ಯವನ್ನು ಅವರು ಒತ್ತಿ ಹೇಳಿದರು ಎನ್ನಲಾಗಿದೆ.
- Sushma Chakre
- Updated on: Dec 10, 2025
- 9:37 pm
ಪ್ರಧಾನಿ ಮೋದಿ ಕೂಡ ವಿದೇಶ ಪ್ರವಾಸದಲ್ಲೇ ಇರುತ್ತಾರಲ್ಲ; ರಾಹುಲ್ ಕುರಿತ ಬಿಜೆಪಿ ಟೀಕೆಗೆ ಪ್ರಿಯಾಂಕಾ ಗಾಂಧಿ ತಿರುಗೇಟು
ಬಿಜೆಪಿ ಇಂದು ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಮುಂಬರುವ ಜರ್ಮನಿ ಪ್ರವಾಸದ ಬಗ್ಗೆ ಟೀಕಾಪ್ರಹಾರ ನಡೆಸಿದ್ದಾರೆ. ಲೋಕಸಭಾ ಅಧಿವೇಶನದ ವೇಳೆ ವಿದೇಶಕ್ಕೆ ಹೋಗುತ್ತಾರೆ, ಆಮೇಲೆ ಬಂದು ನನಗೆ ಮಾತನಾಡಲು ಅವಕಾಶವೇ ಸಿಗಲಿಲ್ಲ ಎನ್ನುತ್ತಾರೆ ಎಂದು ಬಿಜೆಪಿ ನಾಯಕರು ಟೀಕಿಸಿದ್ದಾರೆ. ಈ ಹೇಳಿಕೆಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ವಿದೇಶ ಪ್ರವಾಸದಲ್ಲೇ ಇರುತ್ತಾರೆ ಎನ್ನುವ ಮೂಲಕ ಅವರು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
- Sushma Chakre
- Updated on: Dec 10, 2025
- 6:13 pm
ಕ್ಲೇಮ್ ಆಗದೇ ಉಳಿದಿದೆ ಲಕ್ಷ ಕೋಟಿ ರೂ; ಜನರಿಗೆ ಹಣ ಮರಳಿಸಲು ಸರ್ಕಾರ ಹರಸಾಹಸ
PM Narendra Modi asks people to participate in 'Your Money, Your Right' campaign: ಬ್ಯಾಂಕು, ಇನ್ಷೂರೆನ್ಸ್, ಮ್ಯುಚುವಲ್ ಫಂಡ್, ಷೇರುಗಳಲ್ಲಿ ಲಕ್ಷ ಕೋಟಿ ರೂಗಿಂತ ಅಧಿಕ ಹಣ ಕ್ಲೇಮ್ ಆಗದೇ ಉಳಿದಿವೆ. ಇದನ್ನು ಮರಳಿಸಲು ಸರ್ಕಾರ ಹರಸಾಹಸ ನಡೆಸುತ್ತಿದೆ. ಅಂತೆಯೇ, ‘ನಿಮ್ಮ ಹಣ, ನಿಮ್ಮ ಹಕ್ಕು’ ಅಭಿಯಾನ ಕೈಗೊಂಡಿದೆ. ಲಿಂಕ್ಡ್ಇನ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಂಚಿಕೊಂಡ ಒಂದು ಪೋಸ್ಟ್ನಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿದ್ದಾರೆ.
- Vijaya Sarathy SN
- Updated on: Dec 10, 2025
- 12:14 pm
ಬೆಂಗಳೂರು-ಎರ್ನಾಕುಲಂ ವಂದೇ ಭಾರತ್ ರೈಲಿಗೆ ಮುಗಿಬೀಳ್ತಿದ್ದಾರೆ ಪ್ರಯಾಣಿಕರು! ಒಂದೇ ತಿಂಗಳಲ್ಲಿ 55 ಸಾವಿರ ಮಂದಿ ಸಂಚಾರ
ಬೆಂಗಳೂರು-ಎರ್ನಾಕುಲಂ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಮೊದಲ ತಿಂಗಳಲ್ಲೇ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ. 55,000 ಕ್ಕೂ ಹೆಚ್ಚು ಪ್ರಯಾಣಿಕರು ಈ ರೈಲಿನಲ್ಲಿ ಸಂಚರಿಸಿದ್ದು, 100% ಗಿಂತ ಹೆಚ್ಚು ಬುಕಿಂಗ್ ಆಗಿದೆ. ಕೇರಳ, ತಮಿಳುನಾಡು, ಕರ್ನಾಟಕವನ್ನು ಸಂಪರ್ಕಿಸುವ ಈ ಅರೆ ಹೈಸ್ಪೀಡ್ ರೈಲು ಕ್ರಿಸ್ಮಸ್, ಹೊಸ ವರ್ಷ ಮತ್ತು ಶಬರಿಮಲೆ ಯಾತ್ರಿಕರಿಂದಲೂ ಹೆಚ್ಚಿನ ಬೇಡಿಕೆ ಪಡೆದು ಜನಪ್ರಿಯವಾಗಿದೆ.
- Bhavana Hegde
- Updated on: Dec 10, 2025
- 12:15 pm
ಭಾರತದಲ್ಲಿ ಎಐ ಸೌಕರ್ಯ ನಿರ್ಮಾಣಕ್ಕೆ ಮೈಕ್ರೋಸಾಫ್ಟ್ನಿಂದ 1.50 ಲಕ್ಷ ಕೋಟಿ ರೂ ಹೂಡಿಕೆ
Microsoft CEO Satya Nadella announces 17.5 billion USD investment in India: ಭಾರತದಲ್ಲಿ ಮೈಕ್ರೋಸಾಫ್ಟ್ ಬರೋಬ್ಬರಿ 17.5 ಬಿಲಿಯನ್ ಡಾಲರ್ ಹೂಡಿಕೆ ಮಾಡುವುದಾಗಿ ಘೋಷಿಸಿದೆ. ಎಐ ಇನ್ಫ್ರಾಸ್ಟ್ರಕ್ಚರ್, ಸ್ಕಿಲ್ಲಿಂಗ್ ಮತ್ತು ಸ್ವಾವಲಂಬನೆ ಸಾಮರ್ಥ್ಯ ನಿರ್ಮಿಸಲು ಮೈಕ್ರೋಸಾಫ್ಟ್ ಉದ್ದೇಶಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಬಳಿಕ ಮೈಕ್ರೋಸಾಫ್ಟ್ ಸಿಇಒ ಸತ್ಯ ನಾದೆಲ್ಲಾ ಈ ಹೂಡಿಕೆಯನ್ನು ಪ್ರಕಟಿಸಿದ್ದಾರೆ.
- Vijaya Sarathy SN
- Updated on: Dec 9, 2025
- 7:28 pm
ವಂದೇ ಮಾತರಂ ಕುರಿತ ನೆಹರು ಪತ್ರ ಓದಿದ ಪ್ರಿಯಾಂಕಾ ಗಾಂಧಿ, ಬಿಜೆಪಿಗೆ ತರಾಟೆ
ಸಂಸತ್ ಅಧಿವೇಶನದಲ್ಲಿ ಇಂದು ವಂದೇ ಮಾತರಂ ಗೀತೆಯ ಬಗ್ಗೆ ತೀವ್ರ ಚರ್ಚೆಗಳು ನಡೆದಿವೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ಹೆಸರನ್ನು ಪ್ರಸ್ತಾಪಿಸಿದ್ದರು. ಈ ಹಿನ್ನೆಲೆಯಲ್ಲಿ ತಿರುಗೇಟು ನೀಡಿರುವ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ, 'ನೀವು ಚುನಾವಣೆಗಾಗಿ ಇಲ್ಲಿದ್ದೀರಿ, ನಾವು ದೇಶಕ್ಕಾಗಿ ಇಲ್ಲಿದ್ದೇವೆ' ಎಂದು ಟೀಕಾಪ್ರಹಾರ ನಡೆಸಿದ್ದಾರೆ. ಅಲ್ಲದೆ, ಸುಭಾಷ್ ಚಂದ್ರ ಬೋಸ್ಗೆ ವಂದೇ ಮಾತರಂ ಕುರಿತು ನೆಹರು ಬರೆದಿದ್ದ ಪತ್ರವನ್ನು ಕೂಡ ಓದಿದ್ದಾರೆ.
- Sushma Chakre
- Updated on: Dec 8, 2025
- 7:28 pm
ವಂದೇ ಮಾತರಂ ಗೀತೆ ಬ್ರಿಟಿಷರ ಎದುರು ಬಂಡೆಯಂತೆ ನಿಂತಿತ್ತು: ಪ್ರಧಾನಿ ಮೋದಿ
Vande Mataram: ವಂದೇ ಮಾತರಂ ಗೀತೆಯು ಬ್ರಿಟಿಷರ ಎದುರು ಬಂಡೆಯಂತೆ ನಿಂತಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಕುರಿತು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಲೋಕಸಭೆಯಲ್ಲಿ ಚರ್ಚೆ ಆರಂಭಿಸಿದರು. ವಂದೇ ಮಾತರಂ ಭಾರತ ಸ್ವಾತಂತ್ರ್ಯ, ಬಲಿದಾನದ ಮಂತ್ರವಾಗಿತ್ತು. ವಂದೇ ಮಾತರಂ ಅನ್ನು ನಾವೆಲ್ಲರೂ ಬುದ್ಧಿವಂತಿಕೆಯಿಂದ ಬಳಸಿಕೊಂಡರೆ ಅದು ಮುಂದಿನ ಪೀಳಿಗೆಗೆ ಸ್ಫೂರ್ತಿಯಾಗಬಹುದು.
- Nayana Rajeev
- Updated on: Dec 8, 2025
- 1:12 pm
GST ದರ ಕಡಿತದಿಂದ ರಾಜ್ಯಗಳ ಆದಾಯಕ್ಕೆ ಹೊಡೆತ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಕೇಂದ್ರ ಜಿಎಸ್ಟಿ ದರ ಕಡಿತದಿಂದ ಜನಾಸಾಮಾನ್ಯರಿಗೆ ರಿಲೀಫ್ ನೀಡಿದೆ. ಆದರೆ ಇದು ರಾಜ್ಯಗಳಿಗೆ ಬಿಗ್ ಶಾಕ್ ಉಂಟು ಮಾಡಿದೆ. ಕರ್ನಾಟಕ ರಾಜ್ಯದ ಜಿಎಸ್ಟಿ ಸಂಗ್ರಹಣೆಯೂ ಕುಸಿದಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದು, ಸೆಸ್ನಿಂದ ಸಂಗ್ರಹವಾಗುವ ಆದಾಯದ ಅರ್ಧದಷ್ಟು ಭಾಗವನ್ನು ರಾಜ್ಯದೊಂದಿಗೆ ಹಂಚಿಕೊಳ್ಳುವಂತೆ ಮನವಿ ಮಾಡಿದ್ದಾರೆ.
- Harish GR
- Updated on: Dec 5, 2025
- 10:36 pm
ಪುಟಿನ್ ಭೇಟಿ ಭಾರತ-ರಷ್ಯಾ ಬಾಂಧವ್ಯಕ್ಕೆ ಚೈತನ್ಯ ತುಂಬಲಿದೆ; ಪ್ರಧಾನಿ ಮೋದಿ
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ ಸಂಜೆ 2 ದಿನದ ಭೇಟಿಗಾಗಿ ಭಾರತಕ್ಕೆ ಬಂದಿದ್ದರು. ದೆಹಲಿಯಲ್ಲಿ 2 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳಲ್ಲಿ, ಔತಣಕೂಟದಲ್ಲಿ ಪಾಲ್ಗೊಂಡಿದ್ದ ಅವರು ಪ್ರಧಾನಿ ಮೋದಿಯವರೊಂದಿಗೆ ಸುದ್ದಿಗೋಷ್ಠಿಯಲ್ಲೂ ಮಾತನಾಡಿದರು. ಅವರ ಈ ಭೇಟಿಯ ಹೈಲೈಟ್ಸ್ ಅನ್ನು ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಪುಟಿನ್ ಅವರ ಈ ಭೇಟಿ ಭಾರತ ಹಾಗೂ ರಷ್ಯಾ ದೇಶಗಳ ಬಾಂಧವ್ಯಕ್ಕೆ ಚೈತನ್ಯ ತುಂಬಲಿದೆ ಎಂದಿದ್ದಾರೆ.
- Sushma Chakre
- Updated on: Dec 5, 2025
- 10:09 pm