
Narendra Modi
ನರೇಂದ್ರ ಮೋದಿ ಅವರು ಪ್ರಸ್ತುತ ಭಾರತದ ಪ್ರಧಾನಿಯಾಗಿದ್ದಾರೆ. ಮೇ 2014 ರಲ್ಲಿ ಅವರು ಮೊದಲ ಬಾರಿಗೆ ದೇಶದ ಪ್ರಧಾನಿಯಾದರು. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಗೆದ್ದ ನಂತರ ಮೋದಿ ಅವರು ಸತತ ಎರಡನೇ ಬಾರಿಗೆ ದೇಶದ ಪ್ರಧಾನಿಯಾದರು. ಮೋದಿ ದೇಶದ ಪ್ರಧಾನಿಯಾಗುವ ಮೊದಲು ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ನರೇಂದ್ರ ಮೋದಿ ಅವರು 2001 ರಿಂದ 2014 ರವರೆಗೆ ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಅವರು ಪ್ರಸ್ತುತ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ
ನರೇಂದ್ರ ಮೋದಿಯವರು ಭಾರತೀಯ ಜನತಾ ಪಕ್ಷದ ಪ್ರಮುಖ ನಾಯಕರಾಗಿದ್ದಾರೆ. ಈ ಹಿಂದೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ (ಆರ್ಎಸ್ಎಸ್) ಕೆಲಸ ಮಾಡಿದ್ದರು. ಅವರು 17 ಸೆಪ್ಟೆಂಬರ್ 1950 ರಂದು ಗುಜರಾತ್ನ ವಾಡ್ನಗರದಲ್ಲಿ ಜನಿಸಿದರು.
2014ರ ಲೋಕಸಭೆಯಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಗೆದ್ದಿತ್ತು. ಇದಾದ ನಂತರ 2019ರಲ್ಲೂ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ ಮೋದಿ ಮತ್ತೊಮ್ಮೆ ಪ್ರಧಾನಿಯಾದರು. 2014ರಿಂದ ಬಿಜೆಪಿ ಹಲವು ರಾಜ್ಯಗಳಲ್ಲಿ ಮೋದಿ ಹೆಸರನ್ನೇ ಪ್ರಮುಖ ಅಸ್ತ್ರವಾಗಿಟ್ಟುಕೊಂಡು ಚುನಾವಣೆ ಗೆದ್ದಿದೆ.
ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಅಧಿಕಾರಾವಧಿಯಲ್ಲಿ ಹಲವು ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಇದು ದೇಶದ ಜನರಲ್ಲಿ ಅವರ ಜನಪ್ರಿಯತೆಯನ್ನು ಹೆಚ್ಚಿಸಿತು. ಈ ನಿರ್ಧಾರಗಳಲ್ಲಿ ಪಾಕಿಸ್ತಾನದಲ್ಲಿ ಸರ್ಜಿಕಲ್ ಸ್ಟ್ರೈಕ್ಗಳು, ನೋಟು ಅಮಾನ್ಯೀಕರಣ, ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಧಿಯನ್ನು ತೆಗೆದುಹಾಕುವುದು, ತ್ರಿವಳಿ ತಲಾಖ್ ಕಾನೂನು ಅನುಷ್ಠಾನ ಇತ್ಯಾದಿಗಳು ಸೇರಿವೆ.
ಈ ವರ್ಷ ಭಾರತಕ್ಕೆ ಭೇಟಿ ನೀಡುತ್ತೇನೆ; ಮೋದಿ ಜೊತೆ ಮಾತುಕತೆ ಬಳಿಕ ಎಲಾನ್ ಮಸ್ಕ್ ಮಾಹಿತಿ
ಬಿಲಿಯನೇರ್ ಉದ್ಯಮಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತರಾದ ಎಲಾನ್ ಮಸ್ಕ್ ಈ ವರ್ಷದ ಅಂತ್ಯದೊಳಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಜೊತೆ ಚರ್ಚೆ ನಡೆಸಿದ ನಂತರ ಎಲಾನ್ ಮಸ್ಕ್ ಎಕ್ಸ್ ಪೋಸ್ಟ್ನಲ್ಲಿ ಈ ಬಗ್ಗೆ ದೃಢಪಡಿಸಿದ್ದಾರೆ. "ಪ್ರಧಾನಿ ಮೋದಿ ಜೊತೆ ಮಾತನಾಡಿದ್ದು ಗೌರವದ ಸಂಗತಿ. ಈ ವರ್ಷ ನಾನು ಭಾರತಕ್ಕೆ ಭೇಟಿ ನೀಡುತ್ತೇನೆ" ಎಂದು ಎಲಾನ್ ಮಸ್ಕ್ ಹೇಳಿದ್ದಾರೆ.
- Sushma Chakre
- Updated on: Apr 19, 2025
- 4:32 pm
ಏಪ್ರಿಲ್ 22ರಂದು ಸೌದಿ ಅರೇಬಿಯಾಕ್ಕೆ ಪ್ರಧಾನಿ ಮೋದಿ ಭೇಟಿ
ಸೌದಿ ಅರೇಬಿಯಾ ಸಾಮ್ರಾಜ್ಯದ ರಾಜ ಮತ್ತು ಪ್ರಧಾನ ಮಂತ್ರಿ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 22-23ರಂದು ಸೌದಿ ಅರೇಬಿಯಾಕ್ಕೆ ಭೇಟಿ ನೀಡಲಿದ್ದಾರೆ. ಭಾರತ ಮತ್ತು ಸೌದಿ ಅರೇಬಿಯಾದ ಸ್ನೇಹವನ್ನು ಬಲಪಡಿಸುವ ಮತ್ತು ವ್ಯಾಪಾರ, ರಕ್ಷಣೆ, ಹೂಡಿಕೆ, ಇಂಧನ ಕ್ಷೇತ್ರಗಳಲ್ಲಿ ಸಂಬಂಧಗಳನ್ನು ಗಾಢವಾಗಿಸುವ ಗುರಿಯನ್ನು ಈ ಭೇಟಿ ಹೊಂದಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
- Sushma Chakre
- Updated on: Apr 19, 2025
- 3:46 pm
ಇಲಾನ್ ಮಸ್ಕ್ ಮತ್ತು ನರೇಂದ್ರ ಮೋದಿ ಫೋನ್ ಕರೆ; ತಂತ್ರಜ್ಞಾನ ಕ್ಷೇತ್ರದಲ್ಲಿ ಎರಡೂ ದೇಶಗಳ ಸಹಭಾಗಿತ್ವ ಹೆಚ್ಚಿಸಲು ಮಾತುಕತೆ
Narendra Modi speaks with Elon Musk: ಇಲಾನ್ ಮಸ್ಕ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಏಪ್ರಿಲ್ 18, ಶುಕ್ರವಾರದಂದು ದೂರವಾಣಿಯಲ್ಲೇ ಮಾತುಕತೆ ನಡೆಸಿದ್ದಾರೆ. ತಂತ್ರಜ್ಞಾನ ಮತ್ತು ಇನ್ನೋವೇಶನ್ ವಿಚಾರದಲ್ಲಿ ಭಾರತ ಮತ್ತು ಅಮೆರಿಕ ನಡುವೆ ಸಹಭಾಗಿತ್ವ ಸಾಧಿಸುವ ಕುರಿತು ಚರ್ಚೆ ನಡೆದಿದೆ. ಇಲಾನ್ ಮಸ್ಕ್ ಅವರ ಟೆಸ್ಲಾ ಸಂಸ್ಥೆಯ ಇವಿ ಕಾರುಗಳು ಭಾರತದ ಮಾರುಕಟ್ಟೆಗೆ ಬರುತ್ತಿರುವ ಹೊತ್ತಿನಲ್ಲಿ ಈ ಮಾತುಕತೆ ನಡೆದಿದೆ.
- Vijaya Sarathy SN
- Updated on: Apr 18, 2025
- 3:02 pm
ವಕ್ಫ್ ತಿದ್ದುಪಡಿ ಕಾಯ್ದೆಗೆ ಧನ್ಯವಾದ ಸಲ್ಲಿಸಲು ಪ್ರಧಾನಿ ಮೋದಿಯನ್ನು ಭೇಟಿಯಾದ ಮುಸ್ಲಿಮರ ನಿಯೋಗ
ವಕ್ಫ್ ತಿದ್ದುಪಡಿ ಕಾಯ್ದೆಗೆ ಕೃತಜ್ಞತೆ ಸಲ್ಲಿಸಲು ದಾವೂದಿ ಬೊಹ್ರಾ ಸಮುದಾಯದ ನಿಯೋಗವು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದೆ. ಈ ಸಭೆಯ ಸಂದರ್ಭದಲ್ಲಿ ಮೋದಿಗೆ ಧನ್ಯವಾದ ತಿಳಿಸಿದ ಬೊಹ್ರಾ ಸಮುದಾಯದ ಸದಸ್ಯರು ಇದು ಬಹಳ ದಿನಗಳಿಂದ ಬಾಕಿ ಉಳಿದಿದ್ದ ಬೇಡಿಕೆಯಾಗಿದೆ. ಇದನ್ನು ಈಗ ಈಡೇರಿಸಲಾಗಿದೆ ಎಂದು ಹೇಳಿದ್ದಾರೆ."ಪ್ರಧಾನ ಮಂತ್ರಿಯವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ವಿಶ್ವಾಸ್ ಎಂಬ ದೃಷ್ಟಿಕೋನದಲ್ಲಿ ದಾವೂದಿ ಬೊಹ್ರಾ ಸಮುದಾಯವು ನಂಬಿಕೆ ಇಟ್ಟಿದೆ" ಎಂದು ಅವರು ಹೇಳಿದ್ದಾರೆ.
- Sushma Chakre
- Updated on: Apr 17, 2025
- 7:29 pm
ಮುಂದಿನ ವಾರ ಭಾರತಕ್ಕೆ ಅಮೆರಿಕ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಭೇಟಿ
ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಮುಂದಿನ ವಾರ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಈ ವೇಳೆ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲಿದ್ದಾರೆ. ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಅವರು ತಮ್ಮ ಪತ್ನಿ, ಅಮೆರಿಕದ ಎರಡನೇ ಮಹಿಳೆ ಉಷಾ ವ್ಯಾನ್ಸ್ ಅವರೊಂದಿಗೆ ಇಟಲಿ ಮತ್ತು ಭಾರತಕ್ಕೆ ಭೇಟಿ ನೀಡುವುದಾಗಿ ಘೋಷಿಸಿದ್ದಾರೆ. ಈ ಬಗ್ಗೆ ಶ್ವೇತಭವನ ದೃಢಪಡಿಸಿದೆ.
- Sushma Chakre
- Updated on: Apr 16, 2025
- 9:38 pm
Narendra Modi: ಪ್ರಧಾನಿ ಮೋದಿ ಜಮ್ಮು ಭೇಟಿ ಮುಂದೂಡಿಕೆ
ಏಪ್ರಿಲ್ 19 ರಂದು ನಡೆಯಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಜಮ್ಮು ಮತ್ತು ಕಾಶ್ಮೀರ ಭೇಟಿಯನ್ನು ಸದ್ಯಕ್ಕೆ ಮುಂದೂಡಲಾಗಿದೆ. ಮೂಲಗಳು ಈ ಮಾಹಿತಿಯನ್ನು ನೀಡಿವೆ. ಈ ಭೇಟಿಯ ಸಮಯದಲ್ಲಿ, ಪ್ರಧಾನಿ ಮೋದಿ ಅವರು ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯನ್ನು ಉದ್ಘಾಟಿಸಬೇಕಿತ್ತು ಮತ್ತು ಕತ್ರಾದಿಂದ ಶ್ರೀನಗರಕ್ಕೆ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸಬೇಕಿತ್ತು. ಪ್ರಧಾನಿ ಭೇಟಿಯ ಬಗ್ಗೆ ಮಾಹಿತಿ ನೀಡುತ್ತಾ ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್, ಏಪ್ರಿಲ್ 19 ರಂದು ಉಧಂಪುರದಲ್ಲಿ ಚೆನಾಬ್ ನದಿಗೆ ನಿರ್ಮಿಸಲಾದ ಐತಿಹಾಸಿಕ ರೈಲ್ವೆ ಸೇತುವೆಯನ್ನು ಪ್ರಧಾನಿ ಮೋದಿ ಪರಿಶೀಲಿಸಲಿದ್ದಾರೆ ಮತ್ತು ಉದ್ಘಾಟಿಸಲಿದ್ದಾರೆ ಎಂದು ಹೇಳಿದ್ದರು.
- Nayana Rajeev
- Updated on: Apr 16, 2025
- 8:07 am
ಕಳೆದ 20 ತಿಂಗಳಲ್ಲಿ ಸಿದ್ದರಾಮಯ್ಯ ಡೀಸೆಲ್ ಬೆಲೆ ₹ 5.50 ಮತ್ತು ಪೆಟ್ರೋಲ್ ಬೆಲೆ ₹ 3 ಹೆಚ್ಚಿಸಿದ್ದಾರೆ: ವಿಜಯೇಂದ್ರ
ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ನಡೆ ಕೃಷ್ಣಾದೆಡೆ ಎಂದು ಹೇಳಿತ್ತು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳಿಗೆ ಪ್ರತಿವರ್ಷ ₹10,000 ಕೋಟಿ ಮೀಸಲಿಡುವುದಾಗಿ ಹೇಳಿದ್ದರು, ಹಾಗೆ ಮಾಡಿದ್ದಾರಾ? ಉತ್ತರ ಕರ್ನಾಟಕದ ಅಭಿವೃದ್ಧಿ ಕೆಲಸ ಅಕ್ಷರಶಃ ನಿಂತುಹೋಗಿವೆ, ತಮ್ಮ ಕೆಲಸಗಳ ಬಗ್ಗೆ ಸಿದ್ದರಾಮಯ್ಯ ಮಾತಾಡಲಿ ಎಂದು ವಿಜಯೇಂದ್ರ ಹೇಳಿದರು.
- Arun Belly
- Updated on: Apr 15, 2025
- 3:13 pm
ನಿಮ್ಮ ಪಕ್ಷದ ಮುಖ್ಯಸ್ಥರನ್ನಾಗಿ ಮುಸ್ಲಿಂ ನಾಯಕರನ್ನು ನೇಮಿಸಿ; ವಕ್ಫ್ ಕಾಯ್ದೆ ಬಗ್ಗೆ ಕಾಂಗ್ರೆಸ್ಗೆ ಪ್ರಧಾನಿ ಮೋದಿ ಸವಾಲು
ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ನಿಂದ ಮುಸ್ಲಿಮರಿಗೆ ಶೇ. 50ರಷ್ಟು ಚುನಾವಣಾ ಟಿಕೆಟ್ಗಳನ್ನು ನೀಡುವಂತೆ ಚಾಲೆಂಜ್ ಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಇಂದು ಕಾಂಗ್ರೆಸ್ ಅನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಇದು ಓಲೈಕೆ ರಾಜಕೀಯ ಎಂದು ಆರೋಪಿಸಿದ್ದಾರೆ. ಹಾಗೇ, ಕಾಂಗ್ರೆಸ್ ಪಕ್ಷವು ಮುಸ್ಲಿಂ ನಾಯಕನನ್ನು ಅಧ್ಯಕ್ಷರನ್ನಾಗಿ ನೇಮಿಸುವಂತೆ ಸವಾಲು ಹಾಕಿತು. ತಿದ್ದುಪಡಿ ಮಾಡಿದ ವಕ್ಫ್ ಕಾಯ್ದೆಯನ್ನು ವಿರೋಧಿಸಿದ್ದಕ್ಕಾಗಿ ಮೋದಿ ಕಾಂಗ್ರೆಸ್ ಪಕ್ಷವನ್ನು ಟೀಕಿಸಿದ್ದಾರೆ. ಕಾಂಗ್ರೆಸ್ ಯಾವಾಗಲೂ ಮುಸ್ಲಿಂ ಮೂಲಭೂತವಾದಿಗಳನ್ನು ಓಲೈಸಿದೆ ಮತ್ತು ಹೊಸ ಕಾನೂನಿನ ವಿರುದ್ಧದ ಅವರ ಪ್ರತಿಭಟನೆಯು ಅದನ್ನೇ ಸಾಬೀತುಪಡಿಸುತ್ತದೆ ಎಂದು ಹೇಳಿದ್ದಾರೆ.
- Sushma Chakre
- Updated on: Apr 14, 2025
- 10:20 pm
ಮೋದಿ ಪ್ರಧಾನಿಯಾಗುವವರೆಗೂ ಚಪ್ಪಲಿ ಧರಿಸಲ್ಲ ಎಂದಿದ್ದ ರಾಮಪಾಲ್ಗೆ ಶೂ ಕೊಟ್ಟ ಪಿಎಂ
ಹರಿಯಾಣದಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗುವವರೆಗೂ ನಾನು ಶೂ ಧರಿಸುವುದಿಲ್ಲ ಎಂದು 14 ವರ್ಷಗಳ ಹಿಂದೆ ಪ್ರತಿಜ್ಞೆ ಮಾಡಿದ್ದ ಕೈತಾಲ್ನ ರಾಮ್ಪಾಲ್ ಕಶ್ಯಪ್ ಅವರನ್ನು ಭೇಟಿಯಾದರು. ಈ ವೇಳೆ ಮೋದಿಯೇ ರಾಮಪಾಲ್ ಅವರಿಗೆ ಶೂಗಳನ್ನು ಧರಿಸುವಂತೆ ಮಾಡಿದರು. ಪ್ರಧಾನಿ ಇಂದು ಯಮುನಾ ನಗರವನ್ನು ತಲುಪಿದರು, ಅಲ್ಲಿ ಅವರು ರಾಂಪಾಲ್ ಕಶ್ಯಪ್ ಎಂಬ ವ್ಯಕ್ತಿಗೆ ಪಾದರಕ್ಷೆಗಳನ್ನು ನೀಡುವ ಮೂಲಕ ಸನ್ಮಾನಿಸಿದರು.
- Sushma Chakre
- Updated on: Apr 14, 2025
- 7:07 pm
ಪಾಟ್ನಾದಲ್ಲಿ ಪ್ರಧಾನಿ ಮೋದಿಯಿಂದ ಖೇಲೋ ಇಂಡಿಯಾ ಯೂತ್ ಗೇಮ್ಸ್ 2025 ಉದ್ಘಾಟನೆ; ಸಿಎಂ ನಿತೀಶ್ ಕುಮಾರ್
ಬಿಹಾರದಲ್ಲಿ ಖೇಲೋ ಇಂಡಿಯಾ ಯೂತ್ ಗೇಮ್ಸ್ ಅನ್ನು ಆರಂಭಿಸಲಾಗುವುದು. ನಮ್ಮ ದೇಶದಲ್ಲಿ ಆಡುವ ಎಲ್ಲಾ ಕ್ರೀಡೆಗಳಿಗೆ ಬಲವಾದ ಚೌಕಟ್ಟನ್ನು ನಿರ್ಮಿಸುವ ಮೂಲಕ ಭಾರತದಲ್ಲಿ ಕ್ರೀಡಾ ಸಂಸ್ಕೃತಿಯನ್ನು ತಳಮಟ್ಟದಿಂದ ಪುನರುಜ್ಜೀವನಗೊಳಿಸಲು ಮತ್ತು ಭಾರತವನ್ನು ಶ್ರೇಷ್ಠ ಕ್ರೀಡಾ ರಾಷ್ಟ್ರವಾಗಿ ಸ್ಥಾಪಿಸಲು ಖೇಲೋ ಇಂಡಿಯಾ ಕಾರ್ಯಕ್ರಮವನ್ನು ಪರಿಚಯಿಸಲಾಗಿದೆ. ದೇಶದ ಕ್ರೀಡಾ ಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಉದ್ದೇಶದಿಂದ ಭಾರತ ಸರ್ಕಾರವು 2017ರಲ್ಲಿ ಖೇಲೋ ಇಂಡಿಯಾವನ್ನು ಪ್ರಾರಂಭಿಸಿತು.
- Sushma Chakre
- Updated on: Apr 14, 2025
- 5:01 pm