National News

National News

ರಾಷ್ಟ್ರೀಯ ಸುದ್ದಿಗಳನ್ನು ಸಮಗ್ರ ಚಿತ್ರಣ  ಇಲ್ಲಿ ಸಿಗುತ್ತೇ. ರಾಷ್ಟ್ರೀಯ ಮಟ್ಟದಲ್ಲಿ ನಡೆದ ಸುದ್ದಿಗಳನ್ನು ಇಲ್ಲಿ ತಿಳಿಸಲಾಗುತ್ತದೆ.  ರಾಜಕೀಯವಾಗಿ, ಸಾಮಾಜಿಕ, ಹಾಗೂ ದೇಶದ ಬೇರೆ ಬೇರೆ ಊರಿನಲ್ಲಿ ನಡೆದ ಘಟನೆಗಳನ್ನು, ಸುದ್ದಿಗಳನ್ನು ಇಲ್ಲಿ ತಿಳಿಸಲಾಗುವುದು. ದೇಶದ ವಿವಿಧ ರಾಜ್ಯಗಳಲ್ಲಿ ನಡೆಯುವ ಸಂಗತಿಗಳನ್ನು ಹಾಗೂ ಸುದ್ದಿಗಳನ್ನು ತಕ್ಷಣದಲ್ಲಿ ನೀಡಲಾಗುವುದು. 

ಎಲೆಕ್ಟ್ರಿಕ್ ಬಸ್, ಸೈಕ್ಲಿಂಗ್ ಟ್ರ್ಯಾಕ್, ವಾಕಿಂಗ್… ಹೇಗಿದೆ ನೋಡಿ ಕೇಂದ್ರದ ಅರ್ಬನ್ ಮೊಬಿಲಿಟಿ ಮಿಷನ್

Urban mobility mission: ನಗರ ಭಾಗದಲ್ಲಿ ಸಂಚಾರ ವ್ಯವಸ್ಥೆಯನ್ನು ಸುಧಾರಿಸಲು ಕೇಂದ್ರ ಸರ್ಕಾರ ಅರ್ಬನ್ ಮೊಬಿಲಿಟಿ ಮಿಷನ್ ಅನ್ನು ಮುಂದಿನವ ವರ್ಷ ಜಾರಿಗೊಳಿಸುತ್ತಿದೆ. ಇದರಲ್ಲಿ ಮೆಗಾಬಸ್ ಮಿಷನ್ ಇತ್ಯಾದಿ ವಿವಿಧ ಉಪಕ್ರಮಗಳೂ ಇವೆ. 10 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಇರುವ ನಗರಗಳಲ್ಲಿ ಎಲೆಕ್ಟ್ರಿಕ್ ಬಸ್ಸುಗಳ ಸಂಚಾರ ಹೆಚ್ಚಿಸುವುದು, ವಿವಿಧೆಡೆ ಪ್ರತ್ಯೇಕ ಸೈಕ್ಲಿಂಗ್ ಟ್ರ್ಯಾಕ್, ವಾಕಿಂಗ್ ಪಾತ್​​ಗಳನ್ನು ನಿರ್ಮಿಸುವುದು ಇವೇ ಮುಂತಾದ ಕಾರ್ಯಗಳು ಈ ಯೋಜನೆಯಲ್ಲಿವೆ.

ಎಂಟು ವರ್ಷದಲ್ಲಿ ಆರು ಲಕ್ಷಕ್ಕೂ ಹೆಚ್ಚು ಗ್ರಾಮಗಳ ಭೂದಾಖಲೆಗಳ ಡಿಜಿಟೀಕರಣವಾಗಿದೆ: ಗ್ರಾಮೀಣಾಭಿವೃದ್ಧಿ ಸಚಿವ

Digitization of land records: 2016ರ ಏಪ್ರಿಲ್​ನಲ್ಲಿ ಆರಂಭವಾದ ಡಿಜಿಟಲ್ ಇಂಡಿಯಾ ಲ್ಯಾಂಡ್ ರೆಕಾರ್ಡ್ಸ್ ಮಾಡರ್ನೈಸೇಶನ್ ಪ್ರೋಗ್ರಾಮ್ ಅಡಿಯಲ್ಲಿ ಈವರೆಗೂ 6,26,000 ಗ್ರಾಮಗಳ ಭೂದಾಖಲೆಗಳನ್ನು ಡಿಜಿಟೈಸ್ ಮಾಡಲಾಗಿದೆ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮಾಹಿತಿ ನೀಡಿದ್ದಾರೆ. ಭೂವ್ಯಾಜ್ಯಗಳಿಂದಾಗಿ ಬಹಳಷ್ಟು ಯೋಜನೆಗಳು ಸ್ಥಗಿತಗೊಂಡಿದ್ದು ಅದರಿಂದ ಆರ್ಥಿಕ ನಷ್ಟ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಸುಧಾರಣಾ ಕ್ರಮವನ್ನು ಜಾರಿಗೊಳಿಸಿದೆ.

ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ

ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ರಷ್ಯಾದ ಕಜಾನ್ ನಗರಕ್ಕೆ ತೆರಳಿದ್ದಾರೆ. ಕಜಾನ್‌ನಲ್ಲಿ ಪ್ರಧಾನಿ ಮೋದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಪ್ರಧಾನಿ ಮೋದಿಯವರು ಆಗಮಿಸುತ್ತಿದ್ದಂತೆ ರಷ್ಯಾದ ನಾಗರಿಕರು ಕೃಷ್ಣ ಭಜನೆಗಳನ್ನು ಹಾಡಿದರು ಮತ್ತು ಭಾರತೀಯ ನೃತ್ಯವನ್ನೂ ಪ್ರದರ್ಶಿಸಿದರು. ಈ ಸಂದರ್ಭದಲ್ಲಿ ಭಾರತೀಯ ವಲಸಿಗರು ಕೂಡ ಪ್ರಧಾನಿ ಮೋದಿ ಅವರನ್ನು ಭೇಟಿಯಾದರು.

ಲಾರೆನ್ಸ್ ಬಿಷ್ಣೋಯ್ ಹತ್ಯೆ ಮಾಡುವ ಅಧಿಕಾರಿಗೆ 1,11,11,111 ರೂ. ಬಹುಮಾನ; ಕರ್ಣಿ ಸೇನೆ ಘೋಷಣೆ

ಕಳೆದ ವರ್ಷ ಕರ್ಣಿ ಸೇನಾ ಗುಂಪಿನ ಮಾಜಿ ಮುಖ್ಯಸ್ಥ ಸುಖದೇವ್ ಸಿಂಗ್ ಗೊಗಮೆಡಿ ಹತ್ಯೆಯಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಭಾಗಿಯಾಗಿದ್ದರಿಂದ ಲಾರೆನ್ಸ್ ಬಿಷ್ಣೋಯ್ ಅವರನ್ನು ಕೊಲ್ಲುವ ಪೊಲೀಸ್ ಅಧಿಕಾರಿಗೆ ಕರ್ಣಿ ಸೇನಾ ಮುಖ್ಯಸ್ಥರು 1.11 ಕೋಟಿ ರೂ. ಬಹುಮಾನ ಘೋಷಿಸಿದ್ದಾರೆ.

ದೇವಸ್ಥಾನದ ಲೌಡ್​ಸ್ಪೀಕರ್​ ಕುರಿತು ಐಎಎಸ್ ಅಧಿಕಾರಿ ಶೈಲಬಾಲಾ ವಿವಾದಾತ್ಮಕ ಹೇಳಿಕೆ

ಶೈಲಬಾಲಾ ಮಧ್ಯಪ್ರದೇಶ ಕೇಡರ್‌ನ 2009ನೇ ಬ್ಯಾಚ್‌ನ ಐಎಎಸ್ ಅಧಿಕಾರಿ. ಪ್ರಸ್ತುತ ಅವರು ಸಾರ್ವಜನಿಕ ಆಡಳಿತ ಇಲಾಖೆಯಲ್ಲಿ ಅಂದರೆ ಸಾಮಾನ್ಯ ಆಡಳಿತ ಇಲಾಖೆಯಲ್ಲಿ (GAD) ಹೆಚ್ಚುವರಿ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಈ ವರ್ಷದ ಅಂತ್ಯದಲ್ಲಿ ಮುಂಬೈ ದಾಳಿ ಆರೋಪಿ ತಹವ್ವುರ್​ ರಾಣಾ ಅಮೆರಿಕದಿಂದ ಭಾರತಕ್ಕೆ ಹಸ್ತಾಂತರ ಸಾಧ್ಯತೆ

26/11 ಮುಂಬೈ ದಾಳಿ ಆರೋಪಿ ತಹವ್ವುರ್ ರಾಣಾನನ್ನು ಈ ವರ್ಷದ ಅಂತ್ಯಕ್ಕೆ ಭಾರತಕ್ಕೆ ಹಸ್ತಾಂತರಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕೆನಡಾ-ಪಾಕಿಸ್ತಾನಿ ಪ್ರಜೆ ತಹವ್ವುರ್ ರಾಣಾನನ್ನು ಅಮೆರಿಕ ಹಸ್ತಾಂತರಿಸಬಹುದು. ಇಂಡಿಯನ್ ಎಕ್ಸ್​ಪ್ರೆಸ್​ ಈ ಕುರಿತು ವರದಿ ಮಾಡಿದೆ. ಡಿಸೆಂಬರ್ ತಿಂಗಳಿನಲ್ಲಿ ರಾಣಾ ಅವರನ್ನು ಹಸ್ತಾಂತರಿಸಬಹುದು ಎನ್ನಲಾಗುತ್ತಿದೆ.

ಎಲ್​ಎಸಿ ಬಳಿ ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಭಾರತೀಯ ಸೇನಾ ಮುಖ್ಯಸ್ಥರು ಹೇಳಿದ್ದೇನು?

ಭಾರತ ಮತ್ತು ಚೀನಾ ತಮ್ಮ ಸೈನ್ಯವನ್ನು ಹಿಂತೆಗೆದುಕೊಳ್ಳಲು ಮತ್ತು ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಗಸ್ತು ತಿರುಗಲು ಹೊಸ ಒಪ್ಪಂದವನ್ನು ಮಾಡಿಕೊಂಡಿವೆ. ಈ ಬಗ್ಗೆ ಭಾರತೀಯ ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ ಮಾತನಾಡಿದ್ದು, 2020ರಲ್ಲಿ ಗಾಲ್ವಾನ್ ಕಣಿವೆ ಘರ್ಷಣೆಗೆ ಮುನ್ನ ಪೂರ್ವ ಲಡಾಖ್‌ನಲ್ಲಿ ನೈಜ ನಿಯಂತ್ರಣ ರೇಖೆ (ಎಲ್‌ಎಸಿ) ಉದ್ದಕ್ಕೂ ಗಸ್ತು ವ್ಯವಸ್ಥೆಯನ್ನು ಪುನಃಸ್ಥಾಪಿಸಲು ಪರಸ್ಪರ ಒಪ್ಪಿಗೆ ಇದೆ. ಉಭಯ ದೇಶಗಳ ನಡುವೆ ಗಡಿಯಲ್ಲಿ ಶಾಂತಿ ಇಲ್ಲದಿದ್ದರೆ ದ್ವಿಪಕ್ಷೀಯ ಸಂಬಂಧ ಹೇಗೆ ಸುಧಾರಿಸುತ್ತದೆ ಎಂದರು.

ಮುಂಬೈ ಬೆಂಗಳೂರು ವಿಮಾನ ಸೇರಿ ಮತ್ತೆ ಹಲವು ವಿಮಾನಗಳಿಗೆ ಬಾಂಬ್ ಬೆದರಿಕೆ

ದೇಶಾದ್ಯಂತ ವಿವಿಧ ವಿಮಾನಯಾನ ಸಂಸ್ಥೆಗಳ ವಿಮಾನಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ಬರುತ್ತಿರುವ ಪ್ರಕ್ರಿಯೆ ಕಳೆದ ಹಲವು ದಿನಗಳಿಂದ ನಡೆಯುತ್ತಿದೆ. ಸೋಮವಾರ ರಾತ್ರಿ ಕೂಡ ಇಂಡಿಗೋ, ವಿಸ್ತಾರಾ ಮತ್ತು ಏರ್ ಇಂಡಿಯಾದ 30 ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿರುವುದು ಇದೀಗ ತಿಳಿದುಬಂದಿದೆ. ಇವುಗಳು ಹುಸಿ ಬಾಂಬ್ ಬೆದರಿಕೆ ಕರೆಗಳಾದರೂ ವಿಮಾನಗಳ ಕಾರ್ಯಾಚರಣೆ ಮೇಲೆ ಗಂಭೀರ ಪರಿಣಾಮ ಬೀರಿವೆ.

ದೆಹಲಿ, ಹೈದರಾಬಾದ್​ ಸೇರಿ ದೇಶದ ವಿವಿಧೆಡೆ ಇರುವ ಸಿಆರ್​ಪಿಎಫ್​ ಶಾಲೆಗಳಿಗೆ ಬಾಂಬ್ ಬೆದರಿಕೆ

ದೆಹಲಿ, ಹೈದರಾಬಾದ್​ ಸೇರಿ ದೇಶದ ವಿವಿಧೆಡೆ ಇರುವ ಸಿಆರ್​ಪಿಎಫ್ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಅವುಗಳಲ್ಲಿ ಎರಡು ದೆಹಲಿಯಲ್ಲಿ ಮತ್ತು ಒಂದು ಹೈದರಾಬಾದ್‌ನಲ್ಲಿವೆ. ಸೋಮವಾರ ತಡರಾತ್ರಿ ಈ ಶಾಲೆಗಳ ಆಡಳಿತ ಮಂಡಳಿಗೆ ಇಮೇಲ್ ಮೂಲಕ ಬೆದರಿಕೆಯನ್ನು ರವಾನಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್​ಐ ವರದಿ ಮಾಡಿದೆ.

ಹಿಮಾಲಯದಲ್ಲಿ ಹಾವಿನ ಹೊಸ ಪ್ರಭೇದ ಪತ್ತೆ, ಲಿಯೊನಾರ್ಡೊ ಡಿಕ್ಯಾಪ್ರಿಯೋ ಎಂದು ನಾಮಕರಣ

ಹಿಮಾಲಯದಲ್ಲಿ ಹಾವಿನ ಹೊಸ ಪ್ರಭೇದವೊಂದು ಪತ್ತೆಯಾಗಿದ್ದು, ಅದಕ್ಕೆ ಲಿಯೊನಾರ್ಡೊ ಡಿಕ್ಯಾಪ್ರಿಯೋ ಎಂದು ನಾಮಕರಣ ಮಾಡಲಾಗಿದೆ. ಹಿಮಾಲಯದಲ್ಲಿ ಸಂಶೋಧಕರ ತಂಡವು ಆ ಹಾವಿಗೆ ಹಾಲಿವುಡ್ ನಟ, ನಿರ್ಮಾಪಕ ಪ್ರಾಣಿಗಳ  ಸಂರಕ್ಷಣೆಗೆ ನೀಡಿದ ಕೊಡುಗೆಗೆ ಗೌರವಾರ್ಥವಾಗಿ ಅವರ ಹೆಸರಿಡಲಾಗಿದೆ.

ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ