AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi

Narendra Modi

ನರೇಂದ್ರ ಮೋದಿ ಅವರು ಪ್ರಸ್ತುತ ಭಾರತದ ಪ್ರಧಾನಿಯಾಗಿದ್ದಾರೆ. ಮೇ 2014 ರಲ್ಲಿ ಅವರು ಮೊದಲ ಬಾರಿಗೆ ದೇಶದ ಪ್ರಧಾನಿಯಾದರು. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಗೆದ್ದ ನಂತರ ಮೋದಿ ಅವರು ಸತತ ಎರಡನೇ ಬಾರಿಗೆ ದೇಶದ ಪ್ರಧಾನಿಯಾದರು. ಮೋದಿ ದೇಶದ ಪ್ರಧಾನಿಯಾಗುವ ಮೊದಲು ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ನರೇಂದ್ರ ಮೋದಿ ಅವರು 2001 ರಿಂದ 2014 ರವರೆಗೆ ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಅವರು ಪ್ರಸ್ತುತ ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ

ನರೇಂದ್ರ ಮೋದಿಯವರು ಭಾರತೀಯ ಜನತಾ ಪಕ್ಷದ ಪ್ರಮುಖ ನಾಯಕರಾಗಿದ್ದಾರೆ. ಈ ಹಿಂದೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ (ಆರ್‌ಎಸ್‌ಎಸ್) ಕೆಲಸ ಮಾಡಿದ್ದರು. ಅವರು 17 ಸೆಪ್ಟೆಂಬರ್ 1950 ರಂದು ಗುಜರಾತ್ನ ವಾಡ್ನಗರದಲ್ಲಿ ಜನಿಸಿದರು.

2014ರ ಲೋಕಸಭೆಯಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಗೆದ್ದಿತ್ತು. ಇದಾದ ನಂತರ 2019ರಲ್ಲೂ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ ಮೋದಿ ಮತ್ತೊಮ್ಮೆ ಪ್ರಧಾನಿಯಾದರು. 2014ರಿಂದ ಬಿಜೆಪಿ ಹಲವು ರಾಜ್ಯಗಳಲ್ಲಿ ಮೋದಿ ಹೆಸರನ್ನೇ ಪ್ರಮುಖ ಅಸ್ತ್ರವಾಗಿಟ್ಟುಕೊಂಡು ಚುನಾವಣೆ ಗೆದ್ದಿದೆ.

ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಅಧಿಕಾರಾವಧಿಯಲ್ಲಿ ಹಲವು ದಿಟ್ಟ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ. ಇದು ದೇಶದ ಜನರಲ್ಲಿ ಅವರ ಜನಪ್ರಿಯತೆಯನ್ನು ಹೆಚ್ಚಿಸಿತು. ಈ ನಿರ್ಧಾರಗಳಲ್ಲಿ ಪಾಕಿಸ್ತಾನದಲ್ಲಿ ಸರ್ಜಿಕಲ್ ಸ್ಟ್ರೈಕ್‌ಗಳು, ನೋಟು ಅಮಾನ್ಯೀಕರಣ, ಜಮ್ಮು ಮತ್ತು ಕಾಶ್ಮೀರದಿಂದ 370 ನೇ ವಿಧಿಯನ್ನು ತೆಗೆದುಹಾಕುವುದು, ತ್ರಿವಳಿ ತಲಾಖ್ ಕಾನೂನು ಅನುಷ್ಠಾನ ಇತ್ಯಾದಿಗಳು ಸೇರಿವೆ.

ಇನ್ನೂ ಹೆಚ್ಚು ಓದಿ

Video: ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಪ್ರಧಾನಿ ಮೋದಿ ಹಾಗೂ ಪುಟಿನ್, ಕಾರಿನ ವೈಶಿಷ್ಟ್ಯವೇನು?

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಆಗಮಿಸಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರು ಪುಟಿನ್ ಅವರನ್ನು ಸ್ವಾಗತಿಸಲು ಆಗಲೇ ವಿಮಾನ ನಿಲ್ದಾಣದಲ್ಲಿ ಹಾಜರಿದ್ದರು.ವಿಮಾನದಿಂದ ಇಳಿದ ನಂತರ, ಇಬ್ಬರು ರಾಷ್ಟ್ರಗಳ ಮುಖ್ಯಸ್ಥರು ಪರಸ್ಪರ ಅಪ್ಪಿಕೊಂಡು ಆತ್ಮೀಯವಾಗಿ ಸ್ವಾಗತಿಸಿದರು. ನಂತರ, ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಪುಟಿನ್ ಒಂದೇ ಕಾರಿನಲ್ಲಿ ಒಟ್ಟಿಗೆ ಹೊರಟರು. ಆಗಸ್ಟ್‌ನಲ್ಲಿ ಚೀನಾದಲ್ಲಿ ನಡೆದ ಎಸ್​ಸಿಒ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ವ್ಲಾಡಿಮಿರ್ ಪುಟಿನ್ ಒಂದೇ ಕಾರಿನಲ್ಲಿ ಪ್ರಯಾಣಿಸಿದ್ದರು.

India Russia Friendship Astrology: ಜಗತ್ತಿನ ದಿಕ್ಕು ಬದಲಿಸಲು ತಕ್ಕಡಿ ಹಿಡಿದು ನಿಂತ ಶನೈಶ್ಚರ

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಸ್ವಾಗತ ಕೋರಲು ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಶಿಷ್ಟಾಚಾರವನ್ನು ಬದಿಗೆ ಸರಿಸಿ, ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೇ ತೆರಳಿದ್ದಾರೆ. ಈ ರೀತಿಯ ನಡವಳಿಕೆ ಹಲವು ಸಂದೇಶಗಳನ್ನು ರವಾನಿಸುತ್ತದೆ. ದೇಶಕ್ಕೆ ಭೇಟಿ ನೀಡುತ್ತಿರುವ ನಾಯಕನ ಬಗ್ಗೆ ಮೋದಿ ಅವರಿಗೆ ಇರುವ ಸ್ನೇಹ, ಸೌಹಾರ್ದಯುತ ಸಂಬಂಧ, ದೂರಗಾಮಿ ಪರಸ್ಪರ ಸಹಕಾರ ಹೀಗೆ ನೂರು ಅರ್ಥಗಳನ್ನು ಧ್ವನಿಸುತ್ತವೆ. ಆ ಎಲ್ಲವನ್ನೂ ಜ್ಯೋತಿಷ್ಯದ ಗ್ರಹಗತಿಗಳು ಸಹ ಸೂಚಿಸುತ್ತಿವೆಯಾ ಎಂಬುದನ್ನು ಕರ್ನಾಟಕದ ಖ್ಯಾತ ಜ್ಯೋತಿಷಿಗಳಾದ ಉಡುಪಿಯ ಕಾಪು ಮೂಲದ ಪ್ರಕಾಶ್ ಅಮ್ಮಣ್ಣಾಯ ಅವರು ವಿಶ್ಲೇಷಣೆ ಮಾಡಿರುವ ಲೇಖನ ಇಲ್ಲಿದೆ.

ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತಮ್ಮ ಎರಡು ದಿನಗಳ ರಾಜ್ಯ ಭೇಟಿಗಾಗಿ ಭಾರತದಲ್ಲಿದ್ದಾರೆ. ರಷ್ಯಾದ ನಿಯೋಗವು ವ್ಯಾಪಾರ, ಆರ್ಥಿಕತೆ, ವಿಜ್ಞಾನ, ತಂತ್ರಜ್ಞಾನ ಮತ್ತು ಸಂಸ್ಕೃತಿಯಂತಹ ಕ್ಷೇತ್ರಗಳಲ್ಲಿ ಸಹಕಾರದ ಕುರಿತು ಚರ್ಚೆ ನಡೆಸಲಿದೆ. ಪುಟಿನ್ 23 ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಡಿಸೆಂಬರ್ 5 ರಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ 23ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಪುಟಿನ್ ಭಾಗವಹಿಸಲಿದ್ದಾರೆ.

ಪ್ರೋಟೋಕಾಲ್ ಬದಿಗೊತ್ತಿ ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಪ್ರಧಾನಿ ಮೋದಿ

ಇಂದು ಸಂಜೆ ನವದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಸ್ವಾಗತಿಸಲು ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ. ಪುಟಿನ್ ಎರಡು ದಿನಗಳ ಭೇಟಿಯಲ್ಲಿದ್ದು, ಪ್ರಧಾನಿ ಮೋದಿ ಅವರೊಂದಿಗೆ 23ನೇ ಭಾರತ-ರಷ್ಯಾ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಫೆಬ್ರವರಿ 2022ರಲ್ಲಿ ಉಕ್ರೇನ್ ಯುದ್ಧ ಪ್ರಾರಂಭವಾದ ನಂತರ ಭಾರತಕ್ಕೆ ಪುಟಿನ್ ಅವರ ಮೊದಲ ಭೇಟಿ ಇದಾಗಿದೆ.

ಪುಟಿನ್ ಭೇಟಿಯಿಂದ ಭಾರತಕ್ಕೇನು ಲಾಭ? ರಷ್ಯಾದೊಂದಿಗೆ ಅಗಾಧ ವ್ಯಾಪಾರ ಅಂತರ ತಗ್ಗಿಸಲು ಭಾರತಕ್ಕೆ ಸಾಧ್ಯವಾ?

Vladimir Putin 2-day visit to India: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ 23ನೇ ಭಾರತ-ರಷ್ಯಾ ವಾರ್ಷಿಕ ಸಮಿಟ್​ನಲ್ಲಿ ಪಾಲ್ಗೊಳ್ಳಲು ಬರುತ್ತಿದ್ದಾರೆ. ಅವರ ಜೊತೆ ರಷ್ಯನ್ ಬ್ಯುಸಿನೆಸ್ ಪ್ರತಿನಿಧಿಗಳಿರುವ ದೊಡ್ಡ ನಿಯೋಗವೇ ಇದೆ. ಈ ಸಂದರ್ಭದಲ್ಲಿ ಭಾರತ ಹಾಗೂ ರಷ್ಯಾ ನಡುವೆ ಹಲವು ಎಂಒಯು ಒಪ್ಪಂದಗಳಿಗೆ ಸಹಿ ಬೀಳುವ ಸಾಧ್ಯತೆ ಇದೆ.

ಪ್ರಧಾನಿ ಮೋದಿ- ಪುಟಿನ್ ಗೆಳೆತನ 25 ವರ್ಷಕ್ಕೂ ಹಿಂದಿನದು; ವಾಜಪೇಯಿ ಜೊತೆಗಿನ ಫೋಟೋ ಮತ್ತೆ ವೈರಲ್

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ 4 ವರ್ಷಗಳ ಬಳಿಕ ಇದೀಗ ಮತ್ತೆ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಇಂದು ಸಂಜೆ ಅವರು ದೆಹಲಿಗೆ ಬಂದಿಳಿಯಲಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ಸಂಜೆ 6.30ಕ್ಕೆ ನವದೆಹಲಿಗೆ ಆಗಮಿಸಲಿದ್ದಾರೆ. ಇದು ಉಕ್ರೇನ್ ಸಂಘರ್ಷ ಪ್ರಾರಂಭವಾದ ನಂತರದ ಅವರ ಮೊದಲ ಭಾರತ ಭೇಟಿಯಾಗಿದೆ. ಮೋದಿ ಹಾಗೂ ಪುಟಿನ್ ನಡುವಿನ ಉತ್ತಮ ಬಾಂಧವ್ಯದ ಬಗ್ಗೆ ಎಲ್ಲರಿಗೂ ಗೊತ್ತಿದೆ. ಆದರೆ, ಈ ಸ್ನೇಹ ಮೋದಿ ಪ್ರಧಾನಿಯಾದ ಬಳಿಕ ಶುರುವಾಗಿದ್ದಲ್ಲ; ಈ ಗೆಳೆತನಕ್ಕೆ 25ಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದೆ.

ಜಲಶಕ್ತಿ ಸುಜಲಾಂ ಭಾರತ್: ನೀರಿನ ಸಮಸ್ಯೆ, ಸಂರಕ್ಷಣೆ ಮತ್ತು ಸಮುದಾಯ ಸಹಭಾಗಿತ್ವ

India's Sujalam Sufalam mission: ಭಾರತವು ಜಲ ಸಮಸ್ಯೆ ಎದುರಿಸುತ್ತಿದೆ, ಬೆಂಗಳೂರಿನಂತಹ ನಗರಗಳಲ್ಲಿ ನೀರಿನ ತತ್ವಾರ ಹೆಚ್ಚಾಗಿದೆ. ಇದಕ್ಕೆ ಪರಿಹಾರವಾಗಿ ಜಲಶಕ್ತಿ ಸಚಿವಾಲಯವು ಸುಜಲಾಂ ಭಾರತ್ ವಿಷನ್ ಶೃಂಗಸಭೆ ಆಯೋಜಿಸಿದೆ. ಇದು ನೀರಿನ ಭದ್ರತೆ, ಸಂರಕ್ಷಣೆ, ತಂತ್ರಜ್ಞಾನ ಆಧಾರಿತ ಪರಿಹಾರಗಳು, ಸುಸ್ಥಿರ ಅಭ್ಯಾಸಗಳು ಮತ್ತು ಸಮುದಾಯದ ಸಹಭಾಗಿತ್ವಕ್ಕೆ ಒತ್ತು ನೀಡುತ್ತದೆ. ಜಲ ಜೀವನ ಮಿಷನ್, ಸ್ವಚ್ಛ ಭಾರತ್ ಮಿಷನ್‌ಗಳಂತಹ ಯೋಜನೆಗಳ ಮೂಲಕ ದೇಶಾದ್ಯಂತ ಶುದ್ಧ ನೀರಿನ ವ್ಯವಸ್ಥೆಯನ್ನು ಬಲಪಡಿಸುವುದು ಇದರ ಗುರಿ.

ನೈಸರ್ಗಿಕ ಕೃಷಿಗಾರಿಕೆ ಭಾರತದ ಕೃಷಿ ಕ್ಷೇತ್ರದ ಭವಿಷ್ಯದ ಹಾದಿ: ನರೇಂದ್ರ ಮೋದಿ

PM Narendra Modi's blog post on natural farming: ಭಾರತೀಯ ರೈತರು ನೈಸರ್ಗಿಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ತಮ್ಮ ಲಿಂಕ್ಡ್​ನ್ ಪೋಸ್ಟ್​ನಲ್ಲಿ ಬ್ಲಾಗ್ ಬರೆದಿರುವ ಮೋದಿ, ರಾಸಾಯನಿಕ ಬಳಕೆ ನಿಲ್ಲಿಸಿ, ಸಂಪೂರ್ಣ ದೇಸೀಯವಾದ ಕೃಷಿ ವಿಧಾನಗಳನ್ನು ಅನುಸರಿಸಬೇಕೆಂದು ಸಲಹೆ ನೀಡಿದ್ದಾರೆ. ಪಂಚಗವ್ಯ, ಜೀವಾಮೃತ, ಬೀಜಾಮೃತ, ಮಲ್ಚಿಂಗ್ ಮೂಲಕ ಮಣ್ಣಿನ ಫಲವತ್ತತೆ ಹೆಚ್ಚಿಸಬಹುದು ಎಂದಿದ್ದಾರೆ.

ಕರ್ನಾಟಕಕ್ಕೆ 6862 ಎಲೆಕ್ಟ್ರಿಕ್ ಬಸ್: ಪರಿಸರ ಸ್ನೇಹಿ ವಾತಾವರಣಕ್ಕೆ ಮೋದಿ ಸರ್ಕಾರ ಬದ್ಧ ಎಂದ ತೇಜಸ್ವಿ ಸೂರ್ಯ

ಫೇಮ್ (FAME) ಯೋಜನೆಯಡಿಯಲ್ಲಿ ಎಲೆಕ್ಟ್ರಿಕ್ ಬಸ್‌ಗಳ ನಿಯೋಜನೆ ಕುರಿತು ಬೆಂಗಳೂರು ದಕ್ಷಿಣ ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ ಅವರು ಸದನದಲ್ಲಿ ಧ್ವನಿ ಎತ್ತಿದ್ದು, ಇದಕ್ಕೆ ಕೇಂದ್ರ ಬೃಹತ್ ಕೈಗಾರಿಕೆ ರಾಜ್ಯ ಖಾತೆ ಸಚಿವ ಭೂಪತಿರಾಜು ಶ್ರೀನಿವಾಸ ವರ್ಮಾ ಅವರು ಉತ್ತರ ನೀಡಿದ್ದಾರೆ. ಹಾಗಾದ್ರೆ, ಫೇಮ್-2 ಯೋಜನೆಯಡಿ ಕರ್ನಾಟಕಕ್ಕೆ ಎಷ್ಟು ಎಲೆಕ್ಟ್ರಿಕ್ ಬಸ್‌ಗಳನ್ನು ನಿಯೋಜಿಸಲಾಗಿದೆ ಎನ್ನುವ ಮಾಹಿತಿ ಇಲ್ಲಿದೆ.

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ ಹಿನ್ನೆಲೆ ದೆಹಲಿಯಲ್ಲಿ ಕಟ್ಟೆಚ್ಚರ

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಮಾಸ್ಕೋ ಬಗ್ಗೆ ಭಾರತ ಅತ್ಯಂತ ಸ್ನೇಹಪರ ನಿಲುವು ತಾಳಿದ್ದಕ್ಕಾಗಿ ರಷ್ಯಾ ಧನ್ಯವಾದಗಳನ್ನು ಅರ್ಪಿಸಿದೆ. ಉಕ್ರೇನ್ ಸಂಘರ್ಷದ ಬಗ್ಗೆ ಭಾರತದ ನಿಲುವನ್ನು ರಷ್ಯಾ ಶ್ಲಾಘಿಸಿದೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಎರಡು ದಿನಗಳ ಭಾರತ ಭೇಟಿಗೆ ಮುನ್ನ ರಷ್ಯಾದ ವಕ್ತಾರ ಡಿಮಿಟ್ರಿ ಪೆಸ್ಕೋವ್ ಈ ಹೇಳಿಕೆ ನೀಡಿದ್ದಾರೆ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ