AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

National News

National News

ರಾಷ್ಟ್ರೀಯ ಸುದ್ದಿಗಳನ್ನು ಸಮಗ್ರ ಚಿತ್ರಣ  ಇಲ್ಲಿ ಸಿಗುತ್ತೇ. ರಾಷ್ಟ್ರೀಯ ಮಟ್ಟದಲ್ಲಿ ನಡೆದ ಸುದ್ದಿಗಳನ್ನು ಇಲ್ಲಿ ತಿಳಿಸಲಾಗುತ್ತದೆ.  ರಾಜಕೀಯವಾಗಿ, ಸಾಮಾಜಿಕ, ಹಾಗೂ ದೇಶದ ಬೇರೆ ಬೇರೆ ಊರಿನಲ್ಲಿ ನಡೆದ ಘಟನೆಗಳನ್ನು, ಸುದ್ದಿಗಳನ್ನು ಇಲ್ಲಿ ತಿಳಿಸಲಾಗುವುದು. ದೇಶದ ವಿವಿಧ ರಾಜ್ಯಗಳಲ್ಲಿ ನಡೆಯುವ ಸಂಗತಿಗಳನ್ನು ಹಾಗೂ ಸುದ್ದಿಗಳನ್ನು ತಕ್ಷಣದಲ್ಲಿ ನೀಡಲಾಗುವುದು. 

ಬಿಹಾರದ ಕತಿಹಾರ್‌ನಲ್ಲಿ ಹಲವು ವಾಹನಗಳ ನಡುವೆ ಡಿಕ್ಕಿ; 10 ಜನ ಸಾವು, 25 ಮಂದಿಗೆ ಗಾಯ

ಬಿಹಾರದ ಕತಿಹಾರ್‌ನಲ್ಲಿ ಬಸ್ ಪಿಕಪ್ ವ್ಯಾನ್‌ಗೆ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ಇಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಈ ದುರಂತ ಸಂಭವಿಸಿದೆ. ದತ್ಪುರ್ ಮುಶಾರಿ ಚೌಕ್ ಬಳಿಯ ಬಾಸ್ಗಡಾ ಚೌಕ್ ಬಳಿಯ ರಾಷ್ಟ್ರೀಯ ಹೆದ್ದಾರಿ-31ರಲ್ಲಿ ಬಸ್ ಮತ್ತು ಪಿಕಪ್ ವ್ಯಾನ್ ನಡುವೆ ಈ ಡಿಕ್ಕಿ ಸಂಭವಿಸಿದೆ.

ಕದನವಿರಾಮದ ಬಳಿಕ ಯಶಸ್ವಿಯಾಗಿ ಹಾರ್ಮುಜ್ ಜಲಸಂಧಿ ದಾಟಿದ ಭಾರತದ ಎಲ್‌ಪಿಜಿ ಟ್ಯಾಂಕರ್ ಜಗವಿಕ್ರಮ್

ಅಮೆರಿಕ ಮತ್ತು ಇರಾನ್ ನಡುವಿನ ಕದನವಿರಾಮದ ಬಳಿಕ ಭಾರತದ ಎಲ್​ಪಿಜಿ ಟ್ಯಾಂಕರ್ ಯಶಸ್ವಿಯಾಗಿ ಹಾರ್ಮುಜ್ ಜಲಸಂಧಿಯನ್ನು ದಾಟಿದೆ. ಈ ಹಡಗು ಏಪ್ರಿಲ್ 15ರಂದು ಮುಂಬೈ ತಲುಪುವ ನಿರೀಕ್ಷೆಯಿದೆ. ಎಲ್‌ಪಿಜಿ ವಾಹಕ ಜಗ ವಿಕ್ರಮ್ ಹಾರ್ಮುಜ್ ಜಲಸಂಧಿಯನ್ನು ದಾಟಿದ್ದು, ಬುಧವಾರ ಅಮೆರಿಕ-ಇರಾನ್ ಕದನ ವಿರಾಮ ಜಾರಿಗೆ ಬಂದ ನಂತರ ಈ ಸಾಧನೆ ಮಾಡಿದ ಮೊದಲ ಭಾರತ ಧ್ವಜ ಹೊತ್ತ ಹಡಗು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಮೋದಿಯಿಂದ ಹೊಸ ಪ್ರಯೋಗ; ಬಂಗಾಳ ರ‍್ಯಾಲಿ ವೇಳೆ ವ್ಲಾಗರ್ ಆದ ಪ್ರಧಾನಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ದಿನಗಣನೆ ಶುರುವಾಗಿದೆ. ಚುನಾವಣಾ ರ‍್ಯಾಲಿಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ವ್ಲಾಗರ್ ಆಗಿದ್ದಾರೆ. ಈ ಮೂಲಕ ಪ್ರಧಾನಿ ಮೋದಿ ಹೊಸ ಪ್ರಯೋಗ ನಡೆಸಿದ್ದಾರೆ. ಇದೇ ಮೊದಲ ಬಾರಿಗೆ ತಾವೇ ಕ್ಯಾಮೆರಾದ ಎದುರು ನಿಂತು ಪ್ರಧಾನಿ ಮೋದಿ ತಮ್ಮ ಹಿಂದೆ ಸೇರಿದ್ದ ಜನಸಾಗರವನ್ನು ಪರಿಚಯಿಸುವ ಮೂಲಕ ಪಶ್ಚಿಮ ಬಂಗಾಳದ ಚುನಾವಣಾ ಅಖಾಡದ ಬಗ್ಗೆ ಮಾಹಿತಿ ನೀಡಿದ್ದಾರೆ. ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಬಂಗಾಳದ ಸಿಲಿಗುರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ; ಜನರಿಂದ ಜೈ ಶ್ರೀರಾಮ್ ಘೋಷಣೆ

ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದಾರೆ. ಇದಕ್ಕೂ ಮೊದಲು ಅವರು ರೋಡ್ ಶೋ ನಡೆಸಿದರು. ಪ್ರಧಾನ ಮಂತ್ರಿಯನ್ನು ನೋಡಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರಿಂದ ಸಿಲಿಗುರಿಯ ಬೀದಿಗಳು ತುಂಬಿ ತುಳುಕುತ್ತಿದ್ದವು. ಅಲ್ಲಿ ಸೇರಿದ್ದ ಜನರು ಜೈ ಶ್ರೀರಾಮ್ ಎಂದು ಘೋಷಣೆ ಕೂಗುತ್ತಾ, ಕೇಸರಿ ಬಾವುಟಗಳನ್ನು ಹಾರಿಸುತ್ತಾ ಪ್ರಧಾನಿ ಮೋದಿಯನ್ನು ಸ್ವಾಗತಿಸಿದರು. 

ಟೋಲ್ ಗೇಟ್ ದಾಟುವಾಗ ಕಾರಿನ ಮೇಲೆ ಬಿದ್ದ ಸಿಮೆಂಟ್ ಟ್ಯಾಂಕರ್; ವಿಡಿಯೋ ಇಲ್ಲಿದೆ

ಆಂಧ್ರದ ಎನ್‌ಟಿಆರ್ ಜಿಲ್ಲೆಯ ಕೀಸರಾ ಟೋಲ್ ಗೇಟ್‌ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸಮೀಪದಲ್ಲಿ ಚಲಿಸುತ್ತಿದ್ದ ಸಿಮೆಂಟ್ ಟ್ಯಾಂಕರ್ ಟೋಲ್ ಗೇಟ್ ದಾಟುವಾಗ ನಿಯಂತ್ರಣ ತಪ್ಪಿ ಸಮೀಪದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದಿತು. ಭಾರೀ ಲಾರಿ ಕಾರಿಗೆ ಡಿಕ್ಕಿ ಹೊಡೆದು ಸಂಪೂರ್ಣವಾಗಿ ನಜ್ಜುಗುಜ್ಜಾಯಿತು. ಅಪಘಾತವನ್ನು ಗಮನಿಸಿದ ಟೋಲ್ ಸಿಬ್ಬಂದಿ ತಕ್ಷಣ ಎಚ್ಚೆತ್ತುಕೊಂಡರು. ಅವರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು. ಮಾಹಿತಿ ಪಡೆದ ನಂತರ, ಪೊಲೀಸರು ಜೆಸಿಬಿ ಸಹಾಯದಿಂದ ಟ್ಯಾಂಕರ್ ಅನ್ನು ಕಾರಿನಿಂದ ತೆಗೆದುಹಾಕಲು ಪ್ರಯತ್ನಿಸಿದರು.

ಬಂಗಾಳಿಗಳನ್ನು ಅಲ್ಪಸಂಖ್ಯಾತರಾಗಲು ಬಿಡುವುದಿಲ್ಲ; ಚುನಾವಣಾ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ ಭರವಸೆ

ಟಿಎಂಸಿಯ ಲೂಟಿ, ಸುಳ್ಳಿನ ರಾಜಕೀಯ ಹಾಗೂ ಅದರ ಭಯದ ಆಳ್ವಿಕೆ ಶೀಘ್ರದಲ್ಲೇ ಕೊನೆಗೊಳ್ಳಲಿದೆ ಎಂದು ಪಶ್ಚಿಮ ಬಂಗಾಳದ ದಕ್ಷಿಣ ದಿನಾಜ್‌ಪುರದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಬಂಗಾಳದಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರುವುದಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಭರವಸೆ ನೀಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಎಲ್ಲ ಪಕ್ಷಗಳ ಚುನಾವಣಾ ಪ್ರಚಾರ ಬಿರುಸಿನಿಂದ ಸಾಗಿದೆ.

ನಮಸ್ತೆ, ಮುಗುಳ್ನಗು, ಉಭಯಕುಶಲೋಪರಿ; ರಾಹುಲ್ ಗಾಂಧಿ ಜೊತೆ ಪ್ರಧಾನಿ ಮೋದಿಯ ಅಪರೂಪದ ಕ್ಷಣ

ಸಂಸತ್ತಿನ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರಿನಿಂದ ಇಳಿದು ಬಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಮಾತುಕತೆ ನಡೆಸಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಕಾರಿನಿಂದ ಇಳಿದು ಬಂದವರೇ ಕೈ ಮುಗಿದು ನಮಸ್ಕರಿಸುತ್ತಾ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಕೆಲ ಸಮಯ ಆಪ್ತ ಮಾತುಕತೆ ನಡೆಸಿದ್ದಾರೆ. ಈ ವೇಳೆ ಇಬ್ಬರೂ ನಾಯಕರು ಸೌಹಾರ್ದಯುತ ರೀತಿಯಲ್ಲಿ ಮಾತನಾಡುತ್ತಾ ನಿಂತಿರುವ ವಿಡಿಯೋ ವೈರಲ್ ಆಗಿದೆ.

ಅಮರನಾಥ ಯಾತ್ರೆಗೆ ಹೋಗಬೇಕಾ? ಏಪ್ರಿಲ್ 15ರಿಂದ ನೋಂದಣಿ ಆರಂಭ

2026ರ ಅಮರನಾಥ ಯಾತ್ರೆಗೆ ಏಪ್ರಿಲ್ 15ರಿಂದ ದೇಶಾದ್ಯಂತ ನೋಂದಣಿ ಪ್ರಾರಂಭವಾಗುತ್ತದೆ. ವಾರ್ಷಿಕ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಏಪ್ರಿಲ್ 15ರಂದು ಭಾರತದಾದ್ಯಂತ 554 ನಿಗದಿಪಡಿಸಿದ ಬ್ಯಾಂಕ್ ಶಾಖೆಗಳಲ್ಲಿ ಪ್ರಾರಂಭವಾಗುತ್ತದೆ. ನೋಂದಣಿ ವೇಳೆ ಮೊದಲು ಬಂದವರಿಗೆ ಆದ್ಯತೆ ನೀಡಲಾಗುತ್ತದೆ. ಆಧಾರ್ ಆಧಾರಿತ ಬಯೋಮೆಟ್ರಿಕ್ ದೃಢೀಕರಣವನ್ನು ಬಳಸಲಾಗುತ್ತದೆ. ಲೈಸೆನ್ಸ್​​ಗಳನ್ನು ಆನ್‌ಲೈನ್‌ನಲ್ಲಿ ನೀಡಲಾಗುತ್ತದೆ.

ಐಎಸ್​ಐ ಜೊತೆ ನಂಟು; ದೆಹಲಿ, ಪಂಜಾಬ್​ನಲ್ಲಿ 11 ಗೂಢಚಾರರ ಬಂಧನ

ದೆಹಲಿ ಪೊಲೀಸರು ದೆಹಲಿ ಮತ್ತು ಪಂಜಾಬ್‌ನಲ್ಲಿ ಐಎಸ್‌ಐ ಜೊತೆ ಸಂಪರ್ಕ ಹೊಂದಿರುವ ಗೂಢಚಾರ ಜಾಲವನ್ನು ಭೇದಿಸಿ, 11 ಜನರನ್ನು ಬಂಧಿಸಿದ್ದಾರೆ. ಇದರಿಂದ ಭಾರೀ ದುರಂತವೊಂದು ತಪ್ಪಿದಂತಾಗಿದೆ. ದೆಹಲಿ ಪೊಲೀಸರ ವಿಶೇಷ ದಳವು ಶುಕ್ರವಾರ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಮತ್ತು ಬಬ್ಬರ್ ಖಾಲ್ಸಾ ಇಂಟರ್‌ನ್ಯಾಷನಲ್ (ಬಿಕೆಐ) ಜೊತೆ ನಂಟು ಹೊಂದಿದ್ದ ಭಯೋತ್ಪಾದನಾ ಮಾಡ್ಯೂಲ್ ಅನ್ನು ಭೇದಿಸಿದ್ದು, ಪಂಜಾಬ್ ಮತ್ತು ದೆಹಲಿಯಲ್ಲಿ 11 ಶಂಕಿತರನ್ನು ಬಂಧಿಸಿದೆ.

ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು

ಉತ್ತರ ಪ್ರದೇಶದ ವೃಂದಾವನದ ಯಮುನಾ ನದಿಯಲ್ಲಿ ದೋಣಿ ಮುಳುಗಿ 10 ಮಂದಿ ಸಾವನ್ನಪ್ಪಿದ್ದಾರೆ. ಡಜನ್ಗಟ್ಟಲೆ ಜನರು ನಾಪತ್ತೆಯಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ವೃಂದಾವನದ ಯಮುನಾ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 10 ಜನರು ಸಾವನ್ನಪ್ಪಿದ್ದು, ಬೋಟ್​​ನಲ್ಲಿ ಸುಮಾರು 25 ಜನರಿದ್ದರು. ಶೃಂಗಾರ್ ಘಾಟ್ ಬಳಿ ನಡೆದ ಈ ಅಪಘಾತದಲ್ಲಿ ಹಲವಾರು ಜನರು ಮುಳುಗಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.

ತೆಲಂಗಾಣ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; 1 ಕೋಟಿ ಗಿಳಿ ಹಸಿರು ಸೀರೆ ಆರ್ಡರ್ ಮಾಡಿದ ಸಿಎಂ

ಉಚಿತ ಸೀರೆ ವಿತರಣಾ ಯೋಜನೆಗೆ ಸಂಬಂಧಿಸಿದಂತೆ ತೆಲಂಗಾಣ ಸರ್ಕಾರ ಪ್ರಮುಖ ನಿರ್ಧಾರ ತೆಗೆದುಕೊಂಡಿದೆ. ಈ ವರ್ಷವೂ ಮಹಿಳೆಯರಿಗೆ ಉಚಿತ ಸೀರೆ ವಿತರಣೆಯನ್ನು ಮುಂದುವರಿಸಲು ಸರ್ಕಾರ ನಿರ್ಧರಿಸಿದೆ. ಆದರೆ, ಈ ಬಾರಿ ಸಿಎಂ ರೇವಂತ್ ರೆಡ್ಡಿ ಗಿಳಿ ಹಸಿರು ಮತ್ತು ಕೆಂಪು ಬಾರ್ಡರ್ ಇರುವ ಸೀರೆಗಳನ್ನು ನೀಡಲು ನಿರ್ಧರಿಸಿದ್ದಾರೆ. ಮಹಿಳೆಯರಿಗೆ ನೀಡುವ ಎಲ್ಲಾ ಸೀರೆಗಳು ಒಂದೇ ವಿನ್ಯಾಸದಲ್ಲಿರಬೇಕು ಎಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವನತಾರಾದಿಂದ ವಿಶ್ವದ ಮೊದಲ ಜಾಗತಿಕ ವನ್ಯಜೀವಿ ಮತ್ತು ಪಶುವೈದ್ಯಕೀಯ ವಿಶ್ವವಿದ್ಯಾಲಯ

Jamnagar's Vanantara University: Anant Ambani's Vision for Global Wildlife Conservation: ಅನಂತ್ ಅಂಬಾನಿ ಸಂಸ್ಥಾಪನೆಯ ವನತಾರಾ ಸಂಸ್ಥೆಯು ವಿಶ್ವದ ಮೊದಲ ಗ್ಲೋಬಲ್ ವೈಲ್ಡ್​ಲೈಫ್ ಮತ್ತು ವೆಟರ್ನರಿ ಸೈನ್ಸ್ ಯೂನಿವರ್ಸಿಟಿಯನ್ನು ಆರಂಭಿಸಿದ್ದಾರೆ. ಆಧುನಿಕ ಗುರುಕುಲ ಮತ್ತು ಉದ್ದೇಶ-ಆಧಾರಿತ ವಿಶ್ವವಿದ್ಯಾಲಯವಾಗಿ ಕಲ್ಪಿಸಲಾಗಿರುವ ಈ ವಿಶ್ವವಿದ್ಯಾಲಯವು ಭಾರತವನ್ನು ವನ್ಯಜೀವಿ ಮತ್ತು ಪಶುವೈದ್ಯಕೀಯ ಶಿಕ್ಷಣಕ್ಕಾಗಿ ಜಾಗತಿಕ ಕೇಂದ್ರವಾಗಿ ಇರಿಸುವ ಗುರಿಯನ್ನು ಹೊಂದಿದೆ.