AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

National News

National News

ರಾಷ್ಟ್ರೀಯ ಸುದ್ದಿಗಳನ್ನು ಸಮಗ್ರ ಚಿತ್ರಣ  ಇಲ್ಲಿ ಸಿಗುತ್ತೇ. ರಾಷ್ಟ್ರೀಯ ಮಟ್ಟದಲ್ಲಿ ನಡೆದ ಸುದ್ದಿಗಳನ್ನು ಇಲ್ಲಿ ತಿಳಿಸಲಾಗುತ್ತದೆ.  ರಾಜಕೀಯವಾಗಿ, ಸಾಮಾಜಿಕ, ಹಾಗೂ ದೇಶದ ಬೇರೆ ಬೇರೆ ಊರಿನಲ್ಲಿ ನಡೆದ ಘಟನೆಗಳನ್ನು, ಸುದ್ದಿಗಳನ್ನು ಇಲ್ಲಿ ತಿಳಿಸಲಾಗುವುದು. ದೇಶದ ವಿವಿಧ ರಾಜ್ಯಗಳಲ್ಲಿ ನಡೆಯುವ ಸಂಗತಿಗಳನ್ನು ಹಾಗೂ ಸುದ್ದಿಗಳನ್ನು ತಕ್ಷಣದಲ್ಲಿ ನೀಡಲಾಗುವುದು. 

ಮಕ್ಕಳ ಬಗ್ಗೆ ಎಚ್ಚರ; ಬಾಳೆಹಣ್ಣು ಗಂಟಲಲ್ಲಿ ಸಿಕ್ಕಿ 5 ವರ್ಷದ ಬಾಲಕ ಸಾವು!

ಬಾಳೆಹಣ್ಣು ತಿಂದು ಉಸಿರುಗಟ್ಟಿ 5 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ತಮಿಳುನಾಡಿನಾದ್ಯಂತ ತೀವ್ರ ಆಘಾತವನ್ನುಂಟು ಮಾಡಿದೆ. ಈರೋಡ್​​ನ ಬಾಲಕನ ಶವವನ್ನು ಈರೋಡ್ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಮಾಡಿ ಪೋಷಕರಿಗೆ ಹಸ್ತಾಂತರಿಸಲಾಯಿತು. ತಮಿಳುನಾಡಿನಲ್ಲಿ ವೈದ್ಯರು ಸೇರಿದಂತೆ ಅನೇಕ ಜನರು ಬಾಲಕನ ಸಾವಿಗೆ ಕಾರಣವನ್ನು ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದಾರೆ. ವೈದ್ಯರು ಕೂಡ ಶವಪರೀಕ್ಷೆಯ ಫಲಿತಾಂಶಗಳಿಗಾಗಿ ಕಾಯುತ್ತಿದ್ದಾರೆ.

ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್​​

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದಿನಿಂದ ಭಾರತಕ್ಕೆ ಎರಡು ದಿನಗಳ ಭೇಟಿ ನೀಡಿದ್ದು, ಅವರನ್ನು ಪಾಲಂ ವಿಮಾನ ನಿಲ್ದಾಣದಲ್ಲಿ ಖುದ್ದು ಮೋದಿಯವರೇ ಬರಮಾಡಿಕೊಂಡಿದ್ದಾರೆ. ಈ ವೇಳೆ ವಿಮಾನ ನಿಲ್ದಾಣದಲ್ಲಿ ಪ್ರದರ್ಶಿಸಿದ ಭಾರತೀಯ ಶಾಸ್ತ್ರೀಯ ನೃತ್ಯಕ್ಕೆ ಪುಟಿನ್ ಮನಸೋತಿದ್ದಾರೆ. ಇದಾದ ಬಳಿಕ ಇಬ್ಬರೂ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವಾರ್ಷಿಕ ಶೃಂಗಸಭೆ ಮಾತುಕತೆ ನಡೆಸಲಿದ್ದಾರೆ.

ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತಮ್ಮ ಎರಡು ದಿನಗಳ ರಾಜ್ಯ ಭೇಟಿಗಾಗಿ ಭಾರತದಲ್ಲಿದ್ದಾರೆ. ರಷ್ಯಾದ ನಿಯೋಗವು ವ್ಯಾಪಾರ, ಆರ್ಥಿಕತೆ, ವಿಜ್ಞಾನ, ತಂತ್ರಜ್ಞಾನ ಮತ್ತು ಸಂಸ್ಕೃತಿಯಂತಹ ಕ್ಷೇತ್ರಗಳಲ್ಲಿ ಸಹಕಾರದ ಕುರಿತು ಚರ್ಚೆ ನಡೆಸಲಿದೆ. ಪುಟಿನ್ 23 ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಡಿಸೆಂಬರ್ 5 ರಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ 23ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ಪುಟಿನ್ ಭಾಗವಹಿಸಲಿದ್ದಾರೆ.

ಪ್ರೋಟೋಕಾಲ್ ಬದಿಗೊತ್ತಿ ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಪ್ರಧಾನಿ ಮೋದಿ

ಇಂದು ಸಂಜೆ ನವದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಸ್ವಾಗತಿಸಲು ಪ್ರಧಾನಿ ನರೇಂದ್ರ ಮೋದಿ ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ. ಪುಟಿನ್ ಎರಡು ದಿನಗಳ ಭೇಟಿಯಲ್ಲಿದ್ದು, ಪ್ರಧಾನಿ ಮೋದಿ ಅವರೊಂದಿಗೆ 23ನೇ ಭಾರತ-ರಷ್ಯಾ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಫೆಬ್ರವರಿ 2022ರಲ್ಲಿ ಉಕ್ರೇನ್ ಯುದ್ಧ ಪ್ರಾರಂಭವಾದ ನಂತರ ಭಾರತಕ್ಕೆ ಪುಟಿನ್ ಅವರ ಮೊದಲ ಭೇಟಿ ಇದಾಗಿದೆ.

ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು

ಜಾರ್ಖಂಡ್‌ನಲ್ಲಿ "ವಿಷಕಾರಿ ಅನಿಲ ಸೋರಿಕೆ"ಯಾಗಿ, ಈ ಗಾಳಿ ಉಸಿರಾಡಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ ಮತ್ತು ಒಂದು ಡಜನ್‌ಗೂ ಹೆಚ್ಚು ಜನರು ಆಸ್ಪತ್ರೆಯಲ್ಲಿದ್ದಾರೆ. ಅನಿಲ ಸೋರಿಕೆಯ ಮೂಲ ಮತ್ತು ಕಾರಣವನ್ನು ಅಧಿಕಾರಿಗಳು ಪತ್ತೆಹಚ್ಚುತ್ತಿದ್ದಾರೆ. ಇದು ಸರ್ಕಾರಿ ಸ್ವಾಮ್ಯದ ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್‌ನ (BCCL) ಕಲ್ಲಿದ್ದಲು ಗಣಿಗಾರಿಕೆ ಪ್ರದೇಶದ ಭಾಗವಾಗಿದೆ. ಗ್ಯಾಸ್ ಸೋರಿಕೆಯಾದ ನಂತರ ಕಂಪನಿಯು ನಿವಾಸಿಗಳನ್ನು ಸ್ಥಳಾಂತರಿಸಲು ಪ್ರಾರಂಭಿಸಿದೆ.

ಭಾರತಕ್ಕೆ ಪುಟಿನ್ ಭೇಟಿ; ರಷ್ಯಾ ಅಧ್ಯಕ್ಷ 2 ದಿನ ದೆಹಲಿಯಲ್ಲಿ ಏನು ಮಾಡಲಿದ್ದಾರೆ?

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ಸಂಜೆ 6.30ಕ್ಕೆ ದೆಹಲಿಗೆ ಆಗಮಿಸಲಿದ್ದಾರೆ. ಪುಟಿನ್ ಅವರ ಜೊತೆಗೆ ಅವರ ನೆಚ್ಚಿನ ಕಾರು ಔರಸ್ ಸೆನಾಟ್ ಲಿಮೋಸುಯಿನ್ ಕೂಡ ಭಾರತಕ್ಕೆ ಬರಲಿದೆ. ಈ ಕಾರನ್ನು ಅತ್ಯಂತ ಸುರಕ್ಷತೆಯ ದೃಷ್ಟಿಯಿಂದ ಐಷಾರಾಮಿಯಾಗಿ ಸಿದ್ಧಪಡಿಸಲಾಗಿದೆ. ಇದು ರಷ್ಯಾದ ಅಧಿಕೃತ ಅಧ್ಯಕ್ಷೀಯ ಸರ್ಕಾರಿ ಕಾರು. ಇದನ್ನು ಹೆಚ್ಚಾಗಿ ರೋಲ್ಸ್ ರಾಯ್ಸ್‌ಗೆ ಹೋಲಿಸಲಾಗುತ್ತದೆ. ಈ ಕಾರು ಪುಟಿನ್ ಜೊತೆಗೆ ದೆಹಲಿಗೂ ಬರಲಿದೆ. ದೆಹಲಿಯಲ್ಲಿ ಪುಟಿನ್ ಅವರ ವೇಳಾಪಟ್ಟಿ ಹೀಗಿದೆ.

ಪ್ರಧಾನಿ ಮೋದಿ- ಪುಟಿನ್ ಗೆಳೆತನ 25 ವರ್ಷಕ್ಕೂ ಹಿಂದಿನದು; ವಾಜಪೇಯಿ ಜೊತೆಗಿನ ಫೋಟೋ ಮತ್ತೆ ವೈರಲ್

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ 4 ವರ್ಷಗಳ ಬಳಿಕ ಇದೀಗ ಮತ್ತೆ ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಇಂದು ಸಂಜೆ ಅವರು ದೆಹಲಿಗೆ ಬಂದಿಳಿಯಲಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ಸಂಜೆ 6.30ಕ್ಕೆ ನವದೆಹಲಿಗೆ ಆಗಮಿಸಲಿದ್ದಾರೆ. ಇದು ಉಕ್ರೇನ್ ಸಂಘರ್ಷ ಪ್ರಾರಂಭವಾದ ನಂತರದ ಅವರ ಮೊದಲ ಭಾರತ ಭೇಟಿಯಾಗಿದೆ. ಮೋದಿ ಹಾಗೂ ಪುಟಿನ್ ನಡುವಿನ ಉತ್ತಮ ಬಾಂಧವ್ಯದ ಬಗ್ಗೆ ಎಲ್ಲರಿಗೂ ಗೊತ್ತಿದೆ. ಆದರೆ, ಈ ಸ್ನೇಹ ಮೋದಿ ಪ್ರಧಾನಿಯಾದ ಬಳಿಕ ಶುರುವಾಗಿದ್ದಲ್ಲ; ಈ ಗೆಳೆತನಕ್ಕೆ 25ಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದೆ.

ನನಗಿಂತ ಸುಂದರವಾಗಿ ಕಾಣ್ತಿದ್ದಾರೆ ಅಂತಾ ಸ್ವಂತ ಮಗು ಸೇರಿ 4 ಮಕ್ಕಳನ್ನು ಕೊಂದ ಮಹಿಳೆ!

ಹರಿಯಾಣದ ಪಾಣಿಪತ್‌ನಲ್ಲಿ ನಡೆದ ಸರಣಿ ಕೊಲೆ ಪ್ರಕರಣವೊಂದು ಜನರನ್ನು ಬೆಚ್ಚಿಬೀಳಿಸಿದೆ. ತಾಯಿ-ಮಕ್ಕಳ ಬಾಂಧವ್ಯವೆಂಬುದು ಪ್ರಕೃತಿಯೇ ನೀಡಿದ ಅಪೂರ್ವ ಕೊಡುಗೆ. ಆದರೆ ಇಲ್ಲೊಬ್ಬ ತಾಯಿ ತನ್ನ ಸ್ವಂತ ಮಗುವನ್ನು ಸೇರಿದಂತೆ ಸಂಬಂಧಿಕರ ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾಳೆ. ನೌಲ್ತಾ ಗ್ರಾಮದ 32 ವರ್ಷದ ಪೂನಂ ಎಂಬ ಮಹಿಳೆ ಕಳೆದ ಎರಡು ವರ್ಷಗಳಲ್ಲಿ, ತನ್ನದೇ ಮೂರು ವರ್ಷದ ಮಗುವೂ ಸೇರಿದಂತೆ ನಾಲ್ಕು ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಹತ್ಯೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ.

ದೆಹಲಿಯಲ್ಲಿ ಇಂದು ಪುಟಿನ್ ತಂಗಲಿರುವ ಹೋಟೆಲ್ ರೂಂ ಬಾಡಿಗೆ ಕೇಳಿದರೆ ಶಾಕ್ ಆಗುತ್ತೀರಿ!

Putin Visit to Delhi: ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎರಡು ದಿನಗಳ ಭೇಟಿಗಾಗಿ ಇಂದು (ಡಿಸೆಂಬರ್ 4) ನವದೆಹಲಿಗೆ ಆಗಮಿಸಲಿದ್ದಾರೆ. ಈ ಉನ್ನತ ಮಟ್ಟದ ಭೇಟಿಗಾಗಿ ದೆಹಲಿಯ ಐಟಿಸಿ ಮೌರ್ಯದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಹೀಗಾಗಿ, ಈ ಐಷಾರಾಮಿ ಹೋಟೆಲ್ ಮಾಧ್ಯಮ ಮತ್ತು ಭದ್ರತಾ ಸಂಸ್ಥೆಗಳ ಗಮನ ಸೆಳೆಯುತ್ತಿರುವ ಕೇಂದ್ರಬಿಂದುವಾಗಿದೆ. ಈ ಹೋಟೆಲ್ ಈಗ ಬಿಗಿಯಾದ ಕಣ್ಗಾವಲಿನಲ್ಲಿದೆ. ಈ ಹೋಟೆಲ್​​ನ ಬಹುತೇಕ ಎಲ್ಲಾ ಕೊಠಡಿಗಳನ್ನು ಕಾಯ್ದಿರಿಸಲಾಗಿದೆ. ಈ ಹೋಟೆಲ್​​ನ ರೂಂನ ಬಾಡಿಗೆ ಎಷ್ಟು ಗೊತ್ತಾ?

ಪಾನ್ ಮಸಾಲಾ ಪ್ಯಾಕೆಟ್‌ ಮೇಲೆ ಚಿಲ್ಲರೆ ಮಾರಾಟ ಬೆಲೆ ನಮೂದಿಸುವುದು ಕಡ್ಡಾಯ

ಪಾನ್ ಮಸಾಲಾ ಪ್ಯಾಕೆಟ್‌ಗಳ ಮೇಲೆ ಚಿಲ್ಲರೆ ಮಾರಾಟ ಬೆಲೆಯನ್ನು ನಮೂದಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಆದೇಶದಂತೆ ಇನ್ಮುಂದೆ ಪಾನ್ ಮಸಾಲಾ ಪ್ಯಾಕ್‌ಗಳ ಮೇಲೆ RSP ಹಾಕುವುದು ಕಡ್ಡಾಯವಾಗಿದೆ. ಕಡ್ಡಾಯವಾಗಿ ಚಿಲ್ಲರೆ ಮಾರಾಟ ಬೆಲೆ ಹಾಕುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. 2026ರ ಫೆಬ್ರವರಿ 1ರಿಂದ ಕೇಂದ್ರ ಸರ್ಕಾರದ ಹೊಸ ಆದೇಶ ಅನ್ವಯವಾಗಲಿದೆ. ಗ್ರಾಹಕರಿಗೆ ಪಾರದರ್ಶಕತೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಹೊಸ ಆದೇಶ ಹೊರಡಿಸಿದೆ. ಎಲ್ಲಾ ಗಾತ್ರದ ಪಾನ್ ಮಸಾಲಾ ಪ್ಯಾಕ್‌ ಮೇಲೂ ಚಿಲ್ಲರೆ ಮಾರಾಟ ಬೆಲೆ ಹಾಕುವುದು ಕಡ್ಡಾಯವಾಗಿದೆ. ಕಾನೂನು ಮಾಪನಶಾಸ್ತ್ರ ತಿದ್ದುಪಡಿ ಅಡಿಯಲ್ಲಿ ಕೇಂದ್ರ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ