AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi

Narendra Modi

ನರೇಂದ್ರ ಮೋದಿ ಅವರು ಪ್ರಸ್ತುತ ಭಾರತದ ಪ್ರಧಾನಿಯಾಗಿದ್ದಾರೆ. ಮೇ 2014 ರಲ್ಲಿ ಅವರು ಮೊದಲ ಬಾರಿಗೆ ದೇಶದ ಪ್ರಧಾನಿಯಾದರು. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಗೆದ್ದ ನಂತರ ಮೋದಿ ಅವರು ಸತತ ಎರಡನೇ ಬಾರಿಗೆ ದೇಶದ ಪ್ರಧಾನಿಯಾದರು. ಮೋದಿ ದೇಶದ ಪ್ರಧಾನಿಯಾಗುವ ಮೊದಲು ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ನರೇಂದ್ರ ಮೋದಿ ಅವರು 2001 ರಿಂದ 2014 ರವರೆಗೆ ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಅವರು ಪ್ರಸ್ತುತ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ

ನರೇಂದ್ರ ಮೋದಿಯವರು ಭಾರತೀಯ ಜನತಾ ಪಕ್ಷದ ಪ್ರಮುಖ ನಾಯಕರಾಗಿದ್ದಾರೆ. ಈ ಹಿಂದೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ (ಆರ್‌ಎಸ್‌ಎಸ್) ಕೆಲಸ ಮಾಡಿದ್ದರು. ಅವರು 17 ಸೆಪ್ಟೆಂಬರ್ 1950 ರಂದು ಗುಜರಾತ್ನ ವಾಡ್ನಗರದಲ್ಲಿ ಜನಿಸಿದರು.

2014ರ ಲೋಕಸಭೆಯಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಗೆದ್ದಿತ್ತು. ಇದಾದ ನಂತರ 2019ರಲ್ಲೂ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ ಮೋದಿ ಮತ್ತೊಮ್ಮೆ ಪ್ರಧಾನಿಯಾದರು. 2014ರಿಂದ ಬಿಜೆಪಿ ಹಲವು ರಾಜ್ಯಗಳಲ್ಲಿ ಮೋದಿ ಹೆಸರನ್ನೇ ಪ್ರಮುಖ ಅಸ್ತ್ರವಾಗಿಟ್ಟುಕೊಂಡು ಚುನಾವಣೆ ಗೆದ್ದಿದೆ.

ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಅಧಿಕಾರಾವಧಿಯಲ್ಲಿ ಹಲವು ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಇದು ದೇಶದ ಜನರಲ್ಲಿ ಅವರ ಜನಪ್ರಿಯತೆಯನ್ನು ಹೆಚ್ಚಿಸಿತು. ಈ ನಿರ್ಧಾರಗಳಲ್ಲಿ ಪಾಕಿಸ್ತಾನದಲ್ಲಿ ಸರ್ಜಿಕಲ್ ಸ್ಟ್ರೈಕ್‌ಗಳು, ನೋಟು ಅಮಾನ್ಯೀಕರಣ, ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಧಿಯನ್ನು ತೆಗೆದುಹಾಕುವುದು, ತ್ರಿವಳಿ ತಲಾಖ್ ಕಾನೂನು ಅನುಷ್ಠಾನ ಇತ್ಯಾದಿಗಳು ಸೇರಿವೆ.

ಇನ್ನೂ ಹೆಚ್ಚು ಓದಿ

Video: ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಗೋ ಸೇವೆ ಮಾಡುವ ಮೂಲಕ ಸಂಕ್ರಾಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿದ್ದಾರೆ. ತಮ್ಮ ನಿವಾಸದಲ್ಲಿ ಗೋವುಗಳಿಗೆ ಮೇವು ನೀಡಿ ಅವುಗಳ ಜತೆ ಸ್ವಲ್ಪ ಸಮಯ ಕಳೆದಿದ್ದಾರೆ. ಪ್ರಧಾನಿ ಮೋದಿ ಭಾರತೀಯ ಸಂಪ್ರದಾಯ ಮತ್ತು ಸಾಂಸ್ಕೃತಿಕ ಮೌಲ್ಯಗಳ ಮೇಲಿನ ಗೌರವವನ್ನು ಪ್ರತಿಬಿಂಬಿಸುವ ಒಂದು ಸೂಚಕವಾಗಿ ಗೋಸೇವೆಯನ್ನು ಮಾಡಿದ್ದಾರೆ. ಇದಕ್ಕೂ ಮೊದಲು ಅವರು ಜನವರಿ 14 ರಂದು ಕೇಂದ್ರ ಸಚಿವ ಎಲ್ ಮುರುಗನ್ ನಿವಾಸದಲ್ಲಿ ಪೊಂಗಲ್ ಹಬ್ಬದ ಸಂದರ್ಭದಲ್ಲಿ ಗೋ ಸೇವೆ ಮಾಡಿದ್ದರು.

ಕಾಶಿ-ತಮಿಳು ಸಂಗಮವು ಭಾರತದ ಏಕತೆಯ ಉತ್ಸವ: ಪ್ರಧಾನಿ ಮೋದಿ

ಕಾಶಿ-ತಮಿಳು ಸಂಗಮವು ಸಾಂಸ್ಕೃತಿಕ ಪ್ರಜ್ಞೆಯನ್ನು ಬಲಪಡಿಸಿದೆ ಇದು ಭಾರತದ ಏಕತೆಯ ಉತ್ಸವ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಬಣ್ಣಿಸಿದ್ದಾರೆ. ಈ ಕುರಿತು ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಅವರು, ಇದು ನಮ್ಮ ಸಂಸ್ಕೃತಿಗಳ ನಡುವಿನ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಿದೆ ಎಂದರು. ಪ್ರಧಾನಿ ಪೋಸ್ಟ್​ನಲ್ಲಿ ಕೆಲವು ದಿನಗಳ ಹಿಂದೆ, ಸೋಮನಾಥದ ಪವಿತ್ರ ಭೂಮಿಯಲ್ಲಿ ನಡೆದ ಸೋಮನಾಥ ಸ್ವಾಭಿಮಾನ ಪರ್ವದಲ್ಲಿ ಭಾಗವಹಿಸುವ ಸೌಭಾಗ್ಯ ನನಗೆ ಸಿಕ್ಕಿತು.ಇದು 1026 ರಲ್ಲಿ ಸೋಮನಾಥದ ಮೇಲೆ ನಡೆದ ಮೊದಲ ದಾಳಿಯ 1000 ನೇ ವರ್ಷ ಇದು.

ಕರ್ನಾಟಕದ ಜನರಿಗೆ ಕನ್ನಡದಲ್ಲೇ ಸಂಕ್ರಾಂತಿಯ ಶುಭಾಶಯ ಕೋರಿದ ಪ್ರಧಾನಿ ಮೋದಿ

ಇಂದು ಮಕರ ಸಂಕ್ರಾಂತಿ. ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾದ ಈ ಮಕರ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲೇ ಹಲವು ರಾಜ್ಯಗಳಲ್ಲಿ ಹಲವು ಹೆಸರುಗಳಲ್ಲಿ ಈ ಹಬ್ಬವನ್ನು ಆಚರಿಸಲಾಗುತ್ತದೆ. ಹೀಗಾಗಿ, ಆಯಾ ರಾಜ್ಯದ ಜನರಿಗೆ ಆಯಾ ಭಾಷೆಯಲ್ಲೇ ಪ್ರಧಾನಿ ನರೇಂದ್ರ ಮೋದಿ ಸಂಕ್ರಾಂತಿ ಹಾಗೂ ಪೊಂಗಲ್ ಶುಭಾಶಯ ಕೋರಿದ್ದಾರೆ. ಇಂದು ದೆಹಲಿಯಲ್ಲಿರುವ ದಕ್ಷಿಣ ಭಾರತದ ಸಂಸದರ ನಿವಾಸದಲ್ಲಿ ಪ್ರಧಾನಿ ಮೋದಿ ಪೊಂಗಲ್ ಹಬ್ಬದಲ್ಲಿ ಪಾಲ್ಗೊಂಡಿದ್ದಾರೆ.

ಭಾರತದ ಯುವಕರು ಅಪಾಯಗಳನ್ನು ಸ್ವೀಕರಿಸಲು ಹಿಂಜರಿಯಬೇಡಿ, ಸರ್ಕಾರ ನಿಮ್ಮೊಂದಿಗಿದೆ; ಪ್ರಧಾನಿ ಮೋದಿ

ನವದೆಹಲಿಯಲ್ಲಿ ನಡೆದ ವಿಕಸಿತ ಭಾರತ ಯುವ ನಾಯಕರ ಸಂವಾದದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಯುವಕರ ಸೃಜನಶೀಲತೆಯನ್ನು ಶ್ಲಾಘಿಸಿದರು. ಭಾರತೀಯ ಯುವಕರು ರಾಷ್ಟ್ರ ನಿರ್ಮಾಣದಲ್ಲಿ ಮುಂಚೂಣಿಯಲ್ಲಿದ್ದಾರೆ. ಭಾರತೀಯ ಯುವಕರ ಸಾಮರ್ಥ್ಯವು ಭವಿಷ್ಯದಲ್ಲಿ ಭಾರತದ ಸಾಮರ್ಥ್ಯವಾಗುತ್ತದೆ, ಅವರು ದೇಶವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುತ್ತಾರೆ ಎಂದು ಪ್ರಧಾನಿ ಮೋದಿ ಹೇಳಿದರು.

ಪಹಲ್ಗಾಮ್ ದಾಳಿ, ದೆಹಲಿ ಸ್ಫೋಟವನ್ನು ಖಂಡಿಸಿದ ಜರ್ಮನ್ ಚಾನ್ಸೆಲರ್ ಮೆರ್ಜ್

ಭಾರತ ಮತ್ತು ಜರ್ಮನ್ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಹೆಚ್ಚಿಸಲು ಜರ್ಮನ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಇಂದು 2 ದಿನಗಳ ಭೇಟಿಗಾಗಿ ಭಾರತಕ್ಕೆ ಆಗಮಿಸಿದ್ದಾರೆ. ಚಾನ್ಸೆಲರ್ ಆಗಿ ಏಷ್ಯಾಕ್ಕೆ ತಮ್ಮ ಮೊದಲ ಪ್ರವಾಸಕ್ಕಾಗಿ ಫ್ರೆಡ್ರಿಕ್ ಮೆರ್ಜ್ ಭಾರತವನ್ನು ಆಯ್ಕೆ ಮಾಡಿಕೊಂಡಿರುವುದು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತವು ಜರ್ಮನಿಗೆ ಹೇಗೆ ಪ್ರಮುಖ ಕಾರ್ಯತಂತ್ರದ ಪಾಲುದಾರ ಎಂಬುದನ್ನು ಪ್ರದರ್ಶಿಸುತ್ತದೆ.

ಜರ್ಮನಿ ಅಧ್ಯಕ್ಷ ಫ್ರೆಡರಿಚ್ ಮೆರ್ಜ್ ಮತ್ತು ನರೇಂದ್ರ ಮೋದಿಯಿಂದ ಸಿಇಒಗಳ ಸಭೆ

German Chancellor Merz and PM Modi participate in India German CEOs forum: ಗುಜರಾತ್​ನ ಅಹ್ಮದಾಬಾದ್​ನಲ್ಲಿ ನಡೆದ ಭಾರತ ಜರ್ಮನಿ ಸಿಇಒ ಫೋರಂ ಸಭೆಯಲ್ಲಿ ಜರ್ಮನ್ ಚಾನ್ಸಲರ್ ಫ್ರೆಡರಿಚ್ ಮೆರ್ಜ್ ಮತ್ತು ನರೇಂದ್ರ ಮೋದಿ ಭಾಗವಹಿಸಿದ್ದರು. ಈ ಸಭೆಯಲ್ಲಿ ಎರಡೂ ದೇಶಗಳ ಹಲವು ಸಿಇಒಗಳು ಕೂಡ ಪಾಲ್ಗೊಂಡಿದ್ದರು. ಭಾರತ ಮತ್ತು ಜರ್ಮನಿ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ವಿಸ್ತರಿಸುವ ಕುರಿತು ಚರ್ಚೆಗಳಾದವು.

Video: ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಇಂದು ಅಹಮದಾಬಾದಿನಲ್ಲಿರುವ ಸಬರಮತಿ ಆಶ್ರಮದಲ್ಲಿ ನಡೆಯುತ್ತಿರುವ ಗಾಳಿಪಟ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಜರ್ಮನ್ ಚಾನ್ಸೆಲರ್ ಫೆಡ್ರಿಕ್ ಮೆರ್ಜ್​ ಅವರೊಂದಿಗೆ ಗಾಳಿಪಟ ಹಾರಿಸಿದರು. ಆಶ್ರಮಕ್ಕೆ ಆಗಮಿಸಿದ ನಂತರ, ಇಬ್ಬರೂ ನಾಯಕರು ರಾಷ್ಟ್ರಪಿತ ಮಹಾತ್ಮ ಗಾಂಧಿಯವರಿಗೆ ಪುಷ್ಪ ನಮನ ಸಲ್ಲಿಸಿದರು. ಮೆರ್ಜ್ ಅಲ್ಲಿನ ಸಂದರ್ಶಕರ ಪುಸ್ತಕದಲ್ಲಿ ಸಹಿ ಹಾಕಿದರು. ನಂತರ ಇಬ್ಬರೂ ನಾಯಕರು ಸಬರಮತಿ ನದಿ ದಂಡೆಯಲ್ಲಿ ನಡೆದ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ 2026 ರಲ್ಲಿ ಭಾಗವಹಿಸಿದ್ದಾರೆ.

ನವೀಕರಿಸಬಹುದಾದ ಇಂಧನ: 300 ಬಿಲಿಯನ್ ಯುಎಸ್ ಡಾಲರ್ ಹೂಡಿಕೆ ಅಗತ್ಯ; ಪ್ರಲ್ಹಾದ್​ ಜೋಶಿ

ಯುಎಇಯ ಅಬುಧಾಬಿಯಲ್ಲಿ ನಡೆದ 16ನೇ ಐಆರ್​ಇಎನ್​ಎ ಅಸೆಂಬ್ಲಿಯ ಪೂರ್ಣ ಅಧಿವೇಶನದಲ್ಲಿ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ಭಾಗವಹಿಸಿದ್ದರು. ಭಾರತ ನವೀಕರಿಸಬಹುದಾದ ಇಂಧನದಲ್ಲಿ ಜಾಗತಿಕ ನಾಯಕನಾಗಿ ಹೊರಹೊಮ್ಮಿದ್ದು, 266 GW ಸಾಮರ್ಥ್ಯವನ್ನು ಮೀರಿದೆ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಸೋಮನಾಥಪುರದಲ್ಲಿ ಪ್ರಧಾನಿ ಮೋದಿ ಶೌರ್ಯಯಾತ್ರೆ; 13ನೇ ಶತಮಾನದ ಹುತಾತ್ಮಕರಿಗೆ ಗೌರವ; ಡೋಲು ಡಮರುಗ ಸದ್ದು

Photos of Somnath Shaurya Yatra led by Narendra Modi: ಗುಜರಾತ್‌ನ ಸೋಮನಾಥದಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ "ಶೌರ್ಯ ಯಾತ್ರೆ" ನಡೆಯಿತು. ಇದರಲ್ಲಿ 108 ಕುದುರೆಗಳ ಮೆರವಣಿಗೆಯೂ ಸೇರಿತ್ತು. ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದ ಹಮೀರ್​ಜಿ ಗೋಹಿಲ್ ಮತ್ತು ವೇಗಡ್​ಜಿ ಭಿಲ್ ಅವರಿಗೆ ಪ್ರಧಾನಿಗಳು ಗೌರವ ಕೂಡ ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಡಮರು ನುಡಿಸಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಭಾರತ ಅತಿವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ: ಗುಜರಾತ್ ಸಮಿಟ್​ನಲ್ಲಿ ಪ್ರಧಾನಿ ಮೋದಿ ಹೇಳಿಕೆ

India is the fastest growing economy, says PM Narendra Modi at Vibrant Gujarat: ವಿವಿಧ ಸುಧಾರಣೆಗಳ ಮೂಲಕ ಭಾರತದ ಆರ್ಥಿಕತೆ ಅತಿವೇಗವಾಗಿ ಬೆಳೆಯುತ್ತಿದೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ. ರಾಜ್​ಕೋಟ್​ನಲ್ಲಿ ಭಾನುವಾರ ವೈಬ್ರೆಂಟ್ ಗುಜರಾತ್ ಟ್ರೇಡ್ ಶೋ ಸಮಾವೇಶ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಭಾರತದ ಆರ್ಥಿಕ ಬೆಳವಣಿಗೆಯಲ್ಲಿ ಗುಜರಾತ್ ಪಾತ್ರ ಮುಖ್ಯವಾಗುತ್ತಿದೆ ಎಂದೂ ಮೋದಿ ತಿಳಿಸಿದ್ದಾರೆ.

ಸೋಮನಾಥನ ಮೇಲೆ ದಾಳಿ ಮಾಡಿದವರೆಲ್ಲಾ ಸಮಾಧಿಯಾದರು, ಆದರೆ ಸೋಮನಾಥ ಅಲ್ಲೇ ನಿಂತಿದ್ದಾನೆ: ಮೋದಿ

ಪ್ರಧಾನಿ ನರೇಂದ್ರ ಮೋದಿ ಸೋಮನಾಥ ದೇವಾಲಯದ ಅಚಲ ಇತಿಹಾಸವನ್ನು ಸ್ಮರಿಸಿದ್ದಾರೆ. ಘಜ್ನಿ, ಔರಂಗಜೇಬರ ದಾಳಿಗಳ ನಡುವೆಯೂ ಸೋಮನಾಥ ಅದೆಲ್ಲವನ್ನೂ ನೋಡುತ್ತಾ ಹಾಗೇ ನಿಂತಿದ್ದಾನೆ ಎಂದು ಮೋದಿ ಹೇಳಿದರು. ಇದರ ಪುನರ್ನಿರ್ಮಾಣಕ್ಕೆ ಸರ್ದಾರ್ ಪಟೇಲ್ ಪ್ರಯತ್ನಗಳು ಮತ್ತು ಇಂದಿಗೂ ದೇವಾಲಯವು ಭಾರತದ ಶಕ್ತಿಯ ಸಂಕೇತವಾಗಿರುವುದನ್ನು ಪ್ರಧಾನಿ ಎತ್ತಿ ತೋರಿಸಿದ್ದಾರೆ.

In Pics: ಪ್ರಧಾನಿ ಮೋದಿ ಸೋಮನಾಥ ಭೇಟಿ, ಓಂಕಾರ ಪಠಣ, ಆಗಸದಲ್ಲಿ ಡ್ರೋನ್​ಗಳ ಝಲಕ್, ಎಲ್ಲೆಲ್ಲೂ ಶಿವಭಕ್ತಿ ಮಯ

ಪ್ರಧಾನಿ ನರೇಂದ್ರ ಮೋದಿ ತಮ್ಮ ಮೂರು ದಿನಗಳ ಗುಜರಾತ್ ಭೇಟಿಯ ಮೊದಲ ದಿನವಾದ ಶನಿವಾರದಂದು ಸೋಮನಾಥಕ್ಕೆ ಆಗಮಿಸಿದರು. ಸೋಮನಾಥ ದೇವಾಲಯವನ್ನು ಭಾರತೀಯ ನಾಗರಿಕತೆಯ ಧೈರ್ಯ ಮತ್ತು ಶೌರ್ಯದ ಶ್ರೇಷ್ಠ ಸಂಕೇತವೆಂದು ಪ್ರಧಾನಿ ಮೋದಿ ಬಣ್ಣಿಸಿದರು. ಈ ಭೇಟಿ ಐತಿಹಾಸಿಕವಾಗಿ ಮಹತ್ವದ್ದಾಗಿದೆ, ಏಕೆಂದರೆ ಇಂದು 1026 ರಲ್ಲಿ ಮೊಹಮ್ಮದ್ ಘಜ್ನಿಯ ಮೊದಲ ದಾಳಿ ನಡೆಸಿ ಸಾವಿರ ವರ್ಷಗಳು ಕಳೆದಿವೆ. ಇಡೀ ದೇಶವು ಈ ಐತಿಹಾಸಿಕ ರಘಟನೆಯನ್ನು ಸೋಮನಾಥ ಸ್ವಾಭಿಮಾನ ಪರ್ವ ಎಂದು ಆಚರಿಸುತ್ತಿದೆ. ದೇವಾಲಯ ಸಂಕೀರ್ಣದಲ್ಲಿ 1,000 ಸೆಕೆಂಡುಗಳ ಕಾಲ ನಡೆದ ಸಾಮೂಹಿಕ ಓಂಕಾರ ಘೋಷದಲ್ಲಿ ಮೋದಿ ಪಾಲ್ಗೊಂಡಿದ್ದರು.