Narendra Modi
ನರೇಂದ್ರ ಮೋದಿ ಅವರು ಪ್ರಸ್ತುತ ಭಾರತದ ಪ್ರಧಾನಿಯಾಗಿದ್ದಾರೆ. ಮೇ 2014 ರಲ್ಲಿ ಅವರು ಮೊದಲ ಬಾರಿಗೆ ದೇಶದ ಪ್ರಧಾನಿಯಾದರು. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಗೆದ್ದ ನಂತರ ಮೋದಿ ಅವರು ಸತತ ಎರಡನೇ ಬಾರಿಗೆ ದೇಶದ ಪ್ರಧಾನಿಯಾದರು. ಮೋದಿ ದೇಶದ ಪ್ರಧಾನಿಯಾಗುವ ಮೊದಲು ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ನರೇಂದ್ರ ಮೋದಿ ಅವರು 2001 ರಿಂದ 2014 ರವರೆಗೆ ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಅವರು ಪ್ರಸ್ತುತ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ
ನರೇಂದ್ರ ಮೋದಿಯವರು ಭಾರತೀಯ ಜನತಾ ಪಕ್ಷದ ಪ್ರಮುಖ ನಾಯಕರಾಗಿದ್ದಾರೆ. ಈ ಹಿಂದೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ (ಆರ್ಎಸ್ಎಸ್) ಕೆಲಸ ಮಾಡಿದ್ದರು. ಅವರು 17 ಸೆಪ್ಟೆಂಬರ್ 1950 ರಂದು ಗುಜರಾತ್ನ ವಾಡ್ನಗರದಲ್ಲಿ ಜನಿಸಿದರು.
2014ರ ಲೋಕಸಭೆಯಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಗೆದ್ದಿತ್ತು. ಇದಾದ ನಂತರ 2019ರಲ್ಲೂ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ ಮೋದಿ ಮತ್ತೊಮ್ಮೆ ಪ್ರಧಾನಿಯಾದರು. 2014ರಿಂದ ಬಿಜೆಪಿ ಹಲವು ರಾಜ್ಯಗಳಲ್ಲಿ ಮೋದಿ ಹೆಸರನ್ನೇ ಪ್ರಮುಖ ಅಸ್ತ್ರವಾಗಿಟ್ಟುಕೊಂಡು ಚುನಾವಣೆ ಗೆದ್ದಿದೆ.
ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಅಧಿಕಾರಾವಧಿಯಲ್ಲಿ ಹಲವು ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಇದು ದೇಶದ ಜನರಲ್ಲಿ ಅವರ ಜನಪ್ರಿಯತೆಯನ್ನು ಹೆಚ್ಚಿಸಿತು. ಈ ನಿರ್ಧಾರಗಳಲ್ಲಿ ಪಾಕಿಸ್ತಾನದಲ್ಲಿ ಸರ್ಜಿಕಲ್ ಸ್ಟ್ರೈಕ್ಗಳು, ನೋಟು ಅಮಾನ್ಯೀಕರಣ, ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಧಿಯನ್ನು ತೆಗೆದುಹಾಕುವುದು, ತ್ರಿವಳಿ ತಲಾಖ್ ಕಾನೂನು ಅನುಷ್ಠಾನ ಇತ್ಯಾದಿಗಳು ಸೇರಿವೆ.
ಭಾರತದಲ್ಲಿ ಕ್ರಾಂತಿ ಮಾಡಿದ ಡಿಜಿಟಲ್ ಇಂಡಿಯಾಗೆ 11 ವರ್ಷದ ಸಂಭ್ರಮ
ಡಿಜಿಟಲ್ ಇಂಡಿಯಾ ಉಪಕ್ರಮವು ಜುಲೈ 1ಕ್ಕೆ 11 ವರ್ಷ ಪೂರೈಸಲಿದೆ. ಇದು ಭಾರತದ ಆಡಳಿತ ಮತ್ತು ಜನಸಾಮಾನ್ಯರ ಬದುಕಿನಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದೆ. ಇ-ಆಡಳಿತ, ಡಿಜಿಟಲ್ ಪಾವತಿ (ಯುಪಿಐ), ಆಧಾರ್, ಡಿಜಿಲಾಕರ್ನಂತಹ ಯೋಜನೆಗಳು ದೇಶದ ಪ್ರತಿಯೊಬ್ಬ ಪ್ರಜೆಯನ್ನು ತಂತ್ರಜ್ಞಾನದ ಮೂಲಕ ಸಬಲೀಕರಣಗೊಳಿಸಿವೆ.
- Gangadhar Saboji
- Updated on: Jun 27, 2026
- 7:41 pm
ಸೀಶೆಲ್ಸ್ಗೆ ಪ್ರಧಾನಿ ಮೋದಿ ಐತಿಹಾಸಿಕ ಭೇಟಿ: 194 ವರ್ಷದ ವಿಶ್ವದ ಅತ್ಯಂತ ಹಳೆಯ ಆಮೆ ‘ಜೊನಾಥನ್’ ಭೇಟಿಯಾಗಲಿರುವ ಪ್ರಧಾನಿ
ಪ್ರಧಾನಿ ಮೋದಿ ಸೀಶೆಲ್ಸ್ಗೆ ಐತಿಹಾಸಿಕ ಮೂರು ದಿನಗಳ ಭೇಟಿ ನೀಡಿದ್ದು, ಭಾರತ-ಸೀಶೆಲ್ಸ್ ರಾಜತಾಂತ್ರಿಕ ಸಂಬಂಧಗಳ 50ನೇ ವಾರ್ಷಿಕೋತ್ಸವದ ಮುಖ್ಯ ಅತಿಥಿಯಾಗಿದ್ದಾರೆ. ಈ ಭೇಟಿಯಲ್ಲಿ 194 ವರ್ಷದ ವಿಶ್ವದ ಅತ್ಯಂತ ಹಳೆಯ ಆಮೆ 'ಜೊನಾಥನ್' ಅನ್ನು ಪ್ರಧಾನಿ ಮೋದಿ ಭೇಟಿಯಾಗಲಿದ್ದಾರೆ. ಕಡಲ ಭದ್ರತೆ, ನೀಲಿ ಆರ್ಥಿಕತೆ ಮತ್ತು ಹವಾಮಾನ ಬದಲಾವಣೆ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಚರ್ಚೆಗಳು ನಡೆಯಲಿವೆ.
- Nayana Rajeev
- Updated on: Jun 27, 2026
- 1:21 pm
ಸೆಶೆಲ್ಸ್ ರಾಷ್ಟ್ರೀಯ ದಿನಾಚರಣೆಗೆ ಪ್ರಧಾನಿ ಮೋದಿ ಮುಖ್ಯ ಅತಿಥಿ; ಜೂನ್ 27ರಿಂದ ದ್ವೀಪ ರಾಷ್ಟ್ರಕ್ಕೆ ಪ್ರವಾಸ
ಸೆಶೆಲ್ಸ್ ಅಧ್ಯಕ್ಷ ಡಾ. ಪ್ಯಾಟ್ರಿಕ್ ಹೆರ್ಮಿನಿ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಜೂನ್ 27ರಿಂದ 29ರವರೆಗೆ ಸೆಶೆಲ್ಸ್ಗೆ ಅಧಿಕೃತ ಭೇಟಿ ನೀಡಲಿದ್ದಾರೆ. ಈ ಪ್ರವಾಸದ ಸಂದರ್ಭದಲ್ಲಿ ಪ್ರಧಾನಮಂತ್ರಿ ಮೋದಿ ಸೆಶೆಲ್ಸ್ನ ರಾಷ್ಟ್ರೀಯ ದಿನಾಚರಣೆಯ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. 2015ರ ನಂತರ ಪ್ರಧಾನಿ ಮೋದಿ ಅವರು ಈ ದ್ವೀಪ ರಾಷ್ಟ್ರಕ್ಕೆ ನೀಡುತ್ತಿರುವ ಮೊದಲ ಭೇಟಿ ಇದಾಗಿದೆ. ಈ ಆಚರಣೆಯ ಭಾಗವಾಗಿ, ಭಾರತೀಯ ರಕ್ಷಣಾ ಪಡೆಗಳ ತುಕಡಿಯೊಂದು ಭಾರತೀಯ ನೌಕಾಪಡೆಯ ಎರಡು ಯುದ್ಧನೌಕೆಗಳೊಂದಿಗೆ ಸ್ಮರಣಾರ್ಥ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು, ಇದು ಉಭಯ ದೇಶಗಳ ನಡುವಿನ ನಿಕಟ ಬಾಂಧವ್ಯವನ್ನು ಎತ್ತಿ ತೋರಿಸುತ್ತದೆ.
- Sushma Chakre
- Updated on: Jun 25, 2026
- 10:10 pm
ಭಾರತದಲ್ಲಿ ಅಮೆಜಾನ್ ಬಿಗ್ ಪ್ಲಾನ್; ಸಿಇಒ ಆಂಡಿ ಜಸ್ಸಿ-ಮೋದಿ ಭೇಟಿ; ಐದು ವರ್ಷದಲ್ಲಿ 4.5 ಲಕ್ಷ ಕೋಟಿ ರೂ ಹೂಡಿಕೆ ಘೋಷಣೆ
Amazon announces $48 billion investments in India for 5 years: ಜಾಗತಿಕ ಇಕಾಮರ್ಸ್ ಕಂಪನಿಯಾದ ಅಮೆಜಾನ್ ಭಾರತದಲ್ಲಿ ದೊಡ್ಡ ಮಟ್ಟದಲ್ಲಿ ಹೂಡಿಕೆಗಳನ್ನು ಮಾಡಲಿದೆ. ಐದು ವರ್ಷದಲ್ಲಿ 48 ಬಿಲಿಯನ್ ಡಾಲರ್ನಷ್ಟು ಹೂಡಿಕೆ ಮಾಡಲಿದೆ. ರಾಷ್ಟ್ರರಾಜಧಾನಿಯಲ್ಲಿ ಅಮೆಜಾನ್ ಸಿಇಒ ಆಂಡಿ ಜಸ್ಸಿ ಅವರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದಾರೆ.
- Vijaya Sarathy SN
- Updated on: Jun 25, 2026
- 6:34 pm
ತುಂಗಭದ್ರಾ ಡ್ಯಾಂ ನೂತನ ಕ್ರಸ್ಟ್ ಗೇಟ್ಗಳ ಲೋಕಾರ್ಪಣೆ: ಕಾಂಗ್ರೆಸ್ ಸಿಎಂಗಳ ಎದುರೇ ಮೋದಿ ಗುಣಗಾನ ಮಾಡಿದ ಚಂದ್ರಬಾಬು ನಾಯ್ಡು
Tungabhadra Dam New Crest Gates Inauguration:ಕೊಪ್ಪಳದ ಮುನಿರಾಬಾದ್ನಲ್ಲಿ ನಡೆದ ತುಂಗಭದ್ರಾ ಜಲಾಶಯದ 33 ನೂತನ ಕ್ರಸ್ಟ್ ಗೇಟ್ಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ, ಕಾಂಗ್ರೆಸ್ ಸಿಎಂಗಳ ಸಮ್ಮುಖದಲ್ಲೇ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಪ್ರಧಾನಿ ಮೋದಿ ನಿರ್ಧಾರಗಳನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಕಾರ್ಯಕ್ರಮದಲ್ಲಿ ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿ ಮೂರು ರಾಜ್ಯಗಳ ಸಿಎಂಗಳು ಭಾಗಿಯಾಗಿದ್ದು ವಿಶೇಷವಾಗಿತ್ತು.
- Shivakumar Pattar
- Updated on: Jun 25, 2026
- 4:13 pm
ಇರಾನ್ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅಂತ್ಯಕ್ರಿಯೆಗೆ ಪ್ರಧಾನಿ ಮೋದಿಗೆ ಆಹ್ವಾನ
ಕಳೆದ ಫೆಬ್ರವರಿ 28ರಂದು ಅಮೆರಿಕ-ಇಸ್ರೇಲ್ ಜಂಟಿ ವೈಮಾನಿಕ ದಾಳಿಯಲ್ಲಿ ಹತ್ಯೆಗೀಡಾಗಿದ್ದ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಸರ್ಕಾರಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವಂತೆ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಧಿಕೃತ ಆಹ್ವಾನ ನೀಡಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿದ್ದ ಭೀಕರ ಸಂಘರ್ಷದ ಕಾರಣದಿಂದಾಗಿ ಮಾರ್ಚ್ ತಿಂಗಳಿನಲ್ಲಿ ನಡೆಯಬೇಕಿದ್ದ ಈ ಅಂತ್ಯಕ್ರಿಯೆಯನ್ನು ಮುಂದೂಡಲಾಗಿತ್ತು. ಇದೀಗ ಜುಲೈ ತಿಂಗಳಿನಲ್ಲಿ ಇರಾನ್ನ ವಿವಿಧ ನಗರಗಳಲ್ಲಿ ಹಲವು ದಿನಗಳ ಕಾಲ ಈ ವಿಧಿವಿಧಾನಗಳು ನಡೆಯಲಿವೆ.
- Sushma Chakre
- Updated on: Jun 24, 2026
- 5:16 pm
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಮ್ಮುಟ್ಟಿಗೆ ‘ಪದ್ಮಭೂಷಣ’ ಪ್ರಶಸ್ತಿ ನೀಡಿ ಗೌರವಿಸಿದರು. ಪ್ರಶಸ್ತಿ ಪ್ರದಾನ ಸಮಾರಂಭದ ಮುಕ್ತಾಯದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಮಮ್ಮುಟ್ಟಿ ಹಾಗೂ ಅವರ ಕುಟುಂಬದವರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಶುಭ ಹಾರೈಸಿದರು. ಫೋಟೋ ಮತ್ತು ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
- Madan Kumar
- Updated on: Jun 23, 2026
- 10:41 pm
ಸಂಪುಟ ಪುನಾರಚನೆ ವದಂತಿ; ರಾಷ್ಟ್ರಪತಿಯನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
ಕೇಂದ್ರ ಸಚಿವ ಜಾರ್ಜ್ ಕುರಿಯನ್ ಅವರ ರಾಜ್ಯಸಭಾ ಅವಧಿ ಮುಗಿದು ಅವರು ರಾಜೀನಾಮೆ ನೀಡಿದ ಮರುದಿನವೇ ಪ್ರಧಾನಿ ನರೇಂದ್ರ ಮೋದಿ ಇಂದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ್ದಾರೆ. ಇದು ದೆಹಲಿ ರಾಜಕೀಯ ವಲಯದಲ್ಲಿ ಶೀಘ್ರದಲ್ಲೇ ಕೇಂದ್ರ ಸಚಿವ ಸಂಪುಟ ಪುನಾರಚನೆ ಆಗಲಿದೆ ಎಂಬ ವದಂತಿಗಳಿಗೆ ಪುಷ್ಟಿ ನೀಡಿದೆ. ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳು ಹಾಗೂ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯ ರಾಜ್ಯ ಸಚಿವರಾಗಿದ್ದ ಜಾರ್ಜ್ ಕುರಿಯನ್ ಅವರಿಗೆ ಜೂನ್ 18ರಂದು ನಡೆದ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಮತ್ತೆ ಟಿಕೆಟ್ ನೀಡಿರಲಿಲ್ಲ. ಅವರ ರಾಜ್ಯಸಭಾ ಅವಧಿಯು ಜೂನ್ 21ಕ್ಕೆ ಕೊನೆಗೊಂಡಿತ್ತು.
- Sushma Chakre
- Updated on: Jun 23, 2026
- 9:44 pm
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋ ಕೋಚಿಂಗ್ ಸೆಂಟರ್ನಲ್ಲಿ ಉಂಟಾದ ಬೆಂಕಿಯ ಜ್ವಾಲೆಗೆ 14 ವಿದ್ಯಾರ್ಥಿಗಳು ಸಜೀವ ದಹನವಾಗಿದ್ದಾರೆ. ಈ ದುರಂತಕ್ಕೆ ಪ್ರಧಾನಿ ಮೋದಿ, ಸಿಎಂ ಯೋಗಿ ಆದಿತ್ಯನಾಥ್ ತೀವ್ರ ಸಂತಾಪ ಸೂಚಿಸಿದ್ದಾರೆ. "ಉತ್ತರ ಪ್ರದೇಶದ ಲಕ್ನೋದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಜೀವಹಾನಿಯಾಗಿರುವುದು ತೀವ್ರ ಆಘಾತ ತಂದಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ. ರಕ್ಷಣಾ ಕಾರ್ಯಾಚರಣೆಗಳು ಪ್ರಗತಿಯಲ್ಲಿದ್ದು, ಅಧಿಕಾರಿಗಳು ಸಾಧ್ಯವಿರುವ ಎಲ್ಲಾ ನೆರವು ನೀಡುತ್ತಿದ್ದಾರೆ" ಎಂದು ಪ್ರಧಾನಿ ಮೋದಿ ಪೋಸ್ಟ್ ಮಾಡಿದ್ದಾರೆ.
- Sushma Chakre
- Updated on: Jun 22, 2026
- 6:02 pm
ನೀಟ್ ಪರೀಕ್ಷೆ: ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದೆಂದು 45 ನಿಮಿಷ ದೆಹಲಿ ಏರ್ಪೋರ್ಟ್ನಲ್ಲೇ ಕಾದ ಮೋದಿ
ಅಂತಾರಾಷ್ಟ್ರೀಯ ಯೋಗ ದಿನದಂದು ಕೋಲ್ಕತ್ತಾದಿಂದ ದೆಹಲಿಗೆ ಮರಳಿದ ಪ್ರಧಾನಿ ಮೋದಿ, ನೀಟ್ ವಿದ್ಯಾರ್ಥಿಗಳಿಗೆ ಟ್ರಾಫಿಕ್ ತೊಂದರೆಯಾಗಬಾರದೆಂದು ವಿಮಾನ ನಿಲ್ದಾಣದಲ್ಲೇ 45 ನಿಮಿಷ ಕಾದರು. ಮಧ್ಯಾಹ್ನ 2 ಗಂಟೆಗೆ ನೀಟ್ ಮರು ಪರೀಕ್ಷೆ ಪ್ರಾರಂಭವಾಗಲಿದ್ದು, ಅವರ ಬೆಂಗಾವಲು ಪಡೆ ರಸ್ತೆಗೆ ಇಳಿದರೆ ಟ್ರಾಫಿಕ್ ಜಾಮ್ ಉಂಟಾಗಬಹುದೆಂಬ ಕಾರಣಕ್ಕೆ ವಿದ್ಯಾರ್ಥಿಗಳ ಅನುಕೂಲಕ್ಕೆ ಆದ್ಯತೆ ನೀಡಿದರು. ಪೇಪರ್ ಸೋರಿಕೆಯ ನಂತರ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲಾಗಿದೆ. ಮೋದಿ ಅವರ ಈ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
- Nayana Rajeev
- Updated on: Jun 21, 2026
- 3:08 pm
ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ: 3 ಅತ್ಯಾಧುನಿಕ ಸ್ವದೇಶಿ ಯುದ್ಧನೌಕೆಗಳ ಸೇರ್ಪಡೆ
ಕೋಲ್ಕತ್ತಾದಲ್ಲಿ ಪ್ರಧಾನಿ ಮೋದಿ 3 ಸ್ವದೇಶಿ ಯುದ್ಧನೌಕೆಗಳಾದ ಐಎನ್ಎಸ್ ದುನಾಗಿರಿ, ಐಎನ್ಎಸ್ ಸಂಶೋಖಾಕ್ ಮತ್ತು ಐಎನ್ಎಸ್ ಅಗ್ರೇಗಳನ್ನು ಭಾರತೀಯ ನೌಕಾಪಡೆಗೆ ಸಮರ್ಪಿಸಿದ್ದಾರೆ. 'ಆತ್ಮನಿರ್ಭರ ಭಾರತ' ಯೋಜನೆಯಡಿ ನಿರ್ಮಿಸಿದ ಈ ನೌಕೆಗಳು ಭಾರತದ ರಕ್ಷಣಾ ಶಕ್ತಿಯನ್ನು ಹೆಚ್ಚಿಸುತ್ತವೆ. ಸಮುದ್ರದಲ್ಲಿ ಶತ್ರುಗಳಿಗೆ ಬಲವಾದ ಪ್ರತಿಕ್ರಿಯೆ ನೀಡಲು ಹಾಗೂ ಕಡಲ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಈ ಸೇರ್ಪಡೆ ನಿರ್ಣಾಯಕವಾಗಿದೆ.
- Nayana Rajeev
- Updated on: Jun 21, 2026
- 10:38 am
ನೀವು 30ಕ್ಕಿಂತ 50ನೇ ವಯಸ್ಸಿನಲ್ಲಿ ಹೆಚ್ಚು ಚೈತನ್ಯಶೀಲರಾಗಿರಿ: ಪ್ರಧಾನಿ ಮೋದಿ
ನೀವು 30ಕ್ಕಿಂತ 50ನೇ ವಯಸ್ಸಿನಲ್ಲಿ ಹೆಚ್ಚು ಚೈತನ್ಯಶೀಲರಾಗಿರಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಕೋಲ್ಕತ್ತಾದಲ್ಲಿ ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಅಲ್ಲಿ ನೆರೆದಿದ್ದ ಸಾವಿರಾರು ಸಾರ್ವಜನಿಕರೊಂದಿಗೆ ಜಂಟಿಯಾಗಿ ಸಾಮೂಹಿಕ ಯೋಗಾಭ್ಯಾಸದಲ್ಲಿ ಭಾಗವಹಿಸಿದರು. ಈ ಬಾರಿಯ ಅಂತಾರಾಷ್ಟ್ರೀಯ ಯೋಗ ದಿನವನ್ನು ಆರೋಗ್ಯಕರ ವೃದ್ಧಾಪ್ಯಕ್ಕಾಗಿ ಯೋಗ ಎಂಬ ವಿಶೇಷ ಥೀಮ್ ಅಡಿಯಲ್ಲಿ ಆಚರಿಸಲಾಗುತ್ತಿದೆ.
- Nayana Rajeev
- Updated on: Jun 21, 2026
- 8:15 am