National News

National News

ರಾಷ್ಟ್ರೀಯ ಸುದ್ದಿಗಳನ್ನು ಸಮಗ್ರ ಚಿತ್ರಣ  ಇಲ್ಲಿ ಸಿಗುತ್ತೇ. ರಾಷ್ಟ್ರೀಯ ಮಟ್ಟದಲ್ಲಿ ನಡೆದ ಸುದ್ದಿಗಳನ್ನು ಇಲ್ಲಿ ತಿಳಿಸಲಾಗುತ್ತದೆ.  ರಾಜಕೀಯವಾಗಿ, ಸಾಮಾಜಿಕ, ಹಾಗೂ ದೇಶದ ಬೇರೆ ಬೇರೆ ಊರಿನಲ್ಲಿ ನಡೆದ ಘಟನೆಗಳನ್ನು, ಸುದ್ದಿಗಳನ್ನು ಇಲ್ಲಿ ತಿಳಿಸಲಾಗುವುದು. ದೇಶದ ವಿವಿಧ ರಾಜ್ಯಗಳಲ್ಲಿ ನಡೆಯುವ ಸಂಗತಿಗಳನ್ನು ಹಾಗೂ ಸುದ್ದಿಗಳನ್ನು ತಕ್ಷಣದಲ್ಲಿ ನೀಡಲಾಗುವುದು. 

500 ರೂ. ಕದ್ದನೆಂಬ ಅನುಮಾನದಿಂದ 10 ವರ್ಷದ ಮಗನಿಗೆ ಹೊಡೆದು ಕೊಂದ ತಂದೆ

ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ಭೋಜ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ತಂದೆಯೊಬ್ಬ ತನ್ನ 10 ವರ್ಷದ ಮಗನನ್ನು ಹೊಡೆದು ಕೊಂದಿದ್ದಾನೆ. ತಂದೆಯೇ ತನ್ನ ಮಗನನ್ನು ಹೊಡೆದು ಕೊಂದಿದ್ದಾನೆ. ಈ ಕೊಲೆಗೆ ಅನುಮಾನವೇ ಕಾರಣ. ತನ್ನ ಬಳಿಯಿದ್ದ 500 ರೂ.ಗಳನ್ನು ಮಗ ಕದ್ದಿದ್ದಾನೆ ಎಂದು ತಂದೆ ಶಂಕಿಸಿ, ಹೊಡೆದಿದ್ದಾರೆ.

ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ

ಇದೀಗ ಎಲ್ಲೆಡೆ ವೈರಲ್ ಆಗಿರುವ ವಿಡಿಯೋದಲ್ಲಿ ಆಂಧ್ರಪ್ರದೇಶದಲ್ಲಿ ಪುರುಷನು ತನ್ನ ಗರ್ಭಿಣಿ ಹೆಂಡತಿಯನ್ನು ಆಸ್ಪತ್ರೆಗೆ ಕರೆದೊಯ್ಯಲು ತುಂಬಿ ಹರಿಯುವ ನಾಲೆಯ ಮೇಲೆ ನಡೆಯುತ್ತಿದ್ದಾನೆ. ತುಂಬು ಗರ್ಭಿಣಿಯನ್ನು ಆ ರೀತಿ ನದಿಯಲ್ಲಿ ಹೊತ್ತುಕೊಂಡು ಹೋಗುವುದು ಅಪಾಯಕಾರಿ ಎಂಬುದು ಗೊತ್ತಿದ್ದರೂ ಆಕೆಯನ್ನು ಆಸ್ಪತ್ರೆಗೆ ಸೇರಿಸದಿದ್ದರೆ ಹೆರಿಗೆಗೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಆಕೆಯ ಗಂಡ ಈ ಸಾಹಸಕ್ಕೆ ಕೈ ಹಾಕಿದ್ದಾನೆ.

ಮಹಾರಾಷ್ಟ್ರದಲ್ಲಿ 11,200 ಕೋಟಿ ರೂ.ಗಳ ಯೋಜನೆಗಳಿಗೆ ಪ್ರಧಾನಿ ಮೋದಿ ನಾಳೆ ಚಾಲನೆ

ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ (ಸೆಪ್ಟೆಂಬರ್ 29) ಮಹಾರಾಷ್ಟ್ರದಲ್ಲಿ ಜಿಲ್ಲಾ ನ್ಯಾಯಾಲಯದಿಂದ ಸ್ವರ್ಗೇಟ್​ವರೆಗಿನ ಪುಣೆ ಮೆಟ್ರೋ ವಿಭಾಗ ಸೇರಿದಂತೆ 11,200 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಯೋಜನೆಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ.

‘ಯೋಗಿ ಸಾಹಬ್ ರಾಮ್ ರಾಮ್’ ಅಂದ್ರು ಮೌಲ್ವಿ’: ಜಮ್ಮು ಮತ್ತು ಕಾಶ್ಮೀರದ ಭೇಟಿ ನೆನಪಿಸಿಕೊಂಡ ಆದಿತ್ಯನಾಥ್

"ನಾನು ಕಳೆದ ಎರಡು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಗೆ ಇದ್ದೆ. ಅಲ್ಲಿ ಮಳೆಯಾಗುತ್ತಿದೆ, ಆದ್ದರಿಂದ ನಾನು ನೇರವಾಗಿ ವಿಮಾನ ನಿಲ್ದಾಣದ ಒಳಗೆ ಹೋದೆ. ಒಬ್ಬ ವ್ಯಕ್ತಿ 'ಯೋಗಿ ಸಾಹಬ್ ರಾಮ್ ರಾಮ್' ಎಂದು ನನ್ನನ್ನು ಸ್ವಾಗತಿಸಿದರು. ನಂತರ, ಅವರು ಮೌಲ್ವಿ ಎಂದು ನಾನು ಅರಿತುಕೊಂಡೆ, ಮೌಲ್ವಿ 'ರಾಮ್ ರಾಮ್' ಎಂದು ಹೇಳಿದ್ದು ನನಗೆ ಆಶ್ಚರ್ಯವಾಯಿತು" ಎಂದು ಆದಿತ್ಯನಾಥ್ ಹೇಳಿದರು.

ಅಯೋಧ್ಯೆ ರಾಮಮಂದಿರ ಉದ್ಘಾಟನೆ ವೇಳೆ ಹಾಡು-ನೃತ್ಯ; ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ಆಕ್ರೋಶ

ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆ ಕುರಿತು ರಾಹುಲ್ ಗಾಂಧಿಯವರ ಹೇಳಿಕೆಗಳು ಬಿಜೆಪಿಯ ಆಕ್ರೋಶಕ್ಕೆ ಕಾರಣವಾಯಿತು. ಈ ಸಮಾರಂಭದಲ್ಲಿ ಸಾಮಾನ್ಯ ಕಾರ್ಮಿಕರು ಮತ್ತು ರೈತರ ಗೈರುಹಾಜರಿಯನ್ನು ಎತ್ತಿ ಹಿಡಿದ ರಾಹುಲ್ ಗಾಂಧಿ ಲೇವಡಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ 'ಭಗವಾನ್ ರಾಮನ ವಿರೋಧಿ' ಪಕ್ಷ ಎಂದು ಬಿಜೆಪಿ ಆರೋಪಿಸಿದೆ.

ಜಮ್ಮು ಕಾಶ್ಮೀರದಲ್ಲಿ ಬಿಜೆಪಿಗೆ ಪೂರ್ಣ ಬಹುಮತ ಖಚಿತ; ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ಮೋದಿ ವಿಶ್ವಾಸ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣಾ ರ್ಯಾಲಿ ನಡೆಸಿದರು. ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಪೂರ್ಣ ಬಹುಮತದೊಂದಿಗೆ ಬಿಜೆಪಿ ಸರ್ಕಾರವು ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ 3.0 ಸರ್ಕಾರಕ್ಕೆ 100 ದಿನ; ಆರೋಗ್ಯ, ಉದ್ಯೋಗ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲು

ನರೇಂದ್ರ ಮೋದಿ ಸರ್ಕಾರವು ತನ್ನ ಮೂರನೇ ಅವಧಿಯನ್ನು ಪ್ರಾರಂಭಿಸಿ 100 ದಿನಗಳು ಕಳೆದಿವೆ. ಭಾರತದ ಅಭಿವೃದ್ಧಿಗಾಗಿ ಈ 100 ದಿನಗಳಲ್ಲಿ 15 ಲಕ್ಷ ಕೋಟಿ ರೂ. ಮೌಲ್ಯದ ಹೂಡಿಕೆಯನ್ನು ಈಗಾಗಲೇ ಮಾಡಲಾಗಿದೆ. ಇದುವರೆಗೂ ಮೋದಿ ಸರ್ಕಾರ ಮಹತ್ವದ ನೀತಿ ಬದಲಾವಣೆಗಳನ್ನು ಮಾಡಿದೆ. ಭಾರತದ ಕೈಗಾರಿಕಾ ಮತ್ತು ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಲು ವಿವಿಧ ಯೋಜನೆಗಳನ್ನು ಪರಿಚಯಿಸಿದೆ.

ಕುಲ್ಗಾಮ್: ಭಯೋತ್ಪಾದಕರ ಎನ್‌ಕೌಂಟರ್‌ ವೇಳೆ 4 ಭದ್ರತಾ ಸಿಬ್ಬಂದಿ, ಪೊಲೀಸ್ ಅಧಿಕಾರಿಗೆ ಗಾಯ

ಭದ್ರತಾ ಪಡೆಗಳು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಜಿಲ್ಲೆಯ ದೇವಸರ್ ಪ್ರದೇಶದ ಅಡಿಗಮ್ ಗ್ರಾಮದಲ್ಲಿ ಎನ್‌ಕೌಂಟರ್ ನಡೆಯಿತು. ಎನ್‌ಕೌಂಟರ್ ಸ್ಥಳದ ಬಳಿ ಹೆಚ್ಚುವರಿ ಪೊಲೀಸ್ ಸೂಪರಿಂಟೆಂಡೆಂಟ್ (ಟ್ರಾಫಿಕ್) ಮುಮ್ತಾಜ್ ಅಲಿ ಅವರಿಗೆ ಬುಲೆಟ್ ತಾಗಿ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಮಿಳುನಾಡು: ಹೊಸೂರಿನ ಟಾಟಾ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಘಟಕದಲ್ಲಿ ಭಾರೀ ಅಗ್ನಿ ಅವಘಡ

ನಾಗಮಂಗಲ ಸಮೀಪದ ಉದ್ದಾನಪಲ್ಲಿಯಲ್ಲಿರುವ ಕಂಪನಿಯ ಮೊಬೈಲ್ ಫೋನ್ ಆಕ್ಸೆಸರೀಸ್ ಪೇಂಟಿಂಗ್ ಘಟಕದಲ್ಲಿ ಬೆಳಗ್ಗೆ 5:30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಅಲ್ಲಿ ದಟ್ಟ ಹೊಗೆ ಆವರಿಸಿದ್ದು, ಕಾರ್ಮಿಕರು ಹಾಗೂ ಸ್ಥಳೀಯ ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಸ್ಥಳದಿಂದ ನೌಕರರನ್ನು ಸ್ಥಳಾಂತರಿಸಲು ಹಲವಾರು ಅಗ್ನಿಶಾಮಕ ವಾಹನಗಳನ್ನು ಕಳುಹಿಸಲಾಗಿದೆ ಮತ್ತು ಇದುವರೆಗೆ ಯಾವುದೇ ಗಾಯಗಳು ವರದಿಯಾಗಿಲ್ಲ

ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಭಾರತ ಪ್ರತಿನಿಧಿ

ಕಾಶ್ಮೀರ ವಿಚಾರವನ್ನು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 79ನೇ ಅಧಿವೇಶನದಲ್ಲಿ ಪ್ರಸ್ತಾಪಿಸಿ ಭಾರತಕ್ಕೆ ಮುಜುಗರ ಉಂಟುಮಾಡಲು ಯತ್ನಿಸಿದ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್​ಗೆ ವಿಶ್ವಸಂಸ್ಥೆಯಲ್ಲಿ ಭಾರತದ ಪರ್ಮನೆಂಟ್​ ಮಿಷನ್​​ನ ಮೊದಲ ಕಾರ್ಯದರ್ಶಿ ಭಾವಿಕಾ ಮಂಗಳಾನಂದನ್ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ನೀಡಿದ್ದಾರೆ. ಅಷ್ಟೇ ಅಲ್ಲದೆ, ಪಾಕ್​ನ ದುಷ್ಕೃತ್ಯಗಳ ಉದಾಹರಣೆ ನೀಡಿ ಹಿಗ್ಗಾಮುಗ್ಗಾ ತರಾಟೆಗೆ ತೆಗದುಕೊಂಡಿದ್ದಾರೆ. ಆ ಕುರಿತ ವಿಡಿಯೋ ಸಹಿತ ವರದಿ ಇಲ್ಲಿದೆ.

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ