AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET Exam

NEET Exam

ನೀಟ್ (NEET – National Eligibility cum Entrance Test) ಎಂಬುದು ಭಾರತದಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶಕ್ಕಾಗಿ ನಡೆಸಲಾಗುವ ಏಕೈಕ ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆಯಾಗಿದೆ. ಎಂಬಿಬಿಎಸ್ (MBBS), ಬಿಡಿಎಸ್ (BDS) ಮತ್ತು ಆಯುಷ್ (AYUSH) ನಂತಹ ಪದವಿ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಕಡ್ಡಾಯವಾಗಿ ಬರೆಯಬೇಕಾಗುತ್ತದೆ. ಇದನ್ನು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಆಯೋಜಿಸುತ್ತದೆ. ಈ ಪರೀಕ್ಷೆಯು ಮುಖ್ಯವಾಗಿ ಭೌತಶಾಸ್ತ್ರ (Physics), ರಸಾಯನಶಾಸ್ತ್ರ (Chemistry) ಮತ್ತು ಜೀವಶಾಸ್ತ್ರ (Biology – Botany & Zoology) ವಿಷಯಗಳನ್ನೊಳಗೊಂಡಿದ್ದು, ಒಟ್ಟು 720 ಅಂಕಗಳಿಗೆ ಬಹು ಆಯ್ಕೆಯ ಪ್ರಶ್ನೆಗಳ (MCQs) ಮಾದರಿಯಲ್ಲಿರುತ್ತದೆ. ಭಾರತದಲ್ಲಿನ ಸರ್ಕಾರಿ ಮತ್ತು ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಸೀಟು ಪಡೆಯಲು ಈ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವುದು ಅತ್ಯಗತ್ಯವಾಗಿದೆ.

ಇನ್ನೂ ಹೆಚ್ಚು ಓದಿ

ಕೊನೆಗೂ ಸಿಕ್ಕಿಬಿದ್ದ ನೀಟ್ ಹಗರಣದ ಕಿಂಗ್​ಪಿನ್; ಕೋಚಿಂಗ್​ ಕ್ಲಾಸ್​ನಲ್ಲಿ ಪ್ರಶ್ನೆ ಪತ್ರಿಕೆ ಹಂಚಿದ್ದ ಪ್ರೊಫೆಸರ್ ಬಂಧನ

ಇಡೀ ದೇಶಾದ್ಯಂತ ನೀಟ್ ಹಗರಣ ಭಾರೀ ಚರ್ಚೆಗೆ ಒಳಗಾಗಿತ್ತು. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ವಿಷಯ ತಿಳಿಯುತ್ತಿದ್ದಂತೆ ಈ ತಿಂಗಳ ಆರಂಭದಲ್ಲಿ ನಡೆದಿದ್ದ ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲಾಗಿತ್ತು. ಈ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು ಎಲ್ಲಿಂದ ಎಂದು ಸಿಬಿಐ ತನಿಖೆ ನಡೆಸಿತ್ತು. ಕೊನೆಗೂ ಈ ಹಗರಣದ ಕಿಂಗ್​ಪಿನ್ ಸಿಕ್ಕಿಬಿದ್ದಿದ್ದಾರೆ. ಪುಣೆಯಲ್ಲಿ ಕೋಚಿಂಗ್ ತರಗತಿಯನ್ನು ನಡೆಸುತ್ತಿದ್ದ ಸಮಯದಲ್ಲಿ NEET ಯುಜಿ ಪತ್ರಿಕೆ ಹಂಚಿದ್ದ ಕೆಮಿಸ್ಟ್ರಿ ಪ್ರೊಫೆಸರ್ ಪಿ.ವಿ ಕುಲಕರ್ಣಿ ಅವರನ್ನು ಬಂಧಿಸಲಾಗಿದೆ.

ನೀಟ್ ಪರೀಕ್ಷಾ ವ್ಯವಸ್ಥೆಯಲ್ಲಿ ಭಾರಿ ಬದಲಾವಣೆ: ಇನ್ಮುಂದೆ ಕಂಪ್ಯೂಟರ್ ಆಧಾರಿತ ಪರೀಕ್ಷೆ; ಜೂನ್ 21ಕ್ಕೆ ರೀ-ಎಕ್ಸಾಮ್!

ನೀಟ್ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆಗಳನ್ನು ಸರ್ಕಾರ ಘೋಷಿಸಿದೆ. ಮುಂದಿನ ವರ್ಷದಿಂದ ನೀಟ್ ಪರೀಕ್ಷೆಯು ಸಂಪೂರ್ಣವಾಗಿ ಕಂಪ್ಯೂಟರ್ ಆಧಾರಿತ (CBT) ಮಾದರಿಯಲ್ಲಿ ನಡೆಯಲಿದೆ. ರದ್ದಾಗಿದ್ದ ನೀಟ್-ಯುಜಿ ಮರು ಪರೀಕ್ಷೆಯು ಜೂನ್ 21 ರಂದು ನಡೆಯಲಿದ್ದು, ಪತ್ರಿಕೆ ಸೋರಿಕೆ ತಡೆಗೆ "ಶೂನ್ಯ ಸಹನೆ" ನೀತಿಯನ್ನು ಅಳವಡಿಸಿಕೊಳ್ಳಲಾಗಿದೆ.

ನೀಟ್ ಆಕಾಂಕ್ಷಿಗಳಿಗೆ ಬಿಗ್ ಅಪ್‌ಡೇಟ್: ಜೂನ್ 21ಕ್ಕೆ ನೀಟ್-ಯುಜಿ ಮರು ಪರೀಕ್ಷೆ ನಿಗದಿ!

ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ದೇಶಾದ್ಯಂತ ಸಂಚಲನ ಮೂಡಿಸಿದೆ. ಕೇಂದ್ರ ಶಿಕ್ಷಣ ಸಚಿವರ ತುರ್ತು ಸಭೆಯಲ್ಲಿ ಮರುಪರೀಕ್ಷೆ ಮತ್ತು ಭವಿಷ್ಯದ ಸುರಕ್ಷತಾ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ. ಸಿಬಿಐ ತನಿಖೆ ತೀವ್ರಗೊಂಡಿದ್ದು, ಎನ್‌ಟಿಎ ಒಳಗಿನವರ ಕೈವಾಡದ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ. ಆರೋಪಿಗಳ ಬಂಧನ, ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಒತ್ತಾಯ ಹೆಚ್ಚಿದೆ.

NEET UG Paper Leak: ನೀಟ್ ಹಗರಣ ಬಯಲಿಗೆಳೆದ ಹಾಸ್ಟೆಲ್ ಮಾಲೀಕ; ಕೋಟಿ ಕೋಟಿ ಹಗರಣಕ್ಕೆ ಬ್ರೇಕ್ ಹಾಕಿದ ಒಂದು ವಾಟ್ಸಾಪ್ ಸಂದೇಶ!

ದೇಶಾದ್ಯಂತ ಸಂಚಲನ ಮೂಡಿಸಿರುವ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹಿಂದೆ ರಾಜಸ್ಥಾನದ ಸೀಕರ್ ಜಿಲ್ಲೆಯ ಹಾಸ್ಟೆಲ್ ಮಾಲೀಕರೊಬ್ಬರ ಸಮಯಪ್ರಜ್ಞೆ ಅಡಗಿದೆ. ಪೊಲೀಸರ ನಿರ್ಲಕ್ಷ್ಯದ ನಡುವೆಯೂ, ಅವರು ಎನ್‌ಟಿಎಗೆ ಸಾಕ್ಷ್ಯ ಕಳುಹಿಸಿ ತನಿಖೆಗೆ ಒತ್ತಾಯಿಸಿದ್ದರು. ಇವರ ಈ ದಿಟ್ಟ ನಿರ್ಧಾರ ಮತ್ತು ಪ್ರಾಮಾಣಿಕ ಹೋರಾಟದ ಫಲವಾಗಿ ಇಂದು ಬೃಹತ್ ಪ್ರಶ್ನೆ ಪತ್ರಿಕೆ ಸೋರಿಕೆ ಜಾಲ ಪತ್ತೆಯಾಗಿದ್ದು, ಲಕ್ಷಾಂತರ ಅರ್ಹ ವಿದ್ಯಾರ್ಥಿಗಳ ಭವಿಷ್ಯಕ್ಕೆ ನ್ಯಾಯ ಸಿಗುವಂತಾಗಿದೆ.

NEET Exam 2026 Cancelled: ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಮೇ 3 ರಂದು ನಡೆದಿದ್ದ NEET ಪರೀಕ್ಷೆ ರದ್ದು!

ರಾಜಸ್ಥಾನದ ಸೀಕರ್‌ನಲ್ಲಿ 140 ಪ್ರಶ್ನೆಗಳಿದ್ದ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ, ಮೇ 3 ರಂದು ನಡೆದಿದ್ದ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಈ ಗಂಭೀರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ನಿರ್ಧರಿಸಲಾಗಿದ್ದು, ಲಕ್ಷಾಂತರ ಅಭ್ಯರ್ಥಿಗಳ ಭವಿಷ್ಯದ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ.

NEET-UG 2026: ನೀಟ್ ಯುಜಿ ಪರೀಕ್ಷೆ; ಹೇಳಿಕೆ ಆಧಾರಿತ ಉದ್ದನೆಯ ಪ್ರಶ್ನೆಗಳಿಂದ ವಿದ್ಯಾರ್ಥಿಗಳು ಹೈರಾಣು!

NEET-UG 2026 ಪರೀಕ್ಷೆ ಮುಕ್ತಾಯಗೊಂಡಿದ್ದು, ಕರ್ನಾಟಕದ 1.45 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಸುದೀರ್ಘ ಹೇಳಿಕೆ ಆಧಾರಿತ ಪ್ರಶ್ನೆಗಳಿಂದ ಸಮಯ ನಿರ್ವಹಣೆ ಸವಾಲಾಗಿತ್ತು. ಎನ್‌ಸಿಇಆರ್‌ಟಿ ಪಠ್ಯಕ್ರಮವಿದ್ದರೂ, ಪ್ರಶ್ನೆಗಳ ಸ್ವರೂಪ ವಿದ್ಯಾರ್ಥಿಗಳನ್ನು ಕಂಗೆಡಿಸಿತು. ಕೆಲ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಣೆಯಾಗಿದ್ದು, ಈ ವರ್ಷ ಕಟ್-ಆಫ್ ಅಂಕಗಳು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಜ್ಞರು ಅಂದಾಜಿಸಿದ್ದಾರೆ.

ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?