National News
ರಾಷ್ಟ್ರೀಯ ಸುದ್ದಿಗಳನ್ನು ಸಮಗ್ರ ಚಿತ್ರಣ ಇಲ್ಲಿ ಸಿಗುತ್ತೇ. ರಾಷ್ಟ್ರೀಯ ಮಟ್ಟದಲ್ಲಿ ನಡೆದ ಸುದ್ದಿಗಳನ್ನು ಇಲ್ಲಿ ತಿಳಿಸಲಾಗುತ್ತದೆ. ರಾಜಕೀಯವಾಗಿ, ಸಾಮಾಜಿಕ, ಹಾಗೂ ದೇಶದ ಬೇರೆ ಬೇರೆ ಊರಿನಲ್ಲಿ ನಡೆದ ಘಟನೆಗಳನ್ನು, ಸುದ್ದಿಗಳನ್ನು ಇಲ್ಲಿ ತಿಳಿಸಲಾಗುವುದು. ದೇಶದ ವಿವಿಧ ರಾಜ್ಯಗಳಲ್ಲಿ ನಡೆಯುವ ಸಂಗತಿಗಳನ್ನು ಹಾಗೂ ಸುದ್ದಿಗಳನ್ನು ತಕ್ಷಣದಲ್ಲಿ ನೀಡಲಾಗುವುದು.
ರಾಯಗಢ ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್ಪಿಜಿ ಸಿಲಿಂಡರ್ಗಳು; ವಿಡಿಯೋ ವೈರಲ್!
ಪನ್ವೇಲ್ ತಾಲೂಕಿನ ಎಂಐಡಿಸಿ ಚಾವಣೆಯಲ್ಲಿರುವ ಹೆಚ್ಪಿಸಿಎಲ್ ಪಾತಳಗಂಗಾ ಎಲ್ಪಿಜಿ ಬಾಟ್ಲಿಂಗ್ ಪ್ಲಾಂಟ್ಗೆ ನಿರಂತರವಾಗಿ ಸುರಿದ ಧಾರಾಕಾರ ಮಳೆಯಿಂದಾಗಿ ಪ್ರವಾಹದ ನೀರು ನುಗ್ಗಿದೆ. ಪ್ರವಾಹದ ರಭಸಕ್ಕೆ ಪ್ಲಾಂಟ್ನ ರಕ್ಷಣಾ ಗೋಡೆ ಕುಸಿದು ಬಿದ್ದಿದ್ದರಿಂದ, ಅಲ್ಲಿ ಸಂಗ್ರಹಿಸಿಡಲಾಗಿದ್ದ ಸುಮಾರು 3,000 ಸಿಲಿಂಡರ್ಗಳು ಕೊಚ್ಚಿಹೋಗಿವೆ. ಸೇತುವೆಯ ಮೇಲಿಂದ ನೂರಾರು ಸಿಲಿಂಡರ್ಗಳು ನದಿಯಲ್ಲಿ ತೇಲುತ್ತಾ ಹೋಗುತ್ತಿದ್ದ ದೃಶ್ಯವನ್ನು ಸ್ಥಳೀಯರು ಆಶ್ಚರ್ಯದಿಂದ ಮೊಬೈಲ್ನಲ್ಲಿ ಚಿತ್ರೀಕರಿಸಿದ್ದಾರೆ. ಹಲವರು ನೀರಿನಲ್ಲಿ ಬಗ್ಗಿ ಆ ಸಿಲಿಂಡರ್ಗಳನ್ನು ಎತ್ತಿಕೊಂಡು ಹೋಗಿದ್ದಾರೆ.
- Sushma Chakre
- Updated on: Jul 9, 2026
- 10:38 pm
ಟಿಎಂಸಿ ಪಕ್ಷ ತೊರೆದಿದ್ದ ಮೂವರು ಮಾಜಿ ಸಂಸದರು ಬಿಜೆಪಿಗೆ ಸೇರ್ಪಡೆ
ರಾಜ್ಯಸಭಾ ಉಪಚುನಾವಣೆಗಳು ಸಮೀಪಿಸುತ್ತಿವೆ. ಅದಕ್ಕೂ ಮುನ್ನ ತೃಣಮೂಲ ಕಾಂಗ್ರೆಸ್ನ ಮೂವರು ಮಾಜಿ ಸಂಸದರಾದ ಸುಖೇಂದು ಶೇಖರ್ ರೇ, ಸುಷ್ಮಿತಾ ದೇವ್ ಮತ್ತು ಪ್ರಕಾಶ್ ಚಿಕ್ ಬರೈಕ್ ಬಿಜೆಪಿ ಸೇರಿದ್ದಾರೆ. ಇಂದು ಅವರು ರಾಜ್ಯ ಬಿಜೆಪಿ ಪ್ರಧಾನ ಕಚೇರಿಗೆ ತೆರಳಿ, ಅಲ್ಲಿ ಬಿಜೆಪಿ ರಾಜ್ಯ ಅಧ್ಯಕ್ಷ ಶಮಿಕ್ ಭಟ್ಟಾಚಾರ್ಯ ಅವರ ಕೈ ಹಿಡಿದು ಬಿಜೆಪಿ ಸೇರಿದರು. ರಾಜ್ಯಸಭೆಗೆ ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ಟಿಎಂಸಿ ಮಾಜಿ ನಾಯಕರಾದ ಸುಷ್ಮಿತಾ ದೇವ್, ಸುಖೇಂದು ಶೇಖರ್, ಪ್ರಕಾಶ್ ಬರೈಕ್ ಬಿಜೆಪಿಗೆ ಸೇರಿದ್ದಾರೆ.
- Sushma Chakre
- Updated on: Jul 9, 2026
- 9:42 pm
ಗಡಿ ಜಿಲ್ಲೆಗಳ ಎಸ್ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಗೃಹ ಸಚಿವ ಅಮಿತ್ ಶಾ
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಶಾ ಅವರು ನವದೆಹಲಿಯಲ್ಲಿ ನಡೆದ 'ಗಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಮ್ಮೇಳನ-2026' ರ ನೇತೃತ್ವ ವಹಿಸಿ, ಭಾರತದ ಭೂ ಗಡಿಯುದ್ದಕ್ಕೂ ಇರುವ ಸುಮಾರು 119 ಜಿಲ್ಲೆಗಳ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು. ಸೂಕ್ಷ್ಮ ಗಡಿ ಪ್ರದೇಶಗಳಲ್ಲಿನ ಸದ್ಯದ ಪರಿಸ್ಥಿತಿಯನ್ನು ಮೌಲ್ಯಮಾಪನ ಮಾಡುವ ಮೂಲಕ ಮತ್ತು ಕಾನೂನು ಜಾರಿಯನ್ನು ಸುಧಾರಿಸುವ ಕ್ರಮಗಳನ್ನು ಗುರುತಿಸುವ ಮೂಲಕ ದೇಶದ ಗಡಿ ಭದ್ರತಾ ವ್ಯವಸ್ಥೆಯನ್ನು ಬಲಪಡಿಸಲು ಸಭೆಯಲ್ಲಿ ಅಮಿತ್ ಶಾ ಸೂಚಿಸಿದರು.
- Sushma Chakre
- Updated on: Jul 9, 2026
- 8:58 pm
38 ಬೇಡಿಕೆ, 48 ಗಂಟೆಯ ಗಡುವು; ಪಿಒಕೆಯಲ್ಲಿ ಮತ್ತೆ ಸಂಘರ್ಷದ ಭೀತಿ
ಪಾಕಿಸ್ತಾನದ ವಿರುದ್ಧ ಧಂಗೆದ್ದಿರುವ ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಜನರು ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ಪಾಕಿಸ್ತಾನ ಸರ್ಕಾರದ ತಾರತಮ್ಯ ನೀತಿಗಳ ವಿರುದ್ಧ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (PoK) ಆಡಳಿತ ವಿರೋಧಿ ಅಲೆ ಭುಗಿಲೆದ್ದಿದ್ದು, ಮಾತುಕತೆಗಳು ವಿಫಲವಾಗಿರುವುದರಿಂದ ಮುಂಬರುವ ದಿನಗಳಲ್ಲಿ ಈ ಪ್ರದೇಶವು ಮತ್ತಷ್ಟು ಹಿಂಸಾತ್ಮಕ ಸಂಘರ್ಷಕ್ಕೆ ಸಾಕ್ಷಿಯಾಗುವ ಭೀತಿ ಎದುರಾಗಿದೆ. ಪ್ರಾದೇಶಿಕ ಚುನಾವಣೆಗಳು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ, 48 ಗಂಟೆಗಳ ಈ ಗಡುವು ಪಿಒಕೆಯನ್ನು ಮತ್ತೊಂದು ದೊಡ್ಡ ರಾಜಕೀಯ ಮತ್ತು ಹಿಂಸಾತ್ಮಕ ಸಂಘರ್ಷದ ಭೀತಿಯನ್ನು ಹೆಚ್ಚಿಸಿದೆ.
- Sushma Chakre
- Updated on: Jul 9, 2026
- 7:59 pm
ಮೊಮ್ಮಗನಿಗಾಗಿ ತಾವೇ ಪೂರಿ ಮಾಡಿಕೊಟ್ಟ ಸಿಎಂ; ಇಂಟರ್ನೆಟ್ನಲ್ಲಿ ವಿಡಿಯೋ ವೈರಲ್
ರಾಜಕಾರಣದಲ್ಲಿ ಸದಾ ಬ್ಯುಸಿಯಾಗಿರುವ ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಈ ಬಾರಿ ತಮ್ಮ ಕುಟುಂಬದೊಂದಿಗೆ ಕಳೆದ ವಿಶೇಷ ಕ್ಷಣದೊಂದಿಗೆ ಸುದ್ದಿಯಲ್ಲಿದ್ದಾರೆ. ಅವರು ಅಡುಗೆಮನೆಗೆ ಹೋಗಿ ತಮ್ಮ ಮೊಮ್ಮಗ ರೇಯಾಂಶ್ಗಾಗಿ ಪೂರಿ ತಯಾರಿಸುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಸಿಎಂ ರೇವಂತ್ ರೆಡ್ಡಿ ಅವರೇ ಅಡುಗೆ ಮನೆಯಲ್ಲಿ ಪೂರಿ ಲಟ್ಟಿಸುತ್ತಾ, ತಮ್ಮ ಮೊಮ್ಮಗನೊಂದಿಗೆ ಮೋಜು ಮಸ್ತಿ ಮಾಡುತ್ತಾ, ಪೂರಿಗಳನ್ನು ತಯಾರಿಸುತ್ತಾ ಸಮಯ ಕಳೆದ ಈ ಕ್ಷಣಗಳನ್ನು ಹಂಚಿಕೊಂಡಿದ್ದಾರೆ.
- Sushma Chakre
- Updated on: Jul 9, 2026
- 6:54 pm
ಉಗ್ರರ ನೆಲೆ ಮೇಲಿನ ದಾಳಿ ಜಗತ್ತಿನಾದ್ಯಂತ ಪ್ರತಿಧ್ವನಿಸಿತು; ಆಸ್ಟ್ರೇಲಿಯಾದಲ್ಲಿ ಮೋದಿಯಿಂದ ಆಪರೇಷನ್ ಸಿಂಧೂರದ ಗುಣಗಾನ
ಪ್ರಧಾನಿ ನರೇಂದ್ರ ಮೋದಿ ಇಂದು ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಅನಿವಾಸಿ ಭಾರತೀಯರ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆ. ಅದ್ದೂರಿಯಾಗಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾರತದ ಭದ್ರತಾ ಪಡೆಗಳು ಕಳೆದ ವರ್ಷ ನಡೆಸಿದ 'ಆಪರೇಷನ್ ಸಿಂಧೂರ್' ಮಿಲಿಟರಿ ಕಾರ್ಯಾಚರಣೆಯನ್ನು ಶ್ಲಾಘಿಸಿದ್ದಾರೆ. ಆಸ್ಟ್ರೇಲಿಯಾದ ಅನಿವಾಸಿ ಭಾರತೀಯರ ಜೊತೆ ಇನ್ನೂ ಹಲವು ಸಂಗತಿಗಳ ಬಗ್ಗೆ ಮೋದಿ ಮಾತನಾಡಿದ್ದಾರೆ. ಆ ಕುರಿತು ಮಾಹಿತಿ ಇಲ್ಲಿದೆ.
- Sushma Chakre
- Updated on: Jul 9, 2026
- 5:12 pm
ಆಸ್ಟ್ರೇಲಿಯಾದಲ್ಲಿ ಭಾರತೀಯರಿಂದ ಪ್ರಧಾನಿ ಮೋದಿಗೆ ಭವ್ಯ ಸ್ವಾಗತ; ವಂದೇ ಮಾತರಂ ಜೈಕಾರ
ನರೇಂದ್ರ ಮೋದಿ ಇಂದು ತಮ್ಮ 3 ದಿನಗಳ ಅಧಿಕೃತ ಭೇಟಿಗಾಗಿ ಆಸ್ಟ್ರೇಲಿಯಾಗೆ ಆಗಮಿಸಿದ್ದಾರೆ. ಈ ವೇಳೆ ಆಸ್ಟ್ರೆಲಿಯಾದ ಅನಿವಾಸಿ ಭಾರತೀಯರು ಅವರಿಗೆ ಅತ್ಯಂತ ಅದ್ಧೂರಿ ಸ್ವಾಗತ ಕೋರಿದ್ದಾರೆ. ಪ್ರಧಾನಿ ಮೋದಿ ಅವರು ಮೆಲ್ಬೋರ್ನ್ ತಲುಪುತ್ತಿದ್ದಂತೆ, ಭಾರತೀಯ ಸಮುದಾಯದ ನೂರಾರು ಸದಸ್ಯರು ಸಾಂಸ್ಕೃತಿಕ ಪ್ರದರ್ಶನಗಳ ಮೂಲಕ ಅವರನ್ನು ಬರಮಾಡಿಕೊಂಡರು. ಇದೇ ವೇಳೆ 'ಆಸ್ಟ್ರೇಲಿಯನ್ ಇಂಡಿಯನ್ ಆರ್ಕೆಸ್ಟ್ರಾ' ತಂಡವು ಪ್ರಸ್ತುತಪಡಿಸಿದ "ವಂದೇ ಮಾತರಂ" ಗೀತೆಯ ಗಾಯನ ಎಲ್ಲರ ಗಮನ ಸೆಳೆಯಿತು. ಅಲ್ಲಿ ನೆರೆದಿದ್ದ ಜಗತ್ತಿನಾದ್ಯಂತದ ಭಾರತೀಯರು "ಭಾರತ್ ಮಾತಾ ಕೀ ಜೈ" ಮತ್ತು "ಮೋದಿ, ಮೋದಿ" ಎಂಬ ಘೋಷಣೆಗಳನ್ನು ಕೂಗುತ್ತಾ ತಾಯ್ನಾಡಿನ ನಾಯಕನನ್ನು ಬರಮಾಡಿಕೊಂಡರು.
- Sushma Chakre
- Updated on: Jul 8, 2026
- 11:01 pm
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾದ ಯಶಸ್ವಿ ಪ್ರವಾಸದ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ 3 ರಾಷ್ಟ್ರಗಳ ಪ್ರವಾಸದ ಎರಡನೇ ಹಂತವಾಗಿ ಇಂದು ಸಂಜೆ ಆಸ್ಟ್ರೇಲಿಯಾದ ಮೆಲ್ಬೋರ್ನ್ ತಲುಪಿದ್ದಾರೆ. ಪ್ರಧಾನಿ ಮೋದಿ ಅವರ ಆಗಮನದಿಂದ ಮೆಲ್ಬೋರ್ನ್ನಲ್ಲಿರುವ ಭಾರತೀಯ ಸಮುದಾಯದಲ್ಲಿ ಭಾರಿ ಉತ್ಸಾಹ ಮೂಡಿದೆ. ಪ್ರಧಾನಿಯವರಿಗಾಗಿ ಆಯೋಜಿಸಲಾಗಿರುವ ವಿಶೇಷ ಸಮುದಾಯ ಸತ್ಕಾರ ಸಮಾರಂಭದಲ್ಲಿ ಅವರನ್ನು ಅತ್ಯಂತ ಅದ್ಧೂರಿಯಾಗಿ ಸ್ವಾಗತಿಸಲು ಭಾರತೀಯ ಮೂಲದ ನಾಗರಿಕರು ಸಜ್ಜಾಗಿದ್ದಾರೆ.
- Sushma Chakre
- Updated on: Jul 8, 2026
- 9:17 pm
ಥಾಣೆಯ ಆಸ್ಪತ್ರೆಯಲ್ಲಿ ವೈದ್ಯರ ಮೇಲೆ ಹಲ್ಲೆ; ಶಿವಸೇನಾ ಕಾರ್ಪೊರೇಟರ್ ಬಂಧನ
ಶಾಸ್ತ್ರಿನಗರ ಆಸ್ಪತ್ರೆಯಲ್ಲಿ ಮಂಗಳವಾರ ರಾತ್ರಿ ವೈದ್ಯರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಶಿವಸೇನಾ ಕಾರ್ಪೋರೇಟರ್ ರಮೇಶ್ ಮ್ಹಾತ್ರೆ ಅವರನ್ನು ವಿಷ್ಣುನಗರ ಪೊಲೀಸರು ಇಂದು ಬಂಧಿಸಿದ್ದಾರೆ. ಇದಕ್ಕೂ ಮುನ್ನ, ಪೊಲೀಸರು ಈ ಘಟನೆಗೆ ಸಂಬಂಧಿಸಿದಂತೆ ಅವರ ಮೂವರು ಸಹಚರರನ್ನು ಬಂಧಿಸಿದ್ದರು. 9 ತಿಂಗಳ ಗರ್ಭಿಣಿಯೊಬ್ಬರಿಗೆ ಹೆರಿಗೆಗೆ ಸಂಬಂಧಿಸಿದ ಗಂಭೀರ ತೊಂದರೆಗಳು ಕಾಣಿಸಿಕೊಂಡಾಗ ಆಸ್ಪತ್ರೆಯ ಸಿಬ್ಬಂದಿ ನವಜಾತ ಶಿಶು ಮತ್ತು ಆ ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸುವಂತೆ ಅವರ ಕುಟುಂಬಕ್ಕೆ ಸಲಹೆ ನೀಡಿದ್ದರು. ಇದನ್ನು ವಿರೋಧಿಸಿ ಕಾರ್ಪೋರೇಟರ್ ರಮೇಶ್ ಮ್ಹಾತ್ರೆ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
- Sushma Chakre
- Updated on: Jul 8, 2026
- 7:34 pm
ಅಮೆರಿಕ- ಇರಾನ್ ನಡುವಿನ ಕದನ ವಿರಾಮ ಅಂತ್ಯ; ಭಾರತದ ತಲೆಬಿಸಿಗೆ ಕಾರಣಗಳಿವು
Iran-US War: ಎಲ್ಲ ದೇಶಗಳ ಜೊತೆಗೂ ಸ್ನೇಹ ಸಂಬಂಧ ಹೊಂದಲು ಆಸಕ್ತಿ ತೋರುವ, ಬಹುತೇಕ ದೇಶಗಳ ಜೊತೆ ಉತ್ತಮ ಬಾಂಧವ್ಯವನ್ನೇ ಹೊಂದಿರುವ ಭಾರತ ಯಾವುದಾದರೂ ದೇಶಗಳ ನಡುವೆ ಸಂಘರ್ಷ ಏರ್ಪಟ್ಟಾಗ ಯುದ್ಧದ ಬದಲು ರಾಜತಾಂತ್ರಿಕ ಮಾತುಕತೆಯ ಮೂಲಕವೇ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಸಲಹೆ ನೀಡುತ್ತದೆ. ಇದಕ್ಕೆ ಕಾರಣವೂ ಇದೆ. ಯುದ್ಧ ಕೇವಲ ಆ ಎರಡು ದೇಶಗಳ ನಡುವೆ ನಡೆದರೂ ಅದರ ಪರಿಣಾಮವನ್ನು ಇತರೆ ದೇಶಗಳು ಕೂಡ ಅನುಭವಿಸಬೇಕಾಗುತ್ತದೆ. ಇದರಿಂದ ಜಾಗತಿಕ ಮಾರುಕಟ್ಟೆಯ ಮೇಲೂ ಪರಿಣಾಮ ಬೀರುತ್ತದೆ. ಇದೀಗ ಡೊನಾಲ್ಡ್ ಟ್ರಂಪ್ ಇರಾನ್ ಮತ್ತು ಅಮೆರಿಕದ ನಡುವಿನ ಕದನವಿರಾಮ ಅಂತ್ಯಗೊಂಡಿದೆ ಎಂದು ಘೋಷಿಸಿದ್ದಾರೆ. ಈಗಾಗಲೇ ಎರಡೂ ದೇಶಗಳ ನಡುವೆ ಪರಸ್ಪರ ದಾಳಿಗಳು ಕೂಡ ಆರಂಭವಾಗಿವೆ. ಹಾಗಾದರೆ, ಇದರಿಂದ ಭಾರತದ ಮೇಲೂ ಪರಿಣಾಮಗಳು ಆಗುತ್ತದೆಯೇ? ಇಲ್ಲಿದೆ ವಿವರ.
- Sushma Chakre
- Updated on: Jul 8, 2026
- 6:09 pm
ರಾಮ ಮಂದಿರದ ಬೆನ್ನಲ್ಲೇ ಮಧ್ಯಪ್ರದೇಶದ ಬಾಗಲಾಮುಖಿ ದೇವಸ್ಥಾನದಲ್ಲೂ ಭುಗಿಲೆದ್ದ ದೇಣಿಗೆ ಕಳ್ಳತನ ವಿವಾದ
ಕೆಲವು ದಿನಗಳಿಂದ ಅಯೋಧ್ಯೆಯ ರಾಮ ಮಂದಿರದ ದೇಣಿಗೆ ವಿವಾದ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಮಧ್ಯಪ್ರದೇಶದ ನಾಗ್ಪುರದ ಪೀತಾಂಬರ ಪೀಠದ ಅಡಿಯಲ್ಲಿ ಬರುವ ಪ್ರಸಿದ್ಧ ಮಾ ಬಾಗಲಾಮುಖಿ ದೇವಸ್ಥಾನ ಕೂಡ ತೀವ್ರ ವಿವಾದಕ್ಕೆ ಸಿಲುಕಿದೆ. ಈ ದೇವಸ್ಥಾನಕ್ಕೆ ನೀಡಲಾದ ದೇಣಿಗೆಯನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪ ಕೇಳಿಬಂದಿದೆ. ದೇವಸ್ಥಾನಕ್ಕೆ ಬರುವ ಭಾರಿ ಪ್ರಮಾಣದ ದೇಣಿಗೆ ಮತ್ತು ಆಸ್ತಿಯ ಉಸ್ತುವಾರಿಗೆ ಸಂಬಂಧಿಸಿದಂತೆ ಟ್ರಸ್ಟಿಗಳ ನಡುವೆ ಆಂತರಿಕ ಭಿನ್ನಾಭಿಪ್ರಾಯಗಳು ತಲೆದೋರಿವೆ ಎನ್ನಲಾಗಿದೆ. ಹಣಕಾಸಿನ ಪಾರದರ್ಶಕತೆಯ ಕೊರತೆ ಮತ್ತು ನಿಧಿಯ ದುರುಪಯೋಗ ನಡೆದಿದೆ ಎಂಬ ಆರೋಪ-ಪ್ರತ್ಯಾರೋಪಗಳು ಕೇಳಿಬಂದಿವೆ.
- Sushma Chakre
- Updated on: Jul 8, 2026
- 4:45 pm
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
Wayanad Landslide: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೂವರು ಸಾವನ್ನಪ್ಪಿದ್ದು, ಐವರು ನಾಪತ್ತೆಯಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಭೂಕುಸಿತದ ಭಯಾನಕ ವಿಡಿಯೋವೊಂದು ವೈರಲ್ ಆಗಿದ್ದು, ಅದರಲ್ಲಿ ಕಾಣಿಸಿದ ಟ್ಯಾಂಕರ್ ಕರ್ನಾಟಕ ನೋಂದಣಿಯ ದಿಲೀಪ್ ಬಿಲ್ಡ್ಕಾನ್ ಸಂಸ್ಥೆಗೆ ಸೇರಿದ್ದು ಎಂಬುದು ತಿಳಿದುಬಂದಿದೆ.
- Ram
- Updated on: Jul 8, 2026
- 2:07 pm