Narendra Modi
ನರೇಂದ್ರ ಮೋದಿ ಅವರು ಪ್ರಸ್ತುತ ಭಾರತದ ಪ್ರಧಾನಿಯಾಗಿದ್ದಾರೆ. ಮೇ 2014 ರಲ್ಲಿ ಅವರು ಮೊದಲ ಬಾರಿಗೆ ದೇಶದ ಪ್ರಧಾನಿಯಾದರು. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಗೆದ್ದ ನಂತರ ಮೋದಿ ಅವರು ಸತತ ಎರಡನೇ ಬಾರಿಗೆ ದೇಶದ ಪ್ರಧಾನಿಯಾದರು. ಮೋದಿ ದೇಶದ ಪ್ರಧಾನಿಯಾಗುವ ಮೊದಲು ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ನರೇಂದ್ರ ಮೋದಿ ಅವರು 2001 ರಿಂದ 2014 ರವರೆಗೆ ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಅವರು ಪ್ರಸ್ತುತ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ
ನರೇಂದ್ರ ಮೋದಿಯವರು ಭಾರತೀಯ ಜನತಾ ಪಕ್ಷದ ಪ್ರಮುಖ ನಾಯಕರಾಗಿದ್ದಾರೆ. ಈ ಹಿಂದೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ (ಆರ್ಎಸ್ಎಸ್) ಕೆಲಸ ಮಾಡಿದ್ದರು. ಅವರು 17 ಸೆಪ್ಟೆಂಬರ್ 1950 ರಂದು ಗುಜರಾತ್ನ ವಾಡ್ನಗರದಲ್ಲಿ ಜನಿಸಿದರು.
2014ರ ಲೋಕಸಭೆಯಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಗೆದ್ದಿತ್ತು. ಇದಾದ ನಂತರ 2019ರಲ್ಲೂ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ ಮೋದಿ ಮತ್ತೊಮ್ಮೆ ಪ್ರಧಾನಿಯಾದರು. 2014ರಿಂದ ಬಿಜೆಪಿ ಹಲವು ರಾಜ್ಯಗಳಲ್ಲಿ ಮೋದಿ ಹೆಸರನ್ನೇ ಪ್ರಮುಖ ಅಸ್ತ್ರವಾಗಿಟ್ಟುಕೊಂಡು ಚುನಾವಣೆ ಗೆದ್ದಿದೆ.
ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಅಧಿಕಾರಾವಧಿಯಲ್ಲಿ ಹಲವು ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಇದು ದೇಶದ ಜನರಲ್ಲಿ ಅವರ ಜನಪ್ರಿಯತೆಯನ್ನು ಹೆಚ್ಚಿಸಿತು. ಈ ನಿರ್ಧಾರಗಳಲ್ಲಿ ಪಾಕಿಸ್ತಾನದಲ್ಲಿ ಸರ್ಜಿಕಲ್ ಸ್ಟ್ರೈಕ್ಗಳು, ನೋಟು ಅಮಾನ್ಯೀಕರಣ, ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಧಿಯನ್ನು ತೆಗೆದುಹಾಕುವುದು, ತ್ರಿವಳಿ ತಲಾಖ್ ಕಾನೂನು ಅನುಷ್ಠಾನ ಇತ್ಯಾದಿಗಳು ಸೇರಿವೆ.
ಇನ್ನೂ ಹೆಚ್ಚು ಓದಿಎಸ್ಸಿಒ ಶೃಂಗಸಭೆ ಯಶಸ್ವಿ; ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಎಸ್ಸಿಒ ಸಂಸ್ಥೆಯ ಮುಂದಿನ 25 ವರ್ಷಗಳ ಯೋಜನೆಯ ಭಾಗವಾಗಿ, ಶೃಂಗಸಭೆಯಲ್ಲಿ ಮುಂಬರುವ ದಿನಗಳಿಗಾಗಿ ಸಮಗ್ರ ಮಾರ್ಗಸೂಚಿಯನ್ನು ಹಂಚಿಕೊಳ್ಳಲಾಗಿದೆ. ಬಿಶ್ಕೆಕ್ನಲ್ಲಿ ಭಾರತದೊಂದಿಗೆ ನಿಕಟ ಸಂಪರ್ಕ ಹೊಂದಿರುವ ಕಿರ್ಗಿಸ್ತಾನ್ನ ಸ್ಥಳೀಯ ಜನರನ್ನು ಭೇಟಿಯಾದ ಪ್ರಧಾನಿ, ಅಲ್ಲಿರುವ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಗೌರವ ನಮನ ಸಲ್ಲಿಸಿದರು. ತಮಗೆ ನೀಡಿದ ಆತ್ಮೀಯ ಆತಿಥ್ಯಕ್ಕಾಗಿ ಕಿರ್ಗಿಸ್ತಾನ್ನ ಜನತೆಗೆ, ಸರ್ಕಾರಕ್ಕೆ ಹಾಗೂ ಅಧ್ಯಕ್ಷ ಸಾದಿರ್ ಜಪರೋವ್ ಅವರಿಗೆ ಪ್ರಧಾನಿ ಮೋದಿ ಕೃತಜ್ಞತೆ ಸಲ್ಲಿಸಿದ್ದಾರೆ.
- Sushma Chakre
- Updated on: Sep 1, 2026
- 9:32 pm
ಎಸ್ಸಿಒ ಶೃಂಗಸಭೆಯ ಗ್ರೂಪ್ ಫೋಟೋದಿಂದ ಪ್ರಧಾನಿ ಮೋದಿಯ ಫೋಟೋ ಕಟ್ ಮಾಡಿದ ಪಾಕಿಸ್ತಾನ!
ಕಿರ್ಗಿಸ್ತಾನದಲ್ಲಿ ನಡೆದ ವಾರ್ಷಿಕ ಶೃಂಗಸಭೆಯ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ಪಾಕಿಸ್ತಾನಿ ಪ್ರಧಾನಿ ಶಹಬಾಜ್ ಷರೀಫ್ ಸೇರಿದಂತೆ ಎಲ್ಲಾ ರಾಷ್ಟ್ರಗಳ ಮುಖ್ಯಸ್ಥರೊಂದಿಗೆ ಫೋಟೋ ಸೆಷನ್ ನಡೆಸಲಾಯಿತು. ಆದರೆ, ಪಾಕಿಸ್ತಾನಿ ಪ್ರಧಾನಿ ಕಚೇರಿ ಆ ಫೋಟೋವನ್ನು ಎಡಿಟ್ ಮಾಡಿ, ಪ್ರಧಾನಿ ಮೋದಿಯವರ ಫೋಟೋವನ್ನು ಕಟ್ ಮಾಡಿದೆ. ಪಾಕಿಸ್ತಾನದ ಪ್ರಧಾನ ಮಂತ್ರಿಗಳ ಕಚೇರಿ (PMO) ಶೃಂಗಸಭೆಯ ಸಮಯದಲ್ಲಿ ತೆಗೆದ ಗ್ರೂಪ್ ಫೋಟೋದ ಎಡಿಟೆಡ್ ಫೋಟೋವನ್ನು ಪೋಸ್ಟ್ ಮಾಡಿದೆ. ಪಾಕಿಸ್ತಾನವು ಪ್ರಧಾನಿ ಮೋದಿಯವರ ಫೋಟೋವನ್ನು ಆ ಫೋಟೋದಿಂದ ತೆಗೆದುಹಾಕಿದೆ.
- Sushma Chakre
- Updated on: Sep 1, 2026
- 9:39 pm
ರಾಜತಾಂತ್ರಿಕತೆ ಮೂಲಕ ಸಂಘರ್ಷ ಪರಿಹಾರ, ನಾರ್ಕೋ-ಟೆರರಿಸಂಗೆ ಅಂತ್ಯ, ಎಸ್ಸಿಒ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ಹೈಲೈಟ್ಸ್
ಎಸ್ಸಿಒ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಯುರೇಷಿಯನ್ ಪ್ರದೇಶದ ಶಾಂತಿ ಮತ್ತು ಭದ್ರತೆಗಾಗಿ 10 ಪ್ರಮುಖ ಕಾರ್ಯತಂತ್ರಗಳನ್ನು ಮಂಡಿಸಿದ್ದಾರೆ. ಭಯೋತ್ಪಾದನೆ ಮತ್ತು ನಾರ್ಕೋ-ಟೆರರಿಸಂನ ಸಂಪೂರ್ಣ ಪರಿಸರ ವ್ಯವಸ್ಥೆಯನ್ನು ನಾಶಪಡಿಸಲು, ಸಂಘರ್ಷಗಳನ್ನು ರಾಜತಾಂತ್ರಿಕತೆ ಮೂಲಕ ಪರಿಹರಿಸಲು ಕರೆ ನೀಡಿದರು. ಭಾರತದ ಈ ಪ್ರಸ್ತಾವನೆಯು ಪ್ರಾದೇಶಿಕ ಸಹಕಾರ, ಸಂಪರ್ಕ ಮತ್ತು ಆರ್ಥಿಕ ಪ್ರಗತಿಗೆ ಒತ್ತು ನೀಡಿದೆ, ಜಾಗತಿಕ ದಕ್ಷಿಣದ ಧ್ವನಿಯಾಗಿ ಹೊರಹೊಮ್ಮಿದೆ.
- Nayana Rajeev
- Updated on: Sep 1, 2026
- 1:49 pm
ಪಾಕ್ ಪ್ರಧಾನಿ ಎದುರಲ್ಲೇ ಭಯೋತ್ಪಾದನೆ ವಿರುದ್ಧ ಗುಡುಗಿದ ಮೋದಿ:ಟೆರರಿಸಂ ಯಾರಿಗೂ ಆಸ್ತಿಯಾಗಲ್ಲ, ಎರಡು ನಿಲುವು ಬಿಡಿ ಎಂದು ಖಡಕ್ ಎಚ್ಚರಿಕೆ
ಬಿಷ್ಕೆಕ್ನ ಎಸ್ಸಿಓ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಪಾಕ್ ಎದುರೇ ಭಯೋತ್ಪಾದನೆ ವಿರುದ್ಧ ಗುಡುಗಿದರು. ಭಯೋತ್ಪಾದನೆ ಎಂದಿಗೂ ಕಾರ್ಯತಂತ್ರದ ಆಸ್ತಿಯಲ್ಲ; ಉಗ್ರರಿಗೆ ಆಶ್ರಯ ನೀಡುವ ದೇಶಗಳ ದ್ವಿಮುಖ ನೀತಿಗೆ ಜಾಗವಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದರು. ಜಾಗತಿಕ ಶಾಂತಿಗೆ ಸಂವಾದವೇ ಮಾರ್ಗ ಎಂದು ಪ್ರತಿಪಾದಿಸಿದ ಮೋದಿ, ಮಾದಕವಸ್ತು ಕಳ್ಳಸಾಗಣೆ, ಸೈಬರ್ ಅಪರಾಧದ ವಿರುದ್ಧ ಜಂಟಿ ಹೋರಾಟಕ್ಕೆ ಕರೆ ನೀಡಿದರು.
- Nayana Rajeev
- Updated on: Sep 1, 2026
- 12:15 pm
ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಹಡಗುಗಳ ಸುರಕ್ಷತೆಗೆ ಮೋದಿ ಒತ್ತು, ಜಾಗತಿಕ ಶಾಂತಿ, ಇಂಧನ ಭದ್ರತೆಯ ಸಂದೇಶ ಸಾರಿದ ಮೋದಿ
ಪ್ರಧಾನಿ ಮೋದಿ ಎಸ್ಸಿಒ ಶೃಂಗಸಭೆಯಲ್ಲಿ ಇರಾನ್ ಅಧ್ಯಕ್ಷರೊಂದಿಗೆ ಮಾತುಕತೆ ನಡೆಸಿ ಹಾರ್ಮುಜ್ ಜಲಸಂಧಿ ಮತ್ತು ಚಾಬಹಾರ್ ಬಂದರಿನಲ್ಲಿ ಭಾರತೀಯ ಹಡಗುಗಳ ಸುರಕ್ಷತೆಗೆ ಒತ್ತು ನೀಡಿದರು. ರಷ್ಯಾ ಅಧ್ಯಕ್ಷ ಪುಟಿನ್ಗೆ ಉಕ್ರೇನ್ ಯುದ್ಧ ನಿಲ್ಲಿಸಲು ಆಗ್ರಹಿಸಿ ಜಾಗತಿಕ ಶಾಂತಿಯ ಸಂದೇಶ ಸಾರಿದರು. ಭಾರತದ ಇಂಧನ ಭದ್ರತೆ ಮತ್ತು ಪ್ರಾದೇಶಿಕ ಸ್ಥಿರತೆಗೆ ಮೋದಿಯವರ ಪ್ರಯತ್ನಗಳು ಈ ಸಭೆಯಲ್ಲಿ ಪ್ರಮುಖ ಪಾತ್ರ ವಹಿಸಿದವು.
- Nayana Rajeev
- Updated on: Sep 1, 2026
- 10:49 am
ಪ್ರಧಾನಿ ಮೋದಿ ಕಿರ್ಗಿಸ್ತಾನ ಭೇಟಿ: ಹಾರ್ಮುಜ್ನಲ್ಲಿ ಶಾಂತಿ, ಉಕ್ರೇನ್ ಯುದ್ಧ ಅಂತ್ಯಕ್ಕೆ ಕರೆ
ಪ್ರಧಾನಿ ಮೋದಿ ಕಿರ್ಗಿಸ್ತಾನದ ಬಿಷ್ಕೆಕ್ನಲ್ಲಿ ನಡೆದ ಎಸ್ಸಿಓ ಶೃಂಗಸಭೆಯಲ್ಲಿ ಭಾಗವಹಿಸಿ, ಇರಾನ್ ಅಧ್ಯಕ್ಷರೊಂದಿಗೆ ಹಾರ್ಮುಝ್ನಲ್ಲಿ ಭಾರತೀಯ ಹಡಗುಗಳ ಸುರಕ್ಷಿತ ಸಂಚಾರದ ಬಗ್ಗೆ ಚರ್ಚಿಸಿದರು. ರಷ್ಯಾ ಅಧ್ಯಕ್ಷ ಪುಟಿನ್ರೊಂದಿಗೆ ದ್ವಿಪಕ್ಷೀಯ ಬಾಂಧವ್ಯ ಗಟ್ಟಿಗೊಳಿಸುವ ಬಗ್ಗೆ ಮಾತುಕತೆ ನಡೆಸಿ, ಉಕ್ರೇನ್ ಯುದ್ಧವನ್ನು ಕೊನೆಗೊಳಿಸಲು ಒತ್ತಾಯಿಸಿದರು. ಮಾನವೀಯತೆಯ ಒಳಿತಿಗಾಗಿ ಯುದ್ಧದ ಅಂತ್ಯದತ್ತ ಸಾಗಬೇಕಿದೆ ಎಂದು ಪ್ರತಿಪಾದಿಸಿದರು.
- Nayana Rajeev
- Updated on: Sep 1, 2026
- 10:28 am
GDP Growth: ಜಾಗತಿಕ ಯುದ್ಧ, ಪೂರೈಕೆ ಬಿಕ್ಕಟ್ಟಿನ ನಡುವೆಯೂ ಶೇ.7.8ರಷ್ಟು ಜಿಡಿಪಿ ಜಿಗಿತ: ಟೀಕಾಕಾರರಿಗೆ ಪ್ರಧಾನಿ ಮೋದಿ ತಿರುಗೇಟು
PM Narendra Modi on India’s GDP Growth: ಜಾಗತಿಕ ಯುದ್ಧ ಮತ್ತು ಪೂರೈಕೆ ಬಿಕ್ಕಟ್ಟಿನ ನಡುವೆಯೂ ಭಾರತದ ಆರ್ಥಿಕತೆ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಶೇ.7.8ರಷ್ಟು ಜಿಡಿಪಿ ಬೆಳವಣಿಗೆ ದಾಖಲಿಸಿದೆ. ಇದು ಆರ್ಬಿಐ ಅಂದಾಜನ್ನೂ ಮೀರಿಸಿದೆ. ಪ್ರಧಾನಿ ಮೋದಿ ಈ ಯಶಸ್ಸನ್ನು ಶ್ಲಾಘಿಸಿ, ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ. ಸೇವಾ, ರಿಯಲ್ ಎಸ್ಟೇಟ್ ಕ್ಷೇತ್ರಗಳ ಬಲದಿಂದ ಭಾರತ ಅತಿ ವೇಗದ ಆರ್ಥಿಕತೆಯಾಗಿ ಹೊರಹೊಮ್ಮಿದೆ.
- Nayana Rajeev
- Updated on: Sep 1, 2026
- 10:01 am
‘ನಾವು ಯುದ್ಧಗಳಿಂದ ಯುದ್ಧದ ಅಂತ್ಯದತ್ತ ಸಾಗಬೇಕಿದೆ’; ರಷ್ಯಾ ಅಧ್ಯಕ್ಷ ಪುಟಿನ್ಗೆ ಪ್ರಧಾನಿ ಮೋದಿ ಸಂದೇಶ
ಕಿರ್ಗಿಸ್ತಾನ್ನಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯ (SCO) ನಡುವೆ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಪುಟಿನ್ ಜೊತೆ ಬಹಳ ಉತ್ತಮ ಬಾಂಧವ್ಯ ಹೊಂದಿರುವ ಪ್ರಧಾನಿ ಮೋದಿ ಪುಟಿನ್ ಅವರನ್ನು ಅಪ್ಪಿಕೊಳ್ಳುವ ಮೂಲಕ ತಮ್ಮ ಆತ್ಮೀಯತೆಯನ್ನು ತೋರಿಸಿದರು. ಈ ವೇಳೆ ಅವರು ನಿರಂತರ ಯುದ್ಧದಿಂದ ಯುದ್ಧದ ಅಂತ್ಯದತ್ತ ಸಾಗುವ ಅಗತ್ಯವನ್ನು ಒತ್ತಿ ಹೇಳಿದರು. ಅಮೆರಿಕ-ಇರಾನ್ ಯುದ್ಧ ಹಾಗೂ ರಷ್ಯಾ-ಉಕ್ರೇನ್ ಸಂಘರ್ಷಗಳು ಜಾಗತಿಕವಾಗಿ ಸವಾಲೊಡ್ಡುತ್ತಿರುವ ಈ ಸಮಯದಲ್ಲಿ ಪ್ರಧಾನಿ ಮೋದಿಯವರ ಈ ಶಾಂತಿ ಸಂದೇಶ ಹೊರಬಿದ್ದಿದೆ.
- Sushma Chakre
- Updated on: Aug 31, 2026
- 9:12 pm
ಉಜ್ಬೆಕಿಸ್ತಾನ್ ಮಕ್ಕಳ ಬಾಯಲ್ಲಿ ತಾವೇ ಬರೆದ ಹಿಂದಿ ಕವಿತೆ ಕೇಳಿ ಭಾವುಕರಾದ ಪ್ರಧಾನಿ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಉಜ್ಬೆಕಿಸ್ತಾನ್ ಭೇಟಿ ವೇಳೆ ವಿಶಿಷ್ಟ ಸಾಂಸ್ಕೃತಿಕ ಕ್ಷಣವೊಂದಕ್ಕೆ ಸಾಕ್ಷಿಯಾಯಿತು. ತಾಷ್ಕೆಂಟ್ ಸ್ಟೇಟ್ ಯೂನಿವರ್ಸಿಟಿ ಆಫ್ ಓರಿಯಂಟಲ್ ಸ್ಟಡೀಸ್ನ ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ಸಮುದಾಯದೊಂದಿಗಿನ ಸಂವಾದದ ಸಮಯದಲ್ಲಿ ಉಜ್ಬೆಕ್ ವಿದ್ಯಾರ್ಥಿಗಳು ಪ್ರಧಾನಿ ಮೋದಿ ಬರೆದ ಕವನಗಳನ್ನು ವಾಚಿಸಿ ಹಾಡಿದರು. ಆ ವಿದ್ಯಾರ್ಥಿಗಳು ಪ್ರಧಾನಿ ಮೋದಿಯವರ 3 ಕವನಗಳನ್ನು ಹಿಂದಿ ಮತ್ತು ಉಜ್ಬೆಕ್ ಭಾಷೆಗಳಲ್ಲಿ ಪ್ರಸ್ತುತಪಡಿಸಿದರು. ಇದು ಸಭಿಕರಿಂದ ಅಪಾರ ಮೆಚ್ಚುಗೆಯನ್ನು ಗಿಟ್ಟಿಸಿಕೊಂಡಿದ್ದಲ್ಲದೆ, ವಿಶ್ವವಿದ್ಯಾನಿಲಯದಲ್ಲಿ ನಡೆದ ಸಂವಾದದ ಪ್ರಮುಖ ಆಕರ್ಷಣೆಯಾಗಿ ಹೊರಹೊಮ್ಮಿತು.
- Sushma Chakre
- Updated on: Aug 31, 2026
- 6:07 pm
ಮೊದಲ ಕ್ವಾರ್ಟರ್ನಲ್ಲಿ ಭಾರತದ ಜಿಡಿಪಿ ಭರ್ಜರಿ ಶೇ. 7.8 ಏರಿಕೆ; ಅದ್ಭುತ ಸಾಧನೆ ಎಂದ ಪ್ರಧಾನಿ ಮೋದಿ
PM Modi hails India's GDP growth of 7.8pc growth in 2026 April-June quarter: ಭಾರತದ ಆರ್ಥಿಕತೆಯು ಮೊದಲ ತ್ರೈಮಾಸಿಕವಾದ ಏಪ್ರಿಲ್-ಜೂನ್ ಅವಧಿಯಲ್ಲಿ ಶೇ. 7.8ರಷ್ಟು ಅಚ್ಚರಿ ಬೆಳವಣಿಗೆ ಸಾಧಿಸಿದೆ. ಇದು ಆರ್ಬಿಐ ಒಳಗೊಂಡಂತೆ ಹೆಚ್ಚಿನ ಏಜೆನ್ಸಿಗಳು, ಆರ್ಥಿಕ ತಜ್ಞರು ನಿರೀಕ್ಷಿಸಿದುದಕ್ಕಿಂತಲೂ ಉತ್ತಮ ಬೆಳವಣಿಗೆ ದರವಾಗಿದೆ. ಕಳೆದ ಹಣಕಾಸು ವರ್ಷದ ಕೊನೆಯ ಕ್ವಾರ್ಟರ್ನಲ್ಲಿ ಕಂಡ ಬೆಳವಣಿಗೆಯೇ ವರ್ಷದ ಮೊದಲ ಕ್ವಾರ್ಟರ್ನಲ್ಲಿ ದಾಖಲಾಗಿದೆ.
- Vijaya Sarathy SN
- Updated on: Aug 31, 2026
- 6:14 pm
ಕಿರ್ಗಿಸ್ತಾನದ ಎಸ್ಸಿಒ ಶೃಂಗಸಭೆಯಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಭಾರತ ಮತ್ತು ಅರ್ಮೇನಿಯಾ ನಡುವೆ ರಕ್ಷಣಾ ಸಹಕಾರವು ಇತ್ತೀಚಿನ ವರ್ಷಗಳಲ್ಲಿ ಗಣನೀಯವಾಗಿ ಬೆಳೆದಿದೆ. ಭಾರತದ ಸ್ವದೇಶಿ ನಿರ್ಮಿತ ಪಿನಾಕ ರಾಕೆಟ್ ಲಾಂಚರ್ ವ್ಯವಸ್ಥೆ, ಆಕಾಶ್ ವಾಯು ರಕ್ಷಣಾ ವ್ಯವಸ್ಥೆ, ಸ್ವಾತಿ ವೆಪನ್ ಲೊಕೇಟಿಂಗ್ ರೇಡಾರ್, ATAGS ಅಟಾಕ್ಸ್ ಫಿರಂಗಿ ಹಾಗೂ ಆಂಟಿ-ಡ್ರೋನ್ ವ್ಯವಸ್ಥೆಗಳನ್ನು ಅರ್ಮೇನಿಯಾ ಭಾರತದಿಂದ ಖರೀದಿ ಮಾಡಿದ್ದು, ಈ ಒಪ್ಪಂದಗಳನ್ನು ಮತ್ತಷ್ಟು ವಿಸ್ತರಿಸುವ ಬಗ್ಗೆ ನಾಯಕರು ಚರ್ಚಿಸಿದರು. ಅರ್ಮೇನಿಯಾ ಪ್ರಧಾನಿ ಪಶಿನಿಯಾನ್ ಅವರು ಭಾರತದ ಪ್ರಧಾನಿ ಮೋದಿಯವರನ್ನು ಅರ್ಮೇನಿಯಾಗೆ ಭೇಟಿ ನೀಡುವಂತೆ ಆಹ್ವಾನ ನೀಡಿದರು.
- Sushma Chakre
- Updated on: Aug 31, 2026
- 3:29 pm
PM Modi Kyrgystan Visit: ಕಿರ್ಗಿಸ್ತಾನದಲ್ಲಿ ಇರಾನ್ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಿ ಮೋದಿ; ಹಾರ್ಮುಜ್ ಜಲಸಂಧಿಯ ಭದ್ರತೆ ಬಗ್ಗೆ ಚರ್ಚೆ
ಕಿರ್ಗಿಸ್ತಾನ್ನ ರಾಜಧಾನಿ ಬಿಷ್ಕೆಕ್ನಲ್ಲಿ ನಡೆಯುತ್ತಿರುವ 26ನೇ ಶಾಂಘೈ ಸಹಕಾರ ಸಂಸ್ಥೆ ಶೃಂಗಸಭೆಯ (SCO Summit) ನಡುವೆ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯನ್ ಅವರನ್ನು ಭೇಟಿಯಾದರು. ಇರಾನ್ ಯುದ್ಧ ಆರಂಭವಾದ ಬಳಿಕ ಪ್ರಧಾನಿ ಮೋದಿ ಇರಾನಿನ ಅಧ್ಯಕ್ಷರನ್ನು ಭೇಟಿಯಾಗಿದ್ದು ಇದೇ ಮೊದಲು. ಹಾರ್ಮುಜ್ ಜಲಸಂಧಿಯಲ್ಲಿ ಭಾರತದ ಹಲವು ನಾವಿಕರ ಮೇಲೂ ದಾಳಿಗಳು ನಡೆದಿರುವ ಹಿನ್ನೆಲೆಯಲ್ಲಿ ಈ ಮಾತುಕತೆ ಬಹಳ ಪ್ರಾಮುಖ್ಯತೆ ಪಡೆದಿದೆ.
- Sushma Chakre
- Updated on: Aug 31, 2026
- 3:27 pm