NEET Exam
ನೀಟ್ (NEET – National Eligibility cum Entrance Test) ಎಂಬುದು ಭಾರತದಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ನಡೆಸಲಾಗುವ ಏಕೈಕ ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆಯಾಗಿದೆ. ಎಂಬಿಬಿಎಸ್ (MBBS), ಬಿಡಿಎಸ್ (BDS) ಮತ್ತು ಆಯುಷ್ (AYUSH) ನಂತಹ ಪದವಿ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಕಡ್ಡಾಯವಾಗಿ ಬರೆಯಬೇಕಾಗುತ್ತದೆ. ಇದನ್ನು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಆಯೋಜಿಸುತ್ತದೆ. ಈ ಪರೀಕ್ಷೆಯು ಮುಖ್ಯವಾಗಿ ಭೌತಶಾಸ್ತ್ರ (Physics), ರಸಾಯನಶಾಸ್ತ್ರ (Chemistry) ಮತ್ತು ಜೀವಶಾಸ್ತ್ರ (Biology – Botany & Zoology) ವಿಷಯಗಳನ್ನೊಳಗೊಂಡಿದ್ದು, ಒಟ್ಟು 720 ಅಂಕಗಳಿಗೆ ಬಹು ಆಯ್ಕೆಯ ಪ್ರಶ್ನೆಗಳ (MCQs) ಮಾದರಿಯಲ್ಲಿರುತ್ತದೆ. ಭಾರತದಲ್ಲಿನ ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಸೀಟು ಪಡೆಯಲು ಈ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವುದು ಅತ್ಯಗತ್ಯವಾಗಿದೆ.
ಇನ್ನೂ ಹೆಚ್ಚು ಓದಿವಿದ್ಯಾರ್ಥಿಗಳ ಪ್ರತಿಭಟನೆ ಬಗ್ಗೆ ಮೌನ ವಹಿಸಿದ್ದೇಕೆ? ಕೊನೆಗೂ ಕಾರಣ ತಿಳಿಸಿದ ಸೋನು ನಿಗಮ್
ಖ್ಯಾತ ಗಾಯಕ ಸೋನು ನಿಗಮ್ ಅವರು ವಿದ್ಯಾರ್ಥಿಗಳ ಪ್ರತಿಭಟನೆ ಬಗ್ಗೆ ಮಾತನಾಡಲು ಹಿಂದೇಟು ಹಾಕಿದ್ದರು. ಹಾಗಾಗಿ ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಲಾಗಿತ್ತು. ಅಷ್ಟಕ್ಕೂ ಸೋನು ನಿಗಮ್ ಅವರು ಮೌನ ವಹಿಸಿದ್ದಕ್ಕೆ ಕಾರಣ ಏನು ಎಂಬುದು ಈಗ ಗೊತ್ತಾಗಿದೆ. ಆ ಕುರಿತು ಮಾಹಿತಿ ಇಲ್ಲಿದೆ..
- Madan Kumar
- Updated on: Aug 13, 2026
- 7:04 pm
‘ಜಂತರ್ ಮಂತರ್ ಪ್ರತಿಭಟನೆಯಲ್ಲಿ ಇದ್ದ ಬಹುತೇಕರು ಜೆನ್ ಜಿ ಅಲ್ಲ’ ಎಂದ ಕಂಗನಾ ರಣಾವತ್
ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ಮುಗಿದು ಬಹಳ ದಿನಗಳೇ ಕಳೆದಿವೆ. ನಟಿ ಕಂಗನಾ ರಣಾವತ್ ಅವರು ಆ ಪ್ರತಿಭಟನೆಯ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ನಡೆದ ಆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದವರ ಪೈಕಿ ಹೆಚ್ಚಿನವರು ಜೆನ್ ಜಿ ಅಲ್ಲ ಎಂದು ಕಂಗನಾ ಹೇಳಿದ್ದಾರೆ.
- Madan Kumar
- Updated on: Aug 13, 2026
- 6:59 pm
NTA ಉನ್ನತ ಅಧಿಕಾರಿಗಳ ಜತೆ ಜೋಶಿ ಸಭೆ: ಪ್ರತಿಯೊಬ್ಬ ವಿದ್ಯಾರ್ಥಿಯ ಆಕಾಂಕ್ಷೆ ಆಲಿಸಲು ಸೂಚನೆ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಬಳಿಕ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡಿದ್ದು, ಬಿಗಿ ಕ್ರಮಗಳನ್ನು ಕೈಗೊಂಡಿದೆ. ಇದಕ್ಕೆ ಪೂರಕವೆಂಬಂತೆ ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್ ಜೋಶಿ ಅವರು ಇಂದು (ಆಗಸ್ಟ್ 09) ನವದೆಹಲಿಯಲ್ಲಿ NTA ಉನ್ನತ ಅಧಿಕಾರಿಗಳ ಜತೆ ಸಭೆ ನಡೆಸಿದರು. ಸಭೆಯಲ್ಲಿ ಪರೀಕ್ಷಾ ಪ್ರಕ್ರಿಯೆ ಸರಳೀಕರಣಗೊಳಿಸುವ ಕುರಿತು ಸುದೀರ್ಘ ಚರ್ಚೆ ಮಾಡಿದ್ದಾರೆ
- Ramesh B Jawalagera
- Updated on: Aug 9, 2026
- 7:24 pm
Dharmendra Pradhan Resignation: ರಾಜೀನಾಮೆ ನೀಡಿದ ರಹಸ್ಯ ಬಿಚ್ಚಿಟ್ಟ ಧರ್ಮೇಂದ್ರ ಪ್ರಧಾನ್!
ನೀಟ್ ಪೇಪರ್ ಲೀಕ್ ಹಗರಣ ಹಾಗೂ ತೀವ್ರ ವಿದ್ಯಾರ್ಥಿ ಪ್ರತಿಭಟನೆಗಳ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಧರ್ಮೇಂದ್ರ ಪ್ರಧಾನ್ ತಮ್ಮ ನಿರ್ಧಾರದ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟಿದ್ದಾರೆ. ಯುವ ಜನಾಂಗದ ಹಿತ ಕಾಯಲು ಹಾಗೂ ರಾಜಕೀಯ ಸಂಚುಗಳಿಂದ ಅವರನ್ನು ದೂರವಿಡಲು ಸಚಿವ ಸ್ಥಾನ ತ್ಯಜಿಸಿರುವುದಾಗಿ ಅವರು ತಿಳಿಸಿದ್ದು, ಒಡಿಶಾದಲ್ಲಿ ವಿರೋಧ ಪಕ್ಷಗಳ ಟೀಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
- Bhavana Hegde
- Updated on: Aug 9, 2026
- 8:51 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; ತನಿಖೆ ಮುಕ್ತಾಯಗೊಳಿಸಿ ಚಾರ್ಜ್ಶೀಟ್ ಸಲ್ಲಿಸಿದ ಸಿಬಿಐ
ಸಿಬಿಐ ತನಿಖೆಯಲ್ಲಿ ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಎನ್ಟಿಎ ವಿಷಯ ತಜ್ಞರು, ಸಂಘಟಿತರಾಗಿ ಕ್ರಿಮಿನಲ್ ಸಂಚು ಮಾಡಿದ್ದರು ಎಂಬುದು ಪತ್ತೆಯಾಗಿದೆ. ಈ ಪ್ರಕರಣದಲ್ಲಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯ (NTA) ವಿಷಯ ತಜ್ಞರು ಪರೀಕ್ಷಾ ಪ್ರಶ್ನೆಗಳನ್ನು ಸೋರಿಕೆ ಮಾಡಿ, ಹೆಚ್ಚಿನ ಹಣಕ್ಕೆ ಮಧ್ಯವರ್ತಿಗಳ ಜಾಲದ ಮೂಲಕ ಅಭ್ಯರ್ಥಿಗಳಿಗೆ ತಲುಪಿಸಿದ್ದಾರೆ ಎಂದು ಆರೋಪಿಸಲಾಗಿದೆ. ದೆಹಲಿಯ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ತನಿಖಾ ಸಂಸ್ಥೆಯು ಚಾರ್ಜ್ಶೀಟ್ ಸಲ್ಲಿಸಿದ್ದು, ಎನ್ಟಿಎಯ ಮೂವರು ವಿಷಯ ತಜ್ಞರು, ಕೋಚಿಂಗ್ ಸೆಂಟರ್ ನಿರ್ವಾಹಕರು, ಮಧ್ಯವರ್ತಿಗಳು ಮತ್ತು ಅಭ್ಯರ್ಥಿಗಳು ಸೇರಿದಂತೆ ಒಟ್ಟು 13 ಜನರನ್ನು ಆರೋಪಿಗಳಾಗಿ ಹೆಸರಿಸಿದೆ. ಈ ಕುರಿತು ಪೂರ್ತಿ ವಿವರ ಇಲ್ಲಿದೆ.
- Sushma Chakre
- Updated on: Aug 7, 2026
- 6:59 pm
ವಿದ್ಯಾರ್ಥಿಗಳ ವಿರುದ್ಧ ಧ್ವನಿ ಎತ್ತಿ ನೆಟ್ಟಿಗರ ಆಕ್ರೋಶಕ್ಕೆ ಗುರಿಯಾದ ನಟಿ ಭೂಮಿ ಪೆಡ್ನೇಕರ್
ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ಬಗ್ಗೆ ಸೆಲೆಬ್ರಿಟಿಗಳಲ್ಲಿ ಪರ ಮತ್ತು ವಿರೋಧದ ಅಭಿಪ್ರಾಯಗಳಿವೆ. ನಟಿ ಭೂಮಿ ಪೆಡ್ನೇಕರ್ ಅವರು ವಿದ್ಯಾರ್ಥಿಗಳ ಭಾಷೆಯನ್ನು ಟೀಕಿಸಿದ್ದಾರೆ. ಆದರೆ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ ದೌರ್ಜನ್ಯವನ್ನು ಅವರು ಖಂಡಿಸಿಲ್ಲ. ಹಾಗಾಗಿ ನಟಿಯ ವಿರುದ್ಧ ನೆಟ್ಟಿಗರು ಗರಂ ಆಗಿದ್ದಾರೆ.
- Madan Kumar
- Updated on: Aug 3, 2026
- 6:04 pm
ಸಿಜೆಪಿ ಸ್ಥಾಪಕ ಅಭಿಜೀತ್ ದೀಪ್ಕೆ ಯಾರು? ಡಿಜಿಟಲ್ ಫಂಡ್ ಹಾಗೂ ವಿದೇಶಿ ಶಿಕ್ಷಣದ ವೆಚ್ಚದ ತನಿಖೆಗೆ ಆರ್ಟಿಐ ಅರ್ಜಿ
ನೀಟ್ ಪ್ರತಿಭಟನೆಗಳಿಂದ ಖ್ಯಾತಿ ಗಳಿಸಿದ 'ಕಾಕ್ರೋಚ್ ಜನತಾ ಪಾರ್ಟಿ' ಸ್ಥಾಪಕ ಅಭಿಜೀತ್ ದೀಪ್ಕೆ ವಿರುದ್ಧ ಆರ್ಟಿಐ ಕಾರ್ಯಕರ್ತರೊಬ್ಬರು ದೂರು ನೀಡಿದ್ದಾರೆ. ಅಭಿಜೀತ್ ಅವರ ದುಬಾರಿ ವಿದೇಶಿ ಶಿಕ್ಷಣದ ವೆಚ್ಚ ಮತ್ತು ಸಿಜೆಪಿ ಸಂಸ್ಥೆಯ ನಿಧಿ ಸಂಗ್ರಹಣೆಯ ಕುರಿತು ಚುನಾವಣಾ ಆಯೋಗ ಮತ್ತು ಜಿಎಸ್ಟಿ ಅಧಿಕಾರಿಗಳಿಂದ ತನಿಖೆಗೆ ಆಗ್ರಹಿಸಲಾಗಿದೆ. ನೋಂದಾಯಿತವಲ್ಲದ ಡಿಜಿಟಲ್ ವೇದಿಕೆಗಳ ಮೂಲಕ ಹಣ ಸಂಗ್ರಹಣೆಯ ಕಾನೂನುಬದ್ಧತೆ ಬಗ್ಗೆ ಚರ್ಚೆ ಶುರುವಾಗಿದೆ.
- Nayana Rajeev
- Updated on: Aug 2, 2026
- 2:56 pm
ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಹಕ್ಕಿದೆ, ಅರಾಜಕತೆಗಲ್ಲ: ನೀಟ್ ಪ್ರತಿಭಟನೆಗಳ ಕುರಿತು ಸ್ಮೃತಿ ಇರಾನಿ ಖಡಕ್ ಹೇಳಿಕೆ
ನೀಟ್ ಪ್ರತಿಭಟನೆಗಳ ಕುರಿತು ಸ್ಮೃತಿ ಇರಾನಿ ಅವರು 'ಭಿನ್ನಾಭಿಪ್ರಾಯಕ್ಕೆ ಹಕ್ಕಿದೆ, ಅರಾಜಕತೆಗಲ್ಲ' ಎಂದು ಖಡಕ್ ಹೇಳಿದ್ದಾರೆ. ಜೆನ್-ಝಿ ವಿಭಜನೆ ವಾದವನ್ನು ತಳ್ಳಿಹಾಕಿದ ಅವರು, ಪರೀಕ್ಷಾ ಪೇಪರ್ ಸೋರಿಕೆ ತಡೆಯಲು ಕೇಂದ್ರ ಸರ್ಕಾರವು ನಿರ್ಣಾಯಕ ಕಾನೂನು ಕ್ರಮಗಳನ್ನು ಕೈಗೊಂಡಿದೆ ಎಂದು ಸಮರ್ಥಿಸಿಕೊಂಡರು. ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮತ್ತು ಭದ್ರತಾ ಸಿಬ್ಬಂದಿಯ ಮೇಲಿನ ಹಿಂಸಾಚಾರವನ್ನು ಬಲವಾಗಿ ಖಂಡಿಸಿ, ಸಮಾಜಘಾತುಕ ಶಕ್ತಿಗಳ ಕುರಿತು ಎಚ್ಚರಿಕೆ ನೀಡಿದರು.
- Nayana Rajeev
- Updated on: Aug 2, 2026
- 1:32 pm
Medical courses: ಕೆಇಎ ವೈದ್ಯಕೀಯ ಪ್ರವೇಶಾತಿ; ಸಿಇಟಿ ಅರ್ಜಿಗೆ ನೀಟ್ ರೋಲ್ ನಂಬರ್ ಸೇರಿಸಲು ಆ.03 ಕೊನೆ ದಿನ
ನೀಟ್ ಅರ್ಹತೆ ಪಡೆದ ಅಭ್ಯರ್ಥಿಗಳು ವೈದ್ಯಕೀಯ, ದಂತವೈದ್ಯಕೀಯ ಹಾಗೂ ಆಯುಷ್ ಕೋರ್ಸ್ಗಳ ಪ್ರವೇಶಾತಿಗೆ ತಮ್ಮ ಸಿಇಟಿ ಅರ್ಜಿಗೆ ನೀಟ್ ರೋಲ್ ನಂಬರ್ ಸೇರಿಸಲು ಕೆಇಎ ಅವಕಾಶ ನೀಡಿದೆ. ರಾಜ್ಯ ಮೆರಿಟ್ ಪಟ್ಟಿ ಪ್ರಕಟವಾಗಿದ್ದು, ಆಗಸ್ಟ್ 3ರೊಳಗೆ ರೋಲ್ ನಂಬರ್ ನಮೂದಿಸುವುದು ಕಡ್ಡಾಯ. ಲಿಂಕ್ ಚಾಲನೆಯಾದ ಮೊದಲ ದಿನವೇ 25,000ಕ್ಕೂ ಹೆಚ್ಚು ಅಭ್ಯರ್ಥಿಗಳು ತಮ್ಮ ರೋಲ್ ನಂಬರ್ ಅನ್ನು ಯಶಸ್ವಿಯಾಗಿ ನೋಂದಾಯಿಸಿರುವುದು ವರದಿಯಾಗಿದೆ.
- Akshatha Vorkady
- Updated on: Aug 1, 2026
- 9:37 am
ಪೇಪರ್ ಲೀಕ್ ತಡೆಗೆ ಐತಿಹಾಸಿಕ ಕಾನೂನು: ‘ಸಾರ್ವಜನಿಕ ಪರೀಕ್ಷಾ ತಿದ್ದುಪಡಿ ಕಾಯ್ದೆ 2026’ಕ್ಕೆ ರಾಷ್ಟ್ರಪತಿ ಅಂಕಿತ
ದೇಶಾದ್ಯಂತ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪೇಪರ್ ಲೀಕ್ ಹಾಗೂ ಅಕ್ರಮಗಳನ್ನು ತಡೆಯಲು ತರಲಾದ 'ಸಾರ್ವಜನಿಕ ಪರೀಕ್ಷಾ ತಿದ್ದುಪಡಿ ಕಾಯ್ದೆ 2026ಕ್ಕೆ ರಾಷ್ಟ್ರಪತಿ ಅಂಕಿತ ದೊರೆತಿದೆ. ಯುಪಿಎಸ್ಸಿ, ಎಸ್ಎಸ್ಸಿ, ರೈಲ್ವೆ ಹಾಗೂ ಎನ್ಟಿಎ ನಡೆಸುವ ನೀಟ್ ಮುಂತಾದ ಪರೀಕ್ಷೆಗಳು ಇದರ ವ್ಯಾಪ್ತಿಗೆ ಬರಲಿದ್ದು, ಪರೀಕ್ಷಾ ಮಾಫಿಯಾಗೆ ಕಠಿಣ ಜೈಲು ಶಿಕ್ಷೆ ಹಾಗೂ ಭಾರಿ ದಂಡ ವಿಧಿಸಲು ಹೊಸ ಕಾಯ್ದೆಯಲ್ಲಿ ಕಟ್ಟುನಿಟ್ಟಿನ ಅವಕಾಶ ಕಲ್ಪಿಸಲಾಗಿದೆ.
- Bhavana Hegde
- Updated on: Aug 1, 2026
- 8:18 am
ಪ್ರಧಾನಿ ಮೋದಿ ವೀಡಿಯೊ ಬ್ಲಾಕ್ ಮಾಡಿದ್ದ ಮೆಟಾಗೆ ಸರ್ಕಾರದ ಬಿಸಿ
ಪ್ರಧಾನಿ ಮೋದಿ ವಿಡಿಯೊ ನಿರ್ಬಂಧಿಸಿದ್ದ ಮೆಟಾ ಸಂಸ್ಥೆಯ ವಿರುದ್ಧ ಸೈಬರ್ ಕ್ರೈಮ್ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಪ್ರಧಾನಿಯ ನಕಲಿ, ಮಾರ್ಫ್ ಮಾಡಿದ ವಿಡಿಯೊಗಳ ಕುರಿತು ಕ್ರಮ ಜರುಗಿಸಲಾಗಿದೆ. ಸರ್ಕಾರದ ಆಕ್ಷೇಪದ ನಂತರ, ಮೆಟಾ ವಿಐಪಿ ಖಾತೆಗಳ ಸುರಕ್ಷತೆಯನ್ನು ಹೆಚ್ಚಿಸುವುದಾಗಿ ಭರವಸೆ ನೀಡಿದೆ. ಹಿರಿಯ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ವಿಷಯ ನಿರ್ವಹಣೆಗೆ ಮುಂದಾಗಿದೆ.
- Nayana Rajeev
- Updated on: Jul 31, 2026
- 9:40 am
NEET-UG 2026 case: ಪ್ರಶ್ನೆಪತ್ರಿಕೆ ಸಿದ್ಧಪಡಿಸಿದ ಶಿಕ್ಷಕರಿಂದಲೇ ಸೋರಿಕೆ, ಸಿಬಿಐ ಸ್ಫೋಟಕ ಮಾಹಿತಿ ಬಹಿರಂಗ
ನೀಟ್-ಯುಜಿ (NEET-UG) 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಯನ್ನು ಪಡೆದುಕೊಂಡಿದೆ. ಇನ್ನು ಈ ಕೇಸಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಯ ಮೂವರು ತಜ್ಞರು ಸೇರಿದಂತೆ ಒಟ್ಟು 13 ಆರೋಪಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (CBI) ದೆಹಲಿಯ ರೌಸ್ ಅವೆನ್ಯೂ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದೆ. ಇದರ ಮಧ್ಯೆ ಸಿಬಿಐ ಪ್ರಶ್ನೆ ಪತ್ರಿಕೆ ಸೋರಿಕೆ ಹಿಂದಿನ ಕೈಗಳನ್ನ ಪತ್ತೆ ಮಾಡಿದೆ.
- Ramesh B Jawalagera
- Updated on: Jul 31, 2026
- 10:21 am