Narendra Modi
ನರೇಂದ್ರ ಮೋದಿ ಅವರು ಪ್ರಸ್ತುತ ಭಾರತದ ಪ್ರಧಾನಿಯಾಗಿದ್ದಾರೆ. ಮೇ 2014 ರಲ್ಲಿ ಅವರು ಮೊದಲ ಬಾರಿಗೆ ದೇಶದ ಪ್ರಧಾನಿಯಾದರು. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಗೆದ್ದ ನಂತರ ಮೋದಿ ಅವರು ಸತತ ಎರಡನೇ ಬಾರಿಗೆ ದೇಶದ ಪ್ರಧಾನಿಯಾದರು. ಮೋದಿ ದೇಶದ ಪ್ರಧಾನಿಯಾಗುವ ಮೊದಲು ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ನರೇಂದ್ರ ಮೋದಿ ಅವರು 2001 ರಿಂದ 2014 ರವರೆಗೆ ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಅವರು ಪ್ರಸ್ತುತ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ
ನರೇಂದ್ರ ಮೋದಿಯವರು ಭಾರತೀಯ ಜನತಾ ಪಕ್ಷದ ಪ್ರಮುಖ ನಾಯಕರಾಗಿದ್ದಾರೆ. ಈ ಹಿಂದೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ (ಆರ್ಎಸ್ಎಸ್) ಕೆಲಸ ಮಾಡಿದ್ದರು. ಅವರು 17 ಸೆಪ್ಟೆಂಬರ್ 1950 ರಂದು ಗುಜರಾತ್ನ ವಾಡ್ನಗರದಲ್ಲಿ ಜನಿಸಿದರು.
2014ರ ಲೋಕಸಭೆಯಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಗೆದ್ದಿತ್ತು. ಇದಾದ ನಂತರ 2019ರಲ್ಲೂ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ ಮೋದಿ ಮತ್ತೊಮ್ಮೆ ಪ್ರಧಾನಿಯಾದರು. 2014ರಿಂದ ಬಿಜೆಪಿ ಹಲವು ರಾಜ್ಯಗಳಲ್ಲಿ ಮೋದಿ ಹೆಸರನ್ನೇ ಪ್ರಮುಖ ಅಸ್ತ್ರವಾಗಿಟ್ಟುಕೊಂಡು ಚುನಾವಣೆ ಗೆದ್ದಿದೆ.
ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಅಧಿಕಾರಾವಧಿಯಲ್ಲಿ ಹಲವು ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಇದು ದೇಶದ ಜನರಲ್ಲಿ ಅವರ ಜನಪ್ರಿಯತೆಯನ್ನು ಹೆಚ್ಚಿಸಿತು. ಈ ನಿರ್ಧಾರಗಳಲ್ಲಿ ಪಾಕಿಸ್ತಾನದಲ್ಲಿ ಸರ್ಜಿಕಲ್ ಸ್ಟ್ರೈಕ್ಗಳು, ನೋಟು ಅಮಾನ್ಯೀಕರಣ, ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಧಿಯನ್ನು ತೆಗೆದುಹಾಕುವುದು, ತ್ರಿವಳಿ ತಲಾಖ್ ಕಾನೂನು ಅನುಷ್ಠಾನ ಇತ್ಯಾದಿಗಳು ಸೇರಿವೆ.
ನಮೋ ಕ್ರೇಜ್; ಇನ್ಸ್ಟಾಗ್ರಾಮ್ನಲ್ಲಿ ಪ್ರಧಾನಿ ಮೋದಿಗೆ ರಾತ್ರೋರಾತ್ರಿ 1.1 ಮಿಲಿಯನ್ ಫಾಲೋವರ್ಸ್ ಹೆಚ್ಚಳ
ಭಾರತದ ಪ್ರಧಾನಿ ನರೇಂದ್ರ ಮೋದಿ ಕ್ರೇಜ್ ಮತ್ತೊಮ್ಮೆ ಸಾಮಾಜಿಕ ಮಾಧ್ಯಮ ಜಗತ್ತಿನಲ್ಲಿ ಪ್ರಮುಖ ಆಕರ್ಷಣೆಯಾಗಿದೆ. ಇನ್ಸ್ಟಾಗ್ರಾಮ್ನಲ್ಲಿ ಅವರ ಅನುಯಾಯಿಗಳ ಸಂಖ್ಯೆ ಕೆಲವೇ ನಿಮಿಷಗಳಲ್ಲಿ ಗಗನಕ್ಕೇರಿದೆ. ಕೇವಲ 12 ಗಂಟೆಗಳಲ್ಲಿ ಮೋದಿ ಅವರ ಇನ್ಸ್ಟಾಗ್ರಾಂ ಖಾತೆಗೆ 1.1 ಮಿಲಿಯನ್ ಅನುಯಾಯಿಗಳು ಹೆಚ್ಚಾಗಿದ್ದಾರೆ. ಗುರುವಾರ ಮಧ್ಯರಾತ್ರಿ ಪ್ರಧಾನಿ ಮೋದಿ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯ ಕುರಿತು ಪ್ರಮುಖ ಘೋಷಣೆ ಮಾಡಿದ್ದರು. ಅವರ ಈ ಸೆಲ್ಫೀ ವಿಡಿಯೋ ಬಳಿಕ ಫಾಲೋವರ್ಗಳ ಸಂಖ್ಯೆ ಭಾರೀ ಹೆಚ್ಚಾಗಿದೆ.
- Sushma Chakre
- Updated on: Jul 24, 2026
- 8:31 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದವರಿಗೆ 10 ಕೋಟಿ ರೂ. ದಂಡ, 10 ವರ್ಷ ಜೈಲು
ನೀಟ್ ಸೇರಿದಂತೆ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆಯಲು ಕೇಂದ್ರ ಸರ್ಕಾರ 'ಸಾರ್ವಜನಿಕ ಪರೀಕ್ಷೆಗಳ ಕಾಯ್ದೆ'ಗೆ ಕಠಿಣ ತಿದ್ದುಪಡಿ ತರುತ್ತಿದೆ. ಇನ್ನು ಅಪರಾಧಿಗಳಿಗೆ 10 ಕೋಟಿ ರೂ. ದಂಡ, 10 ವರ್ಷ ಜೈಲು, ಮತ್ತು ಸೇವಾ ಪೂರೈಕೆದಾರರಿಗೆ ಕಪ್ಪುಪಟ್ಟಿ ಶಿಕ್ಷೆ ಸಿಗಲಿದೆ. ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳು ಶೀಘ್ರ ತೀರ್ಪು ನೀಡಲಿವೆ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಕಾಪಾಡಲು ಈ ಕಾಯ್ದೆ ನಿರ್ಣಾಯಕವಾಗಿದೆ.
- Nayana Rajeev
- Updated on: Jul 24, 2026
- 10:26 pm
TV9 Kannada News Live: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್: 47 ಅಧಿಕಾರಿಗಳನ್ನ ವಜಾ ಮಾಡಿದ ಕೇಂದ್ರ ಸರ್ಕಾರ
Karnataka News Today Live Updates: ನೀಟ್ ಅಕ್ರಮದ ಕುರಿತು ಪ್ರಧಾನಿ ಮೋದಿ ವಿಡಿಯೋ ಸಂದೇಶ ಹಾಗೂ ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯದ ಲೇಟೆಸ್ಟ್ ಅಪ್ಡೇಟ್ಸ್ ಇಲ್ಲಿದೆ. ಜೊತೆಗೆ ಉತ್ತರ ಕನ್ನಡದಲ್ಲಿ ಭಾರಿ ಮಳೆ, ಶಾಲೆಗಳಿಗೆ ರಜೆ ಪ್ರಕಟ ಸೇರಿದಂತೆ ರಾಜ್ಯ ಹಾಗೂ ದೇಶದ ಪ್ರಮುಖ ಸುದ್ದಿಗಳ ಕ್ಷಣಕ್ಷಣದ ಲೈವ್ ಅಪ್ಡೇಟ್ಗಳನ್ನು ಪಡೆಯಿರಿ.
- Bhavana Hegde
- Updated on: Jul 24, 2026
- 11:10 pm
ನೀಟ್ ವಿವಾದದ ಬೆನ್ನಲ್ಲೇ ಬಿಗ್ ಆ್ಯಕ್ಷನ್: ಉನ್ನತ ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವಜಾ, ನರೇಶ್ ಗಂಗ್ವಾರ್ ನೂತನ ಕಾರ್ಯದರ್ಶಿಯಾಗಿ ನೇಮಕ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಮತ್ತು ಸಿಜೆಪಿ ಪ್ರತಿಭಟನೆಗಳ ನಂತರ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಉನ್ನತ ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ಅವರನ್ನು ಹುದ್ದೆಯಿಂದ ವಜಾಗೊಳಿಸಿ, ಅವರ ಸ್ಥಾನಕ್ಕೆ ನರೇಶ್ ಗಂಗ್ವಾರ್ ಅವರನ್ನು ನೂತನ ಕಾರ್ಯದರ್ಶಿಯಾಗಿ ನೇಮಿಸಿದೆ. ಈ ನಿರ್ಧಾರವು ಪರೀಕ್ಷಾ ಅಕ್ರಮಗಳ ವಿರುದ್ಧ ಸರ್ಕಾರದ ಕಟ್ಟುನಿಟ್ಟಿನ ನಿಲುವನ್ನು ಸ್ಪಷ್ಟಪಡಿಸುತ್ತದೆ. ಇದು ವಿದ್ಯಾರ್ಥಿ ಸಮುದಾಯಕ್ಕೆ ಪ್ರಬಲ ಸಂದೇಶ ರವಾನಿಸಿದೆ.
- Nayana Rajeev
- Updated on: Jul 24, 2026
- 8:07 am
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ವಜಾಗೊಳಿಸಿ: ಸಿಜೆಪಿ ಒತ್ತಾಯ, ಪ್ರತಿಭಟನೆ ಮುಂದುವರಿಕೆ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಕಾಕ್ರೋಚ್ ಜನತಾ ಪಾರ್ಟಿ (CJP) ಆಗ್ರಹಿಸಿದೆ. ಪ್ರಧಾನಿ ಮೋದಿ ಅವರ ಫಾಸ್ಟ್ ಟ್ರ್ಯಾಕ್ ಕೋರ್ಟ್ ಮಸೂದೆ ಹೇಳಿಕೆಯನ್ನು ಸಿಜೆಪಿ ಟೀಕಿಸಿದೆ. ಮತ್ತೊಂದೆಡೆ, ಸರ್ಕಾರದಿಂದ ಭರವಸೆ ಪಡೆದ ನಂತರ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ತಮ್ಮ 26 ದಿನಗಳ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ. ಪ್ರಧಾನಿ ಮೋದಿ ವಾಂಗ್ರಗ್ಯಕ್ಕೆ ಹಾರೈಸಿದ್ದಾರೆ.
- Nayana Rajeev
- Updated on: Jul 24, 2026
- 7:50 am
ಪ್ರಶ್ನೆಪತ್ರಿಕೆ ಸೋರಿಕೆ ಸಣ್ಣ ವಿಷಯವಲ್ಲ, ಕಠಿಣ ಕಾನೂನು ರೂಪಿಸ್ತೇವೆ: ತಡರಾತ್ರಿ ಸೆಲ್ಫಿ ವಿಡಿಯೋ ಮಾಡಿ ಮೋದಿ ಭರವಸೆ
ಪ್ರಶ್ನೆಪತ್ರಿಕೆ ಸೋರಿಕೆ ಗಂಭೀರ ಅಪರಾಧ ಎಂದ ಪ್ರಧಾನಿ ಮೋದಿ, ಈ ದಂಧೆಯಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ವಿಧಿಸುವುದಾಗಿ ಭರವಸೆ ನೀಡಿದ್ದಾರೆ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ರಕ್ಷಿಸಲು ಕೇಂದ್ರ ಸರ್ಕಾರವು ಫಾಸ್ಟ್ ಟ್ರ್ಯಾಕ್ ಕೋರ್ಟ್ಗಳನ್ನು ಸ್ಥಾಪಿಸಲು ಮತ್ತು ಹೊಸ ಕಠಿಣ ಕಾನೂನು ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲು ಸಿದ್ಧತೆ ನಡೆಸಿದೆ. ಸಂಪುಟ ಸಭೆಯಲ್ಲಿ ಈ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
- Nayana Rajeev
- Updated on: Jul 24, 2026
- 7:34 am
ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು: ಪ್ರಧಾನಿ ಮೋದಿ ಭರವಸೆ ಬೆನ್ನಲ್ಲೇ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ
Sonam Wangchuk hunger strike ends: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ವಿದ್ಯಾರ್ಥಿಗಳ ಪ್ರತಿಭಟನೆ ಜತೆ ಕೈಜೋಡಿಸಿ 26 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಹೋರಾಟಗಾರ ಸೋನಂ ವಾಂಗ್ಚುಕ್, ಕೇಂದ್ರ ಸರ್ಕಾರದ ಭರವಸೆಯ ಬಳಿಕ ಉಪವಾಸ ಅಂತ್ಯಗೊಳಿಸಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು ತರಲಾಗುವುದು ಎಂದು ಪ್ರಧಾನಿ ಮೋದಿ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ಸೋನಂ ಉಪವಾಸ ಅಂತ್ಯಗೊಂಡಿದೆ.
- Ganapathi Sharma
- Updated on: Jul 24, 2026
- 7:35 am
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಮೋದಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ:ಪ್ರಲ್ಹಾದ್ ಜೋಶಿ
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾದ ಅಪರಾಧಿಗಳಿಗೆ ಕಠಿಣ ಹಾಗೂ ತ್ವರಿತ ಶಿಕ್ಷೆ ಖಚಿತಪಡಿಸಲು 'ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸಲಾಗುವುದು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಘೋಷಣೆಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರವು ಪರೀಕ್ಷಾ ಅಕ್ರಮಗಳ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸಲು ಸಂಪೂರ್ಣ ಸಿದ್ಧವಾಗಿದೆ ಎಂದು ಅವರು ಪುನರುಚ್ಚರಿಸಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ವಿರೋಧ ಪಕ್ಷಗಳ ಪ್ರಚಾರ ಶೈಲಿ ಮತ್ತು ಸರ್ಕಾರದ ಬದ್ಧತೆಯ ಕುರಿತು ಪ್ರಮುಖ ವಿವರಗಳನ್ನು ಹಂಚಿಕೊಂಡಿದ್ದಾರೆ.
- Nayana Rajeev
- Updated on: Jul 23, 2026
- 3:41 pm
TV9 Kannada News Highlights: ಮಳೆ ಮುನ್ಸೂಚನೆ, ಶಿರಸಿ-ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ ಘೋಷಣೆ
Karnataka News Today Highlights:ನೀಟ್ ಅಕ್ರಮದ ವಿರುದ್ಧ ಪ್ರಧಾನಿ ಮೋದಿ ವಾರ್ನಿಂಗ್, ಶಾಸಕ ಹರೀಶ್ ಮೇಲೆ ಮೊಟ್ಟೆ ಎಸೆದ ಆರೋಪಿ ಬಂಧನ, ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಚರ್ಚೆ ಹಾಗೂ ಸಂಸತ್ತಿನಲ್ಲಿ ಎನ್ಡಿಎ ಪ್ರತಿಭಟನೆಯ ಇಂದಿನ ಪ್ರಮುಖ ಸುದ್ದಿಗಳು ಇಲ್ಲಿದೆ ನೋಡಿ.
- Akshay Pallamajalu
- Updated on: Jul 24, 2026
- 11:07 am
ನೀಟ್ ಪೇಪರ್ ಸೋರಿಕೆ: ಮೌನ ಮುರಿದ ಪ್ರಧಾನಿ, ಫಾಸ್ಟ್ ಟ್ರ್ಯಾಕ್ ಕೋರ್ಟ್ ಮಾಡಿ ಅಪರಾಧಿಗಳಿಗೆ ಶಿಕ್ಷೆ ಕೊಡ್ತೀವಿ ಎಂದ ಮೋದಿ
PM Modi Statement on NEET Paper Leaks: ದೇಶಾದ್ಯಂತ ವ್ಯಾಪಕ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ವಿದ್ಯಾರ್ಥಿಗಳ ತೀವ್ರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮೌನ ಮುರಿದಿದ್ದಾರೆ. ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದ ಅಪರಾಧಿಗಳಿಗೆ ತ್ವರಿತ ಮತ್ತು ಕಠಿಣ ಶಿಕ್ಷೆ ಖಚಿತಪಡಿಸಲು 'ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳನ್ನು' ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಯುವಜನತೆಯ ಭವಿಷ್ಯ ಮತ್ತು ಕಲ್ಯಾಣ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ಹೇಳಿದ್ದು, ಇದು ವಿದ್ಯಾರ್ಥಿಗಳ ಹಿತರಕ್ಷಣೆಗೆ ಸರ್ಕಾರದ ಪ್ರಮುಖ ಹೆಜ್ಜೆಯಾಗಿದೆ.
- Nayana Rajeev
- Updated on: Jul 23, 2026
- 9:39 am
ಪ್ರಧಾನಿ ಮೋದಿ ನಿವಾಸದಲ್ಲಿ ಉನ್ನತ ಮಟ್ಟದ ಸಭೆ; ವಿಕಸಿತ ಭಾರತ ಸೇರಿ ಪ್ರಮುಖ ವಿಷಯಗಳ ಚರ್ಚೆ
ಪ್ರಧಾನಿ ನರೇಂದ್ರ ಮೋದಿ ಇಂದು ದೆಹಲಿಯ ಲೋಕ ಕಲ್ಯಾಣ್ ಮಾರ್ಗದಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು. ವಿಕಸಿತ ಭಾರತದ ಗುರಿಗಳನ್ನು ಸಾಧಿಸುವ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ, ಕೃಷಿ, ಸಮಾಜ ಕಲ್ಯಾಣ, ಯುವಜನತೆ, ಕ್ರೀಡೆ ಮತ್ತು ಇತರ ಪ್ರಮುಖ ಕ್ಷೇತ್ರಗಳಲ್ಲಿ ಆಗುತ್ತಿರುವ ಪ್ರಗತಿಯನ್ನು ಕಾರ್ಯದರ್ಶಿಗಳ ಜೊತೆ ಚರ್ಚಿಸಿದರು. ಜನರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ವಿನ್ಯಾಸಗೊಳಿಸಲಾದ ಸುಧಾರಣೆಗಳು ದೇಶದಲ್ಲಿ ನಿಜವಾದ ಬದಲಾವಣೆಯನ್ನು ತರಬಹುದು ಎಂದು ಮೋದಿ ಹೇಳಿದರು.
- Sushma Chakre
- Updated on: Jul 22, 2026
- 10:21 pm
10 ವರ್ಷಗಳಲ್ಲಿ 152 ಪ್ರಶ್ನೆಪತ್ರಿಕೆ ಸೋರಿಕೆ, ಒಬ್ಬರಿಗೂ ಶಿಕ್ಷೆಯಾಗಿಲ್ಲ; ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸೋಮವಾರ ಜಂತರ್ ಮಂತರ್ನಲ್ಲಿ ನಡೆಸಲಾಗಿದ್ದ ಯುವಕರ ಪ್ರತಿಭಟನೆ ವೇಳೆ ಪೊಲೀಸ್ ಲಾಠಿಚಾರ್ಜ್ ನಡೆಸಲಾಗಿತ್ತು. ಈ ಘಟನೆಯಲ್ಲಿ ಅನೇಕ ಯುವಕರಿಗೆ ಗಂಭೀರ ಗಾಯಗಳಾಗಿತ್ತು. ಈ ದೌರ್ಜನ್ಯವನ್ನು ವಿರೋಧಿಸಿ ಮಂಗಳವಾರ ಪ್ರಧಾನಿ ನಿವಾಸದ ಬಳಿ ಕಾಂಗ್ರೆಸ್ ನಾಯಕರು ಧರಣಿ ನಡೆಸುತ್ತಿದ್ದಾಗ ಪೊಲೀಸರು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವರನ್ನು ವಶಕ್ಕೆ ಪಡೆದು ಬಳಿಕ ರಾತ್ರಿ ಬಿಡುಗಡೆ ಮಾಡಿದ್ದರು. ಇದೀಗ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಸುದ್ದಿಗೋಷ್ಠಿ ನಡೆಸಿದ್ದಾರೆ.
- Sushma Chakre
- Updated on: Jul 22, 2026
- 5:42 pm