National News
ರಾಷ್ಟ್ರೀಯ ಸುದ್ದಿಗಳನ್ನು ಸಮಗ್ರ ಚಿತ್ರಣ ಇಲ್ಲಿ ಸಿಗುತ್ತೇ. ರಾಷ್ಟ್ರೀಯ ಮಟ್ಟದಲ್ಲಿ ನಡೆದ ಸುದ್ದಿಗಳನ್ನು ಇಲ್ಲಿ ತಿಳಿಸಲಾಗುತ್ತದೆ. ರಾಜಕೀಯವಾಗಿ, ಸಾಮಾಜಿಕ, ಹಾಗೂ ದೇಶದ ಬೇರೆ ಬೇರೆ ಊರಿನಲ್ಲಿ ನಡೆದ ಘಟನೆಗಳನ್ನು, ಸುದ್ದಿಗಳನ್ನು ಇಲ್ಲಿ ತಿಳಿಸಲಾಗುವುದು. ದೇಶದ ವಿವಿಧ ರಾಜ್ಯಗಳಲ್ಲಿ ನಡೆಯುವ ಸಂಗತಿಗಳನ್ನು ಹಾಗೂ ಸುದ್ದಿಗಳನ್ನು ತಕ್ಷಣದಲ್ಲಿ ನೀಡಲಾಗುವುದು.
ಅಸ್ಸಾಂ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆ; ಸಂತ್ರಸ್ತ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ಹೆಚ್ಚಳ
ಅಸ್ಸಾಂನಲ್ಲಿ ಸಂಭವಿಸಿರುವ ಪ್ರವಾಹದ ಮೃತರ ಸಂಖ್ಯೆ 75ಕ್ಕೆ ಏರಿಕೆಯಾಗಿದೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ನೇತೃತ್ವದ ಸರ್ಕಾರವು ಸಂತ್ರಸ್ತರಿಗಾಗಿ ಹಲವು ಪರಿಹಾರ ಕ್ರಮಗಳನ್ನು ಘೋಷಿಸಿದೆ. ಪ್ರವಾಹದಲ್ಲಿ ಮೃತಪಟ್ಟವರ ಅಥವಾ ಕಾಣೆಯಾದವರ ಕುಟುಂಬಗಳಿಗೆ ನೀಡಲಾಗುತ್ತಿದ್ದ ಪರಿಹಾರ ಧನವನ್ನು 9 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಮೃತರ ಸಂಖ್ಯೆ ಹೆಚ್ಚುತ್ತಿದ್ದರೂ, ಪ್ರವಾಹ ಪರಿಸ್ಥಿತಿಯಲ್ಲಿ ಒಟ್ಟಾರೆಯಾಗಿ ಸುಧಾರಣೆ ಕಂಡುಬರುತ್ತಿದೆ. ಜನರನ್ನು ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಮಾಡಲು ರಕ್ಷಣಾ ಪಡೆಗಳು ಹಗಲಿರುಳು ಶ್ರಮಿಸುತ್ತಿವೆ.
- Sushma Chakre
- Updated on: Jul 29, 2026
- 10:58 pm
ರಷ್ಯಾ ಕಠಿಣ ನಿಲುವು ತಳೆಯಿರಿ; ಕಪ್ಪು ಸಮುದ್ರದ ದಾಳಿ ಬೆನ್ನಲ್ಲೇ ಭಾರತಕ್ಕೆ ಉಕ್ರೇನ್ ಸಲಹೆ
ಕಪ್ಪು ಸಮುದ್ರದಲ್ಲಿ ಸಿವಿಲ್ ಹಡಗುಗಳು ಮತ್ತು ಬಂದರು ಮೂಲಸೌಕರ್ಯಗಳ ಮೇಲೆ ರಷ್ಯಾ ನಡೆಸುತ್ತಿರುವ ನಿರಂತರ ದಾಳಿಗಳು ಭಾರತೀಯ ನಾವಿಕರ ಜೀವಕ್ಕೆ ಅಪಾಯವನ್ನುಂಟುಮಾಡುತ್ತಿವೆ ಎಂದು ಆರೋಪಿಸಿರುವ ಉಕ್ರೇನ್, ರಷ್ಯಾ ವಿರುದ್ಧ ಕಠಿಣ ನಿಲುವು ತಳೆಯುವಂತೆ ಭಾರತಕ್ಕೆ ಬಹಿರಂಗವಾಗಿ ಮನವಿ ಮಾಡಿದೆ. ಉಕ್ರೇನ್ ಇಂದು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಈ ಹಿಂದೆ ಭಾರತೀಯ ನಾವಿಕರು ಮೃತಪಟ್ಟ ಘಟನೆಯ ನಂತರ ರಷ್ಯಾದ ಪ್ರತಿನಿಧಿಯನ್ನು ಕರೆಸಿಕೊಂಡಂತೆ ಭಾರತ ಈಗ ಮತ್ತೆ ರಷ್ಯಾದ ಪ್ರತಿನಿಧಿಗೆ ಸಮನ್ಸ್ ನೀಡಲಿದೆಯೇ? ಎಂದು ಪ್ರಶ್ನಿಸಿದೆ.
- Sushma Chakre
- Updated on: Jul 29, 2026
- 10:33 pm
ಉಕ್ರೇನ್ ಬಳಿ ಕಪ್ಪು ಸಮುದ್ರದ ಬಂದರಿನಲ್ಲಿ ದಾಳಿ; ಹಡಗಿನಲ್ಲಿ ಸಿಲುಕಿದ 13 ಭಾರತೀಯ ನಾವಿಕರು
ಉಕ್ರೇನ್ನ ಚೊರ್ನೊಮೊರ್ಸ್ಕ್ ಬಂದರಿನಲ್ಲಿ ನಿಲ್ಲಿಸಲಾಗಿರುವ ಎಂ.ವಿ. ಅಮೀರ್ 1 ಸರಕು ಸಾಗಣೆ ಹಡಗಿನಲ್ಲಿ 13 ಭಾರತೀಯ ನಾವಿಕರು ಸೇರಿದಂತೆ 15 ಸಿಬ್ಬಂದಿ ಸಿಲುಕಿಕೊಂಡಿದ್ದಾರೆ. ಕಪ್ಪು ಸಮುದ್ರದ ಬಂದರಿನಲ್ಲಿ ನಿರಂತರವಾಗಿ ನಡೆಯುತ್ತಿರುವ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳು ನೌಕಾಯಾನದ ಸುರಕ್ಷತೆಗೆ ಭಾರಿ ಬೆದರಿಕೆಯನ್ನು ಒಡ್ಡಿದೆ. ಈ ಪ್ರದೇಶದಲ್ಲಿ ತೀವ್ರ ಸಂಘರ್ಷ ಮುಂದುವರಿದಿರುವ ಬೆನ್ನಲ್ಲೇ ಈ ಹಡಗು ಚೊರ್ನೊಮೊರ್ಸ್ಕ್ನಲ್ಲಿಯೇ ಉಳಿದುಕೊಂಡಿದ್ದು, ಸಿಬ್ಬಂದಿ ಅಪಾಯಕಾರಿ ವಾತಾವರಣದಲ್ಲಿ ಸಿಲುಕಿದ್ದಾರೆ.
- Sushma Chakre
- Updated on: Jul 29, 2026
- 9:10 pm
ಪ್ರಶ್ನೆಪತ್ರಿಕೆ ಸೋರಿಕೆ ಜಾಲ ನಿರ್ಮೂಲನೆಯೇ ತಿದ್ದುಪಡಿ ಮಸೂದೆಯ ಗುರಿ; ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ
ಪರೀಕ್ಷಾ ಅಕ್ರಮ ತಡೆ ವಿಧೇಯಕವು ಪರೀಕ್ಷಾ ಅಕ್ರಮದ ಸಮಗ್ರ ಜಾಲವನ್ನು ನಿರ್ಮೂಲನೆ ಮಾಡಲಿದೆ ಮತ್ತು ಪರೀಕ್ಷೆಗಳಲ್ಲಿ ಪಾರದರ್ಶಕತೆ, ವಿಶ್ವಾಸನೀಯತೆ ಹಾಗೂ ನ್ಯಾಯಸಮ್ಮತತೆಯನ್ನು ಹೆಚ್ಚಿಸಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನೇತೃತ್ವದಲ್ಲಿ ನಡೆದ ಸರಣಿ ಪ್ರತಿಭಟನೆಗಳ ನಂತರ ಸಿದ್ಧಪಡಿಸಲಾದ ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ವಿಧೇಯಕವನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ.
- Sushma Chakre
- Updated on: Jul 29, 2026
- 8:24 pm
ವಂದೇ ಮಾತರಂ ಗೀತೆಗೆ ಅವಮಾನ ಮಾಡುವುದು ಕ್ರಿಮಿನಲ್ ಅಪರಾಧ; ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ
ರಾಷ್ಟ್ರಗೀತೆ ‘ವಂದೇ ಮಾತರಂ’ಗೆ ಅಪಮಾನ ಮಾಡುವುದನ್ನು ಅಪರಾಧವೆಂದು ಪರಿಗಣಿಸುವ ತಿದ್ದುಪಡಿ ವಿಧೇಯಕವನ್ನು ರಾಜ್ಯಸಭೆಯು ಬುಧವಾರ ಅಂಗೀಕರಿಸಿದೆ. ಈ ವಿಧೇಯಕವನ್ನು ಈಗಾಗಲೇ ಸದನದ ಕಾರ್ಯಕಲಾಪಗಳ ಪಟ್ಟಿಯಲ್ಲಿ ಸೇರಿಸಲಾಗಿತ್ತು. ಈ ವಿಧೇಯಕವನ್ನು ಜುಲೈ 24ರಂದು ಕೇಂದ್ರ ಗೃಹ ರಾಜ್ಯ ಸಚಿವ ನಿತ್ಯಾನಂದ ರೈ ಅವರು ಮಂಡಿಸಿದ್ದರು. ಇಂದಿನ ಚರ್ಚೆಯ ವೇಳೆ ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷಗಳ ನಡುವೆ ತೀವ್ರ ವಾಕ್ಸಮರ ನಡೆಯಿತು. ಈ ವಿಧೇಯಕದ ಮೇಲಿನ ಚರ್ಚೆ ಮುಂದುವರಿಯುತ್ತಿದ್ದಂತೆ, ವಿರೋಧ ಪಕ್ಷದ ಸದಸ್ಯರು ಸದನದಿಂದ ಹೊರನಡೆದರು.
- Sushma Chakre
- Updated on: Jul 29, 2026
- 7:40 pm
ಏರ್ ಇಂಡಿಯಾ ಅಪಘಾತ; ವಿಮಾನದ ಇಂಧನ ಸ್ವಿಚ್ನಲ್ಲಿ ಯಾವುದೇ ದೋಷ ಕಂಡುಬಂದಿಲ್ಲ ಎಂದು ಸಂಸತ್ಗೆ ಸರ್ಕಾರ ಮಾಹಿತಿ
ಏರ್ ಇಂಡಿಯಾ ಸಂಸ್ಥೆಯ ಬೋಯಿಂಗ್ 787 ಡ್ರೀಮ್ಲೈನರ್ ವಿಮಾನದ ಇಂಧನ ನಿಯಂತ್ರಣ ಸ್ವಿಚ್ನಲ್ಲಿ ಯಾವುದೇ ತಾಂತ್ರಿಕ ದೋಷ ಕಂಡುಬಂದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಇದರೊಂದಿಗೆ ಈ ಘಟನೆಗೆ ಸಂಬಂಧಿಸಿದ ತನಿಖೆಯು ಈಗ ಅಂತಿಮ ಹಂತವನ್ನು ತಲುಪಿದೆ. ಏರ್ ಇಂಡಿಯಾ AI-171 ವಿಮಾನದ ಇಂಧನ ನಿಯಂತ್ರಣದ ಸ್ವಿಚ್ನಲ್ಲಿ ಯಾವುದೇ ದೋಷ ಕಂಡುಬಂದಿಲ್ಲ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ತಿಳಿಸಿದೆ. ಪ್ರಾಥಮಿಕ ಹಾಗೂ ತಾಂತ್ರಿಕ ತಪಾಸಣೆಗಳ ನಂತರ ವಿಮಾನದ ಇಂಧನ ನಿಯಂತ್ರಣ ವ್ಯವಸ್ಥೆ ಅಥವಾ ಸ್ವಿಚ್ನಲ್ಲಿ ಯಾವುದೇ ರೀತಿಯ ಯಾಂತ್ರಿಕ ದೋಷವಿಲ್ಲ ಎಂಬುದು ದೃಢಪಟ್ಟಿದೆ.
- Sushma Chakre
- Updated on: Jul 29, 2026
- 6:58 pm
‘ಗುಂಡಿನ ದಾಳಿ ನಡೆದಿಲ್ಲ, ಅಶ್ರುವಾಯು ಮಾತ್ರ ಬಳಸಲಾಗಿದೆ’; ರಾಹುಲ್ ಗಾಂಧಿ ಆರೋಪಕ್ಕೆ ಸರ್ಕಾರ ಸ್ಪಷ್ಟನೆ
ಕೇಂದ್ರ ಗೃಹ ಸಚಿವರ ಆದೇಶದಿಂದಲೇ ದೆಹಲಿಯ ಪ್ರತಿಭಟನಾಕಾರರ ಮೇಲೆ ಪೊಲೀಸರಿಂದ ಗುಂಡಿನ ದಾಳಿ ನಡೆಸಲಾಗಿತ್ತು ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇಂದು ಸಂಸತ್ನಲ್ಲಿ ಆರೋಪ ಮಾಡಿದ್ದರು. ಇದಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಕೇಂದ್ರದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಈ ಬಗ್ಗೆ ಮಾಹಿತಿ ನೀಡಿದ್ದು, "ಯಾವುದೇ ಗುಂಡಿನ ದಾಳಿ ನಡೆದಿಲ್ಲ, ಅಶ್ರುವಾಯು ಮಾತ್ರ ಬಳಸಲಾಗಿದೆ ಎಂದು ಪದೇ ಪದೇ ಸ್ಪಷ್ಟಪಡಿಸಲಾಗಿದೆ. ಇಂತಹ ಆದೇಶವನ್ನು ನೀಡುವ ಅಧಿಕಾರ ಮ್ಯಾಜಿಸ್ಟ್ರೇಟ್ಗೆ ಇರುತ್ತದೆಯೇ ಹೊರತು ಸಚಿವರಿಗಲ್ಲ" ಎಂದು ಹೇಳಿದ್ದಾರೆ.
- Sushma Chakre
- Updated on: Jul 29, 2026
- 6:24 pm
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಮುಖ್ಯಸ್ಥ ವಿನೀತ್ ಗುಪ್ತಾ ಸಲಹೆ
Cauvery Water Dispute: ಕಾವೇರಿ ನೀರು ಹಂಚಿಕೆ ವಿವಾದ ತಾರಕಕ್ಕೇರಿದ್ದು, ಸಂಕಷ್ಟ ಸೂತ್ರ ಪಾಲಿಸುವಂತೆ CWRC ಕರ್ನಾಟಕ ಮತ್ತು ತಮಿಳುನಾಡು ಸರ್ಕಾರಗಳಿಗೆ ಸಲಹೆ ನೀಡಿದೆ. ಮಳೆ ಕೊರತೆ ಮತ್ತು ನೀರಿನ ಸಮಸ್ಯೆಯಿಂದ ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಬಿತ್ತನೆಗೂ ನೀರಿಲ್ಲದೆ ಆತಂಕದಲ್ಲಿದ್ದಾರೆ. ಇದರ ನಡುವೆ ಬಿಜೆಪಿ ನಿಯೋಗ ಬರ ಅಧ್ಯಯನ ನಡೆಸಿದೆ.
- Prasanna Hegde
- Updated on: Jul 29, 2026
- 5:28 pm
ಕಲ್ಲಿದ್ದಲು ಹಗರಣ; ನಿಧನರಾದ 2 ವರ್ಷದ ಬಳಿಕ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ಗೆ ಸುಪ್ರೀಂ ಕೋರ್ಟ್ ಕ್ಲೀನ್ ಚಿಟ್
ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಇಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ 2015ರಲ್ಲಿ ಸಮನ್ಸ್ ಜಾರಿ ಮಾಡಿದ್ದ ವಿಶೇಷ ಸಿಬಿಐ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿದೆ. ಸಿಬಿಐನ ಅಂತಿಮ ವರದಿಯನ್ನು ತಿರಸ್ಕರಿಸಲು ಮತ್ತು ಅವರ ವಿರುದ್ಧ ಕ್ರಮ ಕೈಗೊಳ್ಳಲು ವಿಚಾರಣಾ ನ್ಯಾಯಾಲಯಕ್ಕೆ ಯಾವುದೇ ಆಧಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಇಂದು ತೀರ್ಪು ನೀಡಿದೆ.
- Sushma Chakre
- Updated on: Jul 29, 2026
- 5:05 pm
ಭೋಪಾಲ್ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ; ಪೊಲೀಸರು-ರೈತರ ನಡುವೆ ಘರ್ಷಣೆ
ಬೃಹತ್ ಸಂಖ್ಯೆಯಲ್ಲಿ ನೆರೆದಿದ್ದ ರೈತರು ಮಂಗಳವಾರ ರಾಜ್ಯ ರಾಜಧಾನಿ ಭೋಪಾಲ್ನಲ್ಲಿ ಪ್ರತಿಭಟನೆ ಆರಂಭಿಸಿದ್ದು, ರಾತ್ರಿಯಿಡೀ ಧರಣಿ ಮುಂದುವರಿಸಿದ್ದರು. ಇದರಿಂದಾಗಿ ಅತ್ಯಂತ ದಟ್ಟಣೆಯಿಂದ ಕೂಡಿದ ನರ್ಮದಾಪುರಂ ಹೆದ್ದಾರಿಯಲ್ಲಿ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿತ್ತು. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದ ರೈತರು, ಸೋಮವಾರ ತಡಸಂಜೆ ಸೆಹೋರ್ನ ಬುಧ್ನಿಗೆ ತಲುಪಿ, ಮಂಗಳವಾರ ಭೋಪಾಲ್ಗೆ ಆಗಮಿಸಿದ್ದರು. ರಾಜ್ಯ ಸರ್ಕಾರವು ಈಗಾಗಲೇ ರೈತರೊಂದಿಗೆ ಮೊದಲ ಹಂತದ ಮಾತುಕತೆ ನಡೆಸಿದೆಯಾದರೂ ಯಾವುದೇ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ.
- Sushma Chakre
- Updated on: Jul 29, 2026
- 4:39 pm
ಪ್ರಯಾಣಿಕನಿಗೆ ಸೇರಿದ 35 ಸಾವಿರ ಮೌಲ್ಯದ ಮದ್ಯದ ಬಾಟಲಿ ಒಡೆದ ಪ್ರಕರಣ: ಇಂಡಿಗೋಗೆ ಶಾಕ್ ಕೊಟ್ಟ ಗ್ರಾಹಕರ ಆಯೋಗ
ದೆಹಲಿಯಿಂದ ಚೆನ್ನೈಗೆ ವಿಮಾನದಲ್ಲಿ ಪ್ರಯಾಣಿಸುವಾಗ ಸೂಟ್ಕೇಸ್ನಲ್ಲಿದ್ದ 35,000 ಮೌಲ್ಯದ ದುಬಾರಿ ಮದ್ಯದ ಬಾಟಲಿಯನ್ನು ಒಡೆದು ನಿರ್ಲಕ್ಷ್ಯ ವಹಿಸಿದ್ದ ಇಂಡಿಗೋ ಏರ್ಲೈನ್ಸ್ಗೆ ಹೈದರಾಬಾದ್ ಜಿಲ್ಲಾ ಗ್ರಾಹಕರ ವಿವಾದ ಪರಿಹಾರ ಆಯೋಗವು ಭಾರಿ ದಂಡ ವಿಧಿಸಿದೆ. ಬಾಟಲಿಯನ್ನು ಸರಿಯಾಗಿ ಪ್ಯಾಕ್ ಮಾಡಲಾಗಿತ್ತು ಎಂಬುದನ್ನು ಇಂಡಿಗೋ ಒಪ್ಪಿಕೊಂಡರೂ, ತಮ್ಮ ಲಗೇಜ್ ನಿಯಮಗಳ ಪ್ರಕಾರ ಸೂಕ್ಷ್ಮ ವಸ್ತುಗಳನ್ನು ಪ್ರಯಾಣಿಕರು ತಮ್ಮದೇ ಜವಾಬ್ದಾರಿಯಲ್ಲಿ ಸಾಗಿಸಬೇಕು ಎಂದು ಹೇಳಿ ಕೇವಲ 500 ರೂ. ಮೌಲ್ಯದ ವೋಚರ್ ನೀಡಲು ಮುಂದಾಗಿತ್ತು ಎನ್ನಲಾಗಿದೆ.
- Prasanna Hegde
- Updated on: Jul 29, 2026
- 7:09 pm
‘ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿಗೆ ಅಮಿತ್ ಶಾ ಆದೇಶ’; ರಾಹುಲ್ ಗಾಂಧಿ ಆರೋಪಕ್ಕೆ ರಣರಂಗವಾದ ಸಂಸತ್
ಜುಲೈ 20ರ ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳ ಮೇಲಿನ ಬಲಪ್ರಯೋಗಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರು ಗೃಹ ಸಚಿವ ಅಮಿತ್ ಶಾ ವಿರುದ್ಧ ಇಂದು ಸಂಸತ್ ಅಧಿವೇಶನದಲ್ಲಿ ವಾಗ್ದಾಳಿ ನಡೆಸಿದರು. ಅಮಿತ್ ಶಾ ಅವರೇ ವಿದ್ಯಾರ್ಥಿಗಳ ಮೇಲಿನ ದಾಳಿಗೆ ಆದೇಶ ನೀಡಿದ್ದಾರೆ ಎಂದು ಆರೋಪಿಸಿದ ರಾಹುಲ್ ಗಾಂಧಿ, "ವಿದ್ಯಾರ್ಥಿಗಳ ಮೇಲಿನ ಹಲ್ಲೆಯ ಕುರಿತು ಸಂಸತ್ತನ್ನು ಎದುರಿಸುವ ಮತ್ತು ಮಾತನಾಡುವ ಧೈರ್ಯ ಈಗ ಗೃಹ ಸಚಿವರಿಗೆ ಇಲ್ಲ" ಎಂದು ಲೇವಡಿ ಮಾಡಿದರು. ಅಮಿತ್ ಶಾ ಕುರಿತ ರಾಹುಲ್ ಗಾಂಧಿ ಅವರ ಹೇಳಿಕೆಗೆ ಬಿಜೆಪಿ ಸಂಸದರು ಆಕ್ಷೇಪ ವ್ಯಕ್ತಪಡಿಸಿದರು.
- Sushma Chakre
- Updated on: Jul 29, 2026
- 3:33 pm