AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi

Narendra Modi

ನರೇಂದ್ರ ಮೋದಿ ಅವರು ಪ್ರಸ್ತುತ ಭಾರತದ ಪ್ರಧಾನಿಯಾಗಿದ್ದಾರೆ. ಮೇ 2014 ರಲ್ಲಿ ಅವರು ಮೊದಲ ಬಾರಿಗೆ ದೇಶದ ಪ್ರಧಾನಿಯಾದರು. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಗೆದ್ದ ನಂತರ ಮೋದಿ ಅವರು ಸತತ ಎರಡನೇ ಬಾರಿಗೆ ದೇಶದ ಪ್ರಧಾನಿಯಾದರು. ಮೋದಿ ದೇಶದ ಪ್ರಧಾನಿಯಾಗುವ ಮೊದಲು ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ನರೇಂದ್ರ ಮೋದಿ ಅವರು 2001 ರಿಂದ 2014 ರವರೆಗೆ ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಅವರು ಪ್ರಸ್ತುತ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ

ನರೇಂದ್ರ ಮೋದಿಯವರು ಭಾರತೀಯ ಜನತಾ ಪಕ್ಷದ ಪ್ರಮುಖ ನಾಯಕರಾಗಿದ್ದಾರೆ. ಈ ಹಿಂದೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ (ಆರ್‌ಎಸ್‌ಎಸ್) ಕೆಲಸ ಮಾಡಿದ್ದರು. ಅವರು 17 ಸೆಪ್ಟೆಂಬರ್ 1950 ರಂದು ಗುಜರಾತ್ನ ವಾಡ್ನಗರದಲ್ಲಿ ಜನಿಸಿದರು.

2014ರ ಲೋಕಸಭೆಯಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಗೆದ್ದಿತ್ತು. ಇದಾದ ನಂತರ 2019ರಲ್ಲೂ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ ಮೋದಿ ಮತ್ತೊಮ್ಮೆ ಪ್ರಧಾನಿಯಾದರು. 2014ರಿಂದ ಬಿಜೆಪಿ ಹಲವು ರಾಜ್ಯಗಳಲ್ಲಿ ಮೋದಿ ಹೆಸರನ್ನೇ ಪ್ರಮುಖ ಅಸ್ತ್ರವಾಗಿಟ್ಟುಕೊಂಡು ಚುನಾವಣೆ ಗೆದ್ದಿದೆ.

ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಅಧಿಕಾರಾವಧಿಯಲ್ಲಿ ಹಲವು ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಇದು ದೇಶದ ಜನರಲ್ಲಿ ಅವರ ಜನಪ್ರಿಯತೆಯನ್ನು ಹೆಚ್ಚಿಸಿತು. ಈ ನಿರ್ಧಾರಗಳಲ್ಲಿ ಪಾಕಿಸ್ತಾನದಲ್ಲಿ ಸರ್ಜಿಕಲ್ ಸ್ಟ್ರೈಕ್‌ಗಳು, ನೋಟು ಅಮಾನ್ಯೀಕರಣ, ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಧಿಯನ್ನು ತೆಗೆದುಹಾಕುವುದು, ತ್ರಿವಳಿ ತಲಾಖ್ ಕಾನೂನು ಅನುಷ್ಠಾನ ಇತ್ಯಾದಿಗಳು ಸೇರಿವೆ.

ಇನ್ನೂ ಹೆಚ್ಚು ಓದಿ

ತಾವೇ ಕಾರು ಚಲಾಯಿಸಿ ಮೋದಿಯನ್ನು ಹೋಟೆಲ್​ಗೆ ಕರೆದುಕೊಂಡು ಹೋದ ಇಥಿಯೋಪಿಯಾ ಪ್ರಧಾನಿ

PM Modi Ethiopia Visit: ಇಥಿಯೋಪಿಯಾದ ಪ್ರಧಾನಿ ಅಬಿಯ್ ಅಹ್ಮದ್ ಅಲಿ ಮೋದಿ ಅವರನ್ನು ಅಡಿಸ್ ಅಬಾಬಾ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡಿದ್ದಾರೆ. ಬಳಿಕ ತಾವೇ ಕಾರು ಚಲಾಯಿಸಿಕೊಂಡು ಹೋಟೆಲ್‌ಗೆ ಕರೆದೊಯ್ಯುವ ಮೂಲಕ ಪ್ರಧಾನಿ ಮೋದಿಯವರಿಗೆ ವಿಶೇಷ ಆತಿಥ್ಯ ನೀಡಿದ್ದಾರೆ. ಅವರು ಪ್ರಧಾನಿ ಮೋದಿಯನ್ನು ಕಾರಿನಲ್ಲಿ ಹೋಟೆಲ್‌ಗೆ ಕರೆದೊಯ್ದರು. ಮಾರ್ಗಮಧ್ಯೆ ಅವರು ಪ್ರಧಾನಿ ಮೋದಿಯನ್ನು ವಿಜ್ಞಾನ ವಸ್ತುಸಂಗ್ರಹಾಲಯ ಮತ್ತು ಸ್ನೇಹ ಉದ್ಯಾನವನಕ್ಕೆ ಕರೆದೊಯ್ದರು.

ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ರಾಜಕುಮಾರ

ಪ್ರಧಾನಿ ನರೇಂದ್ರ ಮೋದಿಯನ್ನು ತಮ್ಮ BMW ಕಾರಿನಲ್ಲಿ ಕರೆದುಕೊಂಡು ಹೋದ ಜೋರ್ಡಾನ್ ಕ್ರೌನ್ ಪ್ರಿನ್ಸ್ ಅವರ ವಿಡಿಯೋ ವೈರಲ್ ಆಗಿದೆ. ರಾಜ ಅಬ್ದುಲ್ಲಾ II ರ ಆಹ್ವಾನದ ಮೇರೆಗೆ ಮೋದಿ ಸೋಮವಾರ ಜೋರ್ಡಾನ್ ರಾಜಧಾನಿ ಅಮ್ಮನ್ ಗೆ ಎರಡು ದಿನಗಳ ಭೇಟಿಗಾಗಿ ಆಗಮಿಸಿದರು. ಈ ಭೇಟಿ ಇಂದು ಮುಕ್ತಾಯಗೊಳ್ಳುತ್ತದೆ. ಜೋರ್ಡಾನ್ ಪ್ರಧಾನಿಯವರ 4 ದಿನಗಳ, ಮೂರು ರಾಷ್ಟ್ರಗಳ ಪ್ರವಾಸದ ಮೊದಲ ಹಂತವಾಗಿದ್ದು, ಇಥಿಯೋಪಿಯಾ ಮತ್ತು ಒಮಾನ್ ಗೆ ಸಹ ಅವರನ್ನು ಕರೆದೊಯ್ಯಲಿದೆ.

ಭಯೋತ್ಪಾದನೆ ವಿರುದ್ಧ ಜೋರ್ಡಾನ್ ಗಟ್ಟಿ ಸಂದೇಶ ರವಾನಿಸಿದೆ; ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ

ರಾಜ ಅಬ್ದುಲ್ಲಾ II ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಎರಡು ದಿನಗಳ ಭೇಟಿಗಾಗಿ ಜೋರ್ಡಾನ್‌ಗೆ ತೆರಳಿದ್ದಾರೆ. ಮೋದಿಯನ್ನು ರಾಜ ಅಬ್ದುಲ್ಲಾ II ಆತ್ಮೀಯವಾಗಿ ಬರಮಾಡಿಕೊಂಡರು. ಮೂರು ರಾಷ್ಟ್ರಗಳೊಂದಿಗಿನ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಗುರಿಯನ್ನು ಹೊಂದಿರುವ ತಮ್ಮ ಮೂರು ರಾಷ್ಟ್ರಗಳ ಪ್ರವಾಸದ ಮೊದಲ ಹಂತದಲ್ಲಿ ಆಗಮಿಸಿದ ಪ್ರಧಾನಿ ಮೋದಿ, ಜೋರ್ಡಾನ್‌ಗೆ ತಮ್ಮ ಭೇಟಿಯು ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಹೆಚ್ಚಿಸುತ್ತದೆ ಎಂದು ಈ ಹಿಂದೆ ಹೇಳಿದ್ದರು.

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು

ಪ್ರಧಾನಿ ನರೇಂದ್ರ ಮೋದಿ ಇಂದು ಜೋರ್ಡಾನ್, ಇಥಿಯೋಪಿಯಾ ಮತ್ತು ಒಮಾನ್‌ಗೆ 3 ರಾಷ್ಟ್ರಗಳ ಪ್ರವಾಸ ಕೈಗೊಂಡಿದ್ದಾರೆ. ಅವರು ರಾಜ ಅಬ್ದುಲ್ಲಾ II ಇಬ್ನ್ ಅಲ್ ಹುಸೇನ್ ಅವರ ಆಹ್ವಾನದ ಮೇರೆಗೆ ಭೇಟಿ ನೀಡಿದ್ದಾರೆ. ಈ ಭೇಟಿಯು ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 75ನೇ ವಾರ್ಷಿಕೋತ್ಸವದೊಂದಿಗೆ ಹೊಂದಿಕೆಯಾಗುತ್ತದೆ.

ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ

ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಜೋರ್ಡಾನ್ ತಲುಪಿದ್ದಾರೆ. ಈ ವೇಳೆ ಖುದ್ದಾಗಿ ಜೋರ್ಡಾನ್ ಪ್ರಧಾನಿ ಜಾಫರ್ ಹಸನ್ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮೋದಿಯನ್ನು ಬರಮಾಡಿಕೊಂಡರು. ಬಳಿಕ ಭಾರತದ ಪ್ರದಾನಿಗೆ ಜೋರ್ಡಾನ್​​ನಲ್ಲಿ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ಜೋರ್ಡಾನ್​​ ರಾಜ ಅಬ್ದುಲ್ಲಾ II ಇಬ್ನ್ ಅಲ್ ಹುಸೇನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಇಂದು (ಡಿಸೆಂಬರ್ 15) ಜೋರ್ಡಾನ್‌ಗೆ ಭೇಟಿ ನೀಡಿದ್ದಾರೆ. ನಾಳೆ ಪ್ರಧಾನಿ ಮೋದಿ ಜೋರ್ಡಾನ್​​ನಿಂದ ಹೊರಡಲಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ

ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಜೋರ್ಡಾನ್, ಓಮನ್ ಮತ್ತು ಇಥಿಯೋಪಿಯಾಗೆ ಪ್ರವಾಸ ಆರಂಭಿಸಿದ್ದಾರೆ. ಈ ಭೇಟಿ ಈ ರಾಷ್ಟ್ರಗಳೊಂದಿಗಿನ ಭಾರತದ ಸಂಬಂಧಗಳು ವ್ಯವಹಾರ, ವಿಶ್ವಾಸಾರ್ಹತೆ ಮತ್ತು ಸಹಕಾರವನ್ನು ಹೇಗೆ ಒತ್ತಿಹೇಳುತ್ತವೆ. ಪ್ರಧಾನಿ ಮೋದಿ ಜೋರ್ಡಾನ್‌ನ ಅಮ್ಮನ್‌ನಲ್ಲಿ ಬಂದಿಳಿದಿದ್ದಾರೆ. ಜೋರ್ಡಾನ್ ಪ್ರಧಾನಿ ಅವರಿಂದ ಮೋದಿಗೆ ಸ್ವಾಗತ ನೀಡಲಾಯಿತು.

ಬಹಿರಂಗವಾಗಿ ಕ್ಷಮೆ ಕೇಳಿ; ರ‍್ಯಾಲಿಯಲ್ಲಿ ‘ಮೋದಿ ಸಮಾಧಿ’ ಘೋಷಣೆ ಕೂಗಿದ ಕಾಂಗ್ರೆಸ್ ವಿರುದ್ಧ ಕಿರಣ್ ರಿಜಿಜು ಆಕ್ರೋಶ

ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಕಾಂಗ್ರೆಸ್ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಿವಾದಾತ್ಮಕ ಘೋಷಣೆಗಳನ್ನು ಕೂಗಲಾಗಿತ್ತು. ಮೋದಿ ಸಮಾಧಿ ಅಗೆಯಬೇಕು ಎಂಬೆಲ್ಲ ಘೋಷಣೆಗಳನ್ನು ಕಾಂಗ್ರೆಸ್ ಕಾರ್ಯಕರ್ತರು ಕೂಗಿದ್ದರು. ಹೀಗಾಗಿ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಕ್ಷಮೆ ಯಾಚಿಸಬೇಕೆಂದು ಬಿಜೆಪಿ ಆಗ್ರಹಿಸಿದೆ.

ಪ್ರಧಾನಿ ಮೋದಿ ‘ಅಖಂಡ 2’ ಸಿನಿಮಾ ವೀಕ್ಷಿಸುತ್ತಾರೆ ಎಂದು ಮಾಹಿತಿ ನೀಡಿದ ನಿರ್ದೇಶಕ ಬೋಯಪಾಟಿ ಶ್ರೀನು

ನಂದಮೂರಿ ಬಾಲಕೃಷ್ಣ ನಟನೆಯ 'ಅಖಂಡ 2 ತಾಂಡವಂ' ಮಿಶ್ರ ಪ್ರತಿಕ್ರಿಯೆಗಳ ನಡುವೆಯೂ ಬಾಕ್ಸ್ ಆಫೀಸ್‌ನಲ್ಲಿ ಬ್ಲಾಕ್‌ಬಸ್ಟರ್ ಹಿಟ್ ಆಗಿದೆ. ಸನಾತನ ಧರ್ಮ ಮತ್ತು ಭಕ್ತಿಯನ್ನು ಪ್ರದರ್ಶಿಸುವ ಈ ಚಿತ್ರದಲ್ಲಿ ಬಾಲಯ್ಯ ಅವರ ಅಘೋರ ಪಾತ್ರ ಪ್ರೇಕ್ಷಕರನ್ನು ಆಕರ್ಷಿಸಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಲ್ಲಿ ಈ ಚಿತ್ರವನ್ನು ವೀಕ್ಷಿಸಲಿದ್ದಾರೆ ಎಂದು ನಿರ್ದೇಶಕ ಬೋಯಪಾಟಿ ಶ್ರೀನು ಘೋಷಿಸಿದ್ದಾರೆ.

ದೆಹಲಿಯಲ್ಲಿ ದಟ್ಟ ಮಂಜು, ಸರಿಯಾದ ಸಮಯಕ್ಕೆ ತಲುಪದ ವಿಮಾನ, ಪ್ರಧಾನಿ ಮೋದಿ ವಿದೇಶ ಪ್ರವಾಸ ವಿಳಂಬ

ಪ್ರಧಾನಿ ನರೇಂದ್ರ ಮೋದಿ ಜೋರ್ಡಾನ್, ಇಥಿಯೋಪಿಯಾ ಹಾಗೂ ಓಮನ್ ದೇಶಗಳ ಪ್ರವಾಸಕ್ಕೆ ಹೊರಟಿದ್ದಾರೆ. ಆದರೆ ದೆಹಲಿಯಲ್ಲಿ ದಟ್ಟ ಮಂಜು ಆವರಿಸಿದ್ದರಿಂದ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ ಪ್ರಧಾನಿಯ ವಿದೇಶ ಪ್ರವಾಸಕ್ಕೆ ವಿಳಂಬವಾಗಿದೆ. ಬೆಳಗಿನ ವೇಳೆಯಲ್ಲಿ ದೆಹಲಿ ವಿಮಾನ ನಿಲ್ದಾಣದ ಸುತ್ತಮುತ್ತ ದಟ್ಟವಾದ ಮಂಜು ಆವರಿಸಿದ್ದ ಕಾರಣ ಪ್ರಧಾನಿ ನರೇಂದ್ರ ಮೋದಿ ನಿಗದಿತ ಸಮಯಕ್ಕೆ ಪ್ರಯಾಣ ಆರಂಭಿಸಲು ಸಾಧ್ಯವಾಗಲಿಲ್ಲ. ಪ್ರಧಾನಿ ಬೆಳಗ್ಗೆ 8.30ಕ್ಕೆ ಹೊರಡಬೇಕಾಗಿತ್ತು.

ಮತ್ತೊಂದು ಅಚ್ಚರಿ ಆಯ್ಕೆ: ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಯುವ ನಾಯಕನಿಗೆ ಮಣೆ

ಹಲವು ತಿಂಗಳಿನಿಂದ ನೆನೆಗುದಿಗೆ ಬಿದ್ದಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ, ಈ ವರ್ಷಾಂತ್ಯದ ವೇಳೆ ಹೆಸರು ಘೋಷಣೆಯಾಗುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಜೆಪಿ ನಡ್ಡಾ ಅವರ ಸ್ಥಾನಕ್ಕೆ ಬೇರೊಬ್ಬರನ್ನು ಕೂರಿಸಲು ಚಿಂತನೆಗಳು ನಡೆದಿದ್ದು, ರಾಷ್ಟ್ರೀಯ ಅಧ್ಯಕ್ಷರ ರೇಸ್​​​ನಲ್ಲಿ ಹಲವರ ಹೆಸರುಳು ಕೇಳಿಬರುತ್ತಿವೆ. ಇದರ ನಡುವೆ ಇದೀಗ ಬಿಜೆಪಿ ರಾಷ್ಟ್ರೀಯ ಕಾರ್ಯಧ್ಯಕ್ಷರನ್ನ ಆಯ್ಕೆ ಮಾಡಲಾಗಿದ್ದು, ಅತ್ಯಂತ ಕಿರಿಯ, ಯುವ ನಾಯಕನಿಗೆ ಮಣೆಹಾಕಲಾಗಿದೆ. ಹಾಗಾದ್ರೆ, ಕಿರಿಯ ವಯಸ್ಸಿನಲ್ಲೇ ಬಿಜೆಪಿ ಕಾರ್ಯಧ್ಯಕ್ಷರಾಗಿ ಆಯ್ಕೆಯಾದವರು ಯಾರು? ಅವರ ರಾಜಕೀಯ ಹಾದಿ ಈ ಕೆಳಗಿನಂತಿದೆ ನೋಡಿ.

ವೋಟ್ ಚೋರಿ ವಿರುದ್ಧ ಕಾಂಗ್ರೆಸ್​​ ಹೋರಾಟ: ದೆಹಲಿಯಲ್ಲಿ ಪ್ರತಿಧ್ವನಿಸಿದ ಆಳಂದ ಕ್ಷೇತ್ರದ ಮತಗಳ್ಳತನ

ಮತಗಳ್ಳತನ ಬಾಂಬ್ ಕರ್ನಾಟಕದಿಂದಲೇ ಸಿಡಿದಿತ್ತು. ಕಲಬುರಗಿಯ ಆಳಂದ, ಬೆಂಗಳೂರಿನ ಮಹದೇವಪುರ ಕ್ಷೇತ್ರದಲ್ಲಿನ ವೋಟ್ ಚೋರಿ ಆರೋಪದ ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಖುದ್ದು ರಾಹುಲ್ ಗಾಂಧಿ, ಈ ವಿಚಾರವನ್ನ ಕೈಗೆತ್ತಿಕೊಂಡು ಸಮರ ಸಾರಿದ್ದರು. ಈಗ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ಮಾಡಿದ್ದು, ಆ ಮೂಲಕ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ವಿಕಸಿತ ಕೇರಳವೇ ನಮ್ಮ ಗುರಿ; ಕಾರ್ಪೋರೇಷನ್ ಗೆಲುವಿನ ಬಳಿಕ ತಿರುವನಂತಪುರಂ ಜನರಿಗೆ ಪ್ರಧಾನಿ ಮೋದಿ ಧನ್ಯವಾದ

ಕೇರಳದ ತಿರುವನಂತಪುರಂ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಭಾರೀ ಗೆಲುವು ಸಾಧಿಸಿದೆ. ತಿರುವನಂತಪುರಂ ಮಹಾನಗರ ಪಾಲಿಕೆಯ 101 ವಾರ್ಡ್‌ಗಳಲ್ಲಿ 50 ವಾರ್ಡ್‌ಗಳನ್ನು ಗೆಲ್ಲುವ ಮೂಲಕ ಭಾರತೀಯ ಜನತಾ ಪಕ್ಷ (ಬಿಜೆಪಿ) ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಹೊಸ ಇತಿಹಾಸ ಬರೆದಿದೆ. ಇದು ಆಡಳಿತಾರೂಢ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಮತ್ತು ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ (ಯುಡಿಎಫ್) ಗೆ ಭಾರಿ ಹೊಡೆತ ನೀಡಿದೆ. ತಿರುವನಂತಪುರಂನಲ್ಲಿ ಬಿಜೆಪಿಯ ಬಲಪ್ರದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದಾರೆ.

25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್