AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

National News

National News

ರಾಷ್ಟ್ರೀಯ ಸುದ್ದಿಗಳನ್ನು ಸಮಗ್ರ ಚಿತ್ರಣ  ಇಲ್ಲಿ ಸಿಗುತ್ತೇ. ರಾಷ್ಟ್ರೀಯ ಮಟ್ಟದಲ್ಲಿ ನಡೆದ ಸುದ್ದಿಗಳನ್ನು ಇಲ್ಲಿ ತಿಳಿಸಲಾಗುತ್ತದೆ.  ರಾಜಕೀಯವಾಗಿ, ಸಾಮಾಜಿಕ, ಹಾಗೂ ದೇಶದ ಬೇರೆ ಬೇರೆ ಊರಿನಲ್ಲಿ ನಡೆದ ಘಟನೆಗಳನ್ನು, ಸುದ್ದಿಗಳನ್ನು ಇಲ್ಲಿ ತಿಳಿಸಲಾಗುವುದು. ದೇಶದ ವಿವಿಧ ರಾಜ್ಯಗಳಲ್ಲಿ ನಡೆಯುವ ಸಂಗತಿಗಳನ್ನು ಹಾಗೂ ಸುದ್ದಿಗಳನ್ನು ತಕ್ಷಣದಲ್ಲಿ ನೀಡಲಾಗುವುದು. 

ಕಾರವಾರದಲ್ಲಿ ಐಎನ್ಎಸ್ ವಾಗ್ಶೀರ್​​ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಜಲಾಂತರ್ಗಾಮಿ ಯಾನ

ರಾಷ್ಟ್ರಪತಿ ದ್ರೌಪದಿ ಮುರ್ಮು ಭಾರತದ ಪಶ್ಚಿಮ ಸಮುದ್ರ ತೀರದಲ್ಲಿರುವ ಕಾರವಾರ ನೌಕಾ ನೆಲೆಯಿಂದ ಭಾರತೀಯ ನೌಕಾಪಡೆಯ ಸ್ಥಳೀಯ ಕಲ್ವರಿ-ವರ್ಗದ ಜಲಾಂತರ್ಗಾಮಿ ಐಎನ್‌ಎಸ್ ವಾಗ್​​ಶೀರ್​​ನಲ್ಲಿ ಐತಿಹಾಸಿಕ ಜಲಾಂತರ್ಗಾಮಿ ಹಾರಾಟವನ್ನು ಕೈಗೊಂಡರು. ಈ ಕಾರ್ಯಾಚರಣೆಯು ರಾಷ್ಟ್ರಪತಿಗಳಿಗೆ ಭಾರತದ ನೀರೊಳಗಿನ ಯುದ್ಧ ಸಾಮರ್ಥ್ಯಗಳ ಅಪರೂಪದ, ನೇರ ಅನುಭವವನ್ನು ನೀಡಿತು.

ಕುಚಿಕು ಫ್ರೆಂಡ್ಸ್; ಕೋತಿಯ ಜೊತೆಗಿನ ನಾಯಿಗಳ ಗೆಳೆತನ ನೋಡಿ!

ಕೋತಿಯೊಂದು ಎರಡು ನಾಯಿಗಳೊಂದಿಗೆ ಸ್ನೇಹ ಬೆಳೆಸಿದೆ. ತೆಲಂಗಾಣದ ಖಮ್ಮಂ ಜಿಲ್ಲೆಯ ಸಟ್ಟುಪಲ್ಲಿ ಪಟ್ಟಣದಲ್ಲಿ ಈ ವಿಚಿತ್ರವಾದ ಅಪರೂಪದ ದೃಶ್ಯ ಕಂಡುಬಂದಿದೆ. ಮನೆಮಾಲೀಕರೊಬ್ಬರು ಕೋತಿಯನ್ನು ತಂದು ಪಟ್ಟಣದಲ್ಲಿ ಮಂಗಗಳ ಕಾಟದಿಂದ ರಕ್ಷಣೆಗಾಗಿ ಅದನ್ನು ಸಾಕುತ್ತಿದ್ದಾರೆ. ಆದರೆ, ಅದೇ ಮನೆಯಲ್ಲಿರುವ ಎರಡು ನಾಯಿಮರಿಗಳು ಆ ಕೋತಿಯ ಜೊತೆ ಫ್ರೆಂಡ್ಸ್ ಆಗಿವೆ. ಕೋತಿ ನಾಯಿಮರಿಗಳ ಜೊತೆ ಆಟವಾಡುತ್ತಿರುವ ವಿಡಿಯೋ ವೈರಲ್ ಆಗಿದೆ.

ಆರ್‌ಎಸ್‌ಎಸ್ ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ

ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಸಂಘಟನಾ ಬಲದ ಬಗ್ಗೆ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರ ಹೇಳಿಕೆಗಳು ಪಕ್ಷದೊಳಗೆ ಮತ್ತು ಅದರಾಚೆಗೂ ಬಿರುಗಾಳಿಯನ್ನು ಸೃಷ್ಟಿಸುತ್ತಲೇ ಇವೆ. ನಾಯಕರನ್ನು ನಿರ್ಮಿಸುವ ಸಾಮರ್ಥ್ಯಕ್ಕಾಗಿ ಆರ್‌ಎಸ್‌ಎಸ್ ಅನ್ನು ಹೊಗಳಿದ ದಿಗ್ವಿಜಯ ಸಿಂಗ್ ಅವರ ಹೇಳಿಕೆಗಳು ತೀವ್ರ ಚರ್ಚೆಗೆ ಗ್ರಾಸವಾಗಿವೆ. ಕೆಲವು ಕಾಂಗ್ರೆಸ್ ನಾಯಕರು ಅವರ ಅಭಿಪ್ರಾಯವನ್ನು ಬೆಂಬಲಿಸಿದರೆ, ಮಾಣಿಕ್ಕಂ ಟ್ಯಾಗೋರ್‌ನಂತಹ ಇತರ ಕಾಂಗ್ರೆಸ್ ನಾಯಕರು ಆರ್‌ಎಸ್‌ಎಸ್ ಅನ್ನು ತೀವ್ರವಾಗಿ ಟೀಕಿಸಿದ್ದಾರೆ.

ತಂಜಾವೂರು ಆಸ್ಪತ್ರೆಯಲ್ಲಿ 9 ಲಕ್ಷ ರೂ. ಮೌಲ್ಯದ ನಿಧಿ ಪತ್ತೆ; ವೈದ್ಯರಿಗೆ ಅಚ್ಚರಿ

ತಂಜಾವೂರು ವೈದ್ಯಕೀಯ ಕಾಲೇಜು ಆವರಣದಲ್ಲಿ ಸುಮಾರು 50 ವರ್ಷಗಳ ಹಿಂದೆ ಬಳಸಲಾಗಿದ್ದ ಅಪರೂಪದ ವಸ್ತುಗಳು ಪತ್ತೆಯಾಗಿವೆ. ತಂಜಾವೂರು ವೈದ್ಯಕೀಯ ಕಾಲೇಜಿನ ಮಹಿಳಾ ಹಾಸ್ಟೆಲ್ ಎದುರಿನ ಪ್ರದೇಶವನ್ನು ಸ್ವಚ್ಛಗೊಳಿಸಲು ವೈದ್ಯಕೀಯ ಕಾಲೇಜು ಆಸ್ಪತ್ರೆಯ ಆಡಳಿತ ಮಂಡಳಿ ಆದೇಶಿಸಿದೆ. ಇದು ಸುಮಾರು 50 ವರ್ಷಗಳಿಂದ ಪೊದೆಯಂತಿತ್ತು. ಬೀಗ ಹಾಕಿದ ಕಟ್ಟಡಗಳನ್ನು ಸ್ವಚ್ಛಗೊಳಿಸಲು ಮತ್ತು ಅಲ್ಲಿ ಏನಿದೆ ಎಂಬುದರ ಪರಿಶೀಲನೆಗೆ ಅವರು ಆದೇಶಿಸಿದ್ದಾರೆ.

ವಿಶ್ವ ಕಲ್ಯಾಣಕ್ಕಾಗಿ ಭಾರತ ವಿಶ್ವಗುರು ಆಗಲೇಬೇಕು; ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹಿಂದೂಗಳು ಒಗ್ಗಟ್ಟಾಗಿರಬೇಕು. ಸನಾತನ ಧರ್ಮವನ್ನು ಬಲಪಡಿಸುವ ಮತ್ತು ಉನ್ನತೀಕರಿಸುವ ಸಮಯ ಬಂದಿದೆ ಎಂದು ಕರೆ ನೀಡಿದ್ದಾರೆ. ಎಲ್ಲಾ ಹಿಂದೂಗಳು ಸನಾತನ ಧರ್ಮವನ್ನು ಉನ್ನತೀಕರಿಸುವ ಸಮಯ ಬಂದಿದೆ ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ಮೊದಲ ಪತಿ ಮೇಲೆ ವರದಕ್ಷಿಣೆ ಕೇಸ್​​ ಹಾಕಿದ ಮಹಿಳೆಗೆ ಶಾಕ್ ಕೊಟ್ಟ 2ನೇ ಗಂಡ!

ಮಹಿಳೆಯೊಬ್ಬಳು ತನ್ನ ಗಂಡನ ವಿರುದ್ಧ ಕೌಟುಂಬಿಕ ದೌರ್ಜನ್ಯದ ಕೇಸ್ ಹಾಕಿ, ತನಗೆ ಆರ್ಥಿಕ ಪರಿಹಾರ ಬೇಕೆಂದು ಕೋರಿದ್ದಳು. ಮುಂಬೈನ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಕೌಟುಂಬಿಕ ಹಿಂಸಾಚಾರ ಕಾಯ್ದೆಯಡಿಯಲ್ಲಿ ಕೇಸ್ ದಾಖಲಾಗಿತ್ತು. ಆದರೆ, ಈ ಕೇಸ್​​ಗೆ ಆಕೆಯ 2ನೇ ಪತಿ ಎಂಟ್ರಿಯಾಗುತ್ತಿದ್ದಂತೆ ಕೋರ್ಟ್​​ನಲ್ಲಿ ಇಡೀ ಪ್ರಕರಣವೇ ತಲೆಕೆಳಗಾಗಿದೆ. ಈ ಕೇಸ್​​ಗೆ ಇದೀಗ ಹೊಸ ತಿರುವು ಸಿಕ್ಕಿದೆ. 17 ವರ್ಷದ ಹಿಂದಿನ ಪ್ರಕರಣದ ವಿಚಾರಣೆ ಇದೀಗ ಮುಕ್ತಾಯಗೊಂಡಿದೆ.

ಮನೆಯಲ್ಲಿ ನನ್ನ ಮಕ್ಕಳು ಸುರಕ್ಷಿತವಾಗಿಲ್ಲ; ಕುಲದೀಪ್ ಸೆಂಗಾರ್ ಜಾಮೀನು ವಿರುದ್ಧ ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಕಳವಳ

ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ್ದಕ್ಕೆ ಸಿಬಿಐ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಿದ್ಧತೆ ನಡೆಸುತ್ತಿರುವಂತೆಯೇ, ಜಾಮೀನು ಆದೇಶದ ವಿರುದ್ಧ ಪ್ರತಿಭಟನೆಗಳು ಭುಗಿಲೆದ್ದಿವೆ. ಇದರ ನಡುವೆ ತನಗೆ ನಿರಂತರ ಬೆದರಿಕೆಗಳು ಬರುತ್ತಿವೆ ಎಂದು ಆರೋಪಿಸಿ ಉನ್ನಾವ್ ಅತ್ಯಾಚಾರ ಸಂತ್ರಸ್ತೆ ತನ್ನ ಮಕ್ಕಳ ಸುರಕ್ಷತೆಯ ಬಗ್ಗೆ ಭಯ ವ್ಯಕ್ತಪಡಿಸಿದ್ದಾರೆ.

ಮನ್ ಕಿ ಬಾತ್; ಮನಬಂದಂತೆ ಆ್ಯಂಟಿಬಯೋಟಿಕ್ ಸೇವಿಸುವವರಿಗೆ ಪ್ರಧಾನಿ ಮೋದಿ ಎಚ್ಚರಿಕೆ

Mann Ki Baat: ಅನೇಕ ಜನರು ತಮಗೇನಾದರೂ ಆರೋಗ್ಯ ಹದಗೆಟ್ಟರೆ ತಾವೇ ಮೆಡಿಕಲ್ ಶಾಪ್​ಗೆ ಹೋಗಿ ಮಾತ್ರೆ ಸೇವಿಸುವ ಅಭ್ಯಾಸ ರೂಢಿಸಿಕೊಂಡಿರುತ್ತಾರೆ. ಇದಕ್ಕೆಲ್ಲ ವೈದ್ಯರ ಬಳಿ ಯಾಕೆ ಹೋಗಬೇಕು ಎಂಬ ಉಡಾಫೆ ಅವರದು. ಆದರೆ, ಇಂತಹ ಉಡಾಫೆ ಮಾಡುವವರಿಗೆ ಇಂದಿನ ಮನ್ ಕಿ ಬಾತ್​​ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಿವಿಮಾತೊಂದನ್ನು ನೀಡಿದ್ದಾರೆ. ಇದರ ಜೊತೆಗೆ ಎಚ್ಚರಿಕೆಯನ್ನೂ ನೀಡಿದ್ದಾರೆ.

ಭಾರತದ ಆಪರೇಷನ್ ಸಿಂಧೂರ್ ವೇಳೆ ನೂರ್ ಖಾನ್ ವಾಯುನೆಲೆಗೆ ಹಾನಿ; ಒಪ್ಪಿಕೊಂಡ ಪಾಕಿಸ್ತಾನ

ಆಪರೇಷನ್ ಸಿಂಧೂರ್ ವೇಳೆ ಭಾರತೀಯ ಸೇನೆಯಿಂದ ಪಾಕಿಸ್ತಾನದ ವಾಯುನೆಲೆಗಳ ಮೇಲೆ ದಾಳಿ ನಡೆದಿದೆ ಎಂದು ಪಾಕಿಸ್ತಾನದ ವಿದೇಶಾಂಗ ಸಚಿವರೇ ಒಪ್ಪಿಕೊಂಡಿದ್ದಾರೆ. 80 ಡ್ರೋನ್‌ಗಳು 36 ಗಂಟೆಗಳ ಕಾಲ ದಾಳಿ ನಡೆದಿವೆ. ಭಾರತದ ಆಪರೇಷನ್ ಸಿಂಧೂರ್ ದಾಳಿಯು ನೂರ್ ಖಾನ್ ನೆಲೆಗೆ ಹಾನಿಯನ್ನುಂಟುಮಾಡಿದೆ ಎಂದು ಪಾಕಿಸ್ತಾನದ ಸಚಿವ ಒಪ್ಪಿಕೊಂಡಿದ್ದಾರೆ.

ಪ್ರಶಸ್ತಿಗಳು ಪದವಿಗಳಲ್ಲ… ವ್ಯಕ್ತಿಯ ಹೆಸರಿಗೆ ಭಾರತ ರತ್ನ, ಪದ್ಮಪ್ರಶಸ್ತಿಗಳನ್ನು ಸೇರಿಸುವಂತಿಲ್ಲ: ಬಾಂಬೆ ಹೈಕೋರ್ಟ್

Bharat Ratna, Padma Awards Not Titles, Can’t Be Used As Prefix, Suffix, says Bombay High Court: ನಾಗರಿಕ ಪ್ರಶಸ್ತಿಗಳು ವ್ಯಕ್ತಿಗಳ ಸಾಧನೆಗೆ ನೀಡುವ ಗೌರವ. ವ್ಯಕ್ತಿಯ ಹೆಸರಿಗೆ ಅವನ್ನು ಸೇರಿಸಲು ಅವು ಪದವಿಗಳಲ್ಲ ಎಂದು ಕೋರ್ಟ್ ಹೇಳಿದೆ. ಅಂದರೆ, ಅಧಿಕೃತ ದಾಖಲೆಗಳಲ್ಲಿ ವ್ಯಕ್ತಿಗಳ ಹೆಸರಿನ ಆ ಕಡೆ ಮತ್ತು ಈಕಡೆಗಳಲ್ಲಿ ಪ್ರಶಸ್ತಿ ಹೆಸರನ್ನು ಸೇರಿಸಬಾರದು. ದಶಕಗಳ ಹಿಂದೆ ಸಾಂವಿಧಾನಿಕ ಪೀಠ ನೀಡಿದ ತೀರ್ಪನ್ನು ಬಾಂಬೆ ಹೈಕೋರ್ಟ್ ಏಕಸದಸ್ಯ ಪೀಠ ಇದೀಗ ಪುನರುಚ್ಚರಿಸಿದೆ.

ಭಾರತ ವಿರೋಧಿ ಶಕ್ತಿಗಳೊಂದಿಗೆ ರಾಹುಲ್ ಗಾಂಧಿ? ಜರ್ಮನಿಗೆ ಹೋಗಿದ್ದು ಯಾಕೆ? ಬಿಜೆಪಿ ಟೀಕೆ

BJP MP Sudhanshu Trivedi alleges that congress is part of Global Progressive Alliance that has anti-India narrative: ಜಾರ್ಜ್ ಸೋರೋಸ್ ಬೆಂಬಲಿತ ಗ್ಲೋಬಲ್ ಪ್ರೋಗ್ರೆಸ್ಸಿವ್ ಅಲಾಯನ್ಸ್ ಜೊತೆ ಕಾಂಗ್ರೆಸ್ ಸಂಬಂಧವೇನು ಎಂದು ಬಿಜೆಪಿ ಪ್ರಶ್ನಿಸಿದೆ. ರಾಹುಲ್ ಗಾಂಧಿ ಜರ್ಮನಿಗೆ ಹೋಗಿದ್ದು ಯಾಕೆ? ಈ ಭಾರತ ವಿರೋಧಿ ನಿಲುವಿನ ಸಂಘಟನೆಯ ಸಭೆಯಲ್ಲಿ ಪಾಲ್ಗೊಂಡಿದ್ಯಾಕೆ ಎಂದು ಸುಧಾಂಶು ತ್ರಿವೇದಿ ಕೇಳಿದ್ದಾರೆ.

ಆರೆಸ್ಸೆಸ್, ಬಿಜೆಪಿಯ ಸಂಘಟನಾ ಶಕ್ತಿ ಶ್ಲಾಘಿಸಿದ ಮಾಜಿ ಸಿಎಂ ದಿಗ್ವಿಜಯ ಸಿಂಗ್; ಕಾಂಗ್ರೆಸ್ಸನ್ನು ಕಿಚಾಯಿಸಿದ ಬಿಜೆಪಿ

Digvijaya Singh shares Narendra Modi's old photo, praises organizational power of RSS: ಆರೆಸ್ಸೆಸ್ ಸಂಘಟನೆಯ ಶಕ್ತಿಯನ್ನು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಹೊಗಳಿದ್ದಾರೆ. ತೊಂಬತ್ತರ ದಶಕದಲ್ಲಿ ಎಲ್.ಕೆ. ಆಡ್ವಾಣಿ ಕಾಲ ಕೆಳಗೆ ಮುಂಭಾಗದಲ್ಲಿ ನರೇಂದ್ರ ಮೋದಿ ಕುಳಿತು ಭಾಷಣ ಕೇಳುತ್ತಿರುವ ಚಿತ್ರವೊಂದನ್ನು ಅವರು ಹಂಚಿಕೊಂಡಿದ್ದಾರೆ. ಸಾಮಾನ್ಯ ಕಾರ್ಯಕರ್ತರಾದವರು ಸಿಎಂ ಮತ್ತು ಪಿಎಂ ಆಗುತ್ತಾರೆ. ಅದು ಸಂಘಟನೆಯ ಶಕ್ತಿ ಎಂದು ದಿಗ್ವಿಜಯ ಸಿಂಗ್ ಹೊಗಳಿದ್ದಾರೆ.