Narendra Modi
ನರೇಂದ್ರ ಮೋದಿ ಅವರು ಪ್ರಸ್ತುತ ಭಾರತದ ಪ್ರಧಾನಿಯಾಗಿದ್ದಾರೆ. ಮೇ 2014 ರಲ್ಲಿ ಅವರು ಮೊದಲ ಬಾರಿಗೆ ದೇಶದ ಪ್ರಧಾನಿಯಾದರು. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಗೆದ್ದ ನಂತರ ಮೋದಿ ಅವರು ಸತತ ಎರಡನೇ ಬಾರಿಗೆ ದೇಶದ ಪ್ರಧಾನಿಯಾದರು. ಮೋದಿ ದೇಶದ ಪ್ರಧಾನಿಯಾಗುವ ಮೊದಲು ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ನರೇಂದ್ರ ಮೋದಿ ಅವರು 2001 ರಿಂದ 2014 ರವರೆಗೆ ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಅವರು ಪ್ರಸ್ತುತ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ
ನರೇಂದ್ರ ಮೋದಿಯವರು ಭಾರತೀಯ ಜನತಾ ಪಕ್ಷದ ಪ್ರಮುಖ ನಾಯಕರಾಗಿದ್ದಾರೆ. ಈ ಹಿಂದೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ (ಆರ್ಎಸ್ಎಸ್) ಕೆಲಸ ಮಾಡಿದ್ದರು. ಅವರು 17 ಸೆಪ್ಟೆಂಬರ್ 1950 ರಂದು ಗುಜರಾತ್ನ ವಾಡ್ನಗರದಲ್ಲಿ ಜನಿಸಿದರು.
2014ರ ಲೋಕಸಭೆಯಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಗೆದ್ದಿತ್ತು. ಇದಾದ ನಂತರ 2019ರಲ್ಲೂ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ ಮೋದಿ ಮತ್ತೊಮ್ಮೆ ಪ್ರಧಾನಿಯಾದರು. 2014ರಿಂದ ಬಿಜೆಪಿ ಹಲವು ರಾಜ್ಯಗಳಲ್ಲಿ ಮೋದಿ ಹೆಸರನ್ನೇ ಪ್ರಮುಖ ಅಸ್ತ್ರವಾಗಿಟ್ಟುಕೊಂಡು ಚುನಾವಣೆ ಗೆದ್ದಿದೆ.
ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಅಧಿಕಾರಾವಧಿಯಲ್ಲಿ ಹಲವು ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಇದು ದೇಶದ ಜನರಲ್ಲಿ ಅವರ ಜನಪ್ರಿಯತೆಯನ್ನು ಹೆಚ್ಚಿಸಿತು. ಈ ನಿರ್ಧಾರಗಳಲ್ಲಿ ಪಾಕಿಸ್ತಾನದಲ್ಲಿ ಸರ್ಜಿಕಲ್ ಸ್ಟ್ರೈಕ್ಗಳು, ನೋಟು ಅಮಾನ್ಯೀಕರಣ, ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಧಿಯನ್ನು ತೆಗೆದುಹಾಕುವುದು, ತ್ರಿವಳಿ ತಲಾಖ್ ಕಾನೂನು ಅನುಷ್ಠಾನ ಇತ್ಯಾದಿಗಳು ಸೇರಿವೆ.
Iran Israel War: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತ್ಯಾನಹುಗೆ ಪಿಎಂ ಮೋದಿ ಕರೆ: ಯುದ್ಧ ನಿಲ್ಲಿಸಲು ಆಗ್ರಹ
ಮಧ್ಯಪ್ರಾಚ್ಯದಲ್ಲಿ ಇಸ್ರೇಲ್-ಇರಾನ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ ಕುರಿತು ಪ್ರಧಾನಿ ಮೋದಿ ಅವರು ಇಸ್ರೇಲ್ ಪ್ರಧಾನಿ ನೆತನ್ಯಾಹು ಜೊತೆ ದೂರವಾಣಿಯಲ್ಲಿ ಚರ್ಚಿಸಿದ್ದಾರೆ. ಇದೇ ವೇಳೆ ತಕ್ಷಣ ಯುದ್ಧ ನಿಲ್ಲಿಸುವ ಅಗತ್ಯವನ್ನು ಅವರು ಪುನರುಚ್ಚರಿಸಿದ್ದಾರೆ. ನಾಗರಿಕರ ಸುರಕ್ಷತೆ ಮೊದಲ ಆದ್ಯತೆಯಾಗಿದ್ದು, ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಗಾಗಿ ಎಲ್ಲಾ ದೇಶಗಳು ಸಂವಾದದ ಮೂಲಕ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಮೋದಿ ತಿಳಿಸಿದ್ದಾರೆ.
- Ganapathi Sharma
- Updated on: Mar 2, 2026
- 6:34 am
ಚುನಾವಣೆಗೂ ಮುನ್ನ ಪುದುಚೇರಿಯಲ್ಲಿ ಪ್ರಧಾನಿ ಮೋದಿ ಘರ್ಜನೆ, ಕಾಂಗ್ರೆಸ್-ಡಿಎಂಕೆ ಮೇಲೆ ಭ್ರಷ್ಟಾಚಾರ ಆರೋಪ
ಪ್ರಧಾನಿ ಮೋದಿ ಪುದುಚೇರಿಗೆ ಭೇಟಿ ನೀಡಿ 2700 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಿದರು. ತಮ್ಮ ಭಾಷಣದಲ್ಲಿ, ಕಾಂಗ್ರೆಸ್ ಮತ್ತು ಡಿಎಂಕೆ ಆಡಳಿತದಲ್ಲಿ ನಡೆದ ಭ್ರಷ್ಟಾಚಾರ, ಅಪರಾಧಗಳನ್ನು ಅವರು ತೀವ್ರವಾಗಿ ಟೀಕಿಸಿದರು. ಪುದುಚೇರಿಯನ್ನು 'ದೆಹಲಿಯ ಕುಟುಂಬಕ್ಕೆ ಎಟಿಎಂ' ಎಂದು ಕಾಂಗ್ರೆಸ್ ಮಾಡಿದೆ ಎಂದು ಆರೋಪಿಸಿದರು. 2047ರ ವೇಳೆಗೆ ಪುದುಚೇರಿ ಅಭಿವೃದ್ಧಿಗೆ ಒತ್ತು ನೀಡುವ ಮೂಲಕ ಉತ್ತಮ ಭವಿಷ್ಯವನ್ನು ಪ್ರಧಾನಿ ಭರವಸೆ ನೀಡಿದರು.
- Nayana Rajeev
- Updated on: Mar 1, 2026
- 3:17 pm
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಭೇಟಿ ನೀಡಿದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು. ಗಾಣಿಗ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕಾಗಿ ಬಂದಿರುವ ಅವರು ಮೊದಲು, ಲಕ್ಷ್ಮೀ ದೇವಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಹೆಚ್ಚಿನ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು.
- Ashok
- Updated on: Mar 1, 2026
- 12:17 pm
HPV Vaccination Drive: ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು 14 ವರ್ಷದ ಬಾಲಕಿಯರಿಗೆ HPV ಲಸಿಕೆ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ
ಮಹಿಳೆಯರಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವ ಗರ್ಭಕಂಠದ ಕ್ಯಾನ್ಸರ್ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ 9ರಿಂದ 14 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ಹೆಚ್ಪಿವಿ ಲಸಿಕೆ ನೀಡುವ ಅಭಿಯಾನವನ್ನು ಆರಂಭಿಸಿದೆ. ಈ ಅಭಿಯಾನಕ್ಕೆ ರಾಜಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. 14 ವರ್ಷ ವಯಸ್ಸಿನ ಹುಡುಗಿಯರಿಗೆ ರಾಷ್ಟ್ರವ್ಯಾಪಿ ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಲಸಿಕೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ.
- Sushma Chakre
- Updated on: Feb 28, 2026
- 6:58 pm
ಗುಜರಾತ್ನಲ್ಲಿ ಮೈಕ್ರಾನ್ನ ಸೆಮಿಕಂಡಕ್ಟರ್ ಸೌಲಭ್ಯ ಉದ್ಘಾಟಿಸಿದ ಪ್ರಧಾನಿ ಮೋದಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಗುಜರಾತ್ನ ಸನಂದ್ನಲ್ಲಿರುವ ಮೈಕ್ರಾನ್ ಸೆಮಿಕಂಡಕ್ಟರ್ ಟೆಕ್ನಾಲಜಿ ಇಂಡಿಯಾ ಪ್ರೈವೇಟ್ ಲಿಮಿಟೆಡ್ನ ಸೆಮಿಕಂಡಕ್ಟರ್ ಅಸೆಂಬ್ಲಿ, ಟೆಸ್ಟ್ ಮತ್ತು ಪ್ಯಾಕೇಜಿಂಗ್ (ATMP) ಸೌಲಭ್ಯವನ್ನು ಉದ್ಘಾಟಿಸಿದರು. ಈ ಉದ್ಘಾಟನೆಯು ಭಾರತದ ಸೆಮಿಕಂಡಕ್ಟರ್ ಉತ್ಪಾದನಾ ವಲಯದಲ್ಲಿ ಮಹತ್ವದ ಮೈಲಿಗಲ್ಲನ್ನು ಸೂಚಿಸುತ್ತದೆ. ಇದು ಸನಂದ್ ಎಟಿಎಂಪಿ ಸೌಲಭ್ಯದಿಂದ ಭಾರತದಲ್ಲಿ ತಯಾರಿಸಿದ ಮೊದಲ ಸೆಮಿಕಂಡಕ್ಟರ್ ಮೆಮೊರಿ ಮಾಡ್ಯೂಲ್ಗಳ ವಾಣಿಜ್ಯ ಉತ್ಪಾದನೆ ಮತ್ತು ಸಾಗಣೆಯ ಪ್ರಾರಂಭದೊಂದಿಗೆ ಹೊಂದಿಕೆಯಾಗುತ್ತದೆ.
- Sushma Chakre
- Updated on: Feb 28, 2026
- 6:29 pm
ಕಾಂಗ್ರೆಸ್ನಿಂದ ಭಾರತದ ವರ್ಚಸ್ಸು ನಾಶಮಾಡುವ ಪ್ರಯತ್ನ; ಪ್ರಧಾನಿ ಮೋದಿ ವಾಗ್ದಾಳಿ
ಪ್ರಧಾನಿ ನರೇಂದ್ರ ಮೋದಿ ಇಂದು ಕಾಂಗ್ರೆಸ್ ಪಕ್ಷದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು. ಯುವ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಇತ್ತೀಚಿನ ಶರ್ಟ್ಲೆಸ್ ಪ್ರತಿಭಟನೆ ಕಾಂಗ್ರೆಸ್ನ ಸೈದ್ಧಾಂತಿಕ ದಿವಾಳಿತನವನ್ನು ಬಹಿರಂಗಪಡಿಸಿದೆ. ಕಾಂಗ್ರೆಸ್ ನಾಯಕರು ಭಾರತದ ವರ್ಚಸ್ಸಿಗೆ ಹಾನಿ ಮಾಡಿದ್ದಾರೆ ಎಂದು ಹೇಳಿದ್ದಾರೆ. ಎಐ ಶೃಂಗಸಭೆಯ ಸಮಯದಲ್ಲಿ ನಡೆದ ಪ್ರತಿಭಟನೆಯು ವಿದೇಶಿ ಪ್ರತಿನಿಧಿಗಳ ಮುಂದೆ ದೇಶವನ್ನು ಕೆಣಕುವ ಪ್ರಯತ್ನವಾಗಿದೆ ಎಂದು ಅವರು ಟೀಕಿಸಿದ್ದಾರೆ.
- Sushma Chakre
- Updated on: Feb 27, 2026
- 10:36 pm
ಮಾನವೀಯತೆ ಎಂದಿಗೂ ಸಂಘರ್ಷಕ್ಕೆ ಬಲಿಯಾಗಬಾರದು; ಇಸ್ರೇಲ್ನಲ್ಲಿ ಪ್ರಧಾನಿ ಮೋದಿ
ಜೆರುಸಲೆಮ್ನಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ 'ಮಾನವೀಯತೆ ಎಂದಿಗೂ ಸಂಘರ್ಷಕ್ಕೆ ಬಲಿಪಶುವಾಗಬಾರದು, ಭಾರತ ಗಾಜಾ ಶಾಂತಿ ಪ್ರಯತ್ನಗಳನ್ನು ಬೆಂಬಲಿಸುತ್ತದೆ' ಎಂದು ಹೇಳಿದ್ದಾರೆ. ಸಂಘರ್ಷದಿಂದಾಗಿ ಮಾನವೀಯತೆ ಎಂದಿಗೂ ಬಳಲಬಾರದು ಎಂದು ಮೋದಿ ಕಾಳಜಿ ವ್ಯಕ್ತಪಡಿಸಿದ್ದಾರೆ.
- Sushma Chakre
- Updated on: Feb 26, 2026
- 7:39 pm
ಭಾರತ-ಇಸ್ರೇಲ್ ನಡುವೆ ಹಲವು ಒಪ್ಪಂದಗಳಿಗೆ ಸಹಿ; ಶೀಘ್ರದಲ್ಲೇ ಎಫ್ಟಿಎ ಏರ್ಪಡುವ ಸಾಧ್ಯತೆ
India Israel sign for several agreements and MoUs during Narendra Mod's visit: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಇಸ್ರೇಲ್ ಭೇಟಿ ವೇಳೆ, ಎರಡೂ ದೇಶಗಳ ನಡುವೆ ಹಲವು ಎಂಒಯುಗಳು ಮತ್ತು ಒಪ್ಪಂದಗಳಿಗೆ ಸಹಿ ಬಿದ್ದಿದೆ. ಎರಡೂ ದೇಶದ ನಡುವೆ ಮಹತ್ವದ ಫ್ರೀ ಟ್ರೇಡ್ ಅಗ್ರೀಮೆಂಟ್ ಸದ್ಯದಲ್ಲೇ ಅಂತಿಮಗೊಳ್ಳುತ್ತದೆ ಎಂದು ಪ್ರಧಾನಿಗಳಾದ ನರೇಂದ್ರ ಮೋದಿ ಮತ್ತು ಬೆಂಜಮಿನ್ ನೆತ್ಯಾನಹು ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.
- Vijaya Sarathy SN
- Updated on: Feb 26, 2026
- 6:03 pm
ಇಸ್ರೇಲ್ ಸಂಸತ್ನಲ್ಲಿ ಪ್ರತಿಧ್ವನಿಸಿದ ‘ಮೋದಿ, ಮೋದಿ’ ಘೋಷಣೆ; ಭಾರತದ ಪ್ರಧಾನಿಗೆ ಎದ್ದುನಿಂತು ಸ್ವಾಗತ
ಪ್ರಧಾನಿ ಮೋದಿ ಅವರು ಇಂದು ಸಂಜೆ ನೆಸ್ಸೆಟ್ಗೆ ಆಗಮಿಸಿದರು. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅವರ ಪತ್ನಿ ಸಾರಾ ನೆತನ್ಯಾಹು ಅಧಿಕೃತ ಸ್ವಾಗತ ಸಮಾರಂಭದಲ್ಲಿ ಭಾಗವಹಿಸಿದ್ದರು. ಮೋದಿ ಇಂದು ಇಸ್ರೇಲ್ ಸಂಸತ್ತಿನ ನೆಸ್ಸೆಟ್ ಸದಸ್ಯರನ್ನು ಉದ್ದೇಶಿಸಿ ಮಾತನಾಡಲು ಆಗಮಿಸುತ್ತಿದ್ದಂತೆ ಇಸ್ರೇಲ್ ಸಂಸತ್ತಿನ ಸದಸ್ಯರು ಎದ್ದು ನಿಂತು ಚಪ್ಪಾಳೆ ತಟ್ಟುತ್ತಾ ಗೌರವ ಸಲ್ಲಿಸಿದರು.
- Sushma Chakre
- Updated on: Feb 25, 2026
- 11:01 pm
ಪ್ರಧಾನಿ ಮೋದಿಗೆ ಇಸ್ರೇಲ್ ಸಂಸತ್ನ ಸ್ಪೀಕರ್ ಆಫ್ ದಿ ನೆಸ್ಸೆಟ್ ಪದಕ ಪ್ರದಾನ
ಪ್ರಧಾನಿ ಮೋದಿ ಅವರಿಗೆ ಇಸ್ರೇಲ್ ಸಂಸತ್ತು 'ಸ್ಪೀಕರ್ ಆಫ್ ದಿ ನೆಸ್ಸೆಟ್ ಪದಕ' ನೀಡಿ ಗೌರವಿಸಿದೆ. ಈ ಗೌರವ ಪಡೆದ ಮೊದಲ ಭಾರತೀಯ ಪ್ರಧಾನಿ ಮೋದಿ. ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ ಎರಡರಿಂದಲೂ ಉನ್ನತ ನಾಗರಿಕ ಗೌರವಗಳನ್ನು ಪಡೆದ ಕೆಲವೇ ಜಾಗತಿಕ ನಾಯಕರಲ್ಲಿ ಮೋದಿ ಕೂಡ ಒಬ್ಬರು. 2018ರಲ್ಲಿ ವಿದೇಶಿ ಗಣ್ಯರಿಗೆ ನೀಡಲಾಗುವ ಅತ್ಯುನ್ನತ ಪ್ಯಾಲೆಸ್ಟೀನಿಯನ್ ಪ್ರಶಸ್ತಿಯಾದ ಪ್ಯಾಲೆಸ್ಟೈನ್ ರಾಜ್ಯದ ಗ್ರ್ಯಾಂಡ್ ಕಾಲರ್ ಅನ್ನು ಮೋದಿಗೆ ನೀಡಲಾಗಿತ್ತು.
- Sushma Chakre
- Updated on: Feb 25, 2026
- 10:28 pm
ಕೇಂದ್ರದಿಂದ ಉಚಿತ ಲಸಿಕೆ: 14 ವಯಸ್ಸಿನ ಹೆಣ್ಮಕ್ಕಳಿಗೆ ಏಕೆ? ಲಸಿಕೆ ಏನ್ ಕೆಲಸ ಮಾಡುತ್ತೆ? ಇಲ್ಲಿದೆ ವಿವರ
ಗರ್ಭಕಂಠದ ಕ್ಯಾನ್ಸರ್ (Cervical Cancer) ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ದೇಶಾದ್ಯಂತ 'ಸ್ವಸ್ಥ ನಾರಿ' (Swastha Nari) ಮಿಷನ್ ಅಡಿಯಲ್ಲಿ ಬೃಹತ್ ಲಸಿಕಾ ಅಭಿಯಾನಕ್ಕೆ ಸಿದ್ಧತೆ ನಡೆಸಿದೆ. ದೇಶಾದ್ಯಂತ ಹದಿಹರೆಯದ ಬಾಲಕಿಯರಿಗಾಗಿ 'ಡ್ಯೂಮನ್ ಪ್ಯಾಪಿಲೋಮ ವೈರಸ್(HPV) ಲಸಿಕೆ ವಿತರಣೆ ಕಾರ್ಯ ಕ್ರಮವನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರವು ಸಜ್ಜಾಗಿದೆ ಎಂದು ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ. 'ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿ ಯಾನ'ದಡಿ ಈ ಲಸಿಕೆ ಕಾರ್ಯಕ್ರಮ ನಡೆಯಲಿದೆ. 14 ವರ್ಷ ಮೇಲ್ಪಟ್ಟ ಬಾಲಕಿಯರು ಇದರ ಫಲಾನುಭವಿದರಗಳಾಗಲಿದ್ದು, ಇದರ ಭಾಗವಾಗಿ ಮೆರ್ಕ್ ಸಂಸ್ಥೆಯು ತಯಾರಿಸಿರುವ 'ಗಾರ್ಡಾಸಿಲ್' ಚುಚ್ಚುಮದ್ದನ್ನು ದೇಶಾದ್ಯಂತ ಉಚಿತವಾಗಿ ನೀಡಲಾಗುವುದು. ಯಾಕೆ ಈ ನಿರ್ಧಾರ? 14ನೇ ವಯಸ್ಸಿಗೇ ಏಕೆ? ಇಲ್ಲಿದೆ ವಿವರ
- Ramesh B Jawalagera
- Updated on: Feb 25, 2026
- 10:11 pm
ಭಯೋತ್ಪಾದನೆಯನ್ನು ಯಾರೂ ಸಮರ್ಥಿಸಲು ಸಾಧ್ಯವಿಲ್ಲ; ಇಸ್ರೇಲ್ ಸಂಸತ್ತಿನಲ್ಲಿ ಪ್ರಧಾನಿ ಮೋದಿ ಐತಿಹಾಸಿಕ ಭಾಷಣ
ಇಸ್ರೇಲ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಇಸ್ರೇಲ್ನ ಸಂಸತ್ನಲ್ಲಿ ಭಾಷಣ ಮಾಡಿದ್ದಾರೆ. ಇಸ್ರೇಲ್ ಸಂಸತ್ ಉದ್ದೇಶಿಸಿ ಮಾತನಾಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಮೋದಿ ಪಾತ್ರರಾಗಿದ್ದಾರೆ. ಈ ವೇಳೆ ಭಯೋತ್ಪಾದನೆಯನ್ನು ಬಲವಾಗಿ ಖಂಡಿಸಿದ ಮೋದಿ ಇಸ್ರೇಲ್ನಲ್ಲಿ ನಡೆದ ಅಕ್ಟೋಬರ್ 7ರ ದಾಳಿಗಳನ್ನು ಖಂಡಿಸಿದ್ದು, ಭಾರತ ಇಸ್ರೇಲ್ ಜೊತೆ ನಿಲ್ಲುತ್ತದೆ ಎಂದು ಹೇಳಿದ್ದಾರೆ.
- Sushma Chakre
- Updated on: Feb 25, 2026
- 9:57 pm