Narendra Modi
ನರೇಂದ್ರ ಮೋದಿ ಅವರು ಪ್ರಸ್ತುತ ಭಾರತದ ಪ್ರಧಾನಿಯಾಗಿದ್ದಾರೆ. ಮೇ 2014 ರಲ್ಲಿ ಅವರು ಮೊದಲ ಬಾರಿಗೆ ದೇಶದ ಪ್ರಧಾನಿಯಾದರು. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಗೆದ್ದ ನಂತರ ಮೋದಿ ಅವರು ಸತತ ಎರಡನೇ ಬಾರಿಗೆ ದೇಶದ ಪ್ರಧಾನಿಯಾದರು. ಮೋದಿ ದೇಶದ ಪ್ರಧಾನಿಯಾಗುವ ಮೊದಲು ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ನರೇಂದ್ರ ಮೋದಿ ಅವರು 2001 ರಿಂದ 2014 ರವರೆಗೆ ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಅವರು ಪ್ರಸ್ತುತ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ
ನರೇಂದ್ರ ಮೋದಿಯವರು ಭಾರತೀಯ ಜನತಾ ಪಕ್ಷದ ಪ್ರಮುಖ ನಾಯಕರಾಗಿದ್ದಾರೆ. ಈ ಹಿಂದೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ (ಆರ್ಎಸ್ಎಸ್) ಕೆಲಸ ಮಾಡಿದ್ದರು. ಅವರು 17 ಸೆಪ್ಟೆಂಬರ್ 1950 ರಂದು ಗುಜರಾತ್ನ ವಾಡ್ನಗರದಲ್ಲಿ ಜನಿಸಿದರು.
2014ರ ಲೋಕಸಭೆಯಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಗೆದ್ದಿತ್ತು. ಇದಾದ ನಂತರ 2019ರಲ್ಲೂ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ ಮೋದಿ ಮತ್ತೊಮ್ಮೆ ಪ್ರಧಾನಿಯಾದರು. 2014ರಿಂದ ಬಿಜೆಪಿ ಹಲವು ರಾಜ್ಯಗಳಲ್ಲಿ ಮೋದಿ ಹೆಸರನ್ನೇ ಪ್ರಮುಖ ಅಸ್ತ್ರವಾಗಿಟ್ಟುಕೊಂಡು ಚುನಾವಣೆ ಗೆದ್ದಿದೆ.
ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಅಧಿಕಾರಾವಧಿಯಲ್ಲಿ ಹಲವು ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಇದು ದೇಶದ ಜನರಲ್ಲಿ ಅವರ ಜನಪ್ರಿಯತೆಯನ್ನು ಹೆಚ್ಚಿಸಿತು. ಈ ನಿರ್ಧಾರಗಳಲ್ಲಿ ಪಾಕಿಸ್ತಾನದಲ್ಲಿ ಸರ್ಜಿಕಲ್ ಸ್ಟ್ರೈಕ್ಗಳು, ನೋಟು ಅಮಾನ್ಯೀಕರಣ, ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಧಿಯನ್ನು ತೆಗೆದುಹಾಕುವುದು, ತ್ರಿವಳಿ ತಲಾಖ್ ಕಾನೂನು ಅನುಷ್ಠಾನ ಇತ್ಯಾದಿಗಳು ಸೇರಿವೆ.
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬಿರಿಯಾನಿ ಭಾಗ್ಯ, ಮೋದಿ ಅಭಿಮಾನಿಯಿಂದ ವ್ಯವಸ್ಥೆ
ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು (ಡಿಸೆಂಬರ್ 28) 129ನೇ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನಲ್ಲಿ (Mann Ki Baat) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ್ದು, ಇದನ್ನು ಸಂಸದ ಡಾ. ಸುಧಾಕರ್ ಅವರು ಅಗಲಗುರ್ಕಿ ಗ್ರಾಮದ ಜನರ ಜತೆ ‘ಮನ್ ಕಿ ಬಾತ್’ ಆಲಿಸಿದರು. ಅಲ್ಲದೇ ‘ಮನ್ ಕಿ ಬಾತ್’ ವೀಕ್ಷಿಸಿದವರಿಗೆ ಪ್ರೀ ಬಿರಿಯಾನಿ ವ್ಯವಸ್ಥೆ ಮಾಡಲಾಗಿದೆ. ಮೋದಿ ಅಭಿಮಾನಿ ರೈತ ರಾಮಾಂಜನಿ ಅವರು ಬಿರಿಯಾನಿ ವ್ಯವಸ್ಥೆ ಮಾಡಿದ್ದು, ಬಿರಿಯಾನಿಗಾಗಿ ಜನರು ಮುಗಿಬಿದ್ದಿದ್ದಾರೆ.
- Bheemappa Patil
- Updated on: Dec 29, 2025
- 11:49 am
ಮನ್ ಕಿ ಬಾತ್; ಮನಬಂದಂತೆ ಆ್ಯಂಟಿಬಯೋಟಿಕ್ ಸೇವಿಸುವವರಿಗೆ ಪ್ರಧಾನಿ ಮೋದಿ ಎಚ್ಚರಿಕೆ
Mann Ki Baat: ಅನೇಕ ಜನರು ತಮಗೇನಾದರೂ ಆರೋಗ್ಯ ಹದಗೆಟ್ಟರೆ ತಾವೇ ಮೆಡಿಕಲ್ ಶಾಪ್ಗೆ ಹೋಗಿ ಮಾತ್ರೆ ಸೇವಿಸುವ ಅಭ್ಯಾಸ ರೂಢಿಸಿಕೊಂಡಿರುತ್ತಾರೆ. ಇದಕ್ಕೆಲ್ಲ ವೈದ್ಯರ ಬಳಿ ಯಾಕೆ ಹೋಗಬೇಕು ಎಂಬ ಉಡಾಫೆ ಅವರದು. ಆದರೆ, ಇಂತಹ ಉಡಾಫೆ ಮಾಡುವವರಿಗೆ ಇಂದಿನ ಮನ್ ಕಿ ಬಾತ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಿವಿಮಾತೊಂದನ್ನು ನೀಡಿದ್ದಾರೆ. ಇದರ ಜೊತೆಗೆ ಎಚ್ಚರಿಕೆಯನ್ನೂ ನೀಡಿದ್ದಾರೆ.
- Sushma Chakre
- Updated on: Dec 28, 2025
- 6:02 pm
ಮನ್ ಕಿ ಬಾತ್ನಲ್ಲಿ ಕನ್ನಡ ಡಿಂಡಿಮ: ದುಬೈನಲ್ಲಿ ಕನ್ನಡಾಭಿಮಾನಕ್ಕೆ ಮೋದಿ ಶ್ಲಾಘನೆ
‘ಮನ್ ಕಿ ಬಾತ್’ ನಲ್ಲಿ (Mann Ki Baat) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ದುಬೈನಲ್ಲಿ ಬಹಳ ವರ್ಷಗಳಿಂದ ಕನ್ನಡಿಗರು ವಾಸವಿದ್ದಾರೆ. ದುಬೈ ಕನ್ನಡಿಗರು ತಮ್ಮಲ್ಲಿ ತಾವೇ ಒಂದು ಪ್ರಶ್ನೆ ಕೇಳಿಕೊಂಡ್ರು. ನಮ್ಮ ಮಕ್ಕಳು ಟೆಕ್ವರ್ಲ್ಡ್ನಲ್ಲಿ ಪ್ರಗತಿ ಹೊಂದುತ್ತಿದ್ದಾರೆ. ಆದರೆ, ಅವರು ತಮ್ಮ ನೆಲದ ಭಾಷೆಯಾದ ಕನ್ನಡದಿಂದ ದೂರ ಆಗುತ್ತಿದ್ದಾರೆಯೇ ಅನ್ನೋ ಆತಂಕ ದುಬೈ ಕನ್ನಡಿಗರಿಗೆ ಬಂತು. ಆಗಿನಿಂದಲೇ ಅವರು ದುಬೈನಲ್ಲಿ ಕನ್ನಡ ಪಾಠ ಶಾಲೆ ಆರಂಭ ಮಾಡಿದರು ಎಂದು ತಿಳಿಸಿದ್ದಾರೆ. ಇನ್ನು ಮನ್ ಕಿ ಬಾತ್ನಲ್ಲಿ ಕನ್ನಡ ಭಾಷೆ ಬಗ್ಗೆ ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋವನ್ನು ಹಂಚಿಕೊಂಡಿದ್ದಾರೆ.
- Ramesh B Jawalagera
- Updated on: Dec 28, 2025
- 4:41 pm
Mann Ki Baat: ಬೆಂಗಳೂರಿನ ಐಐಎಸ್ಸಿಯನ್ನು ಹಾಡಿಹೊಗಳಿದ ಪ್ರಧಾನಿ ಮೋದಿ
ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ(IISc)ಯಲ್ಲಿ ಕೇವಲ ವಿಜ್ಞಾನವನ್ನು ಕಲಿಸುವುದು ಮಾತ್ರವಲ್ಲದೆ ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚಿಸುವ ಸಂಗೀತ ತರಗತಿಗಳನ್ನು ಕೂಡ ನಡೆಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್(Mann Ki baat)ನಲ್ಲಿ ಹೇಳಿದ್ದಾರೆ. ಪ್ರತಿಷ್ಠಿತ ಸಂಶೋಧನಾ ವಿಶ್ವವಿದ್ಯಾಲಯದಲ್ಲಿ ವಿಜ್ಞಾನದ ಜೊತೆಗೆ ಸಂಗೀತವನ್ನು ಕೂಡ ಆರಾಧಿಸಲಾಗುತ್ತದೆ.
- Nayana Rajeev
- Updated on: Dec 28, 2025
- 12:26 pm
ಆರೆಸ್ಸೆಸ್, ಬಿಜೆಪಿಯ ಸಂಘಟನಾ ಶಕ್ತಿ ಶ್ಲಾಘಿಸಿದ ಮಾಜಿ ಸಿಎಂ ದಿಗ್ವಿಜಯ ಸಿಂಗ್; ಕಾಂಗ್ರೆಸ್ಸನ್ನು ಕಿಚಾಯಿಸಿದ ಬಿಜೆಪಿ
Digvijaya Singh shares Narendra Modi's old photo, praises organizational power of RSS: ಆರೆಸ್ಸೆಸ್ ಸಂಘಟನೆಯ ಶಕ್ತಿಯನ್ನು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಹೊಗಳಿದ್ದಾರೆ. ತೊಂಬತ್ತರ ದಶಕದಲ್ಲಿ ಎಲ್.ಕೆ. ಆಡ್ವಾಣಿ ಕಾಲ ಕೆಳಗೆ ಮುಂಭಾಗದಲ್ಲಿ ನರೇಂದ್ರ ಮೋದಿ ಕುಳಿತು ಭಾಷಣ ಕೇಳುತ್ತಿರುವ ಚಿತ್ರವೊಂದನ್ನು ಅವರು ಹಂಚಿಕೊಂಡಿದ್ದಾರೆ. ಸಾಮಾನ್ಯ ಕಾರ್ಯಕರ್ತರಾದವರು ಸಿಎಂ ಮತ್ತು ಪಿಎಂ ಆಗುತ್ತಾರೆ. ಅದು ಸಂಘಟನೆಯ ಶಕ್ತಿ ಎಂದು ದಿಗ್ವಿಜಯ ಸಿಂಗ್ ಹೊಗಳಿದ್ದಾರೆ.
- Vijaya Sarathy SN
- Updated on: Dec 27, 2025
- 5:34 pm
ಭಾರತದ ತಂತ್ರಜ್ಞಾನ 2025: AI, ಸೆಮಿಕಂಡಕ್ಟರ್, ಸ್ವಾವಲಂಬನೆ & ಜಾಗತಿಕ ನಾಯಕತ್ವ
Viksit Bharat 2025: India's AI, Chip & Critical Mineral Revolution Towards Self-Reliance: 2025 ಭಾರತದ ವೈಜ್ಞಾನಿಕ-ತಂತ್ರಜ್ಞಾನ ಪ್ರಯಾಣದಲ್ಲಿ ಮಹತ್ವದ ಮೈಲಿಗಲ್ಲು. ಕೃತಕ ಬುದ್ಧಿಮತ್ತೆ, ಸೆಮಿಕಂಡಕ್ಟರ್, ಪ್ರಮುಖ ಖನಿಜಗಳು ಹಾಗೂ ಸಂಶೋಧನೆ-ಅಭಿವೃದ್ಧಿ ಕ್ಷೇತ್ರಗಳಲ್ಲಿ ದೇಶವು ಸ್ವಾವಲಂಬನೆ ಸಾಧಿಸುತ್ತಿದೆ. ಜಾಗತಿಕವಾಗಿ ಮುಂಚೂಣಿಗೆ ಬರುತ್ತಿರುವ ಭಾರತ, AI ಶ್ರೇಯಾಂಕದಲ್ಲಿ 3ನೇ ಸ್ಥಾನಕ್ಕೇರಿದೆ. 'ಇಂಡಿಯಾ ಎಐ ಮಿಷನ್' ಮತ್ತು ಸೆಮಿಕಂಡಕ್ಟರ್ ಘಟಕಗಳ ಸ್ಥಾಪನೆಯಿಂದ ಆರ್ಥಿಕ ಸ್ವಾತಂತ್ರ್ಯ ಸಿಕ್ಕಿದೆ. 'ವಿಕಸಿತ ಭಾರತ 2047' ಗುರಿಯತ್ತ ಹೆಜ್ಜೆ ಹಾಕುತ್ತಿದೆ.
- Vijaya Sarathy SN
- Updated on: Dec 27, 2025
- 11:13 pm
ಭಾರತ 2025: ಹೊಸ ಭದ್ರತಾ ನೀತಿ, ಆಪರೇಷನ್ ಸಿಂದೂರ್ ಶಕ್ತಿ & ಭಯೋತ್ಪಾದನೆಗೆ ಖಡಕ್ ಉತ್ತರ
India's Decisive 2025: New Security Policy & Operation Sindoor Power: 2025 ಭಾರತದ ರಾಷ್ಟ್ರೀಯ ಭದ್ರತಾ ನೀತಿಯಲ್ಲಿ ಐತಿಹಾಸಿಕ ವರ್ಷ. ಪಿಎಂ ಮೋದಿ ನೇತೃತ್ವದಲ್ಲಿ ಭಯೋತ್ಪಾದನೆ ವಿರುದ್ಧ ಕಠಿಣ, ನಿರ್ಣಾಯಕ ಕ್ರಮಗಳನ್ನು ಭಾರತ ಅಳವಡಿಸಿಕೊಂಡಿದೆ. ಆಪರೇಷನ್ ಸಿಂದೂರ್ ಮೂಲಕ ಶತ್ರುಗಳ ಪ್ರದೇಶದೊಳಗೆ ನುಗ್ಗಿ ದಾಳಿ ಮಾಡುವ ಸಾಮರ್ಥ್ಯ ಪ್ರದರ್ಶಿಸಿತು. ರಕ್ಷಣಾ ಉತ್ಪಾದನೆ, ಬಜೆಟ್ ಹೆಚ್ಚಳ, ಸ್ವದೇಶಿ ತಂತ್ರಜ್ಞಾನ ಬಳಕೆಯಿಂದ ಭಾರತದ ಸೇನಾ ಶಕ್ತಿ ಮತ್ತು ಸ್ವಾವಲಂಬನೆ ಗಣನೀಯವಾಗಿ ಬೆಳೆದಿದೆ. ಜಾಗತಿಕ ಅನಿಶ್ಚಿತತೆಯ ನಡುವೆ ಭಾರತದ ಆತ್ಮವಿಶ್ವಾಸ ಎದ್ದು ಕಾಣುತ್ತದೆ.
- Vijaya Sarathy SN
- Updated on: Dec 26, 2025
- 10:26 pm
ಫಾಕ್ಸ್ಕಾನ್ ಘಟಕ; ಕರ್ನಾಟಕ ಮಾದರಿ ಎಂದ ರಾಹುಲ್ ಗಾಂಧಿ; ಇದು ಮೇಕ್ ಇನ್ ಇಂಡಿಯಾ ಎಫೆಕ್ಟ್ ಎಂದ ಕೇಂದ್ರ ಸಚಿವ
Union minister Vaishnaw gives cheeky reply to Rahul Gandhi on Foxconn factory: ದೇವನಹಳ್ಳಿಯಲ್ಲಿ ಫಾಕ್ಸ್ಕಾನ್ ಘಟಕ ಸ್ಥಾಪನೆ ಬಗ್ಗೆ ಪ್ರತಿಕ್ರಿಯಿಸಿ ರಾಹುಲ್ ಗಾಂಧಿ ಅವರು ಕರ್ನಾಟಕ ಮಾದರಿಯಾಗಿದೆ ಎಂದಿದ್ದಾರೆ. ಇದಕ್ಕೆ ತಮಾಷೆಯಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಎ ವೈಷ್ಣವ್, ಮೇಕ್ ಇನ್ ಇಂಡಿಯಾವನ್ನು ಗುರುತಿಸಿದ್ದಕ್ಕೆ ಥ್ಯಾಂಕ್ಸ್ ಎಂದಿದ್ದಾರೆ. ಫಾಕ್ಸ್ಕಾನ್ ತನ್ನ ದೇವನಹಳ್ಳಿ ಘಟಕದಲ್ಲಿ 30,000 ಮಂದಿ ಉದ್ಯೋಗಿಗಳನ್ನು ಕೇವಲ 8-9 ತಿಂಗಳಲ್ಲಿ ನೇಮಕ ಮಾಡಿಕೊಂಡಿದೆ.
- Vijaya Sarathy SN
- Updated on: Dec 25, 2025
- 4:24 pm
PM Modi Christmas: ದೆಹಲಿಯ ಚರ್ಚ್ನ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಮೋದಿ ಭಾಗಿ; ಕ್ಯಾಥೆಡ್ರಲ್ ಚರ್ಚ್ನ ವಿಶೇಷತೆ ಇಲ್ಲಿದೆ
ಪ್ರಧಾನಿ ಮೋದಿ ಇಂದು ದೆಹಲಿಯ ಕ್ಯಾಥೆಡ್ರಲ್ ಚರ್ಚ್ನಲ್ಲಿ ಹಮ್ಮಿಕೊಂಡಿದ್ದ ಕ್ರಿಸ್ಮಸ್ ಹಬ್ಬದ ವಿಶೇಷ ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದಾರೆ. ಈ ಭೇಟಿ ಧಾರ್ಮಿಕ ಸಾಮರಸ್ಯದ ಸಂದೇಶ ನೀಡುವುದರ ಜೊತೆಗೆ ಈ ಐತಿಹಾಸಿಕ ಚರ್ಚ್ ಅನ್ನು ಮತ್ತೊಮ್ಮೆ ಚರ್ಚೆಯ ಕೇಂದ್ರಬಿಂದುವನ್ನಾಗಿ ಮಾಡಿದೆ. ಬ್ರಿಟಿಷ್ ಕಾಲದ ಯುರೋಪಿಯನ್ ವಾಸ್ತುಶಿಲ್ಪ ಶೈಲಿಯನ್ನು ಹೊಂದಿರುವ ಈ ಚರ್ಚ್ ಪ್ರವಾಸಿಗರಿಗೆ ಮತ್ತು ಯಾತ್ರಿಕರಿಗೆ ವಿಶೇಷ ಆಕರ್ಷಣೆಯಾಗಿದೆ.
- Akshatha Vorkady
- Updated on: Dec 25, 2025
- 12:41 pm
ದೆಹಲಿಯ ಕ್ಯಾಥೆಡ್ರಲ್ ಚರ್ಚ್ನಲ್ಲಿ ಕ್ರಿಸ್ಮಸ್ ಪ್ರಾರ್ಥನೆಯಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ
ಕ್ರಿಸ್ಮಸ್ 2025: ಪ್ರಧಾನಿ ನರೇಂದ್ರ ಮೋದಿ ಅವರು ಕ್ರಿಸ್ಮಸ್ ಹಬ್ಬದ ಶುಭ ಸಂದರ್ಭದಲ್ಲಿ ದೆಹಲಿಯ ‘ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್’ನಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ದೇಶದ ಜನತೆಗೆ ಶುಭ ಹಾರೈಸಿದರು. ಇದೇ ವೇಳೆ, ಬಿಷಪ್ ಡಾ. ಪಾಲ್ ಸ್ವರೂಪ್ ಪ್ರೈಮ್ ಮಿನಿಸ್ಟರ್ಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ವಿಡಿಯೋ ಇಲ್ಲಿದೆ ನೋಡಿ.
- Ganapathi Sharma
- Updated on: Dec 25, 2025
- 11:36 am
ಚಿತ್ರದುರ್ಗ ಬಸ್ ಅಪಘಾತ: ಪ್ರಧಾನಿ ಮೋದಿ ಸಂತಾಪ, 2 ಲಕ್ಷ ರೂ. ಪರಿಹಾರ ಘೋಷಣೆ
ಚಿತ್ರದುರ್ಗದ ಗೊರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 9 ಮಂದಿ ಸಜೀವ ದಹನವಾಗಿದ್ದಾರೆ. ಘಟನೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಗಾಯಾಳುಗಳಿಗೆ 50,000 ರೂ. ನೆರವು ನೀಡಲಾಗುವುದು ಎಂದು ತಿಳಿಸಿದ್ದಾರೆ.
- Ganapathi Sharma
- Updated on: Dec 25, 2025
- 10:36 am
ನೈಸ್ ಪ್ರಕರಣ- ರಿಟ್ ಅರ್ಜಿಯಲ್ಲಿ ನನ್ನನ್ನೂ ಪಾರ್ಟಿ ಮಾಡಿದ್ದಾರೆ: ದೇವೇಗೌಡ ಬೇಸರ
HD Deve Gowda blasts congress and state government: ಬೆಂಗಳೂರು-ಮೈಸೂರು ಇನ್ಫಾಸ್ಟ್ರಕ್ಚರ್ ಯೋಜನೆ ಸಂಬಂಧ ಸುಪ್ರೀಂಕೋರ್ಟ್ನಲ್ಲಿ ಸಲ್ಲಿಸಲಾಗಿರುವ ರಿಟ್ ಅರ್ಜಿಯಲ್ಲಿ ತಮ್ಮನ್ನೂ ಪಾರ್ಟಿ ಮಾಡಿರುವುದಕ್ಕೆ ದೇವೇಗೌಡ ಬೇಸರಿಸಿದ್ದಾರೆ. ಈ ಇಳಿವಯಸ್ಸಿನಲ್ಲಿ ತಾನು ವಕೀಲರನ್ನು ಇಟ್ಟುಕೊಂಡು ಕೋರ್ಟ್ನಲ್ಲಿ ಹೋರಾಡಬೇಕಾ ಎಂದು ಪ್ರಶ್ನಿಸಿದ್ದಾರೆ. ಯೋಜನೆಗೆ ಸಮ್ಮತಿ ಕೊಟ್ಟಾಗ ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿದ್ದರು. ಈ ಯೋಜನೆ ಬಗ್ಗೆ ಅವರಿಗೆಲ್ಲಾ ಗೊತ್ತಿದೆ ಎಂದಿದ್ದಾರೆ.
- Vijaya Sarathy SN
- Updated on: Dec 24, 2025
- 6:15 pm