National News
ರಾಷ್ಟ್ರೀಯ ಸುದ್ದಿಗಳನ್ನು ಸಮಗ್ರ ಚಿತ್ರಣ ಇಲ್ಲಿ ಸಿಗುತ್ತೇ. ರಾಷ್ಟ್ರೀಯ ಮಟ್ಟದಲ್ಲಿ ನಡೆದ ಸುದ್ದಿಗಳನ್ನು ಇಲ್ಲಿ ತಿಳಿಸಲಾಗುತ್ತದೆ. ರಾಜಕೀಯವಾಗಿ, ಸಾಮಾಜಿಕ, ಹಾಗೂ ದೇಶದ ಬೇರೆ ಬೇರೆ ಊರಿನಲ್ಲಿ ನಡೆದ ಘಟನೆಗಳನ್ನು, ಸುದ್ದಿಗಳನ್ನು ಇಲ್ಲಿ ತಿಳಿಸಲಾಗುವುದು. ದೇಶದ ವಿವಿಧ ರಾಜ್ಯಗಳಲ್ಲಿ ನಡೆಯುವ ಸಂಗತಿಗಳನ್ನು ಹಾಗೂ ಸುದ್ದಿಗಳನ್ನು ತಕ್ಷಣದಲ್ಲಿ ನೀಡಲಾಗುವುದು.
ಎನ್ಸಿಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಸುನೇತ್ರಾ ಪವಾರ್ ಆಯ್ಕೆ
ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಅವರು ನಿಧನರಾದ 1 ತಿಂಗಳ ನಂತರ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ಎನ್ಸಿಪಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಮಹಾರಾಷ್ಟ್ರದ ಡಿಸಿಎಂ ಹಾಗೂ ಎನ್ಸಿಪಿ ಮುಖ್ಯಸ್ಥರಾಗಿದ್ದ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್ಸಿಪಿ) ರಾಷ್ಟ್ರೀಯ ಅಧ್ಯಕ್ಷೆಯಾಗಿ ಆಯ್ಕೆ ಮಾಡಲಾಗಿದೆ ಎಂದು ಹಿರಿಯ ನಾಯಕ ಪ್ರಫುಲ್ ಪಟೇಲ್ ಪ್ರಕಟಿಸಿದ್ದಾರೆ. ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಈ ಪ್ರಸ್ತಾವನೆಯನ್ನು ಮಂಡಿಸಿರುವುದಾಗಿ ಪಟೇಲ್ ಹೇಳಿದ್ದಾರೆ. ಅಲ್ಲಿ ಎಲ್ಲಾ ಸದಸ್ಯರಿಂದ ಸರ್ವಾನುಮತದ ಅನುಮೋದನೆ ಪಡೆಯಲಾಯಿತು.
- Sushma Chakre
- Updated on: Feb 26, 2026
- 10:19 pm
ನ್ಯಾಯಾಂಗಕ್ಕೆ ಅಗೌರವ ತೋರುವ ಉದ್ದೇಶವಿಲ್ಲ; NCERT ಪಠ್ಯಪುಸ್ತಕ ವಿವಾದದ ತನಿಖೆಗೆ ಕೇಂದ್ರ ಸರ್ಕಾರ ಆದೇಶ
ನ್ಯಾಯಾಂಗದಲ್ಲಿನ ಭ್ರಷ್ಟಾಚಾರ ಎಂಬ ವಿವಾದಾತ್ಮಕ ಪಠ್ಯವನ್ನು ಶಾಲಾ ಪುಸ್ತಕದಲ್ಲಿ ಸೇರಿಸಿರುವುದರಿಂದ ಉಂಟಾಗಿರುವ ಹಾನಿಯನ್ನು ತಡೆಯಲು NCERT ಪ್ರಯತ್ನಿಸುತ್ತಿದೆ. ಈಗಾಗಲೇ ಈ ಬಗ್ಗೆ ಸುಪ್ರೀಂ ಕೋರ್ಟ್ ಕೂಡ ತರಾಟೆಗೆ ತೆಗೆದುಕೊಂಡಿದೆ. ಇದರ ನಡುವೆ ಇಂದು ಪ್ರತಿಕ್ರಿಯೆ ನೀಡಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ನ್ಯಾಯಾಂಗವನ್ನು ಅಗೌರವಿಸುವ ಉದ್ದೇಶ ಕೇಂದ್ರ ಸರ್ಕಾರಕ್ಕೆ ಇಲ್ಲ ಎಂದು ಹೇಳಿದ್ದಾರೆ. ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ ಪ್ರಕಟಿಸಿದ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಂಬ ಪಠ್ಯವನ್ನು ಸೇರಿಸಿದ್ದರಿಂದ ವಿವಾದ ಭುಗಿಲೆದ್ದಿತು.
- Sushma Chakre
- Updated on: Feb 26, 2026
- 9:47 pm
ಮಾನವೀಯತೆ ಎಂದಿಗೂ ಸಂಘರ್ಷಕ್ಕೆ ಬಲಿಯಾಗಬಾರದು; ಇಸ್ರೇಲ್ನಲ್ಲಿ ಪ್ರಧಾನಿ ಮೋದಿ
ಜೆರುಸಲೆಮ್ನಲ್ಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ 'ಮಾನವೀಯತೆ ಎಂದಿಗೂ ಸಂಘರ್ಷಕ್ಕೆ ಬಲಿಪಶುವಾಗಬಾರದು, ಭಾರತ ಗಾಜಾ ಶಾಂತಿ ಪ್ರಯತ್ನಗಳನ್ನು ಬೆಂಬಲಿಸುತ್ತದೆ' ಎಂದು ಹೇಳಿದ್ದಾರೆ. ಸಂಘರ್ಷದಿಂದಾಗಿ ಮಾನವೀಯತೆ ಎಂದಿಗೂ ಬಳಲಬಾರದು ಎಂದು ಮೋದಿ ಕಾಳಜಿ ವ್ಯಕ್ತಪಡಿಸಿದ್ದಾರೆ.
- Sushma Chakre
- Updated on: Feb 26, 2026
- 7:39 pm
ರೈಲು ಹತ್ತುವಾಗ ಕಾಲು ಜಾರಿ ಬಿದ್ದ ವೃದ್ಧನ ಜೀವ ಉಳಿಸಿದ ಮಹಿಳಾ ಕಾನ್ಸ್ಟೆಬಲ್
ರೈಲ್ವೆ ಇಲಾಖೆಯ ಮಹಿಳಾ ಕಾನ್ಸ್ಟೆಬಲ್ ಒಬ್ಬರು 75 ವರ್ಷದ ವೃದ್ಧನ ಪಾಲಿಗೆ ದೇವರಾಗಿದ್ದಾರೆ. ರೈಲ್ವೆ ನಿಲ್ದಾಣದಲ್ಲಿ ರೈಲು ನಿಂತ ಕೂಡಲೆ ಕೆಳಗೆ ಇಳಿದಿದ್ದ 75 ವರ್ಷದ ಪ್ರಯಾಣಿಕ ಅಂಗಡಿಯಲ್ಲಿ ಏನೋ ತೆಗೆದುಕೊಳ್ಳುತ್ತಿದ್ದಾಗ ರೈಲು ಹೊರಟಾಗಿತ್ತು. ತಕ್ಷಣ ಓಡಿಹೋಗಿ ಚಲಿಸುತ್ತಿದ್ದ ರೈಲನ್ನು ಹತ್ತಿಕೊಳ್ಳುವಾಗ ಆಯತಪ್ಪಿ ರೈಲು ಹಾಗೂ ಪ್ಲಾಟ್ಫಾರ್ಮ್ ನಡುವೆ ಇರುವ ಅಂತರದೊಳಗೆ ಸಿಲುಕಿಕೊಂಡಿದ್ದರು. ಅಷ್ಟರಲ್ಲೇ ಓಡೋಡಿ ಬಂದ ಆರ್ಪಿಎಫ್ ಮಹಿಳಾ ಕಾನ್ಸ್ಟೆಬಲ್ ರಮಾ ಶರ್ಮಾ ಆ ವ್ಯಕ್ತಿಯನ್ನು ಎಳೆದು ಪ್ಲಾಟ್ಫಾರ್ಮ್ ಮೇಲೆ ಹಾಕಿದರು.
- Sushma Chakre
- Updated on: Feb 26, 2026
- 7:12 pm
ವಿಮಾನ ಪ್ರಯಾಣಿಕರಿಗೆ ಒಳ್ಳೆ ಸುದ್ದಿ; ಟಿಕೆಟ್ ಮರುಪಾವತಿಯ ನಿಯಮದಲ್ಲಿ ಮಹತ್ವದ ಬದಲಾವಣೆ
ವಿಮಾನ ಪ್ರಯಾಣಿಕರಿಗೆ ಡಿಜಿಸಿಎ ಗುಡ್ ನ್ಯೂಸ್ ನೀಡಿದೆ. ವಿಮಾನದ ಟಿಕೆಟ್ ಮರುಪಾವತಿಯ ಮಾನದಂಡಗಳನ್ನು ಪರಿಷ್ಕರಿಸಲಾಗಿದೆ. ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಪ್ರಯಾಣಿಕ ಸ್ನೇಹಿ ಮಾನದಂಡಗಳೊಂದಿಗೆ ವಿಮಾನ ಟಿಕೆಟ್ ನಿಯಮಗಳನ್ನು ಪರಿಷ್ಕರಿಸಿದೆ. ಹೆಸರು ತಿದ್ದುಪಡಿ ಶುಲ್ಕವಿಲ್ಲದೆ ವಿಮಾನ ಟಿಕೆಟ್ ಮರುಪಾವತಿ ಮಾನದಂಡಗಳನ್ನು ಪರಿಷ್ಕರಿಸಲಾಗಿದೆ. ಟಿಕೆಟ್ ಮರುಪಾವತಿ ಪ್ರಕ್ರಿಯೆಯನ್ನು ಸಡಿಲಗೊಳಿಸಲಾಗಿದೆ. ಪ್ರಯಾಣಿಕರು ಈಗ ಟಿಕೆಟ್ ಬುಕಿಂಗ್ ಮಾಡಿದ 48 ಗಂಟೆಗಳ ಒಳಗೆ ಹೆಚ್ಚುವರಿ ಶುಲ್ಕವನ್ನು ಪಾವತಿಸದೆ ವಿಮಾನ ಟಿಕೆಟ್ಗಳನ್ನು ರದ್ದುಗೊಳಿಸಬಹುದು ಅಥವಾ ದಿನಾಂಕ ಬದಲಾಯಿಸಬಹುದು.
- Sushma Chakre
- Updated on: Feb 26, 2026
- 6:35 pm
ಮನೆಕೆಲಸದಾಕೆಯೇ ವಿಲನ್; ಮಾಲೀಕರ ಮನೆಯಲ್ಲಿ ನಕಲಿ ಇಡಿ ದಾಳಿ ನಡೆಸಿ ಲಕ್ಷಗಟ್ಟಲೆ ಹಣ ದೋಚಿದ ಮಹಿಳೆ!
ಈಗಿನ ಕಾಲ ಎಷ್ಟು ಕೆಟ್ಟು ಹೋಗಿದೆಯೆಂದರೆ ಧೈರ್ಯವಾಗಿ ಯಾರನ್ನೂ ನಂಬಲಾಗದಂತಹ ಸ್ಥಿತಿ ನಿರ್ಮಾಣವಾಗಿದೆ. ಮನೆಕೆಲಸಕ್ಕೆ ಸೇರಿದ್ದ ಮಹಿಳೆ ತನ್ನ ಮಾಲೀಕರ ಮನೆಯನ್ನೇ ದೋಚುವ ಪ್ಲಾನ್ ಮಾಡಿದ್ದಳು. ಅದಕ್ಕಾಗಿ ಅವರ ಮನೆ ಮೇಲೆ ಇಡಿ ದಾಳಿ ನಡೆಸುವ ನಾಟಕವನ್ನೂ ಆಡಿದ್ದಳು. ದೆಹಲಿಯಲ್ಲಿ ತನಗೆ ಕೆಲಸ ನೀಡಿದ್ದವರ ನಿವಾಸದ ಮೇಲೆ ನಕಲಿ ಇಡಿ ದಾಳಿ ನಡೆಸಿದ್ದಕ್ಕಾಗಿ ಮನೆಕೆಲಸದಾಕೆ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ತನ್ನ ಉದ್ಯೋಗದಾತರ ನಿವಾಸದ ಮೇಲೆ ನಕಲಿ ಜಾರಿ ನಿರ್ದೇಶನಾಲಯದ (ಇಡಿ) ದಾಳಿ ನಡೆಸಲು ಸಂಚು ರೂಪಿಸಿದ್ದ ಆಕೆ ಪೊಲೀಸರ ಬಲೆಗೆ ಬಿದ್ದಿದ್ದಾಳೆ.
- Sushma Chakre
- Updated on: Feb 26, 2026
- 5:39 pm
Viral News: ಶಾಲೆಯಲ್ಲಿ ಆಟವಾಡುತ್ತಿದ್ದಾಗಲೇ ಹೃದಯಾಘಾತದಿಂದ 9 ವರ್ಷದ ಬಾಲಕಿ ಸಾವು!
ರಾಜಸ್ಥಾನದ ಶಾಲೆಯಲ್ಲಿ ಆಟದ ಸಮಯದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು 9 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಆತಂಕ ಮೂಡಿಸಿದೆ. ಇದು ಮಕ್ಕಳಲ್ಲಿ ಹೆಚ್ಚುತ್ತಿರುವ ಹೃದಯಾಘಾತದ ಪ್ರಕರಣಗಳ ಬಗ್ಗೆ ಕಾಳಜಿ ಉಂಟುಮಾಡಿದೆ. ಸರ್ಕಾರಿ ಆಸ್ಪತ್ರೆಯ ವೈದ್ಯರು ದಿವ್ಯಾಳ ದೇಹದ ಮೇಲೆ ಯಾವುದೇ ಬಾಹ್ಯ ಗಾಯಗಳು ಕಂಡುಬಂದಿಲ್ಲ ಎಂದು ದೃಢಪಡಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಬಾಲಕಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ. ಆ ಹುಡುಗಿಯ ಕುಟುಂಬವು ಮರಣೋತ್ತರ ಪರೀಕ್ಷೆ ನಡೆಸಲು ನಿರಾಕರಿಸಿದ್ದು, ಶವವನ್ನು ಅವರಿಗೆ ಹಸ್ತಾಂತರಿಸಲಾಗಿದೆ. ಮರಣೋತ್ತರ ಪರೀಕ್ಷೆಯಿಲ್ಲದೆ ಆಕೆಯ ಅಂತ್ಯಕ್ರಿಯೆ ನೆರವೇರಿಸಲಾಗಿದೆ.
- Sushma Chakre
- Updated on: Feb 26, 2026
- 4:33 pm
ಬಂಗಾಳದ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ, ನುಸುಳುಕೋರರನ್ನು ಓಡಿಸುತ್ತೇವೆ; ಅಮಿತ್ ಶಾ ಶಪಥ
ಮುಂಬರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸರ್ಕಾರ ರಚಿಸಿದ ನಂತರ ಒಳನುಸುಳುಕೋರರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಅಮಿತ್ ಶಾ ಪ್ರತಿಜ್ಞೆ ಮಾಡಿದ್ದಾರೆ. ಪಶ್ಚಿಮ ಬಂಗಾಳದ ಗಡಿಯಲ್ಲಿರುವ ಸೀಮಾಂಚಲ್ ಪ್ರದೇಶದ ಭಾಗವಾಗಿರುವ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ನಾಯಕ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿದ್ದಾರೆ.
- Sushma Chakre
- Updated on: Feb 26, 2026
- 3:25 pm
ಬರೋಬ್ಬರಿ 3,716 ಕೋಟಿ ರೂ. ಮೌಲ್ಯದ ಅನಿಲ್ ಅಂಬಾನಿ ಮನೆ ಜಪ್ತಿ: ಕಾರಣವೇನು?
ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಅನಿಲ್ ಅಂಬಾನಿ ವಿರುದ್ಧ ಇಡಿ ಕ್ರಮ ತೀವ್ರಗೊಂಡಿದೆ. ರಿಲಯನ್ಸ್ ಕಮ್ಯುನಿಕೇಷನ್ಸ್(ಆರ್ಕಾಂ) ವಿರುದ್ಧದ ಬ್ಯಾಂಕ್ ಸಾಲದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೈಗಾರಿಕೋದ್ಯಮಿ ಅನಿಲ್ ಅಂಬಾನಿಗೆ ಜಾರಿ ನಿರ್ದೇಶನಾಲಯ (ಇಡಿ) ಬಿಗ್ ಶಾಕ್ ಕೊಟ್ಟಿದೆ. ಅನಿಲ್ ಅಂಬಾನಿ ಸೇರಿದ ಬರೋಬ್ಬರಿ 3,716 ಮೌಲ್ಯದ ಮನೆಯನ್ನು ಇಡಿ ಜಪ್ತಿ ಮಾಡಿದೆ.
- Ramesh B Jawalagera
- Updated on: Feb 25, 2026
- 10:59 pm
ಆಟವಾಡುತ್ತಿದ್ದ ಮಗುವನ್ನು ಎತ್ತಿ ನೆಲಕ್ಕೆ ಕುಕ್ಕಿದ ಯುವಕ; ಶಾಕಿಂಗ್ ವಿಡಿಯೋ ಇಲ್ಲಿದೆ
ಮನೆಯ ಹೊರಗೆ ರಸ್ತೆಯಲ್ಲಿ ಆಟವಾಡಿಕೊಂಡಿದ್ದ ಮಗುವನ್ನು ಒಬ್ಬ ವ್ಯಕ್ತಿ ತನ್ನ ತಲೆಯ ಎತ್ತರಕ್ಕೆ ಎತ್ತಿ, ನಂತರ ಜೋರಾಗಿ ತಲೆಕೆಳಗಾಗಿ ರಸ್ತೆಗೆ ಎಸೆದಿದ್ದಾನೆ. ನಂತರ ಮಗುವನ್ನು ಕ್ರೂರವಾಗಿ ಥಳಿಸಿದ್ದಾನೆ. ಈ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಆ ವ್ಯಕ್ತಿ ಯಾಕೆ ಆ ರೀತಿ ಮಗುವಿನ ಜೊತೆ ಮೃಗದಂತೆ ವರ್ತಿಸಿದ್ದಾನೆ, ಆ ಮಗುವಿಗೂ ಆತನಿಗೂ ಏನು ಸಂಬಂಧ ಎಂಬುದು ಇನ್ನೂ ಗೊತ್ತಾಗಿಲ್ಲ.
- Sushma Chakre
- Updated on: Feb 25, 2026
- 10:34 pm
ಕೇಂದ್ರದಿಂದ ಉಚಿತ ಲಸಿಕೆ: 14 ವಯಸ್ಸಿನ ಹೆಣ್ಮಕ್ಕಳಿಗೆ ಏಕೆ? ಲಸಿಕೆ ಏನ್ ಕೆಲಸ ಮಾಡುತ್ತೆ? ಇಲ್ಲಿದೆ ವಿವರ
ಗರ್ಭಕಂಠದ ಕ್ಯಾನ್ಸರ್ (Cervical Cancer) ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ದೇಶಾದ್ಯಂತ 'ಸ್ವಸ್ಥ ನಾರಿ' (Swastha Nari) ಮಿಷನ್ ಅಡಿಯಲ್ಲಿ ಬೃಹತ್ ಲಸಿಕಾ ಅಭಿಯಾನಕ್ಕೆ ಸಿದ್ಧತೆ ನಡೆಸಿದೆ. ದೇಶಾದ್ಯಂತ ಹದಿಹರೆಯದ ಬಾಲಕಿಯರಿಗಾಗಿ 'ಡ್ಯೂಮನ್ ಪ್ಯಾಪಿಲೋಮ ವೈರಸ್(HPV) ಲಸಿಕೆ ವಿತರಣೆ ಕಾರ್ಯ ಕ್ರಮವನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರವು ಸಜ್ಜಾಗಿದೆ ಎಂದು ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ. 'ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿ ಯಾನ'ದಡಿ ಈ ಲಸಿಕೆ ಕಾರ್ಯಕ್ರಮ ನಡೆಯಲಿದೆ. 14 ವರ್ಷ ಮೇಲ್ಪಟ್ಟ ಬಾಲಕಿಯರು ಇದರ ಫಲಾನುಭವಿದರಗಳಾಗಲಿದ್ದು, ಇದರ ಭಾಗವಾಗಿ ಮೆರ್ಕ್ ಸಂಸ್ಥೆಯು ತಯಾರಿಸಿರುವ 'ಗಾರ್ಡಾಸಿಲ್' ಚುಚ್ಚುಮದ್ದನ್ನು ದೇಶಾದ್ಯಂತ ಉಚಿತವಾಗಿ ನೀಡಲಾಗುವುದು. ಯಾಕೆ ಈ ನಿರ್ಧಾರ? 14ನೇ ವಯಸ್ಸಿಗೇ ಏಕೆ? ಇಲ್ಲಿದೆ ವಿವರ
- Ramesh B Jawalagera
- Updated on: Feb 25, 2026
- 10:11 pm
10ನೇ ತರಗತಿ ಬೋರ್ಡ್ ಎಕ್ಸಾಂ ಬರೆಯುತ್ತಿದ್ದ ಬಾಲಕಿಗೆ ಹೆರಿಗೆ; ಆಕೆ ಗರ್ಭಿಣಿಯೆಂದೇ ಗೊತ್ತಿರಲಿಲ್ಲ!
ಎಸ್ಎಸ್ಎಲ್ಸಿ ಬೋರ್ಡ್ ಪರೀಕ್ಷೆ ಬರೆಯುತ್ತಿದ್ದ ಬಾಲಕಿಗೆ ಇದ್ದಕ್ಕಿದ್ದಂತೆ ಹೊಟ್ಟೆನೋವು ಕಾಣಿಸಿಕೊಂಡಿತ್ತು. ಈ ವೇಳೆ ಬಾತ್ರೂಂಗೆ ಹೋದ ಆ ಬಾಲಕಿಗೆ ಅಲ್ಲೇ ಹೆರಿಗೆಯಾಗಿದೆ. ವಿಚಿತ್ರವೆಂದರೆ, ಆ ಬಾಲಕಿ ಗರ್ಭಿಣಿಯಾಗಿದ್ದಾಳೆಂಬ ವಿಷಯ ಆಕೆಯ ಹೆತ್ತವರಿಗೆ ಗೊತ್ತೇ ಇರಲಿಲ್ಲ. ಹಾಗಾದರೆ, ಆ ಬಾಲಕಿಯ ದೇಹದಲ್ಲಾದ ಬದಲಾವಣೆ ಯಾರ ಗಮನಕ್ಕೂ ಬಾರಲಿಲ್ಲವೇ? 9 ತಿಂಗಳ ತುಂಬು ಗರ್ಭಿಣಿ ಶಾಲೆಯ ಯೂನಿಫಾರ್ಮ್ ಹಾಕಿಕೊಂಡು ಬಂದು ಪರೀಕ್ಷೆ ಬರೆಯುವಾಗ ಶಿಕ್ಷಕರು, ಆಕೆಯ ಸಹಪಾಠಿಗಳಿಗೂ ಅನುಮಾನ ಬರಲಿಲ್ಲವೇ? ತನಗೆ ಇನ್ನೇನು ಕೆಲವೇ ದಿನಗಳಲ್ಲಿ ಹೆರಿಗೆಯಾಗಲಿದೆ ಎಂದು ಆ ಬಾಲಕಿಗೂ ಗೊತ್ತಿರಲಿಲ್ಲವೇ? ಗೊತ್ತಿದ್ದರೆ ಆಕೆ ಬೋರ್ಡ್ ಎಕ್ಸಾಂ ಬರೆಯಲು ಬಂದಿದ್ದೇಕೆ? ಎಂಬಿತ್ಯಾದಿ ಹಲವು ಪ್ರಶ್ನೆಗಳು ಮೂಡಿವೆ.
- Sushma Chakre
- Updated on: Feb 25, 2026
- 8:16 pm