Narendra Modi
ನರೇಂದ್ರ ಮೋದಿ ಅವರು ಪ್ರಸ್ತುತ ಭಾರತದ ಪ್ರಧಾನಿಯಾಗಿದ್ದಾರೆ. ಮೇ 2014 ರಲ್ಲಿ ಅವರು ಮೊದಲ ಬಾರಿಗೆ ದೇಶದ ಪ್ರಧಾನಿಯಾದರು. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಗೆದ್ದ ನಂತರ ಮೋದಿ ಅವರು ಸತತ ಎರಡನೇ ಬಾರಿಗೆ ದೇಶದ ಪ್ರಧಾನಿಯಾದರು. ಮೋದಿ ದೇಶದ ಪ್ರಧಾನಿಯಾಗುವ ಮೊದಲು ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ನರೇಂದ್ರ ಮೋದಿ ಅವರು 2001 ರಿಂದ 2014 ರವರೆಗೆ ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಅವರು ಪ್ರಸ್ತುತ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ
ನರೇಂದ್ರ ಮೋದಿಯವರು ಭಾರತೀಯ ಜನತಾ ಪಕ್ಷದ ಪ್ರಮುಖ ನಾಯಕರಾಗಿದ್ದಾರೆ. ಈ ಹಿಂದೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ (ಆರ್ಎಸ್ಎಸ್) ಕೆಲಸ ಮಾಡಿದ್ದರು. ಅವರು 17 ಸೆಪ್ಟೆಂಬರ್ 1950 ರಂದು ಗುಜರಾತ್ನ ವಾಡ್ನಗರದಲ್ಲಿ ಜನಿಸಿದರು.
2014ರ ಲೋಕಸಭೆಯಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಗೆದ್ದಿತ್ತು. ಇದಾದ ನಂತರ 2019ರಲ್ಲೂ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ ಮೋದಿ ಮತ್ತೊಮ್ಮೆ ಪ್ರಧಾನಿಯಾದರು. 2014ರಿಂದ ಬಿಜೆಪಿ ಹಲವು ರಾಜ್ಯಗಳಲ್ಲಿ ಮೋದಿ ಹೆಸರನ್ನೇ ಪ್ರಮುಖ ಅಸ್ತ್ರವಾಗಿಟ್ಟುಕೊಂಡು ಚುನಾವಣೆ ಗೆದ್ದಿದೆ.
ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಅಧಿಕಾರಾವಧಿಯಲ್ಲಿ ಹಲವು ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಇದು ದೇಶದ ಜನರಲ್ಲಿ ಅವರ ಜನಪ್ರಿಯತೆಯನ್ನು ಹೆಚ್ಚಿಸಿತು. ಈ ನಿರ್ಧಾರಗಳಲ್ಲಿ ಪಾಕಿಸ್ತಾನದಲ್ಲಿ ಸರ್ಜಿಕಲ್ ಸ್ಟ್ರೈಕ್ಗಳು, ನೋಟು ಅಮಾನ್ಯೀಕರಣ, ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಧಿಯನ್ನು ತೆಗೆದುಹಾಕುವುದು, ತ್ರಿವಳಿ ತಲಾಖ್ ಕಾನೂನು ಅನುಷ್ಠಾನ ಇತ್ಯಾದಿಗಳು ಸೇರಿವೆ.
ಬುಲ್ಡೋಜರ್ ಮೂಲಕ ನರೇಗಾ ನೆಲಸಮ; ಬಿಜೆಪಿ ಸರ್ಕಾರದ ವಿರುದ್ಧ ಸೋನಿಯಾ ಗಾಂಧಿ ಆಕ್ರೋಶ
ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಮಂಡಿಸಿದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಿಗೆ ರೋಜ್ಗಾರ್ ಮತ್ತು ಅಜೀವಿಕಾ ಮಿಷನ್ ಗ್ರಾಮೀಣ (VB-G RAM G) ಮಸೂದೆಯನ್ನು ಸಂಸತ್ತು ಅಂಗೀಕರಿಸಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೋದಿ ಸರ್ಕಾರವು ನರೇಗಾ ಮೇಲೆ ಬುಲ್ಡೋಜರ್ ನಡೆಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
- Sushma Chakre
- Updated on: Dec 20, 2025
- 7:52 pm
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್ನ ವಿಮಾನ ನಿಲ್ದಾಣ ಟರ್ಮಿನಲ್ ಉದ್ಘಾಟನೆ
ಸುಮಾರು 4,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಹೊಸದಾಗಿ ಉದ್ಘಾಟನೆಗೊಂಡ ಟರ್ಮಿನಲ್ ಭಾರತದ ಮೊದಲ ಪ್ರಕೃತಿ ಪ್ರೇರಿತ ವಿಮಾನ ನಿಲ್ದಾಣದ ಟರ್ಮಿನಲ್ ಆಗಿದೆ. ಅಸ್ಸಾಂ ಪ್ರದೇಶದ ನೈಸರ್ಗಿಕ ಭೂದೃಶ್ಯವನ್ನು ಪ್ರತಿಬಿಂಬಿಸುವಂತೆ ವಿನ್ಯಾಸಗೊಳಿಸಲಾದ ಈ ಟರ್ಮಿನಲ್ ಪ್ರಯಾಣಿಕರ ನಿರ್ವಹಣಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸುತ್ತದೆ ಮತ್ತು ಸಂಪರ್ಕವನ್ನು ಸುಧಾರಿಸುತ್ತದೆ. ಹಾಗೇ, ಅಸ್ಸಾಂ ಮತ್ತು ನೆರೆಯ ರಾಜ್ಯಗಳಲ್ಲಿ ಪ್ರವಾಸೋದ್ಯಮ, ವ್ಯಾಪಾರ ಮತ್ತು ಆರ್ಥಿಕ ಚಟುವಟಿಕೆಯನ್ನು ಹೆಚ್ಚಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.
- Sushma Chakre
- Updated on: Dec 20, 2025
- 5:08 pm
ಮಮತಾ ಬ್ಯಾನರ್ಜಿ ಸರ್ಕಾರ ನುಸುಳುಕೋರರನ್ನು ರಕ್ಷಿಸಲು ಎಸ್ಐಆರ್ ಅನ್ನು ವಿರೋಧಿಸುತ್ತಿದೆ; ಪ್ರಧಾನಿ ಮೋದಿ ಆರೋಪ
ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. 2026ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅವಕಾಶ ನೀಡುವಂತೆ ಅವರು ಬಂಗಾಳದ ಜನರಿಗೆ ಮನವಿ ಮಾಡಿದ್ದಾರೆ. ದಟ್ಟವಾದ ಮಂಜಿನಿಂದಾಗಿ ತಾಹೆರ್ಪುರ ರ್ಯಾಲಿಯ ಸ್ಥಳವನ್ನು ತಲುಪಲು ವಿಫಲವಾದ ಕಾರಣದಿಂದಾಗಿ ಪಶ್ಚಿಮ ಬಂಗಾಳದ ನಾಡಿಯಾದಲ್ಲಿ ವರ್ಚುವಲ್ ಆಗಿ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಾ ಪ್ರಧಾನಿ ಮೋದಿ ಈ ಹೇಳಿಕೆಗಳನ್ನು ನೀಡಿದ್ದಾರೆ. ಇಂದು ಮಧ್ಯಾಹ್ನ ಅವರು ರ್ಯಾಲಿಯ ಸ್ಥಳಕ್ಕೆ ತಲುಪಬೇಕಿತ್ತು. ಆದರೆ ಕೆಟ್ಟ ಹವಾಮಾನದಿಂದಾಗಿ ಅವರ ಹೆಲಿಕಾಪ್ಟರ್ ತಾಹೆರ್ಪುರ ಹೆಲಿಪ್ಯಾಡ್ ಮೇಲೆ ಸ್ವಲ್ಪ ಹೊತ್ತು ಹಾರಾಡುತ್ತಾ ಕೊಲ್ಕತ್ತಾ ವಿಮಾನ ನಿಲ್ದಾಣಕ್ಕೆ ಹಿಂತಿರುಗಬೇಕಾಯಿತು.
- Sushma Chakre
- Updated on: Dec 20, 2025
- 4:49 pm
Video: ವಿಶ್ವ ಆರೋಗ್ಯ ಸಂಸ್ಥೆಯ ಶೃಂಗಸಭೆಯಲ್ಲಿ ಅಶ್ವಗಂಧ ಅಂಚೆ ಚೀಟಿ ಬಿಡುಗಡೆ, ಸಾಂಪ್ರದಾಯಿಕ ಔಷಧಗಳ ಬಗ್ಗೆ ಪ್ರಧಾನಿ ಮೋದಿ ಮಾತು
ವಿಶ್ವ ಆರೋಗ್ಯ ಸಂಸ್ಥೆ ಶೃಂಗಸಭೆಯಲ್ಲಿ ಅಶ್ವಗಂಧದ ಅಂಚೆ ಚೀಟಿ ಬಿಡುಗಡೆಯಾಗಿದೆ. ಪ್ರಧಾನಿ ಮೋದಿ ಸಾಂಪ್ರದಾಯಿಕ ಔಷಧವು ವಿಜ್ಞಾನದ ಮೂಲಕ ಸಾರ್ವಜನಿಕ ವಿಶ್ವಾಸ ಗಳಿಸಬೇಕೆಂದರು. ಶತಮಾನಗಳಿಂದ ಬಳಕೆಯಲ್ಲಿರುವ ಅಶ್ವಗಂಧವು COVID-19 ಸಮಯದಲ್ಲಿ ಜಾಗತಿಕ ಬೇಡಿಕೆ ಪಡೆಯಿತು. ಇದು ಹೊಟ್ಟೆ ಸಮಸ್ಯೆಗಳು, ಸಂಧಿವಾತ ನೋವು, ಮೂಳೆ ಬಲಪಡಿಸಲು, ಕಣ್ಣು ಹಾಗೂ ಗಂಟಲು ಸಮಸ್ಯೆಗಳಿಗೆ ಮತ್ತು ಕ್ಷಯರೋಗಕ್ಕೆ ಪ್ರಯೋಜನಕಾರಿಯಾಗಿದೆ.
- Nayana Rajeev
- Updated on: Dec 20, 2025
- 12:14 pm
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಈಶಾನ್ಯ ರಾಜ್ಯಗಳ ಅತಿದೊಡ್ಡ ವಿಮಾನ ನಿಲ್ದಾಣ
ಗುವಾಹಟಿಯಲ್ಲಿ ನಾಳೆ ಈಶಾನ್ಯ ರಾಜ್ಯದ ಅತಿ ದೊಡ್ಡ ಹಾಗೂ ನೈಸರ್ಗಿಕ ಥೀಮ್ನ ವಿಮಾನ ನಿಲ್ದಾಣದ ಟರ್ಮಿನಲ್ ಉದ್ಘಾಟನೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಈ ಟರ್ಮಿನಲ್ ಅನ್ನು ಉದ್ಘಾಟಿಸಲಿದ್ದಾರೆ. ಇದು ಅಸ್ತಿತ್ವದಲ್ಲಿರುವ ಟರ್ಮಿನಲ್ಗಿಂತ 7 ಪಟ್ಟು ದೊಡ್ಡದಾಗಿದೆ. "ನಾನು ನಾಳೆ ಅಸ್ಸಾಂನ ಗುವಾಹಟಿಯನ್ನು ತಲುಪುತ್ತೇನೆ. ಅಲ್ಲಿ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಲಾಗುವುದು.
- Sushma Chakre
- Updated on: Dec 19, 2025
- 8:11 pm
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಪಕ್ಷಗಳ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ತಿನ ಚಳಿಗಾಲದ ಅಧಿವೇಶನದ ಮುಕ್ತಾಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಸಂಸತ್ತಿನ ಭವನದ ತಮ್ಮ ಕೊಠಡಿಯಲ್ಲಿ ಲೋಕಸಭೆಯ ಪಕ್ಷಗಳ ನಾಯಕರು ಮತ್ತು ಸಂಸತ್ ಸದಸ್ಯರೊಂದಿಗೆ ಸಭೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ, ಪ್ರಿಯಾಂಕಾ ಗಾಂಧಿ, ರಾಜನಾಥ್ ಸಿಂಗ್ ಸೇರಿದಂತೆ ಎಲ್ಲ ನಾಯಕರು ಹಾಗೂ ಸಂಸದರು ಈ ಸಭೆಯಲ್ಲಿ ಹಾಜರಿದ್ದರು.
- Sushma Chakre
- Updated on: Dec 19, 2025
- 4:31 pm
ಎಕ್ಸ್ನಲ್ಲಿ ಮೋದಿಗೆ ಇಲ್ಲ ಸರಿಸಾಟಿ; ಒಂದು ತಿಂಗಳ ಅತಿ ಮೆಚ್ಚಿನ 10 ಟ್ವೀಟ್ಗಳಲ್ಲಿ ಮೋದಿಯದ್ದೇ 8
Narendra Modi's 8 posts among the top-10 most liked tweets in last month: ಟ್ವಿಟ್ಟರ್ನಲ್ಲಿ (ಎಕ್ಸ್) ಕಳೆದ ಒಂದು ತಿಂಗಳಲ್ಲಿ ಅತಿಹೆಚ್ಚು ಲೈಕ್ ಪಡೆದ ಭಾರತೀಯರ ಟಾಪ್-10 ಪಟ್ಟಿಯಲ್ಲಿ ಎಂಟು ಪ್ರಧಾನಿ ನರೇಂದ್ರ ಮೋದಿ ಅವರದ್ದೇ ಇದೆ. ಈ ಟಾಪ್-10ನಲ್ಲಿ ಬೇರೆ ಭಾರತೀಯ ರಾಜಕಾರಣಿಯ ಒಂದೂ ಪೋಸ್ಟ್ ಇಲ್ಲ. ರಷ್ಯಾ ಪ್ರಧಾನಿ ಪುಟಿನ್, ಅಂಧರ ತಂಡದ ವಿಶ್ವಕಪ್ ವಿಕ್ರಮ ಇತ್ಯಾದಿ ಕುರಿತ ಮೋದಿ ಅವರ ಪೋಸ್ಟ್ಗಳಿಗೆ ಅತಿಹೆಚ್ಚು ಲೈಕ್ ಬಂದಿದೆ.
- Vijaya Sarathy SN
- Updated on: Dec 19, 2025
- 1:55 pm
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್ನಲ್ಲಿ ಆತ್ಮೀಯ ವಿದಾಯ
ಓಮನ್ ಸುಲ್ತಾನ್ ಹೈತಮ್ ಬಿನ್ ತಾರಿಕ್ ಅವರ ಸಹೋದರ ಮತ್ತು ಸುಲ್ತಾನರ ರಕ್ಷಣಾ ವ್ಯವಹಾರಗಳ ಉಪ ಪ್ರಧಾನ ಮಂತ್ರಿ ಸಯ್ಯದ್ ಶಿಹಾಬ್ ಬಿನ್ ತಾರಿಕ್ ಅಲ್ ಸೈದ್ ಅವರು ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಅವರಿಗೆ ವಿದಾಯ ಹೇಳಿದರು. ಎರಡೂ ದೇಶಗಳ ನಡುವಿನ ಐತಿಹಾಸಿಕ ಸಂಬಂಧ ಮತ್ತು ಅವರ ಆತ್ಮೀಯ ಸೌಹಾರ್ದತೆಯನ್ನು ಎತ್ತಿ ತೋರಿಸುತ್ತಾ, ಇಬ್ಬರೂ ನಾಯಕರು ಕೈಕುಲುಕಿ ಪರಸ್ಪರ ಅಪ್ಪಿಕೊಂಡರು. ಓಮನ್ ಉಪ ಪ್ರಧಾನಿ ಕೂಡ ಪ್ರಧಾನಿ ಮೋದಿ ಅವರಿಗೆ ವಿದಾಯ ಹೇಳುವಾಗ ಸಾಂಪ್ರದಾಯಿಕ ಭಾರತೀಯ ಶೈಲಿಯಲ್ಲಿ ಕೈ ಮುಗಿದು ನಮಸ್ಕರಿಸಿ ಬೀಳ್ಕೊಟ್ಟಿದ್ದು ವಿಶೇಷವಾಗಿತ್ತು.
- Sushma Chakre
- Updated on: Dec 18, 2025
- 7:49 pm
ಓಮನ್ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಪ್ರಧಾನಿ ಮೋದಿ ಓಮನ್ನಲ್ಲಿ ಅನಿವಾಸಿ ಭಾರತೀಯರ ಜೊತೆ ಸಂವಾದ ನಡೆಸಿದರು. ಈ ವೇಳೆ ಅವರು ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡಿದರು ಮತ್ತು ಓಮನ್ನ ಮಸ್ಕತ್ನಲ್ಲಿ ನಡೆದ ಸಮುದಾಯ ಕಾರ್ಯಕ್ರಮದಲ್ಲಿ ಭಾರತೀಯ ವಲಸಿಗರ ಕೊಡುಗೆಗಳನ್ನು ಗೌರವಿಸಿದರು. "ಭಾರತ್ ಮಾತಾ ಕಿ ಜೈ", "ವಂದೇ ಮಾತರಂ" ಮತ್ತು "ಮೋದಿ," ಎಂಬ ಘೋಷಣೆಗಳೊಂದಿಗೆ ಉತ್ಸಾಹದಿಂದ ಸ್ವಾಗತಿಸಲಾಯಿತು.
- Sushma Chakre
- Updated on: Dec 18, 2025
- 7:14 pm
ಮಸ್ಕತ್ಗೆ ಪ್ರಧಾನಿ ಮೋದಿ ಭೇಟಿ; ಭಾರತ-ಓಮನ್ ನಡುವೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ
ಪ್ರಧಾನಿ ನರೇಂದ್ರ ಮೋದಿ 3 ರಾಷ್ಟ್ರಗಳ ಪ್ರವಾಸಕ್ಕಾಗಿ 4 ದಿನಗಳ ಹಿಂದೆ ಭಾರತದಿಂದ ಹೊರಟಿದ್ದರು. ಈ ಪ್ರವಾಸದ ಕೊನೆಯ ಹಂತವಾಗಿ ಅವರು ನಿನ್ನೆ ಓಮನ್ಗೆ ತೆರಳಿದ್ದಾರೆ. ಇಂದು ಭಾರತ ಮತ್ತು ಓಮನ್ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿವೆ. ಭಾರತ ಮತ್ತು ಓಮನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ ಮತ್ತು ಶಕ್ತಿಯನ್ನು ನೀಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ.
- Sushma Chakre
- Updated on: Dec 18, 2025
- 6:47 pm
ಭಾರತದ ಪ್ರಧಾನಿಗೆ 29ನೇ ಜಾಗತಿಕ ಗೌರವ; ಮೋದಿಗೆ ಓಮನ್ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿಯ ನಂತರ ಪ್ರಧಾನಿ ನರೇಂದ್ರ ಮೋದಿಗೆ ಮಸ್ಕತ್ನಲ್ಲಿ ಓಮನ್ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಲಾಯಿತು. ಪ್ರಧಾನಿ ಮೋದಿಗೆ ದಿ ಫಸ್ಟ್ ಕ್ಲಾಸ್ ಆಫ್ ದಿ ಆರ್ಡರ್ ಆಫ್ ಓಮನ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಹಿಂದೆ ರಾಣಿ ಎಲಿಜಬೆತ್, ರಾಣಿ ಮ್ಯಾಕ್ಸಿಮ್, ಚಕ್ರವರ್ತಿ ಅಕಿಹಿಟೊ, ನೆಲ್ಸನ್ ಮಂಡೇಲಾ, ಜೋರ್ಡಾನ್ನ ಕೈಂಡ್ ಅಬ್ದುಲ್ಲಾ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ. ಪ್ರಧಾನಿ ಮೋದಿಗೆ ಇದು 29ನೇ ಜಾಗತಿಕ ಗೌರವವಾಗಿದೆ.
- Sushma Chakre
- Updated on: Dec 18, 2025
- 5:35 pm
ಓಮನ್ ಜೊತೆಗಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದದಿಂದ ಭಾರತಕ್ಕೆ ಆಗುವ ಲಾಭಗಳೇನು?
Benefits for India from FTA with Oman: ಓಮನ್ ದೇಶಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತಿಯಲ್ಲಿ ಭಾರತ ಹಾಗು ಓಮನ್ ದೇಶಗಳ ಮಧ್ಯೆ ವ್ಯಾಪಾರ ಒಪ್ಪಂದ ಏರ್ಪಡಲಿದೆ. ಮಸ್ಕಟ್ನಲ್ಲಿ ಎರಡೂ ದೇಶಗಳು ಸಮಗ್ರ ಆರ್ಥಿಕ ಸಹಕಾರ ಒಪ್ಪಂದಕ್ಕೆ ಸಹಿ ಮಾಡಲಿವೆ. ಇತ್ತೀಚಿನ ವರ್ಷಗಳಲ್ಲಿ ಭಾರತವು ಕೆಲವಾರು ದೇಶಗಳು ಹಾಗೂ ಗುಂಪುಗಳ ಜೊತೆ ವ್ಯಾಪಾರ ಒಪ್ಪಂದ ಮಾಡಿಕೊಂಡಿದೆ.
- Vijaya Sarathy SN
- Updated on: Dec 18, 2025
- 1:35 pm