AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi

Narendra Modi

ನರೇಂದ್ರ ಮೋದಿ ಅವರು ಪ್ರಸ್ತುತ ಭಾರತದ ಪ್ರಧಾನಿಯಾಗಿದ್ದಾರೆ. ಮೇ 2014 ರಲ್ಲಿ ಅವರು ಮೊದಲ ಬಾರಿಗೆ ದೇಶದ ಪ್ರಧಾನಿಯಾದರು. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಗೆದ್ದ ನಂತರ ಮೋದಿ ಅವರು ಸತತ ಎರಡನೇ ಬಾರಿಗೆ ದೇಶದ ಪ್ರಧಾನಿಯಾದರು. ಮೋದಿ ದೇಶದ ಪ್ರಧಾನಿಯಾಗುವ ಮೊದಲು ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ನರೇಂದ್ರ ಮೋದಿ ಅವರು 2001 ರಿಂದ 2014 ರವರೆಗೆ ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಅವರು ಪ್ರಸ್ತುತ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ

ನರೇಂದ್ರ ಮೋದಿಯವರು ಭಾರತೀಯ ಜನತಾ ಪಕ್ಷದ ಪ್ರಮುಖ ನಾಯಕರಾಗಿದ್ದಾರೆ. ಈ ಹಿಂದೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ (ಆರ್‌ಎಸ್‌ಎಸ್) ಕೆಲಸ ಮಾಡಿದ್ದರು. ಅವರು 17 ಸೆಪ್ಟೆಂಬರ್ 1950 ರಂದು ಗುಜರಾತ್ನ ವಾಡ್ನಗರದಲ್ಲಿ ಜನಿಸಿದರು.

2014ರ ಲೋಕಸಭೆಯಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಗೆದ್ದಿತ್ತು. ಇದಾದ ನಂತರ 2019ರಲ್ಲೂ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ ಮೋದಿ ಮತ್ತೊಮ್ಮೆ ಪ್ರಧಾನಿಯಾದರು. 2014ರಿಂದ ಬಿಜೆಪಿ ಹಲವು ರಾಜ್ಯಗಳಲ್ಲಿ ಮೋದಿ ಹೆಸರನ್ನೇ ಪ್ರಮುಖ ಅಸ್ತ್ರವಾಗಿಟ್ಟುಕೊಂಡು ಚುನಾವಣೆ ಗೆದ್ದಿದೆ.

ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಅಧಿಕಾರಾವಧಿಯಲ್ಲಿ ಹಲವು ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಇದು ದೇಶದ ಜನರಲ್ಲಿ ಅವರ ಜನಪ್ರಿಯತೆಯನ್ನು ಹೆಚ್ಚಿಸಿತು. ಈ ನಿರ್ಧಾರಗಳಲ್ಲಿ ಪಾಕಿಸ್ತಾನದಲ್ಲಿ ಸರ್ಜಿಕಲ್ ಸ್ಟ್ರೈಕ್‌ಗಳು, ನೋಟು ಅಮಾನ್ಯೀಕರಣ, ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಧಿಯನ್ನು ತೆಗೆದುಹಾಕುವುದು, ತ್ರಿವಳಿ ತಲಾಖ್ ಕಾನೂನು ಅನುಷ್ಠಾನ ಇತ್ಯಾದಿಗಳು ಸೇರಿವೆ.

ಇನ್ನೂ ಹೆಚ್ಚು ಓದಿ

ಮೋದಿಯಿಂದ ಹೊಸ ಪ್ರಯೋಗ; ಬಂಗಾಳ ರ‍್ಯಾಲಿ ವೇಳೆ ವ್ಲಾಗರ್ ಆದ ಪ್ರಧಾನಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ದಿನಗಣನೆ ಶುರುವಾಗಿದೆ. ಚುನಾವಣಾ ರ‍್ಯಾಲಿಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ವ್ಲಾಗರ್ ಆಗಿದ್ದಾರೆ. ಈ ಮೂಲಕ ಪ್ರಧಾನಿ ಮೋದಿ ಹೊಸ ಪ್ರಯೋಗ ನಡೆಸಿದ್ದಾರೆ. ಇದೇ ಮೊದಲ ಬಾರಿಗೆ ತಾವೇ ಕ್ಯಾಮೆರಾದ ಎದುರು ನಿಂತು ಪ್ರಧಾನಿ ಮೋದಿ ತಮ್ಮ ಹಿಂದೆ ಸೇರಿದ್ದ ಜನಸಾಗರವನ್ನು ಪರಿಚಯಿಸುವ ಮೂಲಕ ಪಶ್ಚಿಮ ಬಂಗಾಳದ ಚುನಾವಣಾ ಅಖಾಡದ ಬಗ್ಗೆ ಮಾಹಿತಿ ನೀಡಿದ್ದಾರೆ. ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಬಂಗಾಳದ ಸಿಲಿಗುರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ; ಜನರಿಂದ ಜೈ ಶ್ರೀರಾಮ್ ಘೋಷಣೆ

ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದಾರೆ. ಇದಕ್ಕೂ ಮೊದಲು ಅವರು ರೋಡ್ ಶೋ ನಡೆಸಿದರು. ಪ್ರಧಾನ ಮಂತ್ರಿಯನ್ನು ನೋಡಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ಸಿಲಿಗುರಿಯ ಬೀದಿಗಳು ತುಂಬಿ ತುಳುಕುತ್ತಿದ್ದವು. ಅಲ್ಲಿ ಸೇರಿದ್ದ ಜನರು ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಾ, ಕೇಸರಿ ಬಾವುಟಗಳನ್ನು ಹಾರಿಸುತ್ತಾ ಪ್ರಧಾನಿ ಮೋದಿಯನ್ನು ಸ್ವಾಗತಿಸಿದರು. 

ಬಂಗಾಳಿಗಳನ್ನು ಅಲ್ಪಸಂಖ್ಯಾತರಾಗಲು ಬಿಡುವುದಿಲ್ಲ; ಚುನಾವಣಾ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ ಭರವಸೆ

ಟಿಎಂಸಿಯ ಲೂಟಿ, ಸುಳ್ಳಿನ ರಾಜಕೀಯ ಹಾಗೂ ಅದರ ಭಯದ ಆಳ್ವಿಕೆ ಶೀಘ್ರದಲ್ಲೇ ಕೊನೆಗೊಳ್ಳಲಿದೆ ಎಂದು ಪಶ್ಚಿಮ ಬಂಗಾಳದ ದಕ್ಷಿಣ ದಿನಾಜ್‌ಪುರದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರುವುದಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಭರವಸೆ ನೀಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಎಲ್ಲ ಪಕ್ಷಗಳ ಚುನಾವಣಾ ಪ್ರಚಾರ ಬಿರುಸಿನಿಂದ ಸಾಗಿದೆ.

ನಮಸ್ತೆ, ಮುಗುಳ್ನಗು, ಉಭಯಕುಶಲೋಪರಿ; ರಾಹುಲ್ ಗಾಂಧಿ ಜೊತೆ ಪ್ರಧಾನಿ ಮೋದಿಯ ಅಪರೂಪದ ಕ್ಷಣ

ಸಂಸತ್ತಿನ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರಿನಿಂದ ಇಳಿದು ಬಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಮಾತುಕತೆ ನಡೆಸಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಕಾರಿನಿಂದ ಇಳಿದು ಬಂದವರೇ ಕೈ ಮುಗಿದು ನಮಸ್ಕರಿಸುತ್ತಾ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಕೆಲ ಸಮಯ ಆಪ್ತ ಮಾತುಕತೆ ನಡೆಸಿದ್ದಾರೆ. ಈ ವೇಳೆ ಇಬ್ಬರೂ ನಾಯಕರು ಸೌಹಾರ್ದಯುತ ರೀತಿಯಲ್ಲಿ ಮಾತನಾಡುತ್ತಾ ನಿಂತಿರುವ ವಿಡಿಯೋ ವೈರಲ್ ಆಗಿದೆ.

ಏಪ್ರಿಲ್ 15ರಂದು ಮಂಡ್ಯಕ್ಕೆ ಆಗಮಿಸಲಿರುವ ಮೋದಿ! ಆದಿಚುಂಚನಗಿರಿ ಮಠದಲ್ಲಿ ಗದ್ದಿಗೆ ಉದ್ಘಾಟನೆ

ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 15ರಂದು ಮಂಡ್ಯಕ್ಕೆ ಭೇಟಿ ನೀಡಲಿದ್ದಾರೆ. ನಾಗಮಂಗಲದ ಆದಿಚುಂಚನಗಿರಿ ಮಠದಲ್ಲಿ ಮಾಜಿ ಪೀಠಾಧಿಪತಿ ಬಾಲಗಂಗಾಧರನಾಥ ಸ್ವಾಮಿ ಅವರ ನೂತನ ಗದ್ದಿಗೆಯನ್ನು ಉದ್ಘಾಟಿಸಲಿದ್ದಾರೆ. ನಂತರ ಬಿಜಿಎಸ್ ಮೈದಾನದಲ್ಲಿ ಸಾರ್ವಜನಿಕ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾಡಳಿತ ಭದ್ರತೆ ಹಾಗೂ ವ್ಯವಸ್ಥೆಗಳ ಸಿದ್ಧತೆ ಕೈಗೊಂಡಿದೆ. ಮೋದಿಯವರ ಸಂಪೂರ್ಣ ದಿನಚರಿ ಇಲ್ಲಿದೆ.

ಪ್ರಧಾನಿ ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಬಿಹಾರದ ವ್ಯಕ್ತಿ ಬಲೆಗೆ ಬಿದ್ದಿದ್ದು ಹೇಗೆ?

ಬಿಹಾರದ ವ್ಯಕ್ತಿಯೊಬ್ಬರು ಸಿಐಎಗೆ ಇಮೇಲ್ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದಾರೆ. ಈ ಘಟನೆ ದೇಶಾದ್ಯಂತ ಆಘಾತ ಸೃಷ್ಟಿಸಿದೆ. ಬಿಹಾರದ ಅಮನ್ ತಿವಾರಿ ಅಮೆರಿಕದ ಕೇಂದ್ರ ಗುಪ್ತಚರ ಸಂಸ್ಥೆ (ಸಿಐಎ)ಗೆ ಇಮೇಲ್ ಮಾಡಿ ಭಾರಿ ಮೊತ್ತದ ಹಣಕ್ಕೆ ಬದಲಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವುದಾಗಿ ಹೇಳಿದ್ದಾರೆ. ಈ ಮಾರಕ ಸಂಚನ್ನು ಕಾರ್ಯಗತಗೊಳಿಸಲು ತಿವಾರಿ ಕೇವಲ 22 ದಿನಗಳ ಸಮಯಾವಕಾಶ ಮಾತ್ರ ಕೇಳಿದ್ದರು.

Video: ಪಶ್ಚಿಮ ಬಂಗಾಳ ಚುನಾವಣೆ, ಜನತೆಗೆ 6 ಭರವಸೆಗಳ ಕೊಟ್ಟ ಪ್ರಧಾನಿ ಮೋದಿ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜನತೆಗೆ ಪ್ರಧಾನಿ ನರೇಂದ್ರ ಮೋದಿ 6 ಭರವಸೆಗಳನ್ನು ಕೊಟ್ಟಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಭ್ರಷ್ಟರನ್ನು ಜೈಲಿಗೆ ಕಳುಹಿಸಲಾಗುತ್ತದೆ ಮತ್ತು ಎಲ್ಲಾ ಹಳೆಯ ಹಗರಣದ ಕಡತಗಳನ್ನು ಮತ್ತೆ ತೆರೆಯಲಾಗುತ್ತದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಟಿಎಂಸಿ ಹರಡಿರುವ ಭಯ ಮತ್ತು ಭಯೋತ್ಪಾದನೆಯನ್ನು ಬಿಜೆಪಿ ಕೊನೆಗೊಳಿಸುತ್ತದೆ ಮತ್ತು ರಾಜ್ಯದಲ್ಲಿ ಕಾನೂನಿನ ಮೇಲಿನ ನಂಬಿಕೆಯನ್ನು ಪುನಃಸ್ಥಾಪಿಸುತ್ತದೆ.

Women’s Reservation Bill 2026: ಮಹಿಳಾ ಸಬಲೀಕರಣದತ್ತ ಐತಿಹಾಸಿಕ ಹೆಜ್ಜೆ: 2029 ರಿಂದ ಶೇ. 33 ಮಹಿಳಾ ಮೀಸಲಾತಿ ಜಾರಿ, ವಿಶೇಷ ಅಧಿವೇಶನಕ್ಕೆ ಕೇಂದ್ರದ ಕರೆ

ಕೇಂದ್ರ ಸರ್ಕಾರವು 2029 ರಿಂದ ಜಾರಿಗೆ ಬರಲಿರುವ ಶೇ. 33ರಷ್ಟು ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ತಿದ್ದುಪಡಿ ಮಸೂದೆಗಳಿಗೆ ಅಧಿಕೃತವಾಗಿ ಅನುಮೋದನೆ ನೀಡಿದೆ. ಇವುಗಳನ್ನು ಈಗ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲೇ ಅಂಗೀಕರಿಸುವ ಮೂಲಕ ಮಹಿಳಾ ಸಬಲೀಕರಣದ ಭರವಸೆಯನ್ನು ಈಡೇರಿಸಲು ಸರ್ಕಾರ ಮುಂದಾಗಿದೆ.

ಕಾಂಗ್ರೆಸ್​​ಗೆ ಕುಟುಂಬ ಮೊದಲು, ನಮಗೆ ದೇಶ ಮೊದಲು; ಅಸ್ಸಾಂನಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಬಿಜೆಪಿಯ ಆಡಳಿತ ಮಾದರಿಯನ್ನು ಎತ್ತಿ ತೋರಿಸಿದ ಪ್ರಧಾನಿ ಮೋದಿ, ತಮ್ಮ ಪಕ್ಷವು ನಿರಂತರ ಅಭಿವೃದ್ಧಿ ಪ್ರಯತ್ನಗಳ ಮೂಲಕ ಅಸ್ಸಾಂ ಜನರ ಜೀವನವನ್ನು ಸುಧಾರಿಸಲು ಬದ್ಧವಾಗಿದೆ ಎಂದು ಹೇಳಿದರು. ಬಿಜೆಪಿಯ ಅಭಿವೃದ್ಧಿ ಕಾರ್ಯಸೂಚಿಯನ್ನು ಪುನರುಚ್ಚರಿಸಿದ ಪ್ರಧಾನಿ ಮೋದಿ, ಅಸ್ಸಾಂನ ಜನರಿಗೆ ಪ್ರಗತಿ, ಸ್ಥಿರತೆ ಮತ್ತು ಉತ್ತಮ ಜೀವನ ಮಟ್ಟವನ್ನು ನೀಡಲು ಪಕ್ಷವು ಅವಿಶ್ರಾಂತವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.

‘ಧುರಂಧರ್’, ‘ಕೇರಳ ಸ್ಟೋರಿ’ ಸುಳ್ಳು ಎಂದವರ ವಿರುದ್ಧ ನರೇಂದ್ರ ಮೋದಿ ಗರಂ

ಕೇರಳದಲ್ಲಿ ಚುನಾವಣಾ ಭಾಷಣ ಮಾಡುವಾಗ ನರೇಂದ್ರ ಮೋದಿ ಅವರು ‘ಧುರಂಧರ್’ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. ಈ ಸಿನಿಮಾದಲ್ಲಿ ತೋರಿಸಿರುವುದು ಸುಳ್ಳು ಎಂದವರನ್ನು ಮೋದಿ ಟೀಕಿಸಿದ್ದಾರೆ. ‘ದಿ ಕೇರಳ ಸ್ಟೋರಿ’, ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗಳ ಬಗ್ಗೆಯೂ ಅವರು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.

ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ

ಕೇರಳದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೆಗಾ ರೋಡ್ ಶೋ ನಡೆದಿದೆ. ಈ ವೇಳೆ ಭಾರಿ ಜನಸಮೂಹ ಸೇರಿತ್ತು. ಪ್ರಧಾನಿ ನರೇಂದ್ರ ಮೋದಿ ತಿರುವನಂತಪುರದಲ್ಲಿ ಬೃಹತ್ ರೋಡ್ ಶೋ ನಡೆಸುವ ಮೂಲಕ ಕೇರಳದ ಚುನಾವಣಾ ಪ್ರಚಾರದ ಬಿಸಿಯನ್ನು ಹೆಚ್ಚಿಸಿದರು. ಕಿಲ್ಲಿಪಾಲಂ ಜಂಕ್ಷನ್‌ನಿಂದ ಕರಮನವರೆಗಿನ 1.5 ಕಿ.ಮೀ ಉದ್ದಕ್ಕೂ ಭಾರಿ ಜನಸಮೂಹವನ್ನು ಸೆಳೆದರು.

ಗಲ್ಫ್ ದೇಶಗಳೊಂದಿಗಿನ ಭಾರತದ ಸಂಬಂಧ ಹಾಳು ಮಾಡುವುದೇ ಕಾಂಗ್ರೆಸ್ ಉದ್ದೇಶ; ಪ್ರಧಾನಿ ಮೋದಿ ವಾಗ್ದಾಳಿ

ಕೇರಳದ ಪತನಾಂತಿಟ್ಟದ ತಿರುವಲ್ಲಾದಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ. ವಿಧಾನಸಭಾ ಚುನಾವಣೆಗೆ ಮುನ್ನ ಮೋದಿ ಕೇರಳದಲ್ಲಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ಈ ವೇಳೆ ಕಾಂಗ್ರೆಸ್ ಹಾಗೂ ಎಡಪಕ್ಷಗಳ ವಿರುದ್ಧ ಅವರು ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ನೀಡುತ್ತಿರುವ ಹೇಳಿಕೆಗಳು ಭಾರತೀಯರ ಜೀವಗಳನ್ನು ಅದರಲ್ಲೂ ವಿಶೇಷವಾಗಿ ಈ ಪ್ರದೇಶದಲ್ಲಿ ಕೆಲಸ ಮಾಡುತ್ತಿರುವ ಕೇರಳದವರ ಜೀವಗಳನ್ನು ಅಪಾಯಕ್ಕೆ ಸಿಲುಕಿಸುತ್ತಿದೆ ಎಂದು ಮೋದಿ ಆರೋಪಿಸಿದ್ದಾರೆ.

‘ಬೆಂಗಳೂರು ಇನ್’ ಸಿನಿಮಾ ಮತ್ತು ನಟಿ ಅನುಷಾ ರೈ ಬಗ್ಗೆ ಧರ್ಮ ಕೀರ್ತಿ ಮಾತು
‘ಬೆಂಗಳೂರು ಇನ್’ ಸಿನಿಮಾ ಮತ್ತು ನಟಿ ಅನುಷಾ ರೈ ಬಗ್ಗೆ ಧರ್ಮ ಕೀರ್ತಿ ಮಾತು
ದಾವಣಗೆರೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯನ್ನ ಸೋಲಿಸಲು ಫಂಡಿಂಗ್​​
ದಾವಣಗೆರೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯನ್ನ ಸೋಲಿಸಲು ಫಂಡಿಂಗ್​​
‘ಬೆಂಗಳೂರು ಇನ್’: ನಿರ್ದೇಶಕರ ಬಗ್ಗೆ ಬಿಗ್​​ಬಾಸ್ ರಿಷಾ ಕಂಪ್ಲೆಂಟ್
‘ಬೆಂಗಳೂರು ಇನ್’: ನಿರ್ದೇಶಕರ ಬಗ್ಗೆ ಬಿಗ್​​ಬಾಸ್ ರಿಷಾ ಕಂಪ್ಲೆಂಟ್
ಕೊಲೆಯಾದ ಯೋಗೀಶ್ ಗೌಡ ಕುಟುಂಬದಲ್ಲಿ ಆಸ್ತಿ ಕಲಹ
ಕೊಲೆಯಾದ ಯೋಗೀಶ್ ಗೌಡ ಕುಟುಂಬದಲ್ಲಿ ಆಸ್ತಿ ಕಲಹ
ಉಪಚುನಾವಣಾ ಪ್ರಚಾರಕ್ಕೆ ಕರೆದಿಲ್ಲ; ಜಬ್ಬಾರ್​ಗೆ ಸಚಿವ ಖಡಕ್ ಕೌಂಟರ್
ಉಪಚುನಾವಣಾ ಪ್ರಚಾರಕ್ಕೆ ಕರೆದಿಲ್ಲ; ಜಬ್ಬಾರ್​ಗೆ ಸಚಿವ ಖಡಕ್ ಕೌಂಟರ್
50 ಲಕ್ಷ, 1 ಕೋಟಿ ಹಣ ಹಂಚಿಕೆಯ ಆರೋಪದ ಬಗ್ಗೆ ಚಮನ್ ಸಾಬ್ ಸ್ಫೋಟಕ ಮಾತು!
50 ಲಕ್ಷ, 1 ಕೋಟಿ ಹಣ ಹಂಚಿಕೆಯ ಆರೋಪದ ಬಗ್ಗೆ ಚಮನ್ ಸಾಬ್ ಸ್ಫೋಟಕ ಮಾತು!
ಅತಿ ಹೆಚ್ಚು ಬಜೆಟ್ ಮಂಡಿಸಿದ್ದಕ್ಕೆ ಸಿದ್ದುಗೆ 'ಗೋಲ್ಡನ್' ಗಿಫ್ಟ್
ಅತಿ ಹೆಚ್ಚು ಬಜೆಟ್ ಮಂಡಿಸಿದ್ದಕ್ಕೆ ಸಿದ್ದುಗೆ 'ಗೋಲ್ಡನ್' ಗಿಫ್ಟ್
ಸಿಎಸ್​ಕೆ ಪರ ಕೊನೆಗೂ ಅಬ್ಬರಿಸಿದ ಸಂಜು ಸ್ಯಾಮ್ಸನ್
ಸಿಎಸ್​ಕೆ ಪರ ಕೊನೆಗೂ ಅಬ್ಬರಿಸಿದ ಸಂಜು ಸ್ಯಾಮ್ಸನ್
ಬಂಗಾಳದ ಸಿಲಿಗುರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಸಿಲಿಗುರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು
ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು