National News
ರಾಷ್ಟ್ರೀಯ ಸುದ್ದಿಗಳನ್ನು ಸಮಗ್ರ ಚಿತ್ರಣ ಇಲ್ಲಿ ಸಿಗುತ್ತೇ. ರಾಷ್ಟ್ರೀಯ ಮಟ್ಟದಲ್ಲಿ ನಡೆದ ಸುದ್ದಿಗಳನ್ನು ಇಲ್ಲಿ ತಿಳಿಸಲಾಗುತ್ತದೆ. ರಾಜಕೀಯವಾಗಿ, ಸಾಮಾಜಿಕ, ಹಾಗೂ ದೇಶದ ಬೇರೆ ಬೇರೆ ಊರಿನಲ್ಲಿ ನಡೆದ ಘಟನೆಗಳನ್ನು, ಸುದ್ದಿಗಳನ್ನು ಇಲ್ಲಿ ತಿಳಿಸಲಾಗುವುದು. ದೇಶದ ವಿವಿಧ ರಾಜ್ಯಗಳಲ್ಲಿ ನಡೆಯುವ ಸಂಗತಿಗಳನ್ನು ಹಾಗೂ ಸುದ್ದಿಗಳನ್ನು ತಕ್ಷಣದಲ್ಲಿ ನೀಡಲಾಗುವುದು.
ಬುಲ್ಡೋಜರ್ ಮೂಲಕ ನರೇಗಾ ನೆಲಸಮ; ಬಿಜೆಪಿ ಸರ್ಕಾರದ ವಿರುದ್ಧ ಸೋನಿಯಾ ಗಾಂಧಿ ಆಕ್ರೋಶ
ಮೋದಿ ನೇತೃತ್ವದ ಎನ್ಡಿಎ ಸರ್ಕಾರ ಮಂಡಿಸಿದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಬದಲಿಗೆ ರೋಜ್ಗಾರ್ ಮತ್ತು ಅಜೀವಿಕಾ ಮಿಷನ್ ಗ್ರಾಮೀಣ (VB-G RAM G) ಮಸೂದೆಯನ್ನು ಸಂಸತ್ತು ಅಂಗೀಕರಿಸಿದ ಬೆನ್ನಲ್ಲೇ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೋದಿ ಸರ್ಕಾರವು ನರೇಗಾ ಮೇಲೆ ಬುಲ್ಡೋಜರ್ ನಡೆಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
- Sushma Chakre
- Updated on: Dec 20, 2025
- 7:52 pm
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್ನ ವಿಮಾನ ನಿಲ್ದಾಣ ಟರ್ಮಿನಲ್ ಉದ್ಘಾಟನೆ
ಸುಮಾರು 4,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಹೊಸದಾಗಿ ಉದ್ಘಾಟನೆಗೊಂಡ ಟರ್ಮಿನಲ್ ಭಾರತದ ಮೊದಲ ಪ್ರಕೃತಿ ಪ್ರೇರಿತ ವಿಮಾನ ನಿಲ್ದಾಣದ ಟರ್ಮಿನಲ್ ಆಗಿದೆ. ಅಸ್ಸಾಂ ಪ್ರದೇಶದ ನೈಸರ್ಗಿಕ ಭೂದೃಶ್ಯವನ್ನು ಪ್ರತಿಬಿಂಬಿಸುವಂತೆ ವಿನ್ಯಾಸಗೊಳಿಸಲಾದ ಈ ಟರ್ಮಿನಲ್ ಪ್ರಯಾಣಿಕರ ನಿರ್ವಹಣಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸುತ್ತದೆ ಮತ್ತು ಸಂಪರ್ಕವನ್ನು ಸುಧಾರಿಸುತ್ತದೆ. ಹಾಗೇ, ಅಸ್ಸಾಂ ಮತ್ತು ನೆರೆಯ ರಾಜ್ಯಗಳಲ್ಲಿ ಪ್ರವಾಸೋದ್ಯಮ, ವ್ಯಾಪಾರ ಮತ್ತು ಆರ್ಥಿಕ ಚಟುವಟಿಕೆಯನ್ನು ಹೆಚ್ಚಿಸುತ್ತದೆ ಎಂದು ನಿರೀಕ್ಷಿಸಲಾಗಿದೆ.
- Sushma Chakre
- Updated on: Dec 20, 2025
- 5:08 pm
ಮಮತಾ ಬ್ಯಾನರ್ಜಿ ಸರ್ಕಾರ ನುಸುಳುಕೋರರನ್ನು ರಕ್ಷಿಸಲು ಎಸ್ಐಆರ್ ಅನ್ನು ವಿರೋಧಿಸುತ್ತಿದೆ; ಪ್ರಧಾನಿ ಮೋದಿ ಆರೋಪ
ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. 2026ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅವಕಾಶ ನೀಡುವಂತೆ ಅವರು ಬಂಗಾಳದ ಜನರಿಗೆ ಮನವಿ ಮಾಡಿದ್ದಾರೆ. ದಟ್ಟವಾದ ಮಂಜಿನಿಂದಾಗಿ ತಾಹೆರ್ಪುರ ರ್ಯಾಲಿಯ ಸ್ಥಳವನ್ನು ತಲುಪಲು ವಿಫಲವಾದ ಕಾರಣದಿಂದಾಗಿ ಪಶ್ಚಿಮ ಬಂಗಾಳದ ನಾಡಿಯಾದಲ್ಲಿ ವರ್ಚುವಲ್ ಆಗಿ ನಡೆದ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುತ್ತಾ ಪ್ರಧಾನಿ ಮೋದಿ ಈ ಹೇಳಿಕೆಗಳನ್ನು ನೀಡಿದ್ದಾರೆ. ಇಂದು ಮಧ್ಯಾಹ್ನ ಅವರು ರ್ಯಾಲಿಯ ಸ್ಥಳಕ್ಕೆ ತಲುಪಬೇಕಿತ್ತು. ಆದರೆ ಕೆಟ್ಟ ಹವಾಮಾನದಿಂದಾಗಿ ಅವರ ಹೆಲಿಕಾಪ್ಟರ್ ತಾಹೆರ್ಪುರ ಹೆಲಿಪ್ಯಾಡ್ ಮೇಲೆ ಸ್ವಲ್ಪ ಹೊತ್ತು ಹಾರಾಡುತ್ತಾ ಕೊಲ್ಕತ್ತಾ ವಿಮಾನ ನಿಲ್ದಾಣಕ್ಕೆ ಹಿಂತಿರುಗಬೇಕಾಯಿತು.
- Sushma Chakre
- Updated on: Dec 20, 2025
- 4:49 pm
ಬಿಹಾರದ ಗೋಪಾಲ್ಗಂಜ್ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್ಗಂಜ್ ಜಿಲ್ಲೆಯ ಥಾವೆ ದೇವಸ್ಥಾನ ಸೇರಿದಂತೆ ಬಿಹಾರದ 2 ಹಿಂದೂ ದೇವಾಲಯಗಳಿಂದ 50 ಲಕ್ಷ ರೂ. ಮೌಲ್ಯದ ಚಿನ್ನದ ಕಿರೀಟ ಹಾಗೂ ಆಭರಣಗಳನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 'ಥಾವೆ ವಾಲಿ ಮಾತಾ' ಎಂದು ಕರೆಯಲ್ಪಡುವ ದುರ್ಗಾ ದೇವಿಗೆ ಸಮರ್ಪಿತವಾದ ಥಾವೆ ದೇವಸ್ಥಾನದಿಂದ ಸುಮಾರು 500 ಗ್ರಾಂ ತೂಕದ ವಿಗ್ರಹದ ಚಿನ್ನದ ಕಿರೀಟ, ಹಾರ ಮತ್ತು ಇನ್ನೊಂದು ಆಭರಣದೊಂದಿಗೆ ಇಬ್ಬರು ಮುಸುಕುಧಾರಿಗಳು ಸ್ಥಳದಿಂದ ಹೊರಗೆ ಹೋಗುತ್ತಿರುವುದನ್ನು ಸಿಸಿಟಿವಿ ದೃಶ್ಯಗಳಲ್ಲಿ ನೋಡಬಹುದು.
- Sushma Chakre
- Updated on: Dec 19, 2025
- 10:42 pm
ಆಂಧ್ರದ ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಆಂಧ್ರಪ್ರದೇಶದ ಶ್ರೀಕಾಳಹಸ್ತಿ ದೇವಸ್ಥಾನಕ್ಕೆ ರಷ್ಯಾದ ಭಕ್ತರು ಸಾಂಪ್ರದಾಯಿಕ ಉಡುಪಿನಲ್ಲಿ ಆಗಮಿಸಿದರು. ಅವರು ರಾಹು-ಕೇತು ಪೂಜೆಯಲ್ಲಿ ಭಾಗವಹಿಸಿದರು. ದೇವಾಲಯದ ಐತಿಹಾಸಿಕ ಶಿಲ್ಪಗಳು ಮತ್ತು ರಚನೆಗಳಿಂದ ತೀವ್ರವಾಗಿ ಪ್ರಭಾವಿತರಾದರು. ದೇವಾಲಯದ ವಿಶಿಷ್ಟ ವೈಶಿಷ್ಟ್ಯಗಳ ಬಗ್ಗೆ ಅರ್ಚಕರಿಂದ ತಿಳಿದುಕೊಂಡಾಗ ದೇವರು ಮತ್ತು ದೇವತೆಯ ಮೇಲಿನ ಅವರ ಭಕ್ತಿ ಮತ್ತಷ್ಟು ಹೆಚ್ಚಾಯಿತು.
- Sushma Chakre
- Updated on: Dec 19, 2025
- 10:18 pm
ನಿಮಗೂ ಗೂಗಲ್, ಯೂಟ್ಯೂಬ್ ಪೇಜ್ ಲೋಡ್ ಆಗುತ್ತಿಲ್ಲವೇ?
ಜಗತ್ತಿನಾದ್ಯಂತ ಸಾವಿರಾರು ಬಳಕೆದಾರರು ಗೂಗಲ್ ಹಾಗೂ ಯೂಟ್ಯೂಬ್ನಲ್ಲಿ ನಿಧಾನಗತಿಯ ಲೋಡಿಂಗ್, ವಿಡಿಯೋ ಪ್ಲೇಬ್ಯಾಕ್ ಸಮಸ್ಯೆಗಳು ಮತ್ತು ಸರ್ವರ್ ಸಂಪರ್ಕ ಸಮಸ್ಯೆಗಳ ಬಗ್ಗೆ ದೂರು ನೀಡಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲೂ ಹ್ಯಾಶ್ಟ್ಯಾಗ್ ಟ್ರೆಂಡಿಂಗ್ನಲ್ಲಿದೆ. ಹಾಗಾದರೆ, ಈ ಸಮಸ್ಯೆ ಯಾವಾಗ ಸರಿಯಾಗುತ್ತದೆ, ಈ ಸಮಸ್ಯೆಗೆ ಕಾರಣವೇನೆಂಬುದರ ಬಗ್ಗೆ ಗೂಗಲ್ನಿಂದ ಇನ್ನೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.
- Sushma Chakre
- Updated on: Dec 19, 2025
- 9:41 pm
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಈಶಾನ್ಯ ರಾಜ್ಯಗಳ ಅತಿದೊಡ್ಡ ವಿಮಾನ ನಿಲ್ದಾಣ
ಗುವಾಹಟಿಯಲ್ಲಿ ನಾಳೆ ಈಶಾನ್ಯ ರಾಜ್ಯದ ಅತಿ ದೊಡ್ಡ ಹಾಗೂ ನೈಸರ್ಗಿಕ ಥೀಮ್ನ ವಿಮಾನ ನಿಲ್ದಾಣದ ಟರ್ಮಿನಲ್ ಉದ್ಘಾಟನೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಈ ಟರ್ಮಿನಲ್ ಅನ್ನು ಉದ್ಘಾಟಿಸಲಿದ್ದಾರೆ. ಇದು ಅಸ್ತಿತ್ವದಲ್ಲಿರುವ ಟರ್ಮಿನಲ್ಗಿಂತ 7 ಪಟ್ಟು ದೊಡ್ಡದಾಗಿದೆ. "ನಾನು ನಾಳೆ ಅಸ್ಸಾಂನ ಗುವಾಹಟಿಯನ್ನು ತಲುಪುತ್ತೇನೆ. ಅಲ್ಲಿ ಲೋಕಪ್ರಿಯ ಗೋಪಿನಾಥ್ ಬಾರ್ಡೋಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಲಾಗುವುದು.
- Sushma Chakre
- Updated on: Dec 19, 2025
- 8:11 pm
ಬೇರೆ ಜಾತಿ, ಧರ್ಮದವನನ್ನು ಮದುವೆಯಾದರೆ ಮಗಳಿಗೆ ಅಪ್ಪನ ಆಸ್ತಿಯಲ್ಲಿ ಪಾಲಿಲ್ಲ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ಮೊದಲೆಲ್ಲ ಗಂಡುಮಕ್ಕಳಿಗೆ ಮಾತ್ರ ಅಪ್ಪನ ಆಸ್ತಿಯಲ್ಲಿ ಪಾಲು ಎಂಬ ನಿಯಮವಿತ್ತು. ಆದರೆ, ಹೊಸ ಕಾನೂನು ಹೆಣ್ಣುಮಕ್ಕಳಿಗೂ ತಂದೆಯ ಆಸ್ತಿಯಲ್ಲಿ ಸಮಾನ ಹಕ್ಕಿನ ಅವಕಾಶ ನೀಡಿದೆ. ಹೀಗಿದ್ದರೂ, ಒಂದುವೇಳೆ ಮಗಳು ಸಮುದಾಯದಿಂದ ಹೊರಗೆ ವಿವಾಹವಾದರೆ ಅಥವಾ ಅಪ್ಪನ ಇಚ್ಚೆಗೆ ವಿರುದ್ಧವಾಗಿ ಪ್ರೀತಿಸಿ ಮದುವೆಯಾದರೆ ಆಕೆಗೆ ಆಸ್ತಿಯಲ್ಲಿ ಪಾಲು ನೀಡಲೇಬೇಕೆಂದೇನೂ ಇಲ್ಲ. ಅಂತಹ ಪರಿಸ್ಥಿತಿಯಲ್ಲಿ ಅಪ್ಪನ ನಿರ್ಧಾರವೇ ಸರ್ವೋಚ್ಚವಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
- Sushma Chakre
- Updated on: Dec 19, 2025
- 7:29 pm
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಪಕ್ಷಗಳ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ತಿನ ಚಳಿಗಾಲದ ಅಧಿವೇಶನದ ಮುಕ್ತಾಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಸಂಸತ್ತಿನ ಭವನದ ತಮ್ಮ ಕೊಠಡಿಯಲ್ಲಿ ಲೋಕಸಭೆಯ ಪಕ್ಷಗಳ ನಾಯಕರು ಮತ್ತು ಸಂಸತ್ ಸದಸ್ಯರೊಂದಿಗೆ ಸಭೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ, ಪ್ರಿಯಾಂಕಾ ಗಾಂಧಿ, ರಾಜನಾಥ್ ಸಿಂಗ್ ಸೇರಿದಂತೆ ಎಲ್ಲ ನಾಯಕರು ಹಾಗೂ ಸಂಸದರು ಈ ಸಭೆಯಲ್ಲಿ ಹಾಜರಿದ್ದರು.
- Sushma Chakre
- Updated on: Dec 19, 2025
- 4:31 pm
ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಸಿಎಂ ನಿತೀಶ್ ಕುಮಾರ್ಗೆ ಪಾಕಿಸ್ತಾನದ ಗ್ಯಾಂಗ್ಸ್ಟರ್ನಿಂದ ಬೆದರಿಕೆ
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಲವಂತವಾಗಿ ಯುವ ಮುಸ್ಲಿಂ ವೈದ್ಯೆಯೊಬ್ಬರ 'ಹಿಜಾಬ್' (ಮುಖದ ಪರದೆ) ಎಳೆದ ವಿಡಿಯೋ ಭಾರೀ ವೈರಲ್ ಆಗಿತ್ತು. ಕಾರ್ಯಕ್ರಮವೊಂದರಲ್ಲಿ ಸರ್ಟಿಫಿಕೆಟ್ ನೀಡುವಾಗ ಈ ಘಟನೆ ನಡೆದಿತ್ತು. ಈ ಬಗ್ಗೆ ಸಿಎಂ ನಿತೀಶ್ ಕುಮಾರ್ ಕ್ಷಮೆಯನ್ನು ಕೂಡ ಕೇಳಿರಲಿಲ್ಲ. ಈ ಘಟನೆಯಿಂದ ಆ ವೈದ್ಯೆ ತೀವ್ರ ಮುಜುಗರಕ್ಕೀಡಾಗಿದ್ದರು. ಇದೀಗ ಬಿಹಾರದ ಮುಖ್ಯಮಂತ್ರಿಯ ಈ ವರ್ತನೆಯನ್ನು ಪಾಕಿಸ್ತಾನ ಬಲವಾಗಿ ಖಂಡಿಸಿದೆ. ಪಾಕಿಸ್ತಾನದ ಗ್ಯಾಂಗ್ಸ್ಟರ್ ಶಹಜಾದ್ ಭಟ್ಟಿ ಬಿಹಾರ ಸಿಎಂ ನಿತೀಶ್ ಕುಮಾರ್ ಅವರಿಗೆ ಬೆದರಿಕೆಯನ್ನೂ ಹಾಕಿದ್ದಾರೆ.
- Sushma Chakre
- Updated on: Dec 19, 2025
- 3:38 pm
ಯಾರಡಾ ಬೀಚ್ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ವಿಶಾಖಪಟ್ಟಣಂ ಜಿಲ್ಲೆಯ ಯಾರಡಾ ಬೀಚ್ನಲ್ಲಿ ಮೀನುಗಾರರಿಗೆ ದೊಡ್ಡ ಶಾಕ್ ಕಾದಿತ್ತು. ಇಲ್ಲಿ ಬೃಹತ್ ತಿಮಿಂಗಿಲವೊಂದು ತೀರಕ್ಕೆ ಬಂದು ಸಾವನ್ನಪ್ಪಿದೆ. ಸುಮಾರು 15 ಅಡಿ ಉದ್ದದ ತಿಮಿಂಗಿಲವು ಉಸಿರುಗಟ್ಟಿಸುತ್ತಿರುವುದನ್ನು ಕಂಡು ಮೀನುಗಾರರು ಅದನ್ನು ಸಮುದ್ರಕ್ಕೆ ಬಿಡಲು ಪ್ರಯತ್ನಿಸಿದರು. ಆದರೂ ಯಾವುದೇ ಪ್ರಯೋಜನವಾಗಲಿಲ್ಲ. ಆ ತಿಮಿಂಗಿಲವು ದಡದಲ್ಲಿಯೇ ಸತ್ತುಹೋಯಿತು. ಅದು ಗಾಯಗೊಂಡಿರಬಹುದು ಅಥವಾ ಬಲೆಯಲ್ಲಿ ಸಿಲುಕಿ ಸತ್ತಿರಬಹುದು ಎಂದು ಶಂಕಿಸಲಾಗಿದೆ.
- Sushma Chakre
- Updated on: Dec 18, 2025
- 10:28 pm
ಮಗುವನ್ನು ಕಸದ ಬುಟ್ಟಿಗೆ ಹಾಕಿ, ನಾನು ಹಾಲು ಕುಡಿಸೋದಿಲ್ಲ; ಒಂದೇಸಮನೆ ಹಠ ಹಿಡಿದ ಬಾಣಂತಿ
ಉತ್ತರ ಪ್ರದೇಶದಲ್ಲಿ ವಿಚಿತ್ರವಾದ ಘಟನೆಯೊಂದು ನಡೆದಿದೆ. ಆಗಷ್ಟೇ ಮಗುವಿಗೆ ಜನ್ಮ ನೀಡಿದ್ದ ತಾಯಿಯೊಬ್ಬಳು ತಾನು ಹೆತ್ತ ಮಗುವಿಗೆ ಎದೆಹಾಲು ಕುಡಿಸುವುದಿಲ್ಲ ಎಂದು ಹಠ ಹಿಡಿದಿದ್ದಾಳೆ. "ಅದನ್ನು ಕಸದ ಬುಟ್ಟಿಗೆ ಎಸೆಯಿರಿ, ನಾನು ಅದಕ್ಕೆ ಹಾಲು ಕೊಡುವುದಿಲ್ಲ" ಎಂದು ಗೋರಖ್ಪುರದಲ್ಲಿ ಮಗುವಿಗೆ ಜನ್ಮ ನೀಡಿದ ತಾಯಿ ಹಠ ಮಾಡುವ ಮೂಲಕ ವೈದ್ಯರನ್ನು ಅಚ್ಚರಿಗೊಳಿಸಿದ್ದಾಳೆ.
- Sushma Chakre
- Updated on: Dec 18, 2025
- 10:53 pm