National News
ರಾಷ್ಟ್ರೀಯ ಸುದ್ದಿಗಳನ್ನು ಸಮಗ್ರ ಚಿತ್ರಣ ಇಲ್ಲಿ ಸಿಗುತ್ತೇ. ರಾಷ್ಟ್ರೀಯ ಮಟ್ಟದಲ್ಲಿ ನಡೆದ ಸುದ್ದಿಗಳನ್ನು ಇಲ್ಲಿ ತಿಳಿಸಲಾಗುತ್ತದೆ. ರಾಜಕೀಯವಾಗಿ, ಸಾಮಾಜಿಕ, ಹಾಗೂ ದೇಶದ ಬೇರೆ ಬೇರೆ ಊರಿನಲ್ಲಿ ನಡೆದ ಘಟನೆಗಳನ್ನು, ಸುದ್ದಿಗಳನ್ನು ಇಲ್ಲಿ ತಿಳಿಸಲಾಗುವುದು. ದೇಶದ ವಿವಿಧ ರಾಜ್ಯಗಳಲ್ಲಿ ನಡೆಯುವ ಸಂಗತಿಗಳನ್ನು ಹಾಗೂ ಸುದ್ದಿಗಳನ್ನು ತಕ್ಷಣದಲ್ಲಿ ನೀಡಲಾಗುವುದು.
ನಗರಗಳೇ ಅಭಿವೃದ್ಧಿ ಯಂತ್ರಗಳು; ಸರ್ಕಾರದಿಂದ 1 ಲಕ್ಷ ಕೋಟಿ ರೂ ಅರ್ಬನ್ ಚಾಲೆಂಜ್ ಫಂಡ್
Urban Challenge Fund can help cities become economic growth engine: ಕೇಂದ್ರ ಸಂಪುಟವು ಒಂದು ಲಕ್ಷ ಕೋಟಿ ರೂ ಮೊತ್ತದ ಅರ್ಬನ್ ಚಾಲೆಂಜ್ ಫಂಡ್ ಬಿಡುಗಡೆಗೆ ಅನುಮೋದನೆ ಕೊಟ್ಟಿದೆ. ಮುಂದಿನ ಐದು ವರ್ಷಕ್ಕೆ ಈ ಫಂಡ್ ಬಳಕೆಯಾಗಲಿದ್ದು, ಇದು ಒಟ್ಟಾರೆ ನಾಲ್ಕು ಲಕ್ಷ ಕೋಟಿ ರೂ ಹೂಡಿಕೆಗೆ ಎಡೆ ಮಾಡಿಕೊಡಲಿದೆ. ಹತ್ತು ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆಯ ನಗರಗಳಲ್ಲಿ ಆರ್ಥಿಕವಾಗಿ ಲಾಭವಾಗುವಂತಹ ಅಭಿವೃದ್ಧಿ ಯೋಜನೆಗಳಿಗೆ ಉತ್ತೇಜನ ನೀಡಲು ಈ ಫಂಡ್ ಬಳಕೆಯಾಗಲಿದೆ.
- Vijaya Sarathy SN
- Updated on: Feb 15, 2026
- 1:10 pm
ಪ್ರೇಮಿಗಳ ದಿನವೇ ದುರಂತ; ಕಾರಿನೊಳಗೆ ಪ್ರೇಯಸಿಯನ್ನು ಕೊಂದು ತಾನೂ ಶೂಟ್ ಮಾಡಿಕೊಂಡ ಪ್ರೇಮಿ
ನೋಯ್ಡಾದಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ವ್ಯಕ್ತಿಯೊಬ್ಬ ಪ್ರೇಯಸಿಯ ಮೇಲೆ ಗುಂಡು ಹಾರಿಸಿ, ನಂತರ ತನ್ನ ಪ್ರಾಣವನ್ನೇ ತೆಗೆದುಕೊಂಡ ಘಟನೆ ನಡೆದಿದೆ. ಕಾರಿನೊಳಗೆ ಒಬ್ಬ ಹುಡುಗ ಮತ್ತು ಹುಡುಗಿ ತಲೆಗೆ ಗುಂಡೇಟಿನ ಗಾಯಗಳೊಂದಿಗೆ ಪತ್ತೆಯಾಗಿದ್ದಾರೆ. ಹುಡುಗನ ಕೈಯಲ್ಲಿ ಒಂದು ಪಿಸ್ತೂಲ್ ಪತ್ತೆಯಾಗಿದೆ ಮತ್ತು ಕಾರನ್ನು ಒಳಗಿನಿಂದ ಲಾಕ್ ಮಾಡಲಾಗಿದೆ. ಪ್ರಾಥಮಿಕವಾಗಿ, ಇದು ಆತ್ಮಹತ್ಯೆ ಪ್ರಕರಣವೆಂದು ಗೋಚರಿಸುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
- Sushma Chakre
- Updated on: Feb 14, 2026
- 11:06 pm
ಕರ್ನಾಟಕಕ್ಕೆ ಗುಡ್ ನ್ಯೂಸ್; ಬಳ್ಳಾರಿ- ಹೊಸಪೇಟೆ ನಡುವೆ ಹೊಸ ರೈಲು ಮಾರ್ಗಕ್ಕೆ ಒಪ್ಪಿಗೆ
ಕರ್ನಾಟಕದ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಜನರಿಗೆ ಮೋದಿ ಸರ್ಕಾರ ಒಳ್ಳೆಯ ಸುದ್ದಿಯೊಂದನ್ನು ನೀಡಿದೆ. ಇಲ್ಲಿನ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ವಿಶ್ವ ಪಾರಂಪರಿಕ ತಾಣವಾದ ಹಂಪಿಗೆ ರೈಲು ಸಂಪರ್ಕ ಕಲ್ಪಿಸಲು ಬಳ್ಳಾರಿ-ಹೊಸಪೇಟೆ 3ನೇ ಮತ್ತು 4ನೇ ರೈಲು ಮಾರ್ಗ ಯೋಜನೆಗೆ ಇಂದು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಒಟ್ಟು 3 ರೈಲು ಮಾರ್ಗಗಳಿಗೆ ಒಪ್ಪಿಗೆ ನೀಡಲಾಗಿದ್ದು, ಬಳ್ಳಾರಿ ಮಾರ್ಗವನ್ನು ಹೊರತುಪಡಿಸಿ ಕಾಸಾರ-ಮನ್ಮಾಡ್, ದೆಹಲಿ-ಅಂಬಾಲ ನಡುವಿನ 3 ಬಹು-ಟ್ರ್ಯಾಕಿಂಗ್ ರೈಲ್ವೆ ಯೋಜನೆಗಳಿಗೆ ಸಂಪುಟ ಅನುಮೋದನೆ ನೀಡಿದೆ. ಒಟ್ಟು 18,509 ಕೋಟಿ ರೂ. ಮೌಲ್ಯದ ರೈಲು ಮಾರ್ಗಗಳ ನವೀಕರಣಕ್ಕೆ ಮೋದಿ ಸರ್ಕಾರ ಮುಂದಾಗಿದೆ.
- Sushma Chakre
- Updated on: Feb 14, 2026
- 7:37 pm
ಗುವಾಹಟಿಯಲ್ಲಿ ಬ್ರಹ್ಮಪುತ್ರ ನದಿಯ 3,030 ಕೋಟಿ ರೂ. ವೆಚ್ಚದ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ
ಕುಮಾರ್ ಭಾಸ್ಕರ್ ವರ್ಮಾ ಸೇತುವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದರು. ಸುಮಾರು 3,030 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಈ ಸೇತುವೆ ಗುವಾಹಟಿಯನ್ನು ಉತ್ತರ ಗುವಾಹಟಿಯೊಂದಿಗೆ ಸಂಪರ್ಕಿಸುತ್ತದೆ. ಇದು ಪ್ರಯಾಣದ ಸಮಯವನ್ನು 60 ನಿಮಿಷಗಳಷ್ಟು ಕಡಿಮೆ ಮಾಡುತ್ತದೆ. ಅಂದರೆ 7 ನಿಮಿಷಗಳಿಗೆ ಪ್ರಯಾಣದ ಸಮಯವನ್ನು ಇಳಿಸಿದೆ. ಈ ಸೇತುವೆಯು ಈಶಾನ್ಯ ಭಾರತದಲ್ಲಿ ಮೊದಲ ಎಕ್ಸ್ಟ್ರಾಡೋಸ್ಡ್ ರಚನೆಯಾಗಿದೆ.
- Sushma Chakre
- Updated on: Feb 14, 2026
- 4:55 pm
ಕಾಂಗ್ರೆಸ್ ಅಸ್ಸಾಂನಲ್ಲಿ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿತೇ ವಿನಃ ಅಭಿವೃದ್ಧಿಗೆ ಗಮನ ಕೊಡಲಿಲ್ಲ; ಪ್ರಧಾನಿ ಮೋದಿ ಟೀಕೆ
ಗುವಾಹಟಿಯಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ನಿಂದ ದೀರ್ಘಕಾಲದಿಂದ ನಿರ್ಲಕ್ಷಿಸಲ್ಪಟ್ಟ ಈಶಾನ್ಯ ರಾಜ್ಯಗಳನ್ನು ಅಭಿವೃದ್ಧಿ ಮಾಡುವುದೇ ತಮ್ಮ ಸರ್ಕಾರದ ಪ್ರಮುಖ ಆದ್ಯತೆ ಎಂದು ಘೋಷಿಸಿದರು. ಈ ಪ್ರದೇಶವನ್ನು 'ಅಷ್ಟಲಕ್ಷ್ಮಿ ದೇವತೆ'ಗೆ ಹೋಲಿಸಿದರು. ಅಸ್ಸಾಂ ಕಳೆದ 11 ವರ್ಷಗಳಲ್ಲಿ ಅಭಿವೃದ್ಧಿ ಯೋಜನೆಗಳಿಗಾಗಿ ಕೇಂದ್ರ ಸರ್ಕಾರದಿಂದ ರೂ. 5.5 ಲಕ್ಷ ಕೋಟಿಗೂ ಹೆಚ್ಚು ಪಡೆದಿದೆ. ಕಾಂಗ್ರೆಸ್ ಆಡಳಿತದ ಅವಧಿಗಿಂತ ಇದು 5 ಪಟ್ಟು ಹೆಚ್ಚಾಗಿದೆ ಎಂದು ಹೇಳಿದ್ದಾರೆ. ಚುನಾವಣೆಗೆ ಸಜ್ಜಾಗಿರುವ ರಾಜ್ಯವಾದ ಅಸ್ಸಾಂನಲ್ಲಿ ಪ್ರಧಾನಿ ಮೋದಿ ಮಹತ್ವದ ಭಾಷಣ ಮಾಡಿದ್ದಾರೆ.
- Sushma Chakre
- Updated on: Feb 14, 2026
- 4:22 pm
RailOne app : ರೈಲು ಪ್ರಯಾಣಿಕರೇ ಗಮನಿಸಿ; ಹಲವು ಆ್ಯಪ್ಗಳ ಬದಲು ಈ ಒಂದೇ ಆ್ಯಪ್ನಲ್ಲಿ ಸಿಗಲಿದೆ ಎಲ್ಲ ರೈಲ್ವೆ ಸೇವೆ
ರೈಲ್ವೆ ಇಲಾಖೆಯಿಂದ ಹೊಸದಾಗಿ ಪ್ರಾರಂಭಿಸಲಾದ ರೈಲ್ಒನ್ ಆ್ಯಪ್ ಅನ್ನು ಬಳಸುವುದರ ಮೂಲಕ ರೈಲ್ವೆ ಬುಕಿಂಗ್ಗೆ ಸಂಬಂಧಿಸಿದ ಎಲ್ಲ ರೀತಿಯ ಸೇವೆಗಳನ್ನು ಇಲ್ಲಿಂದಲೇ ಪಡೆಯಬಹುದು. ಟಿಕೆಟ್ ಬುಕಿಂಗ್ ಮಾತ್ರವಲ್ಲದೆ ರೈಲಿನಲ್ಲಿ ಸಿಗುವ ಆಹಾರದ ಬದಲಾವಣೆ, ಫುಡ್ ಬುಕಿಂಗ್ ಮುಂತಾದ ಎಲ್ಲ ಸೇವೆಗಳನ್ನು ಈ ಆ್ಯಪ್ನಲ್ಲಿ ಪಡೆಯಬಹುದು ಎಂದು ಸರ್ಕಾರ ತಿಳಿಸಿದೆ. ರೈಲ್ಒನ್ ರೈಲ್ವೆಯ ಆಲ್-ಇನ್-ಒನ್ ಅಪ್ಲಿಕೇಶನ್ ಆಗಿರುತ್ತದೆ. ಇದು ಯುಟಿಎಸ್ ಒದಗಿಸದ ಕಾಯ್ದಿರಿಸಿದ ಟಿಕೆಟ್ ಸೇವೆಗಳಿಗೂ ಪ್ರವೇಶವನ್ನು ಒದಗಿಸುತ್ತದೆ.
- Sushma Chakre
- Updated on: Feb 14, 2026
- 3:27 pm
ಬಾಯ್ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ದೆಹಲಿಯ ಫಾರ್ಶ್ ಬಜಾರ್ ಪ್ರದೇಶದಲ್ಲಿರುವ ಹೋಟೆಲ್ ಒಂದರ 4ನೇ ಮಹಡಿಯ ಕಿಟಕಿಯಿಂದ 20 ವರ್ಷದ ಹುಡುಗಿಯೊಬ್ಬಳು ಕೆಳಗೆ ಹಾರಿದ್ದಾಳೆ. ಆಕೆ ಬಾಯ್ ಫ್ರೆಂಡ್ ಜೊತೆಗೆ ಆ ಹೋಟೆಲ್ ರೂಂಗೆ ಹೋಗಿದ್ದಳು. ಆತನ ಜೊತೆ ಜಗಳವಾದ ನಂತರ ಕೋಪದಿಂದ ಆತ್ಮಹತ್ಯೆ ಮಾಡಿಕೊಳ್ಳಲು ಆಕೆ ಕಿಟಕಿಯಿಂದ ಹಾರಿದ್ದಾಳೆ. ಆಕೆ ಹಾರಲು ಯತ್ನಿಸುತ್ತಿರುವುದನ್ನು ನೋಡಿದ ಜನರು ಕೆಳಗೆ ನಿಂತು ಆಕೆಯನ್ನು ಕಾಪಾಡಿದ್ದಾರೆ.
- Sushma Chakre
- Updated on: Feb 13, 2026
- 10:33 pm
ಒಡಿಶಾದಲ್ಲಿ ಆಸಿಡ್ ದಾಳಿ ನಡೆಸಿ ಪತ್ನಿಯನ್ನು ಕೊಂದ ವ್ಯಕ್ತಿಗೆ ಗಲ್ಲು ಶಿಕ್ಷೆ
ಆಸಿಡ್ ದಾಳಿಯಲ್ಲಿ ಪತ್ನಿಯನ್ನು ಕೊಂದ ಆರೋಪದ ಮೇಲೆ ಒಡಿಶಾದ ಬಾಲಸೋರ್ ಜಿಲ್ಲೆಯ ನ್ಯಾಯಾಲಯವು ಚಂದನ್ ಕುಮಾರ್ ರಾಣಾ ಎಂಬ ವ್ಯಕ್ತಿಗೆ ಮರಣದಂಡನೆ ವಿಧಿಸಿದೆ. ಜೊತೆಗೆ 50,000 ರೂ. ದಂಡವನ್ನು ವಿಧಿಸಿದೆ. ರಾಣಾ ತನ್ನ ಹೆಂಡತಿಯ ಮೇಲೆ ಆಸಿಡ್ ಎರಚಿದ್ದ. ಆಕೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ನ್ಯಾಯಾಲಯವು ಫೆಬ್ರವರಿ 4 ರಂದು ರಾಣಾನನ್ನು ತಪ್ಪಿತಸ್ಥನೆಂದು ಘೋಷಿಸಿತ್ತು. ಇದೀಗ ಆತನಿಗೆ ಗಲ್ಲು ಶಿಕ್ಷೆ ವಿಧಿಸಲಾಗಿದೆ.
- Sushma Chakre
- Updated on: Feb 13, 2026
- 9:49 pm
ನೆಹರು ಚೀನಾದೊಂದಿಗೆ ಪಂಚಶೀಲ ಒಪ್ಪಂದ ಬಯಸಿದ್ದೇಕೆ? ಸಿಡಿಎಸ್ ಅನಿಲ್ ಚೌಹಾಣ್ ಮಾಹಿತಿ
ಭಾರತದ ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಇಂದು ಡೆಹ್ರಾಡೂನ್ನಲ್ಲಿ ನಡೆದ ಭಾರತ್ ಹಿಮಾಲಯನ್ ಕಾರ್ಯತಂತ್ರ ವೇದಿಕೆ (ಬಿಎಚ್ಐಎಸ್ಎಂ)ಯಲ್ಲಿ ಭಾಗವಹಿಸಿದ್ದರು. ಭಾರತ-ಚೀನಾ ರಾಜತಾಂತ್ರಿಕ ಸಂಬಂಧಗಳಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದ್ದರೂ ಗಡಿಯಲ್ಲಿ ಉದ್ವಿಗ್ನತೆ ಇನ್ನೂ ಇದೆ. ಈ ಹಿನ್ನೆಲೆಯಲ್ಲಿ, ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥ (ಸಿಡಿಎಸ್) ಜನರಲ್ ಅನಿಲ್ ಚೌಹಾಣ್ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು 1954ರಲ್ಲಿ ಚೀನಾದೊಂದಿಗೆ ಪಂಚಶೀಲ ಒಪ್ಪಂದಕ್ಕೆ ಏಕೆ ಒತ್ತಾಯಿಸಿದರು? ಅದರಿಂದ ಆದ ಪರಿಣಾಮಗಳೇನು? ಎಂಬುದರ ಕುರಿತು ಆಸಕ್ತಿದಾಯಕ ಸಂಗತಿಗಳನ್ನು ಹಂಚಿಕೊಂಡಿದ್ದಾರೆ.
- Sushma Chakre
- Updated on: Feb 13, 2026
- 9:18 pm
ಗುಲಾಮಗಿರಿಯನ್ನು ಮೆಟ್ಟಿ ಹೊಸ ಇತಿಹಾಸ ಸೃಷ್ಟಿಸಿದ್ದೇವೆ; ಸೇವಾ ತೀರ್ಥದಲ್ಲಿ ಪ್ರಧಾನಿ ಮೋದಿ ಮೊದಲ ಭಾಷಣ
ಪ್ರಧಾನಿ ಮೋದಿ ಇಂದು ಪ್ರಧಾನಮಂತ್ರಿಗಳ ಹೊಸ ಕಟ್ಟಡವಾದ ಸೇವಾ ತೀರ್ಥದ ಕಚೇರಿಯನ್ನು ಉದ್ಘಾಟಿಸಿದರು. ಈ ನೂತನ ಕಟ್ಟಡದಲ್ಲಿ ಮೊದಲ ಬಾರಿಗೆ ಭಾಷಣ ಮಾಡಿದ ಪ್ರಧಾನಿ ಮೋದಿ, ನಾವು ಗುಲಾಮಗಿರಿ ಮನಸ್ಥಿತಿಯನ್ನು ತೊಡೆದುಹಾಕಿದ್ದೇವೆ. ವಿಕಸಿತ ಭಾರತದ ಗುರಿಯೊಂದಿಗೆ ಹೊಸ ಇತಿಹಾಸ ನಿರ್ಮಾಣಕ್ಕೆ ಸಜ್ಜಾಗಿದ್ದೇವೆ. ಇದು 140 ಭಾರತೀಯರ ಆಕಾಂಕ್ಷೆ, ಅಭಿವೃದ್ಧಿಯನ್ನು ಕೇಂದ್ರೀಕರಿಸಿಕೊಂಡಿರುತ್ತದೆ ಎಂದು ಹೇಳಿದ್ದಾರೆ.
- Sushma Chakre
- Updated on: Feb 13, 2026
- 7:54 pm
ಬಾಂಗ್ಲಾದೇಶದಲ್ಲಿ ಬಿಎನ್ಪಿಗೆ ಭರ್ಜರಿ ಜಯ; ತಾರಿಕ್ ರೆಹಮಾನ್ಗೆ ಕರೆ ಮಾಡಿ ಅಭಿನಂದಿಸಿದ ಪ್ರಧಾನಿ ಮೋದಿ
ಬಾಂಗ್ಲಾದೇಶದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್ಪಿ) ನಾಯಕ ತಾರಿಕ್ ರೆಹಮಾನ್ ಅವರನ್ನು ಅಭಿನಂದಿಸಿದ್ದಾರೆ. ತಾರಿಕ್ ರೆಹಮಾನ್ ಇನ್ಮುಂದೆ ಬಾಂಗ್ಲಾದೇಶವನ್ನು ಆಳಲಿದ್ದಾರೆ. ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವು ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿದ್ದು, 299 ಸ್ಥಾನಗಳಲ್ಲಿ 209 ಸ್ಥಾನಗಳನ್ನು ಗಳಿಸಿದೆ. ಅದರ ಮಿತ್ರಪಕ್ಷಗಳು ಸೇರಿ 212 ಸ್ಥಾನಗಳನ್ನು ಗಳಿಸಿವೆ.
- Sushma Chakre
- Updated on: Feb 13, 2026
- 7:07 pm
6 ವರ್ಷದ ಮಗುವಿನ ಪಾಲಿಗೆ ಯಮನಾದ 12ನೇ ತರಗತಿ ವಿದ್ಯಾರ್ಥಿ
ಲಕ್ನೋದಲ್ಲಿ 12ನೇ ತರಗತಿಯ ವಿದ್ಯಾರ್ಥಿ ಚಲಾಯಿಸುತ್ತಿದ್ದ ಕಾರು ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಈ ಘಟನೆಯಲ್ಲಿ 6 ವರ್ಷದ ಬಾಲಕ ಸಾವನ್ನಪ್ಪಿದ್ದು, 4 ಮಂದಿ ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ವಿದ್ಯಾರ್ಥಿ ತಮ್ಮ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿದ ನಂತರ ಗೆಳೆಯನೊಂದಿಗೆ ಮನೆಗೆ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡು ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ.
- Sushma Chakre
- Updated on: Feb 13, 2026
- 6:38 pm