AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET Exam

NEET Exam

ನೀಟ್ (NEET – National Eligibility cum Entrance Test) ಎಂಬುದು ಭಾರತದಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ನಡೆಸಲಾಗುವ ಏಕೈಕ ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆಯಾಗಿದೆ. ಎಂಬಿಬಿಎಸ್ (MBBS), ಬಿಡಿಎಸ್ (BDS) ಮತ್ತು ಆಯುಷ್ (AYUSH) ನಂತಹ ಪದವಿ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಕಡ್ಡಾಯವಾಗಿ ಬರೆಯಬೇಕಾಗುತ್ತದೆ. ಇದನ್ನು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಆಯೋಜಿಸುತ್ತದೆ. ಈ ಪರೀಕ್ಷೆಯು ಮುಖ್ಯವಾಗಿ ಭೌತಶಾಸ್ತ್ರ (Physics), ರಸಾಯನಶಾಸ್ತ್ರ (Chemistry) ಮತ್ತು ಜೀವಶಾಸ್ತ್ರ (Biology – Botany & Zoology) ವಿಷಯಗಳನ್ನೊಳಗೊಂಡಿದ್ದು, ಒಟ್ಟು 720 ಅಂಕಗಳಿಗೆ ಬಹು ಆಯ್ಕೆಯ ಪ್ರಶ್ನೆಗಳ (MCQs) ಮಾದರಿಯಲ್ಲಿರುತ್ತದೆ. ಭಾರತದಲ್ಲಿನ ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಸೀಟು ಪಡೆಯಲು ಈ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವುದು ಅತ್ಯಗತ್ಯವಾಗಿದೆ.

ಇನ್ನೂ ಹೆಚ್ಚು ಓದಿ

ಲೋಪದೋಷಗಳನ್ನು ಸರಿಪಡಿಸಿದ್ದೇವೆ, ನೀಟ್ ಮರುಪರೀಕ್ಷೆ ಯಶಸ್ವಿಯಾಗಿದೆ; ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಮೊದಲ ಬಾರಿಗೆ ನಡೆದಿದ್ದ ನೀಟ್ ಪರೀಕ್ಷೆಯಲ್ಲಿ ಅಂಕಗಳ ಹಂಚಿಕೆ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳು ಕೇಳಿಬಂದಿದ್ದರಿಂದ ದೇಶಾದ್ಯಂತ ವಿದ್ಯಾರ್ಥಿಗಳು ಮತ್ತು ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನ ಹಾಗೂ ಸರ್ಕಾರದ ಕಟ್ಟುನಿಟ್ಟಿನ ಕ್ರಮದ ಭಾಗವಾಗಿ ನೀಟ್-ಯುಜಿ ಮರುಪರೀಕ್ಷೆಯನ್ನು ನಡೆಸಲಾಗಿತ್ತು. ಇದೀಗ ಪರೀಕ್ಷೆ ಯಶಸ್ವಿಯಾಗಿ ಮುಗಿದಿರುವುದು ವಿದ್ಯಾರ್ಥಿಗಳಲ್ಲಿ ನಿರಾಳತೆ ತಂದಿದೆ. ಈ ಪರೀಕ್ಷೆಯ ಯಶಸ್ಸಿನ ಬಗ್ಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಾತನಾಡಿದ್ದಾರೆ.

ಮೋಸ ಹೋಗ್ಬೇಡಿ: ಮೆಡಿಕಲ್ ಕೋರ್ಸ್ ಮ್ಯಾನೇಜ್ಮೆಂಟ್ ಸೀಟ್ ಬಗ್ಗೆ KEA ನಿರ್ದೇಶಕ ಹೇಳಿದ್ದಿಷ್ಟು

ಕಾಲೇಜುಗಳಲ್ಲಿ ಸೀಟ್ ಮಾಫಿಯಾ ನಡೆಯುತ್ತೆ. ಅದರಲ್ಲೂ ಪ್ರಮುಖವಾಗಿ ಮೆಡಿಕಲ್ ಕೋರ್ಸ್ ಸಂಬಂಧಿಸಿದ ಮ್ಯಾನೇಜ್ಮೆಂಟ್ ಹಾಗೂ ಎನ್​​ಆರ್​​​ಐ ಸೀಟ್​​ಗಳನ್ನು ಆಯಾ ಕಾಲೇಜಿನವರೇ ನೀಡುತ್ತಾರೆ ಎಂದು ಕೆಲವರು ಅಂದುಕೊಂಡಿದ್ದು, ಹಣ ಕೊಟ್ಟು ಮೋಸ ಹೋಗಿದವರು ಉಂಟು. ಹೀಗಾಗಿ ಈ ಬಗ್ಗೆ ಕೆಇಎ ನಿರ್ದೇಶಕ H ಪ್ರಸನ್ನ ಅವರು ಸ್ಪಷ್ಟನೆ ನೀಡಿದ್ದು, ಕೇವಲ ಇಂಜಿನಿಯರಿಂಗ್ ಕೋರ್ಟ್​​​ಗೆ ಸಂಬಂಧಪಟ್ಟಂತೆ ಕೇವಲ 25 ಪರ್ಸೆಂಟ್ ಮ್ಯಾನೇಜ್ಮೆಂಟ್ ಕೋಟಾಕ್ಕೆ ಅವಕಾಶ ಇದೆ

ಭಾರತವನ್ನು ಅಸ್ಥಿರಗೊಳಿಸುವ ಶಕ್ತಿಗಳ ಬಿ-ಟೀಮ್; ಸಿಜೆಪಿ ವಿರುದ್ಧ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ವಾಗ್ದಾಳಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಸಿಜೆಪಿ (ಕಾಕ್ರೋಚ್ ಜನತಾ ಪಾರ್ಟಿ) ವಿರುದ್ಧ ಗಂಭೀರ ವಾಗ್ದಾಳಿ ನಡೆಸಿದ್ದಾರೆ. ನೀಟ್ (NEET) ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ವಿಚಾರವಾಗಿ ಪ್ರತಿಭಟನೆ ನಡೆಸುತ್ತಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಚಳವಳಿಯು ದೇಶವನ್ನು ಅಸ್ಥಿರಗೊಳಿಸುವ ಶಕ್ತಿಗಳ ಬಿ-ಟೀಮ್ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಟೀಕಿಸಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಈ ಸಂಘಟನೆಯ ವಿರುದ್ಧ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೀಟ್ ಅಭ್ಯರ್ಥಿ ತಡವಾಗಿ ಬಂದಿದ್ದಕ್ಕೆ ಟ್ರಾಫಿಕ್ ಕಾರಣವಲ್ಲ: ಬೆಂಗಳೂರು ಪೊಲೀಸರಿಂದ ಫ್ಯಾಕ್ಟ್‌ ಚೆಕ್‌

NEET Rexam News: ಬೆಂಗಳೂರಿನಲ್ಲಿ ನೀಟ್ ಮರುಪರೀಕ್ಷೆಗೆ ವಿದ್ಯಾರ್ಥಿ 3 ನಿಮಿಷ ತಡವಾಗಿ ಬಂದಿದ್ದಕ್ಕೆ ಪ್ರವೇಶ ನಿರಾಕರಿಸಿದ ವಿಡಿಯೋ ವೈರಲ್ ಆಗಿತ್ತು. ಬಿಕೆ ಹರಿಪ್ರಸಾದ್ ಅಧಿಕಾರ ಸ್ವೀಕಾರ ಕಾರ್ಯಕ್ರಮದದಿಂದ ಟ್ರಾಫಿಕ್ ಜಾಮ್ ಕಾರಣ ಎಂಬ ಆರೋಪ ಕೇಳಿಬಂದಿದ್ದು, ಈ ಸಂಬಂಧ ಟ್ರಾಫಿಕ್ ಕಾರಣದಿಂದಲೇ ಪರೀಕ್ಷಗೆ ತಡವಾಯ್ತು ಎಂದು ಜೆಡಿಎಸ್ ಹಾಗೂ ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಆದರೆ, ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ಸಂಚಾರಿ ಪೊಲೀಸರು, ವಿದ್ಯಾರ್ಥಿಗಳು ಮನೆಯಿಂದ ತಡವಾಗಿ ಹೊರಟಿದ್ದು ಮತ್ತು ತಪ್ಪು ಮಾರ್ಗವನ್ನು ಆಯ್ಕೆ ಮಾಡಿದ್ದೇ ವಿಳಂಬಕ್ಕೆ ಕಾರಣ ಎಂದು ಸ್ಪಷ್ಟಪಡಿಸಿದ್ದಾರೆ.

ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಪಕ್ಷವೇ ಕಾರಣ ಎಂದ ಆರ್ ಅಶೋಕ್!

ಭಾನುವಾರ ನಡೆದ ನೀಟ್ ಮರು ಪರೀಕ್ಷೆಗೆ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯಿಂದಾಗಿ ಮೂವರು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತಲುಪಲು ಸಾಧ್ಯವಾಗದೇ ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ಆರ್.ಸಿ ಕಾಲೇಜಿನಲ್ಲಿ ನಡೆದ ಈ ಘಟನೆಗೆ ಪೋಷಕರು ಸಂಚಾರ ದಟ್ಟಣೆಯೇ ಕಾರಣವೆಂದು ಆರೋಪಿಸಲಾಗಿದೆ. ಇದೇ ವಿಚಾರವಾಗಿ ಕಾಂಗ್ರೆಸ್ ಪಕ್ಷದ ಮೇಲೆ ಬಿಜೆಪಿ ನಾಯಕ ಆರ್.ಅಶೋಕ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಫ್ಲಶ್​ ಟ್ಯಾಂಕ್​ನಲ್ಲಿ ಮೊಬೈಲ್ ಅಡಗಿಸಿಟ್ಟು ಹೊಟ್ಟೆ ನೋವೆಂದು ಎದ್ದು ಹೋಗ್ತಿದ್ದ ನೀಟ್ ವಿದ್ಯಾರ್ಥಿ ಸಿಕ್ಕಿಬಿದ್ದಿದ್ಹೇಗೆ?

ಹೈದರಾಬಾದ್‌ನಲ್ಲಿ ನಡೆದ ನೀಟ್ ಮರು ಪರೀಕ್ಷೆಯಲ್ಲಿ ವಿದ್ಯಾರ್ಥಿಯೊಬ್ಬ ಫ್ಲಶ್ ಟ್ಯಾಂಕ್‌ನಲ್ಲಿ ಮೊಬೈಲ್ ಅಡಗಿಸಿಟ್ಟು ನಕಲು ಮಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ. ಹೊಟ್ಟೆ ನೋವಿನ ನಾಟಕವಾಡಿ ಶೌಚಾಲಯಕ್ಕೆ ಹೋಗಿ ಗೂಗಲ್ ಮೂಲಕ ಉತ್ತರ ಹುಡುಕುತ್ತಿದ್ದ ಈ ವಿದ್ಯಾರ್ಥಿಯ ಕೃತ್ಯದಿಂದ ಪರೀಕ್ಷಾ ಮಂಡಳಿ ಬೆಚ್ಚಿಬಿದ್ದಿದೆ. ಹೊಸದಾಗಿ ಜಾರಿಗೆ ಬಂದಿರುವ ಅನ್ಯಾಯದ ವಿಧಾನಗಳ ತಡೆಗಟ್ಟುವಿಕೆ ಕಾಯ್ದೆ 2024ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇಂದಿನಿಂದ ಭಾರತದಲ್ಲಿ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಜೂನ್ 30 ರವರೆಗೆ ‘ಮೆಸೇಜ್ ಎಡಿಟಿಂಗ್’ ಆಯ್ಕೆ ಇರುವುದಿಲ್ಲ

ಇಂದಿನಿಂದ ಭಾರತದಲ್ಲಿ ಟೆಲಿಗ್ರಾಮ್ ಮೇಲಿನ ನಿಷೇಧ ತೆರವುಗೊಂಡಿದೆ. ಆದಾಗ್ಯೂ, ಜೂನ್ 30 ರವರೆಗೆ 'ಮೆಸೇಜ್ ಎಡಿಟಿಂಗ್' ಆಯ್ಕೆಗೆ ನಿರ್ಬಂಧ ಮುಂದುವರಿಯಲಿದೆ. ಇತ್ತೀಚಿನ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಟೆಲಿಗ್ರಾಮ್ ಪಾತ್ರದ ಕಾರಣದಿಂದ ಸರ್ಕಾರ ಇದನ್ನು ತಾತ್ಕಾಲಿಕವಾಗಿ ನಿಷೇಧಿಸಿತ್ತು. ಈ ನಿರ್ಧಾರವನ್ನು ಟೆಲಿಗ್ರಾಮ್ ಸಂಸ್ಥಾಪಕ ಪಾವೆಲ್ ಡುರೊವ್ ಮತ್ತು ಇಂಟರ್ನೆಟ್ ಫ್ರೀಡಂ ಫೌಂಡೇಶನ್ ಟೀಕಿಸಿವೆ, ಇದನ್ನು ಬಳಕೆದಾರರ ಮೇಲೆ ಹೇರಿದ ಅನ್ಯಾಯ ಎಂದಿವೆ.

ಗೂಗಲ್ ಮ್ಯಾಪ್ ನಂಬಿ ತಪ್ಪು ದಾರಿಯಲ್ಲಿ ಹೋಗಿ ಪರೀಕ್ಷೆಯಿಂದ ವಂಚಿತರಾದ ನೀಟ್ ವಿದ್ಯಾರ್ಥಿಗಳು

ಮೊರಾದಾಬಾದ್‌ನಲ್ಲಿ ಗೂಗಲ್ ಮ್ಯಾಪ್‌ನ ತಪ್ಪು ದಾರಿಯಿಂದಾಗಿ ನೀಟ್ ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ಆ್ಯಪ್ ದೋಷದಿಂದಾಗಿ ಹಲವು ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತಡವಾಗಿ ತಲುಪಿ, ಭವಿಷ್ಯಕ್ಕೆ ಆತಂಕ ಎದುರಾಗಿದೆ. ಇಂತಹ ಮಹತ್ವದ ಪರೀಕ್ಷೆಗಳ ದಿನದಂದು ಕೇವಲ ಡಿಜಿಟಲ್ ನಕ್ಷೆಗಳನ್ನು ನಂಬದೆ, ಮುಂಚಿತವಾಗಿಯೇ ಪರೀಕ್ಷಾ ಕೇಂದ್ರದ ವಿಳಾಸವನ್ನು ಪರಿಶೀಲಿಸಲು ತಜ್ಞರು ಸಲಹೆ ನೀಡಿದ್ದಾರೆ.

ರಾಜ್ಯದಲ್ಲಿ ಸುಸೂತ್ರವಾಗಿ ನಡೆದ ನೀಟ್‌ ಮರು ಪರೀಕ್ಷೆ: ಎಕ್ಸಾಂ ಬಗ್ಗೆ ವಿದ್ಯಾರ್ಥಿಗಳು ಹೇಳಿದ್ದೇನು?

ಕರ್ನಾಟಕದಲ್ಲಿ ಇಂದು ಯಾವುದೇ ಅಡೆತಡೆ, ಗೊಂದಲ ಇಲ್ಲದೆ ಬಿಗಿ ಭದ್ರತೆಯಲ್ಲಿ ನೀಟ್ ಮರುಪರೀಕ್ಷೆ ಸುಸೂತ್ರವಾಗಿ ನಡೆದಿದೆ. ಮಧ್ಯಾಹ್ನ 2ರಿಂದ ಸಂಜೆ 5.15ರವರೆಗೆ ಪರೀಕ್ಷೆ ನಡೆದಿದ್ದು, 15 ನಿಮಿಷ ಹೆಚ್ಚುವರಿ ಸಮಯ ನೀಡಲಾಗಿತ್ತು. ಆದರೆ ಪರೀಕ್ಷೆ ಬರೆದು ಬಂದು ವಿದ್ಯಾರ್ಥಿಗಳು ಮಾತ್ರ ಬೇಸರ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ನೀಟ್​ ಪರೀಕ್ಷೆಯಿಂದ ಮತ್ತೆ ವಂಚಿತರಾದ ಹಲವು ವಿದ್ಯಾರ್ಥಿಗಳು: ಒಬ್ಬೊಬ್ಬರದು ಒಂದೊಂದು ಕಥೆ

ನೀಟ್ ಪರೀಕ್ಷೆಗೆ ನಿಗದಿತ ಸಮಯಕ್ಕೆ ತಲುಪಲು ಸಾಧ್ಯವಾಗದೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ಟ್ರಾಫಿಕ್ ಜಾಮ್, ಬಸ್ ವಿಳಂಬ ಸೇರಿದಂತೆ ನಾನಾ ಕಾರಣಕ್ಕೆ ತಡವಾಗಿ ಆತಮಿಸಿದ ವಿದ್ಯಾರ್ಥಿಗಳ ಪ್ರವೇಶವನ್ನು ಸಿಬ್ಬಂದಿ ನಿರಾಕರಿಸಿದ್ದಾರೆ. ಹೀಗಾಗಿ ಕಣ್ಣೀರು ಹಾಕುತ್ತಲೇ ಮನೆಗೆ ತೆರಳಿದ್ದಾರೆ.

ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ

ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ರದ್ದಾಗಿದ್ದ ನೀಟ್ ಪರೀಕ್ಷೆಯನ್ನು ಇಂದು ಮತ್ತೊಮ್ಮೆ ನಡೆಸಲಾಗಿದ್ದು, ಭಾರೀ ಕಟ್ಟು ನಿಟ್ಟಿನ ಕ್ರಮಕೈಗೊಳ್ಳಾಗಿದೆ. ಯಾವುದೇ ಕಾರಣಕ್ಕೂ ಪರೀಕ್ಷೆಯಲ್ಲಿ ಅಕ್ರಮ ನಡೆಬಾರದು ಎಂದು ಕೆಲ ಕಠಿಣ ನಿಯಮಗಳನ್ನು ಜಾರಿಗೆ ತರಲಾಗಿದೆ. ಅದರಂತೆ ಬಾಲಕೋಟೆಯಲ್ಲಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಕತ್ತಲ್ಲಿ ಇದ್ದ ಚೈನ್, ರುದ್ರಾಕ್ಷಿ ತೆಗೆಸಿದ್ದಾರೆ. ಅಲ್ಲದೇ ವಿದ್ಯಾರ್ಥಿನಿಯ ಮೂಗುತಿಯನ್ನು ಸಹ ಸಿಬ್ಬಂದಿ ಕಟ್ ಮಾಡಿ ಪರೀಕ್ಷೆ ಕೇಂದ್ರದ ಒಳಗೆ ಬಿಟ್ಟಿರುವ ಪ್ರಸಂಗ ನಡೆದಿದೆ.

ನೀಟ್ ಪರೀಕ್ಷೆ: ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದೆಂದು 45 ನಿಮಿಷ ದೆಹಲಿ ಏರ್​ಪೋರ್ಟ್​​ನಲ್ಲೇ ಕಾದ ಮೋದಿ

ಅಂತಾರಾಷ್ಟ್ರೀಯ ಯೋಗ ದಿನದಂದು ಕೋಲ್ಕತ್ತಾದಿಂದ ದೆಹಲಿಗೆ ಮರಳಿದ ಪ್ರಧಾನಿ ಮೋದಿ, ನೀಟ್ ವಿದ್ಯಾರ್ಥಿಗಳಿಗೆ ಟ್ರಾಫಿಕ್ ತೊಂದರೆಯಾಗಬಾರದೆಂದು ವಿಮಾನ ನಿಲ್ದಾಣದಲ್ಲೇ 45 ನಿಮಿಷ ಕಾದರು. ಮಧ್ಯಾಹ್ನ 2 ಗಂಟೆಗೆ ನೀಟ್ ಮರು ಪರೀಕ್ಷೆ ಪ್ರಾರಂಭವಾಗಲಿದ್ದು, ಅವರ ಬೆಂಗಾವಲು ಪಡೆ ರಸ್ತೆಗೆ ಇಳಿದರೆ ಟ್ರಾಫಿಕ್ ಜಾಮ್ ಉಂಟಾಗಬಹುದೆಂಬ ಕಾರಣಕ್ಕೆ ವಿದ್ಯಾರ್ಥಿಗಳ ಅನುಕೂಲಕ್ಕೆ ಆದ್ಯತೆ ನೀಡಿದರು. ಪೇಪರ್ ಸೋರಿಕೆಯ ನಂತರ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲಾಗಿದೆ. ಮೋದಿ ಅವರ ಈ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.