National News
ರಾಷ್ಟ್ರೀಯ ಸುದ್ದಿಗಳನ್ನು ಸಮಗ್ರ ಚಿತ್ರಣ ಇಲ್ಲಿ ಸಿಗುತ್ತೇ. ರಾಷ್ಟ್ರೀಯ ಮಟ್ಟದಲ್ಲಿ ನಡೆದ ಸುದ್ದಿಗಳನ್ನು ಇಲ್ಲಿ ತಿಳಿಸಲಾಗುತ್ತದೆ. ರಾಜಕೀಯವಾಗಿ, ಸಾಮಾಜಿಕ, ಹಾಗೂ ದೇಶದ ಬೇರೆ ಬೇರೆ ಊರಿನಲ್ಲಿ ನಡೆದ ಘಟನೆಗಳನ್ನು, ಸುದ್ದಿಗಳನ್ನು ಇಲ್ಲಿ ತಿಳಿಸಲಾಗುವುದು. ದೇಶದ ವಿವಿಧ ರಾಜ್ಯಗಳಲ್ಲಿ ನಡೆಯುವ ಸಂಗತಿಗಳನ್ನು ಹಾಗೂ ಸುದ್ದಿಗಳನ್ನು ತಕ್ಷಣದಲ್ಲಿ ನೀಡಲಾಗುವುದು.
ಭಯೋತ್ಪಾದನೆ ವಿರುದ್ಧ ಜೋರ್ಡಾನ್ ಗಟ್ಟಿ ಸಂದೇಶ ರವಾನಿಸಿದೆ; ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ರಾಜ ಅಬ್ದುಲ್ಲಾ II ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಎರಡು ದಿನಗಳ ಭೇಟಿಗಾಗಿ ಜೋರ್ಡಾನ್ಗೆ ತೆರಳಿದ್ದಾರೆ. ಮೋದಿಯನ್ನು ರಾಜ ಅಬ್ದುಲ್ಲಾ II ಆತ್ಮೀಯವಾಗಿ ಬರಮಾಡಿಕೊಂಡರು. ಮೂರು ರಾಷ್ಟ್ರಗಳೊಂದಿಗಿನ ಸಂಬಂಧವನ್ನು ಮತ್ತಷ್ಟು ಬಲಪಡಿಸುವ ಗುರಿಯನ್ನು ಹೊಂದಿರುವ ತಮ್ಮ ಮೂರು ರಾಷ್ಟ್ರಗಳ ಪ್ರವಾಸದ ಮೊದಲ ಹಂತದಲ್ಲಿ ಆಗಮಿಸಿದ ಪ್ರಧಾನಿ ಮೋದಿ, ಜೋರ್ಡಾನ್ಗೆ ತಮ್ಮ ಭೇಟಿಯು ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಹೆಚ್ಚಿಸುತ್ತದೆ ಎಂದು ಈ ಹಿಂದೆ ಹೇಳಿದ್ದರು.
- Sushma Chakre
- Updated on: Dec 15, 2025
- 11:10 pm
ದೆಹಲಿಯಲ್ಲಿ ಹೆಚ್ಚಿದ ಮಾಲಿನ್ಯ; 5ನೇ ತರಗತಿವರೆಗಿನ ಮಕ್ಕಳು ಶಾಲೆಗೆ ಬರುವಂತಿಲ್ಲ
ದೆಹಲಿಯ ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ಮಾನ್ಯತೆ ಪಡೆದ ಖಾಸಗಿ ಶಾಲೆಗಳಲ್ಲಿ ನರ್ಸರಿಯಿಂದ 5ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ದೈಹಿಕ ತರಗತಿಗಳನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಲಾಗಿದೆ. ಅವರೆಲ್ಲರಿಗೂ ಆನ್ಲೈನ್ ತರಗತಿಗಳು ಮುಂದುವರಿಯುತ್ತವೆ. ಡಿಸೆಂಬರ್ 13ರಂದು ಶಿಕ್ಷಣ ಇಲಾಖೆ ಹೊರಡಿಸಿದ ನಿರ್ದೇಶನಗಳ ಪ್ರಕಾರ, ಉಳಿದ ಶ್ರೇಣಿಗಳಿಗೆ ತರಗತಿಗಳನ್ನು ಹೈಬ್ರಿಡ್ ಮೋಡ್ನಲ್ಲಿ ನಡೆಸಲಾಗುವುದು.
- Sushma Chakre
- Updated on: Dec 15, 2025
- 10:45 pm
ಪಹಲ್ಗಾಮ್ ದಾಳಿಗೆ ಪಾಕ್ ಉಗ್ರನೇ ಮಾಸ್ಟರ್ಮೈಂಡ್; ಲಷ್ಕರ್ ಕಮಾಂಡರ್ ಸಂಚು ಬಯಲಿಗೆಳೆದ ಎನ್ಐಎ
ಈ ವರ್ಷ ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿ ಭಾರತದ ಪಾಲಿಗೆ ಕರಾಳ ನೆನಪಾಗಿಯೇ ಉಳಿದಿದೆ. ಇಡೀ ಜಗತ್ತನ್ನು ಕಂಗೆಡಿಸಿದ್ದ ಈ ಭಯೋತ್ಪಾದಕ ದಾಳಿಯ ಹಿಂದೆ ಪಾಕಿಸ್ತಾನದ ಕೈವಾಡವಿದೆ ಎಂದು ಭಾರತ ಸರ್ಕಾರ ನೇರ ಆರೋಪ ಮಾಡಿದ್ದರೂ ಪಾಕ್ ಅದನ್ನು ನಿರಾಕರಿಸಿತ್ತು. ಇದೀಗ ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (ಎಲ್ಇಟಿ) ಶಾಖೆಯ ನೇತೃತ್ವ ವಹಿಸಿದ್ದ ಪಾಕಿಸ್ತಾನಿ ಭಯೋತ್ಪಾದಕನೇ ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಎಂದು ಎನ್ಐಎ ತನ್ನ ವರದಿಯಲ್ಲಿ ಘೋಷಿಸಿದೆ.
- Sushma Chakre
- Updated on: Dec 15, 2025
- 10:01 pm
ಜೋರ್ಡಾನ್ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಪ್ರಧಾನಿ ನರೇಂದ್ರ ಮೋದಿ ಇಂದು ಜೋರ್ಡಾನ್, ಇಥಿಯೋಪಿಯಾ ಮತ್ತು ಒಮಾನ್ಗೆ 3 ರಾಷ್ಟ್ರಗಳ ಪ್ರವಾಸ ಕೈಗೊಂಡಿದ್ದಾರೆ. ಅವರು ರಾಜ ಅಬ್ದುಲ್ಲಾ II ಇಬ್ನ್ ಅಲ್ ಹುಸೇನ್ ಅವರ ಆಹ್ವಾನದ ಮೇರೆಗೆ ಭೇಟಿ ನೀಡಿದ್ದಾರೆ. ಈ ಭೇಟಿಯು ಎರಡೂ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 75ನೇ ವಾರ್ಷಿಕೋತ್ಸವದೊಂದಿಗೆ ಹೊಂದಿಕೆಯಾಗುತ್ತದೆ.
- Sushma Chakre
- Updated on: Dec 15, 2025
- 9:22 pm
ಪ್ರಧಾನಿ ಮೋದಿಗೆ ಜೋರ್ಡಾನ್ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಜೋರ್ಡಾನ್ ತಲುಪಿದ್ದಾರೆ. ಈ ವೇಳೆ ಖುದ್ದಾಗಿ ಜೋರ್ಡಾನ್ ಪ್ರಧಾನಿ ಜಾಫರ್ ಹಸನ್ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮೋದಿಯನ್ನು ಬರಮಾಡಿಕೊಂಡರು. ಬಳಿಕ ಭಾರತದ ಪ್ರದಾನಿಗೆ ಜೋರ್ಡಾನ್ನಲ್ಲಿ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ಜೋರ್ಡಾನ್ ರಾಜ ಅಬ್ದುಲ್ಲಾ II ಇಬ್ನ್ ಅಲ್ ಹುಸೇನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಇಂದು (ಡಿಸೆಂಬರ್ 15) ಜೋರ್ಡಾನ್ಗೆ ಭೇಟಿ ನೀಡಿದ್ದಾರೆ. ನಾಳೆ ಪ್ರಧಾನಿ ಮೋದಿ ಜೋರ್ಡಾನ್ನಿಂದ ಹೊರಡಲಿದ್ದಾರೆ.
- Sushma Chakre
- Updated on: Dec 15, 2025
- 8:33 pm
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನ ನೀಲೇಶ್ವರದ ರೈಲ್ವೆ ರಸ್ತೆ ಮೇಲ್ಸೇತುವೆ ಬಳಿಯ ಪಲ್ಲಿಕ್ಕರದಲ್ಲಿರುವ ವಿಷ್ಣುಮೂರ್ತಿ ದೇವಸ್ಥಾನದ ಉತ್ಸವದಲ್ಲಿ ಪೂಮಾರುತನ್ ದೇವರ 'ವೆಲ್ಲಟ್ಟಂ' ಆಚರಣೆಯ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ತೆಯ್ಯಂ ಎಂಬುದು ಕೇರಳದ ಒಂದು ಧಾರ್ಮಿಕ ವಿಧಿವಿಧಾನದ ರೂಪ. ಇದರದಲ್ಲಿ ಪ್ರದರ್ಶಕರು ಸಾಂಪ್ರದಾಯಿಕವಾಗಿ ಒಂದು ಕೈಯಲ್ಲಿ ಕತ್ತಿ ಮತ್ತು ಇನ್ನೊಂದು ಕೈಯಲ್ಲಿ ಮರದ ಗುರಾಣಿಯನ್ನು ಹಿಡಿದಿರುತ್ತಾರೆ. ಈ ಪ್ರದರ್ಶನವನ್ನು ಗುರಾಣಿಯನ್ನು ತಿರುಗಿಸುವುದು ಮತ್ತು ಕತ್ತಿಯನ್ನು ಬೀಸುವ ಬಿರುಸಾದ ಚಲನೆಗಳ ಮೂಲಕ ಮಾಡಲಾಗುತ್ತದೆ.
- Sushma Chakre
- Updated on: Dec 15, 2025
- 7:40 pm
ಹೆಂಡತಿಯೆಂದರೆ ಲೈಂಗಿಕ ಕ್ರಿಯೆಗೆ ಮಾತ್ರ ಸೀಮಿತ; ಕೆಂಗಣ್ಣಿಗೆ ಗುರಿಯಾದ ಕೇರಳದ ಸಿಪಿಎಂ ನಾಯಕ
ಮಹಿಳೆಯರು ಗಂಡನೊಂದಿಗೆ ಮಲಗಲು ಮತ್ತು ಮಕ್ಕಳನ್ನು ಹೆರಲು ಮಾತ್ರ ಸೀಮಿತ ಎಂದು ಚುನಾವಣೆಯಲ್ಲಿನ ಭರ್ಜರಿ ಗೆಲುವಿನ ಬಳಿಕ ಕೇರಳ ಸಿಪಿಎಂ ನಾಯಕ ಆಘಾತಕಾರಿ ಹೇಳಿಕೆ ನೀಡಿದ್ದಾರೆ. ತಮ್ಮ ಗೆಲುವಿನ ಭಾಷಣದ ವೇಳೆ ಸ್ತ್ರೀ ದ್ವೇಷ ಕಾರಿರುವ ಅವರ ವಿಡಿಯೋ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಗಂಡಸರು ತಮ್ಮ ಲೈಂಗಿಕ ಕ್ರಿಯೆಗೆ ಮಾತ್ರ ಮಹಿಳೆಯನ್ನು ಮದುವೆಯಾಗಬೇಕು ಎಂದು ಅವರು ಹೇಳುವ ಮೂಲಕ ವಿವಾದಕ್ಕೆ ತುತ್ತಾಗಿದ್ದಾರೆ.
- Sushma Chakre
- Updated on: Dec 15, 2025
- 7:55 pm
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಜೋರ್ಡಾನ್, ಓಮನ್ ಮತ್ತು ಇಥಿಯೋಪಿಯಾಗೆ ಪ್ರವಾಸ ಆರಂಭಿಸಿದ್ದಾರೆ. ಈ ಭೇಟಿ ಈ ರಾಷ್ಟ್ರಗಳೊಂದಿಗಿನ ಭಾರತದ ಸಂಬಂಧಗಳು ವ್ಯವಹಾರ, ವಿಶ್ವಾಸಾರ್ಹತೆ ಮತ್ತು ಸಹಕಾರವನ್ನು ಹೇಗೆ ಒತ್ತಿಹೇಳುತ್ತವೆ. ಪ್ರಧಾನಿ ಮೋದಿ ಜೋರ್ಡಾನ್ನ ಅಮ್ಮನ್ನಲ್ಲಿ ಬಂದಿಳಿದಿದ್ದಾರೆ. ಜೋರ್ಡಾನ್ ಪ್ರಧಾನಿ ಅವರಿಂದ ಮೋದಿಗೆ ಸ್ವಾಗತ ನೀಡಲಾಯಿತು.
- Sushma Chakre
- Updated on: Dec 15, 2025
- 5:09 pm
ಬಹಿರಂಗವಾಗಿ ಕ್ಷಮೆ ಕೇಳಿ; ರ್ಯಾಲಿಯಲ್ಲಿ ‘ಮೋದಿ ಸಮಾಧಿ’ ಘೋಷಣೆ ಕೂಗಿದ ಕಾಂಗ್ರೆಸ್ ವಿರುದ್ಧ ಕಿರಣ್ ರಿಜಿಜು ಆಕ್ರೋಶ
ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಕಾಂಗ್ರೆಸ್ ರ್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಿವಾದಾತ್ಮಕ ಘೋಷಣೆಗಳನ್ನು ಕೂಗಲಾಗಿತ್ತು. ಮೋದಿ ಸಮಾಧಿ ಅಗೆಯಬೇಕು ಎಂಬೆಲ್ಲ ಘೋಷಣೆಗಳನ್ನು ಕಾಂಗ್ರೆಸ್ ಕಾರ್ಯಕರ್ತರು ಕೂಗಿದ್ದರು. ಹೀಗಾಗಿ, ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಕ್ಷಮೆ ಯಾಚಿಸಬೇಕೆಂದು ಬಿಜೆಪಿ ಆಗ್ರಹಿಸಿದೆ.
- Sushma Chakre
- Updated on: Dec 15, 2025
- 4:45 pm
ದೆಹಲಿ ಮಾಲಿನ್ಯದ ಬಗ್ಗೆ ಕಳವಳ; ಇಂಗ್ಲೆಂಡ್, ಕೆನಡಾ, ಸಿಂಗಾಪುರದ ಪ್ರಯಾಣಿಕರಿಗೆ ಅಲರ್ಟ್
ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾಗಿರುವುದರಿಂದ ಇಂಗ್ಲೆಂಡ್, ಕೆನಡಾ, ಸಿಂಗಾಪುರದ ಪ್ರಯಾಣಿಕರಿಗೆ ಅಲ್ಲಿನ ಸರ್ಕಾರ ದೆಹಲಿಗೆ ತೆರಳುವಾಗ ಎಚ್ಚರ ವಹಿಸುವಂತೆ ಸಲಹೆ ನೀಡಿದೆ. ದೆಹಲಿಯಲ್ಲಿ ಗಾಳಿಯ ಗುಣಮಟ್ಟ (AQI) 500ಕ್ಕೆ ತಲುಪಿದೆ. ಇದು ಭಾರತದಲ್ಲಿ ಮಾತ್ರವಲ್ಲದೆ ಬೇರೆ ದೇಶಗಳಲ್ಲೂ ಕಳವಳ ಮೂಡಿಸಿದೆ. ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯದಿಂದಾಗಿ ಉಸಿರಾಡಲೂ ಕಷ್ಟಪಡುವಂತಾಗಿದೆ.
- Sushma Chakre
- Updated on: Dec 15, 2025
- 3:47 pm
ಪೆರೇಡ್ ವೇಳೆ ಅಧಿಕಾರಿಗಳ ಜೊತೆ ಭಾರತೀಯ ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ ಪುಷ್ಅಪ್; ವಿಡಿಯೋ ವೈರಲ್
ಈ ವಿಡಿಯೋ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಪಾಸಿಂಗ್ ಔಟ್ ಪೆರೇಡ್ನಲ್ಲಿ ಅಧಿಕಾರಿಗಳೊಂದಿಗೆ ಉಪೇಂದ್ರ ದ್ವಿವೇದಿ ಪುಷ್-ಅಪ್ಗಳನ್ನು ಮಾಡುತ್ತಿರುವುದನ್ನು ನೋಡಬಹುದು. ಐತಿಹಾಸಿಕ ಡ್ರಿಲ್ ಸ್ಕ್ವೇರ್ನಲ್ಲಿ ನಡೆದ ಪಾಸಿಂಗ್ ಔಟ್ ಪೆರೇಡ್ನಲ್ಲಿ 491 ಕೆಡೆಟ್ಗಳು ಭಾಗವಹಿಸಿದ್ದರು. ಇನ್ನು ಅವರನ್ನು ಭಾರತೀಯ ಸೇನೆಯಲ್ಲಿ ಅಧಿಕಾರಿಗಳಾಗಿ ನಿಯೋಜಿಸಲಾಗುವುದು. 525 ಕೆಡೆಟ್ಗಳು ಭಾಗವಹಿಸಿದ್ದ ಈ ಪೆರೇಡ್ನಲ್ಲಿ ಉಪೇಂದ್ರ ದ್ವಿವೇದಿ ಪರಿಶೀಲನಾ ಅಧಿಕಾರಿಯಾಗಿದ್ದರು.
- Sushma Chakre
- Updated on: Dec 13, 2025
- 10:45 pm
ಶಾಲೆಯೊಳಗೇ ಆಲ್ಕೋಹಾಲ್ ಪಾರ್ಟಿ ಮಾಡಿದ ಹುಡುಗಿಯರು! 6 ವಿದ್ಯಾರ್ಥಿನಿಯರ ಅಮಾನತು
ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ಪಳಯಂಕೊಟ್ಟೈನಲ್ಲಿರುವ ಜನಪ್ರಿಯ ಶಾಲೆಯಲ್ಲಿ ಓದುತ್ತಿರುವ ಹೆಣ್ಣುಮಕ್ಕಳು ತರಗತಿಯಲ್ಲಿ ಆಘಾತಕಾರಿ ಕೃತ್ಯದಲ್ಲಿ ಭಾಗಿಯಾಗಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆದ ನಂತರ, ಶಾಲಾ ಆಡಳಿತ ಮಂಡಳಿಯು 6 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿದೆ. ಇದು ಶಾಲೆ ಮತ್ತು ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳ ಬಗ್ಗೆ ಆತಂಕವನ್ನು ಹೆಚ್ಚಿಸಿದೆ. ಅದರಲ್ಲೂ ಹೆಣ್ಣುಮಕ್ಕಳು ಈ ರೀತಿ ಮಾಡಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ.
- Sushma Chakre
- Updated on: Dec 13, 2025
- 9:44 pm