Narendra Modi
ನರೇಂದ್ರ ಮೋದಿ ಅವರು ಪ್ರಸ್ತುತ ಭಾರತದ ಪ್ರಧಾನಿಯಾಗಿದ್ದಾರೆ. ಮೇ 2014 ರಲ್ಲಿ ಅವರು ಮೊದಲ ಬಾರಿಗೆ ದೇಶದ ಪ್ರಧಾನಿಯಾದರು. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಗೆದ್ದ ನಂತರ ಮೋದಿ ಅವರು ಸತತ ಎರಡನೇ ಬಾರಿಗೆ ದೇಶದ ಪ್ರಧಾನಿಯಾದರು. ಮೋದಿ ದೇಶದ ಪ್ರಧಾನಿಯಾಗುವ ಮೊದಲು ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ನರೇಂದ್ರ ಮೋದಿ ಅವರು 2001 ರಿಂದ 2014 ರವರೆಗೆ ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಅವರು ಪ್ರಸ್ತುತ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ
ನರೇಂದ್ರ ಮೋದಿಯವರು ಭಾರತೀಯ ಜನತಾ ಪಕ್ಷದ ಪ್ರಮುಖ ನಾಯಕರಾಗಿದ್ದಾರೆ. ಈ ಹಿಂದೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ (ಆರ್ಎಸ್ಎಸ್) ಕೆಲಸ ಮಾಡಿದ್ದರು. ಅವರು 17 ಸೆಪ್ಟೆಂಬರ್ 1950 ರಂದು ಗುಜರಾತ್ನ ವಾಡ್ನಗರದಲ್ಲಿ ಜನಿಸಿದರು.
2014ರ ಲೋಕಸಭೆಯಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಗೆದ್ದಿತ್ತು. ಇದಾದ ನಂತರ 2019ರಲ್ಲೂ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ ಮೋದಿ ಮತ್ತೊಮ್ಮೆ ಪ್ರಧಾನಿಯಾದರು. 2014ರಿಂದ ಬಿಜೆಪಿ ಹಲವು ರಾಜ್ಯಗಳಲ್ಲಿ ಮೋದಿ ಹೆಸರನ್ನೇ ಪ್ರಮುಖ ಅಸ್ತ್ರವಾಗಿಟ್ಟುಕೊಂಡು ಚುನಾವಣೆ ಗೆದ್ದಿದೆ.
ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಅಧಿಕಾರಾವಧಿಯಲ್ಲಿ ಹಲವು ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಇದು ದೇಶದ ಜನರಲ್ಲಿ ಅವರ ಜನಪ್ರಿಯತೆಯನ್ನು ಹೆಚ್ಚಿಸಿತು. ಈ ನಿರ್ಧಾರಗಳಲ್ಲಿ ಪಾಕಿಸ್ತಾನದಲ್ಲಿ ಸರ್ಜಿಕಲ್ ಸ್ಟ್ರೈಕ್ಗಳು, ನೋಟು ಅಮಾನ್ಯೀಕರಣ, ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಧಿಯನ್ನು ತೆಗೆದುಹಾಕುವುದು, ತ್ರಿವಳಿ ತಲಾಖ್ ಕಾನೂನು ಅನುಷ್ಠಾನ ಇತ್ಯಾದಿಗಳು ಸೇರಿವೆ.
ನೈಸ್ ಪ್ರಕರಣ- ರಿಟ್ ಅರ್ಜಿಯಲ್ಲಿ ನನ್ನನ್ನೂ ಪಾರ್ಟಿ ಮಾಡಿದ್ದಾರೆ: ದೇವೇಗೌಡ ಬೇಸರ
HD Deve Gowda blasts congress and state government: ಬೆಂಗಳೂರು-ಮೈಸೂರು ಇನ್ಫಾಸ್ಟ್ರಕ್ಚರ್ ಯೋಜನೆ ಸಂಬಂಧ ಸುಪ್ರೀಂಕೋರ್ಟ್ನಲ್ಲಿ ಸಲ್ಲಿಸಲಾಗಿರುವ ರಿಟ್ ಅರ್ಜಿಯಲ್ಲಿ ತಮ್ಮನ್ನೂ ಪಾರ್ಟಿ ಮಾಡಿರುವುದಕ್ಕೆ ದೇವೇಗೌಡ ಬೇಸರಿಸಿದ್ದಾರೆ. ಈ ಇಳಿವಯಸ್ಸಿನಲ್ಲಿ ತಾನು ವಕೀಲರನ್ನು ಇಟ್ಟುಕೊಂಡು ಕೋರ್ಟ್ನಲ್ಲಿ ಹೋರಾಡಬೇಕಾ ಎಂದು ಪ್ರಶ್ನಿಸಿದ್ದಾರೆ. ಯೋಜನೆಗೆ ಸಮ್ಮತಿ ಕೊಟ್ಟಾಗ ಸಿದ್ದರಾಮಯ್ಯ ಅವರು ಹಣಕಾಸು ಸಚಿವರಾಗಿದ್ದರು. ಈ ಯೋಜನೆ ಬಗ್ಗೆ ಅವರಿಗೆಲ್ಲಾ ಗೊತ್ತಿದೆ ಎಂದಿದ್ದಾರೆ.
- Vijaya Sarathy SN
- Updated on: Dec 24, 2025
- 6:15 pm
ಆ ನಿಮ್ಮ ದೇವರಿಗಿಂತ ಮೋದಿಯೇ ಉತ್ತಮ: ಮುಫ್ತಿ ಷಮಾಯಿಲ್ ನದ್ವಿಗೆ ಕುಟುಕಿದ ಜಾವೇದ್ ಅಖ್ತರ್
Javed Akhtar and Mufti Shamail Nadwi debate on existence of The God: ದೇವರಿದ್ದಿದ್ದೇ ಅದಲ್ಲಿ ಗಾಜಾದಲ್ಲಿ ಮಕ್ಕಳ ನರಮೇಧ ನಡೆಯುತ್ತಿರುವುದು ಕಣ್ಣಿಗೆ ಬೀಳುತ್ತಿರಲಿಲ್ಲವೇ ಎಂದು ಚಿತ್ರಸಾಹಿತಿ ಜಾವೇದ್ ಅಖ್ತರ್ ಹೇಳಿದ್ದಾರೆ. ಲಲ್ಲನ್ಟಾಪ್ನಲ್ಲಿ ದೇವರ ಅಸ್ತಿತ್ವ ಕುರಿತು ನಡೆದ ಸಂವಾದ ಕಾರ್ಯಕ್ರಮದಲ್ಲಿ ಇಸ್ಲಾಮೀ ಧರ್ಮಗುರು ಮುಫ್ತಿ ಷಮಾಯಿಲ್ ನದ್ವಿ ಜೊತೆ ವಾದ ಪ್ರತಿವಾದದಲ್ಲಿ ಅಖ್ತರ್ ಭಾಗಿಯಾಗಿದ್ದರು. ಆ ನಿಮ್ಮ ದೇವರಿಗಿಂತ ನಮ್ಮ ಪ್ರಧಾನಿಯೇ ವಾಸಿ. ಅವರು ರಕ್ಷಣೆ ಕೊಡುತ್ತಿದ್ದಾರೆ ಎಂದು ಅಖ್ತರ್ ಕುಟುಕಿದ್ದಾರೆ.
- Vijaya Sarathy SN
- Updated on: Dec 21, 2025
- 10:20 pm
ಅಸ್ಸಾಮ್ನಲ್ಲಿ ಡಬಲ್ ಎಂಜಿನ್ ಸರ್ಕಾರ ಇದ್ದರೂ ಎಲ್ಲಾ ಸಮಸ್ಯೆಗಳಿಗೆ ವಿಪಕ್ಷಗಳನ್ನೇ ಹೊಣೆ ಮಾಡುವುದೇಕೆ? ಖರ್ಗೆ ಪ್ರಶ್ನೆ
Mallikarjuna Kharge lashes out against PM Modi:ಅಸ್ಸಾಂ ಹಾಗೂ ಈಶಾನ್ಯ ಪ್ರದೇಶಗಳಲ್ಲಿ ನುಸುಳುಕೋರರನ್ನು ಒಳಗೆ ಬಿಟ್ಟು ಅಲ್ಲಿ ಅಭದ್ರತೆಯ ವಾತಾವರಣ ನಿರ್ಮಾಣವಾಗಲು ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಮೋದಿ ಮಾಡಿದ ಆರೋಪಕ್ಕೆ ಕಾಂಗ್ರೆಸ್ ತಿರುಗೇಟು ನೀಡಿದೆ. ಕೇಂದ್ರದಲ್ಲಿ ಹಾಗೂ ಅಸ್ಸಾಮ್ನಲ್ಲಿ ಬಿಜೆಪಿ ಸರ್ಕಾರ ಇದೆ. ಆದರೂ ಕೂಡ ಎಲ್ಲಾ ಸಮಸ್ಯೆಗಳಿಗೆ ಕಾಂಗ್ರೆಸ್ಸನೇ ಯಾಕೆ ದೂಷಿಸುತ್ತಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ ಮಾಡಿದ್ದಾರೆ.
- Vijaya Sarathy SN
- Updated on: Dec 21, 2025
- 8:47 pm
ನರೇಂದ್ರ ಮೋದಿ ಬಯೋಪಿಕ್ ‘ಮಾ ವಂದೇ’ ಶೂಟಿಂಗ್ ಶುರು; ರವಿ ಬಸ್ರೂರು ಸಂಗೀತ
ನರೇಂದ್ರ ಮೋದಿ ಅವರ ರಾಜಕೀಯ ಮತ್ತು ಖಾಸಗಿ ಬದುಕಿನ ಕುರಿತ ಬಯೋಪಿಕ್ ‘ಮಾ ವಂದೇ’ ಸಿದ್ಧವಾಗುತ್ತಿದೆ. ಮುಂಬೈನಲ್ಲಿ ಇತ್ತೀಚೆಗೆ ಈ ಸಿನಿಮಾಗೆ ಮುಹೂರ್ತ ನೆರವೇರಿಸಲಾಗಿದ್ದು, ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಉನ್ನಿ ಮುಕುಂದನ್ ಅವರು ಮೋದಿ ಪಾತ್ರವನ್ನು ಮಾಡುತ್ತಿದ್ದು, ಘಟಾನುಘಟಿ ತಂತ್ರಜ್ಞರು ಈ ಚಿತ್ರಕ್ಕೆ ಕೆಲಸ ಮಾಡುತ್ತಿದ್ದಾರೆ.
- Madan Kumar
- Updated on: Dec 21, 2025
- 11:30 am
ಬುಲ್ಡೋಜರ್ ಮೂಲಕ ನರೇಗಾ ನೆಲಸಮ; ಬಿಜೆಪಿ ಸರ್ಕಾರದ ವಿರುದ್ಧ ಸೋನಿಯಾ ಗಾಂಧಿ ಆಕ್ರೋಶ
ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಮಂಡಿಸಿದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಿಗೆ ರೋಜ್ಗಾರ್ ಮತ್ತು ಅಜೀವಿಕಾ ಮಿಷನ್ ಗ್ರಾಮೀಣ (VB-G RAM G) ಮಸೂದೆಯನ್ನು ಸಂಸತ್ತು ಅಂಗೀಕರಿಸಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೋದಿ ಸರ್ಕಾರವು ನರೇಗಾ ಮೇಲೆ ಬುಲ್ಡೋಜರ್ ನಡೆಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
- Sushma Chakre
- Updated on: Dec 20, 2025
- 7:52 pm
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್ನ ವಿಮಾನ ನಿಲ್ದಾಣ ಟರ್ಮಿನಲ್ ಉದ್ಘಾಟನೆ
ಸುಮಾರು 4,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಹೊಸದಾಗಿ ಉದ್ಘಾಟನೆಗೊಂಡ ಟರ್ಮಿನಲ್ ಭಾರತದ ಮೊದಲ ಪ್ರಕೃತಿ ಪ್ರೇರಿತ ವಿಮಾನ ನಿಲ್ದಾಣದ ಟರ್ಮಿನಲ್ ಆಗಿದೆ. ಅಸ್ಸಾಂ ಪ್ರದೇಶದ ನೈಸರ್ಗಿಕ ಭೂದೃಶ್ಯವನ್ನು ಪ್ರತಿಬಿಂಬಿಸುವಂತೆ ವಿನ್ಯಾಸಗೊಳಿಸಲಾದ ಈ ಟರ್ಮಿನಲ್ ಪ್ರಯಾಣಿಕರ ನಿರ್ವಹಣಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸುತ್ತದೆ ಮತ್ತು ಸಂಪರ್ಕವನ್ನು ಸುಧಾರಿಸುತ್ತದೆ. ಹಾಗೇ, ಅಸ್ಸಾಂ ಮತ್ತು ನೆರೆಯ ರಾಜ್ಯಗಳಲ್ಲಿ ಪ್ರವಾಸೋದ್ಯಮ, ವ್ಯಾಪಾರ ಮತ್ತು ಆರ್ಥಿಕ ಚಟುವಟಿಕೆಯನ್ನು ಹೆಚ್ಚಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.
- Sushma Chakre
- Updated on: Dec 20, 2025
- 5:08 pm
ಮಮತಾ ಬ್ಯಾನರ್ಜಿ ಸರ್ಕಾರ ನುಸುಳುಕೋರರನ್ನು ರಕ್ಷಿಸಲು ಎಸ್ಐಆರ್ ಅನ್ನು ವಿರೋಧಿಸುತ್ತಿದೆ; ಪ್ರಧಾನಿ ಮೋದಿ ಆರೋಪ
ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. 2026ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅವಕಾಶ ನೀಡುವಂತೆ ಅವರು ಬಂಗಾಳದ ಜನರಿಗೆ ಮನವಿ ಮಾಡಿದ್ದಾರೆ. ದಟ್ಟವಾದ ಮಂಜಿನಿಂದಾಗಿ ತಾಹೆರ್ಪುರ ರ್ಯಾಲಿಯ ಸ್ಥಳವನ್ನು ತಲುಪಲು ವಿಫಲವಾದ ಕಾರಣದಿಂದಾಗಿ ಪಶ್ಚಿಮ ಬಂಗಾಳದ ನಾಡಿಯಾದಲ್ಲಿ ವರ್ಚುವಲ್ ಆಗಿ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಾ ಪ್ರಧಾನಿ ಮೋದಿ ಈ ಹೇಳಿಕೆಗಳನ್ನು ನೀಡಿದ್ದಾರೆ. ಇಂದು ಮಧ್ಯಾಹ್ನ ಅವರು ರ್ಯಾಲಿಯ ಸ್ಥಳಕ್ಕೆ ತಲುಪಬೇಕಿತ್ತು. ಆದರೆ ಕೆಟ್ಟ ಹವಾಮಾನದಿಂದಾಗಿ ಅವರ ಹೆಲಿಕಾಪ್ಟರ್ ತಾಹೆರ್ಪುರ ಹೆಲಿಪ್ಯಾಡ್ ಮೇಲೆ ಸ್ವಲ್ಪ ಹೊತ್ತು ಹಾರಾಡುತ್ತಾ ಕೊಲ್ಕತ್ತಾ ವಿಮಾನ ನಿಲ್ದಾಣಕ್ಕೆ ಹಿಂತಿರುಗಬೇಕಾಯಿತು.
- Sushma Chakre
- Updated on: Dec 20, 2025
- 4:49 pm
Video: ವಿಶ್ವ ಆರೋಗ್ಯ ಸಂಸ್ಥೆಯ ಶೃಂಗಸಭೆಯಲ್ಲಿ ಅಶ್ವಗಂಧ ಅಂಚೆ ಚೀಟಿ ಬಿಡುಗಡೆ, ಸಾಂಪ್ರದಾಯಿಕ ಔಷಧಗಳ ಬಗ್ಗೆ ಪ್ರಧಾನಿ ಮೋದಿ ಮಾತು
ವಿಶ್ವ ಆರೋಗ್ಯ ಸಂಸ್ಥೆ ಶೃಂಗಸಭೆಯಲ್ಲಿ ಅಶ್ವಗಂಧದ ಅಂಚೆ ಚೀಟಿ ಬಿಡುಗಡೆಯಾಗಿದೆ. ಪ್ರಧಾನಿ ಮೋದಿ ಸಾಂಪ್ರದಾಯಿಕ ಔಷಧವು ವಿಜ್ಞಾನದ ಮೂಲಕ ಸಾರ್ವಜನಿಕ ವಿಶ್ವಾಸ ಗಳಿಸಬೇಕೆಂದರು. ಶತಮಾನಗಳಿಂದ ಬಳಕೆಯಲ್ಲಿರುವ ಅಶ್ವಗಂಧವು COVID-19 ಸಮಯದಲ್ಲಿ ಜಾಗತಿಕ ಬೇಡಿಕೆ ಪಡೆಯಿತು. ಇದು ಹೊಟ್ಟೆ ಸಮಸ್ಯೆಗಳು, ಸಂಧಿವಾತ ನೋವು, ಮೂಳೆ ಬಲಪಡಿಸಲು, ಕಣ್ಣು ಹಾಗೂ ಗಂಟಲು ಸಮಸ್ಯೆಗಳಿಗೆ ಮತ್ತು ಕ್ಷಯರೋಗಕ್ಕೆ ಪ್ರಯೋಜನಕಾರಿಯಾಗಿದೆ.
- Nayana Rajeev
- Updated on: Dec 20, 2025
- 12:14 pm
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಈಶಾನ್ಯ ರಾಜ್ಯಗಳ ಅತಿದೊಡ್ಡ ವಿಮಾನ ನಿಲ್ದಾಣ
ಗುವಾಹಟಿಯಲ್ಲಿ ನಾಳೆ ಈಶಾನ್ಯ ರಾಜ್ಯದ ಅತಿ ದೊಡ್ಡ ಹಾಗೂ ನೈಸರ್ಗಿಕ ಥೀಮ್ನ ವಿಮಾನ ನಿಲ್ದಾಣದ ಟರ್ಮಿನಲ್ ಉದ್ಘಾಟನೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಈ ಟರ್ಮಿನಲ್ ಅನ್ನು ಉದ್ಘಾಟಿಸಲಿದ್ದಾರೆ. ಇದು ಅಸ್ತಿತ್ವದಲ್ಲಿರುವ ಟರ್ಮಿನಲ್ಗಿಂತ 7 ಪಟ್ಟು ದೊಡ್ಡದಾಗಿದೆ. "ನಾನು ನಾಳೆ ಅಸ್ಸಾಂನ ಗುವಾಹಟಿಯನ್ನು ತಲುಪುತ್ತೇನೆ. ಅಲ್ಲಿ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಲಾಗುವುದು.
- Sushma Chakre
- Updated on: Dec 19, 2025
- 8:11 pm
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಪಕ್ಷಗಳ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ತಿನ ಚಳಿಗಾಲದ ಅಧಿವೇಶನದ ಮುಕ್ತಾಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಸಂಸತ್ತಿನ ಭವನದ ತಮ್ಮ ಕೊಠಡಿಯಲ್ಲಿ ಲೋಕಸಭೆಯ ಪಕ್ಷಗಳ ನಾಯಕರು ಮತ್ತು ಸಂಸತ್ ಸದಸ್ಯರೊಂದಿಗೆ ಸಭೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ, ಪ್ರಿಯಾಂಕಾ ಗಾಂಧಿ, ರಾಜನಾಥ್ ಸಿಂಗ್ ಸೇರಿದಂತೆ ಎಲ್ಲ ನಾಯಕರು ಹಾಗೂ ಸಂಸದರು ಈ ಸಭೆಯಲ್ಲಿ ಹಾಜರಿದ್ದರು.
- Sushma Chakre
- Updated on: Dec 19, 2025
- 4:31 pm
ಎಕ್ಸ್ನಲ್ಲಿ ಮೋದಿಗೆ ಇಲ್ಲ ಸರಿಸಾಟಿ; ಒಂದು ತಿಂಗಳ ಅತಿ ಮೆಚ್ಚಿನ 10 ಟ್ವೀಟ್ಗಳಲ್ಲಿ ಮೋದಿಯದ್ದೇ 8
Narendra Modi's 8 posts among the top-10 most liked tweets in last month: ಟ್ವಿಟ್ಟರ್ನಲ್ಲಿ (ಎಕ್ಸ್) ಕಳೆದ ಒಂದು ತಿಂಗಳಲ್ಲಿ ಅತಿಹೆಚ್ಚು ಲೈಕ್ ಪಡೆದ ಭಾರತೀಯರ ಟಾಪ್-10 ಪಟ್ಟಿಯಲ್ಲಿ ಎಂಟು ಪ್ರಧಾನಿ ನರೇಂದ್ರ ಮೋದಿ ಅವರದ್ದೇ ಇದೆ. ಈ ಟಾಪ್-10ನಲ್ಲಿ ಬೇರೆ ಭಾರತೀಯ ರಾಜಕಾರಣಿಯ ಒಂದೂ ಪೋಸ್ಟ್ ಇಲ್ಲ. ರಷ್ಯಾ ಪ್ರಧಾನಿ ಪುಟಿನ್, ಅಂಧರ ತಂಡದ ವಿಶ್ವಕಪ್ ವಿಕ್ರಮ ಇತ್ಯಾದಿ ಕುರಿತ ಮೋದಿ ಅವರ ಪೋಸ್ಟ್ಗಳಿಗೆ ಅತಿಹೆಚ್ಚು ಲೈಕ್ ಬಂದಿದೆ.
- Vijaya Sarathy SN
- Updated on: Dec 19, 2025
- 1:55 pm
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್ನಲ್ಲಿ ಆತ್ಮೀಯ ವಿದಾಯ
ಓಮನ್ ಸುಲ್ತಾನ್ ಹೈತಮ್ ಬಿನ್ ತಾರಿಕ್ ಅವರ ಸಹೋದರ ಮತ್ತು ಸುಲ್ತಾನರ ರಕ್ಷಣಾ ವ್ಯವಹಾರಗಳ ಉಪ ಪ್ರಧಾನ ಮಂತ್ರಿ ಸಯ್ಯದ್ ಶಿಹಾಬ್ ಬಿನ್ ತಾರಿಕ್ ಅಲ್ ಸೈದ್ ಅವರು ವಿಮಾನ ನಿಲ್ದಾಣದಲ್ಲಿ ಪ್ರಧಾನಿ ಮೋದಿ ಅವರಿಗೆ ವಿದಾಯ ಹೇಳಿದರು. ಎರಡೂ ದೇಶಗಳ ನಡುವಿನ ಐತಿಹಾಸಿಕ ಸಂಬಂಧ ಮತ್ತು ಅವರ ಆತ್ಮೀಯ ಸೌಹಾರ್ದತೆಯನ್ನು ಎತ್ತಿ ತೋರಿಸುತ್ತಾ, ಇಬ್ಬರೂ ನಾಯಕರು ಕೈಕುಲುಕಿ ಪರಸ್ಪರ ಅಪ್ಪಿಕೊಂಡರು. ಓಮನ್ ಉಪ ಪ್ರಧಾನಿ ಕೂಡ ಪ್ರಧಾನಿ ಮೋದಿ ಅವರಿಗೆ ವಿದಾಯ ಹೇಳುವಾಗ ಸಾಂಪ್ರದಾಯಿಕ ಭಾರತೀಯ ಶೈಲಿಯಲ್ಲಿ ಕೈ ಮುಗಿದು ನಮಸ್ಕರಿಸಿ ಬೀಳ್ಕೊಟ್ಟಿದ್ದು ವಿಶೇಷವಾಗಿತ್ತು.
- Sushma Chakre
- Updated on: Dec 18, 2025
- 7:49 pm