AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi

Narendra Modi

ನರೇಂದ್ರ ಮೋದಿ ಅವರು ಪ್ರಸ್ತುತ ಭಾರತದ ಪ್ರಧಾನಿಯಾಗಿದ್ದಾರೆ. ಮೇ 2014 ರಲ್ಲಿ ಅವರು ಮೊದಲ ಬಾರಿಗೆ ದೇಶದ ಪ್ರಧಾನಿಯಾದರು. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಗೆದ್ದ ನಂತರ ಮೋದಿ ಅವರು ಸತತ ಎರಡನೇ ಬಾರಿಗೆ ದೇಶದ ಪ್ರಧಾನಿಯಾದರು. ಮೋದಿ ದೇಶದ ಪ್ರಧಾನಿಯಾಗುವ ಮೊದಲು ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ನರೇಂದ್ರ ಮೋದಿ ಅವರು 2001 ರಿಂದ 2014 ರವರೆಗೆ ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಅವರು ಪ್ರಸ್ತುತ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ

ನರೇಂದ್ರ ಮೋದಿಯವರು ಭಾರತೀಯ ಜನತಾ ಪಕ್ಷದ ಪ್ರಮುಖ ನಾಯಕರಾಗಿದ್ದಾರೆ. ಈ ಹಿಂದೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ (ಆರ್‌ಎಸ್‌ಎಸ್) ಕೆಲಸ ಮಾಡಿದ್ದರು. ಅವರು 17 ಸೆಪ್ಟೆಂಬರ್ 1950 ರಂದು ಗುಜರಾತ್ನ ವಾಡ್ನಗರದಲ್ಲಿ ಜನಿಸಿದರು.

2014ರ ಲೋಕಸಭೆಯಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಗೆದ್ದಿತ್ತು. ಇದಾದ ನಂತರ 2019ರಲ್ಲೂ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ ಮೋದಿ ಮತ್ತೊಮ್ಮೆ ಪ್ರಧಾನಿಯಾದರು. 2014ರಿಂದ ಬಿಜೆಪಿ ಹಲವು ರಾಜ್ಯಗಳಲ್ಲಿ ಮೋದಿ ಹೆಸರನ್ನೇ ಪ್ರಮುಖ ಅಸ್ತ್ರವಾಗಿಟ್ಟುಕೊಂಡು ಚುನಾವಣೆ ಗೆದ್ದಿದೆ.

ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಅಧಿಕಾರಾವಧಿಯಲ್ಲಿ ಹಲವು ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಇದು ದೇಶದ ಜನರಲ್ಲಿ ಅವರ ಜನಪ್ರಿಯತೆಯನ್ನು ಹೆಚ್ಚಿಸಿತು. ಈ ನಿರ್ಧಾರಗಳಲ್ಲಿ ಪಾಕಿಸ್ತಾನದಲ್ಲಿ ಸರ್ಜಿಕಲ್ ಸ್ಟ್ರೈಕ್‌ಗಳು, ನೋಟು ಅಮಾನ್ಯೀಕರಣ, ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಧಿಯನ್ನು ತೆಗೆದುಹಾಕುವುದು, ತ್ರಿವಳಿ ತಲಾಖ್ ಕಾನೂನು ಅನುಷ್ಠಾನ ಇತ್ಯಾದಿಗಳು ಸೇರಿವೆ.

ಇನ್ನೂ ಹೆಚ್ಚು ಓದಿ

ಇಂಧನ ಪರಿಸ್ಥಿತಿ ಅವಲೋಕಿಸಲು ಉನ್ನತ ಮಟ್ಟದ ಸಭೆ ನಡೆಸಿದ ಪಿಎಂ ಮೋದಿ

PM Modi conducts high level meeting to review energy situation in India: ಭಾರತದಲ್ಲಿ ಪೆಟ್ರೋಲ್ ಮತ್ತು ಗ್ಯಾಸ್ ಪೂರೈಕೆ ವ್ಯವಸ್ಥೆಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಉನ್ನತ ಅಧಿಕಾರಿಗಳ ಸಭೆ ನಡೆಸಿದರು. ವಿವಿಧ ಇಂಧನಗಳ ದಾಸ್ತಾನು ಎಷ್ಟು, ಆಮದು ಎಷ್ಟಾಗುತ್ತಿದೆ ಎಂಬಿತ್ಯಾದಿ ಮಾಹಿತಿಯನ್ನು ಅಧಿಕಾರಿಗಳು ಪ್ರಧಾನಿಗಳಿಗೆ ತಿಳಿಸಿದ್ದಾರೆ. ದೇಶದಲ್ಲಿ ಪೆಟ್ರೋಲ್, ಡೀಸಲ್​ಗಿಂತ ಎಲ್​ಪಿಜಿ ಸಮಸ್ಯೆ ಹೆಚ್ಚು ಕಾಡುತ್ತಿದೆ.

ಸರ್ಕಾರದ ಮುಖ್ಯಸ್ಥರಾಗಿ ಸುದೀರ್ಘ ಸೇವೆ ಸಲ್ಲಿಸಿದ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪಾತ್ರರಾದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಸರ್ಕಾರದ ಮುಖ್ಯಸ್ಥರಾಗಿ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಹೊಸ ದಾಖಲೆ ನಿರ್ಮಿಸಿದ್ದಾರೆ. ಸಿಕ್ಕಿಂನ ಮಾಜಿ ಮುಖ್ಯಮಂತ್ರಿ ಪವನ್ ಕುಮಾರ್ ಚಾಮ್ಲಿಂಗ್ ಅವರ ಅಧಿಕಾರಾವಧಿಯನ್ನು ಮೀರಿಸಿದ್ದಾರೆ. ದೇಶಕ್ಕಾಗಿ ಅವರ ಅಚಲ ಸಮರ್ಪಣೆ ಮತ್ತು ರಾಷ್ಟ್ರ ಮೊದಲು ನೀತಿಯ ಫಲಿತಾಂಶವಿದು. ಮುಖ್ಯಮಂತ್ರಿಯಿಂದ ಪ್ರಧಾನಿಯವರೆಗಿನ ಅವರ ಪ್ರಯಾಣವು ನಿರಂತರ ಸೇವೆ ಮತ್ತು ಸಾರ್ವಜನಿಕ ಕಲ್ಯಾಣಕ್ಕೆ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅಭಿನಂದಿಸಿದ್ದಾರೆ.

‘ನಾನು ಮೋದಿಯ ಹೆಮ್ಮೆಯ ಅಂಧಭಕ್ತೆ’: ‘ಧುರಂಧರ್ 2’ ನೋಡಿ ಹೇಳಿಕೆ ನೀಡಿದ ನಟಿ ರೇಣು ದೇಸಾಯಿ

ಪವನ್ ಕಲ್ಯಾಣ್ ಮಾಜಿ ಪತ್ನಿ ರೇಣು ದೇಸಾಯಿ ಅವರು ಈ ರೀತಿ ಪೋಸ್ಟ್ ಮಾಡಿದ್ದಾರೆ. ‘ಧುರಂಧರ್ 2’ ಸಿನಿಮಾ ನೋಡಿದ ಬಳಿಕ ಅವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ರೇಣು ದೇಸಾಯಿ ಅವರಿಗೆ ಈ ಸಿನಿಮಾ ಸಖತ್ ಇಷ್ಟ ಆಗಿದೆ. ಆದರೆ ಕೆಲವರಿಗೆ ಇಷ್ಟ ಆಗಿಲ್ಲ.

ಇರಾನ್ ಅಧ್ಯಕ್ಷರೊಂದಿಗೆ ಮಾತನಾಡಿದ ಪ್ರಧಾನಿ ಮೋದಿ; ನೌರುಜ್​ನಲ್ಲಿ ಮೂಲಸೌಕರ್ಯದ ಮೇಲಿನ ದಾಳಿಗೆ ಖಂಡನೆ

ಪ್ರಧಾನಿ ನರೇಂದ್ರ ಮೋದಿ ಇಂದು ಇರಾನ್ ಅಧ್ಯಕ್ಷ ಡಾ. ಮಸೂದ್ ಪೆಜೆಶ್ಕಿಯನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು. ಈ ವೇಳೆ ಈದ್ ಶುಭಾಶಯಗಳನ್ನು ತಿಳಿಸಿದ್ದಾರೆ. ಅಮೆರಿಕ, ಇಸ್ರೇಲ್ ಹಾಗೂ ಇರಾನ್ ಜೊತೆ ನಡೆಯುತ್ತಿರುವ ಸಂಘರ್ಷದ ನಡುವೆಯೂ ಪಶ್ಚಿಮ ಏಷ್ಯಾದಲ್ಲಿ ಶಾಂತಿ ಮತ್ತು ಸ್ಥಿರತೆಗಾಗಿ ಮೋದಿ ಕರೆ ನೀಡಿದರು. ಸುಮಾರು 8 ದಿನಗಳಲ್ಲಿ ಪ್ರಧಾನಿ ಮೋದಿ ಪೆಜೆಶ್ಕಿಯನ್ ಅವರೊಂದಿಗೆ ಮಾತುಕತೆ ನಡೆಸುತ್ತಿರುವುದು ಇದು ಎರಡನೇ ಬಾರಿ.

ರಾಜ್​​ಕುಮಾರ್ ಹಾಡನ್ನು ಶೇರ್ ಮಾಡಿಕೊಂಡ ಪ್ರಧಾನಿ ಮೋದಿ; ಕಾರಣ ಏನು?

ಪ್ರಧಾನಿ ನರೇಂದ್ರ ಮೋದಿ ಅವರು ಡಾ. ರಾಜ್​​ಕುಮಾರ್ ಅವರ 'ಶ್ರೀ ಚಾಮುಂಡೇಶ್ವರಿ' ಹಾಡನ್ನು ಹಂಚಿಕೊಂಡಿರುವುದು ಕನ್ನಡಿಗರಿಗೆ ಮತ್ತು ಅಣ್ಣಾವ್ರ ಅಭಿಮಾನಿಗಳಿಗೆ ಸಂತಸ ತಂದಿದೆ. 1970ರ 'ಶ್ರೀ ಕೃಷ್ಣದೇವರಾಯ' ಚಿತ್ರದ ಈ ಹಾಡು ಜಗತ್ಜನನಿ ಮಾತೆಯ ಮೇಲಿನ ನಂಬಿಕೆಯನ್ನು ಸಾರುತ್ತದೆ. ರಾಜ್​​ಕುಮಾರ್ ಅವರ ವಿಶ್ವಾದ್ಯಂತ ಖ್ಯಾತಿ ಮತ್ತು ಬಹುಮುಖಿ ಪ್ರತಿಭೆಗೆ ಇದು ಮತ್ತೊಂದು ಸಾಕ್ಷಿ.

ಸಕ್ಕರೆ ಕಡಿಮೆ ತಿನ್ನಿ, ದಿನವೂ ಯೋಗ ಮಾಡಿ; ಆರೋಗ್ಯದ ರಹಸ್ಯ ಹೇಳಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ತಮ್ಮ ಆರೋಗ್ಯ, ಆಹಾರದ ವಿಷಯದಲ್ಲಿ ಎಷ್ಟು ಕಟ್ಟುನಿಟ್ಟು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಯೋಗವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದು ಜೂನ್ 21 ಅನ್ನು ವಿಶ್ವಸಂಸ್ಥೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನಾಗಿ ಆಚರಿಸುವಲ್ಲಿ ಮೋದಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹಾಗೇ, ತಾವು ಸೇವಿಸುವ ಆಹಾರದ ಬಗ್ಗೆಯೂ ಅವರು ಆಗಾಗ ತಮ್ಮ ಭಾಷಣದಲ್ಲಿ ಉಲ್ಲೇಖಿಸುತ್ತಿರುತ್ತಾರೆ. ಇದೀಗ ದೇಶದ ಜನರಿಗೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆಂಬುದರ ಬಗ್ಗೆ ಮೋದಿ ಕೆಲವು ಸಲಹೆಗಳನ್ನು ನೀಡಿದ್ದಾರೆ.

WITT Summit 2026: WITT ಶೃಂಗಸಭೆಯಲ್ಲಿ ಪ್ರಧಾನಿ ಮೋದಿಯಿಂದ ಭಾರತದ ಅಭಿವೃದ್ಧಿಯ ದಿಕ್ಕಿನ ಕುರಿತು ಮಹತ್ವದ ಚರ್ಚೆ

ಟಿವಿ9 ನೆಟ್‌ವರ್ಕ್‌ನ "ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ 2026" ಮಾರ್ಚ್ 23-24 ರಂದು ದೆಹಲಿಯಲ್ಲಿ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು "ಭಾರತ ಮತ್ತು ವಿಶ್ವ" ವಿಷಯದ ಕುರಿತು ತಮ್ಮ ದೃಷ್ಟಿಕೋನವನ್ನು ಹಂಚಿಕೊಳ್ಳಲಿದ್ದಾರೆ. ಈ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸತತ ಮೂರನೇ ಬಾರಿ ಭಾಗವಹಿಸುತ್ತಿದ್ದಾರೆ. ಹಲವಾರು ಕೇಂದ್ರ ಸಚಿವರು, ಹಲವಾರು ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಜಾಗತಿಕ ನಾಯಕರು ಭಾರತದ ಅಭಿವೃದ್ಧಿ ಮತ್ತು ಅಭಿವೃದ್ಧಿ ಹೊಂದಿದ ಭಾರತದ ಗುರಿಯ ಕುರಿತು ಪ್ರಮುಖ ಚರ್ಚೆಗಳಲ್ಲಿ ಭಾಗವಹಿಸಲಿದ್ದಾರೆ.

ಪಶ್ಚಿಮ ಏಷ್ಯಾ ಸಂಘರ್ಷದ ಕುರಿತು ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಜೊತೆ ಪ್ರಧಾನಿ ಮೋದಿ ಮಾತುಕತೆ

ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಏಷ್ಯಾದ ಸಂಘರ್ಷದ ಕುರಿತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಮಾತನಾಡಿದ್ದಾರೆ. ಈ ಉದ್ವಿಗ್ನತೆಯನ್ನು ಶಮನಗೊಳಿಸುವ, ಮಾತುಕತೆ ಮತ್ತು ರಾಜತಾಂತ್ರಿಕತೆಯ ತುರ್ತು ಅಗತ್ಯವನ್ನು ಮೋದಿ ಒತ್ತಿ ಹೇಳಿದ್ದಾರೆ.ಪಶ್ಚಿಮ ಏಷ್ಯಾ ಪ್ರದೇಶದ ಶಾಂತಿ ಮತ್ತು ಸ್ಥಿರತೆಯನ್ನು ಮುನ್ನಡೆಸಲು ನಿಕಟ ಸಮನ್ವಯವನ್ನು ಮುಂದುವರಿಸಲು ಇಬ್ಬರೂ ನಾಯಕರು ಒಗ್ಗಟ್ಟಾಗಿರುವುದಾಗಿ ಅವರು ಹೇಳಿದರು.

LPG ಸಿಲಿಂಡರ್​​ಗಳ ಕೊರತೆ: ಪ್ರಧಾನಿ ನರೇಂದ್ರ ಮೋದಿಗೆ ಬೆಂಗಳೂರು ಹೋಟೆಲ್​​ ಅಸೋಸಿಯೇಷನ್​​ ಪತ್ರ

ವಾಣಿಜ್ಯ LPG ಸಿಲಿಂಡರ್‌ಗಳ ತೀವ್ರ ಕೊರತೆಯಿಂದ ರಾಜ್ಯದ ಹೋಟೆಲ್ ಉದ್ಯಮ ತೀವ್ರ ಸಂಕಷ್ಟದಲ್ಲಿದ್ದು, ಈ ಬಗ್ಗೆ ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಪ್ರಧಾನಿ ಮೋದಿಗೆ ಪತ್ರ ಬರೆದಿದೆ. ಸಿಲಿಂಡರ್ ಪೂರೈಕೆಗೆ ನಿರ್ದೇಶನ  ಮತ್ತು ಈ ಸಮಸ್ಯೆ ಕುರಿತು ಚರ್ಚಿಸಲು ಭೇಟಿಗೆ ಸಮಯ ನೀಡುವಂತೆ ಆಗ್ರಹಿಸಲಾಗಿದೆ. ಸಮಸ್ಯೆಯಿಂದ ಲಕ್ಷಾಂತರ ಕಾರ್ಮಿಕರ ಬದುಕು ಬೀದಿಗೆ ಬಿದ್ದಿದೆ, ಅನೇಕ ಹೋಟೆಲ್‌ಗಳು ಮುಚ್ಚುವ ಭೀತಿಯಲ್ಲಿವೆ ಎಂಬ ವಿಚಾರವನ್ನೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಕಾಂಗ್ರೆಸ್ ಮುಖಂಡರ ಗಲಾಟೆ: ನ್ಯಾಯಕ್ಕಾಗಿ ಪ್ರಧಾನಿ ಮೋದಿ ಮೊರೆ ಹೋದ ಮಹಿಳಾ ಕಾರ್ಯದರ್ಶಿ

ಕರ್ನಾಟಕ ಕಾಂಗ್ರೆಸ್​ ಪಕ್ಷದ ಪದಾಧಿಕಾರ ನಡುವೆ ಗಲಾಟೆಯಾಗಿದ್ದು, ಕಾಂಗ್ರೆಸ್ ಮಹಿಳಾ ಘಟಕದ ಮಹಿಳಾ ಕಾರ್ಯದರ್ಶಿ ಮೇಲೆ ಅದೇ ಪಕ್ಷದ ಮುಖಂಡ ಹಲ್ಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಈ ಸಂಬಂಧ ಈಗಾಗಲೇ ಮುಖಂಡನನ್ನು ಪೊಲೀಸರು ಬಂಧಿಸಿದ್ದದಾರೆ. ಆದ್ರೆ, ಸಮಗ್ರ ತನಿಖೆ ಆಗುತ್ತಿಲ್ಲವೆಂದು ನ್ಯಾಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮೊರೆ ಹೋಗಿದ್ದಾರೆ. ಅರೇ ಇದೇನಿದು ಕಾಂಗ್ರೆಸ್ ಮುಖಂಡೆಗೆ ನ್ಯಾಯಕ್ಕಾಗಿ ಪ್ರಧಾನಿ ಮೊರೆ ಹೋಗಿದ್ದಾರೆ ಎಂದು ಅಚ್ಚರಿ ಅನ್ನಿಸಿದರೂ ಸತ್ಯ.

ಟಿಎಂಸಿ ಬುಡಕಟ್ಟು ಸಮುದಾಯದವನ್ನು ಅವಮಾನಿಸಿದೆ, ಹಿಂದೂಗಳನ್ನು ಅಲ್ಪಸಂಖ್ಯಾತರನ್ನಾಗಿಸುತ್ತಿದೆ; ಮೋದಿ ವಾಗ್ದಾಳಿ

ಟಿಎಂಸಿ ರಾಷ್ಟ್ರಪತಿ, ಬುಡಕಟ್ಟು ಜನಾಂಗದವರನ್ನು ಅವಮಾನಿಸಿದೆ, ಅವರ ಆಳ್ವಿಕೆ ಅಂತ್ಯಗೊಳ್ಳುತ್ತಿದೆ. ಬಂಗಾಳ ಸರ್ಕಾರ ಉದ್ದೇಶಪೂರ್ವಕವಾಗಿ ಹಿಂದೂಗಳನ್ನು ಅಲ್ಪಸಂಖ್ಯಾತರನ್ನಾಗಿ ಮಾಡುತ್ತಿದೆ. ಅವಕಾಶಗಳನ್ನು ಹುಡುಕಿಕೊಂಡು ಅನೇಕ ಯುವಕರು ಬಂಗಾಳವನ್ನು ತೊರೆಯುವಂತಾಗಿದೆ. ಬಂಗಾಳದ ಯುವಕರು ವಲಸೆಯ ಶಾಪದಿಂದ ಬಳಲುತ್ತಿದ್ದಾರೆ. ಅವರಿಗೆ ಪದವಿಗಳು ಅಥವಾ ಉದ್ಯೋಗಗಳು ಸಿಗುತ್ತಿಲ್ಲ ಎಂದು ಪಶ್ಚಿಮ ಬಂಗಾಳದಲ್ಲಿ ಸಿಎಂ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!

ಅಸ್ಸಾಂನಲ್ಲಿ ಪ್ರಧಾನಿ ಮೋದಿ ಅವರು 800 ಚಹಾ ತೋಟಗಳಲ್ಲಿರುವ 3.5 ಲಕ್ಷ ಕುಟುಂಬಗಳಿಗೆ 28,000 ಭೂ ಪಟ್ಟಾಗಳನ್ನು ವಿತರಿಸುವಾಗ ಚಹಾ ಬುಡಕಟ್ಟು ಮಹಿಳೆಯ ಪಾದಗಳನ್ನು ಮುಟ್ಟಿದ್ದಾರೆ. ಆ ಮಹಿಳೆ ಪ್ರಧಾನಿ ಮೋದಿಗೆ ನಮಸ್ಕರಿಸಿದ್ದಾರೆ. ಅದಕ್ಕೆ ಪ್ರತಿಯಾಗಿ ಮೋದಿಯವರು ಕೂಡ ಬಗ್ಗಿ ಆಕೆಯ ಪಾದಗಳನ್ನು ಮುಟ್ಟಿದ್ದಾರೆ. ಈ ವಿಡಿಯೋ ಭಾರೀ ವೈರಲ್ ಆಗಿದೆ. ಪ್ರಧಾನಿ ಮೋದಿ ಮಹಿಳೆಯರಿಗೆ ನೀಡುವ ಗೌರವವನ್ನು ಈ ವಿಡಿಯೋ ಸಂಕೇತಿಸುತ್ತದೆ.